ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಘಟಾಕಾಶ ಮಠಾಕಾಶದಲ್ಲಿ ತೋರುವ ಬೆಳಗು ಘಟಮಠವೆಂಬ ಉಭಯ ಇರುತಿರಲಿಕ್ಕೆ ರೂಪುಗೊಂಡಿತ್ತು. ಬಯಲು ಘಟಮಠವೆಂಬ ಭೇದಂಗಳಳಿಯಲಾಗಿ ಆಕಾಶತತ್ವದಲ್ಲಿ ನಿಶ್ಚಿಂತವನೆಯ್ದಿ ಮಹದಾಕಾಶದಲ್ಲಿ ಲೀಯವಾದುದು ವ್ಯತಿರಿಕ್ತವೆಂಬುದು ನಾಮಶೂನ್ಯ, ಐಕ್ಯನ ಅರ್ಪಿತಸ್ಥಲ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ಘನಮಹಾಲಿಂಗಕ್ಕೆ ಮನವೆ ಪೀಠವಾಗಿ, ತನುವೆ ಶಿವಾಲಯವಾಗಿ, ನೆನವೆ ಪೂಜೆಯಾಗಿ, ಧ್ಯಾನವೆ ತೃಪ್ತಿಯಾಗಿ, ಅಂಬುದ್ಥಿಯೊಳಗೆ ಮುಳುಗಿದ ಪೂರ್ಣಕುಂಭದಂತೆ, ನಿಮ್ಮ ಅವಿರಳ ದಿವ್ಯ ಮಹಾಬೆಳಗಿನೊಳಗೆ ಮುಳುಗಿ, ನಾನು ನೀನೆಂಬುಭಯದ ಕುರುಹ ಮರೆದು ಏನೇನೂ ಅರಿಯದಿರ್ದೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಘನವ ಮನ ಕಂಡು ಆದನೊಂದು ಮಾತಿಂಗೆ ತಂದು ನುಡಿದಡೆ ಅದಕ್ಕದೇ ಕಿರಿದು ನೋಡಾ. ಅದೇನೂ ಇಲ್ಲದ ನಿಸ್ಸಂಗದ ಸುಖವು ಗುಹೇಶ್ವರ !
--------------
ಅಲ್ಲಮಪ್ರಭುದೇವರು
ಘಟದೊಳಗಣ ಬಯಲು, ಮಠದೊಳಗಣ ಬಯಲು, ಬಯಲು ಬಯಲು ಬಯಲು! ತಾನೆಲ್ಲಾ ಬಯಲು, ಬಿಡಾಡಿ ಬಯಲು.
--------------
ಬೊಂತಾದೇವಿ
ಘ್ರಾಣೇಂದ್ರಿಯವಿಷಯದಿಂದೆ ಭ್ರಮರ ಕೆಡುವುದು ಸಂಪಿಗೆಯ ಪುಷ್ಪದಲ್ಲಿ. ರಸನೇಂದ್ರಿಯವಿಷಯದಿಂದೆ ಮತ್ಸ್ಯಕೆಡುವುದು ಜಾಲಗಾರನ ಬಲೆಯಲ್ಲಿ. ನಯನೇಂದ್ರಿಯವಿಷಯದಿಂದೆ ಪತಂಗ ಕೆಡುವುದು ದೀಪದ ಜ್ವಾಲೆಯಲ್ಲಿ ತ್ವಗೀಂದ್ರಯವಿಷಯದಿಂದ ಗಜ ಕೆಡುವುದು ರಾಜನ ಕೃತಕದಲ್ಲಿ. ಶ್ರವಣೇಂದ್ರಿಯವಿಷಯದಿಂದೆ ಎರಳೆ ಕೆಡುವುದು ಬೇಟೆಗಾರನ ಸರಳಿನಲ್ಲಿ. ಇಂತೀ ಪ್ರಾಣಿಗಳು ಒಂದೊಂದು ವಿಷಯದಿಂದೆ ಬಂಧನಕ್ಕೊಳಗಾದವು. ಇಂತಪ್ಪ ಪಂಚೇಂದ್ರಿಯವಿಷಯವ್ಯಾಪಾರದಲ್ಲಿ ಲಂಪಟರಾದ ಮನುಜರು ಕೆಟ್ಟ ಕೇಡನೇನೆಂಬೆನಯ್ಯ ಅಖಂಡೇಶ್ವರಾ ?
--------------
ಷಣ್ಮುಖಸ್ವಾಮಿ
ಘಟಪಟದ ಭಿತ್ತಿಯಂತೆ ಭಿನ್ನವೆಂಬ ಹಾಂಗೆ ಇಹುದು. ತಿಳಿದು ನೋಡಿದಡೆ ಭಿನ್ನವುಂಟೆ ? ಘಟದೊಳಗಣ ಬಯಲು, ಪಟದೊಳಗಣ ನೂಲು; ಭಿತ್ತಿಯ ಮೃತ್ತಿಕೆಯಂತೆ ಒಂದಲ್ಲದೆ ಎರಡಿಲ್ಲ. ದೇಹಿಗಳೊಳಗೆ ಗುಹೇಶ್ವರನಲ್ಲದೆ ಮತ್ತಾರೂ ಇಲ್ಲ.
--------------
ಅಲ್ಲಮಪ್ರಭುದೇವರು
ಘ್ರಾಣಜಿಹ್ವಾತ್ವಕ್ಫ್ರೋತ್ರಮಾನಸಾದಿ ವಿಷಯೇಂದ್ರಿಗಳಲ್ಲಿ ಪೃಥ್ವಿವ್ಯಪ್ತೇಜೋವಾಯ್ವಾಕಾಶಾತ್ಮಾದಿ ಷಡ್ಭೂತಂಗಳು ವಿಪರೀತಸಂಬಂಧಂಗಳಾಗಿ ತೋರುತ್ತಿರ್ಪವೆಂತೆಂದೊಡೆ: ಮನಸ್ಸಿನ ವಿಷಯದಲ್ಲಿ ಪೃಥ್ವಿಯು ಸೃಷ್ಟಿಕಾರಣಮಾಗಿಹುದು. ಶ್ರೋತ್ರವಿಷಯದಲ್ಲಿ ಜಲವು ಸಂರಕ್ಷಣಕಾರಣಮಾಗಿ ಶುಚಿಯಾಗಿಹುದು. ತ್ವಗ್ವಿಷಯದಲ್ಲಗ್ನಿಯು ಸಂಹಾರಕಾರಣಮಾಗಿಹುದು. ನೇತ್ರವಿಷಯದಲ್ಲಿ ವಾಯುವು ಚಂಚಲಕಾರಣಮಾಗಿಹುದು. ಜಿಹ್ವಾವಿಷಯದಲ್ಲಾಕಾಶವು ಶಬ್ದಕಾರಣಮಾಗಿಹುದು. ನಾಸಿಕ ವಿಷಯದಲ್ಲಾತ್ಮನು ಚೈತನ್ಯಕಾರಣಮಾಗಿಹನು. ವಾಯುವಿನೊಳಗೆ ಬೆರೆದ ಆತ್ಮನೇ ಜೀವನು ; ಆತ್ಮನೊಳಗೆ ಬೆರೆದ ವಾಯುವೆ ಮನಸ್ಸು. ಪಂಚಭೂತರೂಪಮಾದ ಶರೀರಕ್ಕೆ ಜೀವನು ಕರ್ತನಾದಂದದಿ ಪಂಚಭೂತಗುಣಗ್ರಾಹಿಗಳಾದ ಇಂದ್ರಿಯಂಗಳಿಗೆ ಮನಸ್ಸೇ ಕರ್ತೃವಾಗಿ, ಆ ಇಂದ್ರಿಯಂಗಳು ಹೋದಲ್ಲಿಗೆ ಶರೀರವು ಹೋಗುವಂದದಿ, ಆ ಮನಸ್ಸೇ ಜೀವನಾಗಿ, ಆ ಮನಸ್ಸು ಹೋದಲ್ಲಿಗೆ ಜೀವನು ಹೋಗುತ್ತಿಹನು. ಅಂತಪ್ಪ ನಿಜಸ್ವರೂಪಮಾದ ಪರಮಾತ್ಮನಾಯಿತ್ತು ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಘನಸಾರ ಹೇಮ ಮೌಕ್ತಿಕಕ್ಕೆ ಮೊದಲಿಲ್ಲದಂತೆ ತೋರಿದಡಾತನೆಂಬೆ. ಉದಕದಂತಿರ್ದು ವಹ್ನಿಯಂತಾದೊಡಾತನೆಂಬೆ. ದದ್ಧಪಟದ ನಿಲುವು ಸರ್ವಕ್ಕೂ ತೋರಿದಡಾತನೆಂಬೆ, ಗುರುನಿರಂಜನ ಚನ್ನಬಸವಲಿಂಗಕ್ಕಂಗವೆಂಬ ಅನುಪಮಶರಣ.
--------------
ದೇಶಿಕೇಂದ್ರ ಸಂಗನಬಸವಯ್ಯ
ಘಟ್ಟಣೆಯ ಲೋಕದ ಬೆಟ್ಟಗಳಾರಾಗಿ ಇಕ್ಕೆಲಲೀರಾರು ಸೂರಿಯನನೂ ಮತ್ತೆ ಪ್ರಭೆಯನು ಮಾಡಿ ಹೊತ್ತಿಪ್ಪ ತತ್ವಕ್ಕೆ ಸೀಮೆ ತಾನೂ ಒತ್ತೆರನು ಮುತ್ತೆರನು, ಮುತ್ತೆರನು, ಒತ್ತೆರನು ಮತ್ತೆ ತ್ವಮಸಿಯ ರೂಪು ತಾನು ವಿಚಿತ್ರ ಕಪಿಲಸಿದ್ಧಮಲ್ಲಿಕಾರ್ಜುನನೆಂಬ ಭಕ್ತಿತಾತ್ಪರ್ಯದ ಪರಿಯಿಂತುಟು.
--------------
ಸಿದ್ಧರಾಮೇಶ್ವರ
ಘಟವ ಮಾಡಿದ ಕುಲಲಾನು ಆ ಘಟದೊಳಿಪ್ಪುದಿಲ್ಲವೆಂತಂತೆ, ಬೆಳಸ ಬಿತ್ತಿದವನು ಆ ಬೆಳೆಯೊಳಿಪ್ಪುದಿಲ್ಲವೆಂತಂತೆ, ರಥವ ಮಾಡಿದ ರಥಿಕ ತಾ ಆ ರಥದೊಳಿಪ್ಪುದಿಲ್ಲವೆಂತಂತೆ, ಸರ್ವವನಾಡಿಸುವ ಶರ್ವನು ಯಂತ್ರ ಯಂತ್ರಿಯಂತಿರ್ಪನಾಗಿ ಸರ್ವರೂ ಶಿವನೆಂಬ ಅಜ್ಞಾನಿಗಳ ಮೆಚ್ಚುವನೆ ನಮ್ಮ ಸೌರಾಷ್ಟ್ರ ಸೋಮೇಶ್ವರ.
--------------
ಆದಯ್ಯ
ಘನಮಹಿಮ ಶರಣರು ತನ್ನ ಮನೆಗೆ ಗಮನಿಸಿ ಬಂದರೆ, ಅನುವರಿದು ಅವರವರ ಒಡವೆಯ ಅವರವರಿಗಿತ್ತು ವಿನಯ ಮುಂದುಗೊಂಡಿಪ್ಪುದೇ ಸಹಜ. ಒರೆದು ನೋಡಬಂದ ಹಿರಿಯರ ಗರ್ಜನೆಯನು ಸೈರಣೆಯೊಳರ್ಚಿಸಿ, ಸಾವಧಾನಸಖತನ ಮುಂದುಗೊಂಡಿಪ್ಪುದೇ ನಿಜಭಕ್ತಿ. ಕೊಂಡು ಮಾಡಬಲ್ಲ ಪ್ರಚಂಡ ಒಡೆಯರಡಿಯಿಟ್ಟು ಬಂದರೆ ತಡವಿಲ್ಲದರಿದು, ಒಡನಿರ್ದ ಧನವ ವಂಚನೆಯನರಿಯದೆ ಈವುದು ಗುರುನಿರಂಜನ ಚನ್ನಬಸವಲಿಂಗಕ್ಕೆ ಅಭಿನ್ನಭಕ್ತಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಘಟಪಟನಾದಾ, ಓ ಎಂಬಾತ ಲಿಂಗ. ತರಗೆಲೆಗಳಿಗೊಂದೆ ಗಾಳಿ; ಹಾರುತ್ತಿಪ್ಪವು. ಒಂದೆ ಅನಿಲ, ನಿಂದ ದೇಹಪಟ್ಟೆಗಳೊಳಗೆಲ್ಲ. ಕರೆದಡೆ, ಓ ಎಂಬಾತನೆ ಬಿಡಾಡಿ.
--------------
ಬೊಂತಾದೇವಿ
ಘರ್ಜನೆಯಿಂ ಸಿಡಿಲು ಅಡಸಿ ಬಂದು ಪೊಯ್ವುತ್ತಿರಲಿ, ಪೊಯ್ಯವೊಲ್ಲದೆ ವಾಯವಿಮಾನಂಗಳಿಂದ ಎತ್ತಿಕೊಳ್ಗ್ವೆ ಎತ್ತಿಕೊಂಡಡೆ, ಮನವಿಚ್ಛಂದವಾಗದೊಂದೆಯಂದದ್ಲಪ್ಪಂತಪ್ಪ ನಿಮ್ಮದೊಂದು ಸಮತಾಗುಣ ಎನ್ನನೆಂದು ಬಂದು ಪೊದ್ದಿಪ್ಪುದು ಹೇಳಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಘೋರಘೋರವಪ್ಪ ಮುಖ್ಯನರಕ ಒಂದು ಕೋಟಿ. ಅದರ ಕೆಳಗಣ ಪ್ರಧಾನನರಕ ಹದಿನೈದು ಕೋಟಿ. ಅವರ ಕೆಳಗಣ ನಾಯಕನರಕ ಇಪ್ಪತ್ತೆಂಟು ಕೋಟಿ. ಅವರ ಕೆಳಗಣ ಪರಿವಾರನರಕ ಅನಂತಕೋಟಿ. ಇದರೊಳಗಣ ಕುಂಭಿಯ ಪಾತಕ ನಾಲ್ವತ್ತೆಂಟು ಸಾವಿರಗಾವುದು ವಿಸ್ತೀರ್ಣ. ವೈತಾರಣಿಯೆಂಬತ್ತಾರು ಸಾವಿರಗಾವುದ, ಕಟ್ಟಕಡೆ[ಯೆ]ಕ್ಕಲನರಕಕ್ಕೆ ಎಂದೂ ಪರಿಹಾರವಿಲ್ಲ. ಹೊಕ್ಕವರು ಹೊರವಡಲಿಲ್ಲದ ನಿತ್ಯನರಕ, ಇಂತಪ್ಪ ಘೋರಮಾಲೆಯ ಖಂಡಿಸುವಡೆ ಪಂಚಾಕ್ಷರಿಯಲ್ಲದಿಲ್ಲ ಕಾಣಿರಣ್ಣಾ! ಪಾಪವ ಪರಿಹರಿಸುವೊಡೆ ಪಂಚಾವರಣನಪ್ಪ ಪಂಚಮುಖವೆ ಪಂಚಾಕ್ಷರವೆಂದರಿದು ಪಂಚಾಕ್ಷರವ ಜಪಿಸಿರಣ್ಣಾ. ಮತ್ತಿಲ್ಲ ಮತ್ತಿಲ್ಲ ಸೌರಾಷ್ಟ್ರ ಸೋಮೇಶ್ವರಲಿಂಗವ ಮೊರೆಹೊಕ್ಕು ಸುಖಿಯಾಗಿರಣ್ಣಾ.
--------------
ಆದಯ್ಯ
ಘಟದ ಮರೆಯಲ್ಲಿ ಅಸುವಿಪ್ಪಂತೆ, ಫಲದ ಮರೆಯಲ್ಲಿ ರಸವಿಪ್ಪಂತೆ, ಶಿಲೆಯ ಮರೆಯಲ್ಲಿ ಕಾಲ ಲಯನ ಲೀಲೆ ತೋರುತ್ತದೆ. ಲೀಲೆ ನಿರ್ವಯಲಾಗಿ, ಆ ಬಯಲ ಬಂಧನವನರಿ, ಅರ್ಕೇಶ್ವರಲಿಂಗವನರಿವುದಕ್ಕೆ.
--------------
ಮಧುವಯ್ಯ

ಇನ್ನಷ್ಟು ...
-->