ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಗುರುಲಿಂಗಜಂಗಮವೆಂದು ನುಡಿವ ಬಹುವಾಕ್ಯರು ನೀವು ಕೇಳಿರೊ. ಗುರುವಾವುದು? ಲಿಂಗವಾವುದು? ಜಂಗಮವಾವುದು? ಲಿಂಗವೆಂದವರ ಕರಸ್ಥಲದಲ್ಲಿ ಜಂಗಮವೊಂದೆಂದರಿಯದಿರದೆ ಚರಿಸಿದ ಗುರುಸ್ಥಲದ ಹೊಲಬನರಿಯದೆ ಗುರುಭಕ್ತರೆನ್ನಿಸುವ ಗುರುದ್ರೋಹಿಗಳ ಮಾತ ಕೇಳಲಾಗದಯ್ಯ ಗೊಹೇಶ್ವರಪ್ರಿಯ ನಿರಾಳಲಿಂಗಾ.
--------------
ಗುಹೇಶ್ವರಯ್ಯ
ಗುರು ತನ್ನ ವಿನೋದಕ್ಕೆ ಗುರುವಾದ ಗುರು ತನ್ನ ವಿನೋದಕ್ಕೆ ಲಿಂಗವಾದ ಗುರು ತನ್ನ ವಿನೋದಕ್ಕೆ ಜಂಗಮವಾದ ಗುರು ತನ್ನ ವಿನೋದಕ್ಕೆ ಪಾದೋದಕವಾದ ಗುರು ತನ್ನ ವಿನೋದಕ್ಕೆ ಪ್ರಸಾದವಾದ ಗುರು ತನ್ನ ವಿನೋದಕ್ಕೆ ವಿಭೂತಿಯಾದ ಗುರು ತನ್ನ ವಿನೋದಕ್ಕೆ ರುದ್ರಾಕ್ಷಿಯಾದ ಗುರು ತನ್ನ ವಿನೋದಕ್ಕೆ ಮಹಾಮಂತ್ರವಾದ. ಇಂತೀ ಭೇದವನರಿಯದೆ, ಗುರು ಲಿಂಗ ಜಂಗಮ ಪಾದತೀರ್ಥ ಪ್ರಸಾದ ವಿಭೂತಿ ರುದ್ರಾಕ್ಷಿ ಓಂ ನಮಃ ಶಿವಾಯಯೆಂಬ ಮಂತ್ರವ ಬೇರಿಟ್ಟು ಅರಿಯಬಾರದು. ಅದಲ್ಲದೆ ಒಂದರಲ್ಲಿಯೂ ವಿಶ್ವಾಸ ಬೇರಾದಡೆ ಅಂಗೈಯಲ್ಲಿರ್ದ ಲಿಂಗವು ಜಾರಿತ್ತು. ಮಾಡಿದ ಪೂಜೆಗೆ ಕಿಂಚಿತ್ತು ಫಲಪದವಿಯ ಕೊಟ್ಟು ಭವಹೇತುಗಳ ಮಾಡುವನಯ್ಯಾ. ಇಷ್ಟಲಿಂಗದಲ್ಲಿ ನೈಷ್ಠೆ ನಟ್ಟು ಬಿಟ್ಟು ತ್ರಿವಿಧವ ಮರಳಿ ಹಿಡಿಯದೆ ವಿರಕ್ತನಾದನಯ್ಯಾ ಗುರು ಚೆನ್ನಮಲ್ಲಿಕಾರ್ಜುನಾ
--------------
ಅಕ್ಕಮಹಾದೇವಿ
ಗುರುವಿಂಗೆ ಜೀವಪ್ರಸಾದ, ಚರಕ್ಕೆ ಭಾವಪ್ರಸಾದ. ಜೀವಭಾವದಲ್ಲಿ ಕೂಡಲಿಕ್ಕಾಗಿ ಪರಮಪ್ರಸಾದ. ಆ ಪರಮಪ್ರಸಾದ ವ್ಯತಿರಿಕ್ತವಾಗಿ ಕಾಣಿಸಿಕೊಂಡಲ್ಲಿ ಪ್ರಸಾದವಾಯಿತ್ತು. ಆ ಲಿಂಗಪ್ರಸಾದ ತನಗಾಗಲಾಗಿ ಸ್ವಯಪ್ರಸಾದವಾಯಿತ್ತು. ಇಂತೀ ಪ್ರಸಾದಿಸ್ಥಲ ವಿವರಂಗಳ ತಿಳಿದು ಲಿಂಗಕ್ಕೆ ಕೊಟ್ಟು ಕೊಳಬೇಕು. ದಹನ ಚಂಡಿಕೇಶ್ವರಲಿಂಗಕ್ಕೆ ಅರಿದು ಅರ್ಪಿಸಬೇಕು.
--------------
ಪ್ರಸಾದಿ ಲೆಂಕಬಂಕಣ್ಣ
ಗುರುಶಿಷ್ಯರಿಬ್ಬರೂ ಸಹಪಂಕ್ತಿಯಲ್ಲಿ ಲಿಂಗಾರ್ಚನೆ ಮಾಡಿಹೆವೆಂಬರಯ್ಯಾ! ಹೋ! ಹೋ! ಬಾಲಭಾಷೆಯ ಕೇಳಲಾಗದು. ಅಲ್ಲಲ್ಲ, ಮಾಡಬಹುದು. ಅದೇನು ಕಾರಣ? ಗುರುವಿನ ಅರಿವಿನ ಹರಿವನರಿಯಬಲ್ಲಡೆ ಮಾಡಬಹುದು, ಮಾಡಬಹುದು. ಶಿಷ್ಯ ಪ್ರಸಾದವೆಂಬುಭಯಸಂದೇಹ ಹಿಂದುಳಿಯಬಲ್ಲಡೆ, ಮಾಡಬಹುದು, ಮಾಡಬಹುದು. ಇದಲ್ಲದೆ ಲಿಂಗಪ್ರಸಾದದ ಮೇಲೆ ಗುರುಪ್ರಸಾದವನಿಕ್ಕಿಹೆನೆಂಬ ಶಿವದ್ರೋಹಿಗಳನೇನೆಂಬೆ! ಕೊಂಡೆಹೆನೆಂಬ ಗುರುದ್ರೋಹಿಗಳನೇನೆಂಬೆ! ಇದು ಕಾರಣ, ಮಹಾಘನಸೋಮೇಶ್ವರಾ, ನಿಮ್ಮಲ್ಲಿ, ಇವರಿಬ್ಬರ ಗುರು ಶಿಷ್ಯರೆಂದೆನಾದಡೆ, ಎನ್ನನದ್ದಿ ನೀನೆದ್ದು ಹೋಗಯ್ಯಾ?
--------------
ಅಜಗಣ್ಣ ತಂದೆ
ಗಗನದ ಮೇಲೊಂದು ಸರೋವರ; ಆ ಜಲದಲ್ಲಿ ಮುಖವ ತೊಳೆದು ಹೂವ ಕೊಯ್ವವರೆಲ್ಲರೂ; ದೇವರಿಗೆ ಮುಖಮಜ್ಜನವನೆರೆದು, ಪೂಜಿಸಿ ಹೊಡವಂಟಡೆ ಒಮ್ಮೆ ನಾಯಕನರಕ ತಪ್ಪದಲ್ಲಾ! ದೇವಲೋಕದ ಪ್ರಮಥರ ಲಜ್ಜೆಯನೇನ ಹೇಳುವೆ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಗಗನ ಮಂಡಳದ ಸೂಕ್ಷ್ಮನಾಳದಲ್ಲಿ `ಸೋಹಂ ಸೋಹಂ' ಎನುತ್ತಿರ್ದತ್ತದೊಂದು ಬಿಂದು, ಅಮೃತದ ವಾರಿಧಿಯ ದಣಿಯುಂಡ ತೃಪ್ತಿಯಿಂದ. ಗುಹೇಶ್ವರಾ ನಿಂದ(ನಿಮ್ಮ?)ಲ್ಲಿಯೆ ಎನಗೆ ನಿವಾಸವಾಯಿತ್ತು.
--------------
ಅಲ್ಲಮಪ್ರಭುದೇವರು
ಗೋವಿನ ಹೊಟ್ಟೆಯಲ್ಲಿ ಘೃತವಿದ್ದಡೇನೊ ಆ ಗೋವು ದಿನದಿನಕ್ಕೆ ಪುಷ್ಟವಾಗಬಲ್ಲುದೆ ? ಅದು ಕಾರಣ_ ಆ ಗೋವ ಪೋಷಿಸಿ ಕರೆದು ಕಾಸಿ, ಘೃತವ ಮಾಡಿ ಆ ಗೋವಿಂಗೆ ಕುಡಿಯಲೆರೆದಡೆ ಆ ಗೋವು ದಿನದಿನಕ್ಕೆ ಪುಷ್ಟವಹುದು. ಹಾಂಗೆ, ತನ್ನಲ್ಲಿ ವಸ್ತುವಿದ್ದಡೇನೊ ? ವಸ್ತುವ ಗುರುಮುಖದಿಂದ ಕರಸ್ಥಲಕ್ಕೆ ಪಡೆದು, ಸತ್ಕ್ರಿಯೆಯಿಂದ ಪ್ರಾಣಕ್ಕೆ ವೇಧಿಸಿದಲ್ಲದೆ ಪ್ರಾಣಲಿಂಗವಾಗದು. ಕೂಡಲಚೆನ್ನಸಂಗಯ್ಯನಲ್ಲಿ, ಇಷ್ಟಲಿಂಗವ ಸತ್ಕ್ರಿಯೆಯಿಂದ ಪ್ರಾಣಕ್ಕೆ ವೇದ್ಥಿಸಿ, ತಾನೆಂಬ ಅನಿಷ್ಟವ ತೊಲಗಿಸಿದಲ್ಲದೆ ಪ್ರಾಣಲಿಂಗಸಂಬಂಧವಾಗಬಾರದು
--------------
ಚನ್ನಬಸವಣ್ಣ
ಗಾಳಿ ಗಂಧವನಪ್ಪಿದಂತೆ, ಬಯಲು ಬಯಲನಪ್ಪಿದಂತೆ, ಬೆಳಗು ಬೆಳಗವಪ್ಪಿ ಮಹಾ ಬೆಳಗಾದಂತೆ, ಶರಣ ಲಿಂಗವನಪ್ಪಿ, ಮಹಾಲಿಂಗವೇ ತಾನು ತಾನಾಗಿ, ನಿರ್ವಯಲಾದನು ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಗುರುವಿಡಿದು ತನುವಾಯಿತ್ತು ; ಲಿಂಗವಿಡಿದು ಮನವಾಯಿತ್ತು ; ಜಂಗಮವಿಡಿದು ಧನವಾಯಿತ್ತು ; ಬಸವಣ್ಣವಿಡಿದು ಭಕ್ತಿಯಾಯಿತ್ತು ; ಕಪಿಲಸಿದ್ಧಮಲ್ಲಿನಾಥಯ್ಯ
--------------
ಸಿದ್ಧರಾಮೇಶ್ವರ
ಗುರುಲಿಂಗಜಂಗಮವೆಂಬ ತ್ರಿವಿಧಭೇದವನು ಏಕಾಗ್ರದಲ್ಲಿ ನೋಡಿ, ಪರಕೆಪರವನಾಚರಿಸಿ, ನಿರ್ಮುಕ್ತನಾದೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಗುರು ತೋರಿದನು ಲಿಂಗ- ಜಂಗಮವ. ಪಾದೋದಕ-ಪ್ರಸಾದವ ಕೊಳಹೇಳಿದನಲ್ಲದೆ ಇವ ತೊರೆಯ ಹೇಳಿದನೆ? ಅಹಮ್ಮೆಂದು ಪ್ರಸಾದದ್ರೋಹಿಗಳಾಗಿ, ನಾನೆ ಎಂದು ಲಿಂಗದ್ರೋಹಿಗಳಾಗಿ, ವಿಭೂತಿ-ರುದ್ರಾಕ್ಷಿ ಸಾಕ್ಷಾತ್ ಶಿವನೆಂದರಿಯದೆ, ಅವರಾಚರಣೆಯ ನೋಡಿ ನಿಂದಿಸಿ ಜಂಗಮದ್ರೋಹಿಗಳಾಗ ಹೇಳಿದನೆ? ಜಂಗಮದಲ್ಲಿ ಜಾತಿಯ, ಪ್ರಸಾದದಲ್ಲಿ ರುಚಿಯ, ಂಗದ್ಲ ಮೃದುವನರಸುವ, ಸಮಯದ್ಲ ವಿಶ್ವಾಸವಿಲ್ಲದ ಮಿಟ್ಟಿಯ ಭಂಡರ ತೋರರಯ್ಯಾ ಎನಗೆ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಗಿಳಿಯ ಗರ್ಭದಲ್ಲಿ ಮಾರ್ಜಾಲ ಹುಟ್ಟಿ ಹಾವಿನ ತಲೆಯ ಮುಟ್ಟಲು ಹೆಡೆಯನೆಗೆದು ಮಾಣಿಕವ ಕಚ್ಚಿ ಎರಡುದಾರಿಯ ಕಟ್ಟಿ ಆಡಲು ಪುರದ ಜನರು ಭೀತಿಗೊಂಡು ನೋಡುವ ಸಮಯದಲ್ಲಿ ಮಾಣಿಕ ಹಾವ ನುಂಗಿ ಜನರ ಹೊಯ್ದು ಒಯ್ಯಲು, ಗಿಳಿ ಸತ್ತು ಗುರುನಿರಂಜನ ಚನ್ನಬಸವಲಿಂಗ ತಾನೆಯಾಯಿತು.
--------------
ದೇಶಿಕೇಂದ್ರ ಸಂಗನಬಸವಯ್ಯ
ಗುರುವೆಂಬ ಸೂತಕ, ಅರಿವಿನಿಂದ ಹರಿಯಬೇಕು. ಲಿಂಗವೆಂಬ ಸೂತಕ, ಅರಿವಿನಿಂದ ಹರಿಯಬೇಕು. ಅರಿವೆಂಬ ಸೂತಕಕ್ಕೆ ಮುಂದೆ ಒಂದ ಕಂಡೆಹೆನೆಂಬ ಒಡಲಸೂತಕ ಹರಿಯಬೇಕು. ಸೂತಕ ನಿಹಿತವಾದಲ್ಲಿ, ಕಾಮಧೂಮ ಧೂಳೇಶ್ವರ ಎಂದೂ ಏನೂ ಎನಲಿಲ್ಲ.
--------------
ಮಾದಾರ ಧೂಳಯ್ಯ
ಗುರುವೇ, ನೀನು ನನ್ನ ಲಿಂಗಕ್ಕೆ ಮಂಗಳಸೂತ್ರವಂ ಕಟ್ಟಿ ಕೊಟ್ಟಂದಿಂದ ಅನ್ಯವನರಿಯದೆ, ಆ ಲಿಂಗದಲ್ಲೇ ನಡೆವುತ್ತಿರ್ಪೆನು, ಆ ಲಿಂಗದಲ್ಲೇ ನುಡಿವುತ್ತಿರ್ಪೆನು, ಆ ಲಿಂಗದ ನಟನೆಯಂ ನೆನವುತ್ತಿರ್ಪೆನು, ಆ ಲಿಂಗದ ಮಹಿಮೆಯನೆ ಪಾಡುತ್ತಿರ್ಪೆನು, ಆ ಲಿಂಗವನೆ ಬೇಡುತ್ತಿರ್ಪೆನು, ಆ ಲಿಂಗವನೆ ಕಾಡುತ್ತಿರ್ಪೆನು, ಆ ಲಿಂಗವನೆ ಕೊಸರುತ್ತಿರ್ಪೆನು, ಆ ಲಿಂಗವನೆ ಅರಸುತ್ತಿರ್ಪೆನು, ಆ ಲಿಂಗವನೆ ಬೆರಸುತ್ತಿರ್ಪೆನು, ಆ ಲಿಂಗವಲ್ಲದೆ ಮತ್ತಾರನೂ ಕಾಣೆನು, ಮತ್ತಾರಮಾತನೂ ಕೇಳೆನು, ಮತ್ತಾರನೂ ಮುಟ್ಟೆನು, ಮತ್ತಾರನೂ ತಟ್ಟೆನು. ಲಿಂಗವು ನಾನು ಇಬ್ಬರೂ ಇಲ್ಲದ ಕಾರಣ ಎಲ್ಲವೂ ನನಗೆ ಏಕಾಂತಸ್ಥಾನವಾಯಿತ್ತು. ಎಲ್ಲೆಲ್ಲಿಯೂ ಯಾವಾಗಲೂ ಎಡೆವಿಡದೆ ಲಿಂಗದಲ್ಲೇ ರಮಿಸುತಿರ್ದೆನು. ಲಿಂಗದಲ್ಲೇ ಕಾಲವ ಕ್ರಮಿಸುತ್ತಿರ್ದೆನು ಲಿಂಗದಲ್ಲೇ ಎನ್ನಂಗಗುಣಂಗಳಂ ಕ್ಷಮಿಸುತ್ತಿರ್ದೆನು ಲಿಂಗದೊಳಗೆ ನನ್ನ, ನನ್ನೊಳು ಲಿಂಗದ ಚಲ್ಲಾಟವಲ್ಲದೆ, ಬೇರೊಂದು ವಸ್ತುವೆನಗೆ ತೋರಲಿಲ್ಲ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಗುರುವೆಂದರಿಯರು, ಹಿರಿಯರೆಂದರಿಯರು; ದೇವರೆಂದರಿಯರು, ಭಕ್ತರೆಂದರಿಯರು. ಲಿಂಗವೆಂದರಿಯರು, ಜಂಗಮವೆಂದರಿಯರು; ಬಂದ ಬರವನರಿಯರು ನಿಂದ ನಿಲವನರಿಯರು. ಶಿವಶರಣರ ನೋಯಿಸುವ ಪಾತಕರನೇನೆಂಬೆ ? ಗುಹೇಶ್ವರಾ, ನಿಮ್ಮ ಮನ ನೊಂದ ನೋವು ಬರಿದೆ ಹೋಗದು.
--------------
ಅಲ್ಲಮಪ್ರಭುದೇವರು

ಇನ್ನಷ್ಟು ...
-->