ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಉರಿವ ಕೊಳ್ಳಿಯ ಮಂಡೆಯಲಿಕ್ಕಿದಡುರಿವುದು ಮಾಬುದೆ ಕಲ್ಲು ಗುಗ್ಗರಿಯ ಮೆಲಿದಡೆ ಹಲ್ಲು ಹೋಹುದು ಮಾಬುದೆ ಶರಣರೊಡನೆ ಸರಸವಾಡಿದಡೆ ನರಕ ತಪ್ಪದು ಕಾಣಾ ಕೂಡಲಸಂಗಮದೇವಾ.
--------------
ಬಸವಣ್ಣ
ಉರಿ ಆತ್ಮಸ್ಥಾವರಂಗಳಲ್ಲಿ ನಂದದಿಹನ್ನಕ್ಕ, ನೀರು ಒಂದರಲ್ಲಿಯೆ ಇಂಗದಿಹನ್ನಕ್ಕ, ಲಿಂಗವೆಂಬುದೊಂದು ಪ್ರಮಾಣವುಂಟು ಆ ಪ್ರಮಾಣು ಅಪ್ರಮಾಣಹನ್ನಕ್ಕ, ಭಾವ ಮೂರು, ನಿರ್ಭಾವ ಮೂರು, ಸ್ಥೂಲವಾರು, ತತ್ತ್ವವೈದು, ಇಂತಿವು ಕೂಡೆ, ಅಳೆದು ಮರಳಲಿಕ್ಕೆ ಹಲವು ಸ್ಥಲ ಕುಳ ಬೇರಾಯಿತ್ತು. ಬಂಗಾರವೊಂದು ಹಲವು ತೊಡಿಗೆಯ ಹೊಲಬಾದಂತೆ, ತನ್ನಷ್ಟೇ ತದ್ದøಷ್ಟವುಭಯವ ಕೂಡುವನ್ನಬರ, ನಿಃಕಳಂಕ ಮಲ್ಲಿಕಾರ್ಜುನನೆಂದೆನುತ್ತಿರಬೇಕು.
--------------
ಮೋಳಿಗೆ ಮಾರಯ್ಯ
ಉಪನಿಷದ್ವಾಕ್ಯವೆನಬಹುದಲ್ಲದೆ, ಆ ಪರಬ್ರಹ್ಮವೆನಬಾರದು ಸಮತೆ ಸಮಾಧಾನವೆಂಬುದು ಯೋಗದಾಗು ನೋಡಾ. ಸಮತೆ ಸಮಾಧಾನ ನೆಲೆಗೊಳ್ಳದಿರ್ದಡೆ, ಆ ಯೋಗ ಅಜ್ಞಾನದಾಗು. ಅಷ್ಟಶಿಲೆ ಸಹಸ್ರ ಋಷಿಯರು ಸಮತೆ ಸಮಾಧಾನ ನೆಲೆಗೊಳ್ಳದೆ, ನಾನಾ ಯೋÀನಿಯಲ್ಲಿ ಬಂದರು. ಮಹಾಲಿಂಗ ಕಲ್ಲೇಶ್ವರದೇವಾ, ಸಮತೆ ನೆಲೆಗೊಂಡು, ಸಮಾಧಾನ ಸಹಜವಾದುದೆ ಮುಕ್ತಿ ಕ್ಷೇತ್ರ.
--------------
ಹಾವಿನಹಾಳ ಕಲ್ಲಯ್ಯ
ಉಪ್ಪು ಅಪ್ಪು ಕೂಡಿದಂತೆ, ಉರಿ ಕರ್ಪುರ ಕೂಡಿದಂತೆ, ಮಾರುತ ಪರಿಮಳವ ಕೂಡಿದಂತೆ, ಆಕಾಶ ಬಯಲ ಕೂಡಿದಂತೆ, ತಾನು ತಾನಾದುದ ತಾನೇ ಕೂಡಿದಂತೆ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಉರಿಯೊಳಗಣ ಪ್ರಕಾಶದಂತೆ ಮೊಗ್ಗೆಯೊಳಗಣ ಪರಿಮಳದಂತೆ ಕ್ಷೀರದೊಳಗಣ ಘೃತದಂತೆ ಭಾವದೊಳಗಣ ನಿರ್ಭಾವದಂತೆ ಶಬ್ದದೊಳಗಣ ನಿಶ್ಶಬ್ದದಂತೆ ಝೇಂಕಾರ ನಿಜಲಿಂಗಪ್ರಭುವೆ ನಿಮ್ಮ ಶರಣನ ಅನಾದಿಯ ಅರಿವು.
--------------
ಜಕ್ಕಣಯ್ಯ
ಉದ್ದವಾಗಿ ಕೂದಲು ನಿಮಿರ್ದು, ಗಡ್ಡಂಗಳು ಬೆಳದಡೇನು ಹೇಳಾ ! ಗಡ್ಡಂಗಳು ಬೆಳೆಯವೆ ಹೇಳಿರಣ್ಣಾ, ದೊಡ್ಡದಾಗಿ ಬೆಳೆದ ಗಡ್ಡ ಹೋತುಗಳಿಗೆ. ಗಡ್ಡದ ವೃದ್ಧ ವೈಶಿಕರ ಮೆಚ್ಚ, ಮಹಾದೇವ ಸೊಡ್ಡಳ ಭಕ್ತಿ ಸಜ್ಜನರಲ್ಲದವರ.
--------------
ಸೊಡ್ಡಳ ಬಾಚರಸ
ಉಡುಪ ತನ್ನ ಕಳೆಯ ತಾ ಕಾಣಿಸಿಕೊಂಬಂತೆ, ಸೂರ್ಯ ತನ್ನ ಬೆಳಗ ತಾ ಕಾಣಿಸಿಕೊಂಬಂತೆ, ಫಲ ತನ್ನ ರುಚಿಯ ತಾ ಕಾಣಿಸಿಕೊಂಬಂತೆ, ಇಂತೀ ತ್ರಿವಿಧ ಉಂಟೆನಬಾರದು, ಇಲ್ಲೆನಬಾರದು. ತನ್ನಿಂದರಿವಡೆ ಸ್ವತಂತ್ರಿಯಲ್ಲ, ಇದಿರಿನಿಂದರಿವಡೆ ಪರತಂತ್ರಿಯಲ್ಲ. ಈ ಉಭಯವನಿನ್ನಾರಿಗೆ ಹೇಳುವೆ? ಕಡಲೊಳಗೆ ಕರೆದ ವಾರಿಯಂತೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಉಂಟಾದುದುಂಟೆ? ಉಂಟಾದುದನಿಲ್ಲವೆಂಬುದು ಮಿಥ್ಯೆ. ಅದು ತಾ ನಾಮ ರೂಪು ಕ್ರಿಯೆ ಇಲ್ಲವಾಗಿ ಇಲ್ಲ, ಇಲ್ಲವಾದುದನುಂಟೆಂದಡೆ ಘಟಿಸದು. ಉಂಟು ಇಲ್ಲವೆಂಬ ಉಳುಮೆಯಿಲ್ಲದೆ ನಿಜ ತಾನೆ, ಸೌರಾಷ್ಟ್ರ ಸೋಮೇಶ್ವರ.
--------------
ಆದಯ್ಯ
ಉಕ್ಕುದ ಕೊಂಬನ್ನಬರ ಭೃತ್ಯಾಚಾರ ಭಕ್ತಂಗೆ. ಉಕ್ಕುದನಿಕ್ಕಿದಲ್ಲಿ ಅವನ ಅರ್ಥಪ್ರಾಣ ಅಬ್ಥಿಮಾನಕ್ಕೆ ತಪ್ಪುವನಾದಡೆ ಕರ್ತೃತ್ವ ಮೊದಲೆ ಕೆಟ್ಟಿತ್ತು, ಜಂಬುಕಫಲದ ನೇಮವ ಹಿಡಿದಂತಾಯಿತ್ತು, ಅದರಂಗವ ಕಂಡು ನಿಂದಿಸಿದ ಭಕ್ತಂಗೆ. ಬಾಗಿಲ ಪೂಜಿಸಿದ ಜಾರೆ ಲಕ್ಷಣದಂತಾಗಬೇಡ. ನೆರೆ ನಂಬು ಏನ ಹಿಡಿದಲ್ಲಿ, ಕಾಲಾಂತಕ ಬ್ಥೀಮೇಶ್ವರಲಿಂಗವನರಿಯಬಲ್ಲಡೆ.
--------------
ಡಕ್ಕೆಯ ಬೊಮ್ಮಣ್ಣ
ಉಂಬೆಡೆಯಲ್ಲಿ ಭರಿತಾರ್ಪಣವೆಂದು ಮಿಕ್ಕಾದ ವಿಷಯೇಂದ್ರಿಯಂಗಳಲ್ಲಿ ಭರಿತಾರ್ಪಣದ ಸಂದನಳಿದು ಅರ್ಪಿಸಬಲ್ಲಡೆ, ಆ ಗುಣ ಉಭಯಭರಿತಾರ್ಪಣಭೇದ. ಇದನರಿಯದೆ ಲಿಂಗಕ್ಕೆ ಸಂದಲ್ಲದೆ, ತಾನೊಂದು ದ್ರವ್ಯವ ಮುಟ್ಟೆನೆಂಬ ಸಂದೇಹದ ಸಂಕಲ್ಪವಲ್ಲದೆ, ಭರಿತಾರ್ಪಣಾಂಗಿಯ ಲಿಂಗಾಂಗಿಯ ಮುಟ್ಟಲ್ಲ. ಭರಿತಾರ್ಪಣವಾವುದೆಂದಡೆ : ತಾ ಕಂಡುದ ಮುಟ್ಟದೆ, ತಾ ಮುಟ್ಟಿದುದನರ್ಪಿಸದೆ, ತಾ ಕಾಣದುದ ಮುನ್ನವೆ, ತಾ ಕಂಡುದ ಮುಟ್ಟದ ಮುನ್ನವೆ ಅರ್ಪಿತವಾದುದ ದೃಷ್ಟಾಂತವನರಿದು, ಭರಿತಾರ್ಪಣವೆಂಬ ಪರಿಪೂರ್ಣತ್ವವಂ ಕಂಡು, ಅಂಗಸಹಿತವಾಗಿ ಮುಟ್ಟದೆ, ಮನಸಹಿತವಾಗಿ ನೆನೆಯದೆ, ಇಂದ್ರಿಯಂಗಳು ಸಹಿತವಾಗಿ ಒಂದನೂ ಅನುಭವಿಸದೆ ಲಿಂಗವೆ ಅಂಗವಾಗಿ, ಅಂಗವೆ ಲಿಂಗವಾಗಿ ಅಂದಂದಿಗೆ ಕಾಯ ಹಿಂಗಬೇಕೆಂಬುದನರಿದಾಗವೆ ಭರಿತಾರ್ಪಣ, ಚೆನ್ನ ಚೆನ್ನ ಕೂಡಲ ರಾಮೇಶ್ವರಲಿಂಗದ ಸಂಗ.
--------------
ಭರಿತಾರ್ಪಣದ ಚೆನ್ನಬಸವಣ್ಣ
ಉದಕ ಮಜ್ಜನವಲ್ಲ ಪತ್ರೆ ಪೂಜೆಯಲ್ಲ. ಧೂಪ ಪರಿಮಳವಲ್ಲ, ಕಂಚು ಬೆಳಗಲ್ಲ, ಸಯಧಾನ ಅರ್ಪಿತವಲ್ಲ ! ಅದೆಂತೆಂದಡೆ: ಸಜ್ಜನವೆ ಮಜ್ಜನ, ಸತ್ಯಸದಾಚಾರವೆ ಪತ್ರೆ ಪುಷ್ಪ. ಅಷ್ಟಮದಂಗಳ ಸುಟ್ಟುದೆ ಧೂಪ, ನಯನವೆ ಸ್ವಯಂ ಜ್ಯೋತಿ, ಪರಿಣಾಮವೆ ಅರ್ಪಿತ ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಉದಕದ ಕೊಡನ ಹೊತ್ತಾಡುವ ಗೊರವಿತಿಯ ಕೈಯಲ್ಲಿ ಕಂಕಣ, ಉಲಿವ ಗೆಜ್ಜೆ ಚರಣದಲ್ಲಿ. ಉರಿಯ ಗೊರವನ ನೆರೆವ ಭರವಸದಿಂದ ಬಂದಿರಲು ಬಹಳ ಮುಳ್ಳಡ್ಡಲಾದವಲ್ಲಾ ! ಕಂಕಣದುಲುಹು ನಂದಿ, ಕಣ್ಣುದೆರೆದಾ ಮುಳ್ಳಳಿಯಲು ಕಾಡುಗಿಚ್ಚೆದ್ದು ಕರಡವ ಸುಟ್ಟಂತೆ ಪ್ರಾಣಗುಣ ಪ್ರಧ್ವಂಸಕಂಗೆ ಅನ್ಯೋನ್ಯ ಭಾವತ್ರಯವುಂಟೆ ? ಶರಣಲಿಂಗಕ್ಕೆ ಸಂದಿಲ್ಲ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಉತ್ತಮ ಮಧ್ಯಮ ಕನಿಷ್ಟವೆಂದು, ಬಂದ ಜಂಗಮವನೆಂದೆನಾದಡೆ ನೊಂದೆನಯ್ಯಾ, ಬೆಂದೆಯಯ್ಯಾ, ಎನ್ನ ಕಿಚ್ಚು ಎನ್ನ ಸುಟ್ಟಿತ್ತು. ಸುಖಿಜಂಗಮ, ಸಾಮಾನ್ಯಜಂಗಮ ಉಂಟೆ, ಕೂಡಲಸಂಗಮದೇವಾ 401
--------------
ಬಸವಣ್ಣ
ಉದಕವೊಂದರಲ್ಲಿ ತಂದು, ವರ್ಣ ಭೇದಕ್ಕೆ ಹಲವಾದ ತೆರನಂತೆ, ಆತ್ಮ ನಾನೆಂಬುದ ಮರೆದು, ಸರ್ವರಲ್ಲಿ ಬೆರಸುವ ಚಿತ್ತ ಒಂದೋ, ಎರಡೋ ? ನೆಲಜಲ ಒಂದಾದಡೆ, ಬೆಳೆವ ವೃಕ್ಷ ಹಲವಾದ ತೆರದಂತೆ, ಅರಿವು ಮರವೆಗೊಳಗಾದ ಆತ್ಮನ ತಿಳಿದಲ್ಲಿ, ಬೇರೊಂದೆಡೆಗೆ ತೆರಪಿಲ್ಲ, ಮನಸಂದಿತ್ತು ಮಾರೇಶ್ವರಾ.
--------------
ಮನಸಂದ ಮಾರಿತಂದೆ
ಉಪೇಕ್ಷೆಯುಳ್ಳನ್ನಕ್ಕ ಭಕ್ತನಲ್ಲ, ಹಿತಶುತ್ರುವಾಗಿಹನ್ನಕ್ಕ ಮಾಹೇಶ್ವರನಲ್ಲ. ಪರದ್ರವ್ಯಭಕ್ಷಿತ ಪ್ರಸಾದಿಯಲ್ಲ. ಪ್ರಜ್ಞಾಹೀನ ಪ್ರಾಣಲಿಂಗಿಯಲ್ಲ. ಕುಚಿತ್ತ ಅಪಸರೆಯ ಕ್ಷಣಿಕ ಶರಣನಲ್ಲ. ಉಪಮಾ ಭೇದ ಗುಪ್ತಪಾತಕ ಐಕ್ಯನಲ್ಲ. ಇಂತೀ ಷಡುಸ್ಥಲಂಗಳ ಸ್ಥಾನ ವಿವರಂಗಳನರಿತು ಸ್ಥಲನಿರ್ವಾಹಿಯಾಗಿ ತತ್ವದ ಮುಖದಿಂದ ನಿತ್ಯ ಅನಿತ್ಯವತಿಳಿದು ಪರತತ್ವದ ಗೊತ್ತಿನಲ್ಲಿ ನಿಜ ನಿರವಯವಪ್ಪ ಆತ್ಮನಬೆಚ್ಚಂತೆ ಬೈಚಿಟ್ಟು ತತ್ಕಾಲ ಉಚಿತವನರಿದು ಕಾಂತಿ ನಷ್ಟವಾಗಿ ಕಳವಳಿಸಿ ಕಂಗೆಡದೆ ಕುರುಹಿನ ಲಕ್ಷ ್ಯದಲ್ಲಿ ಚಿತ್ತ ಸಮೂಹದಲ್ಲಿ ಎಚ್ಚರಿಕೆ ನಿಜವಸ್ತುವಿನಲ್ಲಿ ಚಿತ್ತು ಲೇಪವಾದುದು ಸಾವಧಾನ ಸಂಬಂದ್ಥಿಯ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ

ಇನ್ನಷ್ಟು ...
-->