ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಹಳ್ಳಿಯ ಹೊಲೆಯನ ಕೈಯಲ್ಲಿ ಡಿಳ್ಳಿಯದ್ಥಿಪತಿ ಸತ್ತ. ಆಳುವ ಗಂಡ ಹೆಂಡತಿಗೆ ಕೀಳಾಳಾದ. ಒಡೆದು ಬಂಟನಿಗೆ ಬಡಿಹೋರಿಯಾದ. ಹೊಡೆಯ ಹುಲ್ಲು ಕರವಾಳ ಹಿಡಿಯ ಕೊಯ್ಯಿತ್ತು. ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ಹೊಸತಿಲ ಪೂಜಿಸಿ ಹೊಡವಂಟು ಹೋದ ಒಕ್ಕಲಿತಿಯಂತಾುತ್ತೆನ್ನ ಭಕ್ತಿ. ಜಂಗಮವೆನ್ನೊಡೆಯರೆಂದು ಒಕ್ಕುದ ಕೊಂಡು ಉದಾಸೀನವ ಮಾಡಿದಡೆ, ಇಹಲೋಕಕ್ಕೆ ದೂರ, ಪರಲೋಕಕ್ಕೆ ದೂರ ! ಕೂಡಲಸಂಗಮದೇವ ಅಘೋರನರಕದಲ್ಲಿಕ್ಕುವ. 423
--------------
ಬಸವಣ್ಣ
ಹೆರೆಹಿಂಗದಾಚಾರ ಅಂಗವೇದಿಯಾಗಿ, ಇತರ ಸಂಗಸಂಯೋಗದತಿಶಯವನಳಿದು ನಿರತಿಶಯ ನಿಜಾನಂದಮಹಿಮನು ನೋಡಾ. ಕರಣವೃತ್ತಿ ಚರಣವ ಕೊಯ್ದು ಅರಿದರ್ಪಿತಮುಖಿ ಅನುಭಾವಿ ನೋಡಾ. ಶಿವಾಣತಿವಿಡಿದು ಸತ್ತುಚಿತ್ತಾನಂದ ನಿತ್ಯದಾಸೋಹಿಯಾಗಿರ್ದ ಗುರುನಿರಂಜನ ಚನ್ನಬಸವಲಿಂಗದಲ್ಲಿ ನೋಡಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಹಿಂದು ಮುಂದು ಸಂದಳಿದ ಬಳಿಕ ಆನು ನೀನೆಂಬ ಭೇದವೇತಕಯ್ಯ? ಆನಂದ ಅಪರಸ್ಥಾನದಲ್ಲಿ ಶುದ್ಧ ಸಂಯೋಗವಾದ ಬಳಿಕ ದಳ ಪ್ರತಿಷ್ಠೆಯ ಮಾಡಿನೆಂದು ಏನೆಂಬೆನಯ್ಯ? ಪೂರ್ವದಳದಲ್ಲಿ ಲಕ್ಷವು ಇಪ್ಪತ್ನಾಲ್ಕುಸಾವಿರ ಎಸಳು, ಅಪರದಳದಲ್ಲಿ ಹದಿನಾಲ್ಕುಸಾವಿರ ಎಸಳು, ನಾನಾ ವರ್ಣ ಆನಂದನೆಂಬ ಅದ್ಥಿದೇವತೆ ಮಧ್ಯಮಸ್ಥಾನದಲ್ಲಿ, ಸಿದ್ಧ ಸಂಯೋಗವೆಂಬ ಸರೋವರದಲ್ಲಿ, ವೈನೈಯೆಂಬ ಕೊಳಂಗಳು ಹನಾರೆಸಳಿನ ಕಮಳ ಬೀಜಾಕ್ಷರಂಗಳೆಂಟು, ಅದ್ಥಿದೇವತೆ ಸಚ್ಚಿದಾನಂದನೆಂಬ ಗಣೇಶ್ವರ ಆನಂದ ಬ್ರಹ್ಮಲೋಕದಲ್ಲಿ ಗುರುವೆಂಬ ಸರೋವರದಲ್ಲಿ ನಿತ್ಯವೆಂಬ ಕೊಳ. ಶುದ್ಥಶ್ವೇತನೆಂಬ ಅಮೃತ ಪ್ರವಾಹ, ದಳವೊಂದು, ಮೂಲ ಮೂರು, ಫಲವಾರು ಕಪಿಲಸಿದ್ಧಮಲ್ಲಿಕಾರ್ಜುನನೆಂಬ ಅದ್ಥಿದೇವತೆ.
--------------
ಸಿದ್ಧರಾಮೇಶ್ವರ
ಹತ್ತು ಮತ್ತರ ಭೂಮಿ, ಬತ್ತದ ಹಯನು, ನಂದಾದೀವಿಗೆಯ ನಡೆಸಿಹೆವೆಂಬವರ ಮುಖವ ನೋಡಲಾಗದು, ಅವರ ನುಡಿಯ ಕೇಳಲಾಗದು. ಅಂಡಜ, ಸ್ವೇದಜ, ಉದ್ಭಿಜ, ಜರಾಯುಜವೆಂಬ ಪ್ರಾಣಿಗಳಿಗೆ ಭವಿತವ್ಯವ ಕೊಟ್ಟವರಾರೊ ಒಡೆಯರಿಗೆ ಉಂಡಲಿಗೆಯ ಮುರಿದಿಕ್ಕಿದಂತೆ ಎನ್ನಿಂದಲೆ ಆುತ್ತು, ಎನ್ನಿಂದಲೆ ಹೋುತ್ತು ಎಂಬವನ ಬಾಯಲ್ಲಿ ಮೆಟ್ಟಿ ಹುಡಿಯ ಹೊಯ್ಯದೆ ಮಾಬನೆ ಕೂಡಲಸಂಗಮದೇವ 225
--------------
ಬಸವಣ್ಣ
ಹರಹರ, ಶಿವಶಿವ, ಜಯಜಯ, ಕರುಣಾಕರ ಮತ್ಪ್ರಾಣನಾಥ ಮಹಾಶ್ರೀಗುರುವೆ ನಿಷ್ಕಲ ಪರಶಿವತತ್ವವಯ್ಯ. ಗುರುವೆ ಸಕಲಾಗಮಂಗಳ ಮೂರ್ತಿಯಯ್ಯ. ಗುರುವೆ ಅಜ್ಞಾನವೆಂಬ ಕಾವಳಕ್ಕೆ ಚಿತ್ಸೂರ್ಯನಯ್ಯ. ಗುರುವೆ ನಂಬಿದ ಭಕ್ತರ ವಿಷಯವೆಂಬ ವನಾಂತರಕ್ಕೆ ಚಿಚ್ಚಂದ್ರನಯ್ಯ. ಗುರುವೆ ಆಸೆಯೆಂಬ ಪಾಶವ ದಹಿಸುವುದಕ್ಕೆ ಚಿದಗ್ನಿಯಯ್ಯ. ಗುರುವೆ ಪರಾತ್ಪರಮೂರ್ತಿಯಯ್ಯ. ಗುರುವೆ ಸಕಲಾಧಾರಮೂರ್ತಿಯಯ್ಯ. ಗುರುವೆ ಸಚ್ಚಿದಾನಂದಮೂರ್ತಿಯಯ್ಯ. ಗುರುವೆ ಸರ್ವಲೋಕ ಸೂತ್ರಾಧಾರಮೂರ್ತಿಯಯ್ಯ. ಗುರುವೆ ಪರಬ್ರಹ್ಮವಸ್ತುವಯ್ಯ. ಗುರುವೆ ನಿತ್ಯನಿರುಪಮನಯ್ಯ. ಗುರುವೆ ನಿಷ್ಕಳಂಕ ನಿಷ್ಪ್ರಪಂಚನಯ್ಯ ಗುರುವೆ ನಿರುಪಾದ್ಥಿಕ ನಿಶ್ಚಿಂತನಯ್ಯ ಗುರುವೆ ಆದಿ ಅನಾದಿಯಿಂದತ್ತತ್ತಲಾದ ನಿರವಯಮೂರ್ತಿಯಯ್ಯ. ಗುರುವೆ ಶಾಂತ ಸರ್ವಜÕಸ್ವರೂಪನಯ್ಯ. ಗುರುವೆ ನಿರಾಳ ನಿಷ್ಕಾಮ ನೋಡ. ಶ್ರೀಗುರುವೆ ಸಗುಣಾನಂದಮೂರ್ತಿ ನೋಡ ! ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಹಿಂದೆ ನೀ ಬಂದೆ ನಾನಾ ಭವಂಗಳಲ್ಲಿ, ನಾನಾ ವ್ಯಾಪಾರಕ್ಕೆ ನೀನೊಡೆಯನಾಗಿ. ಮತ್ರ್ಯದ ಸುಖದುಃಖ ನಿನಗೆ ನಿಶ್ಚಿಂತವಾಗಿಪ್ಪುದು. ಹಿಂದೆ ನಿನ್ನಂತೆ ನಾ ಬಂದು ನೊಂದುದಿಲ್ಲ. ಬಂದೆ ನಾ ಬಸವಣ್ಣನ ಕಥನದಿಂದ, ನಾ ತಂದ ಪದಾರ್ಥವೆಲ್ಲವ ನಿಮಗಿತ್ತೆ. ನಾನಿನ್ನಂಜುವೆ ಗುರುಲಿಂಗಜಂಗಮದಲ್ಲಿ ಪ್ರತ್ಯುತ್ತರಕ್ಕೆ. ಎನಗೆ ಮತ್ರ್ಯದ ಮಣಿಹ, ಕೃತ್ಯವಿನ್ನೆಷ್ಟು ದಿನ ಹೇಳಾ. ಅಂದು ನೀವು ಕೊಟ್ಟ ಒಪ್ಪದ ಚೀಟನೊಪ್ಪಿಸಿದೆ. ಮತ್ತೆ ಇನ್ನು ಸಂದೇಹವೆ, ಹೇಳಾ ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಹುಟ್ಟಿತ್ತಲ್ಲಾ ಉಂಟೆನಿಸಿತ್ತಲ್ಲಾ. ಕರುವಿಟ್ಟಿತ್ತಲ್ಲಾ ರೂಪಾಯಿತ್ತಲ್ಲಾ. ನೋಡ ನೋಡ ವಾಯುಗುಂದಿತ್ತಲ್ಲಾ. ನೋಡ ನೋಡ ಭಾವಗುಂದಿತ್ತಲ್ಲಾ. ಅರಿವು ವಿಕಾರದಲ್ಲಿ ಆಯಿತ್ತು, ಹೋಯಿತ್ತು, ಮಹಾಲಿಂಗ ತ್ರಿಪುರಾಂತಕಾ, ನಿಮಗೆರಗದ ತನು.
--------------
ಕಿನ್ನರಿ ಬ್ರಹ್ಮಯ್ಯ
ಹಳದಿಯ ಸೀರೆಯನುಟ್ಟು, ಬಳಹದೋಲೆಯ ಕಿವಿಯಲಿಕ್ಕಿ ಮೊಳಡಂಗೆಯ ಪಿಡಿದು, ಗುಲಗಂಜಿ ದಂಡೆಯ ಕಟ್ಟಿ ತುತ್ತುರುತುರು ಎಂಬ ಕೊಳಲ ಬಾರಿಸುತ ಅಪಳ ಚಪಳನೆಂಬ ಉಲಿವ ಗಂಟೆಯ ಕಟ್ಟಿ ತುತ್ತುರು ಜಂಗುಳಿ ದೈವಗಳನೆಲ್ಲವ ಹಿಂಡುಮಾಡಿ ಕಾವ ನಮ್ಮ ಶಂಭು ತೆಲುಗೇಶ್ವರನು ಮನೆಯ ಗೋವಳನೀತ.
--------------
ತೆಲುಗೇಶ ಮಸಣಯ್ಯ
ಹೃದಯಕಮಲಕರ್ಣಿಕಾವಾಸದಲ್ಲಿ ದಿಟಪುಟಜಾÕನ ಉದಯವಾಗಿ ದ್ಥಿಕ್ಕರಿಸಲಾಗಿ, ಸಟೆ ದೂರವಾಗಿ ವಿವರ್ಜಿತವಾದವು ನೋಡಾ. ಕುಟಿಲ ಕುಹಕ ಆಟಮಟ ಅಭ್ರಚ್ಛಾಯವಳಿದು ಹೋಗದ ಮುನ್ನ, ಸ್ಫಟಿಕ ಪ್ರಜ್ವಲಾಕಾರವಾಯಿತ್ತು ನೋಡಾ. ಆ ಶಿವಜಾÕನಪ್ರಭೆಯೊಳಗೆ ನಿಟಿಲಲೋಚನನೆಂಬ ನಿತ್ಯನ ಕಂಡು, ಅದೇ ಎನ್ನ ನಿಜವೆಂದು ಬೆರಸಿ ಅಬ್ಥಿನ್ನಸುಖಿಯಾಗಿರ್ದೆನಯ್ಯಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಹುಸಿಯಿಂದ ಶಿವನ ಮುಕುಟವ ಕಂಡೆನೆಂದು ಹುಸಿಯಂ ನುಡಿದು ಬ್ರಹ್ಮ ಭ್ರಷ್ಟನಾದ. ಮುಳ್ಳಿನಲ್ಲಿ ತೊನಚಿಯನಿದು ಜೀವಹಿಂಸೆಯ ಮಾಡಿದ ಮಾಂಡವ್ಯ ಶೂಲಕ್ಕೆ ಗುರಿಯಾದ. ಸೋಮಸುತನ ಮಗ ಶೂದ್ರಕವೀರಂಗೆ ಕಳವು ಹೊದ್ದಿ, ಶಿರಹರಿದು ಕಾಂಚಿಯಾಲದಲ್ಲಿ ಮೆರಯಿತ್ತು. ಅಕ್ಷಿಪಾದನಸ್ತ್ರೀ ಅಹಲ್ಯಾದೇವಿಗೆ ಅಳುಪಿದ ಶಕ್ರನ ಅಂಗ ಅನಂಗಮುದ್ರೆಯಾಯಿತ್ತು. ಕಾಂಕ್ಷೆ ಮಾಡಿದ ನಾಗಾರ್ಜುನ ಚಕ್ರದಲ್ಲಿ ಹತವಾದ. ಇಂತಿವರನಂತರು ಕೆಟ್ಟರು ನೋಡಯ್ಯಾ. ಸೌರಾಷ್ಟ್ರ ಸೋಮೇಶ್ವರನ ಶರಣರು ದೋಷವಿರಹಿತರಾಗಿ ಸ್ವರ್ಗ ಅಪವರ್ಗವ ಮೀರಿ ಲಿಂಗದಲ್ಲಿ ಐಕ್ಯರಾದರು.
--------------
ಆದಯ್ಯ
ಹೊಯಿದಡೆ ಅಂಗದ ಮೇಲಣ ನೋವ, ಮನವರಿವಂತೆ, ಬಾಹ್ಯ ಉಪಚರಣೆಯ ಪೂಜೆ, ನಿನಗೆ ಹೊರಗಾದುದುಂಟೆ ? ಆ ತೆರನನರಿ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗವು, ಒಳಗೂ ತಾನೆ, ಹೊರಗೂ ತಾನೆ.
--------------
ಸಗರದ ಬೊಮ್ಮಣ್ಣ
ಹಗಲು ಹನ್ನೆರಡುತಾಸು ತನ್ನ ಹಂಬಲದಲ್ಲಿ ವೇಳೆಕಳೆವುತಿರ್ದೆನವ್ವಾ. ಇರುಳು ಹನ್ನೆರಡುತಾಸು ತನ್ನನೇ ಎದ್ದೆದ್ದು ನೋಡುತಿರ್ದೆನವ್ವಾ. ಅಖಂಡೇಶ್ವರನೆಂಬ ನಲ್ಲನ ಹಂಬಲದಿಂದೆ ಸರ್ವಸಂಗವ ತೊರೆದೆನು ನೋಡಿರವ್ವಾ.
--------------
ಷಣ್ಮುಖಸ್ವಾಮಿ
ಹಾರುವನ ಕೊಂದು ಹಾರುವನಾಗಿ ಕರ್ಮಜ್ಞಾನ ಕಂಡು ಕಾಣಿಸದಿರ್ದು ಕರಗಿದರೆ ಆತನೇ ಗುರುನಿರಂಜನ ಚನ್ನಬಸವಲಿಂಗ.
--------------
ದೇಶಿಕೇಂದ್ರ ಸಂಗನಬಸವಯ್ಯ
ಹೆಣ್ಣನೊಲ್ಲೆನು ಎಂದಡೆನಗೆ ಹೆಣ್ಣಾಯಿತ್ತು, ಮನ್ನಣೆಯ ದಾನಕ್ಕೆ ಗುರಿಯಾದೆನು. ಎನ್ನನಿತ್ತೆನು ಎನ್ನನೊಲ್ಲೆನು ಎಂದೆಂಬವನ ಇನ್ನು ಭವಕೆ ತಂದೆನೆಂದೆನುತಿದೆ ಮಾಯೆ ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ

ಇನ್ನಷ್ಟು ...
-->