ವಾರಿ ತೆಂಗಿನ ಮರದಲ್ಲಿ ಏರಿತ್ತೊ ?
ಅಲ್ಲಾ, ಬೇರೊಂದು ಮಂತ್ರದಲ್ಲಿ ತುಂಬಿತ್ತೊ ?
ಅಲ್ಲಾ ವೃಕ್ಷದ ಸಹಜ ಬೀಜವೊ ?
ನೀರು ಬಲಿದು ಅದರೊಳಗೆ ಅರತು, ಆ ಸಾರವೆ ಕಾಯಾದಲ್ಲಿ,
ಆ ಕಾಯ ತುಷಾರ ಹಿಂಗಿ, ನೆರೆ ಬಲಿತು, ಹಣ್ಣು ಎಣೆಯಾದಲ್ಲಿ,
ನೀರೆಲ್ಲಿ ಅಡಗಿತ್ತು? ಹಿಪ್ಪೆ, ಕವಚವೆಲ್ಲಿದ್ದಿತ್ತು ?
ಇಂತೀ ಕಾಯ ಆತ್ಮ ಮೇಲೆಂದರಿವೆಂಬ ಕುರುಹೆಲ್ಲಿದ್ದಿತ್ತು ?,
ಎಂಬುದನರಿವುದಕ್ಕೆ ಪುರಾಣವ ಪೋಷಿಸಿಕೊಳ್ಳಿ,
ಶಾಸ್ತ್ರವ ಸಂದಣಿಸಿಕೊಳ್ಳಿ, ವೇದದ ಆದ್ಯಂತವ ಸಾದ್ಥಿಸಿಕೊಳ್ಳಿ,
ಶ್ರುತದಲ್ಲಿ ಕೇಳಿ ದೃಷ್ಟದಲ್ಲಿ ಕಂಡುಕೊಳ್ಳಿ,
ಇಂತೀ ಚಿದಾತ್ಮನು ಬಂಧಮೋಕ್ಷಕರ್ಮಂಗಳಲ್ಲಿ ದ್ವಂದಿತನೋ ?
ಆ ಅಂಗಭಾವ ವಿರಹಿತನೋ ?
ಈ ಉಭಯದ ಸಂದೇಹವುಳ್ಳನ್ನಕ್ಕ
ಕರ್ಮವ ಮಾಡುವಂಗೆ, ನಿರ್ಮಲವೊಂದುಂಟೆಂದು ಅರಿವಂಗೆ,
ಇಂತೀ ಭೇದಂಗಳನರಿತು,
ನಿರವಯದ ಸಮ್ಮಾನದ ಸುಖಿಯಾದೆನೆಂಬವಂಗೆ,
ಅದು ಬ್ಥಿನ್ನರೂಪೋ, ಅಬ್ಥಿನ್ನರೂಪೋ ?
ಆ ನಿಜದ ನೆಲೆಯ ನೀವೇ ಬಲ್ಲಿರಿ.
ಕಾಮಧೂಮ ಧೂಳೇಶ್ವರನಲ್ಲಿ
ಕಾಳಿಕೆ ಹಿಂಗಿದ ಕಣ್ಣಿನವಂಗಲ್ಲದೆ ಕಾಣಬಾರದು.