ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಲಿಂಗದೇವನೆ ಕರ್ತ, ಶಿವಭಕ್ತನೆ ಶ್ರೇಷ್ಠ. ಕೊಲ್ಲದಿರ್ಪುದೆ ಧರ್ಮ. ಅಧರ್ಮದಿಂದ ಬಂದುದನೊಲ್ಲದಿರ್ಪುದೆ ನೇಮ. ಅಳುಪಿಲ್ಲದಿರ್ಪುದೆ ವ್ರತ. ಇದೇ ಸತ್ಪಥ, ಉಳಿದುದೆಲ್ಲ ಮಿಥ್ಯವೆಂದೆ ಕಾಣಾ, ದೇವರಾಯ ಸೊಡ್ಡಳಾ.
--------------
ಸೊಡ್ಡಳ ಬಾಚರಸ
ಲಿಂಗವು ಜ್ಞಾನಸಂಸಾರಿ, ಜಂಗಮವು ವೈರಾಗ್ಯಸಂಸಾರಿ. ಈ ಸಂಸಾರದ ಸಂದನುರುಹಿ ನಿಃಸಂಸಾರಿಯಾದ ನಿರುಪಮಾನಂದೈಕ್ಯನ ಪದವ ತೋರಿಸಾ ನಿಮ್ಮ ಧರ್ಮ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಲಿಂಗೋದಕ ಪಾದೋದಕ ಪ್ರಸಾದೋದಕವಾದ ತ್ರಿವಿಧೋದಕದಲ್ಲಿ ಲಿಂಗೋದಕದಿಂದ ಸಂಚಿತಕರ್ಮವಿಲ್ಲ. ಪಾದೋದಕದಿಂದ ಪ್ರಾರಬ್ಧಕರ್ಮವಿಲ್ಲ. ಪ್ರಸಾದೋದಕದಿಂದ ಆಗಾಮಿಕರ್ಮವಿಲ್ಲ. ಇಂತೀ ತ್ರಿವಿಧೋದಕದಿಂದ ಬ್ರಹ್ಮಹತ್ಯ ಭ್ರೂಣಹತ್ಯ ಪಾಪಪಂಕಪ್ರಕ್ಷಾಲನವಯ್ಯಾ, ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ಲಿಂಗ ಸಹಿತವಾಗಿ ಸರ್ವಗುಣಂಗಳ ಭೋಗಿಸಬೇಕೆಂಬಲ್ಲಿ ಲಿಂಗಕ್ಕೆ ಕೊಟ್ಟು ತಾ ಕೊಂಬ ತೆರನಾವುದು? ಹೆಣ್ಣ ಕೊಡುವಲ್ಲಿ ತನ್ನಯ ವಿಕಾರವೊ ಲಿಂಗದ ಸುಖವೊ? ಹೊನ್ನ ಹಿಡಿವಲ್ಲಿ ತನ್ನಯ ಬಯಕೆಯೊ ಲಿಂಗದ ಭೋಗವೊ? ಮಣ್ಣ ಹಿಡಿವಲ್ಲಿ ತನ್ನಯ ಬೆಳೆಯೊ ಲಿಂಗದ ಇರವೊ? ಇಂತೀ ತ್ರಿವಿಧದ ಬಿಡುಮುಡಿಯನರಿತು, ಹೆಣ್ಣ ಬೆರಸಿದಲ್ಲಿ ಹೆಣ್ಣಿಗೆ ವಿಷಯಸುಖ ತೋರಿ ತನಗೆ ಆ ವ್ಯಾಪಾರ ಹಿಂಗಿ ನಿಂದ ನಿಜದುಳುಮೆ ಲಿಂಗಸುಖಿ. ಹೊನ್ನು ತನ್ನ ತಾ ಬಂದಲ್ಲಿ ಮುಟ್ಟಿ ಕೊಟ್ಟೆನೆಂಬುದನರಿಯದೆ ಅದು ದೃಷ್ಟದಿಂದ ಬಂದುದ, ತನ್ನಷ್ಟವೆಂಬುದನರಿದಿಪ್ಪಾತನೆ ನಿಸ್ಪ ೃಹ. ಮಣ್ಣ ಅಡಿವಿಡಿದು ಹಿಡಿದಲ್ಲಿ ಕರ್ಮರುಗಳಂತೆ ಕಾದರೆ ಅವು ಮುನ್ನಿನಂತೆ ಇರಲಿ ಎಂಬುದು ಪರಮ ನಿರ್ವಾಣ. ಇಂತೀ ತ್ರಿವಿಧ ಮಲಂಗಳಲ್ಲಿ ಅಮಲನಾಗಿ ಸರ್ವಗುಣ ಸಂಪನ್ನನಾದುದು ಲಿಂಗ ಭೋಗೋಪಭೋಗಿಯ ಅಂಗನಿರತ, ಸ್ವಯಾನುಭಾವಿಯ ಲಿಂಗಾಂಗ ಯೋಗ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 81 ||
--------------
ದಾಸೋಹದ ಸಂಗಣ್ಣ
ಲಿಂಗಾರ್ಚನೆಯಿಂದ ಜಂಗಮಾರ್ಚನೆಯದ್ಥಿಕ ನೋಡಾ. ಅದೆಂತೆಂದೊಡೆ : ಆದಿಯಲ್ಲಿ ಲಿಂಗಾರ್ಚನೆಯಮಾಡಿದ ತಾರಜ ತಂಡಜ ರೋಮಜರಿಗೆ ಪ್ರಳಯವಾಯಿತ್ತು. ಆದಿಯಲ್ಲಿ ಲಿಂಗಾರ್ಚನೆಯಮಾಡಿದ ನವಕೋಟಿಬ್ರಹ್ಮರಿಗೆ ಪ್ರಳಯವಾಯಿತ್ತು. ಆದಿಯಲ್ಲಿ ಲಿಂಗಾರ್ಚನೆಯಮಾಡಿದ ಶತಕೋಟಿ ನಾರಾಯಣರಿಗೆ ಪ್ರಳಯವಾಯಿತ್ತು. ಆದಿಯಲ್ಲಿ ಲಿಂಗಾರ್ಚನೆಯಮಾಡಿದ ಅನಂತಕೋಟಿ ರುದ್ರರಿಗೆ ಪ್ರಳಯವಾಯಿತ್ತು. ಇದು ಕಾರಣ ಲಿಂಗಾರ್ಚನೆ ಪ್ರಳಯಕ್ಕೊಳಗು, ಜಂಗಮಾರ್ಚನೆ ಪ್ರಳಯಾತೀತವೆಂದರಿದು ಜಂಗಮವೇ ಪ್ರಾಣವೆಂದು ನಂಬಿ, ಅನಂತಕೋಟಿ ಪ್ರಳಯಂಗಳ ಮೀರಿ, ಪರಬ್ರಹ್ಮವನೊಡಗೂಡಿದ ಸಂಗನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎಂಬೆನಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಲಲನೆಯರ ನಟನೆಯೆಂಬ ಕುಟಿಲಕ್ಕೆ ಸಿಕ್ಕಿ, ಕೋಟಲೆಗೊಳದಿರ ಮರುಳು ಮಾನವ. ನಿಟಿಲತಟದಲ್ಲಿ ಮಠವ ಮಾಡಿಕೊಂಡು ನಿಶ್ಚಿಂತ ನಿರಾಳನಾಗಿರ. ಹುಸಿಯ ಮಾಯಾತಮಂಧಕೆ ದಿಟಪುಟದಿವಾಕರ ಎನ್ನೊಡೆಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭು ಕಾಣಿರೋ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಲಿಂಗ ಬೇರೆ, ಶರಣ ಬೇರೆಂದು ಹಂಗಿಸಿ ನುಡಿಯಲಾಗದು. ಲಿಂಗ ಬೇರೆ, ಶರಣ ಬೇರೆಯೇ? ಶಿವಶಿವ ಒಂದೇ ಕಾಣಿರಣ್ಣ. ಸುವರ್ಣ ಆಭರಣವಾಯಿತ್ತೆಂದಡೆ, ಅದು ನಾಮ ರೂಪಭೇದವಲ್ಲದೆ ವಸ್ತುಭೇದವಲ್ಲ. ಭಕ್ತಿಯ ವೈಭವದಿಂದ ಶರಣ ಸಕಾಯನಾಗಿ ಅವತರಿಸಿದೆನೆಂದಡೆ ಬೇರಾಗಬಲ್ಲನೇ? ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನೆಂಬ ಲಿಂಗವೆಂದಡೂ ಶರಣನೆಂದಡೂ ಒಂದೇ ಕಾಣಿರಣ್ಣಾ.
--------------
ಸ್ವತಂತ್ರ ಸಿದ್ಧಲಿಂಗ
ಲಿಂಗಮುದ್ರೆಯ ಕ್ಷೇತ್ರದೊಳಗೊಂದು ಬಾಳೆಯ ಬನವಿಪ್ಪುದು. ಆ ಬನಕೊಂದು ಏಳು ಸೋಪಾನದ ಬಾವಿಯಿಪ್ಪುದು. ಆ ಬಾವಿಯ ಉದಕವನು ಎತ್ತುವ ಮನುಜರಿಲ್ಲದೆ, ಸತ್ವಕೈಯಿಂದೆತ್ತಿ ಸುತ್ತಲಿಕ್ಕೆ ಸೂಸದೆ ನಿವೇದಿಸಿಕೊಂಡರೆ ನಿತ್ಯ ಫಲವು ಸವಿಚಿತ್ರವಾಗಿಪ್ಪುದು. ಒಡೆಯ ಬಂಟರ ನಡೆಯಲ್ಲದೆ ನೋಡಿರೆ ಪರಿಣಾಮಪರವಲ್ಲ ಗುರುನಿರಂಜನ ಚನ್ನಬಸವಲಿಂಗಾ ನಿಮ್ಮ ಶರಣಂಗೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ಲಲಾಟದೊಳಗಣ ಅಸ್ಥಿಯ ಬೆಳ್ಪು ವಿಭೂತಿ. ಚರ್ಮದೊಳಗಣ ಕೆಂಪು ಕಿಸುಕಾಶಾಂಬರ. ವ್ಯಾಕುಳವಿಲ್ಲದುದೆ ಲಾಕುಳ, ಮಹಾದೇವರ ನೆನೆವುದೆ ಆಧಾರ. ನಿರ್ಮೋಹತ್ವಂ ಚ ಕೌಪೀನಂ ನಿಸ್ಸಂಗತ್ವಂ ಚ ಮೇಖಳಂ | ಶಾಂತಿ ಯಜ್ಞೋಪವೀತಂ ಚ ಆಭರಣಂ ದಯಾಪರಂ | ಪಂಚೇಂದ್ರಿಯ ವೀಣಾದಂಡಂ ಪಂಚಮುದ್ರಾಃ ಪ್ರಕೀರ್ತಿತಂ | ಮಹಾಲಿಂಗ ಧ್ಯಾನಾಧಾರಂ ಶಿವಯೋಗಿ ಚ ಲಕ್ಷಣಂ | [ಎಂಬುದಾಗಿ], ತುರುಬಿನ ತಪಸಿಯ ಪೆರರೆತ್ತ ಬಲ್ಲರು ? ಸಕಳೇಶ್ವರದೇವಾ, ನೀನೆ ಬಲ್ಲೆ.
--------------
ಸಕಳೇಶ ಮಾದರಸ
ಲಿಂಗ ಜಂಗಮ, ಜಂಗಮ ಲಿಂಗವೆಂಬುದ ತೋರಿ, ನಿಜೈಕ್ಯನಾದೆಯಲ್ಲಾ ನಿಜಗುರು ಬಸವಣ್ಣಾ ! ಪ್ರಸಾದ ಕಾಯ, ಕಾಯ ಪ್ರಸಾದವೆಂಬುದ ಎನ್ನ ಸರ್ವಾಂಗದಲ್ಲಿ ಪ್ರತಿಷ್ಠಿಸಿ, ಎನ್ನನಾಗು ಮಾಡಿ ಮುಂದುವರಿದೆಯಲ್ಲಾ ಬಸವಣ್ಣಾ ! ಲಿಂಗ ಪ್ರಾಣ, ಪ್ರಾಣ ಲಿಂಗವೆಂಬುದ ಎನ್ನಂತರಂಗದಲ್ಲಿ ಸ್ಥಾಪ್ಯವ ಮಾಡಿ ಎನ್ನ ನಿನ್ನಂತೆ ಮಾಡಿ ನಿಜಲಿಂಗದೊಳಗೆ ನಿರವಯವಾದೆಯಲ್ಲಾ ಬಸವಣ್ಣಾ ! ಎನ್ನ ಮನವ ಮಹಾಸ್ಥಲದಲ್ಲಿ ಲಯವ ಮಾಡಿ, ನಿರ್ವಯಲಾಗಿ ಹೋದೆಯಲ್ಲಾ ನಿಜಲಿಂಗೈಕ್ಯ ಬಸವಣ್ಣಾ ! ನಿನ್ನ ಒಕ್ಕುಮಿಕ್ಕ ಶೇಷವನಿಕ್ಕಿ ಆಗು ಮಾಡಿ ನಿನ್ನಂತರಂಗದಲ್ಲಿ ಅವ್ವೆ ನಾಗಾಯಿಯ ಇಂಬುಗೊಂಡಡೆ, ಎನ್ನ ಮನ ನಿಮ್ಮ ಪಾದದಲ್ಲಿ ಕರಗಿ ಕೊರಗಿತ್ತಯ್ಯಾ, ಸಂಗನಬಸವಣ್ಣಾ ! ಕೂಡಲಚೆನ್ನಸಂಗಯ್ಯಂಗೆ ಸುಜ್ಞಾನವಾಹನವಾಗಬೇಕೆಂದು ನಿರವಯವಾದೆಯಲ್ಲಾ ಸಂಗನಬಸವಣ್ಣಾ !
--------------
ಚನ್ನಬಸವಣ್ಣ
ಲಿಂಗಪ್ರಸಾದವ ಜಂಗಮಕ್ಕೆ ಕೊಡುವ ಕರ್ಮಿಗಳು ನೀವು ಕೇಳಿರೆ. ಜಂಗಮಪ್ರಸಾದವ ಲಿಂಗಕ್ಕೆ ಕೊಡುವ ಧರ್ಮಿಗಳು ನೀವು ಕೇಳಿರೆ. ಲಿಂಗಪ್ರಸಾದವ ಜಂಗಮಕ್ಕೆ ಕೊಡುವುದು ಅನಾಚಾರ. ಜಂಗಮಪ್ರಸಾದವ ಲಿಂಗಕ್ಕೆ ಕೊಡುವುದು ಸದಾಚಾರ. ಅದೆಂತೆದಡೆ- ಶಿವಧರ್ಮ ಪುರಾಣದಲ್ಲಿ : ಲಿಂಗಾರ್ಪಿತ ಪ್ರಸಾದಂ ಚ ನದದ್ಯಾಜ್ಜಂಗಮಾರ್ಪಿತಂ | ಜಂಗಮಾರ್ಪಿತ ಪ್ರಸಾದಂ ತದದ್ಯಾಲಿಂಗಮೂರ್ತಿಷು || ಎಂದುದಾಗಿ, ಇದು ಕಾರಣ, ಜಂಗಮಪ್ರಸಾದವ ಲಿಂಗಕ್ಕೆ ಕೊಟ್ಟು ಕೊಂಬೆನಾಗಿ, ಎನ್ನ ಭವಂ ನಾಸ್ತಿಯಾಯಿತ್ತಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಲಿಂಗ ಹೊರತೆಯಾಗಿ, ವಿಭೂತಿ ರುದ್ರಾಕ್ಷಿಯ ಕೊಟ್ಟು, ಗುರುವಾಗಬಹುದೆ ಅಯ್ಯಾ? ಬೀಜವಿಲ್ಲದೆ ಅಂಕುರವಾಗಬಲ್ಲುದೆ? ಗಂಡನಿಲ್ಲದ ಮುಂಡೆಗೆ ಗರ್ಭನಿಂದಡೆ ಅವಳಾರಿಗೆ ಯೋಗ್ಯ? ಉಭಯವು ಕೇಡಾಯಿತ್ತು. ಇದನರಿತು ಮಾಡಿ, ಸದಾಶಿವಮೂರ್ತಿಲಿಂಗವನರಿವುದಕ್ಕೆ.
--------------
ಅರಿವಿನ ಮಾರಿತಂದೆ
ಲಿಂಗವೇ ಪ್ರಾಣವಾದ ಮತ್ತೆ ಬೇರೆ ನೆನೆಯಿಸಿಕೊಂಬುದು ಇನ್ನಾವುದಯ್ಯಾ ? ಇದಿರಿಟ್ಟು ಬಂದುದ ಮುನ್ನವೆ ಮುಟ್ಟಿ ಅರ್ಪಿತ ಅವಧಾನಂಗಳಲ್ಲಿ ಸೋಂಕಿದ ಮತ್ತೆ ಪುನರಪಿಯಾಗಿ ಸೋಂಕಿದಡೆ ನಿರ್ಮಾಲ್ಯ ಕಂಡಯ್ಯಾ. ಮೊನೆಗೂಡಿ ಹಾಯ್ವ ಕಣೆಯಂತೆ ಅರ್ಪಿತಾಂಗ ಸಂಗಭೇದ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವನರಿದಲ್ಲಿ.
--------------
ಪ್ರಸಾದಿ ಭೋಗಣ್ಣ
ಲಕ್ಷವಂದನು ಲಕ್ಷಿಸಿ ಲಕ್ಷಿಸಲರಿಯದೆ ಅಂತರ್ಲಕ್ಷ, ಮಧ್ಯರ್ಲಕ್ಷ, ಬಹಿರ್ಲಕ್ಷವೆಂದು ತನುಕರಣೇಂದ್ರಿಯಾಯಾಸದಿಂದರಿವುದೇನು? ಆದದ್ದೇನು? ಅವಿರಳಪ್ರಭಾನಂದ ಪ್ರಾಣಲಿಂಗವನರಿವಡೆ ಆಯಾಸವಿಲ್ಲದೆ ಅರಿದಾನಂದಿಸಬೇಕು ಕಾಣಾ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಲಿಂಗವಲ್ಲದನ್ಯವರಿನಯೆ, ಶಿವಲಿಂಗವಲ್ಲದನ್ಯವ ನೆನೆಯೆ, ಜಂಗಮವಲ್ಲದನ್ಯಕ್ಕೆರಗೆ, ಪ್ರಸಾದವಲ್ಲದನ್ಯವ ಕೊಳ್ಳೆ, ಶಿವಗಣಂಗಳಲ್ಲದನ್ಯರ ಬೆರೆಯೆ. ಕೂಡಲಸಂಗಮದೇವರು ಸಾಕ್ಷಿಯಾಗಿ ನಾನಾವ ತೀರ್ಥಯಾತ್ರೆಗಳನರಿಯೆ.
--------------
ಬಸವಣ್ಣ

ಇನ್ನಷ್ಟು ...
-->