ಅಥವಾ
(61) (3) (3) (0) (0) (0) (0) (0) (1) (0) (0) (0) (0) (0) ಅಂ (1) ಅಃ (1) (2) (0) (2) (0) (0) (0) (0) (2) (0) (0) (0) (0) (0) (0) (0) (1) (0) (1) (0) (1) (0) (0) (1) (1) (0) (0) (0) (0) (0) (0) (10) (0) (0) (11) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅಯ್ಯ, ಶ್ರೀಗುರುಲಿಂಗಜಂಗಮ ಕರುಣ ಕಟಾಕ್ಷೆಯಿಂದ ಶ್ರುತಿ ಗುರು ಶ್ವಾನುಭಾವವಿಡಿದು ಹಿಡಿದಂಥ ಸನ್ಮಾರ್ಗಾಚಾರಕ್ರಿಯೆಗಳ ಅಪಮೃತ್ಯು ಬಂದು ತಟ್ಟಿ ಪ್ರಾಣತ್ಯಾಗವ ಮಾಡಿದಡು ಅಂಜಿ ಅಳುಕದೆ, ಪರಮ ಪತಿವ್ರತತ್ವದಿಂದ ಹಿಂದು ಮುಂದಣ ಪುಣ್ಯಪಾಪವನೆಣಿಸದೆ, ಇಂತು ಶ್ರೀಗುರುವಾಕ್ಯವ ನಿಜನೈಷ್ಠಯಿಂದರಿದು, ನಿಜವೀರಶೈವ ಸದ್ಭಕ್ತಾಚಾರಲಿಂಗಮುಖದಿಂದ ಬಂದ ಸ್ವಪಾಕವಾದಡು ಸರಿಯೆ, ಷಣ್ಮತದಿಂದ ಧನ-ಧಾನ್ಯರೂಪಿನಿಂದ ಬಂದ ಪದಾರ್ಥವಾದಡು ಸರಿಯೆ, ಭಕ್ತಾಶ್ರಯದಲ್ಲಿ ಸ್ವಪಾಕವ ಮಾಡಿ, ಸಂಬಂಧಾಚರಣೆಗಳಿಂದ ಪವಿತ್ರಸ್ವರೂಪ ಪಾದೋದಕ ಪ್ರಸಾದವೆನಿಸಿ, ನಿರ್ವಂಚಕತ್ವದಿಂದ ಸಂಚಲಚಿತ್ತವನಳಿದು, ಮಂತ್ರಸ್ಮರಣೆಯಿಂದ ಸರ್ವಾಚಾರ ಸಂಪತ್ತಿನಾಚರಣೆಯನೊಳಕೊಂಡು, ಸಮಸ್ತಲೋಕ ಪಾವನಮೂರ್ತಿ ನಿಷ್ಕಲ ಪರಶಿವಲಿಂಗಜಂಗಮಕ್ಕೆ ಕೊಟ್ಟುಕೊಂಬ ಸದ್ಭಕ್ತ ಜಂಗಮದ ಚರಣಕಮಲಧೂಳನವೆ ದ್ವಿತೀಯ ಕೈಲಾಸ ಶಿವಮಂದಿರವೆಂದು ಹಿಂದು-ಮುಂದಣ ಆಶೆ-ಆಮಿಷದ ಭ್ರಾಂತು-ಭ್ರಮೆಗಳನುಳಿದು, ಧ್ಯಾನ-ಮೌನ-ನೇಮ-ನಿತ್ಯ-ಸತ್ಯ-ಸದ್ಭಾವವೆಂಬ ಷಡ್ಗುಣೈಶ್ವರ ಸಂಪದವ ನಿಷ್ಕಲಪರತತ್ವಲಿಂಗದಿಂ ಪಡದು, ಆ ಲಿಂಗದೊಡನೆ ಭೋಗಿಸಿ, ನಿಷ್ಕಲ ಪರತತ್ವಮೂರ್ತಿ ತಾನಾದ ನಿಜಮೋಕ್ಷದಿರವೆ ಸದ್ಯೋನ್ಮುಕ್ತಿದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ಚೆನ್ನಬಸವರಾಜೇಂದ್ರನು ನಿರ್ಲಜ್ಜ ಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ನಿರಾಲಂಬ ನಿಃಕಳಂಕ ನಿಃಪ್ರಪಂಚತ್ವದಿಂದ ನಾಲ್ವತ್ತೆಂಟು ಪ್ರಣಮಸ್ಮರಣೆಯಿಂದ ಏಕಾದಶಲಿಂಗಂಗಳಿಗೆ ಏಕಾದಶಪ್ರಸಾದವ ಸಮರ್ಪಿಸಿ, ತಾನಾ ಸಂತೃಪ್ತಿಮಹಾಪ್ರಸಾದದಲ್ಲಿ ಲೋಲುಪ್ತನಾದಡೆ ನಿಜಪ್ರಸಾದಿಯೆಂಬೆ ನೋಡ. ಅದರ ವಿಚಾರವೆಂತೆಂದಡೆ : ನಾಲ್ವತ್ತೆಂಟು ಪ್ರಣವದೊಳಗೆ ದ್ವಾದಶಪ್ರಣಮಸ್ಮರಣೆಯಿಂದ ಆಪ್ಯಾಯನಪ್ರಸಾದ, ಸಮಯಪ್ರಸಾದ, ಗುರುಪ್ರಸಾದವ ಆಚಾರಲಿಂಗ-ಗುರುಲಿಂಗ-ಇಷ್ಟಲಿಂಗದೇವಂಗೆ ಸುಚಿತ್ತ, ಸುಬುದ್ಧಿ, ನಿರುಪಾದ್ಥಿಕಹಸ್ತದಿಂದ ಸಮರ್ಪಿಸಿ, ಆ ತೃಪ್ತಿಯ ಲೋಲುಪ್ತಿಯಲ್ಲಿ ತಾನಾದಡೆ ಅನಾದಿನಿಃಕಳಂಕ ಗುರುಬಸವರಾಜನೆಂಬೆ ನೋಡ. ಛತ್ತೀಶಪ್ರಣಮದೊಳಗೆ ದ್ವಾದಶಪ್ರಣಮಸ್ಮರಣೆಯಿಂದ ಪಂಚೇಂದ್ರಿಯವಿರಹಿತಪ್ರಸಾದ, ಕರಣಚತುಷ್ಟಯವಿರಹಿತಪ್ರಸಾದ, ಲಿಂಗಪ್ರಸಾದವ ಶಿವಲಿಂಗ-ಜಂಗಮಲಿಂಗ-ಪ್ರಾಣಲಿಂಗದೇವಂಗೆ ನಿರಹಂಕಾರ, ಸುಮನ, ನಿರಾಲಂಬಹಸ್ತದಿಂದ ಸಮರ್ಪಿಸಿ, ಆ ತೃಪ್ತಿಯ ಲೋಲುಪ್ತಿಯಲ್ಲಿ ತಾನಾದಡೆ ಅನಾದಿ ನಿಃಕಾಮ ಶೂನ್ಯಲಿಂಗಸ್ವರೂಪ ಚೆನ್ನಬಸವರಾಜನೆಂಬೆ ನೋಡ ! ಇಪ್ಪತ್ತುನಾಲ್ಕು ಪ್ರಣಮದೊಳಗೆ ದ್ವಾದಶಪ್ರಣಮಸ್ಮರಣೆಯಿಂದ ಸಮತಾಪ್ರಸಾದ-ಪ್ರಸಾದಿಯಪ್ರಸಾದ-ಜಂಗಮಪ್ರಸಾದವ ಪ್ರಸಾದಲಿಂಗ-ಮಹಾಲಿಂಗ-ಭಾವಲಿಂಗದೇವಂಗೆ ಸುಜಾÕನ, ಸದ್ಭಾವ, ನಿಃಪ್ರಪಂಚಹಸ್ತದಿಂದ ಸಮರ್ಪಿಸಿ, ಆ ಪರಿಣಾಮಲೋಲುಪ್ತಿಯಲ್ಲಿ ತಾನಾದಡೆ ಅನಾದಿ ನಿರಂಜನ ಜಂಗಮ ಸ್ವರೂಪ ಪ್ರಭುದೇವರೆಂಬೆ ನೋಡ. ಇನ್ನು ಉಳಿದ ದ್ವಾದಶಪ್ರಣಮಸ್ಮರಣೆಯಿಂದ ಸದ್ಭಾವಪ್ರಸಾದ-ಜಾÕನಪ್ರಸಾದವ ಇಂತು ನವಲಿಂಗಪ್ರಸಾದ ಪಾದೋದಕಂಗಳ ಸಂತೃಪ್ತಿಯಲ್ಲಿ ಸಾಕಾರ ನಿರಾಕಾರನಾದ ಪರತತ್ವಜ್ಯೋತಿರ್ಮಯಲಿಂಗದೇವಂಗೆ ನಿಜಾನಂದಹಸ್ತದಿಂದ ಸಮರ್ಪಿಸಿ, ಮತ್ತಾ ಅನಾದಿಕುಳಸನ್ಮತನಾದ ದಶವಿಧಪಾದೋದಕ, ಏಕಾದಶಪ್ರಸಾದದಲ್ಲಿ ಕೂಡಿ, ಘನಸಾರದಂತಾದಡೆ ಅನಾದಿಪೂರ್ಣಮಯ ನಿಜವಸ್ತು ತಾನೆ ನೋಡ, ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ಪರಮಸಚ್ಚಿದಾನಂದಮಂತ್ರಮೂರ್ತಿ ಜಂಗಮದೇವನು ಪ್ರಮಥಗಣಾರಾಧ್ಯ ಭಕ್ತಮಾಹೇಶ್ವರರೊಪ್ಪಿಗೆಯಿಂದ ನಿರಂಜನಜಂಗಮಕ್ಕೆ ಉಪರಿಸಿಂಹಾಸನ ಮಾಡಿ, ಮುಹೂರ್ತಮಾಡಿದ ಮೇಲೆ ಷಡಕ್ಷರಮಂತ್ರಸ್ವರೂಪವಾದ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಮಧ್ಯದಲ್ಲಿ ಮೂರ್ತಿಗೊಂಡಿರುವ ಈಶಾನ್ಯಕಲಶ ಮೊದಲಾಗಿ ಪಂಚಕಲಶಂಗಳಿಗೆ ಜಂಗಮದೀಕ್ಷಾಪಾದೋದಕವ ತುಂಬಿ, ಮಂಟಪಷಟ್ಸಮ್ಮಾರ್ಜನೆ, ಷಡ್ವಿಧ ವರ್ಣದ ರಂಗಮಾಲೆ, ನವಧಾನ್ಯ, ನವಸೂತ್ರ, ವಿಭೂತಿವಿಳ್ಯೆ, ಸುವರ್ಣಕಾಣಿಕೆ, ಪಂಚಮುದ್ರೆ, ಅಷ್ಟವಿಧ ಷೋಡಶೋಪಚಾರಂಗಳಿಂದೊಪ್ಪುವ ಸದ್ಯೋಜಾತ, ವಾಮದೇವ, ಅಘೋರ, ತತ್ಪುರುಷ, ಈಶಾನ ಕಲಶಮೂರ್ತಿಗಳ ಪಶ್ಚಿಮಭಾಗದಲ್ಲಿ ಜಂಗಮಪಾದ ಸೋಂಕುವಂತೆ ಗುರುವು ಮುಹೂರ್ತಮಾಡಿ, ಆ ಕಲಶಂಗಳ ಸೂತ್ರವ ತನ್ನ ಪಾದಕ್ಕೆ ಹಾಕಿ, ತನ್ನ ಚಿದ್ಬೆಳಗಿನ ಮುಂದೆ ಮೂರ್ತಿಗೊಂಡಿರುವ ಕಲಶಂಗಳ ಪೂರ್ವಭಾಗದಲ್ಲಿ ಕರಿಯಕಂಬಳಿಯ ಗರ್ದುಗೆಯ ಮಾಡಿಸಿ, ಹಸೆಯ ರಚಿಸಿ, ಆ ಗರ್ದುಗೆಯ ಮೇಲೆ ಶಿಷ್ಯೋತ್ತಮನ ಮುಹೂರ್ತವ ಮಾಡಿಸಿ, ಆತನಂಗಕ್ಕೆ ಗುರುಸೂತ್ರವ ಹಾಕಿ, ಶಿಷ್ಯನಂಗದ ಮೇಲೆ ಮೂರ್ತಿಗೊಂಡಿರುವ ಪರಶಿವಲಿಂಗವ ಗಣಸಾಕ್ಷಿಯಾಗಿ ಶ್ರೀ ಗುರುದೇವನು ತನ್ನ ಕರಸ್ಥಲದಲ್ಲಿ ಮುಹೂರ್ತವ ಮಾಡಿಸಿ, ಆ ಲಿಂಗದ ಮಸ್ತಕದ ಮೇಲೆ ನಿರಂಜನಜಂಗಮದ ಪಾದವಿಡಿಸಿ, ಆ ಪಂಚÀಕಲಶಂಗಳಲ್ಲಿ ಶೋಬ್ಥಿಸುವಂಥ ದೇವಗಂಗಾಜಲಸ್ವರೂಪವಾದ ಗುರುಪಾದೋದಕವನ್ನು ಒಂದು ಪಾತ್ರೆಯಲ್ಲಿ ಆ ಕಲಶಂಗಳೈದರಲ್ಲಿ ತೆಗೆದುಕೊಂಡು ಗುರುವಿನ ದಕ್ಷಿಣಭಾಗದಲ್ಲಿ ಮೂರ್ತಿಗೊಂಡಿರುವ ಪಾದೋದಕ ಕುಂಭದಲ್ಲಿ ಒಂದು ಬಿಂದುವ ತಗೆದುಕೊಂಡು ಆ ಪಾತ್ರೆಯಲ್ಲಿ ಹಾಕಿ, ಇವಾರುತೆರದ ಅರ್ಘೋದಕಂಗಳ ಪ್ರಮಥಗಣರಾಧ್ಯ ಭಕ್ತಮಹೇಶ್ವರರೆಲ್ಲ ಆ ಗುರುವಿನ ಹಸ್ತಕಮಲದಲ್ಲಿರುವಂಥ ಉದಕವನ್ನು ತೆಗೆದುಕೊಂಡು, ಶರಣಸತಿ ಲಿಂಗಪತಿಯಾಗಿ ಒಪ್ಪುವ ಶಿಷ್ಯೋತ್ತಮನ ಮಸ್ತಕದಮೇಲೆ ಮಂತ್ರಧ್ಯಾನದಿಂದ ಸಂಪ್ರೋಕ್ಷಣೆಯ ಮಾಡುವಂಥಾದೆ ಕಲಶಾಬ್ಥಿಷೇಕದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ಚನ್ನಬಸವರಾಜೇಂದ್ರನು ನಿರ್ಲಜ್ಜಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ಒಂದು ಜೀವಾತ್ಮನೆ ನಾಲ್ಕು ತೆರನಾಗಿರ್ಪುದಯ್ಯ. ಅದೆಂತೆಂದಡೆ : ಒಂದು ಜೀವನೆ ಅಂಡಜಪ್ರಾಣಿಯಾಗಿರ್ಪುದಯ್ಯ. ಮತ್ತೊಂದು ಜೀವನೆ ಪಿಂಡಜಪ್ರಾಣಿಯಾಗಿರ್ಪುದಯ್ಯ. ಮಿಗಿಲೊಂದು ಜೀವನೆ ಉದ್ಬಿಜಪ್ರಾಣಿಯಾಗಿರ್ಪುದಯ್ಯ. ಮತ್ತೊಂದು ಜೀವನೆ ಜರಾಯುಜಪ್ರಾಣಿಯಾಗಿರ್ಪುದಯ್ಯ. ಈ ಚತುರ್ವಿಧ ಜೀವನೊಳಗೆ ಏಳುಲಕ್ಷ ಮಲಜೀವನಯ್ಯ, ಏಳುಲಕ್ಷ ಜಡಜೀವನಯ್ಯ, ಏಳುಲಕ್ಷ ಕುಜೀವನಯ್ಯ, ಏಳುಲಕ್ಷ ದುರ್ಜೀವನಯ್ಯ, ಏಳುಲಕ್ಷ ಕಪಟಜೀವನಯ್ಯ, ಏಳುಲಕ್ಷ ಸಂಚಲಜೀವನಯ್ಯ, ಏಳುಲಕ್ಷ ವಂಚಕಜೀವನಯ್ಯ, ಏಳುಲಕ್ಷ ನಿರ್ಮಲಜೀವನಯ್ಯ, ಏಳುಲಕ್ಷ ಅಜಡಜೀವನಯ್ಯ, ಏಳುಲಕ್ಷ ಸುಜೀವನಯ್ಯ, ಏಳುಲಕ್ಷ ಸಂಜೀವನಯ್ಯ, ಏಳುಲಕ್ಷ ಪರಮಜೀವನಯ್ಯ. ಈ ತೆರನಾಗಿ ಎಂಬತ್ತುನಾಲ್ಕುಲಕ್ಷ ಜೀವಪ್ರಾಣಿಗಳೆಲ್ಲ ಶಿವನ ಪೂರ್ವಭಾಗದ ಪ್ರವೃತ್ತಿಮಾರ್ಗದ ಕರ್ಮೇಂದ್ರಿಯ, ಜ್ಞಾನೇಂದ್ರಿಯವೆಂಬ ದ್ವಾದಶೇಂದ್ರಿಯಂಗಳಲ್ಲಿ ಜೀವಿಸುತಿರ್ಪವಯ್ಯ. ಆ ದ್ವಾದಶ ಜೀವನ ವರ್ತನಾಭೇದದಿಂದ ಒಂದು ಜೀವನೆ ಹನ್ನೆರಡು ತೆರನಾಗಿರ್ಪುದಯ್ಯ. ಅದರ ಗುಣಭೇದವೆಂತೆಂದಡೆ : ಉಚ್ಫಿಷ್ಟವ ತಿಂದು ಬದುಕುವ ಜೀವನೆ ಮಲಜೀವನೆನಿಸುವುದಯ್ಯ. ಮಾಂಸಭಕ್ಷಣೆಯಿಂದ ಬದುಕುವ ಜೀವನೆ ಜಡಜೀವನೆನಿಸುವುದಯ್ಯ. ಚಾಡಿ ಕ್ಷುದ್ರತನದಿಂದ ಒಡಲ ಹೊರವ ಜೀವನೆ ದುರ್ಜೀವನೆನಿಸುವುದಯ್ಯ. ಕಡಿದು, ಹೊಡದು, ಬಡಿದು, ಬಂದ್ಥಿಸಿ ಒಡಲ ಹೊರವ ಜೀವನೆ ಕಪಟಜೀವನೆನಿಸುವುದಯ್ಯ. ಗಾರುಡಿಗವಿದ್ಯದಿಂದ ಒಡಲಹೊರವಜೀವನೆ ಸಂಚಲಜೀವನೆನಿಸುವುದಯ್ಯ. ದೇಶಕ್ಕೊಂದು ಭಾಷೆ, ದೇಶಕ್ಕೊಂದು ವೇಷವ ಧರಿಸಿ, ಅಜಾತತನದಿಂದ ಒಡಲ ಹೊರವ ಜೀವನೆ ವಂಚಕಜೀವನೆನಿಸುವುದಯ್ಯ. ಷಟ್ಕøಷಿ ವ್ಯಾಪಾರದೊಳಗೆ ಆವುದಾದರೂ ಒಂದು ವ್ಯವಹಾರವ ಮಾಡಿ, ಸತ್ಯದಿಂದ ಬಾಳುವವನೆ ನಿರ್ಮಲಜೀವನೆನಿಸುವುದಯ್ಯ. ಆವ ಮತವಾದರೇನು ? ಆವ ಜಾತಿಯಾದರೇನು ? ಮಲಮಾಯಾ ಸಂಸಾರಬಂಧಮಂ ತ್ಯಜಿಸಿದ ಅಷ್ಟಾಂಗಯೋಗಾಭ್ಯಾಸಿಯೆ ಅಜಡಜೀವನೆನಿಸುವುದಯ್ಯ. ಅಷ್ಟಾಂಗಯೋಗವ ತ್ಯಜಿಸಿ ಶ್ರೀಗುರುಪರಮಾರಾಧ್ಯನ ಉಪಾವಸ್ತೆಯಂ ಮಾಡುವವನೆ ಸುಜೀವನೆನಿಸುವುದಯ್ಯ. ಮಹಾಚಿದ್ಘನ ಗುರುದೇವನ ಪ್ರತ್ಯಕ್ಷವಮಾಡಿಕೊಂಡು ಘನಗುರುಭಕ್ತಿಯಲ್ಲಿ ನಿಷ್ಠೆಯುಳ್ಳಾತನೆ ಸಜ್ಜೀವನೆನಿಸುವುದಯ್ಯ. ಶ್ರೀಮದ್ಘನ ಗುರುವ ಮೆಚ್ಚಿಸಿ ಇಷ್ಟ-ಪ್ರಾಣ-ಭಾವಲಿಂಗವ ಪಡದಾತನೆ ಪರಾತ್ಪರಮಜೀವನೆನಿಸುವುದಯ್ಯ. ಇಂತೀ ಜೀವನ ಬುದ್ಧಿಯ ಗುರುಕಟಾಕ್ಷದಿಂದ ನಿವೃತ್ತಿಯಮಾಡಿ, ತ್ರಿವಿಧಾಂಗವೆಲ್ಲ ದೀಕ್ಷಾತ್ರಯಂಗಳಿಂದ ಶುದ್ಧಪ್ರಸಾದವಾಗಿ, ಭಾವತ್ರಯಂಗಳೆಲ್ಲ ಮೋಕ್ಷತ್ರಯಂಗಳಿಂದ ಪ್ರಸಿದ್ಧಪ್ರಸಾದವಾಗಿ, ಸತ್ಯವಾಣಿ, ಸತ್ಯಪ್ರಾಣಿ, ಸತ್ಯಮಾಣಿ, ಉಳಿದವಯವಂಗಳೆಲ್ಲ ಸತ್ಯವನೆ ಹಾಸಿ, ಸತ್ಯವನೆ ಹೊದ್ದು,
--------------
ಗುರುಸಿದ್ಧದೇವರು
ಅಯ್ಯ, ನಿರ್ವಂಚಕತ್ವದಿಂದ ದಶವಿಧಲಿಂಗಗಳಿಗೆ ಏಕವಿಂಶತಿ ಮಂತ್ರಸ್ಮರಣೆಯಿಂದ ದಶವಿಧಪಾದೋದಕವನರ್ಪಿಸಿ, ಸಂತೃಪ್ತಾನಂದಜಲದಲ್ಲಿ ಪರಿಣಾಮಿಸಬಲ್ಲಡೆ ನಿಜಪ್ರಸಾದಿಯೆಂಬೆನಯ್ಯ. ಅದರ ವಿಚಾರವೆಂತೆಂದಡೆ : ಏಕವಿಂಶತಿ ಪ್ರಣಮದೊಳಗೆ ಷಡ್ವಿಧಪ್ರಣಮಸ್ಮರಣೆಯಿಂದ ಸ್ವರ್ಶನೋದಕ ಅವಧಾರೋದಕ-ಗುರುಪಾದೋದಕವ ಆಚಾರಲಿಂಗ-ಗುರುಲಿಂಗ-ಇಷ್ಟಲಿಂಗದೇವಂಗೆ ಅರ್ಪಿಸಿ, ತಾನಾ ಪರಿಣಾಮದಲ್ಲಿ ಲೋಲುಪ್ತನಾದಡೆ ಅನಾದಿಗುರುಲಿಂಗಸ್ವರೂಪ ಬಸವಣ್ಣನೆಂಬೆ ನೋಡ. ದಶಪಂಚಪ್ರಣಮದೊಳಗೆ ಷಡ್ವಿಧಪ್ರಣಮಸ್ಮರಣೆಯಿಂದ ಆಪ್ಯಾಯನೋದಕ-ಹಸ್ತೋದಕ-ಲಿಂಗಪಾದೋದಕವ ಶಿವಲಿಂಗ-ಜಂಗಮಲಿಂಗ-ಪ್ರಾಣಲಿಂಗದೇವಂಗೆ ಸಮರ್ಪಿಸಿ ತಾನಾ ಪರಿಣಾಮದಲ್ಲಿ ಲೋಲುಪ್ತನಾದಡೆ ಅನಾದಿಲಿಂಗಸ್ವರೂಪ ಚೆನ್ನಬಸವಣ್ಣನೆಂಬೆ ನೋಡ. ನವವಿಧಪ್ರಣಮದೊಳಗೆ ಷಡ್ವಿಧಪ್ರಣಮಸ್ಮರಣೆಯಿಂದ ಪರಿಣಾಮೋದಕ-ನಿರ್ನಾಮೋದಕ-ಜಂಗಮಪಾದೋದಕವ ಪ್ರಸಾದಲಿಂಗ-ಮಹಾಲಿಂಗ ಭಾವಲಿಂಗದೇವಂಗೆ ಸಮರ್ಪಿಸಿ, ತಾನಾ ಸಂತೃಪ್ತಿಯಲ್ಲಿ ಲೋಲುಪ್ತನಾದಡೆ ಅನಾದಿಜಂಗಮಸ್ವರೂಪ ಅಲ್ಲಮಪ್ರಭುರಾಯನೆಂಬೆ ನೋಡಾ. ಇನ್ನು ಉಳಿದ ತ್ರಿವಿಧಪ್ರಣಮಸ್ಮರಣೆಯಿಂದ ನವವಿಧೋದಕವನೊಳಕೊಂಡ ಸತ್ಯೋದಕವ ನವವಿಧಲಿಂಗಕ್ಕೆ ಮಾತೃಸ್ವರೂಪವಾದ ನಿಃಕಲಪರತತ್ವಲಿಂಗದೇವಂಗೆ ಸಮರ್ಪಿಸಿ, ನಿತ್ಯತೃಪ್ತತ್ವದಿಂದ ಸರ್ವಾವಸ್ಥೆಯ ನೀಗಬಲ್ಲಡೆ ಅನಾದಿಶರಣಪ್ರಸನ್ನ ಮೂರ್ತಿಯೆಂಬೆ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ವರಕುಮಾರ ದೇಶಿಕೋತ್ತಮನೆ ಕೇಳ ! ಕಲ್ಯಾಣಪಟ್ಟಣದ ಅನುಭಾವಮಂಟಪದಲ್ಲಿ ಬಸವ ಮೊದಲಾದ ಪ್ರಮಥರೆಲ್ಲ ಚೆನ್ನಬಸವರಾಜೇಂದ್ರಂಗೆ ಅಬ್ಥಿವಂದಿಸಿ, ಮಹಾಲಿಂಗೈಕ್ಯಾನುಭಾವವ ಬೆಸಗೊಳಲು ಅದೇ ಪ್ರಸಾದವ ನಿನಗೆ ಅರುಹಿಸಿ ಕೊಟ್ಟೆವು ಕೇಳಾ ನಂದೀಶ, ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ಇದೆ ಮಹಾಪ್ರಭುವಿನ ಮಹಾಪ್ರಸಾದನುಸಂಧಾನದಿಂದ ಶಾಂಭವಲೋಕದ ಶಾಂಭವಗಣಂಗಳು, ಶಿವಲೋಕದ ಶಿವಗಣಂಗಳು, ರುದ್ರಲೋಕದ ರುದ್ರಗಣಂಗಳು, ನಾಗಲೋಕದ ನಾಗಗಣಂಗಳು ದೇವಲೋಕದ ದೇವಗಣಂಗಳು, ಮತ್ರ್ಯಲೋಕದ ಮಹಾಗಣಂಗಳು ಮುಂತಾಗಿ ನಿಜಾಚರಣೆ ಲಿಂಗಲೋಲುಪ್ತರಾಗಿ, ಬಯಲೊಳಗೆ ಮಹಾಬಯಲಾದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ಇಂತು ನಿರಂಜನ ಮಹಾಲಿಂಗಾನುಭಾವಸೂತ್ರವ ಎರಡೆಂಬತ್ತೆಂಟುಕೋಟಿ ಹರಗುರು ವಾಕ್ಯಪ್ರಮಾಣವಚನಾನುಭಾವವ ಪ್ರಕಟಿಸಿ ಈ ಒಂದು ವಚನಾರ್ಥದಲ್ಲಿ ಅತಿಗೋಪ್ಯದಿಂದ ಅನಾದಿ ನಿಃಕಳಂಕ ನಿಶ್ಶೂನ್ಯ ನಿರಂಜನ ನಿರಾವಯ ಶರಣಸೂತ್ರವಿಡಿದು ನಿರಾಯಾಸಂ ಆಯಾಸಂಗಳೇನು ತೋರದೆ ಈ ವಚನಾರ್ಥದ ಆದಿ-ಅಂತ್ಯವನರುಹಿಸಿಕೊಟ್ಟೆವು ನೋಡ. ಆ ವಿಚಾರವೆಂತೆಂದಡೆ : ಶ್ರೀ ಮದ್ಗುರು ಕಾರುಣ್ಯವೇದ್ಯನು, ವಿಭೂತಿ-ರುದ್ರಾಕ್ಷಧಾರಕನು, ಪಂಚಾಕ್ಷರೀ ಭಾಷಾಸಮೇತನು, ಲಿಂಗಾಂಗಸಂಬಂದ್ಥಿ, ನಿತ್ಯಲಿಂಗಾರ್ಚಕನು, ಅರ್ಪಿತದಲ್ಲಿ ಅವಧಾನಿ, ಪಾದೋದಕ-ಪ್ರಸಾದಗ್ರಾಹಕನು, ಗುರುಭಕ್ತಿ ಸಂಪನ್ನನು, ಏಕಲಿಂಗ ನಿಷ್ಠಾಪರನು, ಚರಲಿಂಗ ಲೋಲುಪ್ತನು, ಶರಣ ಸಂಗವೈಶ್ವರ್ಯನು, ತ್ರಿವಿಧಕ್ಕಾಯತನು, ತ್ರಿಕರಣಶುದ್ಧನು, ತ್ರಿವಿಧ ಲಿಂಗಾಂಗಸಂಬಂದ್ಥಿ, ಅನ್ಯದೈವದ ಸ್ಮರಣೆಯ ಹೊದ್ದ, ಭವಿಸಂಗವ ಮಾಡ, ಭವಿಪಾಕವ ಕೊಳ್ಳ, ಪರಸ್ತ್ರೀಯರ ಬೆರಸ, ಪರಧನವನೊಲ್ಲ, ಪರನಿಂದ್ಯವನಾಡ, ಅನೃತವ ನುಡಿಯ, ಹಿಂಸೆಯ ಮಾಡ, ತಾಮಸಭಕ್ತರ ಸಂಗವಮಾಡ, ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಬ್ಥಿಮಾನ ಮುಂತಾದವೆಲ್ಲವ ಸಮರ್ಪಿಸಿ ಪ್ರಸಾದ ಮುಂತಾಗಿ ಭೋಗಿಸುವ, ಜಂಗಮನಿಂದ್ಯವ ಸೈರಿಸ, ಪ್ರಸಾದನಿಂದ್ಯವ ಕೇಳ, ಅನ್ಯರನಾಸೆಗೈಯ್ಯ, ಪಾತ್ರಾಪಾತ್ರವನರಿದೀವ, ಚತುರ್ವಿಧಪದವಿಯ ಹಾರೈಸ, ಅರಿಷಡ್ವರ್ಗಕ್ಕೆ ಅಳುಕ, ಕುಲಾದಿಮದಂಗಳ ಬಗೆಗೊಳ್ಳ, ದ್ವೈತಾದ್ವೈತವ ನುಡಿವನಲ್ಲ, ಸಂಕಲ್ಪ-ವಿಕಲ್ಪವ ಮಾಡುವನಲ್ಲ, ಕಾಲೋಚಿತವ ಬಲ್ಲ, ಕ್ರಮಯುಕ್ತನಾಗಿ ಷಟ್‍ಸ್ಥಲಭರಿತ, ಸರ್ವಾಂಗಲಿಂಗಿ, ದಾಸೋಹಂ ಸಂಪನ್ನ ಇಂತೀ ಭಾವನ್ನದಿರವ ಅಂತರಂಗದಲ್ಲಿ ಒಳಕೊಂಡು ಬಹಿರಂಗದಲ್ಲಿ ನಡೆದಂತೆ ನುಡಿದು, ನುಡಿದಂತೆ ನಡದು, ಸದ್ಭಕ್ತಿ-ಜ್ಞಾನ-ವೈರಾಗ್ಯ ಸಂಪನ್ನತ್ವದಿಂದ ಸಕಲಪ್ರಮಥಗಣಂಗಳಿರುವ ಕೀರ್ತಿಸಿಕೊಳ್ಳುತ್ತ, ಆ ಆದಿಪ್ರಮಥರ ಕೀರ್ತನೆ ವಿಚಾರವೆಂತೆಂದಡೆ : ಶ್ರೀಮದನೇಕಲೋಕ-ವಿಸ್ತಾರಕ ಕಾರಣರೂಪ, ಸತ್ತಿಚಿತ್ತಾನಂದ ನಿತ್ಯಪರಿಪೂರ್ಣ ಅವಿರಳ ಪರಂಜ್ಯೋತಿಸ್ವರೂಪ, ಪರತರ ಪರಬ್ರಹ್ಮಾನುಭಾವ ಸಾರ್ವಭೌಮ, ಷಟ್ಸ್ಥಲಸ್ಥಾಪನಾಚಾರ್ಯ, ಪಂಚಾಚಾರ ಪ್ರಮಥನಾಯಕ ಸರ್ವಾಚಾರ ನಿಷ್ಠಾಗರಿಷ್ಠ, ಲಿಂಗಲೋಲುಪ್ತ, ಲಿಂಗಭೋಗೋಪಭೋಗಿ, ಜಂಗಮಾನುಭಾವ, ಸದ್ಭಕ್ತ ಹೃನ್ಮಂದಿರವಾಸ, ನಿತ್ಯ ಕಲ್ಯಾಣೋತ್ಸಹಪೂರ್ಣಾವತರ್ಯ, ಲಿಂಗಲೀಲಾನಂದ, ಏಕವಿಂಶತಿಯುಗಸ್ಥಾಪನಾಚಾರ್ಯವರ್ಯ, ಮಂಜುಳಾಂತರಂಗ, ಮನುಮುನಿವಂದ್ಯ, ಪ್ರದಾಯಕ ತ್ರೈದಶಪರ್ವತಾದ್ಥೀಶ್ವರ, ಮದನಮರ್ದನ, ಮಾಯಾಕೋಲಾಹಲ, ಅಷ್ಟಾವರಣ ಸ್ವರೂಪ, ತ್ರಿವಿಧಾನುಗ್ರಹ ಪ್ರತಿಪಾದಕ, ತ್ರಿವಿಧ ಪಾದೋದಕ ಪ್ರಸಾದಲೋಲುಪ್ತ, ತ್ರಿವಿಧಾಚಾರಸನ್ಮೋಹಿ, ತ್ರಿಗುಣಾನಂದಭರಿತ, ತ್ರಿಮಲದೂರ, ನಿರ್ಮಲ-ನಿಃಕಳಂಕ-ನಿಃಶೂನ್ಯ-ನಿರಂಜನ, ಅನುಮಿಷಾರಾಧ್ಯ, ತ್ರಿವಿಧ ಲಿಂಗಾನುಭಾವ ಅಖಿಳಾಂಡ ಪ್ರತಿಷ್ಠಾಪ್ರದಾಯಕ, ಸದ್ಧರ್ಮಸ್ವರೂಪ, ಸತ್ಕ್ರಿಯಾ ಸಮ್ಯಜ್ಞಾನ ಸದಾಭರಿತ, ನಿತ್ಯ ತೃಪ್ತಾನಂದಮಂತ್ರಸ್ವರೂಪ, ಅನಂತಸೂರ್ಯಚಂದ್ರಾಗ್ನಿಪ್ರಕಾಶ, ಅಜ್ಞಾನ ತಿಮಿರಾಂಧಸ್ಯ, ಕಾರಣಾವತಾರ ಸರ್ವಜ್ಞ ಪ್ರದಾಯಕ, ಕಾಮಧೇನು-ಕಲ್ಪವೃಕ್ಷ, ಚಿಂತಾಮಣಿಗೆ ಮಾತೃಸ್ವರೂಪ, ವಾಚಾತೀತ-ವರ್ಣಾತೀತ-ಭಾವಾತೀತ-ಜ್ಞಾನಾತೀತ, ಚಿತ್ಕಲಾಸ್ವರೂಪ, ಅಯೋನಿಸಂಭವ, ಅಜಡಸ್ವರೂಪ, ಬತ್ತೀಶಕಳಾಮೂರ್ತಿ, ಜರೆಮರಣ ಸಂಸ್ಕøತಿದೂರ, ವರವೀರಶೈವಮತ ಸ್ಥಾಪನಾಚಾರ್ಯ, ನಿಜ ಶಿವಯೋಗಭರಿತಾನಂದಮೂರ್ತಿ, ಗುರುಮಾರ್ಗಾಚಾರ ಪ್ರತಿಷ್ಠಾಪ್ರದಾಯಕ, ಅನಾಚಾರ ಸಂಹಾರ, ಮಹಿಮಾಸ್ವರೂಪ, ಸದ್ಭಕ್ತಜಿಹ್ವಾಗ್ರ ಹೃನ್ಮಂದಿರಾವಾಸ. ಏಕವಿಂಶತಿ ದೀಕ್ಷಾಬೋಧಸ್ವರೂಪ, ಷಡ್ಗುಣೈಶ್ವರ್ಯ ಸಂಪತ್ಕರವನುಳ್ಳ ಮುಕ್ತಿಪ್ರದಾಯಕ, ಮೂಲಮಂತ್ರಮೂರ್ತಿ ಲೋಕಪಾವನಾರ್ಥ ಕೂಡಲಸಂಗಮೇಶ್ವರನ ಚಿದ್ಗರ್ಭೋದಯ ಬಸವದಂಡನಾಥ ಪ್ರಮಥಗಣಂಗಳ ಭಕ್ತಿಹಿತಾರ್ಥವಾಗಿ, ಅವತರಿಸಿದಂಥ ವಿರಾಣ್ಮೂರ್ತಿ! ಅನಾದಿಗಣೇಶ್ವರ, ಅನಾದಿಗಣೇಶ್ವರನ ಶಿಷ್ಯರು ಆದಿಗಣೇಶ್ವರ, ಆದಿಗಣೇಶ್ವರನ ಶಿಷ್ಯರು ನಿರ್ಮಾಯವೆಂಬ ಗಣೇಶ್ವರ, ನಿರ್ಮಾಯನೆಂಬ ಗಣೇಶ್ವರನ ಶಿಷ್ಯರು ನಿರಂಜನನೆಂಬ ಗಣೇಶ್ವರ, ನಿರಂಜನನೆಂಬ ಗಣೇಶ್ವರನ ಶಿಷ್ಯರು ಜ್ಞಾನಾನಂದನೆಂಬ ಗಣೇಶ್ವರ, ಜ್ಞಾನಾನಂದನೆಂಬ ಗಣೇಶ್ವರನ ಶಿಷ್ಯರು ಆತ್ಮ ಗಣೇಶ್ವರ, ಆತ್ಮಗಣೇಶ್ವರನ ಶಿಷ್ಯರು ಆಧ್ಯಾತ್ಮ ಗಣೇಶ್ವರ, ಆಧ್ಯಾತ್ಮಗಣೇಶ್ವರನ ಶಿಷ್ಯರು ರುದ್ರನೆಂಬ ಗಣೇಶ್ವರ, ರುದ್ರನೆಂಬ ಗಣೇಶ್ವರನ ಶಿಷ್ಯರು ಬಸವಪ್ರಭುದೇವರು, ಬಸವಪ್ರಭುದೇವರ ಶಿಷ್ಯರು ಆದಿಲಿಂಗದೇವರು, ಆದಿಲಿಂಗದೇವರ ಶಿಷ್ಯರು ಚೆನ್ನವೀರೇಶ್ವರದೇವರು, ಚೆನ್ನವೀರೇಶ್ವರದೇವರ ಶಿಷ್ಯರು ಹರದನಹಳ್ಳಿ ಗೋಸಲದೇವರು, ಹರದನಹಳ್ಳಿ ಗೋಸಲದೇವರ ಶಿಷ್ಯರು ಶಂಕರದೇವರು, ಶಂಕರದೇವರ ಶಿಷ್ಯರು ದಿವ್ಯಲಿಂಗದೇವರು, ದಿವ್ಯಲಿಂಗದೇವರ ಶಿಷ್ಯರು ಚೆನ್ನಬಸವೇಶ್ವರದೇವರು, ಚೆನ್ನಬಸವೇಶ್ವರದೇವರ ಶಿಷ್ಯರು ತೋಂಟದ ಸಿದ್ಧೇಶ್ವರಸ್ವಾಮಿಗಳು, ತೋಂಟದ ಶಿದ್ಧೇಶ್ವರಸ್ವಾಮಿಗಳ ಸಿಷ್ಯರು ಮರುಳಸಿದ್ಧೇಶ್ವರಸ್ವಾಮಿಗಳು, ಮರುಳಸಿದ್ಧೇಶ್ವರಸ್ವಾಮಿಗಳ ಶಿಷ್ಯರು ರೇವಣಸಿದ್ಧೇಶ್ವರಸ್ವಾಮಿಗಳು, ರೇವಣಸಿದ್ಧೇಶ್ವರಸ್ವಾಮಿಗಳ ಶಿಷ್ಯರು ಶಿವಲಿಂಗೇಶ್ವರಸ್ವಾಮಿಗಳು, ಶಿವಲಿಂಗೇಶ್ವರಸ್ವಾಮಿಗಳ ಶಿಷ್ಯರು ನಿರಂಜನೇಶ್ವರಸ್ವಾಮಿಗಳು, ನಿರಂರನೇಶ್ವರಸ್ವಾಮಿಗಳ ಶಿಷ್ಯರು ಮರಿಬಸವಲಿಂಗೇಶ್ವರಸ್ವಾಮಿಗಳು, ಮರಿಬಸವಲಿಂಗೇಶ್ವರಸ್ವಾಮಿಗಳ ಶಿಷ್ಯರು ಸ್ವತಂತ್ರಸಿದ್ಧಲಿಂಗೇಶ್ವರಸ್ವಾಮಿಗಳು, ಸ್ವತಂತ್ರಸಿದ್ಧಲಿಂಗೇಶ್ವರಸ್ವಾಮಿಗಳ ಶಿಷ್ಯರು ಚೆನ್ನಮಲ್ಲೇಶ್ವರಸ್ವಾಮಿಗಳು ಚೆನ್ನಮಲ್ಲೇಶ್ವರಸ್ವಾಮಿಗಳ ಶಿಷ್ಯರು ಚೆನ್ನಂಜೇಶ್ವರಸ್ವಾಮಿಗಳು, ಚೆನ್ನಂಜೇಶ್ವರಸ್ವಾಮಿಗಳ ಶಿಷ್ಯರು ಗುರುಶಾಂತೇಶ್ವರಸ್ವಾಮಿಗಳು, ಗುರುಶಾಂತೇಶ್ವರಸ್ವಾಮಿಗಳ ಶಿಷ್ಯರು ಶಾಂತಮಲ್ಲಸ್ವಾಮಿಗಳು ಶಾಂತಮಲ್ಲಸ್ವಾಮಿಗಳ ಕರ-ಮನ-ಭಾವದಲ್ಲುದಯವಾದ ಗುರುಸಿದ್ಧಲಿಂಗ ನಾನಯ್ಯ. ಆ ಗುರುಸಿದ್ಧಲಿಂಗನ ಕರ-ಮನ-ಸುಭಾವದಲ್ಲಿ ಶರಣಗಣಂಗಳ ಶುದ್ಧಸಿದ್ಧಪ್ರಸಿದ್ಧ ಪ್ರಸಾದವಾಗಿ ಅಷ್ಟವಿಧಾರ್ಚನೆ-ಷೋಡಶೋಪಚಾರ-ಮಂತ್ರ-ಧ್ಯಾನ- ಜಪ-ಸ್ತೋತ್ರ-ಮನೋರ್ಲಯ-ನಿರಂಜನ ಪೂಜೆಯ ಕೈಕೊಂಡು ಪ್ರಮಥಗಣಂಗಳ ಸ್ವಾನುಭಾವಸೂತ್ರವನೊಳಕೊಂಡು ಒಳಗು ಬೆಳಗನೆ ನುಂಗಿ ಬೆಳಗು ಒಳಗನೆ ನುಂಗಿ, ಛಳಿ ಮೋಹಕದ ಮಂಜು ನುಂಗಿದಂತೆ ಹಲವು ದೀಪವ ಬಯಲ ಗಾಳಿ ನುಂಗಿದ ತೆರದಿ ಕಳೆಯಳಿದ ಕೂಡಲಚೆನ್ನಸಂಗಯ್ಯನು. ಇಂತು ಚಿಕ್ಕದಂಡನಾಥ ಚೆನ್ನಬಸವೇಶ್ವರಸ್ವಾಮಿಗಳ ಪ್ರಸನ್ನಪ್ರಸಾದಕ್ಕೆ ಒಪ್ಪಿಗೆಯಾಗಿ ಈ ವಚನಾನುಭಾವಶಾಸ್ತ್ರವ ಕೈಕೊಂಡು ಸದ್ಭಕ್ತಶರಣಗಣಂಗಳಿಗೆ ಬೋದ್ಥಿಸಿ ಸಂಪೂರ್ಣವಮಾಡುವುದಕ್ಕೆ ಕರ್ತುಗಳಾಗಿ ಒಪ್ಪುತಿರ್ಪಿರಿ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ಶರಣಸತಿ-ಲಿಂಗಪತಿ ಭಾವದಿಂದ ಸುಚಿತ್ತ, ಸುಬುದ್ಧಿ, ನಿರಹಂಕಾರ, ಸುಮನ, ಸುಜ್ಞಾನ, ಸದ್ಭಾವ, ನಿರುಪಾದ್ಥಿಕ, ನಿಷ್ಕಳಂಕ, ನಿರಾಳವೆಂಬ ನವವಿಧ ಹಸ್ತಗಳಿಂದ ನವವಿಧ ಪದಾರ್ಥವನ್ನು ಇಷ್ಟಲಿಂಗ-ಪ್ರಾಣಲಿಂಗ-ಭಾವಲಿಂಗ- ಆಚಾರಲಿಂಗ-ಗುರುಲಿಂಗ-ಶಿವಲಿಂಗ-ಜಂಗಮಲಿಂಗ ಪ್ರಸಾದಲಿಂಗ-ಮಹಾಲಿಂಗವೆಂಬ ನವವಿಧಲಿಂಗಗಳಿಗೆ ಶ್ರದ್ಧಾಭಕ್ತಿ ಮೊದಲಾಗಿ ನವವಿಧ ಭಕ್ತಿಗಳಿಂದ ಸಮರ್ಪಿಸುವ ಕ್ರಮವೆಂತೆಂದಡೆ : ತನುಸಂಬಂಧವಾದ ರೂಪುಪದಾರ್ಥವನ್ನು ಇಷ್ಟಲಿಂಗಕ್ಕೆ ಸಮರ್ಪಿಸಿ, ಮನಸಂಬಂಧವಾದ ರುಚಿಪದಾರ್ಥವನ್ನು ಪ್ರಾಣಲಿಂಗಕ್ಕೆ ಸಮರ್ಪಿಸಿ, ಧನಸಂಬಂಧವಾದ ತೃಪ್ತಿ ಪದಾರ್ಥವನ್ನು ಭಾವಲಿಂಗಕ್ಕೆ ಸಮರ್ಪಿಸಿ, ಸುಗಂಧಪದಾರ್ಥವನ್ನು ಆಚಾರಲಿಂಗಕ್ಕೆ ಸಮರ್ಪಿಸಿ, ಸುರಸಪದಾರ್ಥವನ್ನು ಗುರುಲಿಂಗಕ್ಕೆ ಸಮರ್ಪಿಸಿ, ಸುರೂಪುಪದಾರ್ಥವನ್ನು ಶಿವಲಿಂಗಕ್ಕೆ ಸಮರ್ಪಿಸಿ, ಸ್ಪರ್ಶನಪದಾರ್ಥವನ್ನು ಜಂಗಮಲಿಂಗಕ್ಕೆ ಸಮರ್ಪಿಸಿ, ಸುಶಬ್ದಪದಾರ್ಥವನ್ನು ಪ್ರಸಾದಲಿಂಗಕ್ಕೆ ಸಮರ್ಪಿಸಿ, ಸುತೃಪ್ತಿಪದಾರ್ಥವನ್ನು ಮಹಾಲಿಂಗಕ್ಕೆ ಸಮರ್ಪಿಸಿ, ಘ್ರಾಣ, ಚಿಹ್ನೆ, ನೇತ್ರ, ತ್ವಕ್ಕು, ಶ್ರೋತ್ರ, ಹೃದಯಂಗಳು ಮೊದಲಾದ ಸಮಸ್ತ ಮುಖಂಗಳಲ್ಲಿ ಬರುವ ಪದಾರ್ಥಂಗಳ ಸಮಸ್ತಲಿಂಗಂಗಳಿಗೆ ಮಿಶ್ರಾಮಿಶ್ರಂಗಳೊಡನೆ ಸಮರ್ಪಿಸಿ, ಆ ಲಿಂಗಂಗಳ ಸಂತೃಪ್ತಿ ಪರಿಣಾಮಪ್ರಸಾದದಲ್ಲಿ ಲೋಲುಪ್ತವಾಗಿರುವಂಥಾದೆ ಪಂಚೇಂದ್ರಿಯಾರ್ಪಿತದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ನಿಷ್ಪ್ರಪಂಚ ನಿರಾಲಂಬ ಚನ್ನಬಸವರಾಜೇಂದ್ರನು ನಿರ್ಲಜ್ಜ ಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ಇಂತು ಕಲ್ಯಾಣಪಟ್ಟಣದ ಅನುಭಾವಮಂಟಪದ ಶೂನ್ಯಸಿಂಹಾಸನದಲ್ಲಿ ಪ್ರಭುಸ್ವಾಮಿಗಳು ಬಸವರಾಜೇಂದ್ರ ಮುಖ್ಯವಾದ ಸಕಲಪ್ರಮಥಗಣಂಗಳು ಕೂಡಿ, ಚಿಕ್ಕದಂಡನಾಯಕ ಮುಖವಚನದಿಂದೆ ಶಿವಯೋಗಿ ಸಿದ್ಧರಾಮೇಶ್ವರನ ಉಪದೇಶಕಾರಣಾರ್ಥವಾಗಿ, ನವರತ್ನ ಖಚಿತ ಮಂಟಪವ ರಚಿಸಿ, ಶುಚಿ, ರುಚಿ, ಪರುಷ, ನಿಜ, ಸದ್ಭಕ್ತಿ, ಜ್ಞಾನ, ವೈರಾಗ್ಯ, ಸತ್ಕ್ರಿಯಾಚಾರ ಷಟ್ಸ್ಥಲಮಾರ್ಗವ ಚೆನ್ನಬಸವಣ್ಣನ ಮುಖವಚನದಿಂದೆ ಸಿದ್ಧರಾಮದೇಶಿಕೇಂದ್ರನಿಗೆ ಬೋದ್ಥಿಸಿದ ನಿಲುಕಡೆಯ ಸೂತ್ರವದೆಂತೆಂದಡೆ : ಅಯ್ಯ, ಮೂವತ್ತಾರು ತತ್ವಂಗಳಲ್ಲಿ ಸಂಬಂಧವಾದ ಅಷ್ಟಾವರಣಂಗಳ ಕೂಡಿ ನಾಲ್ವತ್ತುನಾಲ್ಕು ಚಿದಂಗತತ್ವಂಗಳೆಂದೆನಿಸಿ, ಅಯ್ಯ, ಇಷ್ಟಲಿಂಗಜಪಪ್ರದಕ್ಷಿಣ ಪ್ರಣಮ ಹತ್ತೊಂಬತ್ತು, ಪ್ರಾಣಲಿಂಗಜಪಪ್ರದಕ್ಷಿಣ ಪ್ರಣಮ ಹತ್ತೊಂಬತ್ತು, ಭಾವಲಿಂಗಜಪಪ್ರದಕ್ಷಿಣ ಪ್ರಣಮ ಹತ್ತೊಂಬತ್ತು ಕೂಡಲಾಗಿ ಐವತ್ತೇಳು ಮಹಾಪ್ರಣಮಂಗಳೆ ಚಿದ್ಛನಲಿಂಗಸ್ಥಲಂಗಳಾಗಿ ಶೋಬ್ಥಿಸುವಂಥ ಚಿದಂಗ-ಚಿದ್ಘನಲಿಂಗವ ಉಭಯಭಾವವಳಿದು ನೂರೊಂದುಸ್ಥಲವ ಸಂಬಂಧವಮಾಡಿ, ಮಾರ್ಗಾಚರಣೆಯ ಕುರುಹ ತೋರಿ, ಅಂತರಂಗದಲ್ಲಿ ಶೋಬ್ಥಿಸುವ ಲೋಮವಿಲೋಮದಳಂಗಳೆ ನೂರೆಂಟು ತೆರದ ಚಿದಂಗಂಗಳಾಗಿ, ಆ ದಳಂಗಳಲ್ಲಿ ಝಗಝಗಾಯಮಾನವಾಗಿ ಪ್ರಕಾಶಿಸುವ ಪ್ರಣಮಂಗಳೆ ನೂರೆಂಟು ತೆರದ ಚಿದ್ಘನಲಿಂಗಂಗಳಾಗಿ, ಒಳಗು-ಹೊರಗು ಎಂಬ ಉಭಯ ನಾಮ ರೂಪು ಕ್ರಿಯವನಳಿದು ಇನ್ನೂರ ಹದಿನಾರು ಸ್ಥಲವ ಸಂಬಂಧವ ಮಾಡಿ ಮೀರಿದ ಕ್ರಿಯಾಚರಣೆಯ ಕುರುಹ ತೋರಿ ಅನಾದ್ಥಿಗುರು ಬಸವರಾಜೇಂದ್ರನ ಪ್ರಸಿದ್ಧಪ್ರಸಾದನೆ ಮಾರ್ಗಕ್ರಿಯಾರೂಪವಾದ ನೂರೊಂದು ಸ್ಥಲಂಗಳಾಗಿ, ಅನಾದಿಜಂಗಮ ಪ್ರಭುರಾಜೇಂದ್ರನ ಶುದ್ಧಪ್ರಸಾದವೆ ಮೀರಿದ ಕ್ರಿಯಾರೂಪವಾದ ಇನ್ನೂರ ಹದಿನಾರುಸ್ಥಲಂಗಳಾಗಿ, ಇವರಿಬ್ಬರ ಮಹಾಪ್ರಸಾದವೆ ಘಟ್ಟಿಗೊಂಡು ಅನಾದಿಶರಣರೂಪವ ತಾಳಿ ಚೆನ್ನಬಸವಣ್ಣನೆಂಬಬ್ಥಿಧಾನದಿಂದ ಮಾರ್ಗಕ್ರಿಯಾಸ್ವರೂಪ ನೂರೊಂದುಸ್ಥಲವೆ ಆಚರಣೆಯಾಗಿ ಮೀರಿದ ಕ್ರಿಯಾಸ್ವರೂಪ ಇನ್ನೂರ ಹದಿನಾರುಸ್ಥಲವೆ ಸಂಬಂಧವಾಗಿ ಅನಾದಿಪರಶಿವರೂಪ ಶಿವಯೋಗಿಸಿದ್ಧರಾಮನ ಕರ-ಮನ-ಭಾವಂಗಳಲ್ಲಿ ಮಿಶ್ರಾಮಿಶ್ರಂಗಳೊಡನೆ ಅಗಣಿತ ಸೂರ್ಯಚಂದ್ರಾಗ್ನಿ ಪ್ರಕಾಶಕ್ಕೆ ಮಿಗಿಲಾಗಿ ತ್ಯಾಗ-ಭೋಗ-ಯೋಗಾನುಸಂಧಾನದಿಂದ ಸಿದ್ಧರಾಮನ ಕರಸ್ಥಲದಲ್ಲಿ ಶುದ್ಧಪ್ರಸಾದ-ಇಷ್ಟಲಿಂಗವಾಗಿ ಅಷ್ಟವಿಧಾರ್ಚನೆ-ಷೋಡಶೋಪಚಾರವ ಕೈಕೊಂಡು ಒಪ್ಪುತ್ತಿರ್ಪರು ನೋಡ. ಮನಸ್ಥಲದಲ್ಲಿ ಸಿದ್ಧಪ್ರಸಾದ-ಪ್ರಾಣಲಿಂಗವಾಗಿ ಮಂತ್ರ-ಧ್ಯಾನ-ಜಪ-ಸ್ತೋತ್ರಂಗಳ ಕೈಕೊಂಡು ಒಪ್ಪುತ್ತಿರ್ಪರು ನೋಡ. ಭಾವಸ್ಥಲದಲ್ಲಿ ಪ್ರಸಿದ್ಧಪ್ರಸಾದ-ಭಾವಲಿಂಗವಾಗಿ ಮನೋರ್ಲಯ ನಿರಂಜನ ಪೂಜಾಕ್ರಿಯಾನಂದ ಕೂಟವ ಕೈಕೊಂಡು ಒಪ್ಪುತ್ತಿರ್ಪರು ನೋಡ. ಇಂತು ಸಂಬಂಧಾಚರಣೆಯ ಸ್ಥಲಕುಳಂಗಳ ಚಿದ್ಬೆಳಗಿನಲ್ಲಿ ಶೋಬ್ಥಿಸುವ ಬಸವಣ್ಣ, ಚೆನ್ನಬಸವಣ್ಣ, ಪ್ರಭು, ಸಿದ್ಧರಾಮ ಪ್ರಮಥಗಣಂಗಳ ಮಹಾಪ್ರಸಾದ ಬೆಳಗಿಗೆ ಯೋಗ್ಯರಾಗಿ ದಗ್ಧಪಟನ್ಯಾಯ, ಉರಿವುಂಡ ಕರ್ಪೂರದಂತಾದೆವು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ಇಂತು ಶಿಖಿ ಕರ್ಪೂರಸಂಯೋಗದಂತೆ ನಿಜಶಿವಯೋಗಾಚರನುಸಂಧಾನವ ಕಪಿಲಸಿದ್ಧಮಲ್ಲಿಕಾರ್ಜುನಲಿಂಗದೊಡನೆ ಚನ್ನಬಸವ ಪ್ರಮಥಗಣಸಾಕ್ಷಿಯಿಂದ ಮಹಾಪ್ರಭುಸ್ವಾಮಿಗಳ ಕರುಣಕಟಾಕ್ಷೆಯಿಂದ ಬೆಸಗೊಂಡು ಸರ್ವಾಂಗಲಿಂಗಸಂದಾನದಿಂದ ಬೆರದು ಬಯಲಾದರು ಸಿದ್ಧರಾಮದೇಶಿಕೇಂದ್ರನು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ಸತ್ತುಚಿತ್ತಾನಂದ ನಿತ್ಯ ಪರಿಪೂರ್ಣ ಅವಿರಳ ಪರಂಜ್ಯೋತಿ ಸ್ವರೂಪ ಪರಮಾರಾಧ್ಯ ವೀರಶೈವಾಚಾರ ಷಟ್ಸ್ಥಲ ಪ್ರತಿಪಾದಕ ಶ್ರೀಗುರುಲಿಂಗಜಂಗಮದ ಕರುಣಕಟಾಕ್ಷೆಯಿಂದ ಅಂಗ-ಮನ-ಭಾವಗಳೆಲ್ಲ ಶುದ್ಧಸಿದ್ಧಪ್ರಸಿದ್ಧಪ್ರಸಾದದ ಸ್ವರೂಪವಾದ ಇಷ್ಟ ಪ್ರಾಣ ಭಾವಲಿಂಗವಾದ ಮೇಲೆ ಭೃಂಗ ಕೀಡಿಯೋಪಾದಿಯಲ್ಲಿ ಗುರುಲಿಂಗಜಂಗಮ ಬೇರೆ, ನಾ ಬೇರೆಂಬ ಬ್ಥಿನ್ನಭೇದವನಳಿದು ಗುರುಮಾರ್ಗಾಚಾರದಲ್ಲಿ ಪ್ರೇಮವುಳ್ಳಾತನಾಗಿ ಜ್ಞಾತೃ-ಜ್ಞಾನ-ಜ್ಞೇಯವೆಂಬ ಅಷ್ಟಾಂಗಯೋಗಭ್ರಮಿತರ ಜಡಕರ್ಮ ಶೈವಮಾರ್ಗದಲ್ಲಿ ಸಾಕ್ಷಾತ್ ಶಿವನೆ ಇಷ್ಟಲಿಂಗಧಾರಕನಾಗಿ, ಗುರುರೂಪ ಧರಿಸಿ, ಶಿವಭಕ್ತಮಾರ್ಗವ ತೋರದೆ ಇಚ್ಛೆಯ ನುಡಿದು, ಉದರವ ಹೊರೆವ ವೇಷವ ಕಂಡು, ಶರಣೆಂದು ಮನ್ನಣೆಯ ಕೊಡದೆ, ಭೂತಸೋಂಕಿದ ಮನುಜನೋಪಾದಿಯಲ್ಲಿ ತನ್ನ ಪವಿತ್ರ ಸ್ವರೂಪ ಪರತತ್ವಮೂರ್ತಿಧ್ಯಾನದಿಂದ ಚಿದ್ಘನಲಿಂಗದೊಳಗೆ ತಾನಾಗಿ, ತನ್ನೊಳಗೆ ಚಿದ್ಘನಲಿಂಗವಾಗಿ, ಸಪ್ತಧಾತು, ಸಪ್ತವ್ಯಸನಂಗಳಲ್ಲಿ ಕೂಡದೆ ಲಿಂಗವೆ ತಾನಾದ ಸ್ವಸ್ವರೂಪು ನಿಲುಕಡೆಯ ಲಿಂಗನಿಷ್ಠದೀಕ್ಷೆ. ಇಂತುಟೆಂದು ಶ್ರೀಗುರುಲಿಂಗಜಂಗಮಸ್ವರೂಪ ನಿಷ್ಕಳಂಕಮೂರ್ತಿ ಚನ್ನಬಸವರಾಜೇಂದ್ರನು ನಿರ್ಲಜ್ಜ ಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ಪರಮ ಪತಿವ್ರತೆಗೆ ಹರಗಣ ಸಾಕ್ಷಿಯಾಗಿ ಕಂಕಣದ ಕಟ್ಟಿದ ಪುರುಷಂಗೆ ತನ್ನ ತನುಮನವ ಮೀಸಲ ಮಾಡಿ, ತನ್ನ ಪಿತ-ಮಾತೆ-ಪುತ್ರ-ಮಿತ್ರರ ಸಂಗವ ಸೋಂಕದೆ, ಅವರೊಡವೆಗಿಚ್ಛೈಸಿ ನಡೆನುಡಿಗಳಾಲಿಸದೆ, ತನ್ನ ರಮಣನ ದ್ರವ್ಯಾಭರಣವ ಹಾರೈಸಿ, ಆತನ ನುಡಿಯೆ ಮಹಾಪ್ರಸಾದವೆಂದು ಪ್ರತಿನುಡಿಯ ನುಡಿಯದೆ, ಸರ್ವಾವಸ್ಥೆಯಲ್ಲಿ ಆ ರಮಣನ ರತಿಸಂಯೋಗಾನುಸಂಧಾನದಿಂದ ಎರಡಳಿದಿರುವ ಸತ್ಯಾಂಗನೆಯಂತೆ ಶ್ರೀ ಗುರುವಿನ ಕರಗರ್ಭಮಧ್ಯದಲ್ಲಿ ಜನಿತವಾದ ಲಿಂಗಭಕ್ತಗಣ ಸತಿ ಸುತ ಪಿತ ಮಾತೆ ಬಂಧು ಬಳಗ ಒಡಹುಟ್ಟಿದವರು ಮೊದಲಾಗಿ ಪರಶಿವಲಿಂಗ ಜಂಗಮತೀರ್ಥಪ್ರಸಾದ ಮಂತ್ರದಲ್ಲಿ ಮುಳುಗಿ, ಲೋಕದ ಶೈವಮಾರ್ಗಿಗಳಂತೆ ಹಲವು ಕ್ಷೇತ್ರ, ಹಲವು ತೀರ್ಥ, ಹಲವು ನೇಮ ವ್ರತಗಳಿಗೆ ಅಡಿಯಿಡದೆ ವಾಚಕ-ಮಾನಸ-ಕಾಯಕ ಮೊದಲಾದ ಸಮಸ್ತತತ್ವಂಗಳ ಸ್ವಪಾಕವ ಮಾಡಿ ನಿಷ್ಕಳಂಕ ಪರಶಿವಲಿಂಗಜಂಗಮಕ್ಕೆ ಸಮರ್ಪಿಸಿ, ಅವರೊಕ್ಕುಮಿಕ್ಕ ಹರುಷಾನಂದ ಮಹಾಪ್ರಸಾದದಲ್ಲಿ ಸಂತೃಪ್ತನಾಗಿ, ಇಷ್ಟಲಿಂಗಬಾಹ್ಯವಾದ ಜಡಶೈವ ನಡೆನುಡಿಗಳ ಆಲಿಸದಿಪ್ಪುದೆ ಏಕಾಗ್ರಚಿತ್ತದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ಟ್ಸ್ಥಲನಾಯಕ ಚನ್ನಬಸವರಾಜೇಂದ್ರನು ನಿರ್ಲಜ್ಜಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ ನಿನ್ನ ಅಷ್ಟತನುವಿನ ಮಧ್ಯದಲ್ಲಿ ಆ ಪರಬ್ರಹ್ಮನಿಜವಸ್ತುವೆ ನಿನ್ನ ಪಾವನ ನಿಮಿತ್ಯಾರ್ಥವಾಗಿ ಅಷ್ಟಾವರಣಸ್ವರೂಪಿನದಿಂದ ನೆರದಿರ್ಪುದು ನೋಡ. ಅದರ ವಿಚಾರವೆಂತೆಂದಡೆ : ನಿನ್ನ ಸ್ಥೂಲತನುವಿನ ಮಧ್ಯದಲ್ಲಿ ಅರುಹೆ ಗುರುವಾಗಿ ನೆಲಸಿರ್ಪರು ನೋಡ. ನಿನ್ನ ಸೂಕ್ಷ್ಮತನುವಿನ ಮಧ್ಯದಲ್ಲಿ ಸುಜ್ಞಾನವೆ ಲಿಂಗವಾಗಿ ನೆಲಸಿರ್ಪರು ನೋಡ. ನಿನ್ನ ಕಾರಣತನುವಿನ ಮಧ್ಯದಲ್ಲಿ ಸ್ವಾನುಭಾವಜಂಗಮವಾಗಿ ನೆಲಸಿರ್ಪರು ನೋಡ. ನಿನ್ನ ನಿರ್ಮಲತನುವಿನ ಮಧ್ಯದಲ್ಲಿ ಕರುಣಾಮೃತ ಪಾದೋದಕವಾಗಿ ನೆಲಸಿರ್ಪರು ನೋಡ. ನಿನ್ನ ಆನಂದತನುವಿನ ಮಧ್ಯದಲ್ಲಿ ಕೃಪಾಪ್ರಸಾದವಾಗಿ ನೆಲಸಿರ್ಪರು ನೋಡ. ನಿನ್ನ ಚಿದ್ರೂಪತನುವಿನ ಮಧ್ಯದಲ್ಲಿ ಚಿತ್ಪ್ರಕಾಶಭಸಿತವಾಗಿ ನೆಲಸಿರ್ಪರು ನೋಡ. ನಿನ್ನ ಚಿನ್ಮಯತನುವಿನ ಮಧ್ಯದಲ್ಲಿ ಚಿತ್ಕಾಂತೆ ರುದ್ರಾಕ್ಷಿಯಾಗಿ ನೆಲಸಿರ್ಪರು ನೋಡ. ಇಂತು ನಿನ್ನ ಸರ್ವಾಂಗದಲ್ಲಿ ಅಷ್ಟಾವರಣಸ್ವರೂಪಿನಿಂದ ಪರಾತ್ಪರ ನಿಜವಸ್ತು ನೆರದಿರ್ಪುದು ನೋಡ. ನಿನ್ನ ನಿರ್ಮಾಯಚಿತ್ತ ಮಹಾಜ್ಞಾನ ನಿಜದೃಷ್ಟಿಯಿಂದ ನಿನ್ನ ನೀ ತಿಳಿದು ನೋಡ. ಎಂದು ಗಣಸಾಕ್ಷಿಯಾಗಿ ಶ್ರೀಗುರು ನಿಷ್ಕಳಂಕ ಚೆನ್ನಬಸವರಾಜೇಂದ್ರನು ನಿರ್ಲಜ್ಜಶಾಂತಲಿಂಗದೇಶಿಕೋತ್ತಮಂಗೆ ಉಪಮಾದೀಕ್ಷೆ ಇಂತುಂಟೆಂದು ನಿರೂಪಂ ಕೊಡುತ್ತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ವರಕುಮಾರದೇಶಿಕೇಂದ್ರನೆ ಕೇಳಾ, ಚಿದ್ಘನಶರಣ ಪ್ರಸಾದಲಿಂಗವಾಗಿ ನಿಂದ ನಿಜಾಚರಣೆಯ ನಿಲುಕಡೆಯ, ಕಲ್ಯಾಣಪಟ್ಟಣದ ಅನುಭಾವ ಮಂಟಪದ ಶೂನ್ಯಸಿಂಹಾಸನದಲ್ಲಿ, ಬಸವ, ಚೆನ್ನಬಸವ, ಸಿದ್ಧರಾಮ, ಅಕ್ಕಮಹಾದೇವಿ, ನೀಲಲೋಚನೆ ಮೊದಲಾದ ಸಕಲಮಹಾಪ್ರಮಥಗಣಂಗಳೆಲ್ಲ ಮಹಾಪ್ರಭುಸ್ವಾಮಿಗಳಿಗೆ ಅಬ್ಥಿವಂದಿಸಿ ಹಸ್ತಾಂಜಲಿತರಾಗಿ ಎಲೆ ಮಹಾಪ್ರಭುವೆ ನಿನ್ನ ಅನಾದಿ ಷಟ್ಸ್ಥಲ ನಿರಭಾರಿವೀರಶೈವಶರಣನ ನಿಜಾಚರಣೆಯ ನಿಲುಕಡೆಯ ದಯವಿಟ್ಟು ಕರುಣಿಸಬೇಕಯ್ಯ ಮಹಾಗುರುವೆ ಎಂದು ಬೆಸಗೊಂಡಲ್ಲಿ ಆಗ ಮಹಾಪ್ರಭುವು ಲಿಂಗಾಂಗಕ್ಕೆ ಬ್ಥಿನ್ನವಿಲ್ಲದೆ ಹಸ್ತಮಸ್ತಕಸಂಯೋಗವ ಮಾಡಿ, ವೇಧಾ-ಮಂತ್ರ-ಕ್ರಿಯಾದೀಕ್ಷೆಯನಿತ್ತು. ಇಪ್ಪತ್ತೊಂದು ತೆರದ ವಿಚಾರವನರುಪಿ, ನೂರೊಂದುಸ್ಥಲದಾಚರಣೆಯ, ಇನ್ನೂರಹದಿನಾರು ಸ್ಥಲದ ಸಂಬಂಧವ ತೋರಿ, ಸರ್ವಾಚಾರ ಸಂಪತ್ತಿನಾವರಣದ ಸ್ವಸ್ವರೂಪು ನಿಲುಕಡೆಯ ತೋರಿಸಿ, ಸಾಕಾರನಿರಾಕಾರದ ನಿಜದ ನಿಲುಕಡೆಯನರುಪಿ, ನಿಜಶಿವಯೋಗದ ನಿರ್ಣಯದ ಕರಿಣಿಸಿ, ಸತ್ತುಚಿತ್ತಾನಂದ ನಿತ್ಯಪರಿಪೂರ್ಣ ಅವಿರಳಪರಂಜ್ಯೋತಿಸ್ವರೂಪ ತಾವೆಂದರುಪಿದ ನೋಡ. ಇಂತು ಚೆನ್ನಬಸವೇಶ್ವರಸ್ವಾಮಿಗಳು ಬೆಸಗೊಂಡು ತಮ್ಮ ಚಿದಂಗಸ್ವರೂಪರಾದ ಚಿದ್ಘನರಶರಣ ನಿರ್ಲಜ್ಜಶಾಂತಯ್ಯನೆಂಬ ಶಿವಶರಣನ ಮುಖದಲ್ಲಿ ಮೋಳಿಗಯ್ಯ ಮೊದಲಾದ ಸಕಲಪ್ರಮಥರ್ಗೆ ಬೋದ್ಥಿಸಿದರು ನೋಡ. ಅದೇ ಪ್ರಸಾದವನ್ನೆ ನಿರ್ಲಜ್ಜಶಾಂತಯ್ಯನೆಂಬ ದೇಶಿಕೇದ್ರನು ಚಂಗಣಗಿಲಮಂಟಪದ ರೇವಣಸಿದ್ದೇಶ್ವರಂಗೆ ಬೋದ್ಥಿಸಿದರು ನೋಡ. ಅದೇ ಪ್ರಸಾದವನ್ನೆ ರೇವಣಸಿದ್ದೇಶ್ವರನೆಂಬ ದೇಶಿಕೇಂದ್ರನು ಜ್ಞಾನೋದಯರಾಗಿ ತಮ್ಮಡಿಗೆರಗಿ ಬಂದ ಶಿಷ್ಯೋತ್ತಮ ಶಿವಶರಣರ್ಗೆ ಸ್ವಾನುಭಾವಸೂತ್ರವ ಬೋದ್ಥಿಸುತ್ತಿರ್ದರು ನೋಡ. ಅದೇ ಮಹಾಪ್ರಸಾದವ ನಿನ್ನ ಶ್ರೋತ್ರಮುಖದಲ್ಲಿ ಮಹಾಮಂತ್ರಮೂರ್ತಿಯಾಗಿ ನೆಲೆಗೊಂಡಿರ್ಪ ಪ್ರಸಾದಲಿಂಗಮುಖದಲ್ಲಿ ಅರುಹಿಸಿ ಕೊಟ್ಟೇವು ಕೇಳಿ, ಮಹಾಲಿಂಗಮುಖದಲ್ಲಿ ಸಂತೃಪ್ತನಾಗಿ, ಪರಿಣಾಮಪ್ರಸಾದದಲ್ಲಿ ಲೋಲುಪ್ತನಾಗಿ, ಎನ್ನ ಜ್ಞಾನಮಂಟಪದಲ್ಲಿ ಮೂರ್ತಿಗೊಂಡಿರುವ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ನಿಃಶೂನ್ಯಾಕೃತಿ, ಕ್ಷಕಾರ ಪ್ರಣಮ, ದಿವ್ಯನಾದ, ಶಿಖಾಚಕ್ರ, ಮಹಾಜ್ಯೋತಿವರ್ಣ, ನಿರಾಲಂಬಸ್ಥಲ, ಚಿನುಮಯ ತನು, ನಿರಾಳ ಹಸ್ತ, ಶೂನ್ಯಲಿಂಗ, ಉನ್ಮನಿಮುಖ, ನಿರಹಂಕಾರ ಭಕ್ತಿ, ಪರಿಪೂರ್ಣಪದಾರ್ಥ, ಪರಿಪೂರ್ಣಪ್ರಸಾದ, ಪರಶಿವ ಪೂಜಾರಿ, ಪರಶಿವನದ್ಥಿದೇವತೆ, ಅವಿರಳ ಸಾದಾಖ್ಯ, ಆಗಮವೆಂಬ ಲಕ್ಷಣ, ನಿರ್ಮಾಯವೆಂಬ ಸಂಜ್ಞೆ, ದಿವ್ಯನಾದ, ಘೋಷದಿಕ್ಕು, ಮನೋರ್ಲಯ ವೇದ, ಚಿಚ್ಚಂದ್ರನೆ ಅಂಗ, ದಿವ್ಯಾತ್ಮ, ನಿಭ್ರಾಂತಿ ಶಕ್ತಿ ಅನಂತಕಲೆ ಇಂತು ಇಪ್ಪತ್ತುನಾಲ್ಕು ಸಂಕೀಲಂಗಳನೊಳಕೊಂಡು ಎನ್ನ ಶಿಖಾಚಕ್ರವೆಂಬ ಹೇಮಾದ್ರಿಪರ್ವತಕ್ಷೇತ್ರದಲ್ಲಿ ಮೂರ್ತಿಗೊಂಡಿರ್ದ ಶಿವಮಂತ್ರ ಶಿಕ್ಷಾಕರ್ತೃಸ್ವರೂಪವಾದ ಶೂನ್ಯಲಿಂಗವೆ ಹಿರಣ್ಯೇಶ್ವರಲಿಂಗವೆಂದು ಕರಣತ್ರಯವ ಮಡಿಮಾಡಿ, ಅನುಪಮವೆಂಬ ಜಲದಿಂ ಮಜ್ಜನಕ್ಕೆರದು, ಚಂದ್ರ ನಿವೃತ್ತಿಯಾದ ಗಂಧವ ಧರಿಸಿ, ವಿರಳ ಅವಿರಳವಾದಕ್ಷತೆಯನಿಟ್ಟು, ಅಲ್ಲಿಹ ತ್ರಿದಳಂಗಳನೆ ಪುಷ್ಪದ ಮಾಲೆಯೆಂದು ಧರಿಸಿ, ಅಲ್ಲಿಹ ಕಮಲಸದ್ವಾಸನೆಯ ಧೂಪವ ಬೀಸಿ, ಅಲ್ಲಿಹ ಮಹಾಜ್ಯೋತಿವರ್ಣವೆ ಕರ್ಪೂರದ ಜ್ಯೋತಿಯೆಂದು ಬೆಳಗಿ, ಅಲ್ಲಿಹ ನಿಃಸಂಸಾರಾವಸ್ಥೆಯೆಂಬ ನವೀನ ವಸ್ತ್ರವ ಹೊದ್ದಿಸಿ, ಸದಾನಂದವೆಂಬಾಭರಣವ ತೊಡಿಸಿ, ಪರಿಪೂರ್ಣವೆಂಬ ನೈವೇದ್ಯವನರ್ಪಿಸಿ, ನಿರಹಂಕಾರವೆಂಬ ತಾಂಬೂಲವನಿತ್ತು, ಇಂತು ಶೂನ್ಯಲಿಂಗಕ್ಕೆ ಅಷ್ಟವಿಧಾರ್ಚನೆಯಂ ಮಾಡಿ, ಶತಕೋಟಿ ಸೂರ್ಯನ ಪ್ರಭೆಯಂತೆ ಬೆಳಗುವ ಶೂನ್ಯಲಿಂಗವನ್ನು ಕಂಗಳು ತುಂಬಿ ನೋಡಿ, ಮನದಲ್ಲಿ ಸಂತೋಷಂಗೊಂಡು, ಆ ಶೂನ್ಯಲಿಂಗವ ಪೂಜೆಯ ಸಮಾಪ್ತವ ಮಾಡಿ, ಜ್ಞಾನ ಜಪವೆಂಬ ದ್ವಾದಶ ಪ್ರಣಮ ಮಂತ್ರಗಳಿಂದೆ ನಮಸ್ಕರಿಸಿ, ಆ ಶೂನ್ಯಲಿಂಗದ ತಾನೆಂದರಿದು, ಕೂಡಿ ಎರಡಳಿದು ನಿಸ್ಸಂಸಾರಿಯಾಗಿ ಆಚರಿಸಬಲ್ಲಾತನೆ ನಿರಹಂಕಾರ ಭಕ್ತಿಯನುಳ್ಳ ನಿರಾತಂಕ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ನಿವೃತ್ತಿಮಾರ್ಗದಲ್ಲಿ ಚರಿಸುವ ಊಧ್ವಕುಂಡಲಿ ಭೇದವೆಂತೆಂದಡೆ : ಕಿಂಕುರ್ವಾಣಭಕ್ತಿಯೆ ಅಂಗವಾಗಿರ್ಪುದಯ್ಯ. ಸದ್ಗುಣವೆ ಪ್ರಾಣವಾಗಿರ್ಪುದಯ್ಯ. ಸದ್ಧರ್ಮವೆ ಸಂಗವಾಗಿರ್ಪುದಯ್ಯ. ಸಚ್ಚಿದಾನಂದವೆ ವಸ್ತ್ರಾಭರಣವಾಗಿರ್ಪುದಯ್ಯ. ಸನ್ಮಾರ್ಗಾಚಾರಂಗಳೆ ನಡೆನುಡಿಯಾಗಿರ್ಪುದಯ್ಯ. ಸುಸತ್ಯವೆ ವಾಹನವಾಗಿರ್ಪುದಯ್ಯ. ದಯಾಂತಃಕರಣವೆ ಪಿತಮಾತೆಯಾಗಿರ್ಪುದಯ್ಯ. ಸುಚಿತ್ತಂಗಳೆ ಬಂಧುಬಳಗವಾಗಿರ್ಪುದಯ್ಯ. ಸುಬುದ್ಧಿಗಳೆ ಒಡಹುಟ್ಟಿದರಾಗಿರ್ಪುದಯ್ಯ. ನಿರಹಂಕಾರಂಗಳೆ ನಂಟರಾಗಿರ್ಪುದಯ್ಯ. ಸುಮನವೆ ಸ್ತ್ರೀಯಳಾಗಿರ್ಪುದಯ್ಯ. ಸುಜ್ಞಾನವೇ ಮಂದಿರವಾಗಿರ್ಪುದಯ್ಯ. ಸದ್ಭಾವವೆ ಆಹಾರವಾಗಿರ್ಪುದಯ್ಯ. ನಿತ್ಯನಿಜವೇ ದೈವವಾಗಿರ್ಪುದಯ್ಯ. ನಿರಾಸೆಯೆ ಅವಯವಂಗಳಾಗಿರ್ಪುದಯ್ಯ. ನಿಷ್ಕಾಮಂಗಳೆ ಧನಧಾನ್ಯಂಗಳಾಗಿರ್ಪುದಯ್ಯ. ಇಂತು ನಿಸ್ಸಂಸಾರವೆಂಬ ಅವಿರಳಾನದಿಂದ ಸದ್ಗುರು ಉಪಾವಸ್ತೆಯ ಮಾಡುವ ಸಜ್ಜೀವನೆ ಊಧ್ರ್ವಕುಂಡಲಿಸರ್ಪವೆನಿಸುವುದಯ್ಯ. ಆ ಸರ್ಪನೆ ಮಾಯಾಪ್ರಪಂಚ ಹೇವರಿಸಿ ಅನಂತಮುಖದಿಂದ ನಿರ್ಮಾಯಸ್ವರೂಪವಾದ ಮಹಾಪ್ರಮಥಗಣಂಗಳತ್ತ ಅಬ್ಥಿಮುಖವಾಗಿರ್ಪುದಯ್ಯ. ಈ ಸರ್ಪಂಗೆ ಬೇಕುಬೇಡವೆಂಬ ಜೀಹ್ವಾಲಂಪಟ-ಗುಹ್ಯಲಂಪಟವಿಲ್ಲ ನೋಡ, ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ನಿನ್ನ ಸ್ವಾತ್ಮಜ್ಞಾನದಿಂದ ಶ್ರುತಿಗುರುಸ್ವಾನುಭಾವವಿಡಿದು, ನಿನ್ನ ತನು-ಮನ-ಕರಣ-ಇಂದ್ರಿಯಂಗಳ ಪರಿಪಕ್ವವ ಮಾಡಿ, ಆ ತನು-ಮನ-ಕರಣ-ಇಂದ್ರಿಯಂಗಳ ಆಶ್ರೈಸಿದ ಅರ್ಥಪ್ರಾಣಾಬ್ಥಿಮಾನಂಗಳ ಶ್ರೀಗುರುಲಿಂಗಜಂಗಮ ಭಕ್ತಮಾಹೇಶ್ವರ ಶರಣಗಣಂಗಳಿಗರ್ಪಿತವಮಾಡಿ, ನಿರ್ವಂಚಕಬುದ್ಧಿ ಮುಂದುಗೊಂಡು, ಅಷ್ಟವಿಧಾರ್ಚನೆ ಷೋಡಶೋಪಚಾರಗಳಿಂದ ಇಷ್ಟಲಿಂಗವ ತೃಪ್ತಿಮಾಡಿ, ಮಂತ್ರ ಧ್ಯಾನ ಜಪಸ್ತೋತ್ರಂಗಳಿಂದ ಪ್ರಾಣಲಿಂಗವ ತೃಪ್ತಿಮಾಡಿ, ಮನೋರ್ಲಯ ನಿರಂಜನ ಪೂಜಾಕ್ರಿಯೆಗಳಿಂದ ಭಾವಲಿಂಗವ ತೃಪ್ತಿಮಾಡಿ, ಗುರುಲಿಂಗಜಂಗಮದ ಪಾದೋದಕ ಪ್ರಸಾದದಿಂದ ಮತ್ತಾ ಗುರುಲಿಂಗಜಂಗಮದ ಭಕ್ತ ಮಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ ಮೊದಲಾದ ಮಹಾಪ್ರಮಥಗಣಂಗಳ ತೃಪ್ತಿಮಾಡಿ, ತನಗೊಂದಾಶ್ರಯಂಗಳಿಲ್ಲದೆ, ಚಿದ್ಘನಲಿಂಗದಲ್ಲಿ ಅವಿರಾಳನಂದದಿಂದ ಕೂಟಸ್ಥನಾಗಿರುವಂದೆ ನಿಸ್ಸಂಸಾರದೀಕ್ಷೆ. ಇಂತುಂಟೆಂದು ಶ್ರೀಗುರು ನಿಷ್ಕಳಂಕ ನಿಷ್ಪ್ರಪಂಚ ನಿರಾಲಂಬ ನಿಷ್ಕಾಮ ಚೆನ್ನಬಸವರಾಜೇಂದ್ರನು ನಿರ್ಲಜ್ಜಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ತಾರಕಾಕೃತಿ, ನಕಾರಪ್ರಣಮ, ವೇಣುನಾದ, ಆಧಾರಚಕ್ರ, ಪೀತವರ್ಣ, ಭಕ್ತಿಸ್ಥಲ, ಸ್ಥೂಲತನು, ಸುಚಿತ್ತಹಸ್ತ, ಆಚಾರಲಿಂಗ, ಘ್ರಾಣಮುಖ, ಶ್ರದ್ಧಾಭಕ್ತಿ, ಸುಗಂಧ ಪದಾರ್ಥ, ಸುಗಂಧಪ್ರಸಾದ, ಬ್ರಹ್ಮಪೂಜಾರಿ, ಬ್ರಹ್ಮನಧಿದೇವತೆ, ಕರ್ಮಸಾದಾಖ್ಯ, ಸತ್ತುವೆಂಬ ಲಕ್ಷಣ, ಪರವೆಂಬ ಸಂಜ್ಞೆ, ಪೂರ್ವದಿಕ್ಕು, ಋಗ್ವೇದ, ಪೃಥ್ವಿಯ ಅಂಗ, ಜೀವಾತ್ಮ, ಕ್ರಿಯಾಶಕ್ತಿ, ನಿವೃತ್ತಿಕಲೆ ಇಂತು ಇಪ್ಪತ್ತುನಾಲ್ಕು ಸಕೀಲಂಗಳನೊಳಕೊಂಡು ಎನ್ನಧಾರಚಕ್ರವೆಂಬ ಶ್ರೀಶೈಲಪರ್ವತ ಕ್ಷೇತ್ರದಲ್ಲಿ ಮೂರ್ತಿಗೊಂಡಿರ್ದ ಪಂಚಾಚಾರಸ್ವರೂಪವಾದ ಆಚಾರಲಿಂಗವೆ ಮಲ್ಲಿಕಾರ್ಜುನಲಿಂಗವೆಂದು ತನುತ್ರಯವ ಮಡಿಮಾಡಿ, ಶಿವಾನಂದವೆಂಬ ಜಲದಿಂ ಮಜ್ಜನಕ್ಕೆರದು, ಪೃಥ್ವಿ ನಿವೃತ್ತಿಯಾದ ಗಂಧವ ಧರಿಸಿ ಚಿತ್ತ ಸುಚಿತ್ತವಾದÀಕ್ಷತೆಯನಿಟ್ಟು, ಅಲ್ಲಿಹ ಚತುರ್ದಳಂಗಳನೆ ಪುಷ್ಪದ ಮಾಲೆಯೆಂದು ಧರಿಸಿ, ಅಲ್ಲಿಹ ಕಮಲ ಸದ್ವಾಸನೆಯ ಧೂಪವ ಬೀಸಿ, ಅಲ್ಲಿಹ ಪೀತವರ್ಣವೆ ಕರ್ಪೂರದ ಜ್ಯೋತಿಯೆಂದು ಬೆಳಗಿ, ಅಲ್ಲಿಹ ಜಾಗ್ರವಸ್ಥೆಯೆಂಬ ನವೀನ ವಸ್ತ್ರವ ಹೊದ್ದಿಸಿ, ನಿಃಕಾಮವೆಂಬಾಭರಣವ ತೊಡಿಸಿ, ಸುಗಂಧವೆಂಬ ನೈವೇದ್ಯವನರ್ಪಿಸಿ, ಶ್ರದ್ಧೆಯೆಂಬ ತಾಂಬೂಲವನಿತ್ತು, ಇಂತು ಆಚಾರಲಿಂಗಕ್ಕೆ ಅಷ್ಟವಿಧಾರ್ಚನೆಯಂ ಮಾಡಿ, ಕೋಟಿ ಸೂರ್ಯನ ಪ್ರಭೆಯಂತೆ ಬೆಳಗುವ ಆಚಾರಲಿಂಗವನ್ನು ಕಂಗಳು ತುಂಬಿ ನೋಡಿ, ಮನದಲ್ಲಿ ಸಂತೋಷಂಗೊಂಡು, ಆ ಆಚಾರಲಿಂಗದ ಪೂಜೆಯ ಸಮಾಪ್ತವ ಮಾಡಿ, ಓಂ ನಂ ನಂ ನಂ ನಂ ನಂ ನಂ ಎಂಬ ನಕಾರ ಷಡ್ವಿಧಮಂತ್ರಗಳಿಂದ ನಮಸ್ಕರಿಸಿ, ಈ ಲಿಂಗವೆ ತಾನೆಂದರಿದು ಕೂಡಿ ಎರಡಳಿದು ನಿಬ್ಬೆರಗಿನಿಂದ ಆಚರಿಸಬಲ್ಲಾತನೆ ಶ್ರದ್ಧಾಭಕ್ತಿಯನುಳ್ಳ ಸದ್ಭಕ್ತ ನೋಡ, ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ತಾರಕಾಕೃತಿ ಮೊದಲಾಗಿ ನವಾಕೃತಿಗಳು, ಅಯ್ಯ, ನಕಾರಪ್ರಣಮ ಮೊದಲಾಗಿ ನವಪ್ರಣಮಗಳು, ಅಯ್ಯ, ಭ್ರಮರನಾದ ಮೊದಲಾಗಿ ನವನಾದಗಳು, ಆಧಾರಚಕ್ರ ಮೊದಲಾಗಿ ನವಚಕ್ರಗಳು, ಪೀತವರ್ಣ ಮೊದಲಾಗಿ ನವವರ್ಣಗಳು, ಭಕ್ತಿಸ್ಥಲ ಮೊದಲಾಗಿ ನವಸ್ಥಲಗಳು, ಸ್ಥೂಲತನು ಮೊದಲಾಗಿ ನವತನುಗಳು, ಸುಚಿತ್ತಹಸ್ತ ಮೊದಲಾಗಿ ನವಹಸ್ತಗಳು, ಅಚಾರಲಿಂಗ ಮೊದಲಾಗಿ ನವಲಿಂಗಗಳು, ಘ್ರಾಣಮುಖ ಮೊದಲಾಗಿ ನವಮುಖಗಳು, ಶ್ರದ್ಧಾಭಕ್ತಿ ಮೊದಲಾಗಿ ನವಭಕ್ತಿಗಳು, ಸುಗಂಧಪದಾರ್ಥ ಮೊದಲಾಗಿ ನವಪದಾರ್ಥಗಳು, ಸುಗಂಧಪ್ರಸಾದ ಮೊದಲಾಗಿ ನವಪ್ರಸಾದಗಳು, ಬ್ರಹ್ಮಪೂಜಾರಿ ಮೊದಲಾಗಿ ನವಪೂಜಾರಿಗಳು, ಬ್ರಹ್ಮ ಅಧಿದೇವತೆ ಮೊದಲಾಗಿ ನವ ಅಧಿದೇವತೆಗಳು, ಕರ್ಮಸಾದಾಖ್ಯ ಮೊದಲಾಗಿ ನವಸಾದಾಖ್ಯಗಳು, ಸತ್ತುವೆಂಬ ಲಕ್ಷಣ ಮೊದಲಾಗಿ ನವಲಕ್ಷಣಗಳು, ಪರವೆಂಬ ಸಂಜ್ಞೆ ಮೊದಲಾಗಿ ನವಸಂಜ್ಞೆಗಳು, ಪೂರ್ವದಿಕ್ಕು ಮೊದಲಾಗಿ ನವದಿಕ್ಕುಗಳು, ಋಗ್ವೇದ ಮೊದಲಾಗಿ ನವವೇದಗಳು, ಚಿತ್ಪøಥ್ವಿ ಮೊದಲಾಗಿ ನವ ಅಂಗಗಳು, ಜೀವಾತ್ಮ ಮೊದಲಾಗಿ ನವ ಆತ್ಮರು, ಕ್ರಿಯಾಶಕ್ತಿ ಮೊದಲಾಗಿ ನವಶಕ್ತಿಯರು, ನಿವೃತ್ತಿಕಲೆ ಮೊದಲಾಗಿ ನವಕಲೆಗಳು, ಇಂತು ಇಪ್ಪತ್ತುನಾಲ್ಕು ಸಕೀಲಂಗಳು ನವವಿಧ ತೆರದಿಂದ ಇನ್ನೂರ ಹದಿನಾರು ಸಕೀಲು ಮೊದಲಾದ ಸಮಸ್ತ ಕ್ಷೇತ್ರಂಗಳನೊಳಕೊಂಡು ಎನ್ನ ಅಣುಚಕ್ರವೆಂಬ ಪರಮಕೈಲಾಸ ಚಿದಾಕಾಶಮಂಡಲದ ವರ ಚೌಕಮಂಟಪ ನವರತ್ನ ಖಚಿತ ಶೂನ್ಯಸಿಂಹಾಸನಪೀಠದಲ್ಲಿ ಮೂರ್ತಿಗೊಂಡಿರ್ದ ಪರಾತ್ಪರ ನಿಜಜಂಗಮಲಿಂಗಸ್ವರೂಪ ಸರ್ವಚೈತನ್ಯಾಧಾರಸ್ವರೂಪವಾದ ಅಣುಲಿಂಗಜಂಗಮವೆ ಪರತತ್ವ ನಿಃಕಲಪರಬ್ರಹ್ಮಮೂರ್ತಿ ಲಿಂಗಜಂಗಮಪ್ರಸಾದವೆಂದು ತನುತ್ರಯ, ಮನತ್ರಯ, ಭಾವತ್ರಯ, ಆತ್ಮತ್ರಯ, ಪ್ರಾಣತ್ರಯ, ಗುಣತ್ರಯ, ಅವಸ್ಥಾತ್ರಯ, ತತ್ವತ್ರಯ, ಕರಣತ್ರಯ, ಗುಣತ್ರಯ, ಅವಸ್ಥಾತ್ರಯ, ತತ್ವತ್ರಯ, ಕರಣತ್ರಯ, ಹಂಸತ್ರಯಂಗಳ ಪೂರ್ಣ ಮಡಿಮಾಡಿ, ನಿರ್ನಾಮವೆಂಬ ಜಲದಿಂ ಮಜ್ಜನಕ್ಕೆರದು, ನಿಃಕರಣವೆಂಬ ಗಂಧವ ಧರಿಸಿ, ನಿಃಸಂಗವೆಂಬಕ್ಷತೆಯನಿಟ್ಟು, ನಿಃಪರಿಪೂರ್ಣವೆಂಬ ಪುಷ್ಪದಮಾಲೆಯ ಧರಿಸಿ, ನಿರುಪಾಧಿಕವೆಂಬ ಧೂಪವ ಬೀಸಿ, ನಿಃಕಳೆಯೆಂಬ ಜ್ಯೋತಿಯ ಬೆಳಗಿ, ನಿಶ್ಚಲವೆಂಬ ವಸ್ತ್ರವ ಹೊದ್ದಿಸಿ, ಪರಮನಿಜಾಭರಣವ ತೊಡಿಸಿ, ನಿಃಶೂನ್ಯವೆಂಬ ನೈವೇದ್ಯವನರ್ಪಿಸಿ, ನಿರಾವಯವೆಂಬ ತಾಂಬೂಲವನಿತ್ತು, ಇಂತೀ ಅಣುಲಿಂಗಜಂಗಮಪ್ರಸಾದಕ್ಕೆ ಅಷ್ಟವಿಧಾರ್ಚನೆಯಂ ಮಾಡಿ, ಅನಂತಕೋಟಿ ಸೂರ್ಯಚಂದ್ರಾಗ್ನಿಪ್ರಭೆಯಂತೆ ಬೆಳಗುವ, ಅಣುಲಿಂಗಜಂಗಮಪ್ರಸಾದವನ್ನು ಅನುಮಿಷದೃಷ್ಟಿಯಿಂ ನಿರೀಕ್ಷಿಸಿ, ಉನ್ಮನಾಗ್ರದಲ್ಲಿ ಸಂತೋಷಂಗೊಂಡು ಆ ಅಣುಲಿಂಗಜಂಗಮಪ್ರಸಾದಪೂಜೆಯ ಸಮಾಪ್ತವ ಮಾಡಿ, ಅನಂತಕೋಟಿ ಮಹಾಮಂತ್ರಂಗಳಿಂದ ನಮಸ್ಕರಿಸಿ, ಆ ಅಣುಲಿಂಗಜಂಗಮಪ್ರಸಾದವೆ ತಾನೆಂದರಿದು ಏಕತ್ವದಿಂ, ನಿಶ್ಚಲಚಿತ್ತದೊಳ್ ಕೂಡಿ ಉಭಯವಳಿದು ಇಹಪರಂಗಳ ಹೊದ್ದದೆ, ಕನ್ನಡಿಯ ಪ್ರತಿಬಿಂಬದಂತೆ ಸರ್ವಸಂಗಪರಿತ್ಯಾಗವಾಗಿ, ನಿಜಾಚರಣೆಯಲ್ಲಿ ಆಚರಿಸಬಲ್ಲಾತನೆ ದಶವಿಧಲಿಂಗಜಂಗಮಸಂಗ ಭಕ್ತಿಪ್ರಸಾದವುಳ್ಳ ಅನಾದಿ ಅಖಂಡ ಚಿಜ್ಜ್ಯೊತಿ ಸದ್ಭಕ್ತ ಜಂಗಮ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ಇನ್ನು ಪ್ರವೃತ್ತಿ-ನಿವೃತ್ತಿ ಅಧೋಕುಂಡಲಿ-ಊಧ್ರ್ವಕುಂಡಲಿಗಳೆಂಬ ಉಭಯಮಾರ್ಗವ ಶಿವಾಜ್ಞೆಯಿಂದ ತೀರ್ಚಿಸಿ, ಶಿವಯೋಗ, ಶಿವಾಚಾರ, ಶಿವಭಕ್ತಿ, ಶಿವಾನಂದಪರಿಣಾಮದಲ್ಲಿ ಚರಿಸುವ ಮಧ್ಯಕುಂಡಲಿಸ್ವರೂಪವಾದ ಮಹಾಶೇಷನ ಭೇದವೆಂತೆಂದಡೆ : ಷೋಡಶ ವರ್ಣವೆ ಅಂಗವಾಗಿರ್ಪುದಯ್ಯ. ಸರ್ವಾಚಾರಸಂಪತ್ತಿನಾಚರಣೆಯ ಪ್ರಾಣವಗಿರ್ಪುದಯ್ಯ. ಚತುರ್ದಶಪ್ರಣಮಂಗಳೆ ತತ್ಸಂಗವಾಗಿರ್ಪುದಯ್ಯ. ಭಕ್ತಿ-ಜ್ಞಾನ-ವೈರಾಗ್ಯ-ಷಟ್ಸ್ಥಲವೆ ವಸ್ತ್ರಾಭರಣವಾಗಿರ್ಪುದಯ್ಯ. ಹರಗುರುವಾಕ್ಯವೆ ನಡೆನುಡಿಯಾಗಿರ್ಪುದಯ್ಯ. ಪಂಚಾಚಾರಂಗಳೆ ವಾಹನವಾಗಿರ್ಪುದಯ್ಯ. ಕರುಣ-ವಿನಯ-ಸಮತಾ-ಶುದ್ಧ-ಸಿದ್ಧ-ಪ್ರಸಿದ್ಧವೆ ಪಿತಮಾತೆಯಾಗಿರ್ಪುದಯ್ಯ. ಚತುರ್ವರ್ಣ ಮೊದಲಾಗಿ ಬಾವನ್ನವರ್ಣಂಗಳೆ ಬಂಧುಬಳಗವಾಗಿರ್ಪುದಯ್ಯ. ಷಡಕ್ಷರಮಂತ್ರ ಮೊದಲಾಗಿ ನೂರೆಂಟು ಮಂತ್ರಮಾಲಿಕೆಯ ಒಡಹುಟ್ಟಿದರಾಗಿರ್ಪುದಯ್ಯ. ಸಪ್ತಕೋಟಿ ಮಹಾಮಂತ್ರಂಗಳೆ ನಂಟರಾಗಿರ್ಪುದಯ್ಯ. ಷೋಡಶಭಕ್ತಿಗಳೆ ಅರ್ಧಾಂಗಿಯಾಗಿರ್ಪುದಯ್ಯ. ನೂರೆಂಟು ಸಕೀಲು ಮೊದಲಾಗಿ ಸಮಸ್ತಸಕೀಲಂಗಳೆ ಮಂದಿರವಾಗಿರ್ಪುದಯ್ಯ. ಸ್ವಾನುಭಾವಸೂತ್ರವೆ ನಿತ್ಯತೃಪ್ತಿಯಾಗಿರ್ಪುದಯ್ಯ. ಮಹಾಪ್ರಕಾಶಸ್ವರೂಪವಾದ ಚಿದ್ಬೆಳಗೆ ದೈವವಾಗಿರ್ಪುದಯ್ಯ. ಷೋಡಶಾವಧಾನಂಗಳೆ ಅವಯವಂಳಾಗಿರ್ಪುದಯ್ಯ. ನಿಜನೈಷೆ*, ನಿರ್ಲಜ್ಜೆ, ನಿರಾಸೆಯೆಂಬ ನಿಷ್ಪ್ರಪಂಚವೆ ಧನಧಾನ್ಯವಾಗಿರ್ಪುದಯ್ಯ. ಇಂತು ನಿಷ್ಕಳಂಕ ಪರಮಾನಂದವೆಂಬ ಸತ್ತುಚಿತ್ತಾನಂದ ನಿತ್ಯಪರಿಪೂರ್ಣ ಅವಿರಳಪರಂಜ್ಯೋತಿಸ್ವರೂಪದಿಂದ ಕನ್ನಡಿಯ ಪ್ರತಿಬಿಂಬದಂತೆ, ಇಹಪರಗಳೆಂಬ ಅಧೋಕುಂಡಲಿ ಊಧ್ರ್ವಕುಂಡಲಿಯೆಂಬ ಉಭಯಮಧ್ಯದಲ್ಲಿ ನೆಲಸಿರ್ಪ ಪರತತ್ವವೆ ಶಿವಭಕ್ತನೆಂಬ ಮಧ್ಯನಾಮವುಳ್ಳ ಮಹಾಶೇಷ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ಕುಂಡಲಾಕೃತಿ, ಶಿಕಾರಪ್ರಣಮ, ಭೇರಿನಾದ, ಮಣಿಪೂರಚಕ್ರ, ಹರಿತವರ್ಣ, ಪ್ರಸಾದಿಸ್ಥಲ, ಕಾರಣತನು, ನಿರಹಂಕಾರಹಸ್ತ, ಶಿವಲಿಂಗ, ನೇತ್ರಮುಖ, ಸಾವಧಾನಭಕ್ತಿ, ಸುರೂಪುಪದಾರ್ಥ, ಸುರೂಪಪ್ರಸಾದ, ರುದ್ರಪೂಜಾರಿ, ರುದ್ರನಧಿದೇವತೆ, ಮೂರ್ತಿಸಾದಾಖ್ಯ, ಆನಂದವೆಂಬ ಲಕ್ಷಣ, ಶರೀರಸ್ಥವೆಂಬ ಸಂಜ್ಞೆ, ಉತ್ತರದಿಕ್ಕು, ಸಾಮವೇದ, ಅಗ್ನಿಯ ಅಂಗ, ಪರಮಾತ್ಮ, ಇಚ್ಛಾಶಕ್ತಿ, ವಿದ್ಯಾಕಲೆ ಇಂತು ಇಪ್ಪತ್ತುನಾಲ್ಕು ಸಕೀಲಂಗಳನೊಳಕುಂಡು ಎನ್ನ ಮಣಿಪೂರಕಚಕ್ರವೆಂಬ ಪಂಪಾಕ್ಷೇತ್ರದಲ್ಲಿ ಮೂರ್ತಿಗೊಂಡಿರ್ದ ನಿರೀಕ್ಷಣಸ್ವರೂಪವಾದ ಶಿವಲಿಂಗನೆ ಶ್ರೀವಿರೂಪಾಕ್ಷಲಿಂಗವೆಂದು ಆತ್ಮತ್ರಯನ ಮಡಿಮಾಡಿ, ಪರಮಾನಂದವೆಂಬ ಜಲದಿಂ ಮಜ್ಜನಕ್ಕೆರದು, ಅಗ್ನಿ ನಿವೃತ್ತಿಯಾದ ಗಂಧವ ಧರಿಸಿ, ಅಹಂಕಾರ ನಿರಹಂಕಾರವಾದಕ್ಷತೆಯನಿಟ್ಟು, ಅಲ್ಲಿಹ ದಶದಳಂಗಳನೆ ಪುಷ್ಪದಮಾಲೆಯೆಂದು ಧರಿಸಿ, ಅಲ್ಲಿಹ ಕಮಲಸದ್ವಾಸನೆಯ ಧೂಪವ ಬೀಸಿ, ಅಲ್ಲಿಹ ಹರಿತವರ್ಣವೆ ಕರ್ಪೂರದ ಜ್ಯೋತಿಯೆಂದು ಬೆಳಗಿ, ಅಲ್ಲಿಹ ಸುಷುಪ್ತಾವಸ್ಥೆಯೆಂಬ ನವೀನವಸ್ತ್ರವ ಹೊದ್ದಿಸಿ, ನಿರ್ಲೋಭವೆಂಬಾಭರಣವ ತೊಡಿಸಿ, ಸುರೂಪವೆಂಬ ನೈವೇದ್ಯವನರ್ಪಿಸಿ, ಸಾವಧಾನವೆಂಬ ತಾಂಬೂಲವನಿತ್ತು, ಇಂತು ಶಿವಲಿಂಗಕ್ಕೆ ಅಷ್ಟವಿಧಾರ್ಚನೆಯಂ ಮಾಡಿ, ಕೋಟಿಸೂರ್ಯನ ಪ್ರಭೆಯಂತೆ ಬೆಳಗುವ ಶಿವಲಿಂಗವನ್ನು ಕಂಗಳು ತುಂಬಿ ನೋಡಿ, ಮನದಲ್ಲಿ ಸಂತೋಷಂಗೊಂಡು ಆ ಶಿವಲಿಂಗದ ಪೂಜೆಯ ಸಮಾಪ್ತವ ಮಾಡಿ, ಓಂ ಶಿಂ ಶಿಂ ಶಿಂ ಶಿಂ ಶಿಂ ಶಿಂ ಎಂಬ ಶಿಕಾರ ಷಡ್ವಿಧಮಂತ್ರಂಗಳಿಂದೆ ನಮಸ್ಕರಿಸಿ, ಆ ಶಿವಲಿಂಗವೆ ತಾನೆಂದರಿದು ಕೂಡಿ ಎರಡಳಿದು ನಿಃಕಳಂಕನಾಗಿ ಆಚರಿಸಬಲ್ಲಾತನೆ ಸಾವಧಾನಭಕ್ತಿಯನುಳ್ಳ ಶಿವಪ್ರಸಾದಿ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ ಬಸವ ಮೊದಲಾದ ಪ್ರಮಥಗಣಾರಾಧ್ಯರ ಸನ್ಮಾರ್ಗಾಚಾರಕ್ಕೆ ದೃಢಚಿತ್ತದಿಂದ ನಿಂದು, ನೀರಾಭಾರಿವೀರಶೈವ ಷಚಟ್ಸ್ಥಲಮಾರ್ಗದಲ್ಲಿ ಆಚರಿಸುವ ಶರಣಗಣಂಗಳಲ್ಲಿ ಪಂಷಸೂತಕಂಗಳ ಕಲ್ಪಿಸಿದೆ, ಭೃತ್ಯಾಚಾರ ಮುಂದುಗೊಂಡು, ಅವರೊಕ್ಕುಮಿಕ್ಕುದ ಹಾರೈಸಿ, ನಿಜಭಕ್ತಿಯಲ್ಲಿ ನಿಂದು, ದೃಢಚಿತ್ತನಾಗಿ, ಸನ್ಮಾರ್ಗಾಚಾರಕ್ಕೆ ಬಾರದಂಥ ಗುರು-ಚರ-ಪರ-ಭಕ್ತ-ಗಣ ಬಂಧು-ಬಳಗ, ತಂದೆ-ತಾಯಿ, ಪಯತ್ರ, ಮಿತ್ರ, ಕಳತ್ರ, ಶಿಷ್ಯ ಮೊದಲಾಗಿ, ತೃಣಕ್ಕೆ ಸಮಮಾಡಿ ತ್ಯಜಿಸಿ, ಮನದ ಮಧ್ಯದಲ್ಲಿ ಹುಟ್ಟಿದ ಕಾಮ, ಕ್ರೋಧ, [ಲೋಭ] ಮೋಹ, ಮದ, ಮತ್ಸರಂಗಳ ಬಲೆಗೆ ಸಿಲ್ಕದೆ, ತ್ರಿಕರಣದ ಪವಿತ್ರತೆಯಿಂದ ಅಷ್ಟಾವರಣದ ಸ್ತೋತ್ರವ ಮಾಡುವಂಥಾದೆ ಸಮಯದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ನಿರಾಲಂಬ ಚೆನ್ನಬಸವರಾಜೇಂದ್ರನು ನಿರ್ಲಜ್ಜಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ಶ್ರೀಗುರುಲಿಂಗಜಂಗಮವೇ ರುದ್ರಲೋಕದ ರುದ್ರಗಣಂಗಳಿಗೆ, ಶಾಂಭವಲೋಕದ ಶಾಂಭವಗಣಂಗಳಿಗೆ, ನಾಗಲೋಕದ ನಾಗಗಣಂಗಳಿಗೆ, ದೇವಲೋಕದ ದೇವಗಣಂಗಳಿಗೆ, ಮರ್ತೃಲೋಕದ ಮಹಾಗಣಂಗಳಿಗೆ ಅವರವರ ಮನ-ಭಾವ-ಕಾರಣಂಗಳು ಹೇಗುಂಟೊ ಹಾಂಗೆ ಆಯಾಯ ಪ್ರಸನ್ನೇತಿ ಪ್ರಸಾದವಾಗಿರ್ಪರು ನೋಡ. ಸ್ವರ್ಗ-ಮರ್ತೃ-ಪಾತಾಳಲೋಕದಲ್ಲಿ ಚರಿಸುವ ಹÀರಿಸುರಬ್ರಹ್ಮಾದಿ ದೇವದಾನವಮಾನವ ಮನಮುನಿಗಳೆಲ್ಲ ಅತ್ಯತಿಷ*ದ್ದಶಾಂಗುಲವೆಂದು ಹೊಗಳುವ ಶ್ರುತಿಯಂತೋ ಹಾಂಗೆ ಅವರವರ ಮನದಂತೆ ಮಹಾದೇವನಾಗಿ ಫಲಪದಂಗಳ ಕೊಟ್ಟು, ದುಷ್ಟನಿಗ್ರಹ ಶಿಷ್ಟಪ್ರತಿಪಾಲಕತ್ವದಿಂದ ಸರ್ವಲೋಕಂಗಳಿಗೆಲ್ಲ ಸೂತ್ರಧಾರಿಗಳಾಗಿರ್ಪರು ನೋಡ. ಇಂತು ಏಕಮೇವ ಪರಬ್ರಹ್ಮವೆಂಬ ಶ್ರುತಿಯ ದಿಟವಮಾಡಿ ಪರಮಸ್ವಸ್ಥಿರದ ಮಂಡಲದ ಮೇಲೆ ಶಿವ-ಶಕ್ತಿ, ಅಂಗ-ಲಿಂಗವೆಂಬ ಉಭಯನಾಮವಳಿದು ಶಿಷ್ಯರೂಪಿನಿಂದ ಕುಳ್ಳಿರಿಸಿ ದೀಕ್ಷಾಪಾದೋದಕ ಮಿಶ್ರವಾದ ಗೋಮೂತ್ರದಿಂದ ಸಪ್ತವ್ಯಸನ ಸಂಬಂಧವಾದಂಗ, ಸಪ್ತಧಾತುಸಂಬಂಧವಾದ ಲಿಂಗ, ಇಂತು ಅಂಗದ ಮಲಿನಭಾವ, ಲಿಂಗದ ಶಿವಭಾವವ ಕಳದು, ಕ್ಷೀರ, ಘೃತ, ರಂಭಾ, ಇಕ್ಷು, ಮಧುಯುಕ್ತವಾದ ರಸಪಂಚಾಮೃತವ ಜಂಗಮಚರಣೋದಕ ಮಿಶ್ರದಿಂದ ಅಭಿಷೇಕಮಾಡಿಸಿ, ಅದರಿಂ ಮೇಲೆ ಗುರುಪಾದೋದಕದಲ್ಲಿ ಶರಣಗಣಂಗಳು ಹಸ್ತೋದಕ, ಮಂತ್ರೋದಕ, ಶುದ್ಧೋದಕ, ಗಂಧೋದಕ, ಪುಷ್ಪೋದಕವೆಂಬ ಪಂಚಪರಮಾನಂದ ಜಲದಿಂದ ಅಭ್ಯಂಗಸ್ನಾನ ಮಾಡಿಸಿ, ಹಿಂದು-ಮುಂದಣ ಕಾಲಕಾಮರ ಭಯಕ್ಕೆ ಅಂಜಬೇಡವೆಂದು ತ್ರಿವಿಧಂಗುಲಪ್ರಮಾಣವಾದ ದರ್ಭೆಯ ಅಂತು ಮಾಡಿ ತ್ರಿವಿಧಮಂತ್ರಸ್ಮರಣೆಯಿಂದ ಕಟಿಯಲ್ಲಿ ಧರಿಸಿದರಯ್ಯ. ಆರುವೈರಿಗಳಿಗೆ ಒಳಗಾಗಬೇಡವೆಂದು ಷಡಂಗುಲಪ್ರಮಾಣವಾದ ರಂಭಾಪಟ್ಟೆಯ ಕೌಪೀನವ ಮಾಡಿ ಷಡಕ್ಷರಮಂತ್ರಸ್ಮರಣೆಯಿಂದ ಹರಿಯಜದ್ವಾರಗಳ ಬಂಧಿಸಿದರಯ್ಯ. ಅದರಿಂದ ಮೇಲೆ ನಾರಂಗಶಾಟಿಯ ಪವಿತ್ರತೆಯಿಂ ಹೊದ್ದಿಸಿ, ಶ್ರೀ ಗುರುದೇವನ ಚರಣಕಮಲಕ್ಕೆ ಅಷ್ಟಾಂಗಪ್ರಣಿತನ ಮಾಡಿಸಿ, ಶಿವಶರಣ ಭಕ್ತ ಮಾಹೇಶ್ವರರುಗಳಿಗೆ ಹುಸಿಯ ನುಡಿಯದೆ, ದಿಟವ ಬಿಡದೆ, ಆಪ್ತತ್ವದಿಂದ ನಡೆ-ನುಡಿ, ಕೊಟ್ಟುಕೊಂಬ ವಿಚಾರಂಗಳ ಶ್ರುತಮಾಡಿದಲ್ಲಿ ಶ್ರೀ ಗುರುದೇವನು ಶರಣಗಣ ಒಪ್ಪಿಗೆಯಿಂದ ಶಿಷ್ಯನ ಮಸ್ತಕದ ಮೇಲೆ ಅಭಯಹಸ್ತವನ್ನಿಟ್ಟು, ಗುರುಶಿಷ್ಯಭಾವವಳಿದು, ಗುರುವಿನ ಸೂತ್ರದ ಶಿಷ್ಯಹಿಡಿದು, ಶಿಷ್ಯನ ಸೂತ್ರವ ಗುರುವು ಹಿಡಿದು, ಅಂತರಂಗಬಹಿರಂಗದಲ್ಲಿ ಶಿವಯೋಗಾನುಸಂಧಾನದಿಂದ ಏಕರೂಪವಾಗಿ ಭೃತ್ಯರಿಂದ ಕಳಸಾರ್ಚನೆಯ ರಚಿಸಿ, ಪ್ರಮಥಗಣಾರಾಧ್ಯ ಭಕ್ತಮಾಹೇಶ್ವರರೊಡಗೂಡಿ ನವರತ್ನಖಚಿತವಾದ ಶೂನ್ಯಸಿಂಹಾಸನದ ಮೇಲೆ ಮೂರ್ತಿಗೊಂಡಿರುವಂಥ ಮಂತ್ರಮೂರ್ತಿ ನಿರಂಜನಜಂಗಮಕ್ಕೆ ವಿಭೂತಿ ವೀಳ್ಯ, ಸುವರ್ಣಕಾಣಿಕೆ, ದಶಾಂಗಘನಸಾರ, ಪುಷ್ಪದಮಾಲೆ, ವಸ್ತ್ರಾಭರಣ ಮೊದಲಾಗಿ ಸಪ್ತಪದಾರ್ಥಂಗಳ ಪ್ರಮಥಗಣಾರಾಧ್ಯ ಭಕ್ತಮಾಹೇಶ್ವರ ಮಧ್ಯದಲ್ಲಿ ಇಟ್ಟು ಅಷ್ಟಾಂಗಯುಕ್ತರಾಗಿ ಸ್ವಸ್ಥದೃಢಚಿತ್ತದಿಂದ ಬಹು ಪರಾಕು ಭವರೋಗ ವೈದ್ಯನೆ ಎಂದು ತ್ರಿಕರಣಶುದ್ಧತಿಯಿಂದ ಅಭಿವಂದಿಸುವಂಥಾದ್ದೆ ಸ್ವಸ್ತಿಕಾರೋಹಣದೀಕ್ಷೆ. ಇಂತುಟೆಂದು ಶ್ರೀ ಗುರುನಿಷ್ಕಳಂಕಮೂರ್ತಿ ಚೆನ್ನಬಸವರಾಜೇಂದ್ರನು ನಿರ್ಲಜ್ಜಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ಗುರುಕರಜಾತನಾಗಿ ಪ್ರಮಥರಾಚರಿಸಿದ ಸನ್ಮಾರ್ಗದಲ್ಲಾಚರಿಸಿ, ಮಹಾಲಿಂಗೈಕ್ಯಾನುಭಾವಿಯಾದ ಮೇಲೆ ಆಯುಃ ಕರ್ಮ [ಚ] ವಿತ್ತಂ ಚ ಎಂದು ಇದಕ್ಕಂಜಿ ಉಮ್ಮಳಿಸುವ ಮಾಯಾಪ್ರಸೂತಿ ಮನವ ನೋಡ. ಆಯುಷ್ಯವೆ ಚಿದ್ಘನಮಹಾಲಿಂಗ, ಶ್ರೀಯೆ ಚಿದ್ಘನಮಹಾಜಂಗಮ, ನಿಧಿನಿಧಾನವೆ ಚಿದ್ಘನ ಮಹಾಪ್ರಮಥಗನ ಶರಣರ ಭೃತ್ಯಭಕ್ತಿ ವಿದ್ಯವೆ ಪಂಚಾಕ್ಷರ-ಷಡಾಕ್ಷರ ಮೊದಲಾದ ಮಹಾಶಿವಯಂತ್ರ. ದೇಹವೆ ಗುರುಚರಪರಕ್ಕೆ ಅಷ್ಟವಿಧಾರ್ಚನೆ-ಷೋಡಶೋಪಚಾರವಾಗಲೆಂದು ಶ್ರೀಗುರುಬಸವಲಿಂಗ ಬರದನಾಗಿ ಹೊಟ್ಟೆಯ ಶಿಶುವಿಂಗೆ ಬೇರೆ ನೈವೇದ್ಯವುಂಟೇನೋ? ಶಾಂತಚಿದ್ಘನಮಹಾಲಿಂಗದಲ್ಲಿ ಸಂತೃಪ್ತನಾದ ಅಯೋನಿಸಂಭವ ನಿಜಶರಣ ನಿತ್ಯಮುಕ್ತಂಗೆ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು

ಇನ್ನಷ್ಟು ...