ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಕರ್ಮ ನಾಸ್ತಿ ಎಂಬೆ, ಅಸ್ತಿ ನಾಸ್ತಿ (ಅನಾಸ್ತಿ ?) ಎಂಬೆ. ಜಾÕನ [ದ] ಕೊಬ್ಬಿನಲಿ ಉಲಿವೆ, ಉಲಿದಂತೆ ನಡೆವೆ. ಸಂಗಡ ಸಹಿತ ಕರಸ್ಥಲಕ್ಕೆ ಬಂದು, ನೀನು ಬಯಲಾಗೆಯಲ್ಲಾ, ಎನ್ನನೂ ಬಯಲು ಮಾಡೆ_ಗುಹೇಶ್ವರಾ,
--------------
ಅಲ್ಲಮಪ್ರಭುದೇವರು
ಕಾಮದಲ್ಲಿಮುಳುಗಿ ನುಡಿವರು ಶರಣಂಗೆ ಕಾಮಿಯೆಂದು, ಕ್ರೋಧದಲ್ಲಿಮುಳುಗಿ ನುಡಿವರು ಶರಣಂಗೆ ಕ್ರೋದ್ಥಿಯೆಂದು, ಲೋಭದಲ್ಲಿಮುಳುಗಿ ನುಡಿವರು ಶರಣಂಗೆ ಲೋಬ್ಥಿಯೆಂದು, ಮೋಹದಲ್ಲಿಮುಳುಗಿ ನುಡಿವರು ಶರಣಂಗೆ ಮೋಹಿಯೆಂದು, ಮದದಲ್ಲಿಮುಳುಗಿ ನುಡಿವರು ಶರಣಂಗೆ ಮದಭರಿತನೆಂದು, ಮತ್ಸರದಲ್ಲಿಮುಳುಗಿ ನುಡಿವರು ಶರಣಂಗೆ ಮತ್ಸರಭರಿತನೆಂದು, ಅರಿಷಡ್ವರ್ಗದಲ್ಲಿರ್ದು ಒಂದೊಂದು ನುಡಿದರೆ ಸಂದೇಹವಿಲ್ಲ ಶರಣಂಗೆ. ನಿಂದೆಯನಾಡುವ ನರನಿಗೆ ಸೂಕರಜನ್ಮವು ಇದು ಸತ್ಯ ಗುರುನಿರಂಜನ ಚನ್ನಬಸವಲಿಂಗದ ವಚನ.
--------------
ದೇಶಿಕೇಂದ್ರ ಸಂಗನಬಸವಯ್ಯ
ಕಲ್ಯಾಣಕೈಲಾಸವೆಂಬ ನುಡಿ ಹಸನಾಯಿತ್ತು. ಒಳಗೂ ಕಲ್ಯಾಣ ಹೊರಗೂ ಕಲ್ಯಾಣ. ಇದರಂತುವನಾರು ಬಲ್ಲರಯ್ಯಾ ? ನಿಮ್ಮ ಸತ್ಯ ಶರಣರ ಸುಳುಹು ತೋರುತ್ತಿದೆಯಯ್ಯಾ. ನಿಮ್ಮ ಶರಣ ಬಸವಣ್ಣನ ಕಾಂಬೆನೆಂಬ ತವಕವೆನಗಾಯಿತ್ತು ಕೇಳಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಕಣ್ಣಿಂಗೆ ಕಣ್ಣು, ಕಣ್ಣೊಳು ಕಣ್ಣು, ಕಣ್ಣೇ ನೇತ್ರ, ನೇತ್ರವೆ ಸೂತ್ರ, ಸೂತ್ರವೆ ಲಿಂಗ, ಲಿಂಗವೆ ಗುಹ್ಯ. ಗುಹ್ಯಕ್ಕೆ ಗುಹ್ಯ, ಗೋಪ್ಯಕ್ಕೆ ಗೋಪ್ಯ, ರಹಸ್ಯಕ್ಕೆ ರಹಸ್ಯ. ಈ ನೇತ್ರಮಹಿಮೆಯ ಗುಹೇಶ್ವರ ಬಲ್ಲನಲ್ಲದೆ ಕಣ್ಣುಗೆಟ್ಟಣ್ಣಗಳೆತ್ತ ಬಲ್ಲರು ನೋಡಯ್ಯ.
--------------
ಅಲ್ಲಮಪ್ರಭುದೇವರು
ಕಲ್ಲು ಕಲ್ಲು ತಾಕಿದಲ್ಲಿ ಕಿಚ್ಚಿನ ಕಿಡಿಯಲ್ಲದೆ, ಹೆಂಟೆ ಶಿಲೆ ಹೋರಿದಲ್ಲಿವುಂಟೆ? ಅರಿದವನಲ್ಲಿ ಒಡಗೂಡುವ ಸುಖವಲ್ಲದೆ, ಬರಿಯನಲ್ಲಿ, ಅರಿವು ಹೀನನಲ್ಲಿ, ಅರಿವಿನ ಕುರುಹ ಮರೆದಾಡುವನಲ್ಲಿ, ಸುರೆಯ ಮಡಕೆಯ ಪೂಜಿಸಿ ಕುಡಿವವನಂತಾಗಬೇಡ. ಬರಿಯ ವಾಚಾಸಿದ್ಧಿಯಲ್ಲಿ ಅರಿದೆಹೆನೆಂದು ಅವ ಕೊಟ್ಟರಿವಿನ ಕುರುಹ ಮರೆಯಬೇಡ. ಆ ಮರೆಯಲ್ಲಿ ಬೆಳಗು ತೋರುತ್ತದೆ ಸದಾಶಿವಮೂರ್ತಿಲಿಂಗದಲ್ಲಿ ಅದೆ.
--------------
ಅರಿವಿನ ಮಾರಿತಂದೆ
ಕೆಯಿ ಬೆಳೆವಲ್ಲಿ ಸದೆಗೆ ಮುನಿವರಲ್ಲದೆ ಬೆಳೆಗೆ ಮುನಿದವರುಂಟೆ ಅಯ್ಯಾ? ಅರಿದಂಗವ ತಾಳಿದವರಲ್ಲಿ ಮರವೆಗೆ ಮುನಿವರಲ್ಲದೆ ಅರಿವಿಗೆ ಮುನಿವರುಂಟೆ ಅಯ್ಯಾ? ಕೊಲ್ಲಿ ಆವಿಂಗೆ ಕಾಲ ಕಟ್ಟುವರಲ್ಲದೆ ಮೊಲೆಯ ಕಟ್ಟಿದರುಂಟೆ ಅಯ್ಯಾ? ಗುರುವಾದಡೂ ಆಗಲಿ, ಲಿಂಗವಾದಡೂ ಆಗಲಿ, ಜಂಗಮವಾದಡೂ ಆಗಲಿ ಅರಿವಿಂಗೆ ಶರಣು ಮರವಿಂಗೆ ಮಥನವ ಮಾಡಿದಲ್ಲದೆ ಇರೆ. ಇದು ನೀವು ಕೊಟ್ಟ ಅರಿವಿನ ಮಾರನ ಇರವು, ಸದಾಶಿವಮೂರ್ತಿಲಿಂಗದ ಬರವು.
--------------
ಅರಿವಿನ ಮಾರಿತಂದೆ
ಕನ್ನವ ಸವೆವ ಕನ್ನಗತ್ತಿಗೆ ಕನ್ನ ಸವೆಯಿತ್ತೆ ಕೈ ತಟ್ಟಿತೆಂಬಂತೆ, ಹೊನ್ನೆನ್ನದು ಹೆಣ್ಣೆನ್ನದು ಮಣ್ಣೆನ್ನದು ಎಂದು, ಬಳಲುವಣ್ಣಗಳ ಬಾಯ ಟೊಣೆದು, ಇವು ಮೂರು ತನ್ನಿಂದ ಬಲ್ಲಿದರಲ್ಲಿಗೆ ಹೋಗದೆ ಮಾಣವು. ಇವರಲ್ಲಿ ಬನ್ನಬಟ್ಟು ಬಳಲುವ ಕರ್ಮಿಗಳಿಗಿನ್ನೆಲ್ಲಿಯ ಮುಕ್ತಿಯಯ್ಯಾ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು, ನಿಂದಲ್ಲಿ ನಿಲಲೀಯದೆನ್ನ ಮನವು, ಹೊಂದಿದಲ್ಲಿ ಹೊಂದಲೀಯದೆನ್ನ ಮನವು ಕೂಡಲಸಂಗಮದೇವಾ ನಿಮ್ಮ ಚರಣಕಮಲದಲ್ಲಿ ಭ್ರಮರನಾಗಿರಿಸು, ನಿಮ್ಮ ಧರ್ಮ. 32
--------------
ಬಸವಣ್ಣ
ಕ್ರಿಯೆಯದು ಚೆನ್ನಬಸವಣ್ಣನ ಎಡಪಾದ, ಜಾÕನವದು ಚೆನ್ನಬಸವಣ್ಣನ ಬಲಪಾದ, ನಾನವರ ಚಮ್ಮಾವುಗೆ, ನೀನವರ ಮನೆದಾಸ, ನೋಡಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಕ್ರಿಯಾಸ್ವರೂಪವೇ ಲಿಂಗವೆಂದು, ಜಾÕನಸ್ವರೂಪವೇ ಜಂಗಮವೆಂದು, ಜಾÕನಸ್ವರೂಪವಪ್ಪ ಜಂಗಮದ ಪ್ರಸನ್ನೇತಿ ಪ್ರಸಾದ ಲಿಂಗಕ್ಕೆ ಜೀವಕಳೆಯೆಂದೆ. ಜ್ಯೋತಿ ಕರ್ಪೂರವ ನೆರೆದಂತೆ, ಅಂಗ ಲಿಂಗದಲ್ಲಡಗಿತ್ತು. ದೀಪ ದೀಪವ ಬೆರಸಿದಂತೆ ಪ್ರಾಣ ಜಂಗಮದಲ್ಲಿ ಅಡಗಿತ್ತು. ಈ ಕ್ರಿಯಾ ಜಾÕನ ಭಾವ ನಿರವಯವಾದವಾಗಿ ಲಿಂಗವೆನ್ನೆ, ಜಂಗಮವೆನ್ನೆ ಪ್ರಸಾದವೆನ್ನೆ ಇದುಕಾರಣ, ಕೊಟ್ಟೆನೆಂಬುದೂ ಇಲ್ಲ, ಕೊಂಡೆನೆಂಬುದೂ ಇಲ್ಲ. ಕೊಡುವುದು ಕೊಂಬುದು ಎರಡೂ ನಿರ್ಲೇಪವಾದ ಬಳಿಕ ನಾನೆಂಬುದೂ ನೀನೆಂಬುದೂ, ಏನು ಏನುಯೆಂಬೂದಕ್ಕೆ ತೆರಹಿಲ್ಲದೆ, ಪರಿಪೂರ್ಣ ಸರ್ವಮಯನಾದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಕಣ್ಣ, ಕಾಡುವ ಗುಂಗುರ ತಿಂದು, ಬಾಯ, ಕಾಡುವ ಕೈಯ ತಿಂದು, ಆಪ್ಯಾಯನವಡಸಿದ ಹೊಟ್ಟೆಯ ತಿಂದು, ಮತ್ತಿವರ ಹುಟ್ಟು ಮೆಟ್ಟನರಿಯಲೇಕೆ ? ಅರ್ಕೇಶ್ವರಲಿಂಗವನರಿಯಿರಣ್ಣಾ.
--------------
ಮಧುವಯ್ಯ
ಕಂಡೆನಯ್ಯಾ, ಕಂಗಳೊಳಗೊಂದು ಹೆಸರಿಡಬಾರದು ವಸ್ತುವ. ಅದು ನಿಂದಲ್ಲಿ ನಿಲ್ಲದು, ಬಂದಲ್ಲಿ ಬಾರದು, ಹೊದ್ದಿದಲ್ಲಿ ಹೊದ್ದದು. ಇದರ ಸಂದುಸಂಶಯದಿಂದ ನಂಬಿಯೂ ನಂಬದಿನ್ನೇವೆ ? ಕಾಬಡೆ ಕಂಗಳಲ್ಲಿ ನಿಲ್ಲದು, ನೆನೆವಡೆ ಮನದಲ್ಲಿ ನಿಲ್ಲದು, ಹೊಡೆವಡೆ ಕೈಯೊಳಗಲ್ಲ. ಇದರ ಕೂಟದ ಕುಶಲವ ಹೇಳಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಕುಲವನರಸುವರೆ ಇದರೊಳು ಛಲವನರಸುವರೆ ಹೊಲೆಗೇರಿಯಲೊಂದು ಎಲುವಿನ ಮನೆಗಟ್ಟಿ ತೊಗಲಹೊದಿಕೆ, ನರವಿನ ಹಂಜರ ಕುಲವನರಸುವರೆ ? ಹೊಲತಿ ಹೊಲೆಯ[ನು] ಹೋಗಿ ಹೊಲೆಯಲ್ಲಿ ಮಿಂದಡೆ ಹೊಲೆ ಹೋಯಿ[ತ್ತಿ]ಲ್ಲ, ಕುಲ ಹೋಗಲಿಲ್ಲ. ಕಂಬಳಿಯೊಳಗೆ ಕೂಳಕಟ್ಟಿ ಕೂದಲನರಸುವರೆ ಇಂಥ ಡಂಬಕರ ಕೂಡಲಸಂಗಮದೇವರು ಮೆಚ್ಚರಯ್ಯಾ.
--------------
ಬಸವಣ್ಣ
ಕುರುಡಿ ಕುಂಟರ ನಡುವೆ ನಾ ಹುಟ್ಟಿದೆನಯ್ಯಾ. ಎನಗೆ ಐವರು ಸ್ತ್ರೀಯರ ಮದುವೆಯ ಮಾಡಿದರು. ಅವರ ಸಂಗದಲ್ಲಿರಲೊಲ್ಲದೆ ಒಬ್ಬಳ ಬ್ರಹ್ಮಂಗೆ ಕೊಟ್ಟೆ, ಒಬ್ಬಳ ವಿಷ್ಣುವಿಂಗೆ ಕೊಟ್ಟೆ, ಒಬ್ಬಳ ರುದ್ರಂಗೆ ಕೊಟ್ಟೆ, ಒಬ್ಬಳ ಈಶ್ವರಂಗೆ ಕೊಟ್ಟೆ, ಮತ್ತೊಬ್ಬಳ ಸದಾಶಿವಂಗೆ ಕೊಟ್ಟು ತಾಯಿಯ ಒಡನಾಡಿ ಸಂಸಾರ ಮಾಡುತಿರ್ದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಕಾಯವೆಂಬ ವನಿತೆಗೆ ಆತ್ಮನೆಂಬ ಪುರುಷನು ನೋಡಾ. ಈ ದೇಹದ ಆತ್ಮನ ಸಂಪರ್ಕದಿಂದ ಹುಟ್ಟಿದ ಸಕಲ ಕರಣೇಂದ್ರಿಯಂಗಳೆ ಮಕ್ಕಳು ನೋಡಾ. ಇದೇ ಸಂಸಾರವೆಂಬುದನರಿಯದೆ ಬಹಿರಂಗದಲ್ಲಿ, ನಾನು ಹೊನ್ನು ಹೆಣ್ಣು ಮಣ್ಣು ಬಿಟ್ಟು ವಿರಕ್ತನಾದೆನೆಂಬ ಅಜಾÕನಿಯ ಪರಿಯ ನೋಡಾ. ಇದು ವಿರಕ್ತಿಯೇ? ಅಲ್ಲ. ದೇಹೇಂದ್ರಿಯ ಮನಃಪ್ರಾಣಾದಿಗಳ ಮಹದಲ್ಲಿ ಒಡಗೂಡಿದಾತನೇ ಪರಮ ವಿರಕ್ತನು. ಆತಂಗೆ ನಮೋ ನಮೋಯೆಂಬೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು

ಇನ್ನಷ್ಟು ...
-->