ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಲಿಂಗಾರ್ಚನೆಯಂ ಮಾಡಿ, ಅಂಗಭಾಜನ, ಲಿಂಗಭಾಜನ, ಪತ್ರಭಾಜನದಲ್ಲಿ ಸಹಭೋಜನವ ಮಾಡುವ ಸಮಯದಲ್ಲಿ ಗುರು ಲಿಂಗ ಜಂಗಮ[ಪ್ರಸಾದ]ವೆಂದೆ ಪ್ರಸಾದವ ಪಡೆವುದು. ಪ್ರಸಾದವೆಂದು ಪಡೆದ ಬಳಿಕ ಪದಾರ್ಥವೆಂದು ಭೋಗಿಸಿದಡೆ, ಪ್ರಸಾದ ದ್ರೋಹ. ಪ್ರಸಾದವೆಂದು ಅರ್ಪಿತವ ಭೋಗಿಸಿ, ಉಳಿಯದ ಹಾಂಗೆ ತೆಗೆದುಕೊಂಬುದಯ್ಯಾ. ಮೀರಿದಂದು ಅನಿಲಬ್ರಹ್ಮವಂಗಸಂಬಂಧವಾದ ಉಳುಮೆಯಲಿ ಉಳಿದ ತಾರಕಬ್ರಹ್ಮವಯ್ಯಾ. [ಅದೇನು ಕಾರಣವೆಂದಡೆ:] ಶೈವಕ್ಕೂ ವೀರಶೈವಕ್ಕೂ ಭೇದವಿಲ್ಲ ! ಆದಿಗೂ ಅನಾದಿಗೂ ನೀನೆ ! ಪದಾರ್ಥಕ್ಕೂ ಪ್ರಸಾದಕ್ಕೂ ನೀನೆ, ಭೂ ಗಗನಕ್ಕೂ ನೀನೇ ! ಕ್ರೀ ನಿಃ [ಕ್ರೀ ಗೂ ನೀನೇ]. ಪ್ರಸಾದದ ಆದಿಕುಳವ ನಾನೆತ್ತ ಬಲ್ಲೆನಯ್ಯಾ ! ದೇವ, ಕ್ರೀ ಮೀರಿದುದಾಗಿ ಸಗುಣ ನಿರ್ಗುಣವಾದ, ಸಾಕಾರ ನಿರಾಕಾರವಾದ. ಏಕ ಬ್ರ[ಹ್ಮ ಸಂ]ಗನ ಬಸವಣ್ಣ ಬಿಬ್ಬಿ ಬಾಚಯ್ಯ ಮರುಳಶಂಕರದೇವರೆಂಬ ಪರಂಜ್ಯೋತಿ ಮಹಾಲಿಂಗದಲ್ಲಿ ಏಕತೆಯಾದೆನು ಕಾಣಾ, ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಲಿಂಗಬಾಹ್ಯಂಗೆ ಲಿಂಗಬಾಹ್ಯನಾಗಬೇಕಲ್ಲದೆ, ಸುಜಾತಿ ವಿಜಾತಿಯ ಬೆರಸಿದುದುಂಟೆ ? ಇಂತೀ ಆರುಶೈವವ ಹೊದ್ದದ ವೀರಶೈವವೆಂದ ಮತ್ತೆ. ಇವ ಮೀರಲಿಲ್ಲ, ಪಂಚಾಚಾರಶುದ್ಧಂಗೆ. ಇಂತೀ ಪಥವನೇರಿ ಬದುಕಿ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಲಿಂಗವ ನೆರೆಯರಿದು ನಿಷ್ಠೆ ನಿಬ್ಬೆರಸಿದ ಬಳಿಕ ಅಹಂಕಾರ ಮಮಕಾರಂಗಳುಂಟೆ? ಪಂಚಕ್ಲೇಶಂಗಳು ಮದ ಮತ್ಸರಗಳುಂಟೆ? ಕ್ರಾಮ ಕ್ರೋಧಂಗಳು ತಾಮಸಗುಣಂಗಳುಂಟೆ? ಲಿಂಗದಂಗವೆ ಅಂಗವಾದ ಲಿಂಗದೇಹಿಗೆ? ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಲಿಂಗದೊಡನೆ ಸಹಭೋಜನವ ಮಾಡುವ ಅದ್ವೈತಿಗಳ ಮಾತುಕೇಳಿ, ಸಂಸಾರದೊಳಗಿರ್ದ ಭಕ್ತನು, ಆ ಲಿಂಗದೊಡನೆ ಸಹಭೋಜನವ ಮಾಡಿದಡೆ ಅಘೋರನರಕ ತಪ್ಪದು. ಅದೆಂತೆಂದಡೆ: ``ರಾಗದ್ವೇಷಮದೋನ್ಮತ್ತಸ್ತತ್ತ್ವಜ್ಞಾನಪರಾಙ್ಮುಖಃ ಸಂಸಾರಸ್ಯ ಮಹಾಪಂಕೇ ಜೀರ್ಣಾಂಗೋ ಹಿ ನಿಮಜ್ಜತಿ '' ಇದನರಿದು ಲಿಂಗದೊಡನೆ ಸಹಭೋಜನವ ಮಾಡಲಾಗದು. ಮಾಡುವ ಅಜ್ಞಾನಿಗಳು ನೀವು ಕೇಳಿರೊ: ಗುರುಲಿಂಗಜಂಗಮತ್ರಿವಿಧವನು ಏಕಾರ್ಥವ ಮಾಡದನ್ನಕ್ಕರ ಸಹಭೋಜನವುಂಟೆ ಹೇಳಿರಣ್ಣಾ ! ಇಲ್ಲವಾಗಿ. ಅದೆಂತೆಂದಡೆ: ``ಗುರುರೇಕೋ ಲಿಂಗಮೇಕಂ ಏಕಾರ್ಥೋ ಜಂಗಮಸ್ತಥಾ ತ್ರಿವಿಧೇ ಭಿನ್ನಭಾವೇನ ಶ್ವಾನಯೋನಿಷು ಜಾಯತೇ ''_ ಇಂತೆಂಬ ಶಿವನವಾಕ್ಯವನರಿಯದೆ, ನೀವೇ ಲಿಂಗವೆಂಬಿರಿ ಲಿಂಗವೆ ನೀವೆಂಬಿರಿ ಜನನ_ಮರಣ, ತಾಗು_ನಿರೋಧ ಉಳ್ಳನ್ನಕ್ಕರ ನೀವೆಂತು ಲಿಂಗವಪ್ಪಿರಿ ಹೇಳಿರಣ್ಣಾ ? ಆ ಶಿವಜ್ಞಾನದ ಮಹಾವರ್ಮವನರಿಯದೆ ಲಿಂಗದೊಡನೆ ಸಹಭೋಜನವ ಮಾಡಿದೊಡೆ ಅಘೋರನರಕದಲ್ಲಿಕ್ಕದೆ ಬಿಡುವನೆ ನಮ್ಮ ಕೂಡಲಚೆನ್ನಸಂಗಮದೇವನು ?
--------------
ಚನ್ನಬಸವಣ್ಣ
ಲೋಕದ ಗಂಡರ ಮಹಾತ್ಮೆಯ ಹೆಂಡರರಿವರೆ? ಹಾ ಹಾ! ಅಯ್ಯಾ! ಶರೀರದೊಳಗೆ ಸಂದು ನಿಮ್ಮನಂತುಗಾಣಲಾರದಾದನು ಬೇಟಗೊಂಡು ನಿಮ್ಮನೆ ಬೇಡುವೆನಯ್ಯ. ಅಯ್ಯಾ ಎನ್ನನೆನಿಸು ಭವ ಬರಿಸಿದಡೆ ನೀನೆ ಗಂಡ ನಾನೆ ಹೆಂಡತಿ, ಕಪಿಲಸಿದ್ಧಮಲ್ಲೇಶ್ವರ, ದೇವರ ದೇವಯ್ಯ.
--------------
ಸಿದ್ಧರಾಮೇಶ್ವರ
ಲೋಕಹಿತಾರ್ಥವಾಗಿ, ಪ್ರಾಣಿಗಳೆಲ್ಲ ಕೆಟ್ಟಹರೆಂದು ಶರಣ ಲಿಂಗವಾಗಿ, ಲಿಂಗಭರಿತ ಶರಣನಾಗಿ ಬದುಕಿಸಿದನು ಕೇಳಿರಣ್ಣಾ. ಯೇ ರುದ್ರಲೋಕಾದವತೀರ್ಯ ರುದ್ರಾ ಮಾನುಷ್ಯಮಾಶ್ರಿತ್ಯ ಜಗದ್ಧಿತಾಯ ಚರಂತಿ ನಾನಾವಿಧಚಾರುಚೇಷ್ಟಾಸ್ತೇಭ್ಯೋ ನಮಸ್ತ್ರ್ಯಂಬಕಪೂಜಕೇಭ್ಯಃ ಎಂದುದಾಗಿ, ಶರಣರೂಪಾಗಿ ಬಂದು ಶ್ರೀಮೂರ್ತಿಯ ತೋರಿ ಪಾಪವ ಕಳೆದನು. ಉಪಪಾತಕಕೋಟೀನಾಂ ಬ್ರಹ್ಮಹತ್ಯಶತಾನಿ ಚ ದಹಂತ್ಯಶೇಷಪಾಪಾನಿ ಶಿವಭಕ್ತಸ್ಯ ದರ್ಶನಾತ್ ಭಕ್ತಜನಂಗಳ ಕೂಡೆ ಸಂಭಾಷಣೆಯ ಮಾಡಿ ಮಹಾಪಾತಕಂಗಳ ಕಳೆದನು. ಮಹಾಪಾತಕಕೋಟಿಘ್ನಃ ಶ್ವಪಚೋ[s]ಪಿ ಲಿಂಗಪೂಜಕಃ ತತ್ಸಂಭಾಷಣಾನ್ಮುಕ್ತಿರ್ಗಣಮುಖ್ಯಗಣೇಶ್ವರಃ ಶ್ರೀಗುರುಮೂರ್ತಿಯ ತೋರಿ ಸಂಭಾಷಣೆಯಂ ಮಾಡಿ ಪಾದೋದಕ ಪ್ರಸಾದವನಿತ್ತು ಸಲಹಿ ರಕ್ಷಿಸಲು ಬಂದನು ಕಾಣಿರಣ್ಣಾ. ಇದನರಿಯದೆ, ಶರಣರು ದ್ರವ್ಯಾರ್ಥಿಗಳಾಗಿ ಬಂದರೆಂಬಿರಿ, ನಾನು ಮಾಡಿದೆನು ಶರಣರು ಮಾಡಿಸಿಕೊಂಡಹರೆಂದೆಂಬಿರಿ, ಉಂಟೆಂದಿರಿ, ಇಲ್ಲೆಂದಿರಿ, ಈ ಪರಿ ಅಜ್ಞಾನದಲ್ಲಿ ಕಂಡು, ನುಡಿದು, ದೋಷಿಗಳಹಿರಿ. ಶರಣರ ಶಿವನೆಂದು ನಂಬಿಮಾಡಲು ಸಿರಿಯಾಳನು ಮಗನ ಕೊಟ್ಟಡೆ ಕೈಲಾಸವ ಕೊಟ್ಟನು. ದಾಸ ವಸ್ತ್ರನಿತ್ತಡೆ ಮಹಾವಸ್ತು ತವನಿದ್ಥಿಯ ಕೊಟ್ಟನು. ಬಲ್ಲಾಳ ವಧುವನಿತ್ತಡೆ, ತನ್ನನೇ ಕೊಟ್ಟನು. ಈ ಪರಿ ಅಣುವಿಂಗೆ ಅಣು, ಮಹತ್ತಿಂಗೆ ಮಹತ್ತವನೆ ಕೊಟ್ಟನು. ಸಕೃತ್ ಲಿಂಗಾರ್ಚಕೇ ದತ್ವಾ ಸುವರ್ಣಂ ಚಾಣುಮಾತ್ರಕಂ ದೇವಸಂಪೂಜ್ಯಮಾನೇಷು ಗಣಮುಖ್ಯೋ ಗಣೇಶ್ವರಃ ಭಕ್ತಿಯಿಂ ನಂಬಿ ಮಾಡಿರೆ, ದುಭಾರ್ವಿಸಿ ಕೆಡಬೇಡ. ಶರಣರೇ ಶಿವನೆಂದು ನಂಬಿ ಮಾಡಿರಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನ ಕೂಡುವುದಯ್ಯಾ.
--------------
ಉರಿಲಿಂಗಪೆದ್ದಿ
ಲೋಕದಲ್ಲಿಹ ವಿಟರೆಲ್ಲ ವಾರಂಗನೆಯ ನೋಡಿದರಲ್ಲದೆ, ನಮ್ಮ ವಾರಾಂಗನನೊಬ್ಬರೂ ನೋಡಲಿಲ್ಲಯ್ಯಾ. ಲೋಕದಲ್ಲಿಹ ಕುಶಲರೆಲ್ಲ ಜಂಗಮದೊಂಗೆ ನುಡಿದರಲ್ಲದೆ, ಎಮ್ಮ ಲಿಂಗದೊದಿಂಗೊಬ್ಬರು ನುಡಿದವರಿಲ್ಲ ಕಂಡಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ, ನಾನೊಬ್ಬನೆ ಪ್ರಮಥರ ಮುಂದೆ.
--------------
ಸಿದ್ಧರಾಮೇಶ್ವರ
ಲಿಂಗಜಂಗಮ ಜಂಗಮಲಿಂಗದ ಮುಖವ ನೀವಲ್ಲದೆ ಇನ್ನು ಬಲ್ಲವರಾರಯ್ಯಾ ? ಅಂಗದ ಮೇಲೆ ಲಿಂಗವುಳ್ಳುದೆಲ್ಲವೂ ಸಂಗಮನಾಥನೆಂದಲ್ಲಿ ಪರವಾದಿ ಬಿಜ್ಜಳನು ಒರೆದು ನೊಡಲೆಂದಟ್ಟಿದಡೆ ಹಗರಣಿಗರ ಜಂಗಮಮುಖದಲ್ಲಿ ಲಿಂಗವ ಮಾಡಿದವರಾರು ಹೇಳಾ ನೀವಲ್ಲದೆ ? ಮರದ ಮಾನಿಸನ ಕರೆದು `ಓ' ಎನಿಸಿ ನುಡಸಿ ಉಡಿಸಿ ಉಣಿಸಿ ಜಂಗಮಲಿಂಗಪ್ರಾಣಿ ಬಸವಣ್ಣನೆಂಬ ಧ್ವಜವನೆತ್ತಿ ಮೆರೆದವರಾರು ಹೇಳಾ ಈ ಕಲ್ಯಾಣದಲ್ಲಿ ನೀವಲ್ಲದೆ ? ಜಂಗಮಮುಖಲಿಂಗವನರಿಯೆನೆಂದು ಎನ್ನ ಮನಕ್ಕೆ ಸಂದೇಹವನೊಡ್ಡಿ ಜಾರಿದಡೆ ನಾನು ಸೈರಿಸಬಲ್ಲೆನೆ ? ನೀನು ಜಂಗಮಮುಖಲಿಂಗಸಂಬಂಧಿ ಎಂಬುದ ಕೇಳಿ ಆದಿಗಣನಾಥನು ಅಲ್ಲಮಪ್ರಭುವೆಂಬ ನಾಮವ ಧರಿಸಿ ನಿನ್ನನರಿಸಿಕೊಂಡು ಬರುತ್ತಲೈದಾನೆ. ಕೂಡಲಚೆನ್ನಸಂಗಮದೇವರು ಸಾಕ್ಷಿಯಾಗಿ, ಸಂಗನಬಸವಣ್ಣಾ, ನೀನೇ ಜಂಗಮಪ್ರಾಣಿಯೆಂದು ನಾನು ನಂಬಿದೆನು.
--------------
ಚನ್ನಬಸವಣ್ಣ
ಲಿಖಿತಕ್ಕೆ ಲಿಖಿತ ಮಹಾಲಿಖಿತವುಂಟೆಂಬೆನೆ ? ಲಿಂಗ ಸಂಸಾರಿ, ಲಿಂಗವಿಲ್ಲೆಂಬೆನೆ ? ಅಂಗ ಸಂಸಾರಿ, ಇಲ್ಲಿನ್ನಾವುದ ಘನವೆಂಬೆ, ಆವುದ ಕಿರಿದೆಂಬೆ, ತಾಳಸಂಪುಟಕ್ಕೆ ಬಾರದ ಘನವ ? ಸುಖಕ್ಕೆ ಸುಖ ತಾರುಗಂಡು, ಸಮಸುಖವಾಗಿ, ಉಪಮಾತೀತ ತ್ರಿವಿಧ ಸಂಪತ್ತುಗಳೆಂಬ ವಾಯುವಾಕುದಲ್ಲಿ, ಆದಿ ಮಧ್ಯ ಅವಸಾನರಹಿತ ಅನಂತ ಶರಣ ಅಜಾತ ಕೂಡಲಚೆನ್ನಸಂಗಾ ನಿರ್ನಾಮ ಲಿಂಗೈಕ್ಯ.
--------------
ಚನ್ನಬಸವಣ್ಣ
ಲವಣವ ಕೊಂಬುದೆಲ್ಲವು ಒಂದೆ ಶೀಲ. ಸರ್ವ ಸಪ್ಪೆ ಎಂಬುದು ಒಂದೆ ಶೀಲ. ಇವೆಲ್ಲವ ವಿಚಾರಿಸಿ, ತಟ್ಟುಮುಟ್ಟಿಗೆ ಬಾರದೆ ತೊಟ್ಟುಬಿಟ್ಟ ಹಣ್ಣಿನಂತೆ ನೆಟ್ಟನೆ ವ್ರತವ ಕೂಡುವುದು ಮೂರನೆಯ ಶೀಲ. ಮೂರು ಕೂಡಿ ಒಂದಾಗಿ ನಿಂದುದು, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ಶೀಲ.
--------------
ಅಕ್ಕಮ್ಮ
ಲಿಂಗವನರಿತು ಅಂಗ ಲಯವಾಗಬೇಕು. ಅಂಕುರ ತೋರಿ ಬೀಜ ನಷ್ಟವಾದಂತೆ, ಸ್ವಯಂಭು ತೋರಿ ಪ್ರತಿಷ್ಠೆ ನಷ್ಟವಾದಂತೆ, ಅರ್ಕೇಶ್ವರಲಿಂಗವ ಅರಿದ ಗೊತ್ತಿನ ಒಲುಮೆ.
--------------
ಮಧುವಯ್ಯ
ಲಿಂಗಕ್ಕೆ ಕೊಟ್ಟು ಕೊಂಡಡೆ ಪ್ರಸಾದಿ. ಜಂಗಮವಾರೋಗಣೆಯ ಮಾಡಿ, ಮಿಕ್ಕುದ ಕೊಂಡಡೆ ಪ್ರಸಾದಿ. ಇದೇ ಪ್ರಸಾದದಾದಿ ಕಂಡಯ್ಯಾ. ಲಿಂಗಕ್ಕೆ ಕೊಡದೆ, ಜಂಗಮಕ್ಕೆ ನೀಡಿ, ಶೇಷಪ್ರಸಾದಮಂ ಪಡೆಯದೆ ಕೊಂಡಡೆ, ಹುಳುಗೊಂಡದಲ್ಲಿಕ್ಕುವ, ಮಹಾಲಿಂಗ ಕಲ್ಲೇಶ್ವರದೇವರು.
--------------
ಹಾವಿನಹಾಳ ಕಲ್ಲಯ್ಯ
ಲಿಂಗವಾದಡೆ ಚೆನ್ನಬಸವಣ್ಣನಂತಾಗಬೇಕಯ್ಯಾ; ವೀರನಾದಡೆ ಮಡಿವಾಳಯ್ಯನಂತಾಗಬೇಕಯ್ಯ; ನಿಗ್ರಹಿಯಾದಡೆ ಹೊಡೆಹುಲ್ಲ ಬಂಕಯ್ಯನಂತಾಗಬೇಕಯ್ಯ; ದ್ಥೀರನಾದಡೆ ಘಟ್ಟಿವಾಳಯ್ಯನಂತಾಗಬೇಕಯ್ಯ; ಲಿಂಗದಲ್ಲಿ ನಿರ್ವಯಲಾದಡೆ ನೀಲಲೋಚನೆಯಮ್ಮನಂತಾಗಬೇಕಯ್ಯ. ಈ ಐವರ ಕಾರುಣ್ಯಪ್ರಸಾದವ ಕೊಂಡು ಬದುಕಿದೆನಯ್ಯ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.
--------------
ಸಿದ್ಧರಾಮೇಶ್ವರ
ಲಿಂಗಕ್ಕಲ್ಲದೆ ಮಾಡೆನೀ ಮನವನು, ಜಂಗಮಕ್ಕಲ್ಲದೆ ಮಾಡೆನೀ ಧನವನು, ಪ್ರಸಾದಕ್ಕಲ್ಲದೆ ಮಾಡೆನೀ ತನುವನು, ಲಿಂಗಜಂಗಮಪ್ರಸಾದಕ್ಕಲ್ಲದೆ ಬಾಯ್ದೆರೆಯೆನೆಂಬುದೆನ್ನ ಭಾಷೆ. ಅನರ್ಪಿತವಾದಡೆ ತಪ್ಪೆನ್ನದು, ಮೂಗ ಕೊಯಿ, ಕೂಡಲಸಂಗಮದೇವಾ.
--------------
ಬಸವಣ್ಣ
ಲಿಂಗಪ್ರೇಮಿಗಳನಂತರುಂಟು ಜಗದೊಳಗೆ, ಜಂಗಮಪ್ರೇಮಿಗಳಾರನೂ ಕಾಣೆನಯ್ಯ. ಲಿಂಗಪೂಜಕರನಂತರುಂಟು ಜಗದೊಳಗೆ, ಜಂಗಮಪೂಜಕರಾರನೂ ಕಾಣೆನಯ್ಯ. ಲಿಂಗಪ್ರಾಣಿಗಳನಂತರುಂಟು ಜಗದೊಳಗೆ, ಜಂಗಮಪ್ರಾಣಿಗಳಾರನೂ ಕಾಣೆನಯ್ಯ. ಲಿಂಗದ ಬಾಯಿ ಜಂಗಮವೆಂದರಿದು ಮಾಡಿ ಮನವಳಿದು ಘನವಾದ ಸಂಗನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎಂಬೆನಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ

ಇನ್ನಷ್ಟು ...
-->