ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಘಟದ ಮಧ್ಯದಲ್ಲಿ ನಿಂದವನ, ಆತ್ಮನ ಚಿತ್ತದಲ್ಲಿ ಅರಿದವನ, ಅಲ್ಲ ಆಹುದೆಂದು ಗೆಲ್ಲ ಸೋಲಕ್ಕೆ ಹೋರದವನ, ಎಲ್ಲಾ ಜೀವಂಗಳಲ್ಲಿ ದಯವುಳ್ಳವನ, ಆತನೆಲ್ಲಿಯೂ ಸುಖಿಯೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಘನಗಂಬ್ಥೀರಲಿಂಗವೆನ್ನ ಕಾಯದನುವರಿಯಬಂದಬಳಿಕ ಎನ್ನ ಕಾಯದ ರತಿಯ ಕಡೆಗಿಡಲೆನಗೆ ಸೊಗಸದು ಕಾಣಮ್ಮ. ಎನ್ನ ಮನದನುವರಿಯಬಂದಬಳಿಕ ಮನದ ಮಮಕಾರ ಸರಿದರಿಯಲೆನಗೆ ಸೊಗಸದು ಕಾಣಮ್ಮ. ಎನ್ನ ಪ್ರಾಣದನುವರಿಯಬಂದಬಳಿಕ ಪ್ರಾಣದ ಮೋಹವಿತರವೆರಸಲೆನಗೆ ಸೊಗಸದು ಕಾಣಮ್ಮ. ಎನ್ನ ಭಾವದನುವರಿಯಬಂದಬಳಿಕ ಭಾವದ ಭ್ರಾಂತಿ ಪರಿದಾವರಿಸಲೆನಗೆ ಸೊಗಸದು ಕಾಣಮ್ಮ. ಎನ್ನ ಕಾಯ ಮನ ಪ್ರಾಣ ಭಾವವೆಂಬ ಚತುರ್ವಿಧಸಾರಾಯ ಸುಖಲೋಲನಾಗಿರ್ದಬಳಿಕ ಗುರುನಿರಂಜನ ಚನ್ನಬಸವಲಿಂಗವನಗಲಲೆಡೆಗಾಣದೆ ಪರವಶವಾಗಿರ್ದೆ ಕಾಣಮ್ಮ.
--------------
ದೇಶಿಕೇಂದ್ರ ಸಂಗನಬಸವಯ್ಯ
ಘಟದೊಳಗೆ ರಸವಿದ್ದು, ರಸದೊಳಗೆ ಘಟವಿದ್ದು, ಸಂಗಗುಣದಿಂದ ನೀರಾಗಿ. ಸಂಗ ಹಿಂಗಲಿಕೆ ಉಭಯದಂಗ ಒಂದಾದ ತೆರನಂತೆ, ಈ ಗುಣ ಲಿಂಗಾಂಗಿಯ ಸಂಗದ ವಿವರ, ನಿಃಕಳಂಕ ಮಲ್ಲಿಕಾರ್ಜುನಲಿಂಗವ ಕೂಡಿದ ಪರಮಸುಖಿಯಂಗ.
--------------
ಮೋಳಿಗೆ ಮಾರಯ್ಯ
ಘನಕ್ಕೆ ಮಹಾಘನಗಂಬ್ಥೀರ ಭಕ್ತ ಮಹೇಶ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ ಸನ್ಮಾನಿತರು, ನಿರವಯವಸ್ತುವಿನ ಪ್ರತಿಬಿಂಬರಾಗಿ, ತಮ್ಮ ತಾವರಿದು. ಚತುರ್ವಿಧ ವಿಸರ್ಜನೆಯನರಿದಾಚರಿಸುವುದು. ಆ ವಿಸರ್ಜನೆಗಳಾವಾವೆಂದಡೆ : ಮಲಮೂತ್ರವೆರಡನು ವಿಸರ್ಜನೆಯಿಂದ ಬಿಡುವಂಥದೆ ಸ್ಥೂಲಾಚಮನವೆನಿಸುವುದು. ಕ್ರೀಡಾವಿಲಾಸದಿಂದ ತಮ್ಮರ್ಧಾಂಗವೆಂದು ಭಕ್ತಗಣಸಾಕ್ಷಿಯಾಗಿ ವಿರಾಜಿಸುವಂಥ ಕ್ರಿಯಾಂಗನೆಯಲ್ಲಿ ವೀರ್ಯವ ಬಿಡುವಂಥಾದ್ದೊಂದು ಸ್ತೂಲಾಚಮನವೆನಿಸುವುದು. ಈ ಸ್ಥೂಲಾಚಮನಗಳ ಮಾಡಿದ ವೇಳೆಯಲ್ಲಿ ದಂತಗಳ್ಮೂವತ್ತೆರಡನು ತೀಡಿ, ಲಿಂಗಾಂಗ ಮಜ್ಜನಂಗೈದು, ಸರ್ವೋಪಚಾರಂಗಳಿಂ ಕ್ರಿಯಾಜಪ ಜ್ಞಾನಜಪ ಮಹಾಜ್ಞಾನಜಪ ಪರಿಪೂರ್ಣಾನುಭಾವಜಪಂಗಳೊಳ್ ಲಿಂಗಜಂಗಮ ಜಂಗಮಲಿಂಗಾರ್ಪಣವ ಮಾಡುವುದು. ಶಿವಶರಣಗಣಾರಾಧ್ಯರು ಲಿಂಗಾಬ್ಥಿಷೇಕ ಅರ್ಚನಾದಿಗಳ ಮಾಡಿ, ಅರ್ಪಣ ಸಂದ್ಥಿನಲ್ಲಿ ಜಲತೋರಿಕೆಯಾಗಿ ವಿಸರ್ಜಿಸಿ, ಉದಕವ ಬಳಸಿದ ವೇಳೆಯೊಳು, ಲಿಂಗಬಾಹ್ಯರಸಂಗಡ ಪ್ರಸಂಗಿಸಿದರೂ ದೀಕ್ಷಾಜಲದಿಂದ ಆರುವೇಳೆ ಲಿಂಗಸ್ಪರಿಶನದಿಂದ ಜಿಹ್ವೆಯ ಪ್ರಕ್ಷಾಲಿಸಿ, ಮುಖ ಮಜ್ಜನವಮಾಡಿ, ಲಿಂಗಾರ್ಚನಾರ್ಪಣವನುಭಾವಗಳ ಮಾಡುವುದು, ಇದು ಸೂಕ್ಷ್ಮಾಚಮನವೆನಿಸುವುದು. ಪ್ರಮಾಣಗಳಾದರೂ ಅನುವಲ್ಲದೆ ವಿಪತ್ತಿನ ವೇಳೆಯಾಗಲಿ, ಜಲ ಪರಿಹರಿಸಿದಲ್ಲಿ ಪರಿಣಾಮಜಲದಿಂದ ಆ ಸ್ಥಾನವ ಪ್ರಕ್ಷಾಲಿಸಿ, ಹಸ್ತಪಾದವ ತೊಳೆದು ಉದಕವ ಶೋದ್ಥಿಸಿ, ಲಿಂಗಸ್ಪರಿಶನವಗೈದು, ಆರುವೇಳೆ ಜಿಹ್ವೆಯ ಪ್ರಕ್ಷಾಲಿಸಿ, ಸತ್ಯೋದಕದ ಪರಮಾನಂದಜಲ ಮಹಾಜ್ಞಾನಪ್ರಣಮಪ್ರಸಾದಂಗಳ ಗುಟುಕ ಲಿಂಗಮಂತ್ರ ನೆನಹಿನೊಡನೆ ಸೇವಿಸುವುದು. ಲಿಂಗಬಾಹ್ಯರ ಸಂಗಡಪ್ರಸಂಗಿಸಿದೊಡೆ ಇದೇ ರೀತಿಯಲ್ಲಿ ಮುಖಪ್ರಕ್ಷಾಲನಂಗೈದು ಆಚರಿಸುವುದು. ಇದಕೂ ಮೀರಿದರೆ ಜಲಬಿಟ್ಟು, ಭವಿಗಳಸಂಗಡ ಪ್ರಸಂಗವ ಮಾಡಿದರೆ ಆ ಸಮಯದಲ್ಲಿ ಪ್ರಮಾದವಶದಿಂದ ಉದಕವು ದೊರೆಯದಿದ್ದರೆ ಅಲ್ಲಿ ವಿಸರ್ಜನಸ್ಥಾನವ ದ್ರವವಾರುವಂತೆ ಶುಚಿಯುಳ್ಳ ಮೃತ್ತಿಕೆ ಪಾಷಾಣ ಕಾಷ್ಠ ಕಾಡುಕುರುಳು ಪರ್ಣಗಳಿಂದ ಪ್ರಕ್ಷಾಲನಂಗೈದು, ಜಿಹ್ವಾಗ್ರದಲ್ಲಿ ಸಂಬಂಧವಾದ ಗುರುಲಿಂಗೋದಕದಿಂದ ಮತ್ತಾ ಜಿಹ್ವೆಯ ಪ್ರಕ್ಷಾಲಿಸಿ, ಆರುವೇಳೆ ತೂವರಂಗೈದು, ಹರಹರ ಶಿವಶಿವ ಜಯಜಯ ಕರುಣಾಕರ ಮತ್ಪ್ರಾಣನಾಥ ಶ್ರೀಗುರುಬಸವಲಿಂಗಾಯೆಂದು ಘನಮನವ ಚಿದ್ಘನಲಿಂಗಪ್ರಸನ್ನಧ್ಯಾನದಿಂದ ನವನಾಳವೆಂಬ ಕವಾಟಬಂಧನಂಗೈದು, ಪ್ರದಕ್ಷಣವಮಾಡಿ, ಪರಿಪೂರ್ಣ ಚಿದ್ಬೆಳಗಿನೊಳು ಮತ್ತೆಂದಿನಂತೆ ಅತಿಜಾಗ್ರವೆಂಬ ಮಹಾದರುವಿನೊಳ್ ಸತ್ಕøತ್ಯ ಸದ್ಧರ್ಮರಾಗಿರ್ಪುದು. ಮುಂದೆ ಲಿಂಗಾರ್ಚನಾರ್ಪಣಗಳ ಮಾಡಬೇಕಾದರೆ, ಶುದ್ಧೋದಕದಿಂದ ಲಿಂಗಾಬ್ಥಿಷೇಕಸ್ನಾನಂಗೈದು, ಪಾವುಡಗಳ ಮಡಿಮಾಡಿ ಪರಿಣಾಮಾರ್ಪಣ ತೃಪ್ತರಾಗಿರ್ಪುದು. ಇದಕೂ ಮೀರಿದರೆ, ಜಲವ ಬಿಡುವುದು, ಭವಿಗಳಸಂಗಡ ಪ್ರಸಂಗಿಸಿದರೆ ಸ್ನಾನಮಾಡುವ ಪರಿಯಂತರ ಜಿಹ್ವಾಗ್ರದಲ್ಲಿ ಸ್ಥಾಪ್ಯವಾದ ಸತ್ಯಶುದ್ಧ ಗುರುಲಿಂಗೋದಕ ಮಹಾಪ್ರಣಮಪ್ರಸಾದವೆ ಮೊದಲು ಕ್ರಿಯಾಘನ ಗುರುಲಿಂಗಜಂಗಮಾರ್ಚನೆ ತೀರ್ಥಪ್ರಸಾದಸೇವನೆಗಳಂ ಮಾಡಲಾಗದು. ಇದಕೂ ಮೀರಿದರೆ, ತನ್ನ ದೀಕ್ಷಾಗುರು ಶಿಕ್ಷಾಗುರು ಮೋಕ್ಷಾಗುರು ಪರಿಪೂರ್ಣಗುರುಸ್ಮರಣೆ ಧ್ಯಾನದಿಂದ ಸರ್ವಾವಸ್ಥೆಗಳ ನೀಗಿ, ಮಹಾಬಯಲ ಬೆರೆವುದು. ಇದಕೂ ಮೀರಿದರೆ, ತನುವಿಗೆ ಆಯಸದೋರಿ, ಆಪ್ತರಾರೂ ಇಲ್ಲದಂತೆ, ಪರಿಣಾಮಜಲ ದೊರೆಯದ ವೇಳೆಯೊಳು ಮಲಮೂತ್ರಗಳೆರಡೂ ತೋರಿಕೆಯಾದರೆ, ಎಲ್ಲಿ ಪರಿಯಂತರ ಸಂಶಯಗಳುಂಟೊ ಅಲ್ಲಿ ಪರಿಯಂತರವು ಎರಡನೂ ವಿಸರ್ಜಿಸುವುದು. ಆ ಸಂಶಯ ತೀರಿದಲ್ಲಿ ಉದಕವಿದ್ದಲ್ಲಿಗೆ ಹೋಗಿ, ಪೂರ್ವದಂತೆ ಮೃತ್ತಿಕಾಶೌಚಗಳ ಬಳಸಿ, ನಿರ್ಮಲವಾಗಿ ತೊಳೆದು, ಹಸ್ತಪಾದಗಳ ಪ್ರಕ್ಷಾಲಿಸಿ, ಆ ಸಮಯದಲ್ಲಿ ಕ್ರಿಯಾಭಸಿತವಿದ್ದರೂ ರಸಯುಕ್ತವಾದ ಪದಾರ್ಥವಾದರೂ ಪುಷ್ಪಪತ್ರಿಗಳಾದರೂ ಇದ್ದರೆ ಸತ್ಕ್ರಿಯಾಲಿಂಗಾರ್ಚನಾರ್ಪಣಗಳಿಗೆ ಬಾರವು. ಆದ್ದರಿಂದ ಅವು ಇದ್ದವು ನಿಕ್ಷೇಪವ ಮಾಡುವುದು. ಕ್ರಿಯಾಗುರು ಲಿಂಗಜಂಗಮಮುಖದಿಂದ ಶುದ್ಧೋದಕವ ಮಾಡಿ, ತ್ರಿವಿಧ ಸ್ನಾನಂಗೈದು, ಪುರಾತನೋಕ್ತಿಯಿಂದ ಜಂಗಮಲಿಂಗದಲ್ಲಿ ಚಿದ್ಭಸಿತವ ಬೆಸಗೊಂಡು, ಸತ್ಕ್ರಿಯಾರ್ಪಣಗಳನಾಚರಿಸಿ, ನಿತ್ಯಮುಕ್ತರಾಗಿರ್ಪವರೆ ಪೂರ್ವಾಚಾರ್ಯಸಗುಣಾನಂದಮೂರ್ತಿಗಳೆಂಬೆ ಕಾಣಾ ನಿರವಯಪ್ರಭು ಮಹಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಘಟತತ್ವ ಪೃಥ್ವಿಭೇದವಾಗಿ, ಆತ್ಮತತ್ವ ಅಪ್ಪುಭೇದವಾಗಿ, ತೇಜಸ್ತತ್ವ ಅರಿವುಭೇದವಾಗಿ, ಇಂತೀ ತ್ರಿವಿಧಭೇದ ವರ್ತುಳ ಗೋಮುಖ ಗೋಳಕಾಕಾರ ಕೂಡಿ ಲಿಂಗವಾದಲ್ಲಿ, ಈಶ್ವರತತ್ವ ವಾಯುಭೇದವಾಗಿ, ಸದಾಶಿವತತ್ವ ಆಕಾಶಭೇದವಾಗಿ, ಉಭಯ ಏಕವಾಗಿ, ಅಗ್ನಿತತ್ವ ಕೂಡಲಿಕ್ಕೆ ಆ ತ್ರಿವಿಧ ಏಕವಾಗಿ, ಅಪ್ಪುತತ್ವವ ಕೂಡಲಿಕ್ಕೆ ಆ ಚತುರ್ಭಾವ ಏಕವಾಗಿ, ಪೃಥ್ವಿತತ್ವ ಕೂಡಲಾಗಿ, ಉತ್ಪತ್ಯವೆಲ್ಲಿ ಅಡಗಿತ್ತು ? ಸ್ಥಿತಿಯೆಲ್ಲಿ ನಡೆಯಿತ್ತು ? ಲಯವೆಲ್ಲಿ ಸತ್ತಿತ್ತು ? ಲಿಂಗ ಮಧ್ಯ ಸಚರಾಚರವೆಂದಲ್ಲಿ, ಕಂಡು ಕಾಣೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಘನದ ವೇದಿಸಿದ ಮನ, ಮನವ ವೇದಿಸಿದ ಇಂದ್ರಿಯಂಗಳು, ಇಂದ್ರಿಯಂಗಳ ವೇದಿಸಿದ ತನು, ತನುವ ವೇದಿಸಿದ ಪ್ರಸಾದ, ಪ್ರಸಾದವ ವೇದಿಸಿದ ಪರಿಣಾಮ, ಪರಿಣಾಮವ ವೇದಿಸಿದ ತೃಪ್ತಿ, ತೃಪ್ತಿಯ ವೇದಿಸಿದ ಇಷ್ಟಲಿಂಗ, ಇಷ್ಟಲಿಂಗವ ವೇದಿಸಿದ ಜ್ಞಾನ, ಜ್ಞಾನವ ವೇದಿಸಿದ ನಿರ್ಮಲ ಶಿವಕ್ರಿಯೆ, ನಿರ್ಮಲ ಶಿವಕ್ರಿಯೆ[ಯ] ವೇದಿಸಿದ ಶರಣಂಗೆ ಇನ್ನು ವೇದ್ಯರುಂಟೆ, ಮಹಾಲಿಂಗ ಕಲ್ಲೇಶ್ವರಾ ?
--------------
ಹಾವಿನಹಾಳ ಕಲ್ಲಯ್ಯ
ಘಟಾಕಾಶ ಮಠಾವಕಾಶ ದಿಗಾಕಾಶ ಬಿಂದ್ವಾಕಾಶ ಭಿನ್ನಾಕಾಶ ಮಹದಾಕಾಶವೆಂಬ ಆಕಾಶಕೊಂಬತ್ತು ಬಾಗಿಲು. ಹೊಗಲಿಕಸಾಧ್ಯ ಹೊರಹೊಂಡಲಿಕಸಾಧ್ಯ. ಕೂಡಲಚೆನ್ನಸಂಗಾ ನಿಮ್ಮ ಶರಣಂಗೆ ಸಾಧ್ಯವಲ್ಲದೆ ಉಳಿದವರಿಗಸಾಧ್ಯವು.
--------------
ಚನ್ನಬಸವಣ್ಣ
ಘನಕ್ಕೆ ಘನವೆಂಬವರ ಮನಕ್ಕೆ ತಂದು ಅನುಗೊಳಿಸಿದೆಯಲ್ಲಾ, ಅಲ್ಲಮದೇವಾ. `ಸರ್ವಂ ಖಲ್ವಿದಂ ಬ್ರಹ್ಮ' ಎಂದು ವಾಸಿದಲ್ಲಿ, ಲಿಂಗತ್ರಯದಲ್ಲಿ ಬೋಧಗೊಳಿಸಿದೆಯಲ್ಲಾ, ಅಲ್ಲಮದೇವಾ. ಮಾಡಿ ನೀಡುವೆನೆಂಬವರ ರೂಹು ಮೂಡದಂತೆ ಮಾಡಿದೆಯಲ್ಲಾ, ಅಲ್ಲಮದೇವಾ. ದೃಷ್ಟಿಗೆ ಬಿದ್ದವರ ಮಹದೈಶ್ವರ್ಯಕ್ಕಿಟ್ಟು, ನೀ ನೆಟ್ಟನೆ ಬೆಟ್ಟದಲ್ಲಿಯ ಬಟ್ಟಬಯಲ ಕದಳಿಯ ಹೋಗಿ ಬಟ್ಟಬಯಲಾಗಿ, ಜಗದಂತರ್ಯಾಮಿ ಕಪಿಲಸಿದ್ಧಮಲ್ಲಿಕಾರ್ಜುನನಾಗಿ ನಿಂದೆಯಲ್ಲಾ ಅಲ್ಲಮದೇವಾ
--------------
ಸಿದ್ಧರಾಮೇಶ್ವರ
ಘುಟಿಕಾಸಿದ್ಧರ ಘುಟಿಕೆಯುರುಳಿತ್ತು ಯಂತ್ರಿಗಳ ಯಂತ್ರ ಎದ್ದು ಹೋಯಿತ್ತು ಮಂತ್ರಿಗಳ ಮಂತ್ರ ಮರೆತುಹೋಯಿತ್ತು ಔಷಧಿಗರ ಔಷಧವನಾರಡಿಗೊಂಡಿತ್ತು ಸರ್ವವಿದ್ಯಾಮುಖದ ಜ್ಯೋತಿ ನಂದಿತ್ತು ಈ ವಿಷಯದ ಲಹರಿಯಲ್ಲಿ ಮೂರುಲೋಕದವರೆಲ್ಲರು ಮೂರ್ಛಿತರಾದರು ಕಾಣಾ ಗುಹೇಶ್ವರ.
--------------
ಅಲ್ಲಮಪ್ರಭುದೇವರು
ಘನವ ಕಂಡೆ, ಅನುವ ಕಂಡೆ, ಆಯತ ಸ್ವಾಯತ ಸನ್ನಿಹಿತ ಸುಖವ ಕಂಡೆ. ಅರಿವರಿದು ಮರಹ ಮರೆದೆ. ಕುರುಹಿನ ಮೋಹ ಮೊರೆಗೆಡದೆ ಚೆನ್ನಮಲ್ಲಿಕಾರ್ಜುನಾ, ನಿಮ್ಮನರಿದು ಸೀಮೆಗೆಟ್ಟೆನು.
--------------
ಅಕ್ಕಮಹಾದೇವಿ
ಘಟದೊಳಗೆ ತೋರುವ ಸೂರ್ಯನಂತೆ ಎಲ್ಲರೊಳಗೆ, ಸರ್ವರಲ್ಲಿ ಶಿವನ ಚೈತನ್ಯವಿಪ್ಪುದು. ಇದ್ದರೇನು, ಸರ್ವರಿಗೆ ಸಾಧ್ಯವಲ್ಲ. ಮುಟ್ಟಿ ಮುಟ್ಟದು ಅದು ಕೂಡುವಡೆ, ಗುರುವಿಂದಲ್ಲದಾಗದು ಕಾಣಾ, ಕಲಿದೇವಾ.
--------------
ಮಡಿವಾಳ ಮಾಚಿದೇವ
ಘನಸುಖ ಮಹಾಸುಖವ ಮುಟ್ಟಲು, ಸಮಸುಖಂಗಳ ಸುಖಿಸಬಲ್ಲ, ಸುಖವನಲ್ಲಿಯೇ ಕೊಯ್ದು ಸೂಡ ಕಟ್ಟಬಲ್ಲ, ನಾಗಪ್ರಿಯ ಚೆನ್ನರಾಮೇಶ್ವರಾ, ನಿಮ್ಮ ಶರಣನು ಸುಖಿಸಬಲ್ಲ ಸುಖವನು.
--------------
ಶಿವನಾಗಮಯ್ಯ
ಘಟದೊಳಗೆ ತೋರುವ ಸೂರ್ಯನಂತೆ ಸರ್ವರಲ್ಲಿ ಶಿವನ ಚೈತನ್ಯವಿಪ್ಪುದು. ಇದ್ದರೇನು? ಅದ ಕೂಡುವರೆ ಗುರುವಿನಿಂದಲ್ಲದಾಗದು ಕಾಣಾ! ರಾಮನಾಥ.
--------------
ಜೇಡರ ದಾಸಿಮಯ್ಯ
ಘುಲ್ಲುಘುಲ್ಲೆಂದಡೆ ನಲ್ಲ ಬರುತಾನೆಂದು ಎಲ್ಲ ಹಾದಿಯ ಮೆಟ್ಟಿ ನೋಡುತಿರ್ದೆನವ್ವಾ. ನಲ್ಲನ ಸೊಲ್ಲನಾಲಿಸಿ ಕೇಳುತಿರ್ದೆನವ್ವಾ. ಅಖಂಡೇಶ್ವರನೆಂಬ ನಲ್ಲನ ಕಂಡರೆ ಮಹಾಸಂತೋಷವು, ಕಾಣದಿರ್ದರೆ ಕಡುದುಃಖ ಕೇಳಿರವ್ವಾ ಎನಗೆ.
--------------
ಷಣ್ಮುಖಸ್ವಾಮಿ
ಘಟಸರ್ಪನಂತೆ ಅತಿಶಯವು ! ನಾಭಿಸರವರಸ್ಥಾನಕವೆ ದಳವೆಂಟು ! ನವದಳಕಮಲ ಊಧ್ರ್ವಮಂಡಲದ ಅಮೃತಸೇವನೆಯಾಗಿ, ಶಿವಯೋಗಿಯಾದೆವೆಂಬರು. ಗುಹೇಶ್ವರಲಿಂಗವು ಪವನವಿಯೋಗ !
--------------
ಅಲ್ಲಮಪ್ರಭುದೇವರು

ಇನ್ನಷ್ಟು ...
-->