ಇಪ್ಪೆಯ ಹೂವನನುಗೊಳಿಸಲು ಇಪ್ಪೆ ಹಿಪ್ಪೆಯಾಯಿತ್ತು.
ಸರ್ಪನ ಶಿರ ಕಂಠದಲ್ಲಿ ಮೂಗುತಿಯ ಸರಗೊಳಿಸಿದೆನಯ್ಯಾ.
ನಾವಲ್ಲಿದ್ದಡೇನು, ನಾವಿಲ್ಲಿದ್ದಡೇನು ?
ನಮ್ಮ ನಮ್ಮ ಸಂಸರ್ಗದಲ್ಲಿ ನಿರುಪಮಾಕಾರಮೂರ್ತಿಗಳಾಗಿ
ನಿರವಯವನೈದಿ ನಿಜಸುಖಿಗಳಾದೆವು.
ಬಸವನಲ್ಲಿ ಎಮಗೆ ತೆರಪಿಲ್ಲವಯ್ಯಾ, ಅಪ್ಪಣ್ಣಾ,
ಭಾವಶೂನ್ಯಳು ನಾನು ಸಂಗಯ್ಯಾ.