ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ನಿಮ್ಮನರಿವರನರಿವೆನಯ್ಯಾ. ನಿಮ್ಮ ಮರೆವರ ಮರೆವೆನಯ್ಯಾ. ಮಾಯಿದೇವಿಗೆ ಮತವ ಕೊಟ್ಟು ಎಲ್ಲ ಹಿರಿಯರ ಜರಿವೆಯಯ್ಯಾ. ಇವೆಲ್ಲವ ತೋರಿ ನೀ ಗೆಲುವೆಯಯ್ಯಾ ಎನ್ನ ಕಪಿಲಸಿದ್ಧಮಲ್ಲಿನಾಥಯ್ಯಾ.
--------------
ಸಿದ್ಧರಾಮೇಶ್ವರ
ನಿಷ್ಠೆಯುಳ್ಳಾತಂಗೆ ನಿತ್ಯನೇಮದ ಹಂಗೇಕೆ ? ಸತ್ಯವುಳ್ಳಾತಂಗೆ ತತ್ವವಿಚಾರದ ಹಂಗೇಕೆ ? ಅರಿವುಳ್ಳಾತಂಗೆ ಅಗ್ಘವಣಿಯ ಹಂಗೇಕೆ ? ಮನಶುದ್ಧವುಳ್ಳವಂಗೆ ಮಂತ್ರದ ಹಂಗೇಕೆ ? ಭಾವ ಶುದ್ಧವುಳ್ಳವಂಗೆ ಹೂವಿನ ಹಂಗೇಕೆ ? ಕೂಡಲಚೆನ್ನಸಂಗಯ್ಯಾ, ನಿಮ್ಮನರಿದಾತಂಗೆ ನಿಮ್ಮ ಹಂಗೇಕೆ ?
--------------
ಚನ್ನಬಸವಣ್ಣ
ನಾ ಹುಟ್ಟಿದ ದ್ವಾದಶವರ್ಷಕ್ಕೆ ಎನ್ನ ತಂದೆ ದ್ವಾದಶಮಂತ್ರವ ಕಲಿಸಿದ. ಒಂದು ಮಂತ್ರದಿಂದ ಮತ್ರ್ಯಲೋಕವ ಸುಟ್ಟೆ. ಒಂದು ಮಂತ್ರದಿಂದ ಪಾತಾಳಲೋಕವ ಸುಟ್ಟೆ. ಒಂದು ಮಂತ್ರದಿಂದ ಸ್ವರ್ಗಲೋಕವ ಸುಟ್ಟೆ. ಮೂರು ಮಂತ್ರದಿಂದ ಮುಪ್ಪುರದರಸುಗಳ ಕೊಂದೆ. ಆರು ಮಂತ್ರದಿಂದ ಆರು ವರ್ಣವ ಸುಟ್ಟೆ. ಇಂತೀ ಮಂತ್ರವ ಮಂತ್ರಿಸುವ ವೇಳೆಯಲ್ಲಿ ನಾ ಸತ್ತು ಕಾಯಕವ ಮಾಡುತಿರ್ದೆನಯ್ಯ ಕಾಡನೊಳಗಾದ ಶಂಕÀರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ನೀವು ನಿಮ್ಮ ಸ್ವಲೀಲೆಯಿಂದೆ ಜಗದಲೀಲಾ ವೈಭವಂಗಳ ನಟಿಸಬೇಕೆಂದು ನಿಮ್ಮಲ್ಲಿ ನೆನಹುದೋರಲು, ಆ ನೆನಹು ನಿರ್ಧರಿಸಿ, ಚಿತ್ತೆನಿಸಿತ್ತು. ಆ ಚಿತ್ತಿನಿಂದೆ ಚಿನ್ನಾದ ಚಿದ್ಬಿಂದು ಚಿತ್ಕಳೆಗಳೊಗೆದವು. ಆ ಚಿನ್ನಾದ ಚಿದ್ಬಿಂದು ಚಿತ್ಕಳೆ ಆ ಮೂಲಚಿತ್ತು ಸಹವಾಗಿ ಗಟ್ಟಿಗೊಂಡು ಅಖಂಡ ಗೋಳಕಾಕಾರ ತೇಜೋಮೂರ್ತಿಯಪ್ಪ ಮಹಾಲಿಂಗವಾಯಿತ್ತು. ಆ ಮಹಾಲಿಂಗವೇ ಪಂಚಮುಖವನೈದಿಹ ಸದಾಶಿವನೆಂದೆನಿಸಿತ್ತು. ಆ ಸದಾಶಿವನಿಂದೆ ಬ್ರಹ್ಮ-ವಿಷ್ಣು-ರುದ್ರರೆಂಬ ತ್ರೈಮೂರ್ತಿಗಳುದಿಸಿದರು. ಆ ತ್ರೈಮೂರ್ತಿಗಳಿಂದೆ ಸ್ವರ್ಗ-ಮತ್ರ್ಯ-ಪಾತಾಳಂಗಳೆಂಬ ತ್ರೈಲೋಕಂಗಳು ಜನಿಸಿದವು. ಆ ತ್ರೈಲೋಕಂಗಳ ಮಧ್ಯದಲ್ಲಿ ಸಚರಾಚರ ಹೆಣ್ಣುಗಂಡು ನಾಮ ರೂಪ ಕ್ರಿಯಾದಿ ಸಕಲ ವಿಸ್ತಾರವಾಯಿತ್ತು. ಇಂತಿವೆಲ್ಲವೂ ನಿಮ್ಮ ನೆನಹುಮಾತ್ರದಿಂದಾದವಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ನಿಶ್ಚಯಿಸಿಕೊಂಡಲ್ಲಿಯೆ ನಿಜತತ್ವ. ಉತ್ತರ ಪೂರ್ವ ಉಭಯದ ಕಕ್ಷೆಯ ಬಿಟ್ಟಲ್ಲಿಯೆ ನಿತ್ಯತ್ವ. ಅನಿತ್ಯತ್ವವೆಂಬ ಗೊತ್ತ ಮರೆದಲ್ಲಿಯೆ, ಕಾಮಧೂಮ ಧೂಳೇಶ್ವರನು ಸಚ್ಚಿದಾನಂದ.
--------------
ಮಾದಾರ ಧೂಳಯ್ಯ
ನಿರಂಜನಾತೀತಷಟ್‍ಸ್ಥಲಬ್ರಹ್ಮ ಅಂಗವಾಗಿ ಆ ನಿರಂಜನಾತೀತ ಷಟ್‍ಸ್ಥಲಬ್ರಹ್ಮವನೊಡಗೂಡಿದ ಮಹಾಶರಣಂಗೆ ನಮೋ ನಮೋ ಎಂದು ಬದುಕಿದೆನು ಕಾಣಾ ಅಪ್ರಮಾಣಕೂಡಲಸಂಗಮದೇವಾ. || 661 ||
--------------
ಬಾಲಸಂಗಯ್ಯ ಅಪ್ರಮಾಣ ದೇವ
ನಿಂದಡೆ; ಹೊನ್ನು ಹೆಣ್ಣು ಮಣ್ಣು ಹಿಡಿದು ನೆಟ್ಟನೆ ಭಕ್ತನಾಗಿ ನಿಲ್ಲಬೇಕು. ಸುಳಿದಡೆ; ಹೊನ್ನು ಹೆಣ್ಣು ಮಣ್ಣು ಬಿಟ್ಟು ನೆಟ್ಟನೆ ಜಂಗಮವಾಗಿ ಸುಳಿಯಬೇಕು. ನಿಂದು ಭಕ್ತನಲ್ಲದ, ಸುಳಿದು ಜಂಗಮವಲ್ಲದ ಉಭಯಭ್ರಷ್ಟರನೇನೆಂಬೆ ಗುಹೇಶ್ವರಯ್ಯಾ ?
--------------
ಅಲ್ಲಮಪ್ರಭುದೇವರು
ನಿಮ್ಮ ನೆನೆವುತ್ತಿದ್ದಿತ್ತು_ನೆನೆವ ಮುಖವಾವುದೆಂದರಿಯದೆ, ಪೂಜೆಯ ಪೂಜಿಸುತ್ತಿದ್ದಿತ್ತು_ಪೂಜೆಯ ಮುಖವಾವುದೆಂದರಿಯದೆ; ಆಡಿ ಹಾಡಿ ಬೇಡುತ್ತಿದ್ದಿತ್ತು_ಬೇಡುವ ಮುಖವಾವುದೆಂದರಿಯದೆ; ಕಾಯದಲ್ಲಿ ಇಲ್ಲ, ಜೀವದಲ್ಲಿಇಲ್ಲ, ಭಾವದಲ್ಲಿ ಇಲ್ಲ; ಭರಿತವು ಅದು ತಾನಪ್ಪುದು. ತಾನಲ್ಲದುದೇನ ಹೇಳುವೆ ಕೌತುಕವ? ಗುಹೇಶ್ವರನೆಂಬ ಹೆಸರೊಳಗಿದ್ದುದ ಬೆಸಗೊಂಬವರಿಲ್ಲ ನಿರಾಳದ ಘನವ !
--------------
ಅಲ್ಲಮಪ್ರಭುದೇವರು
ನಾನಾವೇಳೆಯಲ್ಲಿ ಸಹಸ್ರವೇಳೆಯಲ್ಲಿ ಬರುವದು ದುರ್ಲಾಭ. ಬಂದ ಬಳಿಕ ಶಿವಭಕ್ತಜನ್ಮ ಸಾಧ್ಯವಾಯಿತು. ಶಿವಭಕ್ತ ಜನ್ಮದಲ್ಲಿ ಬಂದು ಶಿವಲಿಂಗೈಕ್ಯರ ನಿಂದೆಮಾಡಿ ಕೆಡದಿರು ಕೆಡದಿರು. ಎಲೋ ವೇಷಧಾರಿಗಳಿರಾ, ಶಿವಭಕ್ತ ಬ್ರಹ್ಮವೆಂಬುದು, ಶಿವನ ಸಾಕಾರವೆ ಜಂಗಮದೇವ. ಇಂತೆಂಬ ಉಭಯಭೇದ ನಿಮಗೆ ತಿಳಿಯದು. ವೇಷಾಧಾರಿಗಳು ನೀವು ಕೇಳಿರೋ, ಶುನಕ ಬೆಟ್ಟಕ್ಕೆ ಬೊಗಳಿದಂತೆ ಭಕ್ತಂಗೆ ಜಾತಿಸೂತಕವುಂಟೆ ಎಂದ ನಿಮ್ಮ ಶರಣ ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ನಾನಾ ಭೇದಂಗಳಲ್ಲಿ ಷಡ್ದರುಶನವ ಹೊಕ್ಕು ತಿಳಿದಡೂ ಶ್ರುತಿ ವೇದ ಶಾಸ್ತ್ರ ಪುರಾಣ ಆಗಮಂಗಳ ಕಲಿತಡೂ ಮೂರುಮಲದ ಭೇದವನರಿತು ಬಿಡುಮುಡಿಯಲ್ಲಿ ಕಳೆದುಳಿಯಬೇಕು. ಇದು ಪ್ರಸಿದ್ಧವಪ್ಪ ತೆರ. ಇದು ಸಂಗನಬಸವಣ್ಣನ ಸಾಕ್ಷಿಯಾಗಿ ಬ್ರಹ್ಮೇಶ್ವರಲಿಂಗವ ಕೂಡಬೇಕು.
--------------
ಬಾಹೂರ ಬೊಮ್ಮಣ್ಣ
ನಿಂದಕರು ನಿಂದಿಸಿದರೆ ಸ್ವಯಜ್ಞಾನಿ ಅಂಜುವನೇನಯ್ಯ ? ಆ ನಿಂದಕನ ಅಂತರಂಗದಲ್ಲಿ ಅಹಂಕಾರನೆಂಬ ಕೋಣ ಹುಟ್ಟಿ, ಜ್ಞಾನಿಗಳೆಂದರಿಯದೆ, ಬಾಯಿಗೆ ಬಂದಂತೆ ನುಡಿವ ತರಕಿಮೂಳರ ಎನಗೊಮ್ಮೆ ತೋರದಿರಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ನಿರಾಳದಿಂದ ಸಹಜವಾಯಿತ್ತು. ಸಹಜದಿಂದ ಸೃಷ್ಟಿಯಾಯಿತ್ತು. ಸೃಷ್ಟಿಯಿಂದ ಸಂಸಾರವಾಯಿತ್ತು. ಸಂಸಾರದಿಂದ ಅಜಾÕನವಾಯಿತ್ತು. ಆಜಾÕನದಿಂದ ಬಳಲುವ ಜೀವರ, ಬಳಲಿಕೆಯ ತೊಲಗಿಸಲು ಜಾÕನವಾಯಿತ್ತು. ಜಾÕನದಿಂದಲಾಯಿತ್ತು ಗುರುಕರುಣ. ಗುರುಕರುಣದಿಂದಲಾಯಿತ್ತು ಸುಮನ. ಸುಮನದಿಂದಲಾಯಿತ್ತು ಶಿವಧ್ಯಾನ. ಶಿವಧ್ಯಾನದಿಂದಲಾಯಿತ್ತು ನಿರ್ದೇಹ ನಿರ್ದೇಹದಿಂದಲಾಯಿತ್ತು ಸಾಯುಜ್ಯ. ಸಾಯುಜ್ಯದಿಂದಲಾಯಿತ್ತು ಸರ್ವಶೂನ್ಯ. ಆ ಸರ್ವಶೂನ್ಯದಲ್ಲೊಡಗೂಡಿ ನಿಂದಾತಂಗೆ, ಮರಳಿ ಜನ್ಮ ಉಂಟೆ ಹೇಳಾ?, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ನಿವೈತ್ತಿ ಕಲೆ ಪ್ರತಿಷ್ಠಾಕಲೆ ತಾನಿರ್ದಲ್ಲಿ, ವಿದ್ಯಾಕಲೆ ಶಾಂತಿಕಲೆ ತಾನಿರ್ದಲ್ಲಿ, ಶಾಂತ್ಯತೀತಕಲೆ ಶಾಂತ್ಯತೀತೋತ್ತರಕಲೆ ತಾನಿರ್ದಲ್ಲಿ, ಕರ್ಮಸಾದಾಖ್ಯ ಕರ್ತೃಸಾದಾಖ್ಯ ತಾನಿರ್ದಲ್ಲಿ, ಮೂರ್ತಿಸಾದಾಖ್ಯ ಅಮೂರ್ತಿಸಾದಾಖ್ಯ ತಾನಿರ್ದಲ್ಲಿ , ಶಿವಸಾದಾಖ್ಯ ತಾನಿರ್ದಲ್ಲಿ, ಮಹಾಸಾದಾಖ್ಯ ತಾನಿರ್ದಲ್ಲಿ . ಇವೆಲ್ಲಾ ತನ್ನ ಮೂರ್ತಿಯಿಂದಾದುದಲ್ಲದೆ ಮತ್ತೊಂದು ಮೂರ್ತಿಯಿಂದಾದುದಿಲ್ಲ. ತಾನೆ ಶಿವತತ್ವ ತಾನೆ ಪರತತ್ವ ತಾನೆ ಪರಾತ್ಪರತತ್ವ ತನ್ನಿಂದದ್ಥಿಕವಪ್ಪ ಘನವೊಂದಿಲ್ಲವಾಗಿ ತಾನೆ ನಿರಾಲಂಬ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ನೀರೊಳಗಣ ಕಿಚ್ಚು ತಾಯಲ್ಲಿ ಅಡಗಿತ್ತು. ಶಿಲೆಯೊಳಗಣ ಕಿಚ್ಚು ತಾಯನುಳುಹಿ, ಇದಿರ ಸುಟ್ಟಿತ್ತು. ಮರದೊಳಗಣ ಕಿಚ್ಚು ಮರನನೂ ಸುಟ್ಚು, ಇದಿರನೂ ಸುಟ್ಟು, ಪರಿಸ್ಪಂದಕ್ಕೆ ಹರಿಯಿತ್ತು. ಇಂತೀ ತ್ರಿವಿಧಭೇದದಿಂದ, ಜ್ಞಾನದ ಭೇದವನರಿ ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
--------------
ಮೆರೆಮಿಂಡಯ್ಯ
ನೀರಿಲ್ಲದ ಒರಳಿಂಗೆ ನೆಳಲಿಲ್ಲದ ಒನಕೆ ! ರೂಹಿಲ್ಲದ ನಾರಿಯರು ಬೀಜವಿಲ್ಲದಕ್ಕಿಯ ತಳಿಸುತ್ತಲಿ ಬಂಜೆಯ ಮಗನ ಜೋಗುಳವಾಡುತ್ತೈದಾರೆ, ಉರಿಯ ಚಪ್ಪರವನಿಕ್ಕಿ_ ಗುಹೇಶ್ವರನ ಕಂದನು ಲೀಲೆಯಾಡಿದನು !
--------------
ಅಲ್ಲಮಪ್ರಭುದೇವರು

ಇನ್ನಷ್ಟು ...
-->