ಅಥವಾ
(15) (5) (6) (2) (4) (1) (0) (0) (9) (0) (0) (12) (0) (0) ಅಂ (3) ಅಃ (3) (18) (1) (7) (2) (0) (1) (0) (4) (0) (0) (0) (0) (0) (0) (0) (6) (0) (4) (2) (10) (2) (0) (5) (6) (14) (0) (0) (0) (0) (8) (5) (0) (10) (17) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅನುಭಾವವಿಲ್ಲದ ಭಕ್ತಿ ತಲೆಕೆಳಗಾದುದಯ್ಯಾ. ಅನುಭಾವ ಭಕ್ತಿಗಾಧಾರ; ಅನುಭಾವ ಭಕ್ತಿಗೆ ನೆಲೆವನೆ. ಅನುಭಾವ ಉಳ್ಳವರ ಕಂಡು ತುರ್ಯ ಸಂಭಾಷಣೆಯ ಬೆಸಗೊಳ್ಳದಿದ್ದಡೆ ನರಕದಲ್ಲಿಕ್ಕಯ್ಯಾ! ರಾಮನಾಥ.
--------------
ಜೇಡರ ದಾಸಿಮಯ್ಯ
ಅಂತರಂಗ ಬಹಿರಂಗದಲ್ಲಿ ಸರ್ವಾಚಾರ ಸಂಪತ್ತಿನ ಆಚರಣೆಯನರಿಯದ ಮೂಢಾತ್ಮಂಗೆ ಲಿಂಗಾಂಗ ಸಮರಸವ ಹೇಳಿ ಸರ್ವಾಂಗ ಸ್ನಾನಧೂಳನ ನಾಲ್ವತ್ತೆಂಟು ಸ್ಥಾನಂಗಳಲ್ಲಿ ಧಾರಣ ಕ್ರಿಯಾಭಸಿತವ ಧರಿಸುವ ನಿರ್ಣಯವ ಹೇಳಿ ಅಂತರಂಗದ ಜಪವ ಹೇಳುವನೊಬ್ಬ ಆಚಾರದ್ರೋಹಿ ನೋಡಾ, ರಾಮನಾಥ.
--------------
ಜೇಡರ ದಾಸಿಮಯ್ಯ
ಅಂಬಲಿ ಅಲೆಯಾಗಿ, ತುಂಬೆಯ ಮೇಲೋಗರವಾಗಿ, ಉಂಬ ಸದುಭಕ್ತನ ಮನೆಯಾಗಿ, ಲೋಕದ ಡಂಭಕರ ಮನೆ ಬೇಡ, ರಾಮನಾಥ
--------------
ಜೇಡರ ದಾಸಿಮಯ್ಯ
ಅಡಗ ತಿಂಬರು; ಕಣಿಕದ ಅಡಿಗೆಯಿರಲಿಕೆ. ಕುಡಿವರು ಸುರೆಯ! ಹಾಲಿರಲಿಕೆ. ಹಡದುಂಬ ವೇಶಿಯನೊಲ್ಲದೆ ಹೆರರ ಮಡದಿಗಳುಪುವ ಸತ್ತ ನಾಯ ತಿಂಬ ಹಡ್ಡಿಗರನೇನೆಂಬೆನೈ! ರಾಮನಾಥ.
--------------
ಜೇಡರ ದಾಸಿಮಯ್ಯ
ಅಚ್ಚ ಶಿವೈಕ್ಯಂಗೆ ಹೊತ್ತಾರೆ ಅಮವಾಸೆ; ಮಟ್ಟ ಮಧ್ಯಾಹ್ನ ಸಂಕ್ರಾಂತಿ; ಮತ್ತೆ ಅಸ್ತಮಾನ ಪೌರ್ನಮಿ ಹುಣ್ಣಿಮೆ; ಭಕ್ತನ ಮನೆಯ ಅಂಗಳವೆ ವಾರಣಾಸಿ ಕಾಣಾ! ರಾಮನಾಥ.
--------------
ಜೇಡರ ದಾಸಿಮಯ್ಯ
ಅರ್ಥವುಂಟೆಂದು ಅಹಂಕರಿಸಿ ಮಾಡುವನ ಭಕ್ತಿ ತೊತ್ತಿನ ಕೂಟ, ತೊರೆಯನ ಮೇಳದಂತೆ. ತನು-ಮನ-ಧನದಲ್ಲಿ ವಂಚನೆಯುಳ್ಳ ಪ್ರಪಂಚಿಯ ಮನೆಯ ಕೂಳು ಶುನಕನ ಬಾಯ ಎಲುವ ಪ್ರತಿಶುನಕ ತಿಂದಂತೆ ಕಾಣಾ ! ರಾಮನಾಥ.
--------------
ಜೇಡರ ದಾಸಿಮಯ್ಯ
ಅಂಗಲಿಂಗದ ಒಳಗೆ ಲಿಂಗಕಂಗಳು ಬೆಳಗು, ಹಿಂಗಲಾಪುದೆ ಹೇಳು ಅಜ್ಞಾನವ! ಸಂಗಸುಖಮಥನದ ಅಸಂಗದಿಂದದನರಿದು ಹಿಂಗಲಿಕೆ ಹೆಸರೇನು? ರಾಮನಾಥ.
--------------
ಜೇಡರ ದಾಸಿಮಯ್ಯ
ಅಡವಿಯಂಗಡಿಯಕ್ಕು, ನಡುಗಡಲು ನೆಲೆಯಕ್ಕು. ತೊಡಕುವ ಮಾರಿಯಪಮೃತ್ಯ ಶಿವಭಕ್ತರ ಒಡಲು ನಿನ್ನೊಡಲೆಂದು ಮುಟ್ಟಲಮ್ಮವು ಕಾಣಾ! ರಾಮನಾಥ.
--------------
ಜೇಡರ ದಾಸಿಮಯ್ಯ
ಅನುಭಾವವಿಲ್ಲದೆ ಈ ತನು ಎಳತಟವಾದುದಯ್ಯಾ. ಅನುಭಾವವೀ ತನುವಿಂಗೆ ಆಧಾರ. ಅನುಭಾವರ ಅನುಭಾವವನು ಮನವಾರೆ ವೇದಿಸಿದವರಿಗೆ ಜನನವಿಲ್ಲ ಕಾಣಾ!ರಾಮನಾಥ.
--------------
ಜೇಡರ ದಾಸಿಮಯ್ಯ
ಅಗ್ನಿ ಸುಡಲಲ್ಲದೆ ಸುಳಿಯಲರಿಯದು ವಾಯು ಸುಳಿವುದಲ್ಲದೆ ಸುಡಲರಿಯದು ಆ ಆಗ್ನಿ ವಾಯುವ ಕೂಡಿದಲ್ಲದೆ ಅಡಿಯಿಡಲರಿಯದು ಈ ಪರಿಯಂತೆ ನರರರಿವರೆ ಕ್ರಿಯಾಜ್ಞಾನಭೇದವ? ರಾಮನಾಥ
--------------
ಜೇಡರ ದಾಸಿಮಯ್ಯ
ಅಡವಿ ಅರಣ್ಯದಲಿ ಮಡಿವನಕ ತಪವಿದ್ದು ಮಡಿವಾಗ ಮೃಡನ ಮರದಡೆ, ತುಂಬಿದ ಸಕ್ಕರೆಯ ಮಡುವಿನೊಳಗೊಕ್ಕಂತೆ! ರಾಮನಾಥ.
--------------
ಜೇಡರ ದಾಸಿಮಯ್ಯ
ಅಡಗಿನೊಳಗಣ ಹಾಲು ಅಡಗಿಪ್ಪ ಭೇದವನು ಬೆಡಗಪ್ಪ ತುಪ್ಪದ ಕಂಪಿನ ಪರಿಯಂತೆ. ಎಲೆ ಮೃಡನೆ! ನೀನು ಪ್ರಾಣ ಪ್ರಕೃತಿಗಳೊಳಗೆ ಅಡಗಿಹ ಭೇದವ ಲೋಕದ ಜಡರೆತ್ತ ಬಲ್ಲರೈ! ರಾಮನಾಥ.
--------------
ಜೇಡರ ದಾಸಿಮಯ್ಯ
ಅನ್ಯಜಾತಿಯ ಮನೆಯ ಅನ್ನಪಾನಾದಿಗಳು ತನ್ನ ಉದರದಲ್ಲಿ ಇಕ್ಕುವವ ಶಿವದ್ರೋಹಿ, ಶಿವವಂಚಕನು. ಅವ ನಿಮ್ಮ ಓ ಎನಿಸಿದಡೆ ಎನಿಸಲಿ ಅವನ ಎನ್ನತ್ತ ತಾರದಿರಾ, ರಾಮನಾಥ.
--------------
ಜೇಡರ ದಾಸಿಮಯ್ಯ
ಅಣುರೇಣು ಮಧ್ಯದ ಪ್ರಣವದಾಧಾರ ಭುವನಾಧೀಶನೊಬ್ಬನೆಯಯ್ಯ. ಇದೆ ಪರಿಪೂರ್ಣವೆಂದೆನ್ನದನ್ಯ ದೈವವ ಸ್ಮರಿಸುವ ಭವಿಯನೆಂತು ಭಕ್ತನೆಂಬೆನೈ? ರಾಮನಾಥ.
--------------
ಜೇಡರ ದಾಸಿಮಯ್ಯ
ಅರುಹ ಅರಿಯಲೆಂದು ಕುರುಹ ಕೈಯಲ್ಲಿ ಕೊಟ್ಟ! ಅರುಹನೆ ಮರದು ಕುರುಹನೆ ಹರಿದ! ಈ ಕುರುಂಬರಿಗಿನ್ನೆತ್ತಣ ಮುಕ್ತಿಯೊ? ರಾಮನಾಥ.
--------------
ಜೇಡರ ದಾಸಿಮಯ್ಯ