ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ದಿನಚರಿಯೆಂಬ ಪಟ್ಟಣದಲ್ಲಿ ಕನಕರತಿಯೆಂಬರಸು, ಮನಸಿಜನೆಂಬ ಪ್ರಧಾನ, ಕನಸಕಂಡಡೆ ಅರಿವ ತಮಸೂನು ತಳವಾರ. ಇವರೆಲ್ಲರ ವಂಚಿಸಿ ಅರಸಿನ ಹೆಂಡತಿ ಹೆಂಡವ ಕುಡಿವವನ ಅಂಗದಲ್ಲಿ ಸಿಕ್ಕಿದಳು. ಪ್ರಧಾನ ಕಂಡ; ಅರಸು ತಳವಾರ ಕಂಡುದಿಲ್ಲ. ಮನಸಿಜ ಕಂಡು ಬದುಕಿದೆ ಹೋಗೆಂದ. ಅರಸಿಗೆ ಕೂಪನಾದ; ಮಾನಹಾನಿಗೆ ಕೇಡಿಲ್ಲದಂತೆ. ಇಂತೀ ಭೇದವನರಿ, ಪಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ದ್ಥೀರಪ್ರಸಾದ ವೀರಪ್ರಸಾದ ಆವೇಶಪ್ರಸಾದ. ಇಂತೀ ತ್ರಿವಿಧಪ್ರಸಾದವ ಕೊಂಬಲ್ಲಿ ಅಂಗವರತು ಇದಿರಿಂಗೆ ಭಯಭಂಗವಿಲ್ಲದೆ ಬೆಗಡು ಜಿಗುಪ್ಸೆ ಚಿಕಿತ್ಸೆ ತಲೆದೋರದೆ ಮಹಾಕುಂಭಘೃತಂಗಳ ಕೊಂಡಂತೆ. ಮಹಾಮೇರುವೆಯ ಅಲ್ಪಮೊರಡಿ ದ್ಥಿಕ್ಕರಿಸಿ ಅಲ್ಲಿಗೆ ಹೋದಡೆ ಅದರ ತಪ್ಪಲಲ್ಲಿಯೆ ತಾನಡಗಿದಂತೆ. ಈ ಗುಣ ದೃಷ್ಟಪ್ರಸಾದಿಯ ಕಟ್ಟಿನ ಭೇದ. ದಹನ ಚಂಡಿಕೇಶ್ವರಲಿಂಗವು ತಾನಾದ ಅಂಗದ ತೆರ.
--------------
ಪ್ರಸಾದಿ ಲೆಂಕಬಂಕಣ್ಣ
ದ್ರವ್ಯ ನೀನು ದ್ರವ್ಯಾರ್ಥ ನೀನು; ಪದ ನೀನು, ಪದಾರ್ಥ ನೀನು. ಸಕಲ ನೀನು ನಿಷ್ಕಲ ನೀನು. ಸಕಲ ನಿಷ್ಕಲಾತ್ಮಕ ಪರಿಪೂರ್ಣ ಶಿವನಲ್ಲದೆ ಅನ್ಯ ಭಿನ್ನಭಾವ ಉಂಟೆ ? ಸಕಲ ನಿಷ್ಕಲ ತತ್ವಂಗಳು; ನಿಮ್ಮೊಳಗೆ ಸಮಾಸವನೆಯ್ದುವೆವೆಂದು ತಮ್ಮ ತಮ್ಮ ಅಂಗದ ಮೇಲೆ ಸರ್ವಪದಾರ್ಥಂಗಳ ಹೆಸರಿಟ್ಟು ಹೊತ್ತುಕೊಂಡೈದಾವೆ ನೋಡಾ ! ಅದೆಂತೆಂದಡೆ: ``ದ್ರವ್ಯಾರ್ಥಂ ಚ ಮಹಾದೇವೋ ದ್ರವ್ಯರೂಪೋ ಮಹೇಶ್ವರಃ ಇತಿ ಮೇ ಭೇದನಂ ನಾಸ್ತಿ ಸರ್ವರೂಪಸ್ಸದಾಶಿವಃ'' _ ಇಂತೆಂದುದಾಗಿ_ನಾದ ನೀನು, ಬಿಂದು ನೀನು, ಕಳೆ ನೀನು, ಕಳಾತೀತ ನೀನು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ದೇಶಕ್ಕೆ ಹೋಗುವ ಮಾರ್ಗದಲ್ಲಿ ಒಬ್ಬ ಭಾಷೆಗಳ್ಳ ಕುಳಿತು ಕಂಡಕಂಡವರ ಹಾಸ್ಯ ಮಾಡುತಿಪ್ಪ ನೋಡಾ. ಇದು ಕಾರಣ ಹೆತ್ತ ತಾಯ ಶಿಶುವು ನುಂಗಿ ಆ ಭಾಷೆಗಳ್ಳನ ಕೊಂದು, ದೇಶಕ್ಕೆ ಹೋದ ಸೋಜಿಗವ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ದೀಕ್ಷೋಪದೇಶವ ಮಾಡಿ ಗುರುವಿನ ಕಣ್ಣ ಕಳೆದು ತಲೆ ಹೊಡೆದು ಮೂರು ಹಣವ ಕೊಂಡೆ. ದೀಕ್ಷೋಪದೇಶವ ಹಡೆದ ಭಕ್ತರ ನಾಲಗೆಯ ಕೊಯ್ದು ಕೈ ಮುರಿದು ಮೂರು ಹಣವ ಕೊಂಡೆ. ಈ ಗುರುಶಿಷ್ಯರುಭಯರ ಸಂಯೋಗಕಾಲದಲ್ಲಿರುವ ಸಾಕ್ಷಿಗಣಂಗಳ ಮನೆಯ ಸುಟ್ಟು ಮೂರು ರತ್ನವ ಕೊಂಡೆ. ಇಂತೀ ಮೂವರ ಹಣವ ತಂದು ಗುರುವಿಗೆ ಕೊಟ್ಟು ಕಾಯಕವ ಮಾಡುತ್ತಿರ್ದೆನಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ದಾರಿಮೂರರ ತೋರಿಕೆಗೆ ಗೋಚರವಿರಹಿತ ನಿರವಯಾನಂದ ಪರಬ್ರಹ್ಮವನರಿದು ತೆರಹಿಲ್ಲದಿರ್ಪ ಶರಣ ತನ್ನ ವಿನೋದಕಾರಣ ನೋಡಿ ಮಾಡಿತ್ತಡೆ ಜಡನಲ್ಲ ಕಾಣಾ. ಸಮ್ಯಕ್‍ಜ್ಞಾನಾನಂದಪರಿಪೂರ್ಣನು ನೋಡಿ ಮಾಡೀಯದಿರ್ದಡೆ ಶೂನ್ಯನಲ್ಲ ಕಾಣಾ. ಸತ್ಕ್ರಿಯಾಂಗಪರಿಪೂರ್ಣನು ಅಂತಿಂತೆನ್ನಲೆಡೆಯಿಲ್ಲ ಗುರುನಿರಂಜನ ಚನ್ನಬಸವಲಿಂಗವಾಗಿರ್ದ ನಿಜರೂಪಕ್ಕೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ದಾನಿಯಾದಡೇನು? ಅವನ ಬೇಡಿದಲ್ಲದೆ ಅರಿಯಬಾರದು. ರಣರಂಗ ದ್ಥೀರನಾದಡೇನು ? ಅಲಗು ಅಲಗು ಹಳಚಿದಲ್ಲದೆ ಅರಿಯಬಾರದು. ಗೆಳೆಯನಾದಡೇನು ? ಅಗಲಿದಲ್ಲದೆ ಅರಿಯಬಾರದು. ಹೇಮವಾದಡೇನು ? ಒರೆಗಲ್ಲುಯಿಲ್ಲದೆ ಅರಿಯಬಾರದು. ನಿನ್ನನರಿದೆಹೆನೆಂದಡೆ : ಸಂಸಾರ ಸಾಗರವ ದಾಟಿದಲ್ಲದೆ ಅರಿಯಬಾರದು ಕಾಣಾ ಗೊಹೇಶ್ವರಪ್ರಿಯ ನಿರಾಳಲಿಂಗ.
--------------
ಗುಹೇಶ್ವರಯ್ಯ
ದೇಹವೆಂಬ ದೇಗುಲದೊಳಗೆ ಭಾವಸಿಂಹಾಸನವ ಮಾಡಿ, ಜೀವದೊಡೆಯನ ಪೂಜಿಸಬಲ್ಲಡೆ ದೇವರಿಗೆ ದೇವರೆಂಬೆನಯ್ಯಾ ಅಖಂಡೇಶ್ವರಾ !
--------------
ಷಣ್ಮುಖಸ್ವಾಮಿ
ದಾಸನಂತೆ ತವನಿದ್ಥಿಯ ಬೇಡುವನಲ್ಲ, ಚೋಳನಂತೆ ಹೊನ್ನಮಳೆಯ ಕರೆಸೆಂಬವನಲ್ಲ, ಅಂಜದಿರು ಅಂಜದಿರು ಅವರಂದದವ ನಾನಲ್ಲ. ಎನ್ನ ತಂದೆ, ಕೂಡಲಸಂಗಮದೇವಾ, ಸದ್ಭಕ್ತಿಯನೆ ಕರುಣಿಸೆನಗೆ.
--------------
ಬಸವಣ್ಣ
ದಿಟ್ಟ ಲಿಂಗವ ತನ್ನ ಇಷ್ಟ ಕರಸ್ಥಳದಲ್ಲಿಟ್ಟು ಬಟ್ಟೆಗಟ್ಟಿದನೆರಡು ದೆಸೆದೆಸೆಗಾಗಿ, ಅವ್ವ ನೀನೊಳಗಾಗಿ ಸೀಮೆ ಸಾಯುಜ್ಯದಲ್ಲಿ ಸೊಲ್ಲನಿಟ್ಟಾತ ಗುರುವವ್ವಾ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ದೇವಸಹಿತ ಭಕ್ತ ಮನೆಗೆ ಬಂದಡೆ ಕಾಯಕವಾವುದೆಂದು ಬೆಸಗೊಂಡೆನಾದಡೆ ನಿಮ್ಮಾಣೆ ! ನಿಮ್ಮ ಪುರಾತರಾಣೆ ! ತಲೆದಂಡ ! ತಲೆದಂಡ ! ಕೂಡಲಸಂಗಮದೇವಾ, ಭಕ್ತರಲ್ಲಿ ಕುಲವನರಸಿದಡೆ ನಿಮ್ಮ ರಾಣಿವಾಸದಾಣೆ. 453
--------------
ಬಸವಣ್ಣ
ದೇವಸಾಲೆಯಲ್ಲಿ ದಿವ್ಯಮೂರ್ತಿಯ ಕಂಡೆನಯ್ಯಾ. ದೇವಸಾಲೆಯು ಅಳಿವುದಲ್ಲ; ದಿವ್ಯಮೂರ್ತಿಯು ಕೆಡುವುದಲ್ಲ. ಕೇಡಿಲ್ಲದ ಪರವಸ್ತು ತಾನೆಂದರಿದಾತನಲ್ಲದೆ, ಶಿವಶರಣನಲ್ಲ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ದುಃಖ ಹೊಯಿತ್ತು ತನ್ನಲ್ಲಿ ತಾನಿಲ್ಲದೇ. ಸುಖ ನಿಂದುದು ತನ್ನಲ್ಲಿ ತಾನು ನಿಜವಾಗಿ, ಭ್ರಾಂತುದೋರದೆ, ಸಕಳೇಶ್ವರದೇವಾ ತಾನಾಗಿ ನಿಂದವಂಗೆ.
--------------
ಸಕಳೇಶ ಮಾದರಸ
ದಾಸಯ್ಯನೆನಗೆ ಸಾಲೋಕ್ಯನಯ್ಯಾ, ಚೆನ್ನಯ್ಯನೆನಗೆ ಸಾಮೀಪ್ಯನಯ್ಯಾ. ಕಕ್ಕಯ್ಯನೆನಗೆ ಸಾರೂಪ್ಯನಯ್ಯಾ. ಮಾಚಯ್ಯನೆನಗೆ ಸಾಯುಜ್ಯನಯ್ಯಾ. ದಾಸಯ್ಯನೊಕ್ಕುದ ಕೊಂಡೆನು. ಚನ್ನಯ್ಯನ ಮಿಕ್ಕುದ ಕೊಂಡೆನು. ಕಕ್ಕಯ್ಯನುಂಡು ಮಿಕ್ಕುದ ಕಾದು ಕೊಂಡೆನು. ಮಾಚಯ್ಯನ ಜ್ಞಾನಪ್ರಸಾದವ ಕೊಂಡೆನು. ಪುರಾತರೊಳಗಾಗಿ ಬಸವಣ್ಣನ ಡಿಂಗರಿಗ ಚನ್ನಬಸವಣ್ಣನ ಹಳೆಯನೆಂದು ತಮ್ಮೊಕ್ಕುದನಿಕ್ಕಿ ಸಲಹಿದರು ಕಾಣಾ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ದೇವರದೇವ ನೀನೆಂದೆನಿಸಿಕೊಂಡೆ; ಬಾಣನ ಬಾಗಿಲ ಕಾಯ್ವರೇನಯ್ಯಾ ? ನಿತ್ಯತೃಪ್ತ ನೀನೆನಿಸಿಕೊಂಡೆ; ಚೆನ್ನನ ಮನೆಯಲುಂಬರೇನಯ್ಯಾ ? ಕರುಣಾಕರ ನೀನೆಂದೆನಿಸಿಕೊಂಡೆ; ಸಿರಿಯಾಳನ ಮಗನ ಬೇಡುವರೇನಯ್ಯಾ ? ನಿಮ್ಮ ಮಹಿಮೆಯ ನೀವೆ ಬಲ್ಲಿರಿ, ಎನ್ನನುದ್ಭರಿಸಯ್ಯಾ ಶಂಭುಜಕ್ಕೇಶ್ವರಾ.
--------------
ಸತ್ಯಕ್ಕ

ಇನ್ನಷ್ಟು ...
-->