ಘಟ್ಟಣೆಯ ಲೋಕದ ಬೆಟ್ಟಗಳಾರಾಗಿ ಇಕ್ಕೆಲಲೀರಾರು ಸೂರಿಯನನೂ ಮತ್ತೆ ಪ್ರಭೆಯನು ಮಾಡಿ ಹೊತ್ತಿಪ್ಪ ತತ್ವಕ್ಕೆ ಸೀಮೆ ತಾನೂ ಒತ್ತೆರನು ಮುತ್ತೆರನು, ಮುತ್ತೆರನು, ಒತ್ತೆರನು ಮತ್ತೆ ತ್ವಮಸಿಯ ರೂಪು ತಾನು ವಿಚಿತ್ರ ಕಪಿಲಸಿದ್ಧಮಲ್ಲಿಕಾರ್ಜುನನೆಂಬ ಭಕ್ತಿತಾತ್ಪರ್ಯದ ಪರಿಯಿಂತುಟು.
ಘಟವ ಮಾಡಿದ ಕುಲಲಾನು ಆ ಘಟದೊಳಿಪ್ಪುದಿಲ್ಲವೆಂತಂತೆ, ಬೆಳಸ ಬಿತ್ತಿದವನು ಆ ಬೆಳೆಯೊಳಿಪ್ಪುದಿಲ್ಲವೆಂತಂತೆ, ರಥವ ಮಾಡಿದ ರಥಿಕ ತಾ ಆ ರಥದೊಳಿಪ್ಪುದಿಲ್ಲವೆಂತಂತೆ, ಸರ್ವವನಾಡಿಸುವ ಶರ್ವನು ಯಂತ್ರ ಯಂತ್ರಿಯಂತಿರ್ಪನಾಗಿ ಸರ್ವರೂ ಶಿವನೆಂಬ ಅಜ್ಞಾನಿಗಳ ಮೆಚ್ಚುವನೆ ನಮ್ಮ ಸೌರಾಷ್ಟ್ರ ಸೋಮೇಶ್ವರ.