ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಚಿನ್ನ ವಿಶೇಷ ಮಣ್ಣು ಅಧಮವೆಂದಡೆ, ಅದು ನಿಂದು ಕರಗುವುದಕ್ಕೆ ಮಣ್ಣಿನ ಕೋವೆಯೆ ಮನೆಯಾಯಿತ್ತು. ಇಷ್ಟವನರಿವ ವಸ್ತುವ ನೆಮ್ಮುವುದಕ್ಕೆ ಇದೇ ದೃಷ್ಟ, ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
--------------
ಮೆರೆಮಿಂಡಯ್ಯ
ಚರ ಸ್ಥಾವರವಾದುದುಂಟೆ? ಮಹಾಸಮುದ್ರಕ್ಕೆ ಕೆರೆಯೇರಿಯುಂಟೆ? ಸುಖವ ಮಚ್ಚಿ ಅಖಿಳರೊಳಗಿದ್ದು ಸಕಲ ವಿರಹಿತರಾದ ಪರಿಯಿನ್ನೆಂತೊ? ಅದು ವಿಕಳರ ಮಾತು, ಮೂರಕ್ಷರಕ್ಕೆ ದೂರ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಚಂದ್ರಕಾಂತದ ಶಿಲೆಗೆ ಒಂದು ಗಜ ಹೋರುವಂತೆ ತನ್ನ ನೆಳಲಿಂಗೆ ತಾನೆ ಹೋರಿ ಸಾವಂತೆ ಆನೆಯ ಗತಿ ಆನೆಯ ಮತಿ. ಆನೆಯಹುದು, ಆನೆಯಲ್ಲ, ಅದನೇನೆಂಬೆ ? ನೀನೆನ್ನ ಕರಸ್ಥಲದಲ್ಲಿ ಸಿಲ್ಕಿದೆಯಾಗಿ ನೀ ನಾನೆಂಬ ಭ್ರಾಂತೇಕೆ ? ನಾನು ನೀನಲ್ಲದ ತೆರಹಿಲ್ಲ, ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಚಿತ್ರದ ಬೊಂಬೆ ರೂಪಾಗಿರ್ದರೇನೋ? ಅಚೇತನವಾದ ಕಾರಣ ಪ್ರಯೋಜನಕಾರಿಯಾದುದಿಲ್ಲ. ಹಾವುಮೆಕ್ಕೆಯ ಹಣ್ಣು ನುಂಪಾಗಿರ್ದರೇನೋ? ಕಹಿ ಬೆರೆದ ಕಾರಣ ಪ್ರಯೋಜನಕಾರಿಯಾದುದಿಲ್ಲ. ಅತ್ತಿಯ ಹಣ್ಣು ಕಳಿತಿರ್ದರೇನೋ? ಕ್ರಿಮಿ ಬಿಡದ ಕಾರಣ ಪ್ರಯೋಜನಕಾರಿಯಾದುದಿಲ್ಲ. ತಿಪ್ಪೆಯ ಹಳ್ಳ ತಿಳಿದಿರ್ದರೇನೋ? ಅಮೇಧ್ಯ ಬೆರೆದ ಕಾರಣ ಪ್ರಯೋಜನಕಾರಿಯಾದುದಿಲ್ಲ. ವೇದ ಶಾಸ್ತ್ರ ಪುರಾಣಾಗಮಂಗಳನೋದಿ ಎಲ್ಲರಲ್ಲಿಯೂ ಅನುಭಾವಿಗಳಾದರೇನೋ? ಆಶೆಯೆಂಬ ಪಾಶದಲ್ಲಿ ಕಟ್ಟುವಡೆದು ಪಾಶಬದ್ಧರಾದ ಕಾರಣ ಪ್ರಯೋಜನಕಾರಿಗಳಾದುದಿಲ್ಲ. ನುಡಿವಂತೆ ನಡೆಯದವರ ನಡೆದಂತೆ ನುಡಿಯದವರ ಎಂತು ಶಿವಶರಣರೆಂಬೆ ವಾಚಾಳಿಕರ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಚಂಗಳೆಯಮ್ಮನ ಭಾವದೊಳ್ಮುಳುಗಿ ಪಂಚಾಚಾರಸ್ವರೂಪನಾಗಿರ್ದೆಕಾಣಾ. ನಂಬಿಯಕ್ಕನ ಭಾವದೊಳ್ಮುಳುಗಿ ಮಂತ್ರಾತ್ಮಸ್ವರೂಪನಾಗಿರ್ದೆ ಕಾಣಾ. ಚೋಳಿಯಕ್ಕನ ಭಾವದೊಳ್ಮುಳುಗಿ ನಿರೀಕ್ಷಣಾಸ್ವರೂಪನಾಗಿರ್ದೆ ಕಾಣಾ. ನೀಲಲೋಚನೆಯಮ್ಮನ ಭಾವದೊಳ್ಮುಳುಗಿ ಯಜನಸ್ವರೂಪನಾಗಿರ್ದೆ ಕಾಣಾ. ಅಮ್ಮವ್ವೆಯರ ಭಾವದೊಳ್ಮುಳುಗಿ ಸ್ತೌತ್ಯಸ್ವರೂಪನಾಗಿರ್ದೆ ಕಾಣಾ. ಮಹಾದೇವಿಯರ ಭಾವದೊಳ್ಮುಳುಗಿ ವೇದಿಸ್ವರೂಪನಾಗಿರ್ದೆ ಕಾಣಾ. ಇಂತು ಎನ್ನ ಮಾತೆಯರ ಭಾವದೊಳು ಸಮರಸವಾಗಿ ಮುಕ್ತಾಯಕ್ಕನ ಗರ್ಭದೊಳು ನಿತ್ಯಪ್ರಸಾದಿಯಾಗಿರ್ದೆನು ಕಾಣಾ ಗುರುನಿರಂಜನ ಚನ್ನಬಸವಲಿಂಗಾ ನೀ ಸನ್ನಿಹಿತ.
--------------
ದೇಶಿಕೇಂದ್ರ ಸಂಗನಬಸವಯ್ಯ
ಚಿತ್ತ ಶುದ್ದವಾದಲ್ಲಿಯೆ ಮಜ್ಜನದ ಮಂಡೆ. ಆಂಗದಾಪ್ಯಾಯನವರತಲ್ಲಿಯೆ ಎಂಬುದಕ್ಕೆ ಬಾಯಿ. ಸಂದುಸಂಶಯ ಹರಿದಲ್ಲಿಯೆ ಲಿಂಗದ ಸಂಸರ್ಗ. ಇದರಂದವ ಹೇಳಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಚಂದ್ರೋದಯಕ್ಕೆ ಅಂಬುದ್ಥಿ ಹೆಚ್ಚುವುದಯ್ಯಾ, ಚಂದ್ರ ಕುಂದೆ, ಕುಂದುವುದಯ್ಯಾ. ಚಂದ್ರಂಗೆ ರಾಹು ಅಡ್ಡ ಬಂದಲ್ಲಿ ಅಂಬುದ್ಥಿ ಬೊಬ್ಬಿಟ್ಟಿತ್ತೆ ಅಯ್ಯಾ ಅಂಬುದ್ಥಿಯ ಮುನಿ ಆಪೋಶನವ ಕೊಂಬಲ್ಲಿ ಚಂದ್ರಮನಡ್ಡ ಬಂದನೆ, ಅಯ್ಯಾ ? ಆರಿಗಾರೂ ಇಲ್ಲ, ಕೆಟ್ಟವಂಗೆ ಕೆಳೆಯಿಲ್ಲ, ಜಗದ ನಂಟ ನೀನೆ, ಅಯ್ಯಾ, ಕೂಡಲಸಂಗಮದೇವಯ್ಯಾ !
--------------
ಬಸವಣ್ಣ
ಚಿನ್ನವನೊರೆಯಬಹುದಲ್ಲದೆ ಬಣ್ಣವನೊರೆಯಬಹುದೆ ? ಹೂವ ಮುಡಿಯಬಹುದಲ್ಲದೆ ಗಂಧವ ಮುಡಿಯಬಹುದೆ ? ಕರ್ಮವ ಮಾಡಬಹುದಲ್ಲದೆ ವಸ್ತುವನರಿಯಬಹುದೆ ? ಗುಹೇಶ್ವರನೆನಬಹುದಲ್ಲದೆ, ಲಿಂಗವು ತಾನಾಗಬಾರದು ಸಿದ್ಧರಾಮಯ್ಯಾ.
--------------
ಅಲ್ಲಮಪ್ರಭುದೇವರು
ಚಿತ್ತುವೆಂಬ ಬಿತ್ತು ಬಲಿದು ಎರಡಾದಲ್ಲಿ, ಲಿಂಗವೆಂಬ ಕಳೆ ಅಂಕುರಿಸಿ ಮೂರ್ತಿಯಾಯಿತ್ತು. ಆ ಮೂರ್ತಿಯ ಘನತೆಯ ಏನೆಂದೂ ಉಪಮಿಸಬಾರದು ! ನೋಡಿದಡೆ ಮೂರ್ತಿ ಹಿಡಿದಡೆ ಬಯಲು ! ಆ ಮೂರ್ತಿಯೊಳಗದೆ ಈರೇಳು ಲೋಕದ ಪ್ರಾಣಕಳೆ. ಆ ಕಳೆಯ ಬೆಳಗು ತಾನೆ ನಮ್ಮ ಗುಹೇಶ್ವರಲಿಂಗದಲ್ಲಿ ಲೀಲಾಮೂಲದ ಪ್ರಥಮ ಭಿತ್ತಿ.
--------------
ಅಲ್ಲಮಪ್ರಭುದೇವರು
ಚತುರ್ವಿಂಶತಿತತ್ವಕೂಡಿ ಶರೀರ ಹೇಗಾಯಿತ್ತೆಂದಡೆ, ಹೇಳುವೆ ಕೇಳಿರಣ್ಣಾ : ಆ ಆಕಾಶ ಆಕಾಶವ ಬೆರಸಲು ಜ್ಞಾನ ಹುಟ್ಟಿತ್ತು. ಆ ಆಕಾಶ ವಾಯುವ ಬೆರಸಲು ಮನ ಹುಟ್ಟಿತ್ತು. ಆಕಾಶ ಅಗ್ನಿಯ ಬೆರಸಲು ಅಹಂಕಾರ ಹುಟ್ಟಿತ್ತು. ಆಕಾಶ ಅಪ್ಪುವ ಬೆರಸಲು ಬುದ್ಧಿ ಹುಟ್ಟಿತ್ತು. ಆಕಾಶ ಪೃಥ್ವಿಯ ಬೆರಸಲು ಚಿತ್ತ ಹುಟ್ಟಿತ್ತು. ಇಂತಿವು ಕರಣಚತುಷ್ಟಯಂಗಳುತ್ಪತ್ತಿಯೆಂದು ಹೇಳಲ್ಪಟ್ಟಿತ್ತಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಚರಾಚರಾತ್ಮಕ ಪ್ರಪಂಚವೆಲ್ಲ ಶಿವನ ಚಿದ್ಗರ್ಭದಿಂದುಯಿಸಿಪ್ಪವೆಂದು, ಶಿವಾಭಿನ್ನತ್ವದಿಂ ಸಕಲಪ್ರಾಣಿಗಳಲ್ಲಿ ತನ್ನಾತ್ಮಚೇತನವ ತನ್ನಲ್ಲಿ ಸಕಲ ಪ್ರಾಣಿಗಳ ಆತ್ಮ ಚೇತನವ ಕಂಡು, ದಯಾಪರತ್ವವನುಳ್ಳ ಸರ್ವಜ್ಞತಾ ಶಕ್ತಿಯನು ಭಕ್ತಿಸ್ಥಲದಲ್ಲಿ ಪಡೆವುದು ನೋಡಾ. ತನಗೆ ಬಂದ ಅಪವಾದ ನಿಂದೆ ಎಡರಾಪತ್ತುಗಳಲ್ಲಿ ಎದೆಗುಂದದೆ ಬಪ್ಪ ಸುಖ ದುಃಖ ಖೇದ ಹರ್ಷಾದಿಗಳು ಶಿವಾಜ್ಞೆಯಹುದೆಂದು ಪರಿಣತನಪ್ಪ ತೃಪ್ತಿಯ ಶಕ್ತಿಯನು ಮಾಹೇಶ್ವರಸ್ಥಲದಲ್ಲಿ ಪಡೆವುದು ನೋಡಾ. ದೇಹಾದಿ ಆದಿ ಪ್ರಪಂಚಕ್ಕೆ ಮೂಲಿಗನಾದ ಅನಾದಿ ಪರಶಿವನು ಪ್ರಸನ್ನತ್ವವನುಂಟುಮಾಡುವ ಅನಾದಿ ಬೋಧ ಶಕ್ತಿಯನು ಪ್ರಸಾದಿಸ್ಥಲದಲ್ಲಿ ಪಡೆವುದು ನೋಡಾ. ಅಂತಪ್ಪ ದೇಹಾದಿ ಪ್ರಪಂಚದ ಚಲನವಲನವು ತನ್ನಾಶ್ರಯದಲ್ಲಿ ನಡೆದು ತಾನು ಆವುದನ್ನೂ ಆಶ್ರಯಿಸದೆ ಸರ್ವಸ್ವತಂತ್ರ ತಾನೆಂಬರಿವನುಂಟುಮಾಡುವ ಸ್ವತಂತ್ರ ಶಕ್ತಿಯನು ಪ್ರಾಣಲಿಂಗಿಸ್ಥಲದಲ್ಲಿ ಪಡೆವುದು ನೋಡಾ. ತನ್ನಾಶ್ರಯವ ಪಡೆದ ದೃಶ್ಯಮಾನ ದೇಹಾದಿ ಜಗವೆಲ್ಲ ಅನಿತ್ಯವೆಂಬ ಆ ದೃಶ್ಯಮಾನದೇಹಾದಿಗಳ ಮೂಲೋತ್ಪತ್ತಿಗಳಿಗೆ ಕಾರಣನಪ್ಪ ಪತಿಪರಶಿವಲಿಂಗವೇ ನಿತ್ಯವೆಂಬರಿವನುಂಟುಮಾಡುವ ಅಲುಪ್ತ ಶಕ್ತಿಯನು ಶರಣಸ್ಥಲದಲ್ಲಿ ಪಡೆವುದು ನೋಡಾ. ಅಂಗಲಿಂಗಗಳ ಸಂಯೋಗವ ತೋರಿ, ಅಖಂಡ ಪರಶಿಲಿಂಗೈಕ್ಯವನುಂಟುಮಾಡಿ ಕೊಡುವ ಅನಂತ ಶಕ್ತಿಯನು ಐಕ್ಯಸ್ಥಲದಲ್ಲಿ ಪಡೆವುದು ನೋಡಾ. ಇದಕ್ಕೆ ಶಿವರಹಸ್ಯೇ ; 'ಯದ್ಭಕ್ತಿಸ್ಥಲಮಿತ್ಯಾಹುಸ್ತತ್ಸರ್ವಜ್ಞತ್ವಮಿತೀರ್ಯತೇ ೀ ಯನ್ಮಾಹೇಶ್ವರಂ ನಾಮ ಸಾ ತೃಪ್ತಿರ್ಮಮ ಶಾಂಕರಿ || ಯತ್ಪ್ರಸಾದಾಭಿದಂ ಸ್ಥಾನಂ ತದ್ಬೋಧೋ ನಿರಂಕುಶಃ ೀ ಯತ್ಪ್ರಣಲಿಂಗಕಂ ನಾಮ ತತ್ಸ್ವಾತಂತ್ರೈಮುದಾಹೃತಂ || ಯದಸ್ತಿ ಶರಣಂ ನಾಮ ಹ್ಯಲುಪ್ತಾ ಶಕ್ತಿರುಚ್ಯತೇ ೀ ಯದೈಕ್ಯಸ್ಥಾನಮೂರ್ಧಸ್ಥಾ ಹ್ಯನಂತಾಶಕ್ತಿರುಚ್ಯತೇ ||ú ಎಂದುದಾಗಿ, ಇಂತಪ್ಪ ಷಟ್‍ಸ್ಥಲಗಳಲ್ಲಿ ಷಡ್ವಿಧ ಶಕ್ತಿಗಳ ಸ್ಥಳಕುಳಂಗಳ ತಿಳಿದು, ಷಡ್ವಿಧ ಲಿಂಗಗಳಲ್ಲಿ ಧ್ಯಾನ ಪೂಜಾದಿಗಳಿಂದ ಅಂಗಗೊಂಡು ಭವದ ಬಟ್ಟೆಯ ಮೆಟ್ಟಿ ನಿಂದಲ್ಲದೆ ಷಟ್‍ಸ್ಥಲಬ್ರಹ್ಮಿಗಳಾಗರು. ಇಂತಲ್ಲದೆ ಅಪವಾದ ನಿಂದೆಗಳ ಪರರ ಮೇಲೆ ಕಣ್ಗಾಣದೆ ಹೊರಿಸುತ್ತ ಪರದಾರ ದಾಶಿ ವೇಶಿ ಸೂಳೆಯರ ಕೂಡಿ ಭುಂಜಿಸಿ ತೊಂಬಲತಿಂಬ ಹೇಸಿ ಮೂಳರು ಪೋತರಾಜ, ಜೋಗಿ, ಕ್ಷಪಣರಂತೆ ಜಟಾ, ತುರುಬು, ಬೋಳುಮುಂಡೆಗೊಂಡು ಕೂಳಿಗಾಗಿ ತಿರುಗುವ ಮೂಳ ಚುಕ್ಕೆಯರ ವಿರಕ್ತ ಷಟ್‍ಸ್ಥಲಬ್ರಹ್ಮಿಗಳೆನಬಹುದೇನಯ್ಯ ? ಅಂತಪ್ಪ ಅನಾದಿ ಷಟ್‍ಸ್ಥಲಬ್ರಹ್ಮದ ಷಡ್ವಿಧಶಕ್ತಿಯನರಿದು ವಿರಕ್ತ ಜಂಗಮ ಷಟ್‍ಸ್ಥಲ ಬಾಲಬ್ರಹ್ಮಿ ನಿರಾಭಾರಿಯಾದ ಚೆನ್ನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎಂಬೆನಯ್ಯಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಚರಿಸುವ ಜನರೆಲ್ಲ ದೇವರಲ್ಲ; ಚರಿಸಿ ಚರಿಸಿ ಭ್ರಮೆಗೊಂಡರು ಮತ್ತೆ ದೇವರು ದೇವರುಎಂದು, ನೋಡಾ. ಚರಿಸುವ ಜನರು ದೇವರು, ಚರಿಸದ ವಸ್ತು ದೇವರು, ನಾ ನೀನೆಂಬುಭಯ ದೇವರು, ಕಪಿಲಸಿದ್ಧಮಲ್ಲಿಕಾರ್ಜುನದೇವರು ದೇವರು.
--------------
ಸಿದ್ಧರಾಮೇಶ್ವರ
ಚಿತ್ತದಲ್ಲಿ ನೆನೆದ ಲೆಕ್ಕವ ಇದಿರಿಟ್ಟು ಬರೆದಲ್ಲದೆ ಅರಿಯಬಾರದು. ಅರಿವು ಘನದಲ್ಲಿ ನಿಂದೆನೆಂದಡೆ ದೃಷ್ಟವಾದ ಲಿಂಗದಲ್ಲಿ ನಿಂದಲ್ಲದೆ ಕಾಣಬಾರದು. ಹೀಗಲ್ಲದೆ, ಆಧ್ಯಾತ್ಮದಲ್ಲಿ ಹೊದ್ದಿನೋಡಿ ಕಂಡೆನೆಂಬ ಬದ್ಧರ ಮಾತ ಹೊದ್ದದಿರಬೇಕು, ಸದಾಶಿವಮೂರ್ತಿಲಿಂಗವನರಿವುದಕ್ಕೆ.
--------------
ಅರಿವಿನ ಮಾರಿತಂದೆ
ಚಿತ್ತೇ ಅಂಗ, ಸತ್ತೇ ಪ್ರಾಣ, ಆನಂದವೇ ಶರಣನ ಕರಣ ನೋಡಾ. ನಿತ್ಯವೇ ಪ್ರಸಾದ. ಪರಿಪೂರ್ಣವೇ ಸರ್ವಾಂಗದ ಪ್ರಕಾಶ. ಪರಮಾನಂದವೇ ಪಾದಜಲ ನೋಡಾ. ಇದುಕಾರಣ, ಸಚ್ಚಿದಾನಂದ ಸ್ವರೂಪನು ನಿಮ್ಮ ಶರಣನೈ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಚಂದ್ರಶಿಲೆಯಲ್ಲಿ ಪಾವಕ ಹುಟ್ಟಿ, ಈಡಾ ಪಿಂಗಳ ಮಧ್ಯದಲ್ಲಿ ಅನಿಲ ತುಂಬಿ, ಅರಿದರಿದು ! ನಿಮ್ಮ ನೆನೆವ ಪರಿಕರ ಹೊಸತು ! ಅರಿವಡೆ ತಲೆಯಿಲ್ಲ, ಹಿಡಿವಡೆ ಮುಡಿಯಿಲ್ಲ ! ಕೂಡಲಚೆನ್ನಸಂಗಮದೇವಾ ನಿಮ್ಮ ಶರಣನ ಪರಿಯಿಂತುಟು; ಅರಿದರಿದು !
--------------
ಚನ್ನಬಸವಣ್ಣ

ಇನ್ನಷ್ಟು ...
-->