ವೇಷವ ಧರಿಸಿ, ಭಾಷೆಯ ಕಲಿತು, ದೇಶವ ಸುತ್ತಿ ಬಳಲಬೇಡ.
ಜಗದೀಶನ ಪಾದವನೊಲಿದು ಪೂಜಿಸಿರಣ್ಣಾ.
ಸವಿಯೂಟದಾಸೆಗೆ ಮನವೆಳಸಬೇಡ.
ಪರಮೇಶನ ಪಾದವ ನೆನೆದು ಸುಖಿಸಿರಣ್ಣಾ.
ತರ್ಕಶಾಸ್ತ್ರ ಆಗಮ ಮಾಯಾಜಾಲದ ಹರಟೆಗೆ ಹೊಗದೆ,
ಮೂಲಮಂತ್ರ[ವ] ಮರೆಯದೆ ಸ್ಮರಿಸಿರಣ್ಣಾ.
ಸಂಸಾರಿಗಳ ಸಂಗದೊಳಗೆ ಇರಬೇಡ.
ಸದ್ಭಾವರ ಸಂಗದೊಳಗಿರ್ದು ನಿತ್ಯವ ಸಾದ್ಥಿಸಿಕೊಳ್ಳಿರಣ್ಣಾ.
ಪರರ ಯಾಚಿಸಿ ತನುವ ಹೊರೆಯಬೇಡ.
ಶಿವನಿಕ್ಕಿದ ಬ್ಥಿಕ್ಷೆಯೊಳಗಿದ್ದು,
ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನನೊಲಿಸಿರಣ್ಣಾ.