ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ತನುವ ಕೊಟ್ಟು ತನು ಬಯಲಾಯಿತ್ತು, ಮನವ ಕೊಟ್ಟು ಮನ ಬಯಲಾಯಿತ್ತು, ಧನವ ಕೊಟ್ಟು ಧನ ಬಯಲಾಯಿತ್ತು, ಈ ತ್ರಿವಿಧವನು ಕೊಟ್ಟು ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣಂಗೆ ಬಯಲಸಮಾಧಿಯಾಯಿತ್ತು.
--------------
ಚನ್ನಬಸವಣ್ಣ
ತನ್ನ ಪುತ್ರಂಗೆ ತಾನೆ ಗುರುವಾದೆನೆಂಬ ಗುರುದ್ರೋಹಿಯ ಮಾತ ಕೇಳಲಾಗದು. ಅವರಿಬ್ಬರನು ಹೊತ್ತಿಸಿ ನಂದಿಸಿ ಸುಡುವ ಕೂಡಲಚೆನ್ನಸಂಗಯ್ಯನವರ ಗುರುಶಿಷ್ಯತನವ.
--------------
ಚನ್ನಬಸವಣ್ಣ
ತನುವೆಂಬ ಹೇಳಿಗೆಗೆ ಮನಸರ್ಪನಾವರಿಸಿ, ಇನಿದು ಬಂದಡೆ ಅದಕ್ಕಿಂಬುಗೊಡದೆ, ಇರುತಿರ್ಪ ಸರ್ಪವನು ತೆಗೆದು ಶಿವಲಿಂಗವನು ನೆಲೆಗೊಳಿಸಿದ ಶ್ರೀ ಗುರುವೆ ಶರಣು ಶರಣೆಂಬ, ವಾಕ್ಯಂಗಳ್ಲ ಆಕಾರ ಚತುಷ್ಟಯಮಾನಂದದದಲ್ಲಿರಿಸಿದ ಏಕೋ ರುದ್ರ ಶಿಷ್ಟ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ತಾ ವ್ರತಿಯಾಗಿದ್ದಲ್ಲಿ ತನ್ನ ಸೀಮೆ ಒಳಗಾಗಿ, ಕಟಕ ಪಾರದ್ವಾರ ಹುಸಿ ಕೊಲೆ ಕಳವು ಅನ್ಯಾಹಾರ ಮುಂತಾದ ನಿಂದಕ ದುರ್ಜನ ಭವಿಸಂಗ ಉಳ್ಳವರ ತಂದೆತಾಯಿಯೆಂದು ಹೆಂಡಿರುಮಕ್ಕಳೆಂದು ಬಂಧುಬಳಗವೆಂದು ಅವರನು ಅಂಗಳದಲ್ಲಿ ಕೂಡಿಕೊಂಡಡೆ, ಅವರ ತಂದು ಕೊಳನಿಕ್ಕಿದಡೆ, ತಿಂಗಳು ಸತ್ತ ನಾಯಮಾಂಸವ ತಂದು ತಿಂದ ದೋಷ ತಪ್ಪದು. ಇದಕ್ಕೆ ಹಿಂದೆ ನೆನೆಯಲಿಲ್ಲ, ಮುಂದೆ ನೋಡಲಿಲ್ಲ. ಈ ತಪ್ಪು ಹೊತ್ತಲ್ಲಿಯೆ ಅಂದಿಗೆ ನೂರು ತುಂಬಿತ್ತೆಂದು ಅಂಗವ ಬಿಡಬೇಕು. ಅಂಗವ ಬಿಡದ ಭಂಡರ ಕಂಡಡೆ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗನೊಪ್ಪ.
--------------
ಅಕ್ಕಮ್ಮ
ತಾಮಸ ಸಂಬಂಧ ಕನಿಷ್ಠಂಗೆ ಹುಸಿ ಜಾಗ್ರದಿಟದಂತೆ ತೋರುಗು. ರಾಜನ ಸಂಬಂಧ ಮಧ್ಯಮಂಗೆ ಹುಸಿ ತೂರ್ಯ ದಿಟದಂತೆ ತೋರುಗು. ಸಾತ್ವಿಕ ಸಂಬಂಧ ಉತ್ತಮಂಗೆ ದಿಟ ತಾನೆ ತಾನಾಗಿ ನಿಜ ನಿತ್ಯವಾಗಿರ್ದುದು, ಸಂದೇಹವಿಲ್ಲ. ಇದು ಸಚ್ಚಿದಾನಂದ ನಿತ್ಯ ಪರಿಪೂರ್ಣ ತೂರ್ಯಾತೀತವಪ್ಪ ತತ್ತ್ವ ಇಂತುಂಟೆಂದು ತಿಳಿದ ತಿಳಿವು ನೀನೇ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ತೆರಹಿಲ್ಲದ ಮಹಾಘನ ಪರಿಪೂರ್ಣ ಲಿಂಗಭರಿತವೆಂದೇ ಭಾವಿಸಿ, ಪೂಜಿಸಿ, ಮರಳಿ ಬಿದ್ದಿತ್ತು ಕೆಡೆಯಿತ್ತು ಎಂಬ ಅಜಾÕನವ ನೋಡಾ ! ತೆರಹಿಲ್ಲದ ಪರಿಪೂರ್ಣ ಲಿಂಗವು, ಬೀಳಲಿಕ್ಕೆ ತೆರಹುಂಟೆ ? ಅರಿಯರು ಪ್ರಾಣಲಿಂಗದ ನೆಲೆಯನು. ಅರಿಯದೆ ಅಜಾÕನದಲ್ಲಿ ಕುರುಹು ಬಿದ್ದಿತ್ತೆಂದು ಪ್ರಾಣಘಾತವ ಮಾಡಿಕೊಂಡು ಸಾವ ಅಜಾÕನಿಗ? ನೋಡಾ ! ಅರದು ಕೂಡಿ ಸ್ವಯವಾಗಿರ್ದ ಲಿಂಗವು ಓಕರಿಸಿತ್ತೆಂದು ಆ ಲಿಂಗದೊಡನೆ ಪ್ರಾಣಘಾತವ ಮಾಡಿಕೊಂಡು ಸಾವ ಅಜಾÕನಿಗಳಿಗೆ ಅಘೋರ ನರಕ ತಪ್ಪದು ಕಾಣಾ_ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ತನಗನ್ಯವಾದುದ ನೋಡಿದಡೆ ಭವಿಸಂಗ. ಸತ್ಯರು ಒಪ್ಪಿದುದನೊಪ್ಪದಿರ್ದಡೆ ಭವಿಸಂಗ. ಮಾಡಿಕೊಂಡ ವ್ರತವ ಮೀರಿದಡೆ ಭವಿಸಂಗ. ತಾ ಮಾಡಿದ ಭಕ್ತಿಯನಾಡಿಕೊಂಡಲ್ಲಿ ಭವಿಸಂಗ. ಇಂತಿವನರಿದಡೆ ಸದ್ಭಕ್ತಿ, ಕಲಿದೇವರದೇವಾ.
--------------
ಮಡಿವಾಳ ಮಾಚಿದೇವ
ತರ್ಕವ ನುಡಿವುದಕ್ಕೆ ಪರಸಮಯಿಯಲ್ಲ. ಕೃತ್ರಿಮ ನುಡಿವುದಕ್ಕೆ ಅಕೃತ್ಯನಲ್ಲ. ಮತ್ತೆ ಇವರ ನಿಂದಿಸುವುದಕ್ಕೆ ಬಂಧ ಮೋಕ್ಷದವನಲ್ಲ. ಇವರುವ ಅಂದಚಂದವ ಅಂತಿಂತೆಂಬುದಕ್ಕೆ ಉಭಯದ ಗೊಂದಳದವನಲ್ಲ. ಎನ್ನ ಅಂದದ ಇರವ ಕೇಳಲಿಕ್ಕೆ ನಿಮ್ಮಂಗವ ಹೇಳಿದೆನೈಸೆ. ಎನಗೆ ಎನ್ನಂಗೆ ನಿರುಪಮನ ಸಂಗ ಇನ್ನೆಂದಿಗೆ, ಎನ್ನ ಗೂಡಿನ ಒಡೆಯ ಗುಮ್ಮಟನಾಥ ಅಗಮ್ಯೇಶ್ವರಲಿಂಗ ?
--------------
ಮನುಮುನಿ ಗುಮ್ಮಟದೇವ
ತನುಮಂಡಲ ರಣಮಯವಾಯಿತ್ತು . ಕರಣಂಗಳ ಹಿಂಡು ಕೆದರಿತ್ತು. ತನುಮಂಡಲದರಸು ಹಿಂದುಮುಂದಾದ ಚಂಡಿಕ, ಚಂಡಿಕ ಪ್ರಚಂಡ ತಮಕೋದಂಡ ಮಾರ್ತಾಂಡಮಯ, ಸ್ವಯಕುಲ ಚಕ್ರವರ್ತಿ ಗೆದ್ದ, ಬಂಕೇಶ್ವರಲಿಂಗದೊಲುಮೆಯಿಂದ.
--------------
ಸುಂಕದ ಬಂಕಣ್ಣ
ತ್ರಾಹಿಮಾಂ ಪರಮೇಶ್ವರ ಜಯ ಭಕ್ತಿಜಾÕನಮಾಕಾರ ನೀನೆಯಯ್ಯ ಚೆನ್ನಬಸವಣ್ಣ. ಏಕೋದೇವ ದೇವಧರ್ಮ ಧರ್ಮಗುಣ ಗುಣಪ್ರಕಾಶ ಪ್ರಕಾಶ ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ. ನಿಮ್ಮಿಂದ ಪ್ರಾಣಂಗಸಂಬಂಧವಾಗಿ ನಿಮಗೆ ನಮೋ ನಮೋ ಎನುತಿರ್ದೆನಯ್ಯಾ ಚೆನ್ನಬಸವಣ್ಣ.
--------------
ಸಿದ್ಧರಾಮೇಶ್ವರ
ತನು ಮುಟ್ಟಿದ ಪದಾರ್ಥ ಲಿಂಗಾರ್ಪಿತವಲ್ಲ, ಮನ ಮುಟ್ಟಿದ ಪದಾರ್ಥ ಲಿಂಗಾರ್ಪಿತವಲ್ಲ, ಕಿವಿಗಳು ಕೇಳಿದ ಪದಾರ್ಥ ಲಿಂಗಾರ್ಪಿತವಲ್ಲ, ಕಂUಳು ನೋಡಿದ ಪದಾರ್ಥ ಲಿಂಗಾರ್ಪಿತವಲ್ಲ, ಘ್ರಾಣ ಸೋಂಕಿದ ಪದಾರ್ಥ ಲಿಂಗಾರ್ಪಿತವಲ್ಲ, ಜಿಹ್ವೆ ತಾಗಿದ ಪದಾರ್ಥ ಲಿಂಗಾರ್ಪಿತವಲ್ಲ. ಅಹುದೆಂಬುದ ನಡೆಯ (ನುಡಿಯ?), ಅಲ್ಲೆಂಬುದ ನುಡಿಯ, ಬೇಕು ಬೇಡೆಂಬುದಿಲ್ಲ, ಸಾವಯವೆಂಬುದಿಲ್ಲ. ನಿರವಯದಲ್ಲಿ ಸಕಲಭೋಗಂಗಳ ಭೋಗಿಸುವನು,
--------------
ಚನ್ನಬಸವಣ್ಣ
ತನುವಿಗೊಳಗಾದಾತ ಗುರುವೆ? ಮನಕ್ಕೊಳಗಾದಾತ ಲಿಂಗವೆ? ಧನಕ್ಕೊಳಗಾದಾತ ಜಂಗಮವೆ? ತನು-ಮನ-ಧನ ತನ್ನ ಮನಕ್ಕಲ್ಲದೆ ಗುರು-ಲಿಂಗ-ಜಂಗಮದಲ್ಲುಂಟೆ? ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ತತ್ಕಾಲವನರಿವ ಕುಕ್ಕುಟನ ಬಾಯ ತುತ್ತನಿಕ್ಕಿಸಿಕೊಂಡವನಾರಯ್ಯ? ಆ ತುತ್ತು ಮುತ್ತದವರ ಮುಕ್ತಿಯ ಬಲೆಗೀಡು ಮಾಡುವುದು. ತುತ್ತ ಮುಟ್ಟದೆ ಕುಕ್ಕುಟನ ಕುಲವ ಕರೆ. ಕರೆದಲ್ಲಿ ಬಂದು ನಿಂದುಳುಮೆ, ಅದರಂಗವ ಆರೆಂದರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ತನುವಿಗೆ ರುಜೆಯಡಸಿದಲ್ಲಿ ಆತ್ಮಕ್ಕೆ ಅವಗಡೆ ಬಂದಿತ್ತು. ಅದು ಉಭಯದ ಕೇಡೊ ? ಒಂದರ ಕೇಡೊ ? ಎಂಬುದನರಿತಲ್ಲಿ , ಲಿಂಗ ಜಂಗಮದ ಪ್ರಸಾದವೊಂದೆಯಾಯಿತ್ತು. ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವನರಿಯಲಾಗಿ, ಸ್ವಯಂಭವಾಯಿತ್ತು.
--------------
ಶಿವಲೆಂಕ ಮಂಚಣ್ಣ
ತಮದ ಗುರಿಯ ಜ್ಯೋತಿಯ ಕುಡಿವೆಳಗಿನ ಸರದಲ್ಲಿಎಸಲಿಕ್ಕಾಗಿ, ಗುರಿಯಲ್ಲಿಯೆ ಸರ ಪರಿಹರಿಸಿ, ಆ ಸರದಲ್ಲಿಯೇ ತಮ ಪರಿಹರಿಸಿತ್ತು. ಲಕ್ಷ ್ಯದಲ್ಲಿಯೆ ಚಿತ್ತ, ಚಿತ್ತದಲ್ಲಿಯೆ ಲಕ್ಷ ್ಯ ಅಲಕ್ಷ ್ಯವಾಯಿತ್ತು. ಶಂಭುವಿನಿಂದಿತ್ತ ಸ್ವಯಂಭವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ತುರುಗಾಹಿ ರಾಮಣ್ಣ

ಇನ್ನಷ್ಟು ...
-->