ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ರೂಪ[ನೆ] ಕಂಡರು, ನಿರೂಪ[£] ಕಾಣರು. ಅನುವನೆ ಕಂಡರು, ತನುವನೆ ಕಾಣರು. ಆಚಾರವನೆ ಕಂಡರು, ವಿಚಾರವನೆ ಕಾಣರು. ಗುಹೇಶ್ವರಾ_ನಿಮ್ಮ ಕುರುಹನೆ ಕಂಡರು, ಕೂಡಲರಿಯದೆ ಕೆಟ್ಟರು !
--------------
ಅಲ್ಲಮಪ್ರಭುದೇವರು
ರೂಪು ಕುರೂಪುಗಳನು, ಲಿಂಗ ನೋಡಿದಡೆ ನೋಡುವನು, ಲಿಂಗ ನೂಕಿದಡೆ ತಾ ನೂಕುವನು. ಶಬ್ದಾಪಶಬ್ದಂಗಳನು ಲಿಂಗ ಕೇಳಿದಡೆ ಕೇಳುವನು, ಲಿಂಗ ತಾ ನೂಕಿದಡೆ ನೂಕುವನು. ಸುರಸ ಕುರಸಂಗಳನು ಲಿಂಗ ಸವಿದಡೆ ಸವಿವನು, ಲಿಂಗ ನೂಕಿದಡೆ ತಾ ನೂಕುವನು. ಗಂಧ ದುರ್ಗಂಧಗಳನು ಲಿಂಗ ವಾಸಿಸಿದಡೆ ವಾಸಿಸುವ, ಲಿಂಗ ನೂಕಿದಡೆ ತಾ ನೂಕುವನು. ಮೃದು ಕಠಿಣ ಶೀತೋಷ್ಣಂಗಳನು ಲಿಂಗ ಸೋಂಕಿದಡೆ ಸೋಂಕುವನು. ಲಿಂಗ ನೂಕಿದಡೆ ತಾ ನೂಕುವನು. ಲಿಂಗಮಧ್ಯಪ್ರಸಾದಿಯಾದ ಕಾರಣ ಲಿಂಗದೊಡನೆ ಕೂಡಿ ಅರಿದು ಭೋಗಿಸಿ ಸುಖಿಸುವನು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ ನಿಮ್ಮ ಪ್ರಸಾದಿ.
--------------
ಸ್ವತಂತ್ರ ಸಿದ್ಧಲಿಂಗ
ರಣವ ನಿಶ್ಚೆ ೈಸಿದ ಭಟಂಗೆ ಮನೆಯ ಮೋಹವುಂಟೆ? ಅರ್ಥ ಪ್ರಾಣ ಅಪಮಾನ ಈ ಮೂರ ಕರ್ತರಿಗೆಂದಿತ್ತು ಮತ್ತೆ ಹೊತ್ತು ಹೋರುವಂಗೆ ಸದ್ಭಕ್ತಿಯುಂಟೆ? ಅದು ಚಂದೇಶ್ವರಲಿಂಗವ ಮುಟ್ಟದ ಮಾಟ.
--------------
ನುಲಿಯ ಚಂದಯ್ಯ
ರಸ ಉಂಬಲ್ಲಿ, ಗಂಧ ವಾಸಿಸುವಲ್ಲಿ, ರೂಪು ನಿರೀಕ್ಷಣೆಯಲ್ಲಿ, ಶಬ್ದ ಗೋಚರದಲ್ಲಿ, ಸ್ಪರ್ಶ ತ್ವಕ್ಕಿನಲ್ಲಿ, ಪಂಚಪುಟ ಭೇದಂಗಳಲ್ಲಿ, ಅಷ್ಟಗುಣ ಮದಂಗಳ ಪಟ್ಟಣದ, ಷೋಡಶದ ರೂಡ್ಥಿಯ ಷಡ್ಚಕ್ರದ ಆಧಾರದ, ಪಂಚವಿಂಶತಿಯ ನಿಳೆಯದ ಸಂಚಾರದ, ನವಕವಾಟದ, ತ್ರಿಶಕ್ತಿ ಸಂಪದದ, ತ್ರಿಗುಣಾತ್ಮನ ತ್ರಿಗುಣ ಓಹರಿಯಲ್ಲಿ ಬಳಸಿಪ್ಪ ಬಂಧದಲ್ಲಿ ಮಗ್ನವಾಗದೆ, ಜಾಗ್ರ [ಸ್ವಪ್ನ] ಸುಷುಪ್ತಿ ತ್ರಿವಿಧ ಘಟಪಟಲ ತತ್ವನಿರಸನ ನಿರ್ವಿಕಾರನಾಗಿ, ಇಂತಿವರಲ್ಲಿ ಅವಘಾನವಾಗಿ ಮುಳುಗದೆ, ನೀರನಿರಿದ ಕೈದಿನಂತೆ ಕಲೆದೋರದೆ, ಆವ ಸುಖಂಗಳಲ್ಲಿ ಅಬ್ಥಿನ್ನವಾಗಿ, ಜಲದೊಳಗಣ ಶಿಲೆ, ಶಿಲೆಯೊಳಗಣ ವಹ್ನಿ ಸುಳುಹುದೋರದ ತೆರ, ಮಥನಕ್ಕೆ ಕಂಡು, ಕಾಣದಡಗಿಪ್ಪ ತೆರ, ಲಿಂಗಾಂಗಿಯ ಇರವು. ಇದು ಸಿದ್ಧವಾಗಬೇಕು, ಶರೀರದ ಗುಡಿಯೊಡೆಯ ಗುಮ್ಮಟನಾಥನ ಅಗಮ್ಯೇಶ್ವರಲಿಂಗವನರಿವುದಕ್ಕೆ. ಇದೇ ಅಂಜನಸಿದ್ಧಿ.
--------------
ಮನುಮುನಿ ಗುಮ್ಮಟದೇವ
ರೂಪಿನ ದರ್ಪಣವ ಹಿಡಿದು, ತನ್ನಯ ರೂಪ ನೋಡಿದಲ್ಲಿ, ನಿಹಿತದ ಇರವಾಯಿತ್ತು. ಆ ರೂಪ ಕಂಡ ನಿರೂಪಿನ ದೃಷ್ಟಿ, ಅದರೊಳಗೆ ಕೂರ್ತು ತೋರುವ ಬೆಳಗಿನ ಮರೆ. ಉಭಯವ ಹಿಡಿದು ನೋಡುವ ಘಟಪಟನ್ಯಾಯ, ಉಪದೃಷ್ಟಭೇದ. ಹಿಡಿದ ಇಷ್ಟಾಚರಣೆ ಕುರುಹಿನ ಲಕ್ಷಣ. ಪಡಿಬ್ಥಿನ್ನ ಭೇದವಿಲ್ಲದೆ ತೋರಿ ತೋರದಿಪ್ಪ ಉಭಯ ಅಂಗವು ನೀನೆ, ಸಗರದ ಬೊಮ್ಮನೊಡೆಯ ತನುಮನ [ಸಂಗ]ಮೇಶ್ವರಲಿಂಗದಲ್ಲಿ ಲೇಪವಾದ ಶರಣಂಗೆ.
--------------
ಸಗರದ ಬೊಮ್ಮಣ್ಣ
ರಕ್ಕಸಿ ಮಗುವ ಹೆತ್ತು, ಕರುಳ ನೇಣ ಮಾಡಿ, ಹೆಣೆದ ತೊಟ್ಟಿಲ ಕಟ್ಟಿ, ರಕ್ತದ ಪಾಲನೆರೆದು, ಮತ್ತ ಜೀವವ, ಜಗವನೊತ್ತಿ ತಿಂಬವನೆ, ರಕ್ಕಸಿಯ ಹೊತ್ತು ಹೋಗದವನೆಯೆಂದು ತೊಟ್ಟಿಲ ಹಿಡಿದು ತೂಗೆ, ಬಾಯ ಮುಚ್ಚಿ ಕಣ್ಣಿನಲ್ಲಿ ಅಳುತ್ತಿದ್ದಿತ್ತು, ಬಂಕೇಶ್ವರಲಿಂಗವ ನೋಡಿಹೆನೆಂದು.
--------------
ಸುಂಕದ ಬಂಕಣ್ಣ
ರಾಜಂಗೆ ಮಂತ್ರಿ ಮುಖ್ಯವಾದಂತೆ ಬಾಹ್ಯಪ್ರಾಣಕ್ಕೆ ಮನವೆ ಮುಖ್ಯ ನೋಡಾ. ಮನ ಮುಖ್ಯವಾಗಿ ಸರ್ವಪಾಪ ಅನ್ಯಾಯವ ಗಳಿಸಿ, ಕಾಲಂಗೆ ಗುರಿಮಾಡಿ, ಜನನ ಮರಣಕ್ಕೆ ತರಿಸಿ, ಮುನ್ನ ಕಾಡುತ್ತಿದೆ. ಮನವ ನಿರಸನವ ಮಾಡುವರೆನ್ನಳವೆ ? ನಿನ್ನಳವ ಎನ್ನೊಳಿತ್ತು ಮನ್ನಿಸಿ ಕಾಯಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ರೋಗಿಗೆ ಹಾಲು ಸಿಹಿಯಪ್ಪುದೆ? ಗೂಗೆಗೆ ರವಿ ಲೇಸಪ್ಪುದೆ? ಚೋರಗೆ ಬೆಳಗು ಗುಣವಪ್ಪುದೆ? ಭವಸಾಗರದ ಸಮಯದಲ್ಲಿದ್ದವರು ನಿರ್ಭಾವನ ಭಾವವನೆತ್ತ ಬಲ್ಲರು? ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಎಂದೆ.
--------------
ಘಟ್ಟಿವಾಳಯ್ಯ
ರೂಪನರ್ಪಿಸಿ ಫಲವೇನು, ರುಚಿಯನರ್ಪಿಸದನ್ನಕ್ಕ ? ರುಚಿಯನರ್ಪಿಸಿ ಫಲವೇನು ಪರಿಣಾಮವನರ್ಪಿಸದನ್ನಕ್ಕ ? ಪರಿಣಾಮವನರ್ಪಿಸಿ ಫಲವೇನು ತನ್ನನರ್ಪಿಸದನ್ನಕ್ಕ ? ತನ್ನನರ್ಪಿಸಿ ಫಲವೇನು, ಕೂಡಲಚೆನ್ನಸಂಗಯ್ಯನೆಂಬ ಭಾವ ಬರಿದಾಗದನ್ನಕ್ಕ ?
--------------
ಚನ್ನಬಸವಣ್ಣ
ರಸ ಗಂಧ ರೂಪು ಶಬ್ದ ಸ್ಪರ್ಶ ಪಂಚೇಂದ್ರಿಯಂಗಳಲ್ಲಿ ಅರ್ಪಿಸುವನ್ನಕ್ಕ ಭಕ್ತ. ರೂಪು ರುಚಿಯ ಕಂಡರ್ಪಿಸುವನ್ನಕ್ಕ ಮಾಹೇಶ್ವರ. ಇಚ್ಫೆಯನರಿತು ಸಾಕು ಬೇಕೆಂಬನ್ನಕ್ಕ ಪ್ರಸಾದಿ. ಕಂಡಲ್ಲಿ ಮುಟ್ಟದೆ ಕಾಣಿಸಿಕೊಂಡು ಮುಟ್ಟಿಹೆನೆಂಬಲ್ಲಿ ಪ್ರಾಣಲಿಂಗಿ. ವಂದನೆ ನಿಂದೆಗೆ ಒಳಗಹನ್ನಕ್ಕ ಶರಣ. ಮುಟ್ಟುವ ತಟ್ಟುವ ತಾಗುವ ಸೋಂಕುವ ಸುಖವನರಿದು ಕೂಡಬೇಕೆಂಬನ್ನಕ್ಕ ಐಕ್ಯ. ಆ ಗುಣ ಪರುಷವ ಸೋಂಕಿದ ಲೋಹದಂತಾದುದು ಷಟ್‍ಸ್ಥಲ. ಇಂತೀ ಆರನವಗವಿಸಿ ಬೇರೊಂದು ತೋರದಿಪ್ಪುದು ಐಕ್ಯಸ್ಥಲಲೇಪಭೇದ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ರವಿ ಶಶಿಗಳಿಲ್ಲದಂದು, ಕತ್ತಲೆ ಕಾಳಾಂಧಗಳಿಲ್ಲದಂದು, ಜ್ಞಾನ ಮಹಾಜ್ಞಾನಂಗಳು ಇಲ್ಲದಂದು, ಅತ್ತತ್ತಲೆ ತಾನೆ ತಂದೆಯಾಗಿದ್ದೆಯಯ್ಯ. ತನಗೆ ಮಕ್ಕಳು ಬೇಕಾಗಿ ನೆನಹಂಗೈಯಲು. ಓಂಕಾರವೆಂಬ ಪ್ರಣವ ಪುಟ್ಟಿತ್ತು ನೋಡಾ. ಆ ಓಂಕಾರವೆಂಬ ಪ್ರಣವದಲ್ಲಿ ಅಕಾರ ಉಕಾರ ಮಕಾರಂಗಳಾದವು ನೋಡಾ. ಅಕಾರ ಉಕಾರ ಮಕಾರಂಗಳೊಡನೆ ಷಡಕ್ಷರಂಗಳು ಆದವು ನೋಡಾ. ಆ ಷಡಕ್ಷರಂಗಳೊಡನೆ ಷಟ್ಚಕ್ರಂಗಳಾದವು ನೋಡಾ. ಆ ಷಟ್ಚಕ್ರಂಗಳೊಡನೆ ಷಡ್ವಿಧಮೂರ್ತಿಗಳಾದವು ನೋಡಾ. ಆ ಷಡ್ವಿಧಮೂರ್ತಿಗಳೊಡನೆ ಷಡ್ವಿಧಲಿಂಗವಾದವು ನೋಡಾ. ಆ ಷಡ್ವಿಧಲಿಂಗದೊಡನೆ ಷಡ್ವಿಧಶಕ್ತಿಯರಾದರು ನೋಡಾ. ಆ ಷಡ್ವಿಧಶಕ್ತಿಯರೊಡನೆ ಷಡ್ವಿಧಭಕ್ತಿಯಾಯಿತು ನೋಡಾ. ಆ ಷಡ್ವಿಧಭಕ್ತಿಯನರಿತು ನಾದಬಿಂದುಕಲೆಗಳ ಮೀರಿ ಪರಕೆ ಪರವಾದ ಲಿಂಗವನಾಚರಿಸುತಿರ್ದೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ರತ್ನದ ಪುಂಜವ ಬೆಗಡವನಿಕ್ಕುವಲ್ಲಿ ಮೊನೆ ಮುಂದೆ ಸವೆದ ಮತ್ತೆ ಪೂರ್ವಕ್ಕೆ ಉತ್ತರವಿಲ್ಲ. ನಿಶ್ಚೈಸಿ ಉತ್ತರ ಕಡೆಗಾಣಿಸಿದಲ್ಲಿ ಮುಟ್ಟಿ ಮುಂಚುವ ಅರ್ಪಿತ ಅಲ್ಲಿಯೆ ಉಪದೃಷ್ಟ ನಷ್ಟ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗದಲ್ಲಿ.
--------------
ಪ್ರಸಾದಿ ಭೋಗಣ್ಣ
ರಾಜಲಿಂಗವ ತಂದು ಪೂಜೆ ಕರದೊಳಗಿಟ್ಟು ಭೇದಿಸ ಬಾರದದ ಆನಂದವ. ಅಭೇದ್ಯಕರನಿತ್ಯವೆಂದಾ ಗುರುವ ಪಾಲಿಸಿದ ಅಭೇದ್ಯ ಶಿಷ್ಯನು ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ರೂಪು ಲಿಂಗವೋ ನಿರೂಪು ಲಿಂಗವೋ ಎಂಬುದ ವಿವರಿಸಿ ತಿಳಿದು ನೋಡೆ, ರೂಪು ಲಿಂಗದಲ್ಲಿ ತ್ರಿಭುವನಾಧಾರವಾದ ಶಿವ ಕಲಾ ರೂಪ ಚೈತನ್ಯ. ನಿರೂಪಲಿಂಗವ ಭಾವಿಸಿ, ಧ್ಯಾನಪೂಜೆಯ ಮಾಡಿ; ಕೋಟಿ ಸೂರ್ಯ ಪ್ರಕಾಶ ಚಿದ್ರೂಪ ಶಿವಲಿಂಗವ ನೆನಹಿನ ಕೊನೆಯ ಮೇಲಿರಿಸಿ ನೆನೆದು ನಿತ್ಯ ತೃಪ್ತನಾದ ಪರಾನಂದರೂಪ ಶಿವಯೋಗಿಯ ಯೋಗನಿದ್ರಾಮುದ್ರೆಯಲ್ಲಿ ತಾನಿದಿರೆಂಬುದ ಮರೆದು ಬ್ಥಿನ್ನವಿಲ್ಲದೆ ಶಿವಸುಖದೊಳಗಿಹನು ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ, ನಿಮ್ಮ ಶರಣನು.
--------------
ಸ್ವತಂತ್ರ ಸಿದ್ಧಲಿಂಗ
ರುದ್ರಂಗೆ ಪಾರ್ವತಿಯು, ವಿಷ್ಣುವಿಂಗೆ ಲಕ್ಷಿ ್ಮಯು, ಬ್ರಹ್ಮಂಗೆ ಸರಸ್ವತಿಯು ಮತ್ತೆ ತೃಣದಶನದ ಫಲದ ಆಹಾರದವರ ಸುತ್ತಿ ಮುತ್ತಿತ್ತು ನೋಡಾ ಮಾಯೆ; ಸಪ್ತಧಾತುವ ಮೀರಿ ಪಂಚಭೂತವ ಜರಿದ ಶರಣರಿಗೋಡಿತ್ತು ಮಾಯೆ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ

ಇನ್ನಷ್ಟು ...
-->