ಅಥವಾ
(153) (60) (11) (2) (21) (3) (0) (0) (26) (3) (2) (13) (5) (0) ಅಂ (54) ಅಃ (54) (91) (2) (73) (4) (0) (4) (0) (33) (0) (0) (0) (0) (0) (0) (0) (55) (0) (17) (4) (48) (61) (1) (30) (49) (62) (6) (20) (0) (58) (24) (65) (2) (69) (42) (0)

ಅಃ ಪದದಿಂದ ಪ್ರಾರಂಭವಾಗುವ ವಚನಗಳು:

ಅಂಗದ ಮೇಲೊಂದು ಲಿಂಗವು, ಲಿಂಗದ ಮೇಲೊಂದು ಅಂಗವು. ಆವುದು ಘನವೆಂಬೆ ? ಆವುದು ಕಿರಿದೆಂಬೆ ? ತಾಳೋಷ್ಠಸಂಪುಟಕ್ಕೆ ಬಾರದ ಘನ, ಉಭಯಲಿಂಗವಿರಹಿತವಾದ ಶರಣ. ಕೂಡಲಚೆನ್ನಸಂಗಾ ಲಿಂಗೈಕ್ಯವು.
--------------
ಚನ್ನಬಸವಣ್ಣ
ಅಂಧಕನು ಓಡ ಹಿಡಿದು ಸ್ವರೂಪವ ತಾ ನೋಡುವಂತೆ, ಶೈವ ಗುರುವಿನಲ್ಲಿ ಲಿಂಗ ಸಾಹಿತ್ಯವಾದ ಶಿಷ್ಯನ ವಿಧಿಯ ನೋಡಿರೆ ! ಗುರುವಿಂಗೆ ದೂರಾರ್ಚನೆ ಶಿಷ್ಯಂಗೆ ಇಷ್ಟಲಿಂಗಾರ್ಚನೆ, ಗುರು ವಾಯುಪ್ರಾಣಿ, ಶಿಷ್ಯ ಲಿಂಗಪ್ರಾಣಿ, ಗುರು ಭೂತದೇಹಿ, ಶಿಷ್ಯ ಲಿಂಗದೇಹಿ, ಗುರು ಅನರ್ಪಿತಭುಂಜಕ, ಶಿಷ್ಯ ಲಿಂಗಾರ್ಪಿತಭುಂಜಕ, ಗುರು ಅಗ್ನಿದಹನಸಂಪತ್ತು, ಶಿಷ್ಯ ಸಿದ್ಧಸಮಾಧಿಸಂಪತ್ತು, ಎಂತುಂಟು ಹೇಳಿರಣ್ಣಾ ? ``ಜ್ಞಾನಹೀನಗುgõ್ಞ ಪ್ರಾಪ್ತೇ ಶಿಷ್ಯಜ್ಞಾನಂ ನ ಸಿಧ್ಯತಿ ಮೂಲಚ್ಛಿನ್ನೇ ಯಥಾ ವೃಕ್ಷೇ ಕಥಂ ಪುಷ್ಪಂ ಫಲಂ ಭವೇತ್ ಎಂದುದಾಗಿ ಇವರಿಬ್ಬರ ಗುರುಶಿಷ್ಯಸಂಬಂಧಕ್ಕೆ ನರಕ ತಪ್ಪದು ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅಂಗವೆ ಅಮಳೋಕ್ಯ, ಲಿಂಗವೆ ಮುಖಸೆಜ್ಜೆಯಾಗಿ ಆ ಲಿಂಗವೆ ಭುಂಜಗ, ಅಂಗವೆ ನಾಗವತ್ತಿಕೆಯಾದ ಬಳಿಕ ಬೇರರಸಲುಂಟೆ ? ಅಪ್ರತಿಮ ಪ್ರಾಣನಾಥನಾದಬಳಿಕ ಇನ್ನು ಬೇರರಸಲುಂಟೆ ? ಅಂಗಲಿಂಗಸುಸಂಗ ಶರಣರ ಸಂಗದಲ್ಲಿರಿಸಯ್ಯ ಕೂಡಲಚೆನ್ನಸಂಗಮದೇವ.
--------------
ಚನ್ನಬಸವಣ್ಣ
ಅಂಗಾಲಿಂದ ಮೊಕಾಲ ಪರಿಯಂತರ ಬಸವಣ್ಣ ಮೊಳಕಾಲಿಂದ ಕಂಠ ಪರಿಯಂತರ ಚೆನ್ನಬಸವರಾಜದೇವರು ಕಂಠದಿಂದ ಮೇಲೆ ಪ್ರಭುದೇವರು. ಒಂದು ವಸ್ತು ಎರಡಾಯಿತ್ತು, ಎರಡು ವಸ್ತು ಮೂರಾಯಿತ್ತು. ಆ ಮೂರುವಸ್ತುವನು ತಿಳಿದು ನೋಡಿದಡೆ ಕೂಡಲಚೆನ್ನಸಂಗಯ್ಯನಲ್ಲಿ ಒಂದೆಯಾಯಿತ್ತು
--------------
ಚನ್ನಬಸವಣ್ಣ
ಅಂಗದ ಮೇಲೆ ಲಿಂಗಸಾಹಿತ್ಯವನುಳ್ಳ ಭಕ್ತಾಂಗನೆಯರು ತಮ್ಮ ಲಿಂಗಶರೀರಂಗ? ಮಧ್ಯದಲ್ಲಿ ಹರಭಕ್ತಿಗೆ ಹೊರಗಾದ ಅಸು[ರಾಂಶಿ] ಕವಪ್ಪ ಹಸುರು ಹಚ್ಚೆಗಳೆಂಬ ಪತಿತ ಲೇಖನ ಇವಾದಿಯಾದ ಅನ್ಯ ಚಿಹ್ನೆಗಳನು ಅಂಕಿತಧಾರಣ ಲೇಖನಂಗ? ಮಾಡಿಕೊಂಡು ಮತ್ತೆ ತಾವು ಲಿಂಗವನರ್ಚಿಸಿ ಭಕ್ತರಾದೆವೆಂಬ ಈ ಭಂಗಮಾರಿ ಹೊಲೆಜಂಗುಳಿಗಳಿಗೆ ಉಪದೇಶವ ಕೊಟ್ಟ ಗುರು, ಪ್ರಸಾದ ನೀಡುವ ಜಂಗಮ, ಅವರಗೊಡಗೂಡಿಕೊಂಡು ನಡೆವ ಭಕ್ತತತಿ ಈ ಚತುರ್ವಿಧರು ಶ್ವಪಚಗೃಹದ ಶ್ವಾನಯೋನಿಗಳಲ್ಲಿ ಶತಸಹಸ್ರ ವೇಳೆ ಬಂದು ನರಕವಿಪ್ಪತ್ತೆಂಟುಕೋಟಿಯನೈದುವರು, ಅದೆಂತೆಂದೊಡೆ: ``ಭಕ್ತನಾರೀ ಸ್ವಯಾಂಗೇಷು ಪತಿತಾದ್ಯನ್ಯ ಚಿಹ್ನೆಯೇತ್ ಲೇಖನಾಂಕಂ ಯದಿ ಕೃತ್ವಾ ತೇ[s]ಪಿ ಸ್ತ್ರೀ ಪತಿತ ಸ್ತ್ರೀಣಾಂ ತಸ್ಯೋಪದೇಶಶೇಷಂಚ ದತ್ವಾಶ್ಚೈ ಗುರುಃ ಚರಾನ್ ತಪತ್ಸಂಗ ಸಯೋದ್ಭಕ್ತಾ ತದಾದಿ ಚತುರಾನ್ವಯಂ ಶ್ವಾನಯೋನಿ ಶತಂ ಗತ್ವಾ ಚಾಂಡಾಲಗೃಹಮಾಚರೇತ್ ಅಷ್ಟವಿಂಶತಿಕೋಟ್ಯಸ್ತು ನರಕಂ ಯಾತಿ ಸಧ್ರುವಂ ಇಂತೆಂದುದಾಗಿ ಇದು ಕಾರಣ ಇಂತಪ್ಪ ಅನಾಚಾರಿಗಳನು ಕೂಡಲಚೆನ್ನಸಂಗಯ್ಯ ಅಘೋರ ನರಕದಲ್ಲಿಕ್ಕುವ.
--------------
ಚನ್ನಬಸವಣ್ಣ
ಅಂಗ ಸಂಸಾರವಿರಹದೊಳು ಸವೆದು, ಲಿಂಗವು ಅವಗ್ರಹಿಸಿಕೊಂಡ ಮೃತ್ತಿಕಾ ಪಂಜರದೊಳಗೆ, ಭುಜಂಗ ತಲೆಯೆತ್ತಿ ನೋಡಲು, ಥಳಥಳನೆ ಹೊಳೆವ ಮಾಣಕ್ಯದ ಬೆಳಗುಗಳೆಸೆಯೆ ಸದ್ಯೋಜಾತನ ಜಟಾಮಕುಟವ ಸುತ್ತಿರ್ದ ಫಣೀಂದ್ರನಲ್ಲದೆ ಮತ್ತಾರೂ ಅಲ್ಲವೆಂದು ಶಿಖರವ ಮೊದಲುಗೊಂಡಗುಳಿಸಲು, ಸುತ್ತಿರ್ದ ಫಣಿಸೂತ್ರವ ಕಂಡು ಚಕ್ಕನೆ ಕದವ ತೆರೆಯಲು ದೃಷ್ಟಿದೃಷ್ಟವಾದ (ಅ)ನಿಮಿಷನ ಕರಸ್ಥಲವ ಕಂಡು ಧೃಷ್ಟತನದಲ್ಲಿ ಲಿಂಗವ ತೆಗೆದುಕೊಂಡಡೆ ಸಂದು ಕಳಾಸಂಗಳು ತಪ್ಪಿ ಅಸ್ಥಿಗಳು ಬಳಬಳನುದುರಲು ಆತನ ಬೆರಗು ನಿಮ್ಮ ಹೊಡೆದು ಖ್ಯಾತಿಯಾಯಿತ್ತು ನೋಡಯ್ಯಾ, ಅಲ್ಲಮಪ್ರಭುವೆಂಬ ನಾಮ ನಿಮಗೆ ! ಭಕ್ತಿದಳದುಳದಿಂದ ಬಂದಿಕಾರರಾಗಿ ಬಂದು ಹೊಕ್ಕಡೆ ಬದನೆಯ ಕಾಯಿಗಳು ಬಾಣಲಿಂಗವಾಗವೆ ನಮ್ಮ ಬಸವಣ್ಣನ ದೃಷ್ಟಿತಾಗಲು ? ಇದು ಕಾರಣ-ಕೂಡಲಚೆನ್ನಸಂಗನಲ್ಲಿ ಅನಿಮಿಷಪ್ರಭುವಿಂಗೆ ಬಸವಣ್ಣ ಗುರುವಾದ ಕಾರಣ ನಾನು ನಿಮಗೆ ಚಿಕ್ಕ ತಮ್ಮ ಕೇಳಾ ಪ್ರಭುವೆ.
--------------
ಚನ್ನಬಸವಣ್ಣ
ಅಂಗಪ್ರಸಾದಿ ಆತ್ಮದ್ರೋಹಿ, ಲಿಂಗಪ್ರಸಾದಿ ಲಿಂಗದ್ರೋಹಿ, ಜಂಗಮಪ್ರಸಾದಿ ಜಂಗಮದ್ರೋಹಿ ಎಂದುದಾಗಿ, ಭಾವದಿಂದ ಪ್ರಸಾದವ ಕೊಂಡು, ಅನುಭಾವದಿಂದತಿಗಳೆದಡೆ ಅದು ಪ್ರಸಾದವಲ್ಲ, ಮಾಂಸ. ಇದು ಕಾರಣ_ಕೂಡಲಚೆನ್ನಸಂಗಯ್ಯನಲ್ಲಿ ಪ್ರಸಾದಸಂಪತ್ತ ಬಸವಣ್ಣನೆ ಬಲ್ಲ.
--------------
ಚನ್ನಬಸವಣ್ಣ
ಅಂತರಂಗದ ಅರಿವು, ಬಹಿರಂಗದ ಕ್ರಿಯೆ- ಈ ಉಭಯಸಂಪುಟ ಒಂದಾದ ಶರಣಂಗೆ ಹಿಂಗಿತ್ತು ತನುಸೂತಕ, ಹಿಂಗಿತ್ತು ಮನಸೂತಕ. ಕೂಡಲಚೆನ್ನಸಂಗಯ್ಯಲ್ಲಿ ಸಂಗವಾದುದು ಸರ್ವೇಂದ್ರಿಯ.
--------------
ಚನ್ನಬಸವಣ್ಣ
ಅಂತರಂಗದಲ್ಲಿ ಅರಿವಾದಡೇನಯ್ಯಾ ಬಹಿರಂಗದಲ್ಲಿ ಕ್ರೀ ಇಲ್ಲದನ್ನಕ್ಕ ? ದೇಹವಿಲ್ಲದಿರ್ದಡೆ ಪ್ರಾಣಕ್ಕಾಶ್ರಯವುಂಟೆ ? ಕನ್ನಡಿಯಿಲ್ಲದಿರ್ದಡೆ ತನ್ನ ಮುಖವ ಕಾಣಬಹುದೆ ? ಸಾಕಾರ ನಿರಾಕಾರ ಏಕೋದೇವ, ನಮ್ಮ ಕೂಡಲಚೆನ್ನಸಂಗಯ್ಯನು.
--------------
ಚನ್ನಬಸವಣ್ಣ
ಅಂಗದ ಮೇಲೆ ಲಿಂಗವಿಲ್ಲದನ್ನಕ್ಕರ, ಪ್ರಾಣದಲ್ಲಿ ಲಿಂಗಪರಿಣಾಮವನೆಯ್ದುವ ಪರಿಯೆಂತಯ್ಯಾ ? ಅಂಗತ್ರಯವುಳ್ಳವರು ಲಿಂಗತ್ರಯಸಂಪನ್ನರಾಗಬೇಕು, ಒಂದಂಗ ವಿರಹಿತರಾಗಿಪ್ಪವರುಂಟೆ ? ಕಂಗಳ ನೋಟಕ್ಕೆ ಇಂಬಾವುದು ಹೇಳಾ ಒಂದಂಗ ಬಿಟ್ಟು ಒಂದಂಗ ತೋರದಾಗಿ. ಸಂದುಭೇದವಿಲ್ಲದಿಪ್ಪ ಮಡಿವಾಳನ ನಿಲವು ಕೂಡಲಚೆನ್ನಸಂಗಯ್ಯನಲ್ಲಿ ನಿನಗೆಂತು ಸಾಧ್ಯವಾಯಿತ್ತು ಹೇಳಾ ಸಿದ್ಧರಾಮಯ್ಯ ?
--------------
ಚನ್ನಬಸವಣ್ಣ
ಅಂಗಲಿಂಗಸಂಗವು ಲಿಂಗದಲ್ಲಿ ಆಯತವಯ್ಯಾ. ನಿಮಿಷ ಕರಸ್ಥಲವನಗಲಿದಡೆ ಭಂಗವಯ್ಯಾ. ಕಂಗಳೆ ಕರುವಾಗಿ, ಲಿಂಗವೆ ಗೂಡಾಗಿ, ಲಿಂಗನಿಷ್ಪತ್ತಿಯಲಿಪ್ಪ ಕೂಡಲಚೆನ್ನಸಂಗಾ ನಿಮ್ಮ ಶರಣ.
--------------
ಚನ್ನಬಸವಣ್ಣ
ಅಂಗದ ಮೇಲೆ ಲಿಂಗಸಾಹಿತ್ಯವನುಳ್ಳ ನಿಜವೀರಶೈವ ಸಂಪನ್ನರು ತಮ್ಮ ಸ್ವಯಾಂಗಲಿಂಗವನರ್ಚಿಸುವಲ್ಲಿ ಭವಿಶೈವ ಭಿನ್ನ ಕರ್ಮಿಗಳಂತೆ ಅಂಗನ್ಯಾಸ ಪಂಚಮಶುದ್ಧಿ ಮೊದಲಾದ ಅಶುದ್ಧಭಾವವಪ್ಪ ಕ್ಷುದ್ರ ಕರ್ಮಂಗಳ ಹೊದ್ದಲಾಗದು. ಅದೆಂತೆಂದೊಡೆ:``ನಕಾರಮಾತ್ಮಶುದ್ಧಿಶ್ಚ ಮಕಾರಂ ಸ್ನಾನಶೋಧನಂ ಶಿಕಾರಂ ಲಿಂಗಶುದ್ಧಿಶ್ಚ ವಾಕಾರಂ ದ್ರವ್ಯಶೋಧನಂ ಯಕಾರಂ ಮಂತ್ರಶುದ್ಧಿಶ್ಚ ಪಂಚಶುದ್ಧಿಃ ಪ್ರಕೀರ್ತಿತಾಃ ಕಾಯಶುದ್ಧಿಶ್ಚಾತ್ಮಶುದ್ಧಿಶ್ಚಾಂಗನ್ಯಾಸಕರಸ್ಯ ಚ ಸರ್ವಶುದ್ಧಿರ್ಭವೇ ನಿತ್ಯಂ ಲಿಂಗಧಾರಣಮೇವ ಚ'_ ಇಂತೆಂದುದಾಗಿ. ಅವಲ್ಲದೆ ಅಘ್ರ್ಯ ಪಾದ್ಯ ಆಚಮನಂಗಳು ಮೊದಲಾದ ಉಪಪಾತ್ರಗ?ಲ್ಲಿ ಅಗಣಿತಂಗೆ ಅಳತೆಯ ನೀರನೆರೆದು ಸುಖಮುಖಾರ್ಪಿತಕ್ಕೆ ಸಲುವ ಸುರಸದ್ರವ್ಯಂಗಳಪ್ಪ ಪಂಚಾಮೃತಂಗಳ ನಿರ್ಮಲನಪ್ಪ ನಿಜಲಿಂಗದ ಮಸ್ತಕಕ್ಕೆರೆದು ಜಿಡ್ಡು ಮಾಡಿ ತೊಳೆವ ಅಜ್ಞಾನಿ ನರಕಜೀವಿಗಳ ಮುಖವ ನೋಡಲಾಗದು. ಅದೇನುಕಾರಣವೆಂದಡೆ: ``ಅಘ್ರ್ಯಂ ಪಾದ್ಯಂ ತಥಾಚಮ್ಯಂ ಸ್ನಾನಂ ಪಂಚಾಮೃತಂ ಯದಿ ಲಿಂಗದೇಹೀ ಸ್ವಲಿಂಗೇಷು ಕೃತ್ವಾಚ್ರ್ಯಂತೇ ಬಹಿರ್ನರಾಃ ತೇ ಪಾಷಂಡಾಃ ಕೃತಾಸ್ತೇನ ಕೃತಂಕರ್ಮನರಂ ನಾರಕಂ ಇಂತೆಂದುದಾಗಿ. ಇದು ಕಾರಣ ಸ್ವಯಾಂಗಲಿಂಗದೇಹಿಗಳು ತಮ್ಮ ಲಿಂಗಮಂತ್ರವಿಡಿದು ಬಂದು ಲಿಂಗೋದಕ ಪಾದೋದಕಂಗಳಲ್ಲಿ ತಮ್ಮ ಕರ ಮುಖ ಪದ ಪ್ರಕ್ಷಾಲನವ ಮಾಡಿಕೊಂಬುದೆ ? ಅಂಗಲಿಂಗಿಗಳಿಗೆ ಸ್ವರ್ಯಾಘ್ರ್ಯ ಪಾದ್ಯಾಚಮನವೆಂಬುದನರಿಯದೆ ಕೃತಕರ್ಮ ಭವಿಜೀವಿ ಶೈವಪಾಷಂಡರಂತೆ ಭಿನ್ನವಿಟ್ಟು ಮಾಡಿ ಫಲಪದಂಗಳನೈದಿಹೆನೆಂಬ ನರಕಜೀವಿಗಳನು ಕೂಡಲಚೆನ್ನಸಂಗಯ್ಯ ರವಿ ಸೋಮರುಳ್ಳನ್ನಕ್ಕ ನಾಯಕ ನರಕದಲ್ಲಿಕ್ಕುವ.
--------------
ಚನ್ನಬಸವಣ್ಣ
ಅಂಗ ಲಿಂಗಕ್ಕೆ ಭಾಜನರೆಂಬರು, ಅಂಗ ಲಿಂಗಕ್ಕೆ ಭಾಜನವಲ್ಲ. ಕಾಯಗುಣಂಗಳ ಕಳೆದುಳಿದು ಮಾಯಾಮಲವ ಹಿಂಗಿಸಿ, ಮನವೆಂಬ ಘನಪರಿಯಾಣವ ಬೆಳಗಿ, ಸಕಲ ಇಂದ್ರಿಯಗಳೆಂಬ ಕೆಲವಟ್ಟಲವ£ಳವಡಿಸಿ, ಜ್ಞಾನಪ್ರಕಾಶವೆಂಬ ದೀಪಸ್ತಂಭ ಬೆಳಗಿ, ಷಡಾಧಾರಚಕ್ರವೆಂಬ ಅಡ್ಡಣಿಗೆಯನಿಟ್ಟು, ಸಕಲಕಾರಣಂಗಳೆಂಬ ಮೇಲುಸಾಧನಂಗ? ಹಿಡಿದು, ಸದ್ಭಕ್ತ್ಯಾನಂದವೆಂಬ ಬೋನವ ಬಡಿಸಿ, ವಿನಯ ವಿವೇಕವೆಂಬ ಅಭಿಘಾರವ ಗಡಣಿಸಿ ಪ್ರಸನ್ನ ಪರಿಣಾಮದ ಮಹಾರುಚಿಯೆಂಬ ಚಿಲುಪಾಲಘಟ್ಟಿಯ ತಂದಿಳುಹಿ, ಸುಚಿತ್ತ ಸುಯಿಧಾನದಿಂದ, ನಿಮ್ಮ ಹಸ್ತದ ಅವಧಾನವೆ ಅನುವಾಗಿ, ಬಸವಣ್ಣನೆ ಬೋನ ನಾನೆ ಪದಾರ್ಥವಾಗಿ ನಿಮ್ಮ ಪರಿಯಾಣಕ್ಕೆ ನಿವೇದಿಸಿದೆನು. ಆರೋಗಣೆಯ ಮಾಡಯ್ಯಾ, ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅಂಗಭೋಗವನೆ ಕುಂದಿಸಿ ಪ್ರಸಾದವನು ರುಚಿಸುವೆವೆಂಬ ಲಿಂಗವಂತರೆಲ್ಲ ಅರಿವುಗೇಡಿಗಳಾಗಿ ಹೋದರು. ಅಂಗಭೋಗವೆ ಲಿಂಗಭೋಗ, ಅಂಗಭೋಗವು [ಲಿಂಗಕ್ಕೆ] ಅರ್ಪಿತವಾಗಿ. ಸ್ವಕೀಯ ಪಾಕಸಂಬಂಧಭೋಗೋ ಜಂಗಮವರ್ಜಿತಃ ನಾಸ್ತಿ ಲಿಂಗಾರ್ಚನಂ ಚೈವ ಪ್ರಸಾದೋ ನಿಷ್ಫಲೋ ಭವೇತ್ ಅಂಗಕ್ಕೆ ಬಂದ ರುಚಿ, ಲಿಂಗಕ್ಕೆ ಬಾರದೆ ? ಇದು ಕಾರಣ_ಕೂಡಲಚೆನ್ನಸಂಗಯ್ಯಾ ಪಾಕಸಂಬಂಧಿಗೆ ಪ್ರಸಾದ ದೂರ.
--------------
ಚನ್ನಬಸವಣ್ಣ
ಅಂಗದ ಮೇಲೆ ಆಚಾರಲಿಂಗಸ್ವಾಯತವಾಯಿತ್ತು; ಪ್ರಾಣದ ಮೇಲೆ ಜಂಗಮಲಿಂಗಸ್ವಾಯತವಾಯಿತ್ತು; ಆತ್ಮನ ಮೇಲೆ ಸಮ್ಯಗ್‍ಜ್ಞಾನಲಿಂಗ ಸ್ವಾಯತವಾಯಿತ್ತು. ಇಂತೀ ತ್ರಿವಿಧಕ್ಕೆ ತ್ರಿವಿಧ ಸ್ವಾಯತವಾಗಿಪ್ಪ ನಮ್ಮ ಕೂಡಲಚೆನ್ನಸಂಗನ ಶರಣ ಬಸವಣ್ಣಂಗೆ ನಮೋ ನಮೋ ಎನುತಿರ್ದೆನು.
--------------
ಚನ್ನಬಸವಣ್ಣ
ಅಂಗಲಿಂಗ ಸಂಬಂಧವನುಳ್ಳ ನಿಜವೀರಶೈವ ದೀಕ್ಷೆಯನು ಗುರು ತನ್ನ ಶಿಷ್ಯಂಗೆ ಉಪದೇಶಿಸಿ ಮತ್ತೆ ಆ ಲಿಂಗದಲ್ಲಿ ಮಾಡುವ ಜಪ ಧ್ಯಾನ ಅರ್ಚನೆ ಉಪಚರಿಯ ಅರ್ಪಿತ ಪ್ರಸಾದಭೋಗವಾದಿಯಾದ ವೀರಶೈವರ ಸಾವಧಾನ ಸತ್ಕಿೃಯಾಚಾರಂಗಳ ಹೊಲಬನರಿಯದೆ ಭವಿಶೈವ ಭಿನ್ನಕರ್ಮಿಗಳಂತೆ ಆಂಗನ್ಯಾಸ ಕರನ್ಯಾಸ ಪಂಚಮಶುದ್ಧಿ ಪಂಚಾಮೃತಾಭಿಷೇಕ ಶ್ರೀರುದ್ರ ಪಂಚಬ್ರಹ್ಮಸ್ಥಲಾದಿ ಶೈವಪಂಚಪಂಚಾಕ್ಷರ ಭೂತಾದಿ ದೇವತಾದಿ ಗಣಿಕಾಜನನಿಕರ ಗಣನಾಕೃತ ಪರಿಪೂರಿತ ಅಕ್ಷಮಣಿ ಭವಮಾಲಿಕಾ ಜಪೋಪಚರಿಯಂಗಳಾದಿಯಾದ ಶೈವ ಪಾಷಂಡಕೃತ ಕರ್ಮಮಯವಪ್ಪ ಭವಿಮಾಟಕೂಟಂಗ?ನುಪದೇಶಿಸಿ ಭವಹರನಪ್ಪ ಘನವೀರಶೈವಲಿಂಗದಲ್ಲಿ ಮಾಡಿ ಕೂಡಿ ನಡೆಸಿಹನೆಂಬ ಕಡುಸ್ವಾಮಿದ್ರೋಹಿಗೆ ಆ ನಿಜದೀಕ್ಷೆಗೆಟ್ಟು ಗುರುಶಿಷ್ಯರಿರ್ವರು ನರಕಭಾಜನರಪ್ಪುದು ತಪ್ಪುದು ಅದೆಂತೆಂದೊಡೆ ``ನಾಮಧಾರಕಶಿಷ್ಯಾನಾಂ ನಾಮಧಾರೀ ಗುರುಸ್ತಥಾ ಅಂಧಕೋ[s]ಂಧಕರಾಬದ್ಧೋ ದ್ವಿವಿಧಂ ಪಾತಕಂ ಭವೇತ್' ಎಂದುದಾಗಿ ಇದು ಕಾರಣ ಗುರುಚರಪರಕರ್ತೃವಹ ಅರುಹು ಆಚಾರ ಶರಣಸದ್ಭಾವಸಂಪದವನುಳ್ಳು ಘನಗುರುರೂಪರಪ್ಪ ಪರಮಾರಾಧ್ಯರಲ್ಲಿ ಶರಣುವೊಕ್ಕು ಅಜಡಮತಿಗಳಪ್ಪ ಗುರುಶಿಷ್ಯರಿಬ್ಬರು ತಮ್ಮ ಹೊದ್ದಿದ ಅಬದ್ಧವಪ್ಪ ಭವಿಮಾಟಕೂಟಂಗಳ ಪರಿಹರಿಸಿಕೊಂಡು ನಿಜವಿಡಿದು ನಡೆದು ಕೃತಾರ್ಥರಾಗಲರಿಯದೆ ಅಜ್ಞಾನದಿಂದಲಹಂಕರಿಸಿ ಗುರುವಿಡಿದು ಬಂದುದ ಬಿಡಬಾರದೆಂದು ಕಡುಮೂರ್ಖತನದಿಂ ಗುರುವಚನವನುಲ್ಲಂಘಿಸಿ ಶರಣ ಸತ್ಕ್ರಿಯಾಚಾರಂಗಳನು ಕಡೆಮೆಟ್ಟಿಸಲವ ತನ್ನ ಕರಸ್ಥಲದ ನಿಜವೀರಶೈವಲಿಂಗದಲ್ಲಿ ಸಲ್ಲದ ಭವಿಶೈವ ಮಾಟಕೂಟಂಗ? ಮಾಡಿಕೊಂಡು ನಡೆವ ನರಕಜೀವಿಗಳು ಗುರುಮಾರ್ಗಕ್ಕೆ ಹೊರಗು. ಅವರು ಕೊಂಬುದು ಸುರೆ ಮಾಂಸವಲ್ಲದೆ ಅವರ್ಗೆ ಪ್ರಸಾದವಿಲ್ಲ. ಇದು ಕಾರಣ ಈ ಉಭಯರನ್ನು ಕೂಡಲಚೆನ್ನಸಂಗಯ್ಯ ಸೂರ್ಯಚಂದ್ರರುಳ್ಳನ್ನಕ್ಕ ನಾಯಕನರಕದಲ್ಲಿಕ್ಕುವ.
--------------
ಚನ್ನಬಸವಣ್ಣ
ಅಂಗವಿಲ್ಲೆಂಬಲ್ಲಿಯೆ ಅಂಗಶಂಕೆ ಬಿಡದು, ಲಿಂಗವುಂಟೆಬಲ್ಲಿಯೆ ಲಿಂಗಶಂಕೆ ಬಿಡದು. ಇಲ್ಲೆಂಬುದಕ್ಕೆ ಉಂಟೆಂಬುದೆ ಮರಹು, ಉಂಟೆಂಬುದಕ್ಕೆ ಇಲ್ಲೆಂಬುದೆ ಮರಹು. ಉಂಟಿಲ್ಲೆಂಬುದಳಿದಲ್ಲದೆ ಪ್ರಾಣಲಿಂಗಸಂಬಂಧ ಸ್ವಯವಾಗದು, ಕೂಡಲಚೆನ್ನಸಂಗಯ್ಯನಲ್ಲಿ ಪ್ರಾಣಲಿಂಗಸಂಬಂಧ ನಿನಗೆಲ್ಲಿಯದು ಹೇಳಾ ಸಿದ್ಧರಾಮಯ್ಯ ?
--------------
ಚನ್ನಬಸವಣ್ಣ
ಅಂಗ ಲಿಂಗವೆಂಬರು, ಲಿಂಗ ಅಂಗವೆಂಬರು, ಅದು ಹುಸಿ ಕಾಣಿರೊ, ಅಯ್ಯಾ ! ಅಂಗವೇ ಲಿಂಗವಾದರೆ ಕಾಯದಲ್ಲಿ ಕಳವಳವುಂಟೆ ? ಲಿಂಗವೆ ಅಂಗವಾದರೆ ಪ್ರಳಯಕ್ಕೊಳಗಹುದೆ ? ಅಂಗ ಲಿಂಗವಲ್ಲ, ಲಿಂಗ ಅಂಗವಲ್ಲ. ಅಂಗ-ಲಿಂಗ ಸಂಬಂಧವಳಿದಲ್ಲಿ ಪ್ರಾಣಲಿಂಗಸಂಬಂಧಿ, ಪ್ರಾಣ ನಿಃಪ್ರಾಣವಾದಲ್ಲಿ ಲಿಂಗರೂಪು, ರೂಪು ನಾಸ್ತಿಯಾದಂದು ಕೂಡಲಚೆನ್ನಸಂಗನಲ್ಲಿ ಲಿಂಗೈಕ್ಯವು.
--------------
ಚನ್ನಬಸವಣ್ಣ
ಅಂದೊಮ್ಮೆ ಧರೆಯ ಮೇಲೆ ಬೀಜವಿಲ್ಲದಂದು ಬಸವನೆಂಬ ಗಣೇಶ್ವರನು ಭೋಂಕರಿಸಿ ಕೆಲೆದಡೆ ಬೀಜ ಉತ್ಪತ್ತಿಯಾಯಿತ್ತು. ಅದೆನೆ ಬಿತ್ತಿ ಅದನೆ ಬೆಳೆದು ಅಟ್ಟಟ್ಟು ಲಿಂಗಕ್ಕೆ ಬೋನವ ಮಾಡಿ- ನಾಗಲೋಕದ ನಾಗಗಣಂಗಳಿಗೆಯೂ ಬಸವಣ್ಣನ ಪ್ರಸಾದ, ಮತ್ರ್ಯಲೋಕದ ಮಹಾಗಣಂಗಳಿಗೆಯೂ ಬಸವಣ್ಣನ ಪ್ರಸಾದ, ದೇವಲೋಕದ ದೇವಗಣಂಗಳಿಗೆಯೂ ಬಸವಣ್ಣನ ಪ್ರಸಾದ, ಎಲೆ ಕೂಡಲಚೆನ್ನಸಂಗಮದೇವಾ, ನಿಮ್ಮಾಣೆ, ನಿಮಗೂ ಎನಗೂ ಬಸವಣ್ಣನ ಪ್ರಸಾದ !
--------------
ಚನ್ನಬಸವಣ್ಣ
ಅಂಗದ ಮೇಲಣ ಲಿಂಗವೆಲ್ಲಿಯಾದರೂ ಉಂಟು, ಪ್ರಾಣದ ಮೇಲಣ ಲಿಂಗವಪೂರ್ವ. ಅವರನೆ ಅರಸಿ ತೊಳಲಿ ಬಳಲುತ್ತಿದೇನಯ್ಯಾ. ಇದು ಕಾರಣ_ ಕೂಡಲಚೆನ್ನಸಂಗಯ್ಯಾ ನಿಮ್ಮ ಶರಣರು ಸಕೃತ್ ಕಾಣಲಾರರು.
--------------
ಚನ್ನಬಸವಣ್ಣ
ಅಂಗವ ಬಿಟ್ಟು ಹೋಹ ಪ್ರಾಣಕ್ಕೆ ಲಿಂಗವಿಲ್ಲ ಎಂದೆಂಬರು, ಒಡಂಬಡಿಸಿಹೆನು ಕೇಳಿರಣ್ಣಾ. ಹಿಂಗಿದ ಪುಷ್ಪದ ಪರಿಮಳವನುಂಡೆಳ್ಳು ಅವು ತಮ್ಮಂಗವ ಬಿಟ್ಟು ಹೋಹಾಗ ಕಮ್ಮೆಣ್ಣೆಯಾಗದಿಪ್ಪುವೆ ? ಲಿಂಗೈಕ್ಯರು ಅಳಿದಡೆ, ಕೈಲಾಸದಲ್ಲಿ ತಮ್ಮ ಇಷ್ಟಲಿಂಗಸಹವಾಗಿಪ್ಪರು ನೋಡಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅಂಗ ಲಿಂಗ ಸಂಬಂಧವನ್ನುಳ್ಳ ನಿಜವೀರಶೈವ ಭಕ್ತಾರಾಧ್ಯ ಜಂಗಮದ ಭಕ್ತಿ ವಿವಾಹದ ಕ್ರಮವೆಂತೆಂದಡೆ: ಪಾಣಿಗ್ರಹಣ, ವಿಭೂತಿಪಟ್ಟ, ಏಕಪ್ರಸಾದ, ಭಕ್ತಗಣ, ಸಾಕ್ಷಿಯಾಗಿ ಭಕ್ತಿವಿವಾಹವಾಗಿ, ಭಕ್ತ ಜಂಗಮವನಾರಾಧಿಸಿ, ಭಕ್ತಿಪದಾರ್ಥ ಮತ್ತು ಭಕ್ತಿಪ್ರಸಾದವ ಕೊಂಡು ನಿಜಮುಕ್ತಿಯನೈದುವದೆ ವೀರಶೈವ ಭಕ್ತಾರಾಧ್ಯರುಗಳ ಭಕ್ತಿಕಲ್ಯಾಣ ನೋಡ. ಇಂತಪ್ಪ ಭಕ್ತಿಕಲ್ಯಾಣವನರಿಯದೆ ಸತ್ಯಸದಾಚಾರ ಭಕ್ತಿಯುಕ್ತವಾದ ಗುರುಲಿಂಗ ಜಂಗಮದ ಪಾದೋದಕ ಪ್ರಸಾದವೆಂಬ ಪಂಚಾಚಾರಕ್ಕೆ ಹೊರಗಾದ ಭವಿ ಶೈವ ಕೃತಕಶಾಸ್ತ್ರವಿಡಿದು ಮಾಡುವ ಪಂಚಸೂತಕ ಸಂಕಲ್ಪ ಪಾತಕವನುಳ್ಳ ಶಕುನ ಸ್ವಪ್ನ ಸಾಮುದ್ರಿಕಲಕ್ಷಣ ಸ್ತ್ರೀ ಪುರುಷ ಜಾತಕ ಚರಿತ್ರೆ ಕಾಮಶಾಸ್ತ್ರ ಕಲಾಭೇದ ರಾಶಿಫಲ, ನಕ್ಷತ್ರ ಯೋಗ ಕರಣ ದಿನ ತಿಥಿಗಳಿಗೆ ಲಗ್ನಮುಹೂರ್ತ ಭವಿಶಬ್ದ ಪಾರ್ವ ಧಾರಾಪೂರಿತವಾದಿಯಾದ ಜಗದ್ವ್ಯವಹಾರವನು, ಪಂಚಾಂಗ ಕರ್ಮಸೂತಕ ವಿವಾಹವೆನಿಪ್ಪ ಭವಿಮಾಟಕೂಟ ಭವಿ ದುಷ್ಕ್ರೀಯನ್ನು ಭವಿಶೈವರಹಿತ ಭವಹರವಾದ ನಿಜವೀರಶೈವಾರಾಧ್ಯ, ಭಕ್ತಜಂಗಮದ ಭಕ್ತಿವಿವಾಹಕ್ಕೆ ಆ ಭವಿದುಷ್ಕ್ರೀಯವ ಮಾಡಿದವಂಗೆ ಗುರುವಿಲ್ಲ ಜಂಗಮವಿಲ್ಲ ಪಾದೋದಕವಿಲ್ಲ ಪ್ರಸಾದವಿಲ್ಲ. ಇಂತಪ್ಪ ಅನಾಚಾರಿಗಳು ಭಕ್ತಾರಾಧ್ಯಸ್ಥಲಕ್ಕೆ ಸಲ್ಲರಾಗಿ ಅವರಿರ್ವರನ್ನು ಕೂಡಲಚೆನ್ನಸಂಗಯ್ಯ ಅಘೋರ ನರಕದಲ್ಲಿಕ್ಕುವನು.
--------------
ಚನ್ನಬಸವಣ್ಣ
ಅಂಗದ ಮೇಲೆ ಲಿಂಗಯುಕ್ತವಾದ ಭಕ್ತನು ಆ ಭಕ್ತಿಯಾಚಾರದ ನೆಲೆಯನರಿಯದೆ ಸಂಬಂಧಕ್ಕನ್ಯವಾದ ನಂದಿ ವೀರಭದ್ರ ಮತ್ತೆ ಲಿಂಗಂಗಳೆಂಬಿವಾದಿಯಾದ ಭವಿಶೈವದೈವಂಗಳ ಹೆಸರಿನಲ್ಲಿ ಮೀಸಲುವಿಡಿದು ಬಾಸಣಿಸಿ ಮನೆದೈವಕ್ಕೆಂದು ನೇಮಿಸಿ ಮಾಡಿದ ಪಾಕವ ತನ್ನ ಕರಸ್ಥಲದ ನಿಜ ವೀರಶೈವಲಿಂಗಕ್ಕೆ ಓಗರವೆಂದರ್ಪಿಸುವದು ಅನಾಚಾರ, ಪಂಚಮಹಾಪಾತಕ. ಅವನು ಸದಾಚಾರಕ್ಕೆ ಹೊರಗು, ಅದೇನು ಕಾರಣವೆಂದೊಡೆ: ಅದು ಶೈವದೈವೋಚ್ಛಿಷ್ಟವಾದ ಕಾರಣ. ಅದರಿಂಲೂ ಭವಿಯ ಮನೆಯ ಅಶನ ಉತ್ತಮ. ಅದೆಂತೆಂದೊಡೆ:ಅದು ಅನ್ನವಾದ ಕಾರಣ. ಆ ಅನ್ನದ ಪೂರ್ವಾಶ್ರಯ ಕಳೆಯಬಹುದಾಗಿ ಆ ಉಚ್ಛಿಷ್ಟದ ಪೂರ್ವಾಶ್ರಯ ಹೋಗದಾಗಿ. ಅದೆಂತೆಂದೊಡೆ: ಭವಿಹಸ್ತಕೃತಂ ಪಾಕಂ ಲಿಂಗನೈವೇದ್ಯ ಕಿಲ್ಬಿಷಂ ಶಿವಭಕ್ತ ಕೃತಂ ಪಾಕಂ ಲಿಂಗನೈವೇದ್ಯಮುತ್ತಮಂ_ ಎಂದುದಾಗಿ ಭಕ್ತಂಗೆ ಭವಿಯ ಮನೆಯ ಅಶನ ನಾಯಡಗು ನರಮಾಂಸ ಕ್ರಿಮಿ ಮಲಕ್ಕೆ ಸಮವೆಂದರಿದು ಶಿವಭಕ್ತರಾದವರು ಮುಟ್ಟರು; ಅದಕಿಂದಲೂ ಕರಕಷ್ಟ ಕರಕಷ್ಟ ನೋಡಾ. ಅರೆಭಕ್ತರು ತಮ್ಮ ಕುಲದೈವವ ಕೂರ್ತು ಮಾಡಿದ ಆ ಭವಿ ಶೈವದೈವೋಚ್ಛಿಷ್ಟವ ತಾ ನೆರೆಭಕ್ತನಾಗಿ ಆಚಾರವನನುಸರಣೆಯ ಮಾಡಿಕೊಂಡು ಆ ಅರೆಭಕ್ತರ ಮನೆಯಲ್ಲಿ ಹೊಕ್ಕು ಲಿಂಗಾರ್ಚನೆಯ ಮಾಡುವದಕ್ಕಿಂತಲೂ ಹೊರಗಣ ಹೊಲೆಯರ ಮನೆಯ ಅನ್ನವೇ ಮಿಗೆ ಮಿಗೆ ಉತ್ತಮ ಕಾಣಾ ಕೂಡಲಚೆನ್ನಸಂಗಯ್ಯಾ.
--------------
ಚನ್ನಬಸವಣ್ಣ
ಅಂತರಂಗದ ನಿರವಯವದು ಲಿಂಗವೆ ? ಬಹಿರಂಗದ ಸಾವಯವದು ಜಂಗಮವೆ ? ಅಂತರಂಗದ ನಿರವಯವದು ಜ್ಞಾನಸೂಚನೆಯ ಭಾವವೆಂದು ನಾಚರು ನೋಡಾ. ಬಹಿರಂಗದ ಸಾವಯವದ ವಿಷಯದೃಷ್ಟಿಯೆಂದು ಹೆಸರು ನೋಡಾ. ಈ ಉಭಯ ಒಂದಾದಡದು ಅಭೇದ್ಯ ಕೂಡಲಚೆನ್ನಸಂಗ ನಿಮ್ಮಲ್ಲಿ.
--------------
ಚನ್ನಬಸವಣ್ಣ
ಅಂಗದಿಂದ ಲಿಂಗ ಹಿಂಗಬಾರದೆಂಬರು: ಅಂಗ, ಲಿಂಗಸಂಬಂಧವಾದಲ್ಲಿ ಫಲವೇನು, ಮನ ಲಿಂಗಸಂಬಂಧವಾಗದನ್ನಕ್ಕ ? ಕೂಡಲಚೆನ್ನಸಂಗಯ್ಯಾ ಮನದಿಂದಲೇನೂ ಘನವಿಲ್ಲಯ್ಯಾ.
--------------
ಚನ್ನಬಸವಣ್ಣ

ಇನ್ನಷ್ಟು ...