ಇದು ಗುರು, ಇದು ಲಿಂಗ, ಇದು ಜಂಗಮ, ಇದು ಪ್ರಸಾದ.
ಇಂತೀ ಚತುರ್ವಿಧಸ್ಥಲವನೊಂದುಮಾಡಿ ತೋರಿ,
ಸಮತೆ ಸೈರಣೆಯೆಂಬ ಭಕ್ತಿಪ್ರಭೆಯೊಳಗಿರಿಸಿ,
ಗತಿಯತ್ತ ಹೊದ್ದಲೀಯದೆ, ಲಿಂಗದ ವ್ಯಾವರ್ಣನೆಯ ತೋರಿ,
ಜಂಗಮವ ನಿರಾಕಾರಲಿಂಗವೆಂದು ತೋರಿ,
ಆ ಜಂಗಮದ ಪ್ರಸಾದವ ತೋರಿದನು.
ನಿರವಯದ ಹಾದಿಯ, ಬಸವಣ್ಣನಿಂದ ಕಂಡೆ ಕಾಣಾ
ಕಲಿದೇವಯ್ಯ.