ಅಥವಾ
(15) (5) (6) (2) (4) (1) (0) (0) (9) (0) (0) (12) (0) (0) ಅಂ (3) ಅಃ (3) (18) (1) (7) (2) (0) (1) (0) (4) (0) (0) (0) (0) (0) (0) (0) (6) (0) (4) (2) (10) (2) (0) (5) (6) (14) (0) (0) (0) (0) (8) (5) (0) (10) (17) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಸಾಗರದೊಳಗಣ ಕಿಚ್ಚಿನ ಸಾಕಾರದಂತೆ, ಸಸಿಯೊಳಗಣ ಫಲಪುಷ್ಪ ರುಚಿಯ ಪರಿಮಳದಂತೆ, ಮನವ ಮರೆಯ ಮಾತು ನೆನಹಿನಲ್ಲಿ ಅರಿದು, ನಾಲಗೆಯ ನುಡಿವಾಗಲಲ್ಲದೆ ಕಾಣಬಾರದು, ಕೇಳಬಾರದು ಒಂದಂಗದೊಳಗಡಗಿದ ನೂರೊಂದರ ಪರಿ,ರಾಮನಾಥ.
--------------
ಜೇಡರ ದಾಸಿಮಯ್ಯ
ಸತಿಪತಿಗಳೊಂದಾದ ಭಕ್ತಿ ಹಿತವಾಗಿಪ್ಪುದು ಶಿವಂಗೆ. ಸತಿಪತಿಗಳೊಂದಾಗದವನ ಭಕ್ತಿ ಅಮೃತದೊಳು ವಿಷ ಬೆರೆದಂತೆ ಕಾಣಾ! ರಾಮನಾಥ.
--------------
ಜೇಡರ ದಾಸಿಮಯ್ಯ
ಸಾಸಿವೆಯಷ್ಟು ಭಕ್ತಿಯಳ್ಳನ್ನಕ್ಕ ವೇಶಿಯ ಮುಟ್ಟಿದಡೆ ಹೊಲೆಯರ ಮನೆಯ ಮುರುಹ ಹೊರಗಿರಿಸಿದಡೆ ಹಂದಿ ಬಂದು ಮೂಸಿ ಮೇದಂತೆ ಕಾಣಾ! ರಾಮನಾಥ.
--------------
ಜೇಡರ ದಾಸಿಮಯ್ಯ
ಸೊಡರು ಕೆಟ್ಟಡೆ ದೃಷ್ಟಿಯಡಗಿಪ್ಪ ಭೇದವನು ಒಡಲು ಕೆಟ್ಟಡೆ ಜೀವವಾವೆಡೆಯಲಡಗೂದು? ಈ ಮರೆಯೆಡೆಯಣ ಭೇದವ ಭೇದಿಸಬಲ್ಲಡೆ ಪೊಡವಿಗೆ ಗುರುವಪ್ಪನೆಂದು ಮುಡಿಗೆಯನಿಕ್ಕಿದೆ ಪರಸಮಯಕ್ಕೆಂದು, ರಾಮನಾಥ.
--------------
ಜೇಡರ ದಾಸಿಮಯ್ಯ
ಸತಿಯರ ಸಂಗವನು ಅತಿಶಯ ಗ್ರಾಸವನು ಪೃಥ್ವಿಗೀಶ್ವರನ ಪೂಜೆಯನು ಅರಿವುಳ್ಳಡೆ ಹೆರರ ಕೈಯಿಂದ ಮಾಡಿಸುವರೆ!
--------------
ಜೇಡರ ದಾಸಿಮಯ್ಯ
ಸರ್ಪನೂ ಕೂರ್ಮನೂ ದಿಕ್ಕರಿಗೆಳೆಂಟೂ ಭೂಮಿಯ ಹೊತ್ತಿರ್ದಪರೆಂದು ಅನಿಶಾ ಹೊತ್ತಿಪ್ಪವರಿಗೆ ಅತ್ತಲಾಧಾರ ಇತ್ತಲಾಧಾರ. ಉತ್ತರಗುಡುವವರಿಗೆ ಇಕ್ಕುವೆ ಮುಂಡಿಗೆಯ. ಎತ್ತುವರುಳ್ಳಡೆ ತೋರಿರೈ, ರಾಮನಾಥ.
--------------
ಜೇಡರ ದಾಸಿಮಯ್ಯ
ಸತ್ಯದ ನುಡಿ ತೀರ್ಥ, ಭಕ್ತಿಯ ನಡೆ ತೀರ್ಥ, ಮುಕ್ತಿಯ ಪ್ರಸಂಗ ಉಳ್ಳಡೆ ತೀರ್ಥ, ಹರಿವ ನದಿ ಎತ್ತಣಾ ತೀರ್ಥ! ರಾಮನಾಥ.
--------------
ಜೇಡರ ದಾಸಿಮಯ್ಯ
ಸಣ್ಣ ನನೆಯೊಳಗಣ ಪರಿಮಳವ ಹೊರಸೂಸಿ ಇದಿರಿಂಗೆ ಅರುಹಿಸಬಲ್ಲುದೆ ವಾಯು? ಕೊಡಗೂಸಿನೊಳಗಣ ಮೊಲೆ ಮುಡಿಯ ಹಡೆದ ತಾಯಿ-ತಂದೆಗಳೆಂದಡೆ ಕಾಣಿಸಿಕೊಡಬಲ್ಲರೆ ಕಾಬವರ ಕಣ್ಣಿಗೆ? ಪಕ್ವಕ್ಕಲ್ಲದೆ ಪರಿಣಾಮ ಕಾಣಿಸದು ಕಾಣಾ!ರಾಮನಾಥ.
--------------
ಜೇಡರ ದಾಸಿಮಯ್ಯ
ಸ್ವಸ್ತಿಕಾಸನದಲ್ಲಿದ್ದು ಅತ್ತಿತ್ತ ಚಲಿಸದೆ ನೆಟ್ಟೆಲುವ ನೆಟ್ಟನೆ ಮಾಡಿ, ಅಧೋವಾಯುವನೂಧ್ರ್ವಮುಖಕ್ಕೆ ತಂದು, ಕಂಠ ಸಂಕೋಚದಿಂದ ಊಧ್ರ್ವವಾಯುವ ನಿಲ್ಲೆಂದು ನಿಲಿಸಿ, ಮನವ ತೊಡರಿಸಿ, ಉನ್ಮನಿಯ ಸ್ಥಾನದಲ್ಲಿ ಬಂಧವನವಂ ಮಾಡಿ, ಅಂತರ್ಬಾಹ್ಯ ವ್ಯಾಪಾರವಳಿದು ನಿಂದುದೆ ಯೋಗ,ರಾಮನಾಥ.
--------------
ಜೇಡರ ದಾಸಿಮಯ್ಯ
ಸರ್ವಜ್ಞಾನಿಗಳಾಗಿ ಅಚ್ಚುಗ ಬಡುವಡೆ, ಹಬ್ಬಿದ ಪಾಪದ ಫಲ ಉಂಬಡೆ, ಒಬ್ಬಳ್ಳವನೆ ಬಿತ್ತಿ ಆ ಒಬ್ಬಳ್ಳವನೆ ಬೆಳೆವಡೆ, ಕಬ್ಬುನ ಹುಳಿವಡೆ ಇನ್ನೇವೆ, ರಾಮನಾಥ.
--------------
ಜೇಡರ ದಾಸಿಮಯ್ಯ