ಅ
(52)
ಆ
(19)
ಇ
(6)
ಈ
(1)
ಉ
(11)
ಊ
(4)
ಋ
(0)
ೠ
(0)
ಎ
(26)
ಏ
(0)
ಐ
(1)
ಒ
(12)
ಓ
(1)
ಔ
(0)
ಅಂ
(10)
ಅಃ
(10)
ಕ
(56)
ಖ
(0)
ಗ
(14)
ಘ
(1)
ಙ
(0)
ಚ
(6)
ಛ
(0)
ಜ
(6)
ಝ
(0)
ಞ
(0)
ಟ
(0)
ಠ
(0)
ಡ
(0)
ಢ
(0)
ಣ
(0)
ತ
(21)
ಥ
(0)
ದ
(5)
ಧ
(2)
ನ
(26)
ಪ
(16)
ಫ
(1)
ಬ
(20)
ಭ
(10)
ಮ
(28)
ಯ
(0)
ರ
(2)
ಱ
(0)
ಲ
(13)
ವ
(10)
ಶ
(8)
ಷ
(0)
ಸ
(24)
ಹ
(30)
ಳ
(0)
ವಚನಕಾರ: ಅಕ್ಕಮಹಾದೇವಿ
ಅಂಕಿತ ನಾಮ: ಚೆನ್ನಮಲ್ಲಿಕಾರ್ಜುನ
ಕಾಲ: ಹನ್ನೆರಡನೆಯ ಶತಮಾನ
ದೊರಕಿರುವ ವಚನಗಳು: 434 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ: ನಿರ್ಮಲಶೆಟ್ಟಿ ಮತ್ತು ಸುಮತಿ
ಹುಟ್ಟಿದ ಸ್ಥಳ:
ಪರಿಚಯ: ಹನ್ನೆರಡನೆಯ ಶತಮಾನದಲ್ಲಿದ್ದ ಅಕ್ಕಮಹಾದೇವಿ, ನಿರ್ಮಲಶೆಟ್ಟಿ ಮತ್ತು ಸುಮತಿಯರ ಮಗಳು. ತಂದೆ ತಾಯಿಯರ ಹೆಸರು ಕವಿ ಕಲ್ಪನೆ ಇದ್ದೀತು ಅನ್ನುವುದು ಕೆಲವು ವಿದ್ವಾಂಸರ ಅನುಮಾನ. ಹರಿಹರನ ಮಹದೇವಿಯಕ್ಕಗಳ ರಗಳೆಯ ಪ್ರಕಾರ ಊರಿನ ಮುಖ್ಯಸ್ಥ ಕೌಶಿಕ ಮಹದೇವಿಯನ್ನು ಮದುವೆಯಾಗಲು ಬಯಸಿ ಒತ್ತಾಯಿಸಿದ. ಅಕ್ಕ ಶರತ್ತುಗಳನ್ನು ವಿಧಿಸಿ ಮದುವೆಗೆ ಒಪ್ಪಿದರೂ ಕೌಶಿಕ ವಚನ ಭಂಗ ಮಾಡಿದಾಗ ಉಡುಗೆಯನ್ನೂ ತೊರೆದು ಮನೆ ಬಿಟ್ಟು ಹೊರಟುಬಿಡುತ್ತಾಳೆ. ಇನ್ನು ಕೆಲವು ಕಥನಪರಂಪರೆಗಳಲ್ಲಿ ಅಕ್ಕ ಎಳವೆಯಲ್ಲೇ ಚನ್ನಮಲ್ಲಿಕಾರ್ಜುನನನ್ನು ವರಿಸಿದವಳು ಅನ್ನುವುದೂ ಉಂಟು. ಉರಕ್ಕೆ ಜವ್ವನಗಳು ಬಾರದ ಮುನ್ನ ಎಂದು ಆರಂಭವಾಗುವ ಅಕ್ಕನ ವಚನ ನೋಡಿ. ಪರ್ಯಟನೆ ಮಾಡುತ್ತ ಮಹದೇವಿ ಕಲ್ಯಾಣಕ್ಕೆ ಹೋದಳು, ಅಲ್ಲಿಂದ ಶ್ರೀಶೈಲದ ಕದಳಿಯಲ್ಲಿ ಐಕ್ಯಳಾದಳು ಎಂಬ ವಿವರಗಳಿವೆ. ಅಲ್ಲಮ ಮತ್ತು ಅಕ್ಕಮಹಾದೇವಿ ಒಂದೇ ಪ್ರಾಂತದವರು, ಅವರ ಬದುಕಿನ ಕಥೆಗಳಲ್ಲೂ ವೈಚಾರಿಕ ನಿಲುವುಗಳಲ್ಲೂ ಅನೇಕ ಸಾಮ್ಯಗಳಿವೆ. ಈಕೆಯ 434 ವಚನಗಳು ಮತ್ತು ಹಲವು ಹಾಡುಗಳು ದೊರೆತಿವೆ. ಯೋಗಾಂಗ ತ್ರಿವಿಧಿ, ಸೃಷ್ಟಿಯ ವಚನ ಮತ್ತು ಮಂತ್ರಗೋಪ್ಯ ಮಹಾದೇವಿಯ ಇತರ ಕೃತಿಗಳು ಎಂದು ಹೇಳುವುದುಂಟು. ಆದರೆ ಇವುಗಳ ರಚನೆಯನ್ನು ನೋಡಿದರೆ ವಚನಗಳನ್ನು ಸೃಷ್ಟಿಸಿದ ಮನಸ್ಸೇ ಈ ಕೃತಿಗಳನ್ನೂ ರಚಿಸಿತು ಎಂದು ನಂಬುವುದು ಕಷ್ಟವಾಗುವಂತಿದೆ. ಭಾವಗಳ ತೀವ್ರತೆ ಈಕೆಯ ರಚನೆಗಳ ಮುಖ್ಯ ಲಕ್ಷಣ.
ತನು ನಿಮ್ಮ ರೂಪಾದ ಬಳಿಕ ಆರಿಗೆ ಮಾಡುವೆ ? ಮನ ನಿಮ್ಮ ರೂಪಾದ ಬಳಿಕ ಆರ ನೆನೆವೆ ? ಪ್ರಾಣ ನಿಮ್ಮ ರೂಪಾದ ಬಳಿಕ ಆರನಾರಾಧಿಸುವೆ ? ಅರಿವು ನಿಮ್ಮಲ್ಲಿ ಸ್ವಯವಾದ ಬಳಿಕ ಆರನರಿವೆ ? ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮಿಂದ ನೀವೆಯಾದಿರಾಗಿ ನಿಮ್ಮನೆ ಅರಿವುತ್ತಿರ್ದೆನು.
ತನ್ನ ಶಿಷ್ಯ ತನ್ನ ಮಗನೆಂಬುದು ತಪ್ಪದಲಾ. ಏಕೆ? ಆತನ ಧನಕ್ಕೆ ತಂದೆಯಾದನಲ್ಲದೆ ಆತನ ಮನಕ್ಕೆ ತಂದೆಯಾದನೆ ? ಏಕೆ? ಆತನ ಮನವನರಿಯನಾಗಿ, ಆತನ ಧನಕ್ಕೆ ತಂದೆಯಾದನು. ತನ್ನಲ್ಲಿರ್ದ ಭಕ್ತಿಯ ಮಾರಿಕೊಂಡುಂಬವರು ನಿಮ್ಮ ನಿಜಭಕ್ತರಲ್ಲವಯ್ಯಾ ಚೆನ್ನಮಲ್ಲಿಕಾರ್ಜುನಾ.
ತನು ಶುದ್ಧವಾಯಿತ್ತು ಶಿವಭಕ್ತರೊಕ್ಕುದ ಕೊಂಡೆನ್ನ. ಮನ ಶುದ್ಧವಾಯಿತ್ತು ಅಸಂಖ್ಯಾತರ ನೆನದೆನ್ನ. ಕಂಗಳು ಶುದ್ಧವಾಯಿತ್ತು ಸಕಲಗಣಂಗಳ ನೋಡಿ ಎನ್ನ. ಶ್ರೋತ್ರ ಶುದ್ಧವಾಯಿತ್ತು ಅವರ ಕೀರ್ತಿಯ ಕೇಳಿ ಎನ್ನ. ಭಾವನೆ ಎನಗಿದು ಜೀವನ ಲಿಂಗತಂದೆ. ನೆಟ್ಟನೆ ನಿಮ್ಮ ಮನಮುಟ್ಟಿ ಪೂಜಿಸಿ ಭವಗೆಟ್ಟೆ ನಾನು ಚೆನ್ನಮಲ್ಲಿಕಾರ್ಜುನಾ.
ತನ್ನ ವಿನೋದಕ್ಕೆ ತಾನೆ ಸೃಜಿಸಿದ ಸಕಲ ಜಗತ್ತ. ತನ್ನ ವಿನೋದಕ್ಕೆ ತಾನೆ ಸುತ್ತಿದನದಕ್ಕೆ ಸಕಲ ಪ್ರಪಂಚನು. ತನ್ನ ವಿನೋದಕ್ಕೆ ತಾನೆ ತಿರುಗಿಸಿದನನಂತ ಭವದುಃಖಂಗಳಲ್ಲಿ. ಇಂತೆನ್ನ ಚೆನ್ನಮಲ್ಲಿಕಾರ್ಜುನನೆಂಬ ಪರಶಿವನು ತನ್ನ ಜಗದ್ವಿಲಾಸ ಸಾಕಾದ ಮತ್ತೆ ತಾನೆ ಪರಿವನದರ ಮಾಯಾಪಾಶವನು.