ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಇಷ್ಟಲಿಂಗವೆ ಪ್ರಾಣಲಿಂಗವೆಂಬ ಮಿಟ್ಟಿಯ ಭಂಡರು ನೀವು ಕೇಳಿರೆ. ಇಷ್ಟಲಿಂಗವನೂ ಕಾಯವನೂ ಮೆಟ್ಟಿ ಹೂಳುವಲ್ಲಿ, ಬಿಟ್ಟು ಹೋಹ ಪ್ರಾಣಕ್ಕೆ ಇನ್ನಾವುದು ಲಿಂಗ ಹೇಳಾ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ಇಷ್ಟಲಿಂಗ ಸಂಬಂಧವಾದ ಬಳಿಕ ಕಾಯಗುಣ ಕೆಟ್ಟು ಲಿಂಗವಾಯಿತ್ತು. ಪ್ರಾಣಲಿಂಗ ಸಂಬಂಧವಾದ ಬಳಿಕ ಕರಣಗುಣ ಕೆಟ್ಟು ಲಿಂಗಕರಣಂಗಳಾದುವು. ಭಾವಲಿಂಗ ಸಂಬಂಧವಾದ ಬಳಿಕ ಇಂದ್ರಿಯಗುಣ ಕೆಟ್ಟು ಲಿಂಗೇಂದ್ರಿಯಗಳಾದುವು. ಇದು ಕಾರಣ- ಶರಣಂಗೆ ಬೇರೆ ಲಿಂಗವಿಲ್ಲ, ಬೇರೆ ಅಂಗವಿಲ್ಲ. ಅರ್ಪಿತ ಅನರ್ಪಿತವೆಂಬ ಉಭಯ ಶಂಕೆ ಹಿಂಗಿತ್ತು, ಕೂಡಲಚೆನ್ನಸಂಗಯ್ಯಾ ನಿನ್ನೊಳಡಗಿದ ನಿಜೈಕ್ಯಂಗೆ
--------------
ಚನ್ನಬಸವಣ್ಣ
ಇಂದ್ರಿಯದ ಬಾಗಿಲಲ್ಲಿ ಮನವಿಪ್ಪುದು. ಮನದ ಮುಂಬಾಗಿಲಲ್ಲೇ ಭೋಗಲಿಂಗವಿದ್ದು, ಅದ್ಥಿಕಾರ ಲಯಹೊದ್ದದೆ ಸಕಲಭೋಗಂಗಳ ಭೋಗಿಸಿ ಪ್ರಸಾದವ ಕರಣಂಗಳಿಗೆ ಕೊಟ್ಟು ಅರುಹಿ ಎನ್ನ ಮನವ ತನ್ನತ್ತ ಸೆಳೆದು ಮರಹ ಮಾಣಿಸಿ ಕುರುಹಳಿದು ತೆರಹುಗೊಡದ ಸೌರಾಷ್ಟ್ರ ಸೋಮೇಶ್ವರಲಿಂಗವ ಕಂಡೆ.
--------------
ಆದಯ್ಯ
ಇನ್ನು ಆಧಾರ ಧಾರಣವೆಂತೆಂದಡೆ : ಪುಣ್ಯ-ಪಾಪ ಸ್ವರ್ಗ-ನರಕಾದಿಗಳಿಗೆ ಹೇತುಭೂತವಾಗಿಹ ಅನ್ನ ಪಾನಾದಿಗಳಂ ಬಿಟ್ಟು-ಸಿದ್ಧಾಸನದಲ್ಲಿ ಕುಳ್ಳಿರ್ದು, ಮೂಲಬಂಧ ಒಡ್ಡ್ಯಾಣಬಂಧ ಜಾಳಾಂದರಬಂಧಮಂ ಮಾಡಿ ಜಾಗ್ರ ಸ್ವಪ್ನ ಸುಷುಪ್ತಿ ತಲೆದೋರದೆ ಶಬ್ದ ಸ್ಪರ್ಶ ರೂಪ ರಸ ಗಂಧವೆಂಬ ಪಚೇಂದ್ರಿಯಂಗಳಲ್ಲಿ ಮನ ಪವನಮಂ ಸೂಸಲೀಯದೆ, ಏಕಾಗ್ರಚಿತ್ತನಾಗಿ ಮೂಲವಾಯುವಂ ಪಿಡಿದು ಆಕುಂಚನಂ ಮಾಡಿ, ಮೂಲಾಗ್ನಿಯನೆಬ್ಬಿಸಿ, ಆಧಾರಚಕ್ರ ಚತುರ್ದಳಪದ್ಮವ ಪೊಕ್ಕು ಸಾದ್ಥಿಸಿ, ಅಲ್ಲಿಹ ಮಂತ್ರ-ಪದ-ವರ್ಣ-ಭುವನ-ತತ್ವ-ಕಲೆಗಳಂ ಕಂಡು, ಅಲ್ಲಿ ಪಚ್ಚೆವರ್ಣವಾಗಿಹ ಜ್ಯೋತಿರ್ಮಯಲಿಂಗಮಂ ಬೆರಸಿ ಅಗ್ನಿಯಂ ಪಟುಮಾಡಿ, ಮನಮಂ ಏಕೀಕರಿಸಿ, ಅಲ್ಲಿಂದ ಮೇಲೆ ಸ್ವಾದ್ಥಿಷ್ಠಾನಚಕ್ರದ ಷಡುದಳಪದ್ಮವ ಪೊಕ್ಕನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇಂದ್ರಲೋಕದವರೆಲ್ಲರೂ ಸೂತಕಲಾಸಂಹಾರಿ ಬಸವ ಎಂದೆಂಬರು. ಚಂದ್ರಲೋಕದವರೆಲ್ಲರೂ ಷೋಡಶಕಲಾ ಪರಿಪೂರ್ಣ ಬಸವಾ ಎಂದೆಂಬರು. ಯುಗಕೋಟಿಬ್ರಹ್ಮರೆಲ್ಲರೂ ಪರಶಿವ ಬಸವಾ ಎಂದೆಂಬರು. ಹರಿವಿರಿಂಚಿಗಳೆಲ್ಲರೂ ಗುರುಲಿಂಗ ಬಸವಾ ಎಂದೆಂಬರು. ಅಷ್ಟದಿಕ್ಪಾಲಕರೆಲ್ಲರೂ ಪರಶಿವ ಬಸವಾ ಎಂದೆಂಬರು. ಸುರಪಡೆಯಲ್ಲಾ ಅಮೃತಸಾಗರ ಬಸವಾ ಎಂದೆಂಬರು. ನವನಾಥಸಿದ್ಧರೆಲ್ಲರೂ ಪರಮಘುಟಿಕೆ ಬಸವಾ ಎಂದೆಂಬರು. ಲಂಬೋದರ ಕುಂಭೋದರ ದಾರುಕ ರೇಣುಕ ಗೌರೀಸುತ ತಾಂಡವರೆಲ್ಲರೂ ಸಕಲಜೀವಚೈತನ್ಯ ಮಾತ್ರ ಬಸವಾ ಎಂದೆಂಬರು. ಓತವರೆಲ್ಲರೂ ಮಾತಾಪಿತ ಬಸವಾ ಎಂದೆಂಬರು. ಒಲಿದವರೆಲ್ಲರೂ ಪ್ರಾಣ ಪರಿಣಾಮಿ ಬಸವಾ ಎಂದೆಂಬರು. ಆನೇನೆಂಬೆನು, ಉಪಮಿಸಬಾರದ ಮಹಾಘನ ಮಹಿಮನ.
--------------
ಮಡಿವಾಳ ಮಾಚಿದೇವ
ಇದಿರಿಡುವ ಪೂಜೆ ವಾಗ್‍ಬ್ರಹ್ಮದ ಷಡುಸ್ಥಲದ ಸೋಪಾನ ಅಡಿಯ ಮೆಟ್ಟಿ ಅಡಿವಿಡಿವನ್ನಕ್ಕ ಗೋಪತಿನಾಥ ವಿಶ್ವೇಶ್ವರಲಿಂಗವುಉಭಯನಾಮವಾಗಿಪ್ಪನು.
--------------
ತುರುಗಾಹಿ ರಾಮಣ್ಣ
ಇನ್ನು ತಾರಕಯೋಗದ ಲಕ್ಷಣಮಂ ಪೇಳ್ವೆನೆಂತೆನೆ : ಮಂತ್ರಯೋಗ ಲಯಯೋಗ ಹಠಯೋಗಕ್ಕೆ ಉತ್ತರೋತ್ತರ ವಿಶಿಷ್ಟವಾದ ರಾಜಯೋಗವೇ ಸಾಂಖ್ಯಯೋಗವೆಂದು ತಾರಕಯೋಗವೆಂದು ಅಮನಸ್ಕಯೋಗವೆಂದು ಮೂರು ಪ್ರಕಾರವಾಗಿರ್ಪುದು. ಆ ಮೂರರೊಳಗೆ ಮೊದಲು ಸಾಂಖ್ಯಯೋಗವೇ ತತ್ವಜಾÕನರೂಪವಪ್ಪುದರಿಂದೆ, ಆ ತತ್ವಂಗಳೆಂತೆನೆ : ಪೃಥ್ವಿ ಅಪ್ಪು ತೇಜ ವಾಯು ಆಕಾಶವೆಂಬ ಪಂಚತತ್ವಂಗಳಿಂದೆ ಜನಿತಮಾದ ವಾಗಾದಿ ಕರ್ಮೇಂದ್ರಿಯಂಗಳೈದು, ಶಬ್ದಾದಿ ವಿಷಯಂಗಳೈದು, ಶ್ರೋತ್ರಾದಿ ಜಾÕನೇಂದ್ರಿಯಂಗಳೈದು, ಪ್ರಾಣಾದಿ ವಾಯುಗಳೈದು, ಜೀವನಗೂಡಿ ಮಾನಸಾದಿ ಅಂತಃಕರಣಂಗಳೈದು, ಇಂತೀ ಪಂಚವಿಂಶತಿ ತತ್ವಂಗಳು ನಾನಲ್ಲ, ಅವು ನನ್ನವಲ್ಲವೆಂದು ವಿಭಾಗಿಸಿ ಕಳೆದು, ಪರಾತ್ಪರವಾದ ಪರಶಿವಬ್ರಹ್ಮವೆ ನಾನೆಂದು ತಿಳಿವುದೇ ಸಾಂಖ್ಯಯೋಗ ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಇದಿರ ಹಳಿದು ತನ್ನ ಬಣ್ಣಿಸುವನ್ನಕ್ಕರ ಶಿವಜಾÕನಿ ಎಂತಪ್ಪನಯ್ಯಾ ? ಹಮ್ಮು ಬಿಮ್ಮು ಹೆಮ್ಮೆ ಹಿರಿತನವುಳ್ಳನ್ನಕ್ಕರ ಶಿವಜಾÕನಿ ಎಂತಪ್ಪನಯ್ಯಾ ? ಉದಮದ ಗರ್ವ ಅಹಂಕಾರ ಮಮಕಾರವುಳ್ಳನ್ನಕ್ಕರ ಶಿವಜಾÕನಿ ಎಂತಪ್ಪನಯ್ಯಾ ? ಆಸೆ ಆಮಿಷ ಕ್ಲೇಶ ತಾಮಸವುಳ್ಳನ್ನಕ್ಕರ ಶಿವಜಾÕನಿ ಎಂತಪ್ಪನಯ್ಯಾ ? ಇಂತೀ ಗುಣಂಗಳುಳ್ಳನ್ನಕ್ಕರ ಶಿವಾನುಭಾವಿಯೆಂತಪ್ಪನಯ್ಯಾ ಅಖಂಡೇಶ್ವರಾ ?
--------------
ಷಣ್ಮುಖಸ್ವಾಮಿ
ಇನ್ನು ತಾರಕಯೋಗದ ಲಕ್ಷಣವೆಂತೆನೆ: ವೇದ ಶಾಸ್ತ್ರಾಗಮ ಪುರಾಣ ಕವಿತ್ವಗಳೆಂಬ ನುಡಿಗಳಿಂದೆ ವಾಚಾಳಕರಾದವರಿಗೆ ತಾರಕಬ್ರಹ್ಮವು ಸಾಕ್ಷಾತ್ಕಾರವಾಗದು. ಬ್ರಹ್ಮಚಾರಿ ಗೃಹಸ್ಥ ವಾನಪ್ರಸ್ಥ ಯತಿಗಳೆಂಬ ಚತುರಾಶ್ರಮಗರ್ವಿತರಿಗೆ ತಾರಕಬ್ರಹ್ಮವು ಸಾಕ್ಷಾತ್ಕಾರವಾಗದು. ಜಾÕನಖಾಂಡಿ ಕರ್ಮಖಾಂಡಿಗಳೆಂಬ ವೇದಾಂತಿ ಸಿದ್ಧಾಂತಿಗಳಿಗೆ ತಾರಕಬ್ರಹ್ಮವು ಸಾಕ್ಷಾತ್ಕಾರವಾಗದು. ಶ್ರೀ ಗುರುಕಟಾಕ್ಷದಿಂದಲ್ಲದೆ ತಾರಕಬ್ರಹ್ಮವು ಆರಾರಿಗೂ ಸಾಕ್ಷಾತ್ಕಾರವಾಗದಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಇಷ್ಟಲಿಂಗದಲ್ಲಿ ವಿಶ್ವಾಸ ಬಲಿದರೆ ಆಯತಲಿಂಗ. ಆ ಇಷ್ಟಲಿಂಗದಲ್ಲಿ ಭಾವಮನೋವೇದ್ಯವಾದಲ್ಲಿ ಸ್ವಾಯತಲಿಂಗ. ಆ ಇಷ್ಟಲಿಂಗದ ಭಾವ ಮನೋವೇದ್ಯವಾದ ಸುಖವು ಭಿನ್ನವಾಗಿ ತೋರದೆ, ಅನುಪಮ ಪರಿಣಾಮ ಭರಿತವಾದಲ್ಲಿ ಸನ್ನಹಿತಲಿಂಗ. ಇಂತು, ಇಷ್ಟಲಿಂಗ ಪ್ರಾಣಲಿಂಗ ತೃಪ್ತಿಯ ಭಾವಲಿಂಗಂಗಳೆಂಬ ಲಿಂಗತ್ರಯಂಗಳು, ತನುತ್ರಯಂಗಳ ಮೇಲೆ ಆಯತ ಸ್ವಾಯತ ಸನ್ನಹಿತಂಗಳಾದ ಶರಣನ ಪಂಚಭೂತಂಗಳಳಿದು ಲಿಂಗ ತತ್ವಂಗಳಾಗಿ, ಆತನ ಜೀವ ಭಾವವಳಿದು ಪರಮಾತ್ಮನೆನಿಸಿದಲ್ಲಿ ಷಡಂಗಯೋಗವಾದುದು ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಇದಿರರಿದಹರೆಂದು ಮರೆಯ ಮಾಡಿ, ಗೂಢವ ನುಡಿಯಬಹುದೆ ವಸ್ತುವ ? ಅರು[ವೆ]ಯಲ್ಲಿ ಕೆಂಡವ ಕಟ್ಟಿದಡೆ ಅಡಗಿಹುದೆ ? ನೆರೆ ವಸ್ತು ಒಬ್ಬರಿಗೆ ಒಡಲೆಡೆವುಂಟೆ ? ಅರ್ಕೇಶ್ವರಲಿಂಗ ಅರಿವರ ಮನ ಭರಿತ, ಸಂಪೂರ್ಣ.
--------------
ಮಧುವಯ್ಯ
ಇಷ್ಟಲಿಂಗವ ಹಿಡಿದು ಕಷ್ಟಯೋನಿಗೆ ತಿರುಗುವ ಕೆಟ್ಟ ಪಾತಕರ ನೋಡಲಾಗದು. ಜಂಗಮವೆಂದು ಮಾಡಲಾಗದು ಪೂಜೆಯ. ನಮಿಸಿಕೊಳ್ಳಲಾಗದು ಹರನೆಂದು. ಅದೇನು ಕಾರಣವೆಂದೊಡೆ : ತನುಮನಭಾವನಷ್ಟವಾದಿಷ್ಟಲಿಂಗಜಂಗಮವು ಪೂಜೆಗೆ ಯೋಗ್ಯ. ತನುಮನಭಾವವು ತ್ರಿವಿಧಮಲದಲ್ಲಿ ಮುಳುಗಿ ಮಲರೂಪಮನುಜರಿಗೆ, ಗುರುನಿರಂಜನ ಚನ್ನಬಸವಲಿಂಗವೆಂದೊಡೆ ನಾಚಿಕೆಗೊಂಡಿತ್ತು ಆಚಾರ.
--------------
ದೇಶಿಕೇಂದ್ರ ಸಂಗನಬಸವಯ್ಯ
ಇಹದಲ್ಲಿ ಸುಖಿ, ಪರದಲ್ಲಿ ಪರಿಣಾಮಿ ಎಂಬರು, ಅದು ಹುಸಿ, ನಿಲ್ಲು. ಇಹದಲ್ಲಿ ದುಃಖಿ, ಪರದಲ್ಲಿ ಪ್ರಕೃತಿಯೆಂದೆ. ಇಂತೀ ಇಹಪರವೆಂಬೆರಡು. ಲಕ್ಷ್ಮಿಯ ಮನೆಯ ತೊತ್ತಿನ ತೊತ್ತಾದವರಿಗೆ ಇನ್ನೆತ್ತಣ ಮುಕ್ತಿ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಇಂದ್ರಿಯನಿಗ್ರಹ ಮಾಡಿದಡೇನಯ್ಯಾ, ಚಂದ್ರಧಾರಿಯಾಗಬಲ್ಲನೆ? ಇಂದ್ರಿಯ ಕಟ್ಟಿದ ಕುದುರೆ ಇಂದ್ರನ ಉಚ್ಚೆ ೈಶ್ರವವಹುದೆ ಅಯ್ಯಾ? ಇಂ್ರಯಂಗಳೆಂಬುದು ಮಾಯಾಜಾಲವು ತಾನೆ. `ನ ಸತೀ' ಎಂಬ ಶ್ರುತಿಯದು ಪ್ರಸಿದ್ಧ. ಂಗವೆಂಬುದ ತಿಳಿಯಬಲ್ಲಾತನೆ ಜಗದ್ವಂದ್ಯ ಜಂಗಮವೆಂಬೆ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಇಂದ್ರಿಯಂಗಳುಳ್ಳನ್ನಕ್ಕರ ಪ್ರಾಣಂಗೆ ಬಂಧನ ಮಾಬುದೆ ಭವದುಃಖಿಗಳಿರೆ? ಇಂದ್ರಿಯಂಗಳನೆಲ್ಲವ ಲಿಂಗಸಂಧಾನವ ಮಾಡಬಲ್ಲರೆ ಪ್ರಾಣನ ಬಂಧನ ಬಿಟ್ಟು ಓಡುವುದು ನೋಡಾ. ಪ್ರಾಣಲಿಂಗವಾಗಿಯಲ್ಲದೆ ಪ್ರಳಯವ ಗೆಲಬಾರದು. ಪ್ರಳಯ ಪ್ರಳಯದ ಹಳೆಯರಾಗಿಪ್ಪವರ ಪ್ರಾಣಲಿಂಗಸಂಬಂದ್ಥಿಗಳೆಂಬೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು

ಇನ್ನಷ್ಟು ...
-->