ಅಥವಾ
(15) (5) (6) (2) (4) (1) (0) (0) (9) (0) (0) (12) (0) (0) ಅಂ (3) ಅಃ (3) (18) (1) (7) (2) (0) (1) (0) (4) (0) (0) (0) (0) (0) (0) (0) (6) (0) (4) (2) (10) (2) (0) (5) (6) (14) (0) (0) (0) (0) (8) (5) (0) (10) (17) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಕೆಡಹಿದ ಚಿನ್ನದ ಎಡೆಯಣ ಮಣ್ಣವ ಹೆಡೆಗೆದುಂಬಲಾ ಚಿನ್ನದೋರಿ ಮೃಡ! ನಿಮ್ಮ ಶರಣರ ಎಡೆಗಳನರಿದ ಬಳಿಕ ಉಡುಗಿದ ಮಣ್ಣೇಕೆ? ರಾಮನಾಥ.
--------------
ಜೇಡರ ದಾಸಿಮಯ್ಯ
ಕಷೃಜಾತಿಗಳು ಲಿಂಗವ ಮುಟ್ಟಿ ಪೂಜಿಸಲಾಗದು. ಮುಟ್ಟಿದಡೆ ಮುಟ್ಟಿದಂತಿರಬೇಕು. ನಿಮ್ಮ ಮುಟ್ಟಿಯೂ ಹಿಂದಣ ಕುಲವ ಕೂಡಿದರಾದಡೆ ಮುಂದೆ ಹೊಲೆಯರ ಮನೆಯ ಹುಳಿತ ನಾಯ ಬಸುರಲಿ ಬಪ್ಪುದು ತಪ್ಪದು ಕಾಣಾ! ರಾಮನಾಥ.
--------------
ಜೇಡರ ದಾಸಿಮಯ್ಯ
ಕುಲಛಲವ ಬಿಟ್ಟು ನಿಮ್ಮನೊಲಿಸಿದ ಶರಣರಿಗೆ ತಲೆವಾಗುವೆ ನಾನು ಕುಲಜರೆಂದು. ಬೆಬ್ಬನೆ ಬೆರತು ನಿಮ್ಮನೊಲಿಸಿದ ಶರಣರಿಗೆ ತಲೆವಾಗದವನ ತಲೆ ಶೂಲದ ಮೇಲಣ ತಲೆ ಕಾಣಾ! ರಾಮನಾಥ.
--------------
ಜೇಡರ ದಾಸಿಮಯ್ಯ
ಕೀಳು ಡೋಹರ ಕಕ್ಕ; ಕೀಳು ಮಾದರ ಚೆನ್ನ. ಕೀಳು ಓಹಿಲದೇವ; ಕೀಳು ಉದ್ಭಟಯ್ಯ. ಕೀಳಿಂಗಲ್ಲದೆ ಹಯನು ಕರೆಯದು ಕಾಣಾ! ರಾಮನಾಥ.
--------------
ಜೇಡರ ದಾಸಿಮಯ್ಯ
ಕಳದೊಳಗಣ ಕಳವೆಯನೊಕ್ಕುವರೊಳಗದೆ ಶಿವಲಿಂಗ ಮುಕ್ಕಣ್ಣ! ನೀನೊಲಿದ ಸದ್ಭಕ್ತನ ಅಕ್ಕುಲಿಜನೆಂದಡೆ ಅಕ್ಷಯನರಕದಲ್ಲಿಕ್ಕುವ ಕಾಣಾ! ರಾಮನಾಥ.
--------------
ಜೇಡರ ದಾಸಿಮಯ್ಯ
ಕರಿಯನಿತ್ತಡೆ ಒಲ್ಲೆ, ಸಿರಿಯನಿತ್ತಡೆ ಒಲ್ಲೆ. ಹಿರಿದಪ್ಪ ರಾಜ್ಯವನಿತ್ತಡೆ ಒಲ್ಲೆ. ನಿಮ್ಮ ಶರಣರ ಸೂಳ್ನುಡಿಯ ಒಂದರೆಘಳಿಗೆಯಿತ್ತಡೆ ನಿನ್ನನಿತ್ತೆ ಕಾಣಾ! ರಾಮನಾಥ.
--------------
ಜೇಡರ ದಾಸಿಮಯ್ಯ
ಕರಸ್ಥಲವೆಂಬ ದಿವ್ಯ ಭೂಮಿಯಲ್ಲಿ ಮಹಾಘನಲಿಂಗ ನಿಕ್ಷೇಪವಾಗಿದೆ! ಈ ದಿವ್ಯ ನಿಕ್ಷೇಪವ ಸಾಧಿಸುವಡೆ ಅಂಜನಸಿದ್ಧಿಯಿಲ್ಲದೆ ಸಾಧಿಸಬಾರದು. ಲಿಪಿಯಿಲ್ಲದೆ ತೆಗೆವಡಸದಳ. ಆ ಲಿಪಿಯ ವ್ರಯವ ಷಟ್‍ತತ್ವದ ಮೇಲೆ ನಿಶ್ಚಯಿಸಿ. ಆ ನಿಶ್ಚಯದೊಳಗೆ ಈ ನಿಕ್ಷೇಪದ ಕರ್ತೃವಿನ ಹೆಸರೋದಿತ್ತು. ತಿಳಿಯಲೋದುವನ್ನಬರ ಆತ ನಮ್ಮ ಹೆತ್ತಯ್ಯನೆಂಬ ಹೆಸರೋದಿತ್ತು. ಆ ಓದಿಕೆಯ ಕಡೆಯಕ್ಕರದೊಳಗೆಅಂಜನಸಿದ್ಧಿ ಹೇಳಿತ್ತು. ಅದಾವ ಪರಿಕ್ರಮದ ಅಂಜನವೆಂದಡೆ ಅದೆಮ್ಮ ಹೆತ್ತಯ್ಯ ಜಗದ್ವಿಲಾಸ ತದರ್ಥವಾಗಿ ಆ ತನ್ನ ಮೂಲಶಕ್ತಿ ಸಂಭೂತವಾದುದು. ಅಲ್ಲಿ ಹುಟ್ಟಿದ ದಿವ್ಯ ಚಿತ್ಕಳೆಯಿಂದೊಗೆದ ದಿವ್ಯಭಸಿತವೆಂದಿತ್ತು. ಆ ದಿವ್ಯ ಭಸಿತವೆಂಬ ದಿವ್ಯಾಂಜನವ ತಳೆದುಕೊಂಡು ಅತಿ ವಿಶ್ವಾಸದಿಂದ ನಾನೆನ್ನ ಹಣೆಯೆಂಬ ಕಣ್ಣಿಂಗೆಚ್ಚಿ ಸರ್ವಾಂಗವ ತೀವಲೊಡನೆ ಕರಸ್ಥಲದೊಳಗಣ ನಿಕ್ಷೇಪ ಕಣ್ದೆರವಾಯಿತ್ತು. ಆ ಕಣ್ದೆರವಾದ ನಿಕ್ಷೇಪವ ಮುಟ್ಟಹೋದಡೆ ಅಲ್ಲಿ ನಮ್ಮ ಹೆತ್ತಯ್ಯನ ಹೊಳಹ ಕಂಡು ತಳವೆಳಗಾದೆ ಕಾಣಾ! ರಾಮನಾಥ.
--------------
ಜೇಡರ ದಾಸಿಮಯ್ಯ
ಕುಲಸ್ವಾಮಿ ನಿಮ್ಮವ ಒಲಿವುದ ಕಂಡಡೆ ತಲೆವಾಗುವೆ ಕಾತ ಕಳವೆಯಂತೆ ಕುಲಜ ನಾನೆಂದು ತಲೆವಾಗದಿದ್ದಡೆ ಸಲೆ ಶೂಲದ ತಲೆಯಯ್ಯಾ, ರಾಮನಾಥ.
--------------
ಜೇಡರ ದಾಸಿಮಯ್ಯ
ಕಣ್ಣು ಮೀಸಲು ಶಿವನು; ಕೈ ಮೀಸಲು ಶಿವನ. ಕಾಲು ಮೀಸಲು ಶಿವನ; ನಾಲಗೆ ಮೀಸಲು ಶಿವನ. ಕಿವಿ ಮೀಸಲು ಶಿವನ; ನಾಸಿಕ ಮೀಸಲು ಶಿವನ. ತನು ಮನವೆಲ್ಲಾ ಮೀಸಲು ಶಿವನ. ಈ ಮೀಸಲು ಬೀಸರವಾಗದಂತಿರ್ದಡೆ ಆತನೇ ಜಗದೀಶ ಕಾಣಾ! ರಾಮನಾಥ.
--------------
ಜೇಡರ ದಾಸಿಮಯ್ಯ
ಕುಲಸ್ವಾಮಿ ನೀ ನಿಂದ ಹಜ್ಜೆಯಲ್ಲದೆ ನಾನೊಂದು ಹೆಜ್ಜೆಯನಿಡೆನಯ್ಯ; ಎಗಗೊಂದು ಹಜ್ಜೆಯಿಲ್ಲ. ನಿನ್ನ ಹೆಜ್ಜೆ ಎನ್ನ ಹೆಜ್ಜೆ ಒಂದಾದ ಭೇದವ ಜಗದನ್ಯಾಯಿಗಳೆತ್ತ ಬಲ್ಲರೈ? ರಾಮನಾಥ.
--------------
ಜೇಡರ ದಾಸಿಮಯ್ಯ
ಕರಸ್ಥಲದ ಜ್ಯೋತಿಯಿದು. ಕರುವಿಟ್ಟ ಎರಕವಿದು. ಇದರ ನೆಲೆಯ ತಿಳಿದು ನೋಡಿದಡೆ ನಿಜದಾನಂದವು. ಹೊಲಬುದೋರದ ನಿಸ್ಸಂಗದ ಹೊಲಬನರಿದು ಕೂಡಿದಾತನೆ ಶರಣ ಕಾಣಾ! ರಾಮಾನಾಥ.
--------------
ಜೇಡರ ದಾಸಿಮಯ್ಯ
ಕತ್ತೆ ಬಲ್ಲುದೆ ಕಸ್ತೂರಿಯ ವಾಸನೆಯ? ತೊತ್ತು ಬಲ್ಲಳೆ ಗುರುಹಿರಿಯರುತ್ತಮರೆಂಬುದ? ಭಕ್ತಿಯನರಿಯದ ವ್ಯರ್ಥಜೀವಿಗಳು ನಿಮ್ಮವರನೆತ್ತ ಬಲ್ಲರೈ? ರಾಮನಾಥ.
--------------
ಜೇಡರ ದಾಸಿಮಯ್ಯ
ಕಡುಭಸಿತವ ಹೂಸಿ, ಮುಡಿಯಲ್ಲಿ ಲಿಂಗವ ಧರಿಸಿ, ಮಂತ್ರಮೂರ್ತಿಯ ಮನವಾರೆ ಪೂಜಿಸಿ, ಭಕ್ತಿ ವೇಷವ ಹೊತ್ತು ಭಕ್ತನೆನಿಸಿದ ಬಳಿಕ ಭವಿಯ ಮನೆಯನ್ನವ ನಾಯಡಗು, ನರರು ಹೇಸಿದ ಅಮೇಧ್ಯವೆಂದೆ ಕಾಣಬೇಕು. ಹೀಗಲ್ಲದೆ ಒಡಲಿಚ್ಛೆಗೆ ತುಡುಗಣಿ ನಾಯಂತೆ ಒಡಲ ಹೊರೆವವರ ಮೆಚ್ಚ, ನಮ್ಮ ರಾಮನಾಥ.
--------------
ಜೇಡರ ದಾಸಿಮಯ್ಯ
ಕಡೆಗೀಲಿಲ್ಲದ ಬಂಡಿ ಹೊಡೆಗೆಡೆಯದೆ ಮಾಣ್ಬುದೆ? ಕಡೆಗೀಲು ಬಂಡಿಗಾಧಾರ. ಈ ಕಡುದರ್ಪವೇರಿದ ಒಡಲೆಂಬ ಬಂಡಿಗೆ ಮೃಢಭಕ್ತರ ನುಡಿಗಡಣವೆ ಕಡೆಗೀಲು ಕಾಣಾ! ರಾಮನಾಥ.
--------------
ಜೇಡರ ದಾಸಿಮಯ್ಯ
ಕಾಯ ನಿಮ್ಮ ದಾನ; ಜೀವ ನಿಮ್ಮದಾನ. ಕಾಯ ಜೀವ ಉಳ್ಳಲ್ಲಿಯೇ ನಿಮ್ಮ ಪೂಜಿಸದ ನಾಯಿಗಳನೇನೆಂಬೆ ಹೇಳ? ರಾಮನಾಥ.
--------------
ಜೇಡರ ದಾಸಿಮಯ್ಯ
ಕಂಚುಮುಟ್ಟು ಕಲ್ಲುಗುಂಡುಗಳೇರುವಣ್ಣಗಳು ನೀವು ಕೇಳಿರೆ! ಘಂಟೆಯ ನುಡಿಸಿ ಶಿವನನುಂಟುಮಾಡಿಕೊಂಡಿಹೆನೆಂಬಿರಿ. ಆ ಘಂಟೆಯ ಧ್ವನಿಗೆ ಒಂದು ಗೋಟಡಕೆಯ ಸೋಲ, ಗುರು ರಾಮನಾಥನು.
--------------
ಜೇಡರ ದಾಸಿಮಯ್ಯ
ಕಲಿವೀರ ಕಡಿವಲ್ಲಿ, ಬಲುವಿಷವು ಸುಡಿವಲ್ಲಿ ನೆಲೆಗೆಟ್ಟು ಮೊರೆಯೊ! ಎಂಬಲ್ಲಿ ನಿಮ್ಮ ತಲೆಗಾದು ರಕ್ಷಸಿದ ಸುಲಭನನರಿಯಿರೆ ಹೊಲೆಯರಿರ! ಸಲೆ ನಂಬಿ ಬದುಕಿರೊ, ರಾಮನಾಥನ.
--------------
ಜೇಡರ ದಾಸಿಮಯ್ಯ
ಕಡಿಗಳ ಹದಿನೆಂಟನೊಡಗೂಡಿ ಸಂಧಿಸಿ ತೊಡಚಿ ಕಟ್ಟಿದೆ ನರರ ಬಂಧನದಲ್ಲಿ. ಈ ತೊಡಹದ ನಾಯ ನಿಚ್ಚ ನೀನಿಕ್ಕಿ ಕೆಡಿಸಿದೆಯಯ್ಯಾ, ರಾಮನಾಥ.
--------------
ಜೇಡರ ದಾಸಿಮಯ್ಯ