ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಐದುಮುಖದಂಗನೆಗೆ ತನು ಮೂರು, ತದಂಗವೆರಡು, ಜೀವವೊಂದು, ಗುಣ ಇಪ್ಪತ್ತೈದು. [ವಂಶದ]ವರು ಇಪ್ಪತ್ತೈದುಮಂದಿಯ ಕೈವಿಡಿದು ಅಷ್ಟದಿಕ್ಕು ನವಖಂಡ ಜಂಬೂದ್ವೀಪವ ಮೇಲುಹೊದಿಕೆಯ ಮಾಡಿ, ಹೊದ್ದುಕೊಂಡು, ದೃಷ್ಟಜಗಕ್ಕೆ ಬಂದು ಕಷ್ಟಬಡುತಿದ್ದ ಭೇದವ ನೀನೆ ಬಲ್ಲೆ, ಉಳಿದರಿಗಸಾಧ್ಯ, ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಐದು ತತ್ವ, ಐದು ಭೂತ, ಐದು ಅಂಗ, ಐದು ಲಿಂಗ, ಐದು ಸುಗಂಧ, ಐದರಿಂದತ್ತತ್ತ ಮಹಾಲಿಂಗದ ಬೆಳಗು. ಆ ಬೆಳಗಿನೊಳು ಕೂಡಿ ತಾನು ತಾನಾಗಿಪ್ಪ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಐವತ್ತೆರಡೆಸಳಿನ ಸ್ಥಾವರಗದ್ದುಗೆಯ ಮೇಲೆ ಪರಂಜ್ಯೋತಿಲಿಂಗವ ಕಂಡೆನಯ್ಯ. ಆ ಲಿಂಗದೊಳಗೆ ಅನಂತಕೋಟಿ ನೋಮಸೂರ್ಯರ ಬೆಳಗು ನೋಡಾ. ಆ ಬೆಳಗ ನೋಡಹೋಗದ ಮುನ್ನ, ಅದು ಎನ್ನ ನುಂಗಿ, ಬೆಳಗು ತನ್ಮಯವಾಯಿತ್ತು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಐಗ್ರಾಮ ಚೌಗ್ರಾಮ ಅಯ್ಯ ನಿನ್ನಯ ಸೀಮೆ. ಅತ್ಯೋನ್ನತದ ಫಲಕ್ಕೊಸರುತಿಹದು ಒಸರುತಿಹ ಲಿಂಗವನು ವಶಕೆ ತಂದು ಶಿಷ್ಯಂಗೆ ಹೆಸರಿಟ್ಟು ಕೊಟ್ಟಾತ ಗುರು ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಐದು ಮನೆಯೊಳಗೆ ಏಳುಮಂದಿ ಹೆಂಡರ ಕಂಡೆನಯ್ಯ. ಆ ಏಳುಮಂದಿ ಹೆಂಡರು ಎಂಟುಮಂದಿ ನೆಂಟರ ಸಂಗವ ಮಾಡುತಿಪ್ಪರು ನೋಡಾ. ಕಂಟಕಂಗಳ ಗೆಲಿದ ಪುರುಷನು, ಎಂಟುಮಂದಿ ನೆಂಟರ ಕೊಂದು, ಏಳುಮಂದಿ ಹೆಂಡರ ಹಿಡಿದು, ಐದು ಮನೆಯ ತೊರೆದ ಸೋಜಿಗವ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಐದು ಮುಖದ ಅಂಗನೆಗೆ ಹದಿನೈದು ದೇಹ ನೋಡಾ! ಆ ಅಂಗನೆಯ ಮನೆಯೊಳಗಿರ್ದು, ತಾವಾರೆಂಬುದನರಿಯದೆ; ಬಾಯ್ಗೆ ಬಂದಂತೆ ನುಡಿವರು, ಗುಹೇಶ್ವರಾ ನಿಮ್ಮನರಿಯದ ಜಡರುಗಳು.
--------------
ಅಲ್ಲಮಪ್ರಭುದೇವರು
ಐನಾಯೆಂಬ ಅಕ್ಷರದ ಭೇದವನರಿತಡೆ ಅಪ್ಪುದರಿದೊಂದೂ ಇಲ್ಲ. ಸೀಮೆಯ ಮೀರಿದ ಸಂಬಂಧ ಸಂಬಂಧವ ಮೀರಿದ ಸೀಮೆ, ಅನುಮತದ ಮೀರಿದ ಆದ್ಥಿಕ್ಯ ಅಕ್ಷರವೆರಡರ ಅದ್ಥಿಕಾರ ಕಪಿಲಸಿದ್ಧಮಲ್ಲಿಕಾರ್ಜುನನ ಸಂಯೋಗ.
--------------
ಸಿದ್ಧರಾಮೇಶ್ವರ
ಐದು ಕಂಬದ ಗುಡಿಯ ಶಿಖರದ ಮೇಲೆ ಪರಂಜ್ಯೋತಿಯೆಂಬ ಲಿಂಗವು ತೊಳಗಿ ಬೆಳಗುತ್ತಿತ್ತು ನೋಡಾ. ಆ ಲಿಂಗದ ಬೆಳಗಿನೊಳಗೆ ತನ್ನ ಮರೆದು ನಿಃಪ್ರಿಯನಾದ ಶರಣನ ಎನಗೊಮ್ಮೆ ತೋರಿಸಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಐದು ಸರ್ಪಂಗಳಿಗೆ ತನು ಒಂದು, ದಂತವೆರಡು. ಸರ್ಪ ಕಡಿದು ಸತ್ತ ಹೆಣನು ಸುಳಿದಾಡುವುದ ಕಂಡೆ. ಈ ನಿತ್ಯವನರಿಯದಠಾವಿನಲ್ಲಿ, ಭಕ್ತಿಯೆಲ್ಲಿಯದೊ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ಐದಕ್ಷರ ಆದಿಯಾದ, ಇಪ್ಪತ್ತೈದಕ್ಷರ ಸಂಯೋಗದ ಮೂವತ್ತಾರಕ್ಷರವಾನಂದದ ಆನಂದ ಸಾನಂದ ಶೂನ್ಯ ತನ್ನಯ ಅಂಗ ಭಾನುವಿನ ಪ್ರಭೆಯಪ್ಪ ಹೇಮ ಕಲಶಕ್ಕೆಲಸಂದಿದ ಮೇಲೆ ಆಯಾಧಾರ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಐದು ಮೇರುವೆಯ ಮೇಲೆ ಐದಿಪ್ಪ ಸತಿಯಳ ಕಂಡೆನಯ್ಯ. ಆ ಸತಿಯಳ ಸಂಗದಿಂದ ನಾನು ನೀನೆಂಬುದ ಮರೆದು ತಾನುತಾನಾದುದ ಕಂಡೆ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಐದು ವರ್ಣದ ಪಶುವಿನ ಬಸುರಿನಲ್ಲಿ, ಮೂರು ವರ್ಣದ ಕರು ಹುಟ್ಟಿ, ಒಂದೇ ವರ್ಣದ ಹಾಲ ಸೇವಿಸಿ, ಹಲವು ಹೊಲದಲ್ಲಿ ತಿರುಗಾಡುತ್ತಿದ್ದಿತ್ತು. ನಿಃಕಳಂಕ ಮಲ್ಲಿಕಾರ್ಜುನಲಿಂಗದ ಕುಳದ ಹೊಲಬುಗಾಣದೆ.
--------------
ಮೋಳಿಗೆ ಮಾರಯ್ಯ
ಐಗೈಮನೆ ನಾಗೈಕಂಬ ಮೂಗೈತೊಲೆ ಭೇದ ಕರವಳವ ಹಾಕಿ ನೋಡಿ ಅರಿದಡೆ ಆಯ ಬಂದಿತ್ತು. ಮಸದಡೆ ಆಯ ಹೋಯಿತ್ತು. ಮೂಗೆಯ್ಯ ಕರದಲ್ಲಿ ಇದರರಿಕೆಯಾಗಿ ಹೇಳಾ ಧಾರೇಶ್ವರ ನಿನ್ನಾಲಯಕ್ಕೆ.
--------------
ಕಾಮಾಟದ ಭೀಮಣ್ಣ
ಐದು ರತ್ನದ ಮೇಲೆ ಒಂದು ಮಾಣಿಕ್ಯವ ಕಂಡೆನಯ್ಯ. ಆ ಮಾಣಿಕ್ಯವ ಒಂದು ಕೋಗಿಲೆ ನುಂಗಿ ಕೂಗುತಿದೆ ನೋಡಾ. ಆ ಕೋಗಿಲೆಯ ಒಬ್ಬ ಬೇಂಟೆಕಾರ ಕಂಡು ತಟ್ಟನೆ ಎಚ್ಚಿ ನಿರ್ವಯಲಾದ ವಿಚಿತ್ರವ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಐದು ತತ್ವದ ಮೇಲೆ ಒಬ್ಬ ಸತಿಯಳು ಇಪ್ಪಳು. ಆ ಸತಿಯಳು ಸಾವಿರ ಎಸಳ ಮಂಟಪವ ಪೊಕ್ಕು ಪರಕ್ಕೆ ಪರವಾದಳು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ

ಇನ್ನಷ್ಟು ...
-->