ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಅಃ ಪದದಿಂದ ಪ್ರಾರಂಭವಾಗುವ ವಚನಗಳು

ಅಂಗ ಪ್ರಾಣ ಸಂಗವುಳ್ಳನ್ನಕ್ಕ, ಲಿಂಗಪೂಜೆಯೆಂಬ ದಂದುಗ ಬಿಡದು. ಈ ಹೊರಗು ಒಳಗಾಗಿಯಲ್ಲದೆ, ಪ್ರಾಣಲಿಂಗಿಯೆಂಬ ಸಂಬಂದ್ಥಿಯಲ್ಲ. ಲಿಂಗಕ್ಕೆ ಪ್ರಾಣ, ಪ್ರಾಣಕ್ಕೆ ಲಿಂಗ ಉಭಯಸಂಬಂಧವಾದಲ್ಲಿ, ಉರಿ ಕೊಂಡ ಕರ್ಪುರಕ್ಕೆ ತೊಡರುವುದಕ್ಕೆ ಠಾವಿಲ್ಲ, ಕಾಮಧೂಮ ಧೂಳೇಶ್ವರಾ.
--------------
ಮಾದಾರ ಧೂಳಯ್ಯ
ಅಂಗನೆಯ ಚಿತ್ತ, ರಮಣನ ಸುತ್ತಿಮುತ್ತಿ ಅಪ್ಪಿ ಅಗಲದಿಪ್ಪಂತೆ ಜಾಗ್ರ, ಸ್ವಪ್ನ, ಸುಷುಪ್ತಿಯಲ್ಲಿ ಶರಣ ಚಿತ್ತರತಿ ಶಿವಲಿಂಗವ ಸುತ್ತಿ ಮುತ್ತಿ ಅಪ್ಪಿ ಅಗಲದಿಪ್ಪರೆ ಆ ಮಹಾತ್ಮನ ಏನೆಂದುಪಮಿಸುವೆನಯ್ಯ? ಲಿಂಗಪ್ರಾಣಿಯ, ಪ್ರಾಣಲಿಂಗಸಂಬಂದ್ಥಿಯ? ಸ್ವತಂತ್ರ ವಸ್ತುವಿನಲ್ಲಿ ಅರಿವರತು ಬೆರಗು ನಿಬ್ಬೆರಗಾದ, ಘನಲಿಂಗಪ್ರಾಣಿಗೆ ನಮೋ ನಮೋಯೆಂಬೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಂಥ ಬ್ರಹ್ಮಾಂಡವ ಎಪ್ಪತ್ತೈದುಲಕ್ಷದ ಮೇಲೆ ಸಾವಿರದೇಳುನೂರಾ ನಲವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಭದ್ರವೆಂಬ ಭುವನ. ಆ ಭುವನದೊಳು ಭದ್ರಕರ್ಣನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಾ ಎಪ್ಪತ್ತುಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ಎಂಟುನೂರಾ ಎಪ್ಪತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣ ಇಂದ್ರಾದಿ ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಗೈಯೊಳಗಣ ಲಿಂಗಮ್ರ್ಕೂಯ ಕಂಗಳಲ್ಲಿಂಗಗೊಟ್ಟಡೆ, ತಿಂಗಳ ಸೂಡನಾದೆ ನೋಡಾ ಅಯ್ಯಾ. ಮಂಗಳಮೂರ್ತಿ ಗಂಗಾಜೂಟಾಂಗಮಯ ಕಪಿಲಸಿದ್ಧ ಮಲ್ಲಿಕಾರ್ಜುನಂಗ ಬೇರೆಂದರಿಯಲ್ಲ ನೋಡಾ, ನಿಜದ ನಿರ್ವಯಲಲ್ಲಯ್ಯನೆ.
--------------
ಸಿದ್ಧರಾಮೇಶ್ವರ
ಅಂಥ ಬ್ರಹ್ಮಾಂಡವ ಹನ್ನೆರಡುಲಕ್ಷದ ಮೇಲೆ ಸಾವಿರದನೂರಾಹದಿನೆಂಟು ಬ್ರಹ್ಮಾಂಡವನೊಳಕೊಂಡುದೊಂದು ಹರಿಶ್ಚಂದ್ರವೆಂಬ ಭುವನ. ಆ ಭುವನದೊಳು ಹರಿಸಂಹಾರವೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಐನೂರೈವತ್ತೈದುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು ನೋಡಾ. ಐನೂರೈವತ್ತೈದುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಇಪ್ಪತ್ತೈದುಲಕ್ಷದ ಮೇಲೆ ಸಾವಿರದಿನ್ನೂರಾ ನಲವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಭವವೆಂಬ ಭುವನ. ಆ ಭುವನದೊಳು ಭವದೂರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರಿಪ್ಪತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಆರುನೂರಿಪ್ಪತ್ತುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಗದ ಮೇಲೊಂದು ಲಿಂಗವು, ಲಿಂಗದ ಮೇಲೊಂದು ಅಂಗವು. ಆವುದು ಘನವೆಂಬೆ ? ಆವುದು ಕಿರಿದೆಂಬೆ ? ತಾಳೋಷ್ಠಸಂಪುಟಕ್ಕೆ ಬಾರದ ಘನ, ಉಭಯಲಿಂಗವಿರಹಿತವಾದ ಶರಣ. ಕೂಡಲಚೆನ್ನಸಂಗಾ ಲಿಂಗೈಕ್ಯವು.
--------------
ಚನ್ನಬಸವಣ್ಣ
ಅಂತರಂಗದಲ್ಲಿ ಗುರುಲಿಂಗಜಂಗಮವ ಕಂಡೆವೆಂದು, ಬಹಿರಂಗದಲ್ಲಿ ಹಳಿದಾಡುವರೇನಯ್ಯ ? ಬಹಿರಂಗದಲ್ಲಿ ಗುರುಲಿಂಗಜಂಗಮವ ಕಂಡೆವೆಂದು ಅಂತರಂಗದಲ್ಲಿ ಹಳಿದಾಡುವರೇನಯ್ಯ ? ಅಂತರಂಗ ಬಹಿರಂಗದಲ್ಲಿ ಸಂಶಯವಿಲ್ಲದೆ ಬಹಿರಂಗದಲ್ಲಿ ಗುರು ಲಿಂಗ ಜಂಗಮ ಪಾದೋದಕ ಪ್ರಸಾದವನರಿತು ಇಷ್ಟಲಿಂಗಕ್ಕೆ ಅರ್ಪಿಸಿ, ಪ್ರಾಣಲಿಂಗದಲ್ಲಿ ಕೂಡಿದ್ದೇ ಭಕ್ತಿಯೆಂಬೆನಯ್ಯ. ಅಂತರಂಗದಲ್ಲಿ ಗುರು ಲಿಂಗ ಜಂಗಮ ಪಾದೋದಕ ಪ್ರಸಾದವನರಿತು ಭಾವಲಿಂಗದಲ್ಲಿ ಕೂಡಿದ್ದೇ ಸದ್ಭಕ್ತಿಯೆಂಬೆನಯ್ಯ. ಭಕ್ತಿ ಸದ್ಭಕ್ತಿಯೆಂಬ ಭೇದವನು ಅರಿತಾತನೇ ಶರಣನು ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಅಂಗೈಯಲ್ಲಿ ಪೂಜಿಸಿದ ಫಲ ಲಿಂಗಯ್ಯ ಕೊಡನೆಂದು ಮರುಗರಾ ಮನವೆ. ಅಂಗೈಯಲ್ಲಿ ಫಲ ಅಂಗ ಲಿಂಗ ನೋಡಿದಂತೆ ನೋಡಾ ಮನವೆ. ಅಂಗೈಯ ಫಲ ಲಿಂಗಯ್ಯನಾಗರೆ ಪೂಜಿಸುವರೆ ಪ್ರಮಥರು? ನೋಡಾ ಮನವೆ. ಕಪಿಲಸಿದ್ಧಮಲ್ಲಿಕಾರ್ಜುನನ ಪೂಜಿಸಿ ಪೂಜಿಸಿ ಬದುಕು ಮನವೆ.
--------------
ಸಿದ್ಧರಾಮೇಶ್ವರ
ಅಂಗಲಿಂಗ ಸಹವಾಗಿ, ಆತ್ಮನರಿವು ಸಹವಾಗಿ, ಇಷ್ಟಪದಾರ್ಥವ ಇಷ್ಟ ಲಿಂಗಸಹವಾಗಿ, ರುಚಿಪದಾರ್ಥವ ಆತ್ಮಲಿಂಗಸಹವಾಗಿ, ರಸ ಗಂಧ ರೂಪ ಶಬ್ದ ಸ್ಪರ್ಶ ಪಂಚೇಂದ್ರಿಯಗಳಲ್ಲಿ ದೃಷ್ಟಪದಾರ್ಥವ ಇಷ್ಟಲಿಂಗಸಹವಾಗಿ, ಸ್ಥೂಲ ಸೂಕ್ಷ್ಮ ಕಾರಣದಲ್ಲಿ ಒಳಗು ಹೊರಗು ಸಹವಾಗಿ, ಅಳಿವು ಉಳಿವು ಸಹವಾಗಿ, ಕಾಬುದು ಕಾಣಿಸಿಕೊಂಬುದು ಸಹವಾಗಿ, ರಸವ ಕೊಂಡವನಂತೆ,ಅಸಿಯ ಮೊನೆ ಹರಿದಲ್ಲಿ ರಸ ಬಂದು ನಿಂತಂತೆ, ಎಲ್ಲಿ ಅರ್ಪಿತಕ್ಕೆ ಅಲ್ಲಿ ವಸ್ತು ಸಹವಾಗಿ ಎಲ್ಲಾ ಎಡೆಯಲ್ಲಿ ಪರಿಪೂರ್ಣ ಸಹವಾಗಿ, ಇಪ್ಪುದು ಸಹಭೋಜನಸ್ಥಲ. ಹೀಗಲ್ಲದೆ ಓಗರ ಮೇಲೋಗರವ ಲಾಗುಲಾಗಿಗೆ ತೋರುತ್ತ ಸಕಲಸಂಸಾರದ ಸಾಗರದಲ್ಲಿ ಮುಳುಗುತ್ತ, ಮರವೆ ಅಜ್ಞಾನದಲ್ಲಿ ಮರಳಿ ತಿರುಗುತ್ತ ನಾನಾವಿಕಾರತ್ರಯಗಳಿಂದ ಹುಟ್ಟುತ್ತ ಸಾವುತ್ತ, ಮತ್ತೆ ಸಾವಧಾನ ಸಹಭೋಜನವೆಂದಡೆ ನಾಚಿತ್ತು ಎನ್ನ ಮನ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಉಭಯವನಳಿದು ಏಕವಾದುದು ಸಹಭೋಜನಸ್ಥಲ.
--------------
ಅಕ್ಕಮ್ಮ
ಅಂಧಕಾರವೆಂಬ ಗಹ್ವರದೊಳಗೆ ನಿದ್ರೆಯೆಂಬ ರಾಕ್ಷಸಿ ಗ್ರಹಿಸಿ, ವೀರರ ನಿಗ್ರಹಿಸಿ ನೀರು ಮಾಡಿ, ದ್ಥೀರರ ಧೃತಿಗೆಡಿಸಿ, ಶಾಪಾನುಗ್ರಹಸಮರ್ಥರ ಸತ್ತಂತಿರಿಸಿ, ನಿಚ್ಚ ನಿಚ್ಚ ಜೀವನಾಶವ ಮಾಡುತ್ತಿಹಳು ನೋಡಾ, ಕೂಡಲಸಂಗಮದೇವಾ.
--------------
ಬಸವಣ್ಣ
ಅಂಗದ ಗುಣವಳಿಯದೆ, ಪ್ರಾಣದ ಪ್ರಪಂಚು ಹಿಂಗದೆ, ಭಾವದ ಭ್ರಮೆಯುಡುಗದೆ, ಮನದ ಮಾಯವಡಗದೆ, ಆತ್ಮನ ಅಹಂಮಮತೆ ಕೆಡದೆ, ಲಿಂಗಕ್ಕೆ ತಮಗೆ ಏಕಭಾಜನವೆಂದು ನುಡಿವ ಕಾಕುಮಾನವರನೇನೆಂಬೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಅಂಗಸೋಂಕೆಂಬುದು ಅಧಮವು. ಉರಸೆಜ್ಜೆಯೆಂಬುದು ಎದೆಯ ಗೂಂಟ. ಕಕ್ಷೆಯೆಂಬುದು ಕವುಚಿನ ತವರುಮನೆ. ಅಮಳೋಕ್ಯವೆಂಬುದು ಬಾಯ ಬಗದಳ. ಮುಖಸೆಜ್ಜೆಯೆಂಬುದು ಪಾಂಡುರೋಗ. ಕರಸ್ಥಳವೆಂಬುದು ಮರವಡದ ಕುಳಿ. ಉತ್ತಮಾಂಗವೆಂಬುದು ಸಿಂಬಿಯ ಕಪ್ಪಡ. ಎಲ್ಲರಿಗೆಯೂ ಸೋಂಕಾಯಿತ್ತು ! ಈ ಹಸಿಯ ಗೂಂಟದಲ್ಲಿ ಕಟ್ಟಿ, ಒಣಗಿದ ಗೂಂಟದಲ್ಲಿ ಬಿಡುವ ಬಾಲಭಾಷೆಯ ಭಂಡರ ನುಡಿಯ ಕೇಳಲಾಗದು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಅಂಗದಿಂದುದಯವಾದಾತ ಮಡಿವಾಳಯ್ಯ. ಲಿಂಗದಿಂದುದಯವಾದಾತ ರೇವಣಸಿದ್ಧಯ್ಯ. ಭಸ್ಮದಿಂದುದಯವಾದಾತ ಸಿದ್ಧರಾಮಯ್ಯ. ಪಾದೋದಕದಿಂದ ಉದಯವಾದವಳು ಅಕ್ಕಮಹಾದೇವಿ. ಮಂತ್ರದಿಂದುದಯವಾದಾತ ನಿಮ್ಮ ಸೋದರಮಾವ ಬಸವಯ್ಯ. ಪ್ರಸಾದದಿಂದುದಯವಾದಾತ ನೀನಲ್ಲವೆ ಚೆನ್ನಬಸವಯ್ಯ. ಬಸವಣ್ಣಪ್ರಿಯ ಚೆನ್ನಸಂಗಯ್ಯ.
--------------
ನಾಗಲಾಂಬಿಕೆ
ಅಂಕ ಕಳನೇರಿ ಕೈಮರೆದಿರ್ದಡೆ ಮಾರಂಕ ಬಂದಿರಿವುದ ಮಾಂಬನೆ ನಿಮ್ಮ ನೆನಹ ಮನ ಮರೆದಿರ್ದಡೆ ಮಾಯೆ ತನುವನಂಡಲೆವುದ ಮಾಬುದೆ ಕೂಡಲಸಂಗಯ್ಯನ ನೆನೆದಡೆ, ಪಾಪ ಉರಿಗೊಡ್ಡಿದರಗಿನಂತೆ ಕರಗುವುದಯ್ಯಾ.
--------------
ಬಸವಣ್ಣ

ಇನ್ನಷ್ಟು ...
-->