ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಅಂಗ ಪ್ರಾಣ ಸಂಗವುಳ್ಳನ್ನಕ್ಕ, ಲಿಂಗಪೂಜೆಯೆಂಬ ದಂದುಗ ಬಿಡದು. ಈ ಹೊರಗು ಒಳಗಾಗಿಯಲ್ಲದೆ, ಪ್ರಾಣಲಿಂಗಿಯೆಂಬ ಸಂಬಂದ್ಥಿಯಲ್ಲ. ಲಿಂಗಕ್ಕೆ ಪ್ರಾಣ, ಪ್ರಾಣಕ್ಕೆ ಲಿಂಗ ಉಭಯಸಂಬಂಧವಾದಲ್ಲಿ, ಉರಿ ಕೊಂಡ ಕರ್ಪುರಕ್ಕೆ ತೊಡರುವುದಕ್ಕೆ ಠಾವಿಲ್ಲ, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಅರಿತು ಜನ್ಮವಾದವರಿಲ್ಲ ಸತ್ತು ಮರಳಿ ತೋರುವರಿಲ್ಲ. ದುರಭಿಮಾನವ ಹೊತ್ತು ಅಘಟಿತ ಘಟಿತವ ನುಡಿವಿರಿ. ಈ ದೇಹವಿಡಿದು ನುಡಿವ ಪ್ರಪಂಚಿಗಳನೇನೆಂಬೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಅಯ್ಯಾ ಆರೂ ಇಲ್ಲದ ಅರಣ್ಯದಲ್ಲಿ, ನಾನಡಿಯಿಟ್ಟು ನಡವುತ್ತಿರ್ದೆನಯ್ಯಾ. ಮುಂದೆ ಬರೆಬರೆ ಮಹಾಸರೋವರವ ಕಂಡೆ. ಸರೋವರದೊಳಗೊಂದು ಹಿರಿಯ ಮೃಗವ ಕಂಡೆ. ಆ ಮೃಗಕ್ಕೆ ಕೊಂಬುಂಟು ತಲೆಯಿಲ್ಲ, ಬಾಯುಂಟು ಕಣ್ಣಿಲ್ಲ, ಕೈಯುಂಟು ಹಸ್ತವಿಲ್ಲ, ಕಾಲುಂಟು ಹೆಜ್ಜೆಯಿಲ್ಲ, ಒಡಲುಂಟು ಪ್ರಾಣವಿಲ್ಲ. ಇದ ಕಂಡು ನಾ ಹೆದರಿ, ಹವ್ವನೆ ಹಾರಿ, ಬೆದರಿ ಬಿದ್ದೆನಯ್ಯಾ. ಆಗೆನ್ನ ಹೆತ್ತತಾಯಿ ಬಂದು ಎತ್ತಿ ಕುಳ್ಳಿರಿಸಿ, ಚಿತ್ತಮೂಲಾಗ್ನಿಯ ಒತ್ತಿ ಉರುಹಿದರೆ, ಇವೆಲ್ಲವು ಸುಟ್ಟು ಬಟ್ಟಬಯಲಾದವು. ಆ ಬಟ್ಟಬಯಲೊಳಗೆ ಅಡಿಯಿಟ್ಟು ನಡೆವಾಗ, ಮುಂದೆ ಇಟ್ಟಡಿಯ ಬಾಗಿಲೊಳಗೆ ಮತ್ತೊಂದು ಮೃಗವ ಕಂಡೆ. ಆ ಮೃಗಕ್ಕೆ ತಲೆಯುಂಟು ಕೊಂಬಿಲ್ಲ, ಕಣ್ಣುಂಟು ಬಾಯಿಲ್ಲ, ಹಸ್ತವುಂಟು ಕೈಯಿಲ್ಲ, ಹೆಜ್ಜೆಯುಂಟು ಕಾಲಿಲ್ಲ, ಪ್ರಾಣವುಂಟು ಒಡಲಿಲ್ಲ. ಇದ ಕಂಡು ನಾ ಅಪ್ಪಿಕೊಳಹೋದಡೆ, ಮುಟ್ಟದ ಮುನ್ನವೆ ಎನ್ನನೆ ನುಂಗಿತ್ತು. ನುಂಗಿದ ಮೃಗ ಮಹಾಲಿಂಗದಲ್ಲಿಯೆ ಅಡಗಿತ್ತು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಅಗ್ಘವಣಿ ಸುಯಿದಾನವಾದ ಶರಣಂಗೆ, ತನು ಸುಯಿದಾನವಾಗಬೇಕು. ತನು ಸುಯಿದಾನವಾದ ಶರಣಂಗೆ ಮನ ಸುಯಿದಾನವಾಗಬೇಕು. ಮನ ಸುಯಿದಾನವಾದ ಶರಣಂಗೆ ಪ್ರಾಣದ ಮೇಲೆ ಲಿಂಗ ಸಯವಾಗಬೇಕು. ಪ್ರಾಣದ ಮೇಲೆ ಲಿಂಗ ಸಯವಾಗದಿರ್ದಡೆ ಇದೆಲ್ಲ ವೃಥಾ ಎಂದಿತ್ತು ಕೂಡಲಚೆನ್ನಸಂಗಯ್ಯನ ವಚನ
--------------
ಚನ್ನಬಸವಣ್ಣ
ಅಡವಿಯಲೊಬ್ಬ ಕಡು ನೀರಡಿಸಿ, ಎಡೆಯಲ್ಲಿ ನೀರ ಕಂಡಂತಾುತ್ತಯ್ಯಾ. ಕುರುಡ ಕಣ್ಣ ಪಡೆದಂತೆ, ಬಡವ ನಿಧಾನವ ಹಡೆದಂತಾುತ್ತಯ್ಯಾ. ನಮ್ಮ ಕೂಡಲಸಂಗನ ಶರಣರ ಬರವೆನ್ನ ಪ್ರಾಣ ಕಂಡಯ್ಯಾ. 376
--------------
ಬಸವಣ್ಣ
ಅಸಿ ಮಸಿ ಕೃಷಿ ವಾಣಿಜ್ಯ ಮುಂತಾದ ಕಾಯಕವ ಮಾಡಿ, ಭಕ್ತರ ಪಡುಗ, ಪಾದತ್ರಾಣ, ಪಹರಿ, ಬಾಗಿಲು, ಬೊಕ್ಕಸ, ಬಿಯಗ ಮುಂತಾದ ಕಾಯಕವಂ ಮಾಡಿಕೊಂಡು ವ್ರತಕ್ಕೆ ಊಣೆಯವಿಲ್ಲದೆ ಮಾಡುವ ಕೃತ್ಯಕ್ಕೆ ಕಡೆಯಾಗದೆ ಈ ಭಕ್ತನ ಅಂಗಳ ಅವಿಮುಕ್ತಿಕ್ಷೇತ್ರ, ಆತನ ಮನೆಯೆ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಾಶ್ರಯ.
--------------
ಅಕ್ಕಮ್ಮ
ಅಯ್ಯ, ಶ್ರೀಗುರುಲಿಂಗಜಂಗಮ ಕರುಣ ಕಟಾಕ್ಷೆಯಿಂದ ಶ್ರುತಿ ಗುರು ಶ್ವಾನುಭಾವವಿಡಿದು ಹಿಡಿದಂಥ ಸನ್ಮಾರ್ಗಾಚಾರಕ್ರಿಯೆಗಳ ಅಪಮೃತ್ಯು ಬಂದು ತಟ್ಟಿ ಪ್ರಾಣತ್ಯಾಗವ ಮಾಡಿದಡು ಅಂಜಿ ಅಳುಕದೆ, ಪರಮ ಪತಿವ್ರತತ್ವದಿಂದ ಹಿಂದು ಮುಂದಣ ಪುಣ್ಯಪಾಪವನೆಣಿಸದೆ, ಇಂತು ಶ್ರೀಗುರುವಾಕ್ಯವ ನಿಜನೈಷ್ಠಯಿಂದರಿದು, ನಿಜವೀರಶೈವ ಸದ್ಭಕ್ತಾಚಾರಲಿಂಗಮುಖದಿಂದ ಬಂದ ಸ್ವಪಾಕವಾದಡು ಸರಿಯೆ, ಷಣ್ಮತದಿಂದ ಧನ-ಧಾನ್ಯರೂಪಿನಿಂದ ಬಂದ ಪದಾರ್ಥವಾದಡು ಸರಿಯೆ, ಭಕ್ತಾಶ್ರಯದಲ್ಲಿ ಸ್ವಪಾಕವ ಮಾಡಿ, ಸಂಬಂಧಾಚರಣೆಗಳಿಂದ ಪವಿತ್ರಸ್ವರೂಪ ಪಾದೋದಕ ಪ್ರಸಾದವೆನಿಸಿ, ನಿರ್ವಂಚಕತ್ವದಿಂದ ಸಂಚಲಚಿತ್ತವನಳಿದು, ಮಂತ್ರಸ್ಮರಣೆಯಿಂದ ಸರ್ವಾಚಾರ ಸಂಪತ್ತಿನಾಚರಣೆಯನೊಳಕೊಂಡು, ಸಮಸ್ತಲೋಕ ಪಾವನಮೂರ್ತಿ ನಿಷ್ಕಲ ಪರಶಿವಲಿಂಗಜಂಗಮಕ್ಕೆ ಕೊಟ್ಟುಕೊಂಬ ಸದ್ಭಕ್ತ ಜಂಗಮದ ಚರಣಕಮಲಧೂಳನವೆ ದ್ವಿತೀಯ ಕೈಲಾಸ ಶಿವಮಂದಿರವೆಂದು ಹಿಂದು-ಮುಂದಣ ಆಶೆ-ಆಮಿಷದ ಭ್ರಾಂತು-ಭ್ರಮೆಗಳನುಳಿದು, ಧ್ಯಾನ-ಮೌನ-ನೇಮ-ನಿತ್ಯ-ಸತ್ಯ-ಸದ್ಭಾವವೆಂಬ ಷಡ್ಗುಣೈಶ್ವರ ಸಂಪದವ ನಿಷ್ಕಲಪರತತ್ವಲಿಂಗದಿಂ ಪಡದು, ಆ ಲಿಂಗದೊಡನೆ ಭೋಗಿಸಿ, ನಿಷ್ಕಲ ಪರತತ್ವಮೂರ್ತಿ ತಾನಾದ ನಿಜಮೋಕ್ಷದಿರವೆ ಸದ್ಯೋನ್ಮುಕ್ತಿದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ಚೆನ್ನಬಸವರಾಜೇಂದ್ರನು ನಿರ್ಲಜ್ಜ ಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಭ್ಯಾಸವೆನ್ನ ವರ್ತಿಸಿತ್ತಯ್ಯಾ, ಭಕ್ತಿ ಸಾಧ್ಯವಾಗದು, ನಾನೇವೆನಯ್ಯಾ ಅನು ನಿಮ್ಮ ಮನಂಬೊಗುವನ್ನಕ್ಕ ನೀವೆನ್ನ ಮನಂಬೊಗುವನ್ನಕ್ಕ ಕಾಯಗುಣಂಗಳ ಕಳೆದವರಿಗೆ ಶರಣೆಂಬೆ ಕೂಡಲಸಂಗಮದೇವಾ. 511
--------------
ಬಸವಣ್ಣ
ಅಯ್ಯ, ನಿರಾಲಂಬ ನಿಃಕಳಂಕ ನಿಃಪ್ರಪಂಚತ್ವದಿಂದ ನಾಲ್ವತ್ತೆಂಟು ಪ್ರಣಮಸ್ಮರಣೆಯಿಂದ ಏಕಾದಶಲಿಂಗಂಗಳಿಗೆ ಏಕಾದಶಪ್ರಸಾದವ ಸಮರ್ಪಿಸಿ, ತಾನಾ ಸಂತೃಪ್ತಿಮಹಾಪ್ರಸಾದದಲ್ಲಿ ಲೋಲುಪ್ತನಾದಡೆ ನಿಜಪ್ರಸಾದಿಯೆಂಬೆ ನೋಡ. ಅದರ ವಿಚಾರವೆಂತೆಂದಡೆ : ನಾಲ್ವತ್ತೆಂಟು ಪ್ರಣವದೊಳಗೆ ದ್ವಾದಶಪ್ರಣಮಸ್ಮರಣೆಯಿಂದ ಆಪ್ಯಾಯನಪ್ರಸಾದ, ಸಮಯಪ್ರಸಾದ, ಗುರುಪ್ರಸಾದವ ಆಚಾರಲಿಂಗ-ಗುರುಲಿಂಗ-ಇಷ್ಟಲಿಂಗದೇವಂಗೆ ಸುಚಿತ್ತ, ಸುಬುದ್ಧಿ, ನಿರುಪಾದ್ಥಿಕಹಸ್ತದಿಂದ ಸಮರ್ಪಿಸಿ, ಆ ತೃಪ್ತಿಯ ಲೋಲುಪ್ತಿಯಲ್ಲಿ ತಾನಾದಡೆ ಅನಾದಿನಿಃಕಳಂಕ ಗುರುಬಸವರಾಜನೆಂಬೆ ನೋಡ. ಛತ್ತೀಶಪ್ರಣಮದೊಳಗೆ ದ್ವಾದಶಪ್ರಣಮಸ್ಮರಣೆಯಿಂದ ಪಂಚೇಂದ್ರಿಯವಿರಹಿತಪ್ರಸಾದ, ಕರಣಚತುಷ್ಟಯವಿರಹಿತಪ್ರಸಾದ, ಲಿಂಗಪ್ರಸಾದವ ಶಿವಲಿಂಗ-ಜಂಗಮಲಿಂಗ-ಪ್ರಾಣಲಿಂಗದೇವಂಗೆ ನಿರಹಂಕಾರ, ಸುಮನ, ನಿರಾಲಂಬಹಸ್ತದಿಂದ ಸಮರ್ಪಿಸಿ, ಆ ತೃಪ್ತಿಯ ಲೋಲುಪ್ತಿಯಲ್ಲಿ ತಾನಾದಡೆ ಅನಾದಿ ನಿಃಕಾಮ ಶೂನ್ಯಲಿಂಗಸ್ವರೂಪ ಚೆನ್ನಬಸವರಾಜನೆಂಬೆ ನೋಡ ! ಇಪ್ಪತ್ತುನಾಲ್ಕು ಪ್ರಣಮದೊಳಗೆ ದ್ವಾದಶಪ್ರಣಮಸ್ಮರಣೆಯಿಂದ ಸಮತಾಪ್ರಸಾದ-ಪ್ರಸಾದಿಯಪ್ರಸಾದ-ಜಂಗಮಪ್ರಸಾದವ ಪ್ರಸಾದಲಿಂಗ-ಮಹಾಲಿಂಗ-ಭಾವಲಿಂಗದೇವಂಗೆ ಸುಜಾÕನ, ಸದ್ಭಾವ, ನಿಃಪ್ರಪಂಚಹಸ್ತದಿಂದ ಸಮರ್ಪಿಸಿ, ಆ ಪರಿಣಾಮಲೋಲುಪ್ತಿಯಲ್ಲಿ ತಾನಾದಡೆ ಅನಾದಿ ನಿರಂಜನ ಜಂಗಮ ಸ್ವರೂಪ ಪ್ರಭುದೇವರೆಂಬೆ ನೋಡ. ಇನ್ನು ಉಳಿದ ದ್ವಾದಶಪ್ರಣಮಸ್ಮರಣೆಯಿಂದ ಸದ್ಭಾವಪ್ರಸಾದ-ಜಾÕನಪ್ರಸಾದವ ಇಂತು ನವಲಿಂಗಪ್ರಸಾದ ಪಾದೋದಕಂಗಳ ಸಂತೃಪ್ತಿಯಲ್ಲಿ ಸಾಕಾರ ನಿರಾಕಾರನಾದ ಪರತತ್ವಜ್ಯೋತಿರ್ಮಯಲಿಂಗದೇವಂಗೆ ನಿಜಾನಂದಹಸ್ತದಿಂದ ಸಮರ್ಪಿಸಿ, ಮತ್ತಾ ಅನಾದಿಕುಳಸನ್ಮತನಾದ ದಶವಿಧಪಾದೋದಕ, ಏಕಾದಶಪ್ರಸಾದದಲ್ಲಿ ಕೂಡಿ, ಘನಸಾರದಂತಾದಡೆ ಅನಾದಿಪೂರ್ಣಮಯ ನಿಜವಸ್ತು ತಾನೆ ನೋಡ, ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಂಗನೆಯ ಚಿತ್ತ, ರಮಣನ ಸುತ್ತಿಮುತ್ತಿ ಅಪ್ಪಿ ಅಗಲದಿಪ್ಪಂತೆ ಜಾಗ್ರ, ಸ್ವಪ್ನ, ಸುಷುಪ್ತಿಯಲ್ಲಿ ಶರಣ ಚಿತ್ತರತಿ ಶಿವಲಿಂಗವ ಸುತ್ತಿ ಮುತ್ತಿ ಅಪ್ಪಿ ಅಗಲದಿಪ್ಪರೆ ಆ ಮಹಾತ್ಮನ ಏನೆಂದುಪಮಿಸುವೆನಯ್ಯ? ಲಿಂಗಪ್ರಾಣಿಯ, ಪ್ರಾಣಲಿಂಗಸಂಬಂದ್ಥಿಯ? ಸ್ವತಂತ್ರ ವಸ್ತುವಿನಲ್ಲಿ ಅರಿವರತು ಬೆರಗು ನಿಬ್ಬೆರಗಾದ, ಘನಲಿಂಗಪ್ರಾಣಿಗೆ ನಮೋ ನಮೋಯೆಂಬೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಂಥ ಬ್ರಹ್ಮಾಂಡವ ಎಪ್ಪತ್ತೈದುಲಕ್ಷದ ಮೇಲೆ ಸಾವಿರದೇಳುನೂರಾ ನಲವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಭದ್ರವೆಂಬ ಭುವನ. ಆ ಭುವನದೊಳು ಭದ್ರಕರ್ಣನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಾ ಎಪ್ಪತ್ತುಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ಎಂಟುನೂರಾ ಎಪ್ಪತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣ ಇಂದ್ರಾದಿ ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅನ್ಯದೈವ ಭವಿನಾಸ್ತಿಯಾದಲ್ಲಿ, ಪಾದತೀರ್ಥಪ್ರಸಾದವಿಲ್ಲದೆ ಬಾಯಿದೆರೆದಲ್ಲಿ, ಲಿಂಗಕ್ಕೆ ಕೊಡದೆ ಕೊಂಡಲ್ಲಿ, ಆ ವ್ರತಕ್ಕೆ ಆಚಾರವೆ ಪ್ರಾಣವಾಗಿರ್ಪ ರಾಮೇಶ್ವರಲಿಂಗ ದೂರಸ್ಥನಾಗಿಪ್ಪನು
--------------
ಅಕ್ಕಮ್ಮ
ಅಡಿಯಿಡಲಿಲ್ಲ, ನುಡಿಯನೇನೆನಲಿಲ್ಲ,ಸರಸವೆನಲಿಲ್ಲ, ಆ ಸರಸ ವಿರೂಪಾದ ಬಳಿಕ ಪ್ರಸಾದವೆನಲಿಲ್ಲ. ಆ ಪ್ರಸಾದ ಪರಿಣಾಮದಲ್ಲಿಯಡಗಿತ್ತಯ್ಯ ಸಂಗಯ್ಯ.
--------------
ನೀಲಮ್ಮ
ಅಂಗೈಯೊಳಗಣ ಲಿಂಗಮ್ರ್ಕೂಯ ಕಂಗಳಲ್ಲಿಂಗಗೊಟ್ಟಡೆ, ತಿಂಗಳ ಸೂಡನಾದೆ ನೋಡಾ ಅಯ್ಯಾ. ಮಂಗಳಮೂರ್ತಿ ಗಂಗಾಜೂಟಾಂಗಮಯ ಕಪಿಲಸಿದ್ಧ ಮಲ್ಲಿಕಾರ್ಜುನಂಗ ಬೇರೆಂದರಿಯಲ್ಲ ನೋಡಾ, ನಿಜದ ನಿರ್ವಯಲಲ್ಲಯ್ಯನೆ.
--------------
ಸಿದ್ಧರಾಮೇಶ್ವರ
ಅಪ್ಪಿನಲಾದ ಘಟವು ಅರ್ಪಿ[ತದ]ಲೆ ಲೀಯ, ಇಪ್ಪತ್ತೈದೆಂದು ಕುರುಹಿಡುವೆ ಏಕೆಲೆ ಮನುಜಾ. ತಾ ಹುಟ್ಟಿ ತಮ್ಮವ್ವೆ ಬಂಜೆಯೆಂಬ ನ್ಯಾಯದಲ್ಲಿ ಬೇರೆ ವಿವರಿಸಿ ತೋರಬಲ್ಲಡದು ಯೋಗ. ಅಭ್ಯಾಸಸಮಾದ್ಥಿಯಿಂ ಅನುಭವಿಗಳೆಲ್ಲರಿಗೆ ಬಯಲ ಸಮಾದ್ಥಿಯಾಗದಯ್ಯಾ ಕಪಿಲಸಿದ್ಧಮಲ್ಲಿಕಾರ್ಜುನ
--------------
ಸಿದ್ಧರಾಮೇಶ್ವರ

ಇನ್ನಷ್ಟು ...
-->