ವಚನ ಸಂಚಯ
beta v0.3.1
ವಚನಕಾರರು
ವಚನಗಳು
ಸಂಶೋಧನೆ
ಪದಕೋಶ
ಸಂಪರ್ಕಿಸಿ
ಸಹಾಯ
ನಮ್ಮ ಬಗ್ಗೆ
ಅಂಬಿಗರ ಚೌಡಯ್ಯ
ಕಂಥೆ ತೊಟ್ಟವ ಗುರುವಲ್ಲ,
ಕಾವಿ ಹೊತ್ತವ ಜಂಗಮವಲ್ಲ,
ಶೀಲ ಕಟ್ಟಿದವ ಶಿವಭಕ್ತನಲ್ಲ,
ನೀರು ತೀರ್ಥವಲ್ಲ,
ಕೂಳು ಪ್ರಸಾದವಲ್ಲ.
ಹೌದೆಂಬವನ ಬಾಯ ಮೇಲೆ
ಅರ್ಧಮಣದ ಪಾದರಕ್ಷೆಯ ತೆಗೆದುಕೊಂಡು
ಮಾಸಿ ಕಡಿಮೆಯಿಲ್ಲದೆ ತೂಗಿ ತೂಗಿ ಟೊಕಟೊಕನೆ ಹೊಡೆ ಎಂದಾತ ನಮ್ಮ ಅಂಬಿಗರ
ಚೌಡಯ್ಯ.
Back
Delete