ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಎನ್ನ ನಾಲಗೆಗೆ ಬಪ್ಪರುಚಿ ನಿಮಗರ್ಪಿತ. ಎನ್ನ ನಾಸಿಕಕ್ಕೆ ಬಪ್ಪ ಪರಿಮಳ ನಿಮಗರ್ಪಿತ. ಎನ್ನ ಕಾಯಕ್ಕೆ ಬಪ್ಪ ಸುಖ ನಿಮಗರ್ಪಿತ. ಚೆನ್ನಮಲ್ಲಿಕಾರ್ಜುನಯ್ಯಾ, ನಿಮಗರ್ಪಿಸದ ಮುನ್ನ ಮುಟ್ಟಲಮ್ಮೆನಯ್ಯಾ.
--------------
ಅಕ್ಕಮಹಾದೇವಿ
ಎಂಟು ಹದಿನಾರೆಂಬ ಬಲೆಯನೊಡ್ಡಿ ಚೆನ್ನಮೃಗವೆಂಬ ಕಂಗಳ ಬೇಟೆ ಎಸುವೆನಯ್ಯಾ. ವಿಂಧ್ಯವನದೊಳಗೆ ಓ ಓ ಎಂದೆನುತಲಯಿದರೆ ಎಸುವೆನಯ್ಯಾ. ಎಯ್ದೆ ಬಾಣಕ್ಕೆ ಎಯ್ದೆ ಗುರಿಯಾಗದ ಮುನ್ನ ಎಯ್ದುವೆ ದಶಮುಖ ರಾಮತಂದೆ ಎಸುವೆನಯ್ಯಾ
--------------
ಸಿದ್ಧರಾಮೇಶ್ವರ
ಎದೆ ಬಿರಿವನ್ನಕ್ಕ, ಮನ ದಣಿವನ್ನಕ್ಕ, ನಾಲಗೆ ನಲಿನಲಿದೋಲಾಡುವನ್ನಕ್ಕ ನಿಮ್ಮ ನಾಮಾಮೃತವ ತಂದೆರೆಸು ಕಂಡಯ್ಯಾ, ಎನಗೆನ್ನ ತಂದೆ. ಬಿರಿಮುಗುಳಂದದಿ ಎನ್ನ ಹೃದಯ ನಿಮ್ಮ ಶ್ರೀಚರಣದ ಮೇಲೆ ಬಿದ್ದರಳುಗೆ, ಕೂಡಲಸಂಗಯ್ಯಾ. 486
--------------
ಬಸವಣ್ಣ
ಎನ್ನಂತರಂಗದ ಜ್ಯೋತಿಯೆ ಬಸವಣ್ಣನಯ್ಯಾ, ಎನ್ನ ಬಹಿರಂಗದ ಜ್ಯೋತಿಯೆ ಚೆನ್ನಬಸವಣ್ಣನಯ್ಯಾ, ಎನ್ನ ಸರ್ವಾಂಗದ ಜ್ಯೋತಿಯೆ ಪ್ರಭುದೇವನಯ್ಯಾ, ಇಂತಿವರ ಶ್ರೀಪಾದದಲ್ಲಿ ಉರಿ ಕರ್ಪುರ ಸಂಯೋಗದಂತೆ ಬೆರೆಸಿದೆನಯ್ಯಾ ಉಳಿಯುಮೇಶ್ವರಾ.
--------------
ಉಳಿಯುಮೇಶ್ವರ ಚಿಕ್ಕಣ್ಣ
ಎಂಟಕ್ಕೆ ಗಂಟಾಗಿ ನಂಟನ ತಾಯಿ ನಮ್ಮೂರಿಗೆ ಹೋದಳು. ಅರಸುಗಳೈವರು ಅರಸಿಯ ಮುದ್ದಾಡ ಹೋದರು. ರೂಪುಳ್ಳ ಹೆಂಡತಿ ಕಂಡಡೆ ಏನೆಂದೊ: ನಮ್ಮ ಕಪಿಲಸಿದ್ಧಮಲ್ಲಿನಾಥ ಉಂಬಡೆ ಓಗರವಿಲ್ಲವೆಂದನು.
--------------
ಸಿದ್ಧರಾಮೇಶ್ವರ
ಎತ್ತಿಕೊಳ್ಳಲೇಕೆ, ಮತ್ತಿಳುಹಲೇಕಯ್ಯಾ ಧರಧುರ ಭಕ್ತಿಯ ಮಾಡಲೇಕಯ್ಯಾ ನಿಂದಿಸಲೇಕೆ ಸ್ತುತಿುಸಲೇಕೆ ಹೋಗಬಿಟ್ಟು ಜಂಗಮವ ಹಿಂದೆಯಾಡುವನ ಬಾಯಲ್ಲಿ ಮೆಟ್ಟಿ ಹುಡಿಹೊಯ್ಯದೆ ಮಾಬನೆ ಕೂಡಲಸಂಗಮದೇವ 420
--------------
ಬಸವಣ್ಣ
ಎನ್ನ ಆಧಾರಚಕ್ರವೆ ಶ್ರೀಶೈಲಕ್ಷೇತ್ರ : ಅಲ್ಲಿರ್ಪ ಆಚಾರಲಿಂಗವೇ ಶ್ರೀಮಲ್ಲಿಕಾರ್ಜುನದೇವರು. ಎನ್ನ ಸ್ವಾದ್ಥಿಷ್ಠಾನಚಕ್ರವೆ ಸೇತುಬಂಧಕ್ಷೇತ್ರ; ಅಲ್ಲಿರ್ಪ ಗುರುಲಿಂಗವೆ ರಾಮೇಶ್ವರನು. ಎನ್ನ ಮಣಿಪೂರಕ ಚಕ್ರವೇ ಪಂಪಾಕ್ಪೇತ್ರ; ಅಲ್ಲಿರ್ಪ ಶಿವಲಿಂಗವೆ ವಿರೂಪಾಕ್ಷೇಶ್ವರನು. ಎನ್ನ ಅನಾಹತಚಕ್ರವೇ ಹಿಮವತ್ಕೇದಾರಕ್ಷೇತ್ರ; ಅಲ್ಲಿರ್ಪ ಜಂಗಮಲಿಂಗವೆ ಹಿಮಗಿರೀಶ್ವರನು. ಎನ್ನ ವಿಶುದ್ಧಿಚಕ್ರವೆ ಅವಿಮುಕ್ತಿಕ್ಷೇತ್ರ: ಅಲ್ಲಿರ್ಪ ಪ್ರಸಾದಲಿಂಗವೆ ವಿಶ್ವೇಶ್ವರನು. ಎನ್ನ ಆಜಾÕಚಕ್ರವೆ ಸಂಗಮಕ್ಷೇತ್ರ: ಅಲ್ಲಿರ್ಪ ಮಹಾಲಿಂಗವೆ ಸಂಗಮೇಶ್ವರನು. ಇಂತಿವು ಮೊದಲಾದ ಸಕಲಕ್ಷೇತ್ರಂಗಳನೊಳಕೊಂಡ ಎನ್ನ ಬ್ರಹ್ಮಚಕ್ರವೆ ಮಹಾಕೈಲಾಸ. ಅಲ್ಲಿರ್ಪ ನಿಷ್ಕಲಲಿಂಗವೆ ಅನಾದಿ ಪರಶಿವನು ನೀನೇ ಅಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಎನಗೆ ಇಲ್ಲಿ ಏನು ಬಸವ ಬಸವಾ ? ಎನಗೆ ಅದರ ಕುರುಹೇನು ಬಸವಾ ? ಎನಗೆ ಬಸವ ನಡೆದ ಭಕ್ತಿಸ್ಥಲದಲ್ಲಿ ನಿಂದು, ಭಕ್ತಿಸ್ಥಲ ಬಸವನಲ್ಲಿ ಕುರುಹಳಿದು, ನಾನು ಬಸವನ ಶ್ರೀಪಾದದಲ್ಲಿ ಉರಿಯುಂಡ ಕರ್ಪೂರದಂತಡಗಿದ ಬಳಿಕ ಸಂಗಯ್ಯಾ ?
--------------
ನೀಲಮ್ಮ
ಎನ್ನಾತ್ಮನದೊಂದು ಅರಸುತನದ ಅನ್ಯಾಯವ ಕೇಳಯ್ಯ ಗುರುವೆ. ಪಂಚಭಕ್ಷ ್ಯ ಪರಮಾಮೃತವ ಸದಾ ದಣಿಯಲುಂಡು ಒಂದು ದಿನ ಸವಿಯೂಟ ತಪ್ಪಿದರೆ ಹಲವ ಹಂಬಲಿಸಿ ಹಲುಗಿರಿದು, ಎನ್ನ ಕೊಂದು ಕೂಗುತ್ತಿದೆ ನೋಡಾ. ಶ್ವಪಚನನುತ್ತಮನ ಕೂಡೆ ಸಂಕಲೆಯನಿಕ್ಕುವರೆ ಅಯ್ಯ?. ಕಲಸಿ ಕಲಸಿ ಕೈಬೆರಲು ಮೊಂಡಾದವು. ಅಗಿದಗಿದು ಹಲ್ಲುಚಪ್ಪಟನಾದವು. ಉಂಡುಂಡು ಬಾಯಿ ಜಡ್ಡಾಯಿತು. ಹೇತು ಹೇತು ಮುಕುಳಿ ಮುರುಟುಗಟ್ಟಿತ್ತು. ಸ್ತ್ರೀಯರ ಕೂಡಿಕೂಡಿ ಶಿಶ್ನ ಸವೆದು ಹೋಯಿತ್ತು. ತನುಹಳದಾಗಿ ಅಲ್ಲಲ್ಲಿಗೆ ಕಣ್ಣು ಪಟ್ಟಿತ್ತು. ಮನ ಹೊಸದಾಗಿ ಹನ್ನೆರಡುವರ್ಷದ ರಾಜಕುಮಾರನಾದೆನು. ಇನ್ನೇವೆನಿನ್ನೇವೆನಯ್ಯ ಎನ್ನ ಕೇಡಿಂಗೆ ಕಡೆಯಿಲ್ಲ. ಕಾಯವಿಕಾರವೆಂಬ ಕತ್ತಲೆ ಕವಿಯಿತು. ಮನೋವಿಕಾರವೆಂಬ ಮಾಯೆ ಸೆರೆವಿಡಿದಳು. ಇಂದ್ರಿಯವಿಕಾರವೆಂಬ ಹುಚ್ಚುನಾಯಿಗಳು ಕಚ್ಚಿ ಕಚ್ಚಿ ಒದರುತ್ತಿವೆ. ಕಾಮ ವಿಕಾರವೆಂಬ ಕಾಳರಕ್ಕಸಿ ಅಗಿದಗಿದು ನುಂಗುತಿಹಳು. ಕಾಯಾಲಾಗದೆ ದೇವ?. ಸಾವನ್ನಬರ ಸರಸವುಂಟೆ ಲಿಂಗಯ್ಯ?. ಅನ್ಯಸಮಯದ ಗುಮ್ಮಟನ ಕೈವಿಡಿದೆತ್ತಿಕೊಂಡೆ. ನಿನ್ನ ಸಮಯದ ಶಿಶು ಬಾವಿಯಲ್ಲಿ ಬೀಳ್ವುದ ನೋಡುತ್ತಿಪ್ಪರೆ ಕರುಣಿ?. ಮುಕ್ತಿಗಿದೇ ಪಯಣವೋ ತಂದೆ?. ನೀನಿಕ್ಕಿದ ಮಾಯಾಸೂತ್ರಮಂ ಹರಿದು, ದಶೇಂದ್ರಿಯಂಗಳ ಗುಣವ ನಿವೃತ್ತಿಯಂ ಮಾಡಿ, ಅಂಗಭೋಗ-ಆತ್ಮಭೋಗಂಗಳನಡಗಿಸಿ, ಲಿಂಗದೊಳು ಮನವ ನೆಲೆಗೊಳಿಸಿ, ಎನ್ನ ಪಟದೊಳಗಣ ಚಿತ್ರದಂತೆ ಮಾಡಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಎನ್ನ ಹೊತ್ತಿಪ್ಪವಳ ನೆತ್ತಿಯ ಕಣ್ಣಿನಲ್ಲಿಪ್ಪ ಂಗವ ನಾನೆಚ್ಚತ್ತು ನೋಡುವ ತೆರನೆಂತಯ್ಯಾ. ನೋಡ ಹೋದಡೆ ನೆತ್ತಿ ಒಡೆದು ಕಣ್ಣಾಯಿತ್ತು. ನೋಡರ್ದಡೆ ಎನಗವಳು ತೋರಳು. ಎನಗೆ ಕಾಬ ತೆರನ ತೋರಾ, ಕಪಿಲಸಿದ್ಧಮಲ್ಲಿಕಾರ್ಜುನ ಪ್ರಭುವೆ.
--------------
ಸಿದ್ಧರಾಮೇಶ್ವರ
ಎಂಬತ್ತುನಾಲ್ಕು ಲಕ್ಷ ಜೀವಜಂತುವಿನೊಳಗಿಪ್ಪ ಆತ್ಮನು ಏಕಾತ್ಮನೊ, ಹಲವಾತ್ಮನೊ, ಬಲ್ಲಡೆ ನೀವು ಹೇಳಿರೆ? ಅನಂತಕೋಟಿಬ್ರಹ್ಮಾಂಡದೊಳಗಿಪ್ಪ ಬ್ರಹ್ಮವು ಏಕಬ್ರಹ್ಮವೊ, ಅನಂತಬ್ರಹ್ಮವೊ, ಬಲ್ಲಡೆ ನೀವು ಹೇಳಿರೆ? ಬ್ರಹ್ಮಾಂಡವೊಂದು ತತ್ತಿ ಒಡೆದು, ಬಹಿರಾವರಣವಾದಲ್ಲಿ ಆ ಬ್ರಹ್ಮವು ಹೋಗಿ ಮತ್ತೊಂದು ಬ್ರಹ್ಮಾಂಡದಲ್ಲಿ ಹೊಕ್ಕುದ ಕಂಡಡೆ, ಕಂಡು ಬಲ್ಲವರು ನೀವು ಹೇಳಿರೆ. ಗಂಧರ್ವಪಟ್ಟಣದಲ್ಲಿ ಹುಟ್ಟುವ ಬಹು ಬಣ್ಣವ ಬಲ್ಲರೆ ಬಲ್ಲ. ಆಕಾಶಕ್ಕಡರಿದ ವಿಹಂಗನ ಮಾರ್ಗವ ಬಲ್ಲರೆ ಬಲ್ಲ. ಸೌರಾಷ್ಟ್ರ ಸೋಮೇಶ್ವರಲಿಂಗದ ನಿಜವ ಬಲ್ಲರೆ ಬಲ್ಲ.
--------------
ಆದಯ್ಯ
ಎನಗೆ ನೀನಿಂಬುಕೊಡುವಲ್ಲಿ, ಸಕಲವ ಪ್ರಮಾಣಿಸುವುದ ಬಿಟ್ಟು ನಿಃಕಲವಸ್ತುವಾಗು. ಶಕ್ತಿಸಮೇತವ ಬಿಟ್ಟು ನಿಶ್ಶಕ್ತಿನಿರ್ಲೇಪವಾಗು. ಚಿತ್ತವ ನೋಡಿಹೆನೆಂಬ ಹೆಚ್ಚು ಕುಂದ ಬಿಟ್ಟು ನಿಶ್ಚಿಂತನಾಗು. ಅಂದು ಮಿಕ್ಕಾದ ಭಕ್ತರ ಗುಣವ ನೋಡಿಹೆನೆಂದು ತೊಟ್ಟ ಠಕ್ಕು ಠವಳವ ಬಿಡು. ಸರ್ವ ರಾಗ ವಿರಾಗನಾಗಿ ಸರ್ವಗುಣಸಂಪನ್ನನಾಗಿ, ಜ್ಞಾನಸಿಂಧುಸಂಪೂರ್ಣನಾಗಿ ನಿನ್ನರಿವಿನ ಗುಡಿಯ ಬಾಗಿಲ ತೆರೆದೊಮ್ಮೆ ತೋರಾ. ಎನ್ನಡಿಗೆ ನಿನ್ನ ಗುಡಿಯ ಸಂಬಂಧವ ನೋಡಿಹೆ, ಇದಕ್ಕೆ ಗನ್ನಬೇಡ, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ.
--------------
ಮೋಳಿಗೆ ಮಹಾದೇವಿ
ಎರದೆಲೆಯಂತೆ ಒಳಗೊಂದು ಹೊರಗೊಂದಾದಡೆ ಮೆಚ್ಚುವನೆ ಬಾರದ ಭವಂಗಳ ಬರಿಸುವನಲ್ಲದೆ ಮೆಚ್ಚುವನೆ ಅಘೋರ ನರಕವನುಣಿಸುವನಲ್ಲದೆ ಮೆಚ್ಚುವನೆ ! ಉಡುವಿನ ನಾಲಗೆಯಂತೆ ಎರಡಾದಡೆ ಕೂಡಲಸಂಗಯ್ಯ ಮೆಚ್ಚುವನೆ 102
--------------
ಬಸವಣ್ಣ
ಎಕ್ಕೆವಿಂಡುಗಳೆಂಬವರು ಮುಕ್ಕಣ್ಣಾ, ನಿಮ್ಮ ಗಣಂಗಳು. ಬತ್ತಿದ ಕೆರೆ ಬಾಯಬಿಟ್ಟಂತೆ ಮೊರೆಯಿಟ್ಟು ಬರಲು, ಹೊತ್ತಿದ ಅಂಗಾಲ ಕಿಚ್ಚು ನ್ಕ್ತೆಯ ಮುಟ್ಟಿದಡೆ, ಚಕ್ಕನೆ ಕಪಿಲಸಿದ್ಧಮಲ್ಲಿನಾಥ ನೊಸಲಕಣ್ಣ ತೆಗೆದನು.
--------------
ಸಿದ್ಧರಾಮೇಶ್ವರ
ಎಳ್ಳಿಲ್ಲದ ಗಾಣವನಾಡಿದ ಎತ್ತಿನಂತಾುತ್ತೆನ್ನ ಭಕ್ತಿ. ಉಪ್ಪ ಅಪ್ಪುವಿನಲ್ಲಿ ಅದ್ದಿ ಮೆಲಿದಂತಾುತ್ತೆನ್ನ ಭಕ್ತಿ. ಕೂಡಲಸಂಗಮದೇವಾ, ಆನು ಮಾಡದೆನೆಂಬ ಕಿಚ್ಚು ಸಾಲದೆ 384
--------------
ಬಸವಣ್ಣ

ಇನ್ನಷ್ಟು ...
-->