ಬಸವಣ್ಣನ ಪ್ರಸಾದವ ಕೊಂಡ ಕಾರಣ ಎನಗೆ ಭಕ್ತಿ ಸಾಧ್ಯವಾಯಿತ್ತು. ಚೆನ್ನಬಸವಣ್ಣನ ಪ್ರಸಾದವ ಕೊಂಡ ಕಾರಣ ಎನಗೆ ಜ್ಞಾನ ಸಾಧ್ಯವಾಯಿತ್ತು. ಪ್ರಭುದೇವರ ಪ್ರಸಾದವ ಕೊಂಡ ಕಾರಣ ಎನಗೆ ವೈರಾಗ್ಯ ಸಾಧ್ಯವಾಯಿತ್ತು. ಇಂತೀ ಮೂವರು ಒಂದೊಂದು ಕೊಟ್ಟ ಕಾರಣ ಎನಗೆ ಸರ್ವವೂ ಸಾಧ್ಯವಾಯಿತ್ತು. ಏಣಾಂಕಧರ ಸೋಮೇಶ್ವರಾ, ನಿಮ್ಮ ಶರಣರೆನ್ನ ಮಾತಾಪಿತರು.