ಅಥವಾ

ಒಟ್ಟು 83 ಕಡೆಗಳಲ್ಲಿ , 32 ವಚನಕಾರರು , 69 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಿವತತ್ವ ಐದು ಅವಾವೆಂದಡೆ; ಶಿವ, ಶಕ್ತಿ, ಸಾದಾಖ್ಯ, ಈಶ್ವರ, ಶುದ್ಧ ವಿದ್ಯೆ- ಇಂತು ಶಿವತತ್ವ ಐದು. ಇನ್ನು ವಿದ್ಯಾತತ್ತ್ವವೆಂತೆಂದಡೆ: ಕಲೆ, ರಾಗ, ನಿಯತಿ, ವಿದ್ಯೆ, ಪುರುಷ, ಪ್ರಕೃತಿ - ಇಂತು ವಿದ್ಯಾತತ್ತ್ವ ಏಳು. ಇನ್ನು ಕರಣಂಗಳೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ - ಇವು ಕರಣತತ್ತ್ವ ನಾಲ್ಕು. ಇನ್ನು ಇಂದ್ರಿಯಂಗಳೆಂತೆಂದಡೆ: ಶ್ರೋತ್ರ, ತ್ವಕ್ಕು, ನೇತ್ರ, ಜಿಹ್ವೆ, ಘ್ರಾಣ - ಇಂತು ಬುದ್ಧೀಂದ್ರಯಂಗಳು ಐದು. ಇನ್ನು ಕರ್ಮೇಂ್ರಯಂಗಳೆಂತೆಂದಡೆ: ವಾಕ್ಕು, ಪಾದ, ಪಾಣಿ, ಗುಹ್ಯ, ಪಾಯು - ಇಂತು ಕರ್ಮೇಂ್ರಯಂಗಳು ಐದು. ಇನ್ನು ತನ್ಮಾತ್ರಂಗಳೆಂತೆಂದಡೆ: ಶಬ್ದ, ಸ್ಪರ್ಶ, ರೂಪು, ರಸ ಗಂಧ - ಇಂತು ಜ್ಞಾನೇಂದ್ರಿಯ ವಿಷಯ ಐದು. ಇನ್ನು ಕರ್ಮೇಂ್ರಯ ವಿಷಯವೆಂತೆಂದಡೆ: ವಚನ, ಗಮನ, ಆದಾನ, ಆನಂದ, ವಿಸರ್ಜನ ಇಂತು ಕರ್ಮೇಂ್ರಯ ವಿಷಯ ಐದು. ಇನ್ನು ವಾಕ್ಕುಗಳಾವುವೆಂದಡೆ: ಪರಾ, ಪಶ್ಯಂತಿ, ಮಧ್ಯಮೆ, ವೈಖರಿ - ಇಂತು ವಾಕ್ಕು ನಾಲ್ಕು. ಸಾತ್ಪಿ, ರಾಜಸ, ತಾಮಸ - ಇಂತು ಗುಣ ಮೂರು. ರಾಜಸಹಂಕಾರ, ವೈಖರಿಯಹಂಕಾರ, ಭೂತಾಯಹಂಕಾರ -ಇಂತು ಅಹಂಕಾರ ಮೂರು. ಪೃಥ್ವಿ, ಅಪ್ಪು, ಅಗ್ನಿ, ವಾಯು, ಆಕಾಶ - ಇಂತು ಭೂತಂಗಳು ಐದು. ಭೂತಕಾರ್ಯ ಇಪ್ಪತ್ತೈದು - ಅವಾವೆಂದಡೆ: ಅಸ್ಥಿ, ಮಾಂಸ, ತ್ವಕ್, ನಾಡಿ, ರೋಮ - ಈ ಐದು ಪೃಥ್ವೀಪಂಚಕ. ಲಾಲಾ, ಮೂತ್ರ, ಸ್ವೇದ, ಶುಕ್ಲ, ಶೋಣಿಕ - ಈ ಐದು ಅಪ್ಪುವಿನ ಪಂಚಕ. ಕ್ಷುಧೆ, ತೃಷೆ, ನಿದ್ರೆ, ಆಲಸ್ಯ, ಸ್ತ್ರೀಸಂಗ - ಈ ಐದು ಅಗ್ನಿಪಂಚಕ. ಪರಿವ, ಪಾರುವ, ಸುಳಿವ, ನಿಲುವ, ಅಗಲುವ - ಈ ಐದು ವಾಯುಪಂಚಕ. ರಾಗ, ದ್ವೇಷ, ಭಯ, ಲಜ್ಜೆ, ಮೋಹ - ಈ ಐದು ಆಕಾಶವಂಚಕ. ಇಂತೀ ಇಪ್ಪತ್ತೈದು ಭೂತಕಾರ್ಯ ಪಂಚೀಕೃತಗಳು. ಇನ್ನು ದಶವಾಯುಗಳು: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯ - ಈ ಹತ್ತು ವಾಯುಗಳು, ಇನ್ನು ದಶನಾಡಿಗಳು: ಇಡಾ, ಪಿಂಗಳಾ, ಸುಷುಮ್ನಾ, ಗಾಂಧಾರಿ, ಹಸ್ತಿ, ಜಿಹ್ವೆ, ಪುಷ್ಕರ, ಪಯಸ್ವಿನಿ, ಆಲಂಬು, ಲಕುಹ, ಶಂಕಿನಿ - ಇಂತೀ ಹತ್ತು ನಾಡಿಗಳು. ಇಂತು ತತ್ವ ತೊಂಬತ್ತಾರು ಕೂಡಿಕೊಂಡು ಆತ್ಮನು ಭೂಮಧ್ಯದಲ್ಲಿರ್ದು ಅವಸ್ಥೆಬಡುವುದನು ಹೇಳಿಹೆನು. ಅದೆಂತೆಂದಡೆ ಅವಸ್ಥೆಯ ಕ್ರಮ: ಪ್ರೇರಕಾವಸ್ಥೆ ಒಂದು, ಅಧೋವಸ್ಥೆ ಐದು, ಊಧ್ರ್ವಾವಸ್ಥೆ ಐದು, ಮಧ್ಯಾವಸ್ಥೆ ಐದು, ಕೇವಲಾವಸ್ಥೆ ಒಂದು, ಸಕಲಾವಸ್ಥೆ ಒಂದು, ಶುದ್ಧಾವಸ್ಥೆ ಒಂದು, ನಿರ್ಮಲಾವಸ್ಥೆ ಐದು, ಅಂತೂ ಅವಸ್ಥೆ ಇಪ್ಪತ್ತನಾಲ್ಕು, ಅವರಲ್ಲಿ ಪ್ರೇರಕಾವಸ್ಥೆಯೆಂತೆಂದಡೆ: ತತ್ತ್ವಸಮೂಹಂಗಳನು ಕೂಡಿಕೊಂಡು ಇರ್ದಲ್ಲಿ ಆ ಪುರುಷನು ಪಂಚೇಂ್ರಯಂಗಳಲ್ಲಿ ವಿಷಯಂಗಳು ಅತಿ ಚಮತ್ಕಾರದಲ್ಲಿ ಅರಿವವೇಳೆ ಪ್ರೇರಕಾವಸ್ಥೆಯೆಂದು. ಅದಕ್ಕೆ ಪ್ರೇರಿಸುವ ತತ್ತ್ವಂಗಳಾವುವೆಂದಡೆ- ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು, ಭೂತಂಗಳಲ್ಲಿ ಒಂದು, ಇಂದ್ರಿಯಂಗಳಲ್ಲಿ ಒಂದು -ಇಂತೀ ಹದಿನೆಂಟು ತತ್ವಂಗಳಲ್ಲಿ ವಿಷಯಂಗಳನರಿವನು. ಅದು ಹೇಗೆಂದಡೆ - ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು - ಇಂತು ಹದಿನಾರು ತತ್ತ್ವ. ಆಕಾಶಭೂತವೂ ಶ್ರೋತ್ರೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನದಲ್ಲಿರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಸೋಂಕನರಿವ; ತೇಜಭೂತವೂ ನಯನೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರೂಪವನರಿವ; ಅಪ್ಪುಭೂತವೂ ಜಿಹ್ವೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರಸವನರಿವ; ಪೃಥ್ವಿಭೂತವೂ ಪ್ರಾಣೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಗಂಧವನರಿವ. ಇಂತೀ ವಿಷಯಂಗಳನರಿವುದು. ಇದು ಪ್ರೇರಕಾವಸ್ಥೆಯೆಂದೆನಿಸುವದು. ಇನ್ನು ಅಧೋವಸ್ಥೆ ಐದಕ್ಕೆ ವಿವರ: ಪ್ರಥಮದಲ್ಲಿ ಜಾಗ್ರಾವಸ್ಥೆ ಅದಕ್ಕೆ ಪ್ರೇರಿಸುವ ತತ್ತ್ವಂಗಳು ಬಿಟ್ಟಿಹವಾವುವೆಂದಡೆ: ಶಿವತತ್ತ್ವ ಐದು, ಮಾಯಾತತ್ತ್ವ ಒಂದು, ವಿದ್ಯಾತತ್ತ್ವ ಆರು, ಭೂತಂಗಳು ಐದು ಇಂತು ಹದಿನೇಳು ಬಿಟ್ಟಿಹುದು. ಇನ್ನು ಜಾಗ್ರಾವಸ್ಥೆಯಲ್ಲಿಹ ತತ್ತ್ವಗಳೆಷ್ಟೆಂದಡೆ: ಕರಣ ನಾಲ್ಕು, ಬುದ್ಧೀಂದ್ರಿಯ ಐದು, ಕರ್ಮೇಂದ್ರಿಯ ಐದು, ವಿಷಯ ಹತ್ತು, ವಾಯು ಹತ್ತು. ಇಂತು ಮೂವತ್ತನಾಲ್ಕು ತತ್ತ್ವಂಗಳಲ್ಲಿ ಆ ತನು ಕೇಳದೆ ಕೇಳುವ, ಮಾತಾಡದ ಹಾಂಗೆ ಆಲಸ್ಯದಲ್ಲಿ ಮಾತನಾಡುತ್ತಿಹನು, ಇಂತು ಜಾಗ್ರಾವಸ್ಥೆ. ಇನ್ನು ಸ್ವಪ್ನಾವಸ್ಥೆ. ಅದಕ್ಕೆ ಹತ್ತು ತತ್ತ್ವಂಗಳು ಬಿಟ್ಟಿಹವು. ಅವಾವುವೆಂದಡೆ:ಬುದ್ಧೀಂ್ರಯ ಐದು, ಕರ್ಮೇಂದ್ರಿಯ ಐದು. ಲಲಾಟದಲ್ಲಿ ನಿಲುವು ಕಂಠಸ್ಥಾನದಲ್ಲಿ ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡಿಹುದು. ಅದೆಂತೆಂದಡೆ:ಮಾಯೆ ಒಂದು, ವಾಯು ಹತ್ತು, ವಿಷಯ ಹತ್ತು, ಕರಣ ನಾಲ್ಕು ಇಂತು ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡು ಸ್ವಪ್ನಂಗಳ ಕಾಣುತಿಹನು. ಇದು ಸ್ವಪ್ನಾವಸ್ಥೆ. ಇನ್ನು ಸುಷುಪ್ತಾವಸ್ಥೆಗೆ ಬಹಲ್ಲಿ ಕಂಠಸ್ಥಾನದಲ್ಲಿ ನಿಂದ ತತ್ತ್ವಂಗಳಾವಾವವೆಂದಡೆ- ಮಾಯೆ ಒಂದು, ವಾಯು ಒಂಬತ್ತು ವಿಷಯ ಹತ್ತು, ಕರಣ ಮೂರು- ಇಂತು ಇಪ್ಪತ್ತಮೂರು ತತ್ತ್ವ. ಇನ್ನು ಹೃದಯಸ್ಥಾನದಲ್ಲಿ ಕೂಡಿಹ ತತ್ತ್ವ ಆವಾವೆಂದಡೆ: ಪ್ರಾಣವಾಯು ಒಂದು, ಪ್ರಕೃತಿ ಒಂದು, ಚಿತ್ತ ಒಂದು -ಇಂತು ಸುಷುಪ್ತಾವಸ್ಥೆಯಲ್ಲಿ ತತ್ತ್ವ. ಇನ್ನು ತೂರ್ಯಾವಸ್ಥೆಗೆ ಬಹಾಗ ಹೃದಯದಲ್ಲಿ ನಿಂದ ತತ್ತ್ವ ಚಿತ್ತ ಒಂದು. ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿಹ ತತ್ತ್ವ ಪ್ರಾಣವಾಯು ಒಂದು, ಪ್ರಕೃತಿ ಒಂದು. ಅತೀತಾವಸ್ಥೆಗೆ ಹೋಹಾಗ ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿ ಪ್ರಾಣವಾಯುವುಳಿದು ಅತೀತಾವಸ್ಥೆಯಲ್ಲಿ ಪ್ರಕೃತಿಗೂಡಿ ಮೂಲಾಧಾರದಲ್ಲಿ ಆಣವಮಲಯುಕ್ತವಾಗಿ ಏನೆಂದರಿಯದೆ ಇಹುದು, ಇಂತಿದು ಅಧೋವಸ್ಥೆ. ಇನ್ನು ಊಧ್ರ್ವಾವಸ್ಥೆ, ಅತೀತದಲ್ಲಿ ಪ್ರಕೃತಿಕಾರ್ಯಂಗಳೆಲ್ಲವನೂ ಬಿಟ್ಟು, ತತ್ತ್ವಂಗಳೊಂದೂ ಇಲ್ಲದೆ, ಅಣವಮಲಸ್ವರೂಪವಾಗಿ ಮೂಲಾಧಾರದಲ್ಲಿ ಬ್ದಿರ್ದ ಆತ್ಮನಿಗೆ ಪರಮೇಶ್ವರನ ಕರುಣದಿಂದ ಕ್ರಿಯಾಶಕ್ತಿ, ಶಕ್ತಿತತ್ತ್ವಮಂ ಪ್ರೇರಿಸುವುದು. ಆ ಶಕ್ತಿ ಕಲೆ, ಕಾಲ, ನಿಯತಿಗಳಂ ಪ್ರೇರಿಸುವುದು. ಆ ವೇಳೆಯಲ್ಲಿ ಸೂಕ್ಷೆ ್ಮಯೆಂಬ ವಾಕ್ಕು ಕೂಡುವುದು. ಇಂತು ಅತೀತದಲ್ಲಿ ಅರುಹಿಸುವ ತತ್ತ್ವಂಗಳು: ಶಕ್ತಿತತ್ತ್ವ, ಕಲೆ, ಕಾಲ, ನಿಯತಿ, ಸೂಕ್ಷೆ ್ಮ ಇಂತು ತತ್ತ್ವಂಗಳು ಐದು. ಇನ್ನು ತೂರ್ಯಾವಸ್ಥೆಗೆ ಬಹಾಗ ಹಿಂದೆ ಹೇಳಿದ ತತ್ತ್ವ ಐದು, ಪಶ್ಯಂತಿಯೆಂಬ ವಾಕ್ಕು, ಪ್ರಾಣವಾಯು ಕೂಡಿ ತತ್ತ್ವ ಏಳು ತೂರ್ಯಾವಸ್ಥೆಯಲ್ಲಿ ಪ್ರೇರಿಸುವುದು: ಹಿಂದೆ ಹೇಳಿದ ತತ್ತ್ವ ಏಳು ಕೂಡಿ, ಹೃದಯಸ್ಥಾನದಲ್ಲಿ ಮಧ್ಯಮೆ, ಚಿತ್ತ - ಎರಡು ಕೂಡುತ್ತಿಹವು. ಆ ವೇಳೆಯಲ್ಲಿ ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಪ್ರೇರಿಸುವುದು. ಆ ಶುದ್ಧವಿದ್ಯಾತತ್ತ್ವ ಆತ್ಮಂಗೆ ಅರಿವನೆಬ್ಬಿಸುವುದು. ಇಚ್ಛಾಶಕ್ತಿ ಈಶ್ವರತತ್ತ್ವಮಂ ಪ್ರೇರಿಸುವುದು; ಈಶ್ವರತತ್ತ್ವ ರಾಗತತ್ತ್ವಮಂ ಪ್ರೇರಿಸುವುದು; ರಾಗತತ್ತ್ವ ಆತ್ಮಂಗೆ ಇಚ್ಛೆಯನೆಬ್ಬಿಸುವುದು. ಆಶಕ್ತಿ ಸಾದಾಖ್ಯತತ್ತ್ವಮಂ ಪ್ರೇರಿಸುವುದು; ಸಾದಾಖ್ಯತತ್ತ್ವ ಪ್ರಕ್ಕೃತಿತ್ತ್ವಮಂ ಪ್ರೇರಿಸುವುದು; ಪರಾಶಕ್ತಿ ಶಿವತತ್ತ್ವಮಂ ಪ್ರೇರಿಸುವುದು; ಶಿವತತ್ತ್ವ ಗುಣತತ್ತ್ವಮಂ ಪ್ರೇರಿಸುವುದು. ಇಂತು ಹದಿನೆಂಟು ತತ್ತ್ವ ಆವಾವವೆಂದಡೆ: ಪಂಚಶಕ್ತಿ ಹೊರಗಾಗಿ ಶಿವತತ್ತ್ವ ಐದು, ವಿದ್ಯಾತತ್ತ್ವ ಐದು, ಪ್ರಾಣವಾಯು ಒಂದು, ಪ್ರಕೃತಿ ಒಂದು, ಗುಣ ಮೂರು, ಚಿತ್ತ ಒಂದು, ಪುರುಷ ಒಂದು. ಇಂತು ತತ್ತ್ವ ಹದಿನೇಳು ಸುಷುಪ್ತಾವಸ್ಥೆಯಲ್ಲಿ ಅರುಹಿಸುವುವು. ಇನ್ನು ಸ್ವಪ್ನಾವಸ್ಥೆಯ ಕಂಠದಲ್ಲಿಹ ತತ್ತ್ವ: ಜ್ಞಾನೇಂದ್ರಿಯ ವಿಷಯ ಹತ್ತು, ಕರ್ಮೇಂದ್ರಿಯ ವಿಷಯ ಹತ್ತು, ಪ್ರಾಣವಾಯು ಉಳಿಯೆ, ವಾಯುಚಿತ್ತ ಉಳಿಯೆ, ತ್ರಿಕರಣ ಅಹಂಕಾರ ಮೂರು, ವೈಖರಿಯ ವಾಕ್ಕು ಒಂದು ಇಂತು ಇಪ್ಪತ್ತನಾಲ್ಕು ತತ್ತ್ವ. ಸುಷುಪ್ತಾವಸ್ಥೆಯಲ್ಲಿ ಹಿಂದೆ ಹೇಳಿದ ತತ್ತ್ವ ಹದಿನೇಳು ಕೂಡಿ ತತ್ತ್ವ ನಲವತ್ತೊಂದು ಸ್ವಪ್ನಾವಸ್ಥೆಯಲ್ಲಿ ಕೂಡಿಹವು. ಆಗ ತನ್ನೊಳಗೆ ಅರುಹಿಸುವ ಪ್ರಕಾರವೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ, ಹೃದಯ ಈ ಐದು. ಚಿತ್ತವನು ಆಕಾರ ಪ್ರೇರಿಸುವುದು. ಆ ಅಕಾರವನು ಬ್ರಹ್ಮ ಪ್ರೇರಿಸುವನು, ಬುದ್ಧಿಯನು ಉಕಾರ ಪ್ರೇರಿಸುವುದು; ಉಕಾರವನು ವಿಷ್ಣು ಪ್ರೇರಿಸುವನು, ಅಹಂಕಾರವನು ಮಕಾರ ಪ್ರೇರಿಸುವುದು; ಮಕಾರವನು ರುದ್ರ ಪ್ರೇರಿಸುವನು, ಮನವನು ಬಿಂದು ಪ್ರೇರಿಸುವುದು; ಬಿಂದುವನು ಈಶ್ವರ ಪ್ರೇರಿಸುವನು; ಹೃದಯವನು ನಾದ ಪ್ರೇರಿಸುವುದು; ನಾದವನು ಸದಾಶಿವ ಪ್ರೇರಿಸುವನು. ಈ ಹದಿನೈದು ತನ್ನೊಳಗೆ ಸೂಕ್ಷ ್ಮಶರೀರದಲ್ಲಿಹುದು. ...........ಗೀ(?) ಅಷ್ಟತನುವಿನಿಂದ ಸ್ವರ್ಗನರಕವನರಿವನು. ಮುಂದೆ ಜಾಗ್ರಾವಸ್ಥೆಯಲ್ಲಿ ಅರುಹಿಸುವ ತತ್ತ್ವ ಅವಾವವೆಂದಡೆ- ಭೂತ ಐದು, ಉಭಯೇಂದ್ರಿಯ ಹತ್ತು, ಭೂತಕಾರ್ಯ ಇಪ್ಪತ್ತೈದು, ನಾಡಿ ಹತ್ತು, ಅಂತು ತತ್ತ್ವ ನಲವತ್ತೊಂದು. ಅಂತು ಕೂಡಿ ತತ್ತ್ವ ತೊಂಬತ್ತೊಂದು. ಇಂತಿದು ಊಧ್ರ್ವಾವಸ್ಥೆ. ಇನ್ನು ಸಕಲಾವಸ್ಥೆಯೆಂತೆಂದಡೆ: ತೊಂಬತ್ತೊಂದು ತತ್ತ್ವ ಅವರಲ್ಲಿ ಪ್ರೇರಕತತ್ವವೊಂದು ಪ್ರೇರಿಸುವಲ್ಲಿ ಸಕಲಾವಸ್ಥೆ. ಅದು ಶಿವನನೂ ತನ್ನನೂ ಪಾಶಪಂಚಕವನು ಅರಿಯದೆ ಎಲ್ಲ ವಿಷಯಂಗಳನು ಅರಿವುತ್ತಿಹುದು. ಇನ್ನು ಮಧ್ಯಮಾವಸ್ಥೆಯೆಂತೆಂದಡೆ- ಹಿಂದೆ ಕಂಡವನ ಈಗಲೆಂದು ಅರಿಯಹುದೀಗ ಜಾಗ್ರ ಅತೀತ. ಹಿಂದೆ ಕಂಡವನ ಅರಿದ ಹಾಂಗಿಹುದೀಗ ಜಾಗ್ರ ತುರೀಯ. ಹಿಂದೆ ಕಂಡವನ ಮೆಲ್ಲನೆಚ್ಚತ್ತು ಅರಿವುದು ಜಾಗ್ರದ ಸುಷುಪ್ತಿ. ಹಿಂದೆ ಕಂಡವನ ಕಂಡಾಗಲೆ ಅರಿವುದು ಜಾಗ್ರದ ಸ್ವಪ್ನ. ಹಿಂದೆ ಕಂಡವನ ಹೆಸರು, ಇದ್ದ ಸ್ಥಲ, ಅವನ ಕಾಯಕ ಮುಂತಾಗಿ ಚೆನ್ನಾಗಿ ಅರಿವುದು ಜಾಗ್ರದ ಜಾಗ್ರ. ಅದೆಂತೆಂದಡೆ, ಜಾಗ್ರದಲ್ಲಿ ಪುರುಷತತ್ತ್ವದಲ್ಲಿ ಎಲ್ಲ ತತ್ತ್ವಗಳು ಕೂಡಿದ ಕಾರಣಂದ ತಾನೇನ ನೆನೆದಿದ್ದುದನು ಮರೆವುದು ಜಾಗ್ರ ಅತೀತ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಕೂಡಲು ನೆನೆದುದನು ಹೇಳಿಹೆನೆಂದಡೆ ತೋರುವ ಹಾಂಗೆ ಇಹುದು ತೋರದಿಹುದು ಜಾಗ್ರದ ತುರೀಯ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಚಿತ್ತವು ಕೂಡಲು ನೆನೆದುದನು ಮೆಲ್ಲನೆಚ್ಚತ್ತು ಅರಿದು ಹೇಳುವುದು ಜಾಗ್ರದ ಸುಷುಪ್ತಿ, ಆ ಪುರುಷತತ್ತ್ವದಲ್ಲಿ ಕರಣ ನಾಲ್ಕು, ಇಂದ್ರಿಯ ಹತ್ತು, ವಾಯು ಹತ್ತು, ವಿಷಯ ಹತ್ತು ಅಂತೂ ತತ್ತ್ವ ಮೂವತ್ತನಾಲ್ಕು ಕೂಡಲಾಗಿ, ತಾ ನೆನೆದುದನು ಇದ್ದುದನು ಚೆನ್ನಾಗಿ ಅರಿದು ವಿವರದಿಂದ ಹೇಳುವುದು ಇದು ಜಾಗ್ರದ ಜಾಗ್ರ. ಇಂತಿದು ಮಾಧ್ಯಮಾವಸ್ಥೆ. ಇನ್ನು ಕೇವಲಾವಸ್ಥೆಯೆಂತೆಂದಡೆ: ಶುದ್ಧತತ್ತ್ವ ವಿದ್ಯಾತತ್ತ್ವವನೆಲ್ಲವ ಬಿಟ್ಟು ಆಣವಮಲದಲ್ಲಿ ಆಣವಸ್ವರೂಪಾಗಿ ಕಣ್ಗತ್ತಲೆಯಲ್ಲಿ ಏನೂ ಕಾಣದ ಕಣ್ಣಿನ ಹಾಂಗೆ ಇದ್ದುದೀಗ ಕೇವಲಾವಸ್ಥೆ. ಇನ್ನು ಶುದ್ಧಾವಸ್ಥೆಯೆಂತೆಂದಡೆ: ಕರ್ಮಸಮಾನದಲ್ಲಿ ಶಕ್ತಿಪಾತವಾಗಿ,ತ್ರಿಪದಾರ್ಥಜ್ಞಾನವಾಗಿ, ದಿಟವೆಂಬಂತೆ ತೋರುತ್ತಿಹ ದೇಹಾಪ್ರಪಂಚುವನು ಸಟೆಯೆಂದು ಕಸವ ಕಳೆವ ಹಾಂಗೆ ಕಳೆದು, ತತ್ತ್ವಂಗಳೊಳಗೆ ಇದ್ದು ತತ್ತ್ವಂಗಳಿಗೆ ಅನ್ಯವಾಗಿ, ಆ ತತ್ತ್ವಂಗಳನು ಅರಿದ ಸಕಲಾವಸ್ಥೆಯೆಂಬ ಕೇವಲಾವಸ್ಥೆಯೆಂಬ ಈ ಎರಡು ಅವಸ್ಥೆಗಳೂ ತನ್ನನು ಶಿವನನು ಅರಿವುದಕ್ಕೆ ಪ್ರಯೋಜನವಲ್ಲವೆಂದು ಎರಡವಸ್ಥೆಯನೂ ಬಿಟ್ಟು ಸಕಲವನೂ ಹೊದ್ದದೆ ಕೇವಲವನೂ ಹೊದ್ದದೆ ತ್ರಾಸಿನ ಮುಳ್ಳು ನಿಂದ ಹಾಂಗೆ ನಿಂದುದು ಶುದ್ಧಾವಸ್ಥೆ. ಇದು ಶಿವನ ಶರಣರಿಗಲ್ಲದೆ ಇಲ್ಲ. ಇನ್ನು ನಿರ್ಮಲಾವಸ್ಥೆ ಎಂತೆಂದಡೆ- ಶಿವಜ್ಞಾನದಲ್ಲಿ ಬೋಧವನಳಿದು ಜ್ಞೇಯದೊಳು ಕೂಡಿಹ ಜೀವನ್ಮುಕ್ತರಿಗೆ ಪಂಚಾವಸ್ಥೆಗಳು. ಆ ಅವಸ್ಥೆಗಳಲ್ಲಿ ತತ್ತ್ವಗಳಾವಾವೆಂದಡೆ: ಶಿವತತ್ತ್ವ, ಶಕ್ತಿತತ್ತ್ವ, ಸಾದಾಖ್ಯತತ್ತ್ವ, ಈಶ್ವರತತ್ತ್ವ, ಶುದ್ಧ ವಿದ್ಯಾತತ್ತ್ವ ಈ ಐದು ಮೊದಲಾಗಿ ಪರಾ, ಆದಿ, ಇಚ್ಛೆ, ಜ್ಞಾನ, ಕ್ರಿಯೆಯೆಂಬ ಶಕ್ತಿ ಪಂಚಕಗಳು ಉಸುರಾಗಿ ಜಾಗ್ರಾವಸ್ಥೆಯಲ್ಲಿ ಅರಿವುತ್ತಿಹನು. ಕ್ರಿಯಾಶಕ್ತಿ ಶಕ್ತಿತತ್ತ್ವಮಂ ಬಿಟ್ಟು ಉಳಿದ ಶಕ್ತಿ ನಾಲ್ಕು ಒಡಲುಸುರಾಗಿ ಅರಿಯೆ ಸ್ವಪ್ನಾವಸ್ಥೆ. ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಮೂರರಲ್ಲಿ ಅರಿಯೆ ಸುಷುಪ್ತಾವಸ್ಥೆ. ಇಚ್ಛಾಶಕ್ತಿ ಈಶ್ವರತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಎರಡರಲ್ಲಿ ಅರಿವುದು ತೂರ್ಯಾವಸ್ಥೆ. ಆಶಕ್ತಿ ಸಾದಾಖ್ಯತತ್ತ್ವವೂ ಬಿಟ್ಟು ಕಳೆದು ಉಳಿದ ಪರಾಶಕ್ತಿ ಒಂದು ಶಿವತತ್ತ್ವ ಒಂದರಲ್ಲಿ ಅರಿಯೆ ನಿರ್ಮಲದ ಅತೀತಾವಸ್ಥೆ. ಇನ್ನು ಈ ಶಕ್ತಿ ಶಿವತತ್ತ್ವಂಗಳೆ ಒಡಲುಸುರಾಗಿ ಇದ್ದಲ್ಲಿ ಶಿವನಲ್ಲದೆ ಮತ್ತೊಂದು ಏನೂ ತೋರದು. ಅಂಥ ಜೀವನ್ಮುಕ್ತರು ನಿರ್ಮಲಜಾಗ್ರದಲ್ಲಿ ಎಂತು ಅರಿವುತ್ತಿಪ್ಪರೆಂದಡೆ ಆ ಪರಮಾವಸ್ಥೆಯನೂ ಅನುಭವದಲ್ಲಿ ಅರಿವುದು, ಮಲಪಂಚಕಗಳನು ಅರುಹಿಸುವ ಸದಮಲ ಶಿವಜ್ಞಾನ ಪರೆ ಮೊದಲಾದ ಪೂರ್ಣ ಬೋಧದಲ್ಲಿ ಕೂಡಿ ತಾನು ಇಲ್ಲದಿರುವಂಧು ಏನೂ ತೋರದ ಪೂರ್ಣ ಬೋಧವಾಗಿ ನಿಂದುದು ನಿರ್ಮಲಜಾಗ್ರ. ಇನ್ನು ಪರಾಶಕ್ತಿಯನೂ ಶಿವತತ್ತ್ವವನೂ ಮೀರಿ, ಪರದಲಿ ಬೆರೆದು, ಅದ್ವೆ ೈತವೂ ಅಲ್ಲದೆ, ದ್ವೆ ೈತವೂ ಅಲ್ಲದೆ, ದ್ವೆ ೈತಾದ್ವೆ ೈತವೂ ಅಲ್ಲದೆ ಇನತೇಜದಲ್ಲಿ ಕಣ್ಣು ತೇಜ ಕೂಡಿದ ಹಾಂಗೆ ಆಣವದ ಅಣುವಿನ ಹಾಂಗೆ ತಾನು ಇಲ್ಲದೆ ಇಹನು. ಇದು ಶಿವಾದ್ವೆ ೈತ. ಇಂತಲ್ಲದೆ ಆತ್ಮ ಆತ್ಮ ಕೆಟ್ಟಡೆ, ಆತ್ಮವರ್ಗ ಮುಕ್ತಿಸುಖವಿಲ್ಲ, ಅಳಿದ ಠಾವಿನಲ್ಲಿ ಹುಟ್ಟುವುದಾಗಿ, ಶಿವ ತಾನೆ ಆತ್ಮನಾಗಿ ಹುಟ್ಟುವನಹುದು: ಶಿವನಲ್ಲಿ ಹುಟ್ಟಿ ಮಲ ಉಳ್ಳದಹುಲ್ಲ. ಶಿವ ತಾನೆ ಹುಟ್ಟಿಸಿ ನರಕ - ಸ್ವರ್ಗದ ಮಾನವನಹನು, ಪಕ್ಷಪ್ಕಾಯಹನು, ನಿಃಕರುಣಿಯಹನು, ವಿಕಾರಿಯಹನು. ಶಿವನ್ಲ ಕೂಡದೆ ಬೇರಾಗಿ ಇಹನೆಂದಡೆ, ಮುಕ್ತಿಯೆಂಬ ಮಾತು ಇಲ್ಲವಹುದು. ಪಂಚಕೃತ್ಯವ ಮಾಡಲು ಕಾರಣವಿಲ್ಲ ಒಂದಾಗೆ! ಎರಡಾಗದೆ ಭೇದಾಭೇದವಾಗಿಹನೆಂದಡೆ ಶಿವಭಕ್ತಿಯನೂ ಶಿವಕ್ರಿಯೆಗಳನೂ ಮಾಡಿ ಶಿವನ ಕೂಡಿಹನೆಂದೆನ್ನಬೇಡ! ಮುನ್ನವೆ ಒಂದಾಗಿ ಇದ್ದನಾಗಿ, ಈ ಭೇದವ ತಿಳಿಯಬಲ್ಲಡೆ ಆತನೆ ಶರಣ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ಕಾಳ ರಕ್ಕಸಿಗೆ ಮೂರು ಬೆನ್ನು, ಐದು ಬಸುರು, ಆರು ಕಣ್ಣು, ಏಳು ಮೊಲೆ, ಎಂಟು ಭುಜ, ಹತ್ತು ತೋಳು, ಹದಿನಾರು ಪಾದ, ಹದಿನೆಂಟು ತಲೆ, ಮೂವತ್ತಾರು ಬಾಯಿ, ಐವತ್ತೆರಡು ನಾಲಗೆ, ಅರುವತ್ತುನಾಲ್ಕು ಕೋರೆದಾಡೆ. ಈ ಪರಿಯಲ್ಲಿ ಜಗವೆಲ್ಲವನಗಿದಗಿದು ಉಗುಳುತ್ತಿರ್ದಳಯ್ಯಾ, ಸೌರಾಷ್ಟ್ರ ಸೋಮೇಶ್ವರಾ, ನೀ ಮುಟ್ಟೆ ಬಟ್ಟಬಯವಾದಳು.
--------------
ಆದಯ್ಯ
ನವಿರೂ ನೆಳಲೂ ಇಲ್ಲದಂದು, ಷಡುಶೈವರಿಲ್ಲದಂದು ಬ್ರಹ್ಮಾಂಡ ಭಾಂಡ ಭಾಂಡಾವಳಿಗಳಿಲ್ಲದಂದು ಪಿಂಡಾಂಡ ಅಂಡ ಪಿಂಡಾವಳಿಗಳಿಲ್ಲದಂದು ಅಖಂಡಿತ ಜ್ಯೋತಿರ್ಮಯಲಿಂಗ ! ಶರಣನ ಲೀಲೆಯಿಂದಾದ ಏಳು ತೆರದ ಗಣ[ಘನ?] ಪಿಂಡವಂ ಕಂಡು ಅಖಂಡಿತನಾಗಿ ಬದುಕಿದೆನಯ್ಯಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ತ್ರಿಭುವನಗಿರಿಯರಸರು ತ್ರೈಲೋಕಪಟ್ಟಣಕ್ಕೆ ದಾಳಿಯನಿಕ್ಕಿದರು. ಆ ಪಟ್ಟಣ ಸುತ್ತಿ ಮುತ್ತಿಕೊಂಡರು. ಏಳು ಭೂದುರ್ಗಂಗಳು ಕೊಳಹೋದವು. ಅರಮನೆಯ ಹೊಕ್ಕರು, ಹನ್ನೆರಡುಸಾವಿರ ರಾಣಿವಾಸವ ಸೆರೆ ಹಿಡಿದರು. ಆನೆಯ ಸಾಲೆಗೆ ಕಿಚ್ಚನಿಕ್ಕಿದರು, ಕುದುರೆಗಳ ಕಾಲ ಹರಿಯ ಹೊಯ್ದರು. ನಾಯಿಗಳ ಕಣ್ಣ ಕೆಡಿಸಿದರು, ಹಿರಿಯರಸನ ಹಿಡಿದುಕೊಂಡರು. ಇಪ್ಪತ್ತೈದು ತಳವಾರರ ನಿರ್ಮೂಲಿಸಿ ಬಿಟ್ಟರು. ಮೂವರ ಮೂಗ ಕೊಯ್ದರು, ಒಬ್ಬನ ಶೂಲಕ್ಕೆ ಹಾಕಿದರು. ಆ ಪಟ್ಟಣದ ಲಕ್ಷ್ಮಿ ಹಾರಿತ್ತು. ಆ ಪಟ್ಟಣದ ಪ್ರಜೆಗಳಿಗೆ ರಣಮಧ್ಯ ಮರಣವಾಯಿತ್ತು. ಆ ರಣಭೂಮಿಯಲ್ಲಿಕಾಡುಗಿಚ್ಚೆದ್ದುರಿಯಿತ್ತು. ಆ ಊರ ನಡುಗಡೆಯಲ್ಲಿ ಒಬ್ಬ ಬೇತಾಳ ನಿಂದಿರ್ದ. ಆ ಬೇತಾಳನ ಮೇಲೆ ಅಕಾಲವರುಷ ಸುರಿಯಿತ್ತು. ಆ ವರುಷದಿಂ ಹದಿನಾಲ್ಕು ಭುವನ, ಸಚರಾಚರಂಗಳಿಗೆ ಶಾಂತಿಯಾಯಿತ್ತು. ಆ ಶಾಂತಿ ವಿಶ್ರಾಂತಿಯಲ್ಲಿ ಹುಟ್ಟಿದ ಸುಖವ, ನಿಮ್ಮ ಉಂಗುಷ್ಟಾಗ್ರದಲ್ಲಿ ಕಂಡ ಘನ[ವ], ಸುರಗಿಯ ಚೌಡಯ್ಯಗಳು ಬಲ್ಲರಲ್ಲದೆ, ನಾನೆತ್ತ ಬಲ್ಲೆನಯ್ಯಾ. ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಅನಂತ ವರುಷದವರ ಹಿರಿಯರೆಂಬೆನೆ ? ಎನ್ನೆನು_ ಅವರು ಭೂಭಾರಕರಾಗಿ. ಏಳು ವರುಷದ ಹಿರಿಯ ಚೀಲಾಳ; ಹನ್ನೆರಡು ವರುಷದ ಹಿರಿಯಳು ಮಹಾದೇವಿಯಕ್ಕ. ಅಂಡಜ ಪಿಂಡಜ ಮೀನಜರೆಂಬವರೆಲ್ಲಾ ಅಂದಂದಿನ ಬಾಲಕರು. ನಿಮಗೆ ಬುದ್ಧಿಯ ಹೇಳುವಡೆ ಎನಗೆ ಬುದ್ಧಿಯಿಲ್ಲ, ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ನೀರೂ ನೆಳಲೂ ಇಲ್ಲದಂದು, ಷಡುಶೈವ (ದೈವ ?) ರಿಲ್ಲದಂದು. ಬ್ರಹ್ಮಾಂಡ ಭಾಂಡ ಭಾಂಡಾವಳಿಗಳಿಲ್ಲದಂದು, ಪಿಂಡಾಂಡ ಅಂಡ ಅಂಡಾವಳಿಗಳಿಲ್ಲದಂದು, ಅಖಂಡಿತ ಜ್ಯೋತಿರ್ಮಯಲಿಂಗ ಶರಣನ ಲೀಲೆಯಿಂದಾದ ಏಳು ತರದ ಗಣಪಿಂಡವಂ ಕಂಡು ಅಖಂಡಿತನಾಗಿ ಬದುಕಿದೆನಯ್ಯಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಇಪ್ಪತ್ತೈದು ತಲೆಯೊಳಗೆ, ಏಳು ಮೊಲೆ ಮುಖವೆಂಟು, ºದಿನಾಲ್ಕು ಬಾಯಿ ನೂರಿಪ್ಪತ್ತು ಕೋರೆದಾಡೆ. ಹೃದಯದಲ್ಲಿ ಹುದುಗಿದ ಅಗ್ನಿಯ ತೆಗೆದು ಮುದ್ದಾಡಿಸಿ (ಸೆ ?) ದನಿಯ ಧರ್ಮವ ನುಂಗಿ ಮನದ ಬಣ್ಣಗಳಡಗಿ ಹೆತ್ತ ತಾಯಿ ಮಗನ ನುಂಗಿ, ಶಿಶು ತಾಯ ಬೆಸಲಾಗಿ ಗುಹೇಶ್ವರನೆಂಬ ನಿಲವ ಅಂಗಯ್ಯ ಮೊಲೆ ನುಂಗಿತ್ತು.
--------------
ಅಲ್ಲಮಪ್ರಭುದೇವರು
ಶೂಲದ ಮೇಲಣ ಕುಣಪಂಗಳು ತಾಳು ತಾಳಮರದ ಮೇಲೆ ಕುಣಿವುದ ಕಂಡೆನು. ಏಳು ಸಮುದ್ರದೊಳಿಪ್ಪ ಕಪ್ಪೆಯಧ್ವನಿ ಮೂರುಲೋಕ ಕೇಳಿಸುವುದ ಕಂಡೆನು. ಹೆಣನ ತಿನಬಂದ ನಾಯಿ ಕಪ್ಪೆಯ ಗೆಣೆತನದಿಂದ ಅಲಗಿನ ಮೇಲೆ ಅಡಿ ಇಡುವುದ ಕಂಡೆನು. ಇದೇನು ಚೋದ್ಯ ಹೇಳಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ !
--------------
ಹೇಮಗಲ್ಲ ಹಂಪ
ಹಸಿವು ತೃಷೆ ವಿಷಯವೆಂಬ ಮರಂಗಳನೆ ಕಂಡು, ಪರಿಣಾಮವೆಂಬ ಕೊಡಲಿಯಲ್ಲಿ ತತ್ತರಿದರಿದು, ಕಾಮ ಕ್ರೋಧ ಲೋಭ ಮೋಹ ಮದಮತ್ಸರಂಗಳ ತರಿದೊಟ್ಟಿದನೊಂದೆಡೆಯಲ್ಲಿ. ಪಂಚೇಂದ್ರಿಯ, ಷಡುವರ್ಗ, ಸಪ್ತಧಾತು, ಅಷ್ಟಮದವೆಂಬ ಬಳ್ಳಿಯ ಸೀಳಿ, ಏಳು ಕಟ್ಟಿನ ಮೋಳಿಗೆಯನೆ ಹೊತ್ತು ನಡೆದನಯ್ಯಾ. ಆಶೆ ಆಮಿಷ ತಾಮಸವೆಂಬ ತುರಗವನೇರಿ ಆತುರದ ತುರವನೆ ಕಳೆದನಯ್ಯಾ_ಈ ಮಹಾಮಹಿಮಂಗೆ, ಜಗದ ಜತ್ತಿಗೆಯ, ಹಾದರಗಿತ್ತಿಯ, ಹದಿನೆಂಟು ಜಾತಿಯ ಮನೆಯಲ್ಲಿ ತೊತ್ತಾಗಿಹ ಶಿವದ್ರೋಹಿಯ ಲಿಂಗವಂತರ ಮನೆಯಲ್ಲಿ ಹೊಗಿಸುವರೆ ? ಎಲೆ ಲಿಂಗತಂದೆ, ಜಡವಿಡಿದು ಕೆಟ್ಟೆನಯ್ಯಾ, ಭಕ್ತಿಯ ಕುಲವನರಿಯದೆ. ಎಲೆ ಲಿಂಗದಾಜ್ಞಾಧಾರಕಾ, ಎಲೆ ಲಿಂಗಸನುಮತಾ, ಎಲೆ ಲಿಂಗೈಕಪ್ರತಿಗ್ರಾಹಕಾ. ಕೂಡಲಚೆನ್ನಸಂಗಯ್ಯನಲ್ಲಿ, ಮೋಳಿಗೆಯ ಮಾರಿತಂದೆಗಳ ಶ್ರೀಪಾದಕ್ಕೆ ನಮೋ ನಮೋ ಜಯಜಯತು.
--------------
ಚನ್ನಬಸವಣ್ಣ
ಕಪ್ಪಿನ ಭೂಮಿಗೆ ಮೂರುಗಜ ಸೂರ್ಯಕಾಂತದ ಕಲ್ಲು ಹಾಕಿ, ಮೂರು ಹಣವ ಕೊಂಡೆ. ಕೆಂಪಿನ ಭೂಮಿಗೆ ಆರು ಐದು ಗಜ ಚಂದ್ರಕಾಂತದ ಕಲ್ಲು ಹಾಕಿ, ಆರೈದು ಹಣವ ಕೊಂಡೆ. ಬಿಳುಪಿನ ಭೂಮಿಗೆ ಎರಡೆಂಟು ಏಳುಗಜದ ಅಗ್ನಿಕಾಂತದ ಕಲ್ಲು ಹಾಕಿ, ಎರಡೆಂಟು ಏಳು ಹಣವ ಕೊಂಡೆ. ಉಳಿದ ವರ್ಣದ ಭೂಮಿಗೆ ಮೂವತ್ತಾರು ಗಜ ಹಲವು ವರ್ಣದ ಚಿಪ್ಪುಗಲ್ಲುಗಳ ತುಂಬಿ ಈರೈದುಹಣವ ಕೊಂಡೆ. ಹೀಗೆ ಕಲ್ಲುಮಾರಿ ಹಾಗದ ಹಣವ ಕೊಂಡು ಕಾಯಕವ ಮಾಡುತಿರ್ದರಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಸಮುದ್ರದೊಳಗೊಂದು ಮೊಸಳೆಯ ಕಂಡೆನಯ್ಯ. ಆ ಮೊಸಳಿಂಗೆ ಏಳು ಮೀನುಗಳು ವಿಶ್ವಾಸಮಂ ಮಾಡುತಿರ್ಪುವು ನೋಡಾ ! ಆಡುತಾಡುತ್ತ ತೆರೆ ಹಾಕಲು ಮೊಸಳೆ ಸತ್ತಿತು ನೋಡಾ. ಮೀನುಗಾರ ಬಂದು, ಮೀನ ಕೊಯ್ದು, ಸಮುದ್ರಕ್ಕೆ ಕಾವಲದಾರನಾದನು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಕೇಳಿ, ಕೇಳಿರಯ್ಯಾ ಶಿವಭಕ್ತಶರಣಜನಂಗಳು ನೀವೆಲ್ಲ. ನೂರೊಂದು ಸ್ಥಲದ ನಿರ್ಣಯವನು ಆರುಸ್ಥಲದಲ್ಲಡಗಿಸಿ, ಆರುಸ್ಥಲದ ನಿರ್ಣಯವನು ಮೂರುಸ್ಥಲದಲ್ಲಡಗಿಸಿ, ಆ ಮೂರುಸ್ಥಲ ಒಂದಾದ ಮೂಲಬ್ರಹ್ಮದಲ್ಲಿ ಶರಣನ ಕುರುಹು ಅಡಗಿ ನಿರ್ಮಾಯವಾದ ಭೇದಮಂ ಪೇಳ್ವೆ. ಅದೆಂತೆನಲು : ಪಿಂಡಸ್ಥಲ, ಪಿಂಡಜ್ಞಾನಸ್ಥಲ, ಸಂಸಾರಹೇಯಸ್ಥಲ, ಗುರುಕರುಣಸ್ಥಲ, ಲಿಂಗಧಾರಣಸ್ಥಲ, ವಿಭೂತಿಸ್ಥಲ, ರುದ್ರಾಕ್ಷಿಸ್ಥಲ, ಪಂಚಾಕ್ಷರಿಸ್ಥಲ, ಭಕ್ತಿಸ್ಥಲ, ಉಭಯಸ್ಥಲ, ತ್ರಿವಿಧಸಂಪತ್ತಿಸ್ಥಲ, ಚತುರ್ವಿಧಸಾರಾಯಸ್ಥಲ, ಉಪಾಧಿಮಾಟಸ್ಥಲ, ನಿರುಪಾಧಿಮಾಟಸ್ಥಲ, ಸಹಜಮಾಟಸ್ಥಲ, ಈ ಹದಿನೈದು ಭಕ್ತಸ್ಥಲಂಗಳು. ದೀಕ್ಷಾಗುರುಸ್ಥಲ, ಶಿಕ್ಷಾಗುರುಸ್ಥಲ, ಜ್ಞಾನಗುರುಸ್ಥಲ, ಕ್ರಿಯಾಲಿಂಗಸ್ಥಲ, ಭಾವಲಿಂಗಸ್ಥಲ, ಜ್ಞಾನಲಿಂಗಸ್ಥಲ, ಸ್ವಯಸ್ಥಲ, ಚರಸ್ಥಲ, ಪರಸ್ಥಲ, ಈ ಒಂಬತ್ತು ಆಚಾರಲಿಂಗಸ್ಥಲಂಗಳು. ಇಂತೀ ಉಭಯ ಸ್ಥಲವು ಕೂಡಿ 24 ಸ್ಥಲಂಗಳಾಗಿ, ಆಧಾರಚಕ್ರದಲ್ಲಿ ಸಂಬಂಧವಾಗಿರ್ಪುವು. ಮಹೇಶ್ವರಸ್ಥಲ, ಲಿಂಗನಿಷಾ*ಸ್ಥಲ, ಪೂರ್ವಾಶ್ರಯನಿರಸನಸ್ಥಲ, ವಾಗದ್ವೈತನಿರಸನಸ್ಥಲ, ಆಹ್ವಾನನಿರಸನಸ್ಥಲ, ಅಷ್ಟತನುಮೂರ್ತಿನಿರಸನಸ್ಥಲ, ಸರ್ವಗತನಿರಸನಸ್ಥಲ, ಶಿವಜಗನ್ಮಯಸ್ಥಲ, ಭಕ್ತದೇಹಿಕಸ್ಥಲ, ಈ ಒಂಬತ್ತು ಮಹೇಶ್ವರಸ್ಥಲಂಗಳು. ಕ್ರಿಯಾಗಮಸ್ಥಲ, ಭಾವಾಗಮಸ್ಥಲ, ಜ್ಞಾನಾಗಮಸ್ಥಲ, ಸಕಾಯಸ್ಥಲ, ಅಕಾಯಸ್ಥಲ, ಪರಕಾಯಸ್ಥಲ, ಧರ್ಮಾಚಾರಸ್ಥಲ, ಭಾವಾಚಾರಸ್ಥಲ, ಜ್ಞಾನಾಚಾರಸ್ಥಲ, ಈ ಒಂಬತ್ತು ಗುರುಲಿಂಗಸ್ಥಲಂಗಳು. ಇಂತೀ ಉಭಯಸ್ಥಲವು ಕೂಡಿ 18 ಸ್ಥಲಂಗಳಾಗಿ, ಸ್ವಾಧಿಷಾ*ನಚಕ್ರದಲ್ಲಿ ಸಂಬಂಧವಾಗಿರ್ಪುವು. ಪ್ರಸಾದಿಸ್ಥಲ, ಗುರುಮಹಾತ್ಮೆಸ್ಥಲ, ಲಿಂಗಮಹಾತ್ಮೆಸ್ಥಲ, ಜಂಗಮಮಹಾತ್ಮೆಸ್ಥಲ, ಭಕ್ತಮಹಾತ್ಮೆಸ್ಥಲ, ಶರಣಮಹಾತ್ಮೆಸ್ಥಲ, ಪ್ರಸಾದಮಹಾತ್ಮೆಸ್ಥಲ, ಈ ಏಳು ಪ್ರಸಾದಿಸ್ಥಲಂಗಳು. ಕಾಯಾನುಗ್ರಹಸ್ಥಲ, ಇಂದ್ರಿಯಾನುಗ್ರಹಸ್ಥಲ, ಪ್ರಾಣಾನುಗ್ರಹಸ್ಥಲ, ಕಾಯಾರ್ಪಿತಸ್ಥಲ, ಕರಣಾರ್ಪಿತಸ್ಥಲ, ಭಾವಾರ್ಪಿತಸ್ಥಲ, ಶಿಷ್ಯಸ್ಥಲ, ಶುಶ್ರೂಷಾಸ್ಥಲ, ಸೇವ್ಯಸ್ಥಲ, ಈ ಒಂಬತ್ತು ಶಿವಲಿಂಗಸ್ಥಲಂಗಳು. ಇಂತೀ ಉಭಯಸ್ಥಲವು ಕೂಡಿ 16 ಸ್ಥಲಂಗಳಾಗಿ, ಮಣಿಪೂರಕಚಕ್ರದಲ್ಲಿ ಸಂಬಂಧವಾಗಿರ್ಪುವು. ಪ್ರಾಣಲಿಂಗಿಸ್ಥಲ, ಪ್ರಾಣಲಿಂಗಾರ್ಚನಾಸ್ಥಲ, ಶಿವಯೋಗಸಮಾಧಿಸ್ಥಲ,ಲಿಂಗನಿಜಸ್ಥಲ, ಅಂಗಲಿಂಗಸ್ಥಲ, ಈ ಐದು ಪ್ರಾಣಲಿಂಗಿಸ್ಥಲಂಗಳು, ಜೀವಾತ್ಮಸ್ಥಲ,ಅಂತರಾತ್ಮಸ್ಥಲ, ಪರಮಾತ್ಮಸ್ಥಲ, ನಿರ್ದೇಹಾಗಮಸ್ಥಲ, ನಿರ್ಭಾವಾಗಮಸ್ಥಲ, ನಷ್ಟಾಗಮಸ್ಥಲ, ಆದಿಪ್ರಸಾದಿಸ್ಥಲ, ಅಂತ್ಯಪ್ರಸಾದಿಸ್ಥಲ, ಸೇವ್ಯಪ್ರಸಾದಿಸ್ಥಲ, ದೀಕ್ಷಾಪಾದೋದಕಸ್ಥಲ, ಶಿಕ್ಷಾಪಾದೋದಕಸ್ಥಲ, ಜ್ಞಾನಪಾದೋದಕಸ್ಥಲ, ಈ ಹನ್ನೆರಡು ಜಂಗಮಲಿಂಗಸ್ಥಲಂಗಳು. ಇಂತೀ ಉಭಯಸ್ಥಲವು ಕೂಡಿ 17 ಸ್ಥಲಂಗಳಾಗಿ, ಅನಾಹತಚಕ್ರದಲ್ಲಿ ಸಂಬಂಧವಾಗಿರ್ಪುವು. ಶರಣಸ್ಥಲ, ತಾಮಸನಿರಸನಸ್ಥಲ, ನಿರ್ದೇಶಸ್ಥಲ, ಶೀಲಸಂಪಾದನಾಸ್ಥಲ, ಈ ನಾಲ್ಕು ಶರಣಸ್ಥಲಂಗಳು. ಕ್ರಿಯಾನಿಷ್ಪತ್ತಿಸ್ಥಲ, ಭಾವನಿಷ್ಪತ್ತಿಸ್ಥಲ, ಜ್ಞಾನನಿಷ್ಪತ್ತಿಸ್ಥಲ, ಪಿಂಡಾಕಾಶಸ್ಥಲ, ಬಿಂದ್ವಾಕಾಶಸ್ಥಲ, ಮಹದಾಕಾಶಸ್ಥಲ, ಕ್ರಿಯಾಪ್ರಕಾಶಸ್ಥಲ, ಭಾವಪ್ರಕಾಶಸ್ಥಲ, ಜ್ಞಾನಪ್ರಕಾಶಸ್ಥಲ, ಈ ಒಂಬತ್ತು ಪ್ರಸಾದಿಲಿಂಗಸ್ಥಲಂಗಳು. ಇಂತೀ ಉಭಯಸ್ಥಲವು ಕೂಡಿ 13 ಸ್ಥಲಂಗಳಾಗಿ, ವಿಶುದ್ಧಿಚಕ್ರದಲ್ಲಿ ಸಂಬಂಧವಾಗಿರ್ಪುವು. ಐಕ್ಯಸ್ಥಲ, ಸರ್ವಾಚಾರಸಂಪತ್ತಿಸ್ಥಲ, ಏಕಭಾಜನಸ್ಥಲ, ಸಹಭೋಜನಸ್ಥಲ, ಈ ನಾಲ್ಕು ಐಕ್ಯಸ್ಥಲಂಗಳು. ಕೊಂಡುದು ಪ್ರಸಾದಿಸ್ಥಲ, ನಿಂದುದೋಗರಸ್ಥಲ, ಚರಾಚರನಾಸ್ತಿಸ್ಥಲ, ಭಾಂಡಸ್ಥಲ, ಭಾಜನಸ್ಥಲ, ಅಂಗಲೇಪನಸ್ಥಲ, ಸ್ವಯಪರಜ್ಞಾನಸ್ಥಲ, ಭಾವಾಭಾವನಷ್ಟಸ್ಥಲ, ಜ್ಞಾನಶೂನ್ಯಸ್ಥಲ, ಈ ಒಂಬತ್ತು ಮಹಾಲಿಂಗಸ್ಥಲಂಗಳು. ಇಂತೀ ಉಭಯಸ್ಥಲವು ಕೂಡಿ 13 ಸ್ಥಲಂಗಳಾಗಿ, ಆಜ್ಞಾಚಕ್ರದಲ್ಲಿ ಸಂಬಂಧವಾಗಿರ್ಪುವು. ಇಂತೀ 101 ಸ್ಥಲಕುಳಂಗಳು ಆಧಾರ, ಸ್ವಾಧಿಷಾ*ನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞಾ, ಎಂಬ ಆರು ಚಕ್ರಂಗಳಲ್ಲಿ ಸಂಬಂಧಿಸಿ, ಆ ಆರು ಚಕ್ರಂಗಳನು ನಿಃಷ್ಕಲಶೂನ್ಯನಿರಂಜನವೆಂಬ ಮೂರು ಚಕ್ರಂಗಳಲ್ಲಿ ಅಡಗಿಸಿ, ಆ ಮೂರು ಚಕ್ರಂಗಳೆಂಬ ಮಂಟಪದಲ್ಲಿ ಗುರುಲಿಂಗಜಂಗಮವ ಕುಳ್ಳಿರಿಸಿ, ನಿಷ್ಕಲಶೂನ್ಯ ನಿರಂಜನ ಭಕ್ತಿಯಿಂದರ್ಚಿಸಿ, ಆ ಗುರುಲಿಂಗಜಂಗಮದ ಘನಪ್ರಸಾದವ ಪಡೆದು ಆ ಗುರುಲಿಂಗಜಂಗಮವು ಒಂದಾದ ಮಹಾಘನ ಪರಬ್ರಹ್ಮದಲ್ಲಿ ಮನವಡಗಿ ಭಾವ ನಿಷ್ಪತ್ತಿಯಾಗಿ ಶರಧಿಯಲ್ಲಿ ಮುಳುಗಿದ ಪೂರ್ಣಕುಂಭದಂತಿರ್ಪ ಮಹಾಶರಣರ ಪರಮಗುರು ಬಸವರಾಜದೇವರ ದಿವ್ಯ ಶ್ರೀಪಾದಕ್ಕೆ ನಮೋ ನಮೋ ಎಂಬೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಪೃಥ್ವಿಯಲ್ಲಿ ಅಪ್ಪು ಕೂಡಲಿಕ್ಕೆ ಅಗ್ನಿ ಕೂಡಿ ನಾಲ್ಕು ಭೇದವಾಗಿಪ್ಪುದು. ಆ ಅಗ್ನಿಯಲ್ಲಿ ವಾಯು ಕೂಡಿ ಏಳು ಭೇದವಾಗಿಪ್ಪುದು. ಆ ವಾಯುವಿನಲ್ಲಿ ಆಕಾಶ ಕೂಡಿ ಹದಿನಾರು ಭೇದವಾಗಿಪ್ಪುದು. ಇಂತೀ ಪೃಥ್ವಿಯ ಭೇದ, ಅಪ್ಪುವಿನ ಸರ್ವಸಾರ, ಅಗ್ನಿಗೆ ತನ್ಮಯ ಜಿಹ್ವೆ, ವಾಯುವಿಗೆ ಸರ್ವಗಂಧ, ಆಕಾಶಕ್ಕೆ ಆವರಣ ಅಲಕ್ಷ, ಇಂತೀ ಪಂಚೀಕರಣಂಗಳ ವಿಭಾಗಿಸಿ ಸೂತ್ರವಿಟ್ಟು ಒಂದರಿಂದ ಹಲವು ಲೆಕ್ಕವ ಸಂದಣಿಸುವಂತೆ, ಲೆಕ್ಕವ ಹಲವ ಕಂಡು ಒಂದರಿಂದ ವಿಭಾಗಿಸಿದರೆಂಬುದನರಿದು ತಾಯ ಗರ್ಭದ ಶಿಶು ಭಿನ್ನವಾದಂತೆ ಸುಖದುಃಖವ ವಿಚಾರಿಸಬೇಕು. ಸದ್ಯೋಜಾತಲಿಂಗವೆಂದರಿವನ್ನಕ್ಕ ಉಭಯವ ವಿಚಾರಿಸಬೇಕು
--------------
ಅವಸರದ ರೇಕಣ್ಣ
ಕೊಂಬಿನ ತುದಿಯ ಮೇಲೆ ಎಂಟಾನೆ ಹುಟ್ಟಿದುದ ಕಂಡೆನಯ್ಯ. ಅವಕ್ಕೆ ಏಳು ಬೀದಿ, ಆರು ಕೇರಿ, ಐದು ಮನೆಗಳಲ್ಲಿ ಬೈಯುವ ನಾರಿಯ ಕಂಡೆನಯ್ಯ. ಆ ನಾರಿಯ ಹಿಡಿದು ಕೊಂದಲ್ಲದೆ ನಿಃಕಲಪರಬ್ರಹ್ಮಲಿಂಗವು ಕಾಣಿಸದು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಧರೆಯಾಗಿ ನಿಂದು, ಹರಿಯಾಗಿ ಹರಿದು, ಉರಿಯಾಗಿ ಉಲಿವ ಅಂಗನೆ, ಬ್ರಹ್ಮ ವಿಷ್ಣು ರುದ್ರರ ನುಂಗಿ ಜಾಲವ ಬೀಸುತಿಪ್ಪಳು ನೋಡಾ ! ಆಕೆಯ ಮಹೇಂದ್ರಜಾಲದ ತೆರೆಯೊಳು ಅನುಮಿಷ ಮೊದಲು ತಲೆಯಿಲ್ಲದ ಏಡಿಯ ನುಂಗಿ, ಆ ಏಡಿಯ ಬೆನ್ನಿನಲ್ಲಿ ಆನೆ ಎಂಟು, ಶ್ವಾನ ಐದು, ಆರು ಮೊಸಳೆಯ ನುಂಗಿ, ಏಳು ಬಗೆಯ ಮಡುವಿಗೆ ಬಿದ್ದು, ತಮ್ಮ ತಾವೆ ಒದ್ದಾಡುತಿವೆ ಇದೇನು ಚೋದ್ಯ ಹೇಳಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ !
--------------
ಹೇಮಗಲ್ಲ ಹಂಪ
ಇನ್ನಷ್ಟು ... -->