ಅರೆಯಮೇಲೆ ಮಳೆ ಹೊಯಿದಂತೆ,
ಅರಿವುಳ್ಳವರಲ್ಲಿ ಅಗಮ್ಯವುಂಟೆ ?
ವಾಯು ರೂಪಾದುದುಂಟೆ ?
ಸರ್ವಸಂಬಂಧವ ಅರಿದ ಶರಣನ ಕಣ್ಣಿನಲ್ಲಿಕಂಡವರುಂಟೆ ?
ತಿಪ್ಪೆಯ ಮೇಲಣ ಅರುವೆಯ ಸುಟ್ಟಡೆ ದಗ್ಧವಾದಂತೆ ಇರಬೇಕು.
ಹೀಂಗಿರಬಲ್ಲಡೆ ಅನುಭಾವಿ ಎಂಬೆನಯ್ಯಾ,
ಅಭೇದ್ಯರೆಂಬೆನಯ್ಯಾ, ಅಂಗಲಿಂಗ ಸಂಬಂದ್ಥಿಗಳೆಂಬೆನಯ್ಯಾ.
ಲಿಂಗೈಕ್ಯರೆಂಬೆ ನಿಜವಿರಕ್ತರೆಂಬೆನಯ್ಯಾ.
ಹೀಂಗಲ್ಲದೆ ಆತ್ಮತೇಜಕ್ಕೆ ಹೋರಾಡುವ ಘಾತಕರ ನಿಜವಿರಕ್ತರೆಂಬರೆ ಅಮುಗೇಶ್ವರಾ
?