ಮತಿಜ್ಞಾನ, ಶ್ರುತಿಜ್ಞಾನ, ಖಂಡಜ್ಞಾನ,
ಕೇವಲಜ್ಞಾನ, ಜ್ಯೋತಿಜ್ರ್ಞಾನ,
ಮಹಾಜ್ಯೋತಿಜ್ರ್ಞಾನವೆಂದಿಂತು ಜ್ಞಾನವಾರು ತೆರನು.
ಮತಿಜ್ಞಾನದಿಂದ ಶ್ರುತಿಜ್ಞಾನವಹುದು,
ಶ್ರುತಿಜ್ಞಾನದಿಂದ ಖಂಡಜ್ಞಾನವಹುದು.
ಖಂಡಜ್ಞಾನದಿಂದ ಕೇವಲಜ್ಞಾನವಹುದು,
ಕೇವಲಜ್ಞಾನದಿಂದ ಜ್ಯೋತಿಜ್ರ್ಞಾನವಹುದು.
ಜ್ಞೋತಿಜ್ರ್ಞಾನದಿಂದ ಮಹಾಜ್ಯೋತಿಜ್ರ್ಞಾನವಹುದು.
ಮತಿಜ್ಞಾನವೆ ಭಕ್ತ, ಶ್ರುತಿಜ್ಞಾನವೆ ಮಹೇಶ್ವರ,
ಖಂಡಜ್ಞಾನವೆ ಪ್ರಸಾದಿ,
ಕೇವಲಜ್ಞಾನವೆ ಪ್ರಾಣಲಿಂಗಿ, ಜ್ಯೋತಿಜ್ರ್ಞಾನವೆ ಶರಣ,
ಮಹಾಜ್ಯೋತಿಜ್ರ್ಞಾನವೆ ಐಕ್ಯ.
ಈ ಷಟ್ಸ್ಥಲದ ನೆಲೆಯ ಬಲ್ಲಾತನೆ-
ಕೂಡಲಚೆನ್ನಸಂಗಯ್ಯನಲ್ಲಿ ಐಕ್ಯನು