ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ದೃಕ್ಕು ಸಕಲವನವಗವಿಸುವನ್ನಕ್ಕ, ಶ್ರೋತ್ರ ಶಬ್ದವ ವೇದ್ಥಿಸುವನ್ನಕ್ಕ, ಕ್ರೀ ಶೂನ್ಯವೆನಲೇತಕ್ಕೆ? ಭಾವಿಸಿಹೆನೆಂಬನ್ನಕ್ಕ ಕ್ರೀ ಅರಿದೆಹೆನೆಂಬನ್ನಕ್ಕ ಸೂತಕ. ಕುಕ್ಕಳಗುದಿವುದ ಹುಟ್ಟಿನಲ್ಲಿ ತೆಗೆದಿಕ್ಕುವಂತೆ, ಅದು ದೃಷ್ಟಕ್ಕ ದೃಷ್ಟ, ನಿಶ್ಚಯಕ್ಕೆ ನಿಜ. ಈ ಗುಣ ಉಭಯಸ್ಥಲ ನಿರ್ವಾಹ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 49 ||
--------------
ದಾಸೋಹದ ಸಂಗಣ್ಣ
ದೃಷ್ಟಿ ಕಾಮ್ಯಾರ್ಥದಲ್ಲಿ ನೆಟ್ಟು ನೋಡಿ, ಒಡೆಯರು ಭಕ್ತರ ವಧುಗಳಲ್ಲಿ ಮತ್ತಾ ದೃಷ್ಟಿಯ ಮುಟ್ಟಲೇತಕ್ಕೆ? ಮತ್ತೆ ಇತ್ಯಾದಿಗಳ ಬಿಟ್ಟು ಹೆಣ್ಣವ್ರತ ಕಟ್ಟೆಂದು ಮಾಡಬಹುದೆ? ಮತ್ತದ ಕಟ್ಟಿಕೊಂಡು ಮಿಟ್ಟಿಯ ಭಂಡರಂತೆ ಕುಟ್ಟಿಯಾಡಬಹುದೆ? ಇಂತೀ ಬಾಹ್ಯ ದೃಷ್ಟಿಗಳ್ಳರ, ಆತ್ಮಚಿತ್ತಗಳ್ಳರ ವ್ರತಸ್ಥರೆಂದು ಎನಲಾಗದು. ಮನಕ್ಕೆ ಮನೋಹರ ಶಂಕೇಶ್ವರ ಲಿಂಗವು ಅವರುವ ಮುಟ್ಟದಿಹನಾಗಿ
--------------
ಕರುಳ ಕೇತಯ್ಯ
ದ್ವೆ ೈತಿಯಲ್ಲ ಅದ್ವೆ ೈತಿಯಲ್ಲ ಕಾಣಿಭೋ ಶರಣ. ದ್ವೆ ೈತಾದ್ವೆ ೈತವೆಂಬ ಉಭಯ ಕಲ್ಪನೆಯನಳಿದುಳಿದ ವೀರಮಾಹೇಶ್ವರನು ಪರಶಿವನ ನಿರುತ ಸ್ವಯಾನಂದಸುಖಿ. ಪರಶಿವನ ಪರಮ ತೇಜದಾದಿ ಬೀಜ. ಪರಶಿವನ ಪರಮಜ್ಞಾನಪ್ರಕಾಶಮಯ ಪರಮಾನಂದದ, ನಿರುಪಮಲಿಂಗದ ಪ್ರಭಾಕಿರಣವೇ ತಾನಾದ ಶರಣನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ದೂಷಕನವನೊಬ್ಬ ದೇಶವ ಕೊಟ್ಟಡೆ, ಆಸೆಮಾಡಿ ಅವನ ಹೊರೆಯಲಿರಬೇಡ. ಮಾದಾರ ಶಿವಭಕ್ತನಾದಡೆ, ಆತನ ಹೊರೆಯಲು ಭೃತ್ಯನಾಗಿಪ್ಪುದು ಕರ ಲೇಸಯ್ಯಾ, ತೊತ್ತಾಗಿಪ್ಪುದು ಕರ ಲೇಸಯ್ಯಾ. ಕಾಡ ಸೊಪ್ಪು ತಂದು ಓಡಿನಲ್ಲಿ ಹುರಿದಿಟ್ಟು, ಕೂಡಿಕೊಂಡಿಪ್ಪುದು ನಮ್ಮ ಕೂಡಲಸಂಗನ ಶರಣರ. 136
--------------
ಬಸವಣ್ಣ
ದ್ವೈತ ಅದ್ವೈತಾನಂದದಲ್ಲಿ ಚಿದ್ರೂಪ ಚಿದಾನಂದಲಿಂಗವ ಕೂಡಿ ಪರಿಪೂರ್ಣವಾದ ಶರಣಂಗೆ ನಮೋ ನಮೋ ಎನುತಿರ್ದೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ದೇವನೊಲಿದ, ನೀನೊಲಿದೆ_ಎಂಬುದು ಅದಾವುದಕ್ಕಾ ? ಭಾವಶುದ್ಧವಾದಲ್ಲಿ ಸೀರೆಯನಳಿದು ಕೂದಲು ಮರೆಸಲೇತಕ್ಕೆ ? ಅದು ಅಂತರಂಗದ ನಾಚಿಕೆ ಬಾಹ್ಯದಲ್ಲಿ ತೋರಿತ್ತು. ಅದು ಗುಹೇಶ್ವರಲಿಂಗಕ್ಕೆ ಒಲವರವಲ್ಲ.
--------------
ಅಲ್ಲಮಪ್ರಭುದೇವರು
ದಶದಿಕ್ಕುಗಳಿಂದ ರೂಹಿಸಬಾರದಾಗಿ, ಕಾಲಂಗಳಿಂದ ಕಲ್ಪಿಸಬಾರದು. ಕಾಲಂಗಳಿಂದ ಕಲ್ಪಿಸಬಾರದಂಥ ಅಖಂಡ ಚಿನ್ಮಾತ್ರ ಸ್ವರೂಪನಾದ ಶಿವನ ಸ್ವಾನುಭಾವಜ್ಞಾನದಿಂ ಸಾದ್ಥಿಸಿ ಕಂಡ ಶಾಂತ ಸ್ವಯಂಜ್ಯೋತ ಸ್ವರೂಪನಾದ ಶರಣ. ಅಂಗಸಂಗವಿಲ್ಲದೆ ನಿಸ್ಸಂಗಿಯಾದ ಕಾರಣ ಉಪಮಿಸಬಾರದು. ಕಡೆ ಮೊದಲಿಲ್ಲದಾಕಾಶವು ಖೇಚರಾದಿಗಳಿಂದ ಲೇಪವಿಲ್ಲದಂತೆ ನಿತ್ಯ ನಿಜ ಜೈತನ್ಯಾಕಾರ ರೂಪನಾಗಿಹನು, ನಮ್ಮ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ ಶರಣನು.
--------------
ಸ್ವತಂತ್ರ ಸಿದ್ಧಲಿಂಗ
ದೊಡ್ಡವೆರಡು ಕಂಬದ ಮಧ್ಯದಲ್ಲಿ ಚಿಕ್ಕವೆರಡು ಕಂಬ. ಇಂತೀ ನಾಲ್ಕರ ಮಧ್ಯದ ಮನೆಗೆ ಅಸ್ಥಿಯ ಗಳು, ನರದ ಕಟ್ಟು, ಮಜ್ಜೆಯ ಸಾರ, ಮಾಂಸದ ಗೋಡೆ, ಚರ್ಮದ ಹೊದಿಕೆ, ಶ್ರೋಣಿತದ ಸಾರದ, ಕುಂಭದಿಂದಿಪ್ಪುದೊಂದು ಚಿತ್ರದ ಮನೆ ನೋಡಯ್ಯಾ. ಆ ಮನೆಗೊಂಬತ್ತು ಬಾಗಿಲು, ಇಡಾ ಪಿಂಗಳವೆಂಬ ಗಾಳಿಯ ಬಾದಳ, ಮೃದು ಕಠಿಣವೆಂಬವೆರಡು ಅಗುಳಿಯ ಭೇದ ನೋಡಾ, ಇತ್ತಲೆಯ ಮೇಲಿಪ್ಪ ಸುಷುಮ್ನಾನಾಳವ ಮುಚ್ಚಿ, ದಿವಾರಾತ್ರಿಯೆಂಬ ಅರುಹು ಮರಹಿನ ಉಭಯವ ಕದಕಿತ್ತು ನೋಡಯ್ಯಾ. ಮನೆ ನಷ್ಟವಾಗಿ ಹೋದಡೆಯೂ ಮನೆಯೊಡೆಯ ಮರಳಿ ಮತ್ತೊಂದು ಮನೆಗೆ ಒಪ್ಪುದು ತಪ್ಪದು ನೋಡಯ್ಯಾ ಇಂತಪ್ಪ ಮನೆಗೆನ್ನ ಮರಳಿ ಬಾರದಂತೆ ಮಾಡಯ್ಯಾ, ಕಾಮಬ್ಥೀಮ ಜೀವಧನದೊಡೆಯ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಒಕ್ಕಲಿಗ ಮುದ್ದಣ್ಣ
ದೇಹದ ಸಿರಿಯ ಆಗುಹೋಗನರಿಯಬಾರದು ಆಗೆಂದರಿಯಬಾರದು, ಈಗೆಂದರಿಯಬಾರದು ಇದನೋಜೆಮಾಡಿಕೊಳ್ಳಿ ಶಿವಭಕ್ತಿಯಿಂದ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ದಿಟದ ಚಂದ್ರನು ಅನೇಕ ಘಟದ ಜಲದೊಳಗೆ ಜನಿಸಿ ಅನೇಕ ವ್ಯವಹಾರವಾದಂತೆ ಜೀವನೆ ಜಗ, ಜಗವೆ ಜೀವನಾದ. ಆದಿ ಅನಾದಿ ವಿಚಿತ್ರತರವಾದ ಮಾಯೆ. ಈ ಮಾಯೆಯಿಂದ ತನಗೆ ತಾನೇ ಪ್ರತಿಬಿಂಬ. ಆ ಮಾಯಾ ಪ್ರತಿಬಿಂಬವೆ ತನಗೆ ಸಂಸಾರ. ಆ ಸಂಸಾರವನು ಆ ಪರಮಾತ್ಮನು ಕೂಡಿಯೂ ಕೂಡದೆ ಆ ಘಟ ಜಲ ಚಂದ್ರಮನ ಹಾಂಗೆ ವರ್ತಿಸುತ್ತಿಹನು. ಅದೆಂತೆಂದಡೆ: ``ಏಕ ಏವ ಹಿ ಭೂತಾತ್ಮಾಭೂತೇ ಭೂತೇ ವ್ಯವಸ್ಥಿತಃ| ಏಕಧಾ ಬಹುಧಾಚೈವ ದೃಶ್ಯತೇ ಜಲಚಂದ್ರವತ್||' ಎಂದುದಾಗಿ, ಸಟೆಯ ಮಾಯೆಯ ಸಟೆಯೆಂದು ಕಳೆದುಳಿದ ದ್ಥೀರ ನೀನೇ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ದೂರ್ವೆಯದಳನ ಮೇಯಬಂದ ಮೊಲನ ಉರ್ವಿಯ ಕರಡಿ ತೊಡರಿಗೊಂಡಿಪ್ಪುದಯ್ಯ. ಕರಡಿಯ ಹಿಡಿದ ಬೇಡನ ಕಯ್ಯ ಕಾಡು ನಾಯಿಗಳು ನಾಡನೆಲ್ಲವ ಹರಿದು ತಿನುತಿಪ್ಪವು; ಇವರ ಗಾಢವನೇನೆಂಬೆನಯ್ಯ. ಇವರ ಗಾಢ ಗಮಕವ ಮುರಿದಾತನಲ್ಲದೆ ಲಿಂಗೈಕ್ಯನಲ್ಲ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ದಕ್ಷಿಣದ್ವಾರದ ವೃಕ್ಷದ ತಂಪಿನಲ್ಲಿ ಸ್ವಯಂಜ್ಯೋತಿ ಉರಿವುದ ಕಂಡೆ. ದೀಪ ಕೆಟ್ಟು ವೃಕ್ಷವಳಿದು ದಕ್ಷಿಣದ್ವಾರವ ದಾಂಟಿ ಉತ್ತರದ್ವಾರದ ಬಾಗಿಲ ಬಿಯ್ಯಗ ತೆಗೆದಲ್ಲಿ ನಾದಮೂರುತಿಲಿಂಗವ ಕಂಡೆ. ಮುಟ್ಟಿ ಪೂಜಿಸಿ ಹೋದಾತನ ನೆಟ್ಟನೆ ನುಂಗಿ, ತಾ ಬಟ್ಟಬಯಲಾಯಿತ್ತು ನೋಡಾ, ಸೌರಾಷ್ಟ್ರ ಸೋಮೇಶ್ವರನೆಂಬ ಲಿಂಗವು.
--------------
ಆದಯ್ಯ
ದೇವ ದೇವ ಮಹಾಪ್ರಸಾದ ! ನಿಮ್ಮಡಿಗಳೆಂದಂತೆಯಲ್ಲದೆ ಎನಗೆ ಬೇರೆ ಸ್ವತಂತ್ರವುಂಟೆ ದರ್ಪಣದೊಳಗಣ ಪ್ರತಿಬಿಂಬವ ನೋಡುವ ಮುಖಕ್ಕೆ ಬ್ಥಿನ್ನಭಾವವುಂಟೆ ಚರಿಸಿ ಬಪ್ಪ ಅನಂತ ಸುಳುಹಿನೊಳಗೆ ನೀನೊಬ್ಬನೆ, ನಿನ್ನೊಳಗೆ ಅನಂತ ಸುಳುಹು ಅಡಗಿದವು. ನಿಮಗೆ ಮಾಡಿದ ಸಯದಾನವ ನಿಮಗೆ ನೀಡುವೆನು, ಅವಧರಿಸಬೇಕಯ್ಯಾ, ಕೂಡಲಸಂಗಮದೇವಾ.
--------------
ಬಸವಣ್ಣ
ದಿವಾರಾತ್ರಿಯೆಂಬ ಉಭಯ ಕೂಡೆ, ದಿನಲೆಕ್ಕ ಹಾಯಿದು ಕಲ್ಪಿತವನಳಿದಂತೆ, ಲೆಕ್ಕ ಮುಂಚು, ದಿನ ಹಿಂಚಾಗಿ ತನ್ನ ತಪ್ಪನರಿವುದಕ್ಕೆ ಮೊದಲೆ ತಪ್ಪಿರಬೇಕು. ಇದು ನಿಶ್ಚಯ ಬುದ್ಧಿ, ಮನಸಂದಿತ್ತು ಮಾರೇಶ್ವರಾ.
--------------
ಮನಸಂದ ಮಾರಿತಂದೆ
ದಿವದೊಳಗೆ ದ್ಯುಮಣಿಯೊಪ್ಪಿ ತೋರುತ್ತಿಹುದು. ರಜನಿಯೊಳಗೆ ತಾರಾಪತಿಯೊಪ್ಪಿ ತೋರುತ್ತಿಹುದು. ಗಣತಿಂತಿಣಿಯೊಳಗೆ ಶಿವಾನುಭಾವವೊಪ್ಪಿ ತೋರುತ್ತಿಹುದು. ಗುರುನಿರಂಜನ ಚನ್ನ ಬಸವಲಿಂಗದೊಳಗೆ ಎನ್ನ ಮನವೊಪ್ಪಿ ತೋರುತ್ತಿಹುದು.
--------------
ದೇಶಿಕೇಂದ್ರ ಸಂಗನಬಸವಯ್ಯ

ಇನ್ನಷ್ಟು ...
-->