ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಪರಿಯಾಣವೆ ಭಾಜನವೆಂಬರು; ಪರಿಯಾಣ ಭಾಜನವಲ್ಲ, ಲಿಂಗಕ್ಕೆ ತನ್ನ ಮನವೆ ಭಾಜನ. ಪ್ರಾಣವನು ಬೀಸರವೋಗಲೀಯದೆ ಮೀಸಲಾಗರ್ಪಿಸಬಲ್ಲಡೆ ಕೂಡಿಕೊಂಡಿಪ್ಪ, ನಮ್ಮ ಕೂಡಲಸಂಗಮದೇವ.
--------------
ಬಸವಣ್ಣ
ಪಾದವಿಲ್ಲದ ಗುರುವಿಂಗೆ ತಲೆಯಿಲ್ಲದ ಶಿಷ್ಯನು. ಅನಾಚಾರಿ ಗುರುವಿಂಗೆ ವ್ರತಗೇಡಿ ಶಿಷ್ಯನು. ಈ ಗುರುಶಿಷ್ಯರಿಬ್ಬರೂ ಸತ್ತ ಸಾವ, ನಿಮ್ಮಲ್ಲಿ ಅರಸುವೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಪಂಚಾಕ್ಷರಿಯ ಮಣಿಮಾಲೆಯಲ್ಲಿ ಸಂಚಿತ ಪ್ರಾರಬ್ಧ ಕರ್ಮವೆಂಬ ದಾರ ನಡುವೆ ಸಿಕ್ಕಿ, ಮಣಿಯ ತಿರುಗಾಡಿಸುತ್ತದೆ. ದಾರವ ಹರಿದು ಮಣಿಯ ದ್ವಾರವ ಮುಚ್ಚಿ ಉಲುಹಡಗಿ ನಿಲಬೇಕು, ಸದಾಶಿವಮೂರ್ತಿಲಿಂಗವನರಿವುದಕ್ಕೆ.
--------------
ಅರಿವಿನ ಮಾರಿತಂದೆ
ಪ್ರಾಣಲಿಂಗಸಂಬಂದ್ಥಿಯಾದ ಮಹಾತ್ಮನು ಅರಿಷಡ್ವರ್ಗಂಗಳರಿಯ, ಕ್ಷುತ್ತು ಪಿಪಾಸು ಶೋಕ ಮೋಹ ಜರೆ ಮರಣ ಗುಣತ್ರಯದೊಳೊಂದಿ ನಿಲ್ಲ. ತನುತ್ರಯ ಮಲತ್ರಯ ಈಷಣತ್ರಯ ಜೀವತ್ರಯ ಅವಸ್ಥಾತ್ರಯವೆಂಬ ಪಂಚದಶ ಮಾಯಾಪಟಲ ಹರಿದು ಮರೆದು ಮಹಾಘನ ಬೆಳಗಿನ ಸುಖವ ಸುಗ್ಗಿಯೊಳಿರ್ದು ಪ್ರಾಣಲಿಂಗವನರ್ಚಿಸುತ್ತಿಹನು ಭಕ್ತಿತ್ರಯಗೂಡಿ ಗುರುನಿರಂಜನ ಚನ್ನಬಸವಲಿಂಗದಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಪಂಚಗೋಮಯವ ತಂದು ಪಂಚಪ್ರಣವ ಶಿಖಾಗ್ನಿಯಿಂದೆ ದಹಿಸಿ, ವಂಚನೆಯಳಿದುಳಿದು ವರ್ಮವರಿದು ಸ್ಥಾನವು ಧೂಳನ ಧಾರಣವಾದ ಮಹಾಘನಮಹಿಮ ಶಿವಶರಣಂಗೆ ನಮೋ ನಮೋ ಎಂಬೆನಯ್ಯಾ ನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಪಂಚಭೂತವಂಗವಾಗಿಪ್ಪ ಆತ್ಮಂಗೆ ಪಂಚೇಂದ್ರಿಯಂಗಳೇ ಮುಖಂಗಳು, ಪಂಚಕರಣಂಗಳೇ ಕೈಗಳು, ಪಂಚವಿಷಯಂಗಳೇ ಪೂಜೆ, ಪಂಚಪದಾರ್ಥವೇ ಭೋಗ. ಇದನೆಲ್ಲವ ನಿಜಮೂರ್ತಿಯಪ್ಪ ಘನಕ್ಕೆಯ್ದಿಸಬಲ್ಲಡೆ, ಆತ ಸರ್ವನಿರ್ವಾಣಿ, ಸಕಲನಿಷ್ಕಲಾತ್ಮಕನು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಪ್ರಥಮಪಾದದಲ್ಲಿ ಒಂಕಾರಕ್ಕೆ ನಕಾರ ಬೀಜಾಕ್ಷರ. ಆ ನಕಾರ ಉಭಯ ಕೂಡಿದ ಮತ್ತೆ ಮಕಾರ ಬೀಜಾಕ್ಷರ. ಇಂತೀ ತ್ರಿವಿಧಾಕ್ಷರ ಒಡಗೂಡಿ ಒಡಲಾದ ಮತ್ತೆ ಶಿಕಾರ ಬೀಜಾಕ್ಷರ. ಇಂತೀ ಶಿಕಾರ ಮೂರನೊಡಗೂಡಿ ನಾಲ್ಕೆಂಬಲ್ಲಿಗೆ ಯಕಾರ ಬೀಜಾಕ್ಷರ. ಇಂತೀ ಪಂಚಾಕ್ಷರಿಯ ಮೂಲಮಂತ್ರ ಸಂಬಂಧವಾಗಲಾಗಿ ಪ್ರಣಮದ ಬೀಜ. ಆ ಪ್ರಣಮವು `ಒಂ ಭರ್ಗೋ ದೇವಃ' ಜಗಕ್ಕೆ ಕರ್ತೃ ನೀನಲಾ ಎಂದು. ಸಾಮ ಅರ್ಥವಣ ಯಜಸ್ಸು ಋಕ್ಕು ಉತ್ತರ ಖಂಡನ. ಇಂತೀ ಪಂಚವೇದಂಗಳಲ್ಲಿ ಚತುರ್ವೇದಿಗಳಪ್ಪರಲ್ಲದೆ, ಐಕ್ಯೋತ್ತರ ಚಿಂತನೆಯನೀ ವಿಪ್ರಕುಲ ಮಿಥ್ಯವಂತರು ಬಲ್ಲರೆ ? ಕಣ್ಣಿನಲ್ಲಿ ನೋಡುತ್ತ ಕಣ್ಗಾಣೆನೆಂಬವನಂತೆ ಶಾಪಹತರಿಗೆಲ್ಲಕ್ಕೂ ಲಲಾಮಬ್ಥೀಮಸಂಗಮೇಶ್ವರಲಿಂಗವು ಅಸಾಧ್ಯ ನೋಡಾ.
--------------
ವೇದಮೂರ್ತಿ ಸಂಗಣ್ಣ
ಪೂರ್ವದಿಂದ ಉತ್ತರಕ್ಕೆ ಬಂದ ಸೂರ್ಯನು ಅಸ್ತಮಯವಾಯಿತ್ತೆಂದು ಜಾಹ್ಯಗೆ ಒಡಲಾಗಿ, ಮತ್ತಾ ವರುಣಪ್ರದಕ್ಷಿಣದಿಂದ ಬಂದು ಪೂರ್ವದಲ್ಲಿ ಹುಟ್ಟಲಿಕ್ಕೆ ನಿನ್ನಿಂಗೆ ಇಂದಿಂಗೆಯೆಂಬುದು ಒಂದೊ ಎರಡೊ ? ಅಂದಿಗೆ ಜಾÕನ, ಇಂದಿಗೆ ಮರವೆ, ಎಂಬುದು ಒಂದೊ ಎರಡೊ ? ಅದು ಘಟದ ಪ್ರವೇಶದಿಂದ. ಪೂರ್ವ ಉತ್ತರಕ್ಕೆ ಬಂದಾತ್ಮನನರಿದು ಉಭಯವ ತಿಳಿದು ಸಂದು ನಾಶನವಾದಲ್ಲಿ ಸದ್ಯೋಜಾತಲಿಂಗವು ವಿನಾಶವಾದ.
--------------
ಅವಸರದ ರೇಕಣ್ಣ
ಪೃಥ್ವ್ಯಾದಿ ಪಂಚಭೂತಂಗು ಇದಕ್ಕೆ ವಿವರ: ಅಸ್ಥಿ ಚರ್ಮ ಮಾಂಸ ರೋಮ ಮಜ್ಜೆ ಇವೈದು ಪೃಥ್ವಿಯ ಅಂಶ. ಶುಕ್ಲ ಶೋಣಿತ ಶ್ಲೇಷ್ಮ ಪಿತ್ತ ರಕ್ತ ಇವೈದು ಅಪ್ಪುವಿನ ಅಂಶ. ಹಸಿವು ತೃಷೆ ನಿದ್ರೆ ಆಲಸ್ಯ ಸ್ತ್ರೀಸಂಗ ಇವೈದು ಅಗ್ನಿಯ ಅಂಶ. ಹವುದು ಕುಳ್ಳಿರುವುದು ಏಳುವುದು ಮೈಮುರಿವುದು ನಡೆವುದು ಈ ಐದು ವಾಯುವಿನ ಅಂಶ. ಡಂಬು ಪ್ರಕಟ ಪ್ರಪಂಚು ಅಭ್ರಚ್ಛಾಯ ಆನಂದ ಇವೈದು ಆಕಾಶದ ಅಂಶ. ಇಂತೀ ಅಂಗ ಶುದ್ಧಂಗಳ ಬಿಟ್ಟು ಲಿಂಗಾಂಗವ ಮಾಡಬಲ್ಲಡೆ ಕೂಡಲಚೆನ್ನಸಂಗಯ್ಯನಲ್ಲಿ ಶರಣನೆನಿಸುವನು
--------------
ಚನ್ನಬಸವಣ್ಣ
ಪಾತಕ ಹೊಲೆಯೆಂದರಿದು ಬಿಟ್ಟಲ್ಲಿ, ಮತ್ತಾ ಗುಣ ಸ್ವೀಕರಿಸಬಹುದೆ ? ಇವೆಲ್ಲ ಅಲ್ಲಾ ಎಂದು ಬಲ್ಲತನವ ತಾನರಿದು, ಮತ್ತೆಲ್ಲರಲ್ಲಿ ಬೆರಸಬಹುದೆ ? ಒಡೆದ ಹಂಚಿಂಗೆ, ಹಿಡಿದು ಬಿಟ್ಟ ವ್ರತಕ್ಕೆ, ಮತ್ತಿವ ಒಡಗೂಡಬಹುದೆ ? ಇಂತೀ ಬಿಡುಗಡೆಯನರಿದಲ್ಲಿ, ಅನುಸರಣೆಯ ಮಾಡಿದಡೆ, ಎನ್ನೊಡೆಯ ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವಾದಡೂ ಹರಶರಣರಿಗೆ ದೂರ.
--------------
ಶಿವಲೆಂಕ ಮಂಚಣ್ಣ
ಪ್ರಾಣಲಿಂಗವೆಂಬ ಶಬ್ದಕ್ಕೆ ನಾಚಿತ್ತು ಮನ ನಾಚಿತ್ತು. ಪ್ರಾಣ ಹೋದರೆ ಕಾಯ ಬಿದ್ದಿತ್ತು, ಲಿಂಗ ಒಂದೆಸೆಯಾದಡೆ ಮನ ನಾಚಿತ್ತು. ಗುಹೇಶ್ವರನೆನಲಿಲ್ಲದ ಘನವು.
--------------
ಅಲ್ಲಮಪ್ರಭುದೇವರು
ಪೃಥ್ವಿಯನರಿಯಲುಬಾರದು ನಕಾರ, ಅಪ್ಪುವನರಿಯಲುಬಾರದು ಮಕಾರ, ಅಗ್ನಿಯನರಿಯಲುಬಾರದು ಶಿಕಾರ, ವಾತವನರಿಯಲುಬಾರದು ವಕಾರ, ಅಂಬರವನರಿಯಲುಬಾರದು ಯಕಾರ, ಭಾವವನರಿಯಲುಬಾರದು ಓಂಕಾರ. ಇದು ಕಾರಣ ಷಡ್ಬ್ರಹ್ಮರೂಪ ಚನ್ನಬಸವಲಿಂಗ ಅರಿದು ಅರಿಯದಿರಲುಬೇಕು ಭಕ್ತ.
--------------
ದೇಶಿಕೇಂದ್ರ ಸಂಗನಬಸವಯ್ಯ
ಪಾದಪೂಜೆಯ ಮಾಡಿ, ಅಂಗುಷ್ಠವೆರಡು ಅಂಗುಲವೆಂಟು ಉಭಯಹಸ್ತದಲ್ಲಿ ಮಾಡಿಕೊಂಬುದೆ ಶಿಕ್ಷಾಪಾದೋದಕ. ಲಿಂಗಧಾರೀ ಮಹಾಯೋಗೀ ಚರಪಾದೋದಕಂ ವಿನಾ ದಿನೇನ ದಶಜನ್ಮಾನಿ ಮಾಸೇನ ಶತಜನ್ಮಸು ವರ್ಷೇ ಸಹಸ್ರಜನ್ಮಾನಿ ವರ್ಷಾರ್ಧೇ ಘೂಕವಾಯ¸õ್ಞ ದ್ವಿವರ್ಷೇ ¸õ್ಞಕರೇ ಗರ್ಭೇ ಜಾಯತೇ ನಾತ್ರ ಸಂಶಯಃ ಎಂದುದಾಗಿ ಆ ಶಿಕ್ಷಾಪಾದೋದಕವನೆ ಆ ವಿಭೂತಿಯಲ್ಲಿ ಸಮ್ಮಿಶ್ರವ ಮಾಡಿ ಲಲಾಟ ಮೊದಲಾದ ನಾಲ್ವತ್ತೆಂಟು ಸ್ಥಾನಂಗಳಲ್ಲಿ ಧಾರಣವ ಮಾಡುವುದು ಇದು ವೀರಶೈವರಿಗೆ ಸಲ್ಲುವ ನಡತೆ. ಶುದ್ಧಶೈವರಿಗೆ ಗಿಂಡಿಯಲ್ಲಿ ತುಂಬುವ ನಡತೆ. ವಿಶೇಷವೀರಶೈವರು ಗಿಂಡಿಯ ಮಾಡಲಾಗದು, ಅದೇನು ಕಾರಣವೆಂದಡೆ:ಅವರಿಗೆ ತ್ರಿವಿಧ ಪಾದೋದಕವು ನಿತ್ಯದ ಸಹಬಂಧವಾಗುವುದೆಂದು. [ಇದ]ನರಿದು ಆಚರಿಸುವಾತನೆ ನಿತ್ಯಮುಕ್ತನಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಪ್ರಥಮದಲ್ಲಿ ಸ್ಪರ್ಶವೆಂಬ ಸ್ಪರ್ಶನಗುಣದಿಂದ ಪಾದೋದಕ, ದ್ವಿತೀಯದಲ್ಲಿ ಅಂಗಗುಣವಳಿಯಿತ್ತಾಗಿ ಲಿಂಗಮುಖದಿಂದ ಬಂದುದು ಲಿಂಗೋದಕ, ತೃತೀಯದಲ್ಲಿ ಮಹಾಗಣಂಗಳ ಬರವಿನಿಂದ (ಬಂದುದಾಗಿ) ಮಜ್ಜನೋದಕ, ಚತುರ್ಥದಲ್ಲಿ ಚತುರ್ದಳಪದ್ಮ ವಿಕಸಿತವಾಗಿ ಪುಷ್ಪೋದಕ, ಪಂಚಮದಲ್ಲಿ ಲಿಂಗಕ್ಕೆ ಪರಮ ಪರಿಯಾಣ (ಪರಿಣಾಮರಿ) ಇಕ್ಕುವಲ್ಲಿ ಅವಧಾನೋದಕ, ಷಷ್ಠಮದಲ್ಲಿಲಿಂಗಾರೋಗಣೆಯ ಅಪ್ಯಾಯನೋದಕ, ಸಪ್ತಮದಲ್ಲಿ ಲಿಂಗಕ್ಕೆ ಹಸ್ತೋದಕ ಅಷ್ಟಮದಲ್ಲಿ ಅಷ್ಟಾಂಗಯೋಗ ಪರಮಪರಿಣಾಮೋದಕ, ನವಮದಲ್ಲಿ ನಾಮ ಸೀಮೆ ಇಲ್ಲವಾಗಿ ನಿರ್ನಾಮೋದಕ, ದಶಮದಲ್ಲಿ ಹೆಸರಿಲ್ಲವಾಗಿ ನಿತ್ಯೋದಕ,-ಇಂತು ದಶವಿಧೋದಕ. ಇನ್ನು ಏಕಾದಶಪ್ರಸಾದ: ಪ್ರಥಮದಲ್ಲಿ ಮಹಾದೇವಂಗೆ ಮನವರ್ಪಿತ, ದ್ವಿತೀಯದಲ್ಲಿ ಮಾಹೇಶ್ವರಂಗೆ ವೀರಾರ್ಪಿತ, ತೃತೀಯದಲ್ಲಿ ಶಂಕರಂಗೆ ಸಮಾಧಾನಾರ್ಪಿತ, ಚತುರ್ಥದಲ್ಲಿ ನಿರ್ವಿಷಯಾರ್ಪಿತ, ಪಂಚಮದಲ್ಲಿ ಪಂಚವಸ್ತ್ರಾರ್ಪಿತ, ಷಷ್ಠಮದಲ್ಲಿ ನಷ್ಟರೂಪ ನಿರೂಪಾರ್ಪಿತ, ಸಪ್ತಮದಲ್ಲಿ ಆತ್ಮಾರ್ಪಿತ, ಅಷ್ಟಮದಲ್ಲಿ ತನ್ನ ಮರೆದ ಮರಹಾರ್ಪಿತ, ನವಮದಲ್ಲಿ ಅಸಮಸಹಸ್ರನಾಳದಿಂದ ತೃಪ್ತ್ಯಾರ್ಪಿತ, ದಶಮದಲ್ಲಿ ಚಿತ್ತಸುಯಿಧಾನಿಯಾಗಿ ಸುಷುಮ್ನಾನಾಳದಿಂದ ಅಮೃತಾರ್ಪಿತ, ಏಕಾದಶದಲ್ಲಿ ಏಕಪ್ರಸಾದ ನೋಡಹೋದರೆ ತನ್ನ ನುಂಗಿತ್ತಯ್ಯಾ. ಹೇಳಬಾರದ ಘನವು ಕಾಣಬಾರದಾಗಿ ಕೂಡಲಚೆನ್ನಸಂಗನಲ್ಲಿ ಉಪಮಿಸಬಾರದ ಮಹಾಘನವು
--------------
ಚನ್ನಬಸವಣ್ಣ
ಪದ್ಮಾಸನದಲ್ಲಿ ಕುಳ್ಳಿರ್ದು ಲಿಂಗಾರ್ಚನೆಯ ಮಾಡುವರ ತೋರಾ ಎನಗೆ. ಸ್ವರೂಪಿನಲ್ಲಿ ನಿಂದು, ಜಂಗಮಕ್ಕೆ ಜಂಗಮದಾಸೋಹವ ಮಾಡುವರ ತೋರಾ ಎನಗೆ. ಮನ ನಿಜರೂಪಿನಲ್ಲಿ ಗುರುಸಿಂಹಾಸನವನೇರಿ ಪರಿಣಾಮವಳವಟ್ಟು, ಪ್ರಸಾದವ ಗ್ರಹಿಸುವರ ತೋರಾ ಎನಗೆ. ಇಂತಪ್ಪವರ ಸಂಗದಲ್ಲಿರಿಸು ಕಲಿದೇವಯ್ಯಾ, ನಾ ನಿನ್ನ ಬಲ್ಲೆ. ನನಗೆಯೂ ನಿನಗೆಯೂ ಇಂತಪ್ಪವರಪೂರ್ವ.
--------------
ಮಡಿವಾಳ ಮಾಚಿದೇವ

ಇನ್ನಷ್ಟು ...
-->