ಮ ಪದದಿಂದ ಪ್ರಾರಂಭವಾಗುವ ವಚನಗಳು:
ಮಣಿವಡೆ ಶಿವಭಕ್ತ ಮಣಿಯ ಕಟ್ಟಲೆ ಬೇಕು.ಮಣಿಯದಿರ್ದಡೇನು? ಶಬುದಗುಂಡಿಗೆ!ಫಣಾಮಣಿದೇವರ ಮಣಿಮಕುಟದಲ್ಲದೆ,ಅದು ಮಣಿಯಲ್ಲದೇನು? ಹೇಳು ರಾಮನಾಥ.
ಮನೆಯಲ್ಲಿ ಅಟ್ಟೆನೆಂದಡೆ ಹೊಟ್ಟೆ ತುಂಬಿದುದುಂಟೆ?ಕೈಮುಟ್ಟಿ ಉಣ್ಣದನ್ನಕ್ಕರ!ತಾನು ವಚನಾಗಮದ ಪ್ರಸಂಗವ ಬಲ್ಲನೆಂದಡೆಬಲ್ಲವರಾರೂ ಇಲ್ಲವೆಂದಡೆಆತ ತನ್ನ ನುಡಿಗೆ ಸಿಲುಕುವನೆ?ಇಲ್ಲ ಕಾಣಾ! ರಾಮನಾಥ.
ಮಾಡಿದಲ್ಲದೆ ಮನೆಯೊಳಗಾಗದು ಬಯಲುಕಣ್ಣು ಕಂಡಲ್ಲದೆ ಪರವಾಗದುಮನ ಪರವೆಂದಲ್ಲದೆ ಪರವಾಗದುಈ ಪರಿಯ ನರರೆತ್ತ ಬಲ್ಲರೈ? ರಾಮನಾಥ.
ಮಾಡಿದ ಕರ್ಮವನೂಡಯ್ಯ ಎನ್ನ ಮನದಣಿವನ್ನಕ್ಕ.ಬೇಡೆನ್ನೆನು, ಮಾರ್ಕೊಳ್ಳೆನು.ಎಲೆ ರೂಢಿಗೀಶ್ವರನ ಕೂಡುವೆನು ನೀರಡಸಿದಂತೆ,ರಾಮನಾಥ.
ಮಹಾಘನವಪ್ಪ ಬೋನವನುಒಂದನುವಿನ ಪರಿಯಾಣದಲ್ಲಿ ಹಿಡಿದುಗುರುಲಿಂಗವು ಒಳಗಾದ ಲಿಂಗವಾರೋಗಣೆಯ ಮಾಡಿಮಿಕ್ಕುದು ಪ್ರಸಾದವೆ? ಅಲ್ಲಲ್ಲ.ಮಹಾಘನವಪ್ಪ ಲಿಂಗವ ಒಂದನುವಿನಲ್ಲಿ ತಂದಿರಿಸಿದ ಆತನಮನವೆ ಪ್ರಸಾದ ಕಾಣಾ! ರಾಮನಾಥ.
ಮರನೊಳಗಣ ಮಂದಾಗ್ನಿಯ ಉರಿಯದಂತಿರಿಸಿದೆನೊರೆವಾಲೊಳಗೆ ತುಪ್ಪವ ಕಂಪಿಲ್ಲದಂತಿರಿಸಿದೆಶರೀರದೊಳಗಾತ್ಮನನಾರು ಕಾಣದಂತಿರಿಸಿದೆನೀ ಬೆರಸುವ ಭೇದಕ್ಕೆ ಬೆರಗಾದೆನಯ್ಯ!ರಾಮನಾಥ.
ಮುಂಡೆಗೆ ಮುಡಿಕಟ್ಟೇಕೊ?ಗುಂಡಂಗೇಕೊ ಗುರುಪದ ಭಕ್ತಿ?ಚಂಡಿಕೆಯ ತಲೆಯ ಚಾಂಡಾಲಂಗೆಅಖಂಡಿತ ಲಿಂಗದ ಅನುವೇಕೆ? ಹೇಳ! ರಾಮನಾಥ.
ಮೊಲೆ ಮುಡಿ ಬಂದಡೆ ಹೆಣ್ಣೆಂಬರು.ಗಡ್ಡ ಮೀಸೆ ಬಂದಡೆ ಗಂಡೆಂಬರು.ನಡುವೆ ಸುಳಿವ ಆತ್ಮನುಹೆಣ್ಣೂ ಅಲ್ಲ ಗಂಡು ಅಲ್ಲ ಕಾಣಾ! ರಾಮನಾಥ.
ಮೆಳೆಯ ಮೇಲಣ ಕಲ್ಲು ಜಗದೆರೆಯನಾಗಬಲ್ಲುದೆ?ಮೆಳೆ ಶಿವಭಕ್ತನಾಗಬಲ್ಲುದೆ?ನಿಮ್ಮ ತನುಮನಧನವನರಿಯದಿದ್ದಡೆಸದುಭಕ್ತರಹರೆ? ರಾಮನಾಥ.
ಮನಮುಟ್ಟಿ ನೆನವಲ್ಲಿ ತನು ನಿಮ್ಮದಾಯಿತ್ತು.ತನುಮುಟ್ಟಿ ಅಪ್ಪಿ, ಮನಮುಟ್ಟಿ ನೆರದುವನಿತೆಯರ ಕೂಟಕ್ಕೆ ತೆರಪಿಲ್ಲವಾಯಿತ್ತು.ಜನನ ಮರಣದ ಬಾಧೆ ಹರಿಯಿತ್ತು.ಈಶ್ವರ! ನಿಮ್ಮ ಪಾದಸೇವೆಯಿಂದ ಕಾಣಾ!ರಾಮನಾಥ.
ಮಣಿಗಣ ಸೂತ್ರದಂತೆ ತ್ರಿಣೆಯ ನೀನಿಪ್ಪೆಯಯ್ಯ.ಎಣಿಸುವಡೆ ತನ್ನ ಭಿನ್ನ ಆತ್ಮನೊಬ್ಬನೆ.ಅಣುರೇಣು ಮಧ್ಯದಲ್ಲಿ ಗುಣಭರಿತ ನೀನೆಂದುಮಣಿಯುತಿರ್ಪೆನಯ್ಯಾ, ರಾಮನಾಥ.
ಮಾರಿಯ ಪೂಜಿಸಿ, ಮಸಣಕ್ಕೆ ಹೋಗಿಗೋರಿಗೊಳಿಸಿ ಕುರಿಯ ಕೊರಳನೆ ಕೊಯ್ದುಂಬಕ್ರೂರಕರ್ಮಿಗಳನವರ ಶಿವಭಕ್ತರೆನಬಹುದೆ?ಆರೈಯದೆ ಅವನ ಮನೆಯಲುಂಡ ಭಕ್ತಅಘೋರನರಕಕ್ಕಿಳಿವ ಕಾಣಾ! ರಾಮನಾಥ.
ಮಂಡೆಯ ಬೋಳಿಸಿಕೊಂಡುಮಡಿದು ಗೋಸಿಯ ಕಟ್ಟಿದಡೇನು?ಕಂಡಕಂಡವರಿಗೆ ಕಯ್ಯೊಡ್ಡಿ ಬೇಡುವಭಂಡರನೊಲ್ಲನೆಮ್ಮ ರಾಮನಾಥ.
ಮಡದಿಯ ಪ್ರಾಣಕ್ಕೆ ಮೊಲೆ ಮುಡಿ ಇದ್ದಿತ್ತೆ?ಒಡೆಯನ ಪ್ರಾಣಕ್ಕೆ ಇದ್ದಿತ್ತೆ ಯಜ್ಞೋಪವೀತ?ಕಡೆಯಲ್ಲಿದ್ದ ಅಂತ್ಯಜನು ಹಿಡಿದಿದ್ದನೆ ಹಿಡಿಗೋಲ?ನೀ ತೊಡಕಿಕ್ಕಿದ ತೊಡಕನೀ ಲೋಕದ ಜಡರೆತ್ತ ಬಲ್ಲರೈ ರಾಮನಾಥ.