ರಜದ ನಿಜದ ಭುಜದ ಗಜದ ಸದದ
ಇವೆಲ್ಲವನು ಕೊಂಡು ಹೋಗಿ, ಮಡಿವಾಳನೆಂದು ಒಗೆಯ ಹಾಕಿದೆನು.
ಒಗೆಯ ಹಾಕಿದಡೆ, ಗುರುಮೂರ್ತಿಯ ನಷ್ಟವ ಬಿಳಿದು ಮಾಡಿದನು.
ಲಿಂಗಸಾರಾಯಸ್ವರೂಪವ ಬಿಳಿದು ಮಾಡಿದನು,
ಜಂಗಮಸಾರಾಯಸ್ವರೂಪವ ಬಿಳಿದು ಮಾಡಿದನು,
ಅಗ್ನಿಯಿಲ್ಲದ ಪಾಕದ ಪದಾರ್ಥವ ಲಿಂಗವಿಲ್ಲದೆ ಅರ್ಪಿಸಿದನು;
ಜಂಗಮವಿಲ್ಲದೆ ನೀಡಿದನು, ಪ್ರಸಾದವಿಲ್ಲದೆ ಗ್ರಹಿಸಿದನು.
ಇದು ಕಾರಣ_ಕೂಡಲಚೆನ್ನಸಂಗಯ್ಯನಲ್ಲಿ
ಬಸವಣ್ಣ, ಮಡಿವಾಳನೆಂಬ ಪ್ರಸಾದ ಎನಗಳವಟ್ಟಿತ್ತು.