ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಉಲಿಗರ ಮಾತು, ಊರುಗರ ತೋಟಿಯೊಳಗುಂಟೆ ಲಿಂಗಾನುಭಾವ ? ರಚ್ಚೆಯ ಕೆಟ್ಟ ಬೀದಿಯ ಮಾತಿನೊಳಗುಂಟೆ ಲಿಂಗಾನುಭಾವ ? ಸಂತೆಯೊಳಗೆ ಸಮಾಧಿಯುಂಟೆ ? ಇದು ಕಾರಣ ಕೂಡಲಚೆನ್ನಸಂಗಯ್ಯನ ಅನುಭಾವ ಹೊರವೇಷದ ವಾಚಾಳರಿಗೆಲ್ಲಿಯದು.
--------------
ಚನ್ನಬಸವಣ್ಣ
ಉಂಬಾಗಳಿಲ್ಲೆನ್ನ, ಉಡುವಾಗಳಿಲ್ಲೆನ್ನ, ಬಂಧುಗಳು ಬಂದಾಗಳಿಲ್ಲೆನ್ನ. ಲಿಂಗಕ್ಕೆ ಇಲ್ಲೆಂಬ, ಜಂಗಮಕ್ಕೆ ಇಲ್ಲೆಂಬ, ಬಂದ ಪುರಾತರಿಗೆ ಇಲ್ಲೆಂಬ, ಸಾವಾಗ ದೇಹವ ದೇಗುಲಕ್ಕೆ ಒಯ್ಯೆಂಬ, ದೇವರಿಗೆ ಹೆಣ ಬಿಟ್ಟಿ ಹೇಳಿತ್ತೆ ಕೂಡಲಸಂಗಮದೇವಾ 222
--------------
ಬಸವಣ್ಣ
ಉದಯಕ್ಕೆ ತನುವೆಂಬ ಹಸ್ತದಲ್ಲಿ ಇಷ್ಟಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ಮಧ್ಯಾಹ್ನಕ್ಕೆ ಮನವೆಂಬ ಹಸ್ತದಲ್ಲಿ ಪ್ರಾಣಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ಅಸ್ತಮಾನಕ್ಕೆ ಧನವೆಂಬ ಹಸ್ತದಲ್ಲಿ ಭಾವಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ತನು ಮುಟ್ಟದ ಮುನ್ನ, ಮನ ಮುಟ್ಟದ ಮುನ್ನ, ಭಾವ ಮುಟ್ಟದ ಮುನ್ನ, ಲಿಂಗಕ್ಕೆ ದ್ರವ್ಯವ ಸಲಿಸಬಲ್ಲರೆ ಶರಣನೆಂಬೆ. ಕಾಲು ತಾಗದ ಮುನ್ನ, ಕೈ ಮುಟ್ಟದ ಮುನ್ನ ಉದಕವ ತಂದು ಲಿಂಗಕ್ಕೆ ಮಜ್ಜನವ ನೀಡಬಲ್ಲರೆ ಶರಣನೆಂಬೆ. ಹೂವು ನೋಡದ ಮುನ್ನ, ಹಸ್ತದಿಂದ ಮುಟ್ಟದ ಮುನ್ನ, ಹೂವಕೊಯಿದು ಧರಿಸಬಲ್ಲರೆ ಶರಣನೆಂಬೆ. ಈ ಭೇದವ ತಿಳಿಯಬಲ್ಲರೆ ಶಿವಜ್ಞಾನಿಶರಣ ಲಿಂಗಾಂಗಸಂಬಂದ್ಥಿ. ಇಂತೀ ನಿರ್ಣಯವ ತಿಳಿಯದೆ ಶರಣಸತಿ ಲಿಂಗಪತಿ ಎಂಬಾತನ ಲಿಂಗ ಪ್ರೇತಲಿಂಗ, ಅವ ಭೂತಪ್ರಾಣಿ ಎಂದನಯ್ಯ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಉಲಿವ ಉಯ್ಯಲೆಯ ಹರಿದು ಬಂದೇರಲು, ತಾಗದೆ ತೂಗುವುದು, ಭವಸಾಗರ ಮರಳಿ ಬಾರದಂತೆ ! ಹಂಸೆಯ ಮೇಲೆ ತುಂಬಿ ಕುಳ್ಳಿರ್ದು ಸ್ವರ ಗೆಯ್ಯುವ ಘೋಷವಿದೇನೊ ? ಆತನಿರ್ದ ಸರ ಹರಿಯದೆ ಇದ್ದಿತ್ತು. ದೇಹಿಗಳೆಲ್ಲ ಅರಿವರೆ, ಗುಹೇಶ್ವರನ ಆಹಾರಮುಖವ ?
--------------
ಅಲ್ಲಮಪ್ರಭುದೇವರು
ಉಭಯ ಕಾಮ, ಉಭಯ ಶಕ್ತಿ, ಉಭಯ ಆಶ್ರಮವು_ ಅನಾಶ್ರಮವು, ಉಭಯ ತಾನೆ ಪ್ರಸಾದಿ ಉಭಯನಾಮದ ಮೇಲೆ ನಾಮವಾದುದನು ಲಿಂಗದೇಹಿಯೆಂಬಾತಂಗರಿಯಬಾರದು. ಇದು ಕಾರಣ, ಕೂಡಲಚೆನ್ನಸಂಗಾ ನಿಮ್ಮ ಪ್ರಸಾದಿಗಲ್ಲದೆ ಅರಿಯಬಾರದು.
--------------
ಚನ್ನಬಸವಣ್ಣ
ಉರಿಗೆ ಉರಿಯನೆ ತೋರುವೆನು, ಅಮೃತದ ಕಳೆಯಲ್ಲಿ ನಿಲಿಸುವೆನು. ನಾನು ಬ್ರಹ್ಮಸ್ಥಾನದಲ್ಲಿ ಗುಹೇಶ್ವರಾ_ನಿರಂತರವಾಗಿರ್ದೆನಯ್ಯಾ.
--------------
ಅಲ್ಲಮಪ್ರಭುದೇವರು
ಉಪ್ಪರಗುಡಿ ನಂದಿವಾಹನ ಸದ್ಯೋಜಾತನ ಬಾಗಿಲ ಮುಂದೆ ಸಾರುತ್ತೈದಾವೆ, ನೋಡಾ, ಶ್ರುತಿಗಳೂ ನಾಲ್ಕು ವೇದವೂ ಹುಸಿಯಿದೆ `ಭರ್ಗೋ ದೇವಸ್ಯ ದ್ಥೀಮಹಿ' ಎಂದುದಾಗಿ, ಕೂಡಲಸಂಗನಲ್ಲದಿಲ್ಲೆಂದುದು ವೇದ.
--------------
ಬಸವಣ್ಣ
ಉಪಮೆ ಉಪಮಿಸಲರಿಯದೆ ಉಪಮಾತೀತವೆನುತ್ತಿದ್ದಿತ್ತು. ಅರಿವು, ಅರಿವಿನ ಮರೆಯಲ್ಲಿರ್ದುದನರಿಯಲರಿಯದೆ, ಪರಾಪರವೆಂದು ನುಡಿಯುತ್ತಿದ್ದಿತ್ತು. ಧ್ಯಾನ ಧ್ಯಾನಿಸಲರಿಯದೆ, ಧ್ಯಾನರೂಪಾತೀತನೆಂದು, ತದ್ಧ್ಯಾನಗೊಂಡಿತ್ತು. ಜ್ಞಾತೃ ಜ್ಞಾನ ಜ್ಞೇಯಕ್ಕೆ ಇನ್ನಾವ ಜ್ಞಾನವೊ? ವೇದವಿಜ್ಞಾನವೆಂದುದಾಗಿ, `ತತ್ತ್ವಮಸಿ' ವಾಕ್ಯಂಗಳೆಲ್ಲವೂ ಹುಸಿಯಾಗಿ ಹೋದವು. ಸಚ್ಚಿದಾನಂದವೆಂದುದಾಗಿ ದ್ವೈತಾದ್ವೈತಿಗಳೆಲ್ಲ ಸಂಹಾರವಾಗಿ ಹೋದರು. ಬಂದೂ ಬಾರದ, ನಿಂದ ನಿರಾಳ ಗುಹೇಶ್ವರ.
--------------
ಅಲ್ಲಮಪ್ರಭುದೇವರು
ಉಂಬಲ್ಲಿ [ಊ]ಡುವಲ್ಲಿ ಕ್ರೀಯಳಿಯಿತ್ತೆಂಬರು, ಕೊಂಬಲ್ಲಿ ಕೊಡುವಲ್ಲಿ ಕುಲವನರಸುವರು, ಎಂತಯ್ಯಾ ಅವರ ಭಕ್ತರೆಂತೆಂಬೆ ಎಂತಯ್ಯಾ ಅವರ ಯುಕ್ತರೆಂತೆಂಬೆ ಕೂಡಲಸಂಗಮದೇವಾ ಕೇಳಯ್ಯಾ, ಹೊಲತಿ ಶುದ್ಧ ನೀರ ಮಿಂದಂತಾಯಿತ್ತಯ್ಯಾ.
--------------
ಬಸವಣ್ಣ
ಉದಯ ತತ್ಕಾಲವೆ ಅಸ್ತಮಯ, ಅಸ್ತಮಯ ತತ್ಕಾಲವೆ ಉದಯ. ಮಧುವೆ ವಿಷ, ವಿಷವೆ ಮಧು. ಸದರಿವೆರಡಕ್ಕೆ ಮನಸ್ಸಿನ ಸಂದೇಹ ಮಾತ್ರ. ಅದು ಕಾರಣ ಮಧುರ ಸಮುದ್ರ, ಲವಣ ಸಮುದ್ರ, ಕ್ಷೀರ ಸಮುದ್ರ, ದದ್ಥಿ ಸಮುದ್ರ ಚತುರಂಗದೊಳಿರ್ದ ಸಪ್ತಸಮುದ್ರಕ್ಕೆ ಏಕೋಮೂಲ್ಯ ಬ್ಥಿನ್ನ ಕಾಣಾ ಎಲೆ ನಮ್ಮ ಕೂಡಲಚೆನ್ನಸಂಗಮದೇವಯ್ಯ.
--------------
ವೀರಸಂಗಯ್ಯ
ಉರಕ್ಕೆ ಜವ್ವನಗಳು ಬಾರದ ಮುನ್ನ, ಮನಕ್ಕೆ ನಾಚಿಕೆಗಳು ತೋರದ ಮುನ್ನ, ನಮ್ಮವರಂದೆ ಮದುವೆಯ ಮಾಡಿದರು; ಸಿರಿಶೈಲ ಚೆನ್ನಮಲ್ಲಿಕಾರ್ಜುನಂಗೆ. ಹೆಂಗೂಸೆಂಬ ಭಾವ ತೋರದ ಮುನ್ನ ನಮ್ಮವರಂದೆ ಮದುವೆಯ ಮಾಡಿದರು
--------------
ಅಕ್ಕಮಹಾದೇವಿ
ಉಣ್ಣದೆ ತೃಪ್ತನಾದ ಗುರು. ಆ ಗುರುವು ಪೆಸರ್ಗೊಳ್ಳದೆ ಮುನ್ನವಾದ ಶಿಷ್ಯ. ಇದು ಅನ್ಯರಿಗೆ ಕಾಣಬಾರದು. ತನ್ನೊಳಗಿರ್ದ ಲಿಂಗೈಕ್ಯದ ಭಕ್ತಿಯನು, ಪಸಾರಕಿಕ್ಕುವ ಅಜ್ಞಾನಿಗಳೆತ್ತ ಬಲ್ಲರು ಕಲಿದೇವರದೇವಾ.
--------------
ಮಡಿವಾಳ ಮಾಚಿದೇವ
ಉಕ್ಕುವ ಬೆಣ್ಣೆಯ ಒಲೆಯ ಮೇಲಿರಿಸಿ, ಅಳಲುತ್ತ ಬಳಲುತ್ತಲಿರ್ದಾರಯ್ಯ. ಅಲ್ಲದ ಚೇಳಿನೊಳು ಚಲ್ಲವಾಡಿ, ಎಲ್ಲರೂ ನಾಣುಗೆಟ್ಟರಲ್ಲಯ್ಯಾ. ಎಲ್ಲರ ಅರಿವು, ಇಲ್ಲಿಯೆ ಉಳಿಯಿತ್ತು. ಇದ ಬಲ್ಲವರಾರೊ, ಮಾರೇಶ್ವರಾ ?
--------------
ಮಾರೇಶ್ವರೊಡೆಯರು
ಉದಯ, ಮಧ್ಯಾಹ್ನ, ಅಸ್ತಮಯ, ಕತ್ತಲೆ ಬೆಳಗು, ದಿನ ವಾರ ಲಗ್ನತಿಥಿ ಮಾಸ ಸಂವತ್ಸರ ಹೋಗುತ್ತ ಬರುತ್ತಲಿವೆ. ಇವ ನೋಡಿದವರೆಲ್ಲ ಇದರೊಳಗೆ ಹೋಗುತ್ತ ಬರುತ್ತ ಇದ್ದಾರೆ. ಜಗಕ್ಕೆ ಇವೀಗ ಇಷ್ಟವಾಗಿಪ್ಪವು. ಎನ್ನ ದೇವಂಗೆ ಇವೊಂದೂ ಅಲ್ಲ. ದಿನಕಾಲ ಯುಗಜುಗ ಪ್ರಳಯಕ್ಕೆ ಹೊರಗಾದ ಆ ದೇವನ, ಅಂಗವಿಸಿ ಮುಟ್ಟಿ ಹಿಡಿದ ಕಾರಣ, ಎಮ್ಮ ಶರಣರು ಪ್ರಳಯಕ್ಕೆ ಹೊರಗಾದರು. ಇದನರಿದು, ಅಂತಪ್ಪ ಶರಣರ ಪಾದವ ನಂಬಿ, ಕೆಟ್ಟು ಬಟ್ಟಬಯಲಾದೆನಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣ.
--------------
ಹಡಪದ ಅಪ್ಪಣ್ಣ
ಉರೆ ತಾಗಿದ ಮೃಗವು ಒಂದಡಿಯನಿಡುವುದೆ ತನುವ ತಾಗಿದ ಸುಖವು ಅಗಲುವುದೆ ಕೂಡಲಸಂಗನ ಶರಣರ ಅನುಭಾವವರಿದವರ ಮರಳಿ ಮತ್ರ್ಯರೆಂದೆನಬಹುದೆ
--------------
ಬಸವಣ್ಣ

ಇನ್ನಷ್ಟು ...
-->