ಅಥವಾ
(6) (3) (3) (1) (2) (0) (0) (0) (3) (0) (0) (2) (0) (0) ಅಂ (2) ಅಃ (2) (6) (0) (1) (0) (0) (0) (0) (0) (0) (0) (0) (1) (0) (0) (0) (1) (0) (0) (0) (10) (0) (0) (0) (0) (3) (0) (0) (0) (2) (0) (2) (0) (1) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಆತನ ಬಿರುದೆನ್ನ ಉರದಲ್ಲಿ ಇದೆ ಕಂಡಯ್ಯಾ. ಏಕೆ ಬಂದಿರೋ ಎಲೆ ಅಣ್ಣಗಳಿರಾ. ನಿಮಗಪ್ಪುವುದಕ್ಕೆಡೆಯಿಲ್ಲ. ನಿಮಗಪ್ಪುವದಕ್ಕೆಡ್ಡಬಂದಹನೆಮ್ಮ ನಲ್ಲ. ಏಕೆ ಬಂದಿರೋ, ಉರಿಲಿಂಗದೇವನನಪ್ಪಿ ಸೊಪ್ಪಾದ ಹಿಪ್ಪೆಗೆ ?
--------------
ಉರಿಲಿಂಗದೇವ
ಆದಿ-ಅನಾದಿ, ಸಾಕಾರ-ನಿರಾಕಾರ ಎಂಬುವೇನುವಿಲ್ಲದ ವಾಗತೀತವಾದ ನಿರ್ನಾಮವಸ್ತು ತಾನೆ ! ತನ್ನ ಲೀಲಾವಿಲಾಸದಿಂದಾದ ಪ್ರಭಾವದ ಸ್ಫುರಣವೆ ಮಹಾಪ್ರಕಾಶ. ಆ ಮಹಾಪ್ರಕಾಶದ ಆವರಣವೆ ನಿಜಾತ್ಮನು. ಆ ನಿಜಾತ್ಮನೆ ತನ್ನಿಂದಾದ ಸಮಸ್ತವಸ್ತುಗಳೆನಿಪ ತತ್ವಂಗಳಿಗೆ ತಾನೇ ಕಾರಣವಾದ. ಇದನರಿಯದೆ ಆತ್ಮಂಗೆ ಅನಾದಿಮಲತನುತ್ವ ಪಾಶಬಂಧ ಉಂಟೆಂಬರು, ಅದು ಹುಸಿ. ಆ ಆತ್ಮನು ತನ್ನಿಂದ ಪ್ರವರ್ತಿಸುವ ಮಹದಾದಿ ತತ್ತ್ವಂಗಳಿಗೆ ತಾನೇ ಮೂಲಾಧಾರವಾದ ಕಾರಣ ಮೂಲಪ್ರಕೃತಿಸ್ವರೂಪವೆನಿಸಿಕೊಂಬನು. ಆ ನಿಜಾತ್ಮನಲ್ಲಿ ಅನಾದಿಮಲಪಾಶಂಗಳು ಸತ್ಯವಲ್ಲ. ಇದು ಕಾರಣ ಆ ಆತ್ಮನು ಮೇಲಣ ಘನಲಿಂಗವಾದುದು ತಾನೆ, ಲಯಿಸುವುದಕ್ಕೂ ಗಮಿಸುವುದಕ್ಕೂ ತಾನೆ. ತಾನಾ ಕಾರಣನಾದನಾಗಿ ಪ್ರತಿಪದಾರ್ಥವಿಲ್ಲ. ಅದೆಂತೆಂದಡೆ: ಪರಾತ್ಪರತರವಪ್ಪ ಪರಬ್ರಹ್ಮಕ್ಕೆ ಬೆಚ್ಚಿ ಬೇರಾಗದ ಕಾರಣ. ಅದು ದೀಪ ದೀಪದ ಪ್ರಭೆಯಂತೆ, ರತ್ನ ರತ್ನದ ಕಾಂತಿಯಂತೆ ಆತ್ಮಲಿಂಗೈಕ್ಯ. ಇಂತೀ ಸಹಜಸೃಷ್ಟಿಯನರಿಯದೆ ``ಅನಾದಿ ಆತ್ಮಂಗೆ ಪಾಶಂಗಳುಂಟು, ಆತ್ಮ ಪಶು ಪಾಶ ಮಾಯೆ ಪತಿ ಶಿವ`` ಎಂಬರು ! ಇಂತೀ ತೆರದಲ್ಲಿ ತ್ರಿಪಾದರ್ಥಗಳ ಹೇಳುವರು ! ಅದು ಹುಸಿ. ಸೃಷ್ಟಿ ಮೊದಲು ಐಕ್ಯ ಕಡೆಯಾಗಿ ಅಭೇದವಲ್ಲದೆ ಭೇದವಿಲ್ಲ. ಇನ್ನು ಅದ್ವೈತಮತದಲ್ಲಿ ವೇದಾಂತಿಯೆಂಬಾತ ನಿಜ ಸೃಷ್ಟಿಯರಿಯ. ಅದೆಂತೆಂದಡೆ: `ಶಕ್ತ್ಯಧೀನಂ ಪ್ರಪಂಚಶ್ಚ' ಎಂಬ ಶ್ರುತಿಯನರಿದು ! ಆ ಶಕ್ತಿಯ ಆಧಾರದಲ್ಲಿ ತೋರುವ ತತ್ತ್ವಂಗಳ ಪ್ರವರ್ತನೆ ವಿಶ್ವವೆನಿಸುವದು. ಅದನರಿಯದೆ ವೇದಾಂತಿ ದಗ್ದೈಶ್ಯವೆಂಬ, ದೃಕ್ಕೆ ವಸ್ತುವೆನಿಪಾತ್ಮನೆಂಬ, ದೃಶ್ಯವೆ ಮಾಯೆಯೆಂಬ ! ಅದು ಹುಸಿ; ಆ ಶಕ್ತಿಯ ಆಧಾರದಲ್ಲಿ ತೋರುವ ವಿಶ್ವಪ್ರಪಂಚವು. ಆ ಪ್ರಪಂಚದ ಮಧ್ಯದಲ್ಲಿ ತೋರುವ ಶಕ್ತಿಯ ಕ್ರಮವೆಂತೆಂದಡೆ: ಜಲಮಧ್ಯದಲ್ಲಿ ತೋರುವ ಇನಬಿಂಬದಂತೆ ಬಿಂಬಿಸುವುದಾಗಿ ! ಆ ಬಿಂಬವೇ ಜೀವನು, ಆ ಜೀವನೆ ದೃಕ್ಕು, ಅವನ ಕೈಯಲ್ಲಿ ಕಾಣಿಸಿಕೊಂಬ ವಿಷಯವೆ ಮಾಯೆ. ಈ ಎರಡರ ವ್ಯವಹಾರ ಆ ಶಕ್ತಿಗೆ ಇಲ್ಲವಾಗಿ, ದೃಕ್ಕುದೃಶ್ಯವೆಂಬ ವೇದಾಂತಿಯ ಮತವಂತಿರಲಿ. ಇಂತೀ ದ್ವೈತಾದ್ವೈತದಲ್ಲಿ ಪ್ರವರ್ತಿಸರು ಶಿವಶರಣರು. ಈ ದ್ವೈತಾದ್ವೈತದಲ್ಲಿ ಪ್ರವರ್ತಿಸುವ ಪ್ರವರ್ತನಕ್ಕೆ ತಾವೆ ಕಾರಣವೆನಿಪ್ಪರು. ಇಂತೀ ಕಾರಣವೆನಿಸಿರ್ಪ ಶರಣರ ನಿಲವೆಂತುಂಟೆಂದಡೆ: ಸಕಲವಿಶ್ವವೆ ಸತಿಯರೆನಿಸಿ ತಾನು ತನ್ನ ನಿಜಕ್ಕೆ ಅಂಗನಾಗಿ, ಆ ನಿಜವೆ ಆತ್ಮಂಗೆ ಅಂಗವಾಗಿ ನಿಂದ ನಿಲವೆ ಪರವಸ್ತುವಿನ ಪ್ರಭಾವ. ಆ ಪ್ರಭಾವಾದ ಶರಣನ ನಿಲುವೆ ಉರಿಲಿಂಗದೇವನೆಂಬ ಗಂಡನಾಗಿ ಬಂಧ ತೆಗೆದ.
--------------
ಉರಿಲಿಂಗದೇವ
ಆದ ಗತಿಯನ್ನನುಭವಿಸುವುದಲ್ಲದೆ ಹೇಳಬಾರದಾರಿಗೆಯೂ, ನೋಡಯ್ಯಾ. ಕಾಣಬಾರದಾಂತಗೆ ಸವಿದೋರಬಾರದ ರೂಪು ನೋಡಯ್ಯಾ, ಹೇಳಬಾರದ ಶಬುದ. ಉರಿಲಿಂಗದೇವಾ, ನಿಮ್ಮನರಿದ ಸುಖವಿಕ್ಕಬಾರದು ತಕ್ಕವರಿಗಲ್ಲದೆ.
--------------
ಉರಿಲಿಂಗದೇವ