ಅಂಗದಮೇಲೆ ಲಿಂಗವ ಧರಿಸಿ,
ಶಿವಭಕ್ತರೆಂದು ಹೇಳಿ, ಶಿವಾಚಾರಮಾರ್ಗವ ಬಿಟ್ಟು,
ಭವಿಶೈವದೈವಗಳಿಗೆ ಲಿಂಗವಡಿಯಾಗಿ ಅಡ್ಡಬಿದ್ದು
ಶರಣೆಂಬ ಹೊಲೆಯರಿಗೆ ಶಿವಭಕ್ತಜನ್ಮ ತೀರಿ,
ಚಂದ್ರಸೂರ್ಯರುಳ್ಳನ್ನಕ್ಕರೆ ಇಪ್ಪತ್ತೆಂಟುಕೋಟಿ ನರಕ ತಪ್ಪದು.
ಆ ನರಕ ತೀರಿದ ಬಳಿಕ ಶ್ವಾನ ಸೂಕರಜನ್ಮ ತಪ್ಪದು.
ಆ ಜನ್ಮ ತೀರಿದ ಬಳಿಕ ರುದ್ರಪ್ರಳಯ ತಪ್ಪದೆಂದ ಕಾಣಾ
ಸಂಗನಬಸವೇಶ್ವರ.