ಜ್ಞಾನಿಗಳು ತಾವಾದ ಬಳಿಕ, ಅನ್ಯರ ಸ್ತೋತ್ರಕ್ಕೆ ಒಳಗಾಗಬಾರದು. ಜ್ಞಾನಿಗಳು ತಾವಾದ ಬಳಿಕ, ಗುರುಹಿರಿಯರಿಗಂಜಿ ನಡೆಯಬೇಕು. ಜ್ಞಾನಿಗಳು ತಾವಾದ ಬಳಿಕ, ಅನ್ಯಸ್ತ್ರೀ ತನ್ನ ಮಾತೆಯಂತಿರಬೇಕು ಕಪಿಲಸಿದ್ಧಮಲ್ಲಿಕಾರ್ಜುನ.
ಜ್ಞಾನಿಗಳಾದ ಬಳಿಕ ಪರಿಪೂರ್ಣ ಜಗತ್ತೆಂದರಿಯಬೇಕು. ಜ್ಞಾನಿಗಳಾದ ಬಳಿಕ ಪಾಪವಾಸನೆ ತೊರೆದಿರಬೇಕು. ಜ್ಞಾನಿಗಳಾದ ಬಳಿಕ ಅನ್ಯರ ನುಡಿಗೆ ಒಳಗಾಗಬಾರದು. ಜ್ಞಾನಿಗಳಾದ ಬಳಿಕ ಅನ್ಯರ ನಿಂದೆಗೆ ಒಳಗಾಗಬಾರದು, ಕಪಿಲಸಿದ್ಧಮಲ್ಲಿಕಾರ್ಜುನ.