ವೇದವೇದಾರ್ಥಸಾರಾಯದಿಂದ ಆರುಶಾಸ್ತ್ರ
ಹದಿನೆಂಟು ಪುರಾಣಂಗಳಾದವು.
ಆ ಪುರಾಣಂಗಳನರಿವುದರಿಂದೆ ಜ್ಯೋತಿಜ್ರ್ಞಾನವಾಯಿತ್ತು.
ಆ ಜ್ಯೋತಿಜ್ರ್ಞಾನದಿಂದೆ; _ಮತಿಜ್ಞಾನ,
ಶ್ರುತಜ್ಞಾನ, ಮನಪರಿಪೂರ್ಣಜ್ಞಾನ,
ಅವಧಿಜ್ಞಾನ ಕೇವಲಜ್ಞಾನ. _ಇಂತೀ ಪಂಚಜ್ಞಾನವೆ ಪಂಚಸ್ಥಲವಾಯಿತ್ತು.
ಮತಿಜ್ಞಾನವುಳ್ಳಾತನೆ ಭಕ್ತ, ಶ್ರುತಜ್ಞಾನವುಳ್ಳಾತನೆ ಮಹೇಶ್ವರ,
ಮನಪರಿಪೂರ್ಣ ಜ್ಞಾನವುಳ್ಳಾತನೆ ಪ್ರಸಾದಿ, ಅವಧಿಜ್ಞಾನವುಳ್ಳಾತನೆ ಪ್ರಾಣಲಿಂಗಿ,
ಕೇವಲಜ್ಞಾನವುಳ್ಳಾತನೆ ಶರಣ, ಶರಣಸ್ಥಲವೆಂಬುದು ಭವಂ ನಾಸ್ತಿ.
ಪಂಚಜ್ಞಾನಕ್ಕೆ ಮೂಲವಾದ ಜ್ಯೋತಿಜ್ರ್ಞಾನವೆ
ಪಂಚಸ್ಥಲದಲ್ಲಿ ಏಕಾಕಾರವಾದ ಐಕ್ಯನು_
ಇಂತೆಂದುದಾಗಿ ಕೂಡಲಚೆನ್ನಸಂಗಯ್ಯನಲ್ಲಿ ಪಂಚಸ್ಥಲದ ನೆಲೆಯ ಬಲ್ಲ
ಐಕ್ಯ ಬಸವಣ್ಣಂಗೆ ನಮೋ ನಮೋ ಎಂಬೆನು