ಅಥವಾ
(214) (139) (48) (7) (13) (3) (0) (0) (105) (12) (12) (37) (5) (0) ಅಂ (44) ಅಃ (44) (163) (1) (60) (9) (0) (12) (0) (64) (0) (0) (0) (0) (0) (0) (0) (104) (0) (49) (10) (128) (74) (5) (68) (61) (158) (17) (10) (0) (47) (55) (61) (4) (129) (75) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅಂಗೈಯೊಳಗಣ ಲಿಂಗಮ್ರ್ಕೂಯ ಕಂಗಳಲ್ಲಿಂಗಗೊಟ್ಟಡೆ, ತಿಂಗಳ ಸೂಡನಾದೆ ನೋಡಾ ಅಯ್ಯಾ. ಮಂಗಳಮೂರ್ತಿ ಗಂಗಾಜೂಟಾಂಗಮಯ ಕಪಿಲಸಿದ್ಧ ಮಲ್ಲಿಕಾರ್ಜುನಂಗ ಬೇರೆಂದರಿಯಲ್ಲ ನೋಡಾ, ನಿಜದ ನಿರ್ವಯಲಲ್ಲಯ್ಯನೆ.
--------------
ಸಿದ್ಧರಾಮೇಶ್ವರ
ಅಪ್ಪಿನಲಾದ ಘಟವು ಅರ್ಪಿ[ತದ]ಲೆ ಲೀಯ, ಇಪ್ಪತ್ತೈದೆಂದು ಕುರುಹಿಡುವೆ ಏಕೆಲೆ ಮನುಜಾ. ತಾ ಹುಟ್ಟಿ ತಮ್ಮವ್ವೆ ಬಂಜೆಯೆಂಬ ನ್ಯಾಯದಲ್ಲಿ ಬೇರೆ ವಿವರಿಸಿ ತೋರಬಲ್ಲಡದು ಯೋಗ. ಅಭ್ಯಾಸಸಮಾದ್ಥಿಯಿಂ ಅನುಭವಿಗಳೆಲ್ಲರಿಗೆ ಬಯಲ ಸಮಾದ್ಥಿಯಾಗದಯ್ಯಾ ಕಪಿಲಸಿದ್ಧಮಲ್ಲಿಕಾರ್ಜುನ
--------------
ಸಿದ್ಧರಾಮೇಶ್ವರ
ಅಯ್ಯಾ ನಿನ್ನ ಸಂಗದಲ್ಲಿ ಸಂಗಿಯಾದೆ ಅಯ್ಯಾ, ನಿನ್ನ ಸಂಗದಿಂದ ಕಾಕುತನವ ಬಿಟ್ಟು ಬೇಕಾದ ಹಾಂಗೆಯಾದೆ. ಅಯ್ಯಾ, ನಿನ್ನ ಒಲವು ಅನೇಕ ಪ್ರಕಾರದಲ್ಲಿ ಪಸರಿ ಪರ್ಬಿತ್ತು ಎನ್ನ ಸರ್ವಾಂಗದಲ್ಲಿ. ನಿನ್ನವರೊಲುಮೆಯ ಆನಂದವನು ಎನಗೆ ಕರುಣಿಸು ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ ನಿಮ್ಮ ಧರ್ಮ.
--------------
ಸಿದ್ಧರಾಮೇಶ್ವರ
ಅನಿರ್ವಾಚ್ಯವೆ ವಾಚ್ಯವಾದಲ್ಲಿ ಹಕಾರವೆನಿಸಿತ್ತು; ಆ ಹಕಾರವೆ [ನಿರಂಜನ] ಪ್ರಣವವೆನಿಸಿತ್ತು; ಆ ನಿರಂಜನ ಪ್ರಣವವೆ ಜಂಗಮಾಕೃತಿ, ಜಗದಾಧಾರ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಅಂಗೈಯಲ್ಲಿ ಪೂಜಿಸಿದ ಫಲ ಲಿಂಗಯ್ಯ ಕೊಡನೆಂದು ಮರುಗರಾ ಮನವೆ. ಅಂಗೈಯಲ್ಲಿ ಫಲ ಅಂಗ ಲಿಂಗ ನೋಡಿದಂತೆ ನೋಡಾ ಮನವೆ. ಅಂಗೈಯ ಫಲ ಲಿಂಗಯ್ಯನಾಗರೆ ಪೂಜಿಸುವರೆ ಪ್ರಮಥರು? ನೋಡಾ ಮನವೆ. ಕಪಿಲಸಿದ್ಧಮಲ್ಲಿಕಾರ್ಜುನನ ಪೂಜಿಸಿ ಪೂಜಿಸಿ ಬದುಕು ಮನವೆ.
--------------
ಸಿದ್ಧರಾಮೇಶ್ವರ
ಅಕಾರಪ್ರಣವದಿಂದ ಸ್ಥೂಲದೇಹ ದಗ್ಧವಾಯಿತ್ತು; ಉಕಾರಪ್ರಣವದಿಂದ ಸೂಕ್ಷ್ಮದೇಹ ನಿರ್ಮಲವಾಯಿತ್ತು; ಮಕಾರಪ್ರಣವದಿಂದ ಕಾರಣದೇಹ ಕರ್ಮ [ಬೀಜ]ವಳಿಯಿತ್ತು. ಅಕಾರದಲ್ಲಿ ಜಾಗೃತಿ, ಉಕಾರದಲ್ಲಿ ಸ್ವಪ್ನದಲ್ಲಿ ಮಕಾರದಲ್ಲಿ ಸುಷಪ್ತ್ವಿ.] [ಜಾಗ್ರ] ಸ್ವಪ್ನದಲ್ಲಿದ್ದ ರೂಹು ಸುಷುಪ್ತಿಯಲ್ಲಿಲ್ಲ. ತ್ರಿವಿಧಾವಸ್ಥೆಯಲ್ಲೊಂದಾಗದ ಮಾತ್ರ ಪ್ರಾಣಲಿಂಗಿ ಆತನಲ್ಲ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಅಂಗೋದಕಂದ ಅಂಗರಕ್ಷಣಂಗಳ ಮಾಡುವೆ; ಲಿಂಗೋದಕಂದ ಸರ್ವಪವಿತ್ರವ ಮಾಡುವೆ; ಪ್ರಸಾದೋದಕಂದ ಪ್ರಾಣನ ನೆಲೆಯನರಿವೆ ಇಂತೀ ತ್ರಿವಿಧೋದಕಂದ ಶುದ್ಧನಹೆ, ಸಿದ್ಧನಹೆ, ಪ್ರಸಿದ್ಧನಹೆ, ಕಪಿಲಸಿದ್ಧಮಲ್ಲಿಕಾರ್ಜುನ ತಾನಹೆ
--------------
ಸಿದ್ಧರಾಮೇಶ್ವರ
ಅನುಭವವೆಂಬುದದು ಅನುಭಾವಿಕಗಲ್ಲದೆ ಹೊತ್ತಗೆಯ್ಲಲ್ಲ ನೋಡಾ ಮಾನವಾ. ರತ್ನಂಗಳು ಸಮುದ್ರದಲ್ಲಲ್ಲದೆ ಕೀಳು ಕುಲ್ಯಾಗಳ್ಲಲ್ಲ ನೋಡಾ, ಮಾನವಾ. ನವಮಂತ್ರಂಗಳ ಮರ್ಮವದು ಗುರುಮುಖದಲ್ಲಲ್ಲದೆ, ಬರಿಯ ಪುರಾಣಂಗಳ್ಲಲ್ಲ ನೋಡಾ, ಮಾನವಾ. ಇಂನ ಪ್ರಮಥರು ಮುಂದೆ ಬಂದಹರೆಂಬ ಭ್ರಮೆ ಬೇಡ ನೋಡಾ, ಮಾನವಾ. ನೀನಂಂಗೆನ್ನದೆ ಕಪಿಲಸಿದ್ಧಮಲ್ಲಿಕಾರ್ಜುನನ ನಂಬು ನೋಡಾ, ಮಾನವಾ.
--------------
ಸಿದ್ಧರಾಮೇಶ್ವರ
ಅಯ್ಯಾ, ನಿನ್ನ ವಿಕಳತೆಯಿಂದ ಹಾಹಾ! ಭೂತನಾದೆ. ಅಯ್ಯಾ, ನಿನ್ನ ನೆನಹಿನ ಧ್ಯಾನದಿಂದ ಮೂರ್ಛೆಹೋದೆ. ಅಯ್ಯಾ, ನಿನ್ನ ಭಕ್ತಿತ್ರಯದಿಂದ ಶುದ್ಧ ಮುಕ್ತನಾದೆನಯ್ಯಾ. ತಾತ್ಪರ್ಯದಲ್ಲಿ ಶುದ್ಧಾತ್ಮನಾಗಿ ನಿನ್ನ ಭಕ್ತಿರತಿಯಲ್ಲಿ ಸಂಪನ್ನನಾದೆ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಅಯ್ಯಾ, ಮನದ ರಜದ ಮಣ್ಣ ಕಳೆದು ದಯಾ ಶಾಂತಿಯುದಕವ ತೆಗೆವೆನಯ್ಯಾ, ಜಳಕವ ಮಾಡಿ ಯೋಗಕಂಪನಿಕ್ಕಿ ಹೊದೆವೆನಯ್ಯಾ, ಅದನೊಂದೆಡೆಗೆ ತಂದು ಬಟ್ಟಗಾಣದಲ್ಲಿಕ್ಕಿ ಹಿಳಿವೆನಯ್ಯಾ. ಹಿಳಿದ ರಸದ ಕಂಪ ಕೊಡುವ ಒಡೆಯ ನೀನೆ, ಕಪಿಲಸಿದ್ಧಮ್ಲನಾಥಯ್ಯಾ.
--------------
ಸಿದ್ಧರಾಮೇಶ್ವರ
ಅಂಗವರಿತು ನಿಂದವಂಗೆ ಜಗದ ಹಂಗಿನಲ್ಲಿ ಸಿಕ್ಕಿ ಜಂಗುಳಿಗಳ ಕೂಡದೆ ಲಿಂಗವೇ ಅಂಗವಾಗಿ ನಿಂದುದು ಕಪಿಲಸಿದ್ಧಮಲ್ಲಿಕಾರ್ಜುನಂಗವು ತಾನಾದುದ
--------------
ಸಿದ್ಧರಾಮೇಶ್ವರ
ಅರಿದೆನು, ನಾನೇನ ಅರಿವಡೆ ಶೂನ್ಯನೆ ತೆರಹಿಲ್ಲದೊಂದು ಶುದ್ಧಘನತರವನು ನೆನಹಿನ ಮನೆಯಾಗಿ ಅವನ ನೋಟವೆ ಕೂಟ ಅವನೆನ್ನ ಕಾಯಕ್ಕೆ ಪ್ರಾಣನಾಗಿ ಪ್ರಾಣಪ್ರತಿಷ್ಠೆಯನು ತಾನು ಮಾಡುವ ರೂಪ ಶೂನ್ಯಕಾಯರು ಕಾಣಬಲ್ಲರೆ ಕಪಿಲಸಿದ್ಧಮಲ್ಲೇಶ್ವರನ?
--------------
ಸಿದ್ಧರಾಮೇಶ್ವರ
ಅರುಹು ತಲೆದೋರಿದಲ್ಲಿ ವಿಷ ಬೆಲ್ಲವು ಇಕ್ಷುರಸವಾಯಿತ್ತು. ಅರುಹು ತಲೆದೋರಿದಲ್ಲಿ ಅಂಬರ ಅವಯವಕ್ಕೆ ಹೊಂದಿತ್ತಯ್ಯಾ. ಅರುಹು ತಲೆದೋರಿದಲ್ಲಿ ಕಪಿಲಸಿದ್ಧಮಲ್ಲಿಕಾರ್ಜುನನ ಕುರುಹು ನಾನೆಂದು ತಿಳಿಯಬಂದಿತ್ತಯ್ಯಾ ಯೋಗಿನಾಥಾ.
--------------
ಸಿದ್ಧರಾಮೇಶ್ವರ
ಅಯ್ಯಾ, ನಾನೆಂಬುದನು ಒಯ್ಯನೆ ಒಯ್ಯನೆ ಮರೆದೆ. ಅಯ್ಯಾ, ನೀ ಗುರುರಾಗಿ ಕರುಣದಿಂದ ಒಯ್ಯನೆ ಬಂದೆನ್ನ `ಅಯ್ಯೊ ಮಗನೆ' ಎಂದು ಕೈವಿಡಿದು ತೆಗೆದೆನ್ನ ಸಲಹಿರಿ ಕರುಣದಿಂದ. ಆನೀಗ ನಿಮ್ಮ ಅವ್ಯಯದ ಪದಕಾನು ಮೂಲನಾದೆ ಕಪಿಲಸಿದ್ಧಮಲ್ಲಿಕಾರ್ಜುನ
--------------
ಸಿದ್ಧರಾಮೇಶ್ವರ
ಅರ್ಪಿಸೇನೆಂದೆಂಬೆ? ಅರ್ಪಿತವೇತಕ್ಕೆ? ಅರ್ಪಿತವಾರಿಗೆ? ಅರ್ಪಿತದ ಪರಿಯೆಂತುಟಯ್ಯ? ಅರ್ಪಿತದ ಮುಖವ ಬಲ್ಲವರಾರು? ಚೆನ್ನಬಸವಣ್ಣನಲ್ಲದೆ. ಅರ್ಪಿತವುಳ್ಳಡೆ ಕಲ್ಪಿತವೇಕಯ್ಯ ಕಾಡಿ[ಹ]ವು? ಅರ್ಪಿಸುವ ಭೇದವ ಚೆನ್ನಬಸವಣ್ಣ ಬಲ್ಲ. ಕಪಿಲಸಿದ್ಧಮಲ್ಲಿಕಾರ್ಜುನಯ್ಯ ಅರ್ಪಿಸಿ ಸುಖಿ ಚೆನ್ನಬಸವಣ್ಣ, ಸಾವಧಾನಿ ನಿರಂತರಂ
--------------
ಸಿದ್ಧರಾಮೇಶ್ವರ
ಅಪರಸ್ಥಾನದಲ್ಲಿ ಆನಂದಬ್ರಹ್ಮವ ಭೇದ್ಥಿಸುವ ಪರಿಯೆಂತೋ? ಪೂರ್ವದಕ್ಷಿಣವೆಂಬ ದಿಕ್ಕುಗಳಲ್ಲಿ ಸಮನಿಸುವ ಆತ್ಮ ಅಂತರ್ಯಾತ್ಮ ಭೂತಾತ್ಮ ಸರ್ವಾತ್ಮ ಪರಮಾತ್ಮವೆಂಬ ಆತ್ಮ ಪಂಚಕಗಳೆಂಬವನು ಹಿಂದು ಮುಂದರಿಯದೆ, ಮುಂದು ಹಿಂದೆಂದರಿಯದೆ ಸಂಯೋಗದಲಿಕ್ಕಿ ಪ್ರಯೋಗಿಸಿಹೆನೆಂಬ ಯೋಗಿ ಕೇಳಾ; ಪೂರ್ವವಾವುದು? ದಕ್ಷಿಣವಾವುದು? ಪೂರ್ವದಲ್ಲಿ ದಿವಾಕರರು ಹನ್ನೆರಡರ ಆನಂದ ಪ್ರಭೆಯಲ್ಲಿ ಭವಿಸಲ್ಪಟ್ಟ ನಯನದ ಕಿರಣದ ಕೊನೆಯ ಮೊನೆಯ ಮೇಲೆ ದಿವ್ಯಾಂಗಯೋಗ ಸಮನಿಸುವ ಪರಿಯೆಂತು ಹೇಳಾ? ದಕ್ಷಿಣದಲ್ಲಿ ದಿಗ್ವಳಯ ಹದಿನಾಲ್ಕರ ವ್ಯಾಪ್ತಿಯ ಸಂಚರಿಸದೆ ಸಮನಿಸುವ ಕೋಹಂ ತತ್ವಾರ್ಥದಿಂದತ್ತ ನಾಹಂ ಪರಮಾರ್ಥದಿಂದತ್ತ ಸೋಹಂ ಸದ್ಭಕ್ತಿಯ ಮುಟ್ಟಿದ ದಾಸೋಹ ನಿನ್ನಲ್ಲಿ ಸಂಯೋಗವ ಎಂತು ಮಾಡುವೆ ಹೇಳಾ? ಯೋಗಿ ನೀನು ಯೋಗಕ್ಕೆ ಹರಿವಾವುದು? ಯೋಗಕ್ಕೆ ನೆಲೆ ಯಾವುದು? ಮತ್ತೆ ಪೆರತನರಿಯದೆ ಶಾಶ್ವತವು ನೀನೆ ನೀನೆ ಎಂದೆನ್ನು, ಸಕಲನಿಷ್ಕಲದೊಳಗೆ ನೀನೆ ನೀನೆಯೆನ್ನಾ ತಾತ್ಪರ್ಯವರ್ಮ ಕಳೆಗಳೊಳಗೆ ನೀನೆ ನೀನೆಯೆಂದೆನ್ನಾ. ಓಂ ಗ್ರಾಂ ಘ್ರೀಂ ಘ್ರೂಂ ಎಂಬಕ್ಷರ ಚತುಷ್ಟಯದ ಮೇಲೆ ಶುದ್ಧ ಸಂಯೋಗವೆಂಬ ಗದ್ದುಗೆಯಿಕ್ಕಿ ಅಕ್ಷರದ್ವಯದ ಆನಂದರಾಜ ಕುಳ್ಳಿದ್ದೆ ೈದಾನೆ ಜಪಿಸುತ. ಆ ಜಪವು ನಿತ್ಯ, ಅದು ಮುಕ್ತಿ, ಅದು ಸತ್ಯ. ಅದು ಪದಕ್ಕೆ ಫಲಕ್ಕೆ ಭವಕ್ಕೆ ದೂರ, ವರ್ಣಾಶ್ರಯವ ಮೀರಿತ್ತು ತತ್ವ ಪ್ರಾಪಂಚಿಕವ ಜರಿಯಿತ್ತು. ಮಂತ್ರಂಗಳ ಕೈಯಿಂದ ವಂದಿಸಿಕೊಂಡಿತ್ತು. ಮೂರರಲ್ಲಿ ಭವಿಸಿತ್ತು, ಆರರಲ್ಲಿ ಫಲವಾಯಿತ್ತು. ಮೂವತ್ತಾರರಲ್ಲಿ ಹಣಿತಿತ್ತು ಯೋಗಿಗಳ ನಡೆಸಿತ್ತು ತತ್ವಮಸಿ ಸಂಗಮವಾಯಿತ್ತು. ಕಪಿಲಸಿದ್ಧಮಲ್ಲಿಕಾರ್ಜುನಯ್ಯನೆಂಬ ನಿತ್ಯದಲ್ಲಿ ನಿತ್ಯವಾಯಿತ್ತು.
--------------
ಸಿದ್ಧರಾಮೇಶ್ವರ
ಅಯ್ಯಾ, ಕಾಮ ಕಾಡಿತ್ತು ಕ್ರೋಧ ಕೊಂದಿತ್ತು ಆಮಿಷ ತಾಮಸಂಗಳೆಳವುತ್ತಿವೆ. ಕರುಣಮಾಡಾ ಹರಹರಾ ಮಹಾದೇವ ಕರುಣಮಾಡಾ ಶಿವಶಿವ ಮಹಾದೇವ ಕರುಣಮಾಡಾ ದೆಸೆಗೆಟ್ಟ ಪಶುವಿಂಗೊಮ್ಮೆ ಕರುಣಮಾಡಾ ವಶವಲ್ಲದ ಪಶುವಿಂಗೊಮ್ಮೆ ಕರುಣಮಾಡಾ ನೀವಲ್ಲದೆ ಬಲ್ಲವರಿಲ್ಲ ಕರುಣಮಾಡಾ ಅನ್ಯವ ನಾನರಿಯೆ ನಿಮ್ಮ ಪಾದವನುರೆ ಮಚ್ಚಿದೆ, ಎನ್ನ ಕಪಿಲಸಿದ್ಧಮಲ್ಲಿಕಾರ್ಜುನಯ್ಯ ತಂದೆ.
--------------
ಸಿದ್ಧರಾಮೇಶ್ವರ
ಅರಿವಿನ ಗುಣ ಬಸವಣ್ಣನೊಳಗಡಕವಯ್ಯಾ, ಮರಹಿನ ಜ್ಞಾನ ಚೆನ್ನಬಸವಣ್ಣನೊಳಗಡಕವಯ್ಯಾ. ಅರಿವು ಮರವೆ ತಾನೆ ಶಿವರೂಪುಪ್ರಭೆ ಪ್ರಭುಲಿಂಗಮೂರ್ತಿಯಾಯಿತ್ತು ಕಪಿಲಸಿದ್ಧಮ್ಲನಾಥಯ್ಯಾ.
--------------
ಸಿದ್ಧರಾಮೇಶ್ವರ
ಅಟ್ಟಿಮುಟ್ಟಿ ಆತುರದಿಂದ ಹಿಡಿದು ಮುಟ್ಟಿ ನಂಬಲರಿಯದ ಕಷ್ಟರನೇನೆಂಬೆನಯ್ಯಾ. ನಿಶ್ಚಯವಿದೆ ಲಿಂಗ; ಸತ್ಯವಿದೆ ಪ್ರಸಾದ; ಪ್ರಸಿದ್ಧವಿದೆ ಜಂಗಮ; ಇನಿತನರಿಯದವರ ಹೊದ್ದಿಸದಿರಯ್ಯ ಎನ್ನತ್ತಲಿ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಅಂಗವಿಸದಿರು ಇನ್ನು ಹಿಂಗಿಹೋಗೆಂದೆನುತ ಮಂಗಳಾತ್ಮಕ ನುಡಿದ ಗುರುಕರುಣದಾ ಅಂಗವಿಸದಿರು ಎಂದನಂಗಹರ ಪ್ರಭುರಾಯ ಬಂದು ನೂಕಿದನೆನ್ನನೇಡಿಸುವ ಮಾಯೆಯನು. ಮಂಗಳಾತ್ಮಕ ಕಪಿಲಸಿದ್ಧಮಲ್ಲೇಶ್ವರನೆ ಲಿಂಗ, ನಿಮ್ಮನು ಅರಿವೆ; ಮಾಯೆಯ ಗೆಲುವೆ ಪ್ರಭುವಿನಂದದಲಿ.
--------------
ಸಿದ್ಧರಾಮೇಶ್ವರ
ಅಯ್ಯಗಳು ರುದ್ರಾಕ್ಷಿಯ ಕೊಟ್ಟ್ಲಲ್ಲಿ ಫಲವಲ್ಲದೆ, ಸುಮ್ಮನೆ ಧರಿಸಿದಲ್ಲಿ ಫಲವಿಲ್ಲ ನೋಡಾ, ಭಕ್ತನು ಪದಾರ್ಥ ನೀಡಿದಲ್ಲಿ ಫಲವಲ್ಲದೆ, ಬೇಡಿ ರುಚಿಸಿದಲ್ಲಿ ಫಲವಿಲ್ಲ ನೋಡಾ. ನಿನ್ನರಿವ ನಾನರಿತಲ್ಲಿ ಫಲವಲ್ಲದೆ, ಅರುಹಿಸಿದಲ್ಲಿ ಫಲವಿಲ್ಲ. ಅಹುದೆಂಬುದು ನ್ಕೀ, ಬಲ್ಲೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಅರಿಷಡ್ವರ್ಗಂಗಳಳಿದವ ಶರಣನೆಂಬರು; ಅದೆಂತಯ್ಯಾ? ಕಾಮವದು ಂಗಾರ್ಚನೆಯ್ಲ; ಕ್ರೋಧವದು ಷಣ್ಮತನಾಶದ್ಲ; ಲೋಭವದು ಸಮ್ಯಗ್‍ಜ್ಞಾನದ್ಲ; ಮೋಹವದು ಮುಕ್ತ್ಯಂಗನೆಯ್ಲ; ಮದವದು ್ಲದ್ವಮನದ್ಲ; ಮತ್ಸರವದು ಶಮನದ್ಲ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಅಯ್ಯಾ, ನಿನ್ನ ಕೂಟದ ಸುಖದಲ್ಲಿ ನೀ ನಾನೆಂಬ ಸಂದಳಿದೆ ಅಯ್ಯಾ. ಮೇಲೆ ಬಿದ್ದ ಮಸಿಯನ್ನು ಅರಿಯದೆ ಕೂಟದಲ್ಲಿ ತಾಮಸಿಯಾದೆನಯ್ಯಾ. ಕಾರುಣ್ಯಾಕರನೆ, ಕಪಿಲಸಿದ್ಧಮಲ್ಲಿನಾಥಯ್ಯಾ, ನಿರ್ನಾಮವಾಗಿ ನಿತ್ಯವೆಯ್ದಿದೆ ತಂದೆ
--------------
ಸಿದ್ಧರಾಮೇಶ್ವರ
ಅಂಗದಲ್ಲಿ ಲಿಂಗ! ಆ ಲಿಂಗ ಧ್ಯಾನದಲ್ಲಿಪ್ಪ ಒಡಲೊಡವೆ ಒಡೆಯರಿಗೆಂಬ; ಮಾಡಿ ಮನದಲ್ಲಿ ಹೊಳೆಯದೆ ಬಾಳೆ ಫಲದಂತಿಪ್ಪ ಮಾತಿನ ಬಟ್ಟೆಗೆ ಹೋಗದ; ಸೂತಕಶ್ರುತವ ಕೇಳದ; ಸದ್ಭಕ್ತರ ನೆನವುದೆ ಮಂತ್ರವಯ್ಯ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಅಟ್ಟುಂಬುವುದದು ಜೀವಕ್ಕೆ ಪ್ರಸಾದವಲ್ಲದೆ ನಿರ್ಜೀವಕ್ಕೇನೊ ಅಯ್ಯಾ? ಜೀವಭಾವವಳಿದು, ಜನನಭಾವವಡಗಿ, ಜಗದಂತರ್ಯಾಮಿಯೆಂಬುದು ಮಹಾಪ್ರಸಾದ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ

ಇನ್ನಷ್ಟು ...