ಅಥವಾ

ಒಟ್ಟು 214 ಕಡೆಗಳಲ್ಲಿ , 2 ವಚನಕಾರರು , 214 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಮಥದಲ್ಲಿ ಪಾದೋದಕ, ದ್ವಿತೀಯದಲ್ಲಿ ಲಿಂಗೋದಕ, ತೃತೀಯದಲ್ಲಿ ಮಜ್ಜನೋದಕ, ಚತುರ್ಥದಲ್ಲಿ ಸ್ಪರ್ಶನೋದಕ, ಪಂಚಮದಲ್ಲಿ ಅವಧಾನೋದಕ, ಷಷ್ಠದಲ್ಲಿ ಆಪ್ಯಾಯನೋದಕ, ಸಪ್ತಮದಲ್ಲಿ ಹಸ್ತೋದಕ, ಅಷ್ಟಮದಲ್ಲಿ ಪರಿಣಾಮೋದಕ, ನವಮದಲ್ಲಿ ನಿರ್ನಾಮೋದಕ, ದಶಮದಲ್ಲಿ ಸತ್ಯೋದಕ,- ಇಂತೀ ದಶವಿಧಪಾದೋದಕವ ತಿಳಿದುಕೊಳಬಲ್ಲ ಕೂಡಲಚೆನ್ನಸಂಗಾ ನಿಮ್ಮ ಶರಣ
--------------
ಚನ್ನಬಸವಣ್ಣ
ಗುರುವಿಲ್ಲದ ಲಿಂಗ, ಲಿಂಗವಿಲ್ಲದ ಗುರು ಗುರು_ಲಿಂಗವಿಲ್ಲದ ಶಿಷ್ಯ. ಶಿಷ್ಯನಿಲ್ಲದ ಸೀಮೆ, ಸೀಮೆಯಿಲ್ಲದ ನಿಸ್ಸೀಮ ಕೂಡಲಚೆನ್ನಸಂಗಾ ನಿಮ್ಮ ಶರಣ
--------------
ಚನ್ನಬಸವಣ್ಣ
ಅರಿವರತು ಕುರುಹು ನಷ್ಟವಾದ ಬಳಿಕ ಕುರುಹಿನ ಬಣ್ಣ ಅಂಗದ ಮೇಲೇಕೊ ಘಟ್ಟಿವಾಳಂಗೆ ? ಅರಿವನಾರು ? ಅರುಹಿಸಿಕೊಂಬನಾರು ? ಬರಿಯ ಬಯಲು ಕಾಣಾ, ಕೂಡಲಚೆನ್ನಸಂಗಾ ನಿಮ್ಮ ಶರಣ ಘಟ್ಟಿವಾಳನಲ್ಲದೆ ನೆರೆ ಅರಿವರಾರೊ ?
--------------
ಚನ್ನಬಸವಣ್ಣ
ಘಟಾಕಾಶ ಮಠಾವಕಾಶ ದಿಗಾಕಾಶ ಬಿಂದ್ವಾಕಾಶ ಭಿನ್ನಾಕಾಶ ಮಹದಾಕಾಶವೆಂಬ ಆಕಾಶಕೊಂಬತ್ತು ಬಾಗಿಲು. ಹೊಗಲಿಕಸಾಧ್ಯ ಹೊರಹೊಂಡಲಿಕಸಾಧ್ಯ. ಕೂಡಲಚೆನ್ನಸಂಗಾ ನಿಮ್ಮ ಶರಣಂಗೆ ಸಾಧ್ಯವಲ್ಲದೆ ಉಳಿದವರಿಗಸಾಧ್ಯವು.
--------------
ಚನ್ನಬಸವಣ್ಣ
ಶಿಷ್ಯನ ಪೂರ್ವಾಶ್ರಯವ ಗುರು ಕಳೆದನೆಂಬರು, ಆ ನುಡಿಯ ಕೇಳಲಾಗದು. ಗುರುವಿನ ಪೂರ್ವಾಶ್ರಯವ ಶಿಷ್ಯ ಕಳೆವನಲ್ಲದೆ, ಶಿಷ್ಯನ ಪೂರ್ವಾಶ್ರಯವ ಗುರು ಕಳೆಯಲರಿಯ. ಶರಣನ ಪೂರ್ವಾಶ್ರಯವ ಲಿಂಗ ಕಳೆಯಿತ್ತೆಂಬರು ಆ ನುಡಿಯ ಕೇಳಲಾಗದು, ಲಿಂಗದ ಪೂರ್ವಾಶ್ರಯವ ಶರಣ ಕಳೆವನಲ್ಲದೆ, ಆ ಶರಣನ ಪೂರ್ವಾಶ್ರಯವ ಲಿಂಗವು ಕಳೆಯಲರಿಯದು. ಭಕ್ತನ ಪೂರ್ವಾಶ್ರಯವ ಜಂಗಮ ಕಳೆಯಿತ್ತೆಂಬರು ಆ ನುಡಿಯ ಕೇಳಲಾಗದು, ಜಂಗಮದ ಪೂರ್ವಾಶ್ರಯವ ಭಕ್ತ ಕಳೆವನಲ್ಲದೆ, ಆ ಭಕ್ತನ ಪೂರ್ವಾಶ್ರಯವ ಜಂಗಮ ಕಳೆಯಲರಿಯ. ಪ್ರಸಾದಿಯ ಪೂರ್ವಾಶ್ರಯವ ಪ್ರಸಾದ ಕಳೆಯಿತ್ತೆಂಬರು ಆ ನುಡಿಯ ಕೇಳಲಾಗದು, ಪ್ರಸಾದದ ಪೂರ್ವಾಶ್ರಯವ ಪ್ರಸಾದಿ ಕಳೆವನಲ್ಲದೆ ಆ ಪ್ರಸಾದಿಯ ಪೂರ್ವಾಶ್ರಯವ ಪ್ರಸಾದ ಕಳೆಯಲರಿಯದು. ಆ ಪ್ರಸಾದದ ಪೂರ್ವಾಶ್ರಯವ ಕಳೆಯಲಿಕಾಗಿ ಮಹಾಪ್ರಸಾದಿಯಾದ ಕೂಡಲಚೆನ್ನಸಂಗಾ ನಿಮ್ಮ ಶರಣ.
--------------
ಚನ್ನಬಸವಣ್ಣ
ಕಾಯ ಗುರು, ಪ್ರಾಣ ಲಿಂಗ, ಜ್ಞಾನ ಜಂಗಮ, ಕಾಯದಲ್ಲಿ ಶುದ್ಧಪ್ರಸಾದ, ಪ್ರಾಣದಲ್ಲಿ ಸಿದ್ಧಪ್ರಸಾದ, ಜ್ಞಾನದಲ್ಲಿ ಪ್ರಸಿದ್ಧಪ್ರಸಾದ. ಈ ತ್ರಿವಿಧಪ್ರಸಾದ ನಿರ್ಣಯ ಕೂಡಲಚೆನ್ನಸಂಗಾ ನಿಮ್ಮ ಶರಣಂಗೆ.
--------------
ಚನ್ನಬಸವಣ್ಣ
ತಿರಿದುಕೊಂಡು ಬಂದಾದರೆಯೂ ನಿಮ್ಮ ಭಕ್ತರಿಗೆ ಆನು ಬೆಸಕೆಯ್ವ ಭಾಗ್ಯವನು, ಮಾಡು ಕಂಡಯ್ಯಾ. ಮನ ವಚನ ಕಾಯದಲ್ಲಿ ನಿಮ್ಮ ಶರಣರಿಗೆ ಆನು ತೊತ್ತಾಗಿಪ್ಪುದು, ಮಾಡು ಕಂಡಯ್ಯಾ. ಹಲವು ಮಾತೇನು ಲಿಂಗಜಂಗಮಕ್ಕೆ ಈವುದನೆ ಮಾಡು ಕಂಡಯ್ಯಾ, ಬಸವಪ್ರಿಯ ಕೂಡಲಚೆನ್ನಸಂಗಾ.
--------------
ಸಂಗಮೇಶ್ವರದ ಅಪ್ಪಣ್ಣ
ಪ್ರಕಟದಿಂದ ಕೊಂಬುದು ಪ್ರಸಾದವಲ್ಲ, ಗುಪ್ತದಿಂದ ಕೊಂಬುದು ಪ್ರಸಾದವಲ್ಲ, ಪ್ರಕಟದಂತುಟೆ ಪ್ರಸಾದ? ಗುಪ್ತದಂತುಟೆ ಪ್ರಸಾದ? ಪ್ರಸಾದದಂತುವನೇನೆಂದು ಹೇಳುವೆನಯ್ಯಾ? ಭವಭಾರಿ ಜೀವಿಗಳೊಡನೆ ಪ್ರಸಾದದಂತುವನೇನಂದುಪಮಿಸುವೆನು? ನಾರೂಢಸ್ಯ ಪ್ರಸಾದೋ ಹಿ ನ ಗುಪ್ತಸ್ಯ ಪ್ರಸಾದಕಂ ಗೋಪ್ಯಾರೂಢೋ[s]ಭಯಂ ನಾಸ್ತಿ ಮಹಾಪ್ರಸಾದಸಂಗಿನಃ ಎಂದುದಾಗಿ, ಪ್ರಕಟ ಗುಪ್ತವ ಕಳೆದು ನೆಟ್ಟನೆ ಪ್ರಸಾದವ ಕೊಳಬಲ್ಲ ಕೂಡಲಚೆನ್ನಸಂಗಾ ನಿಮ್ಮ ಪ್ರಸಾದಿ.
--------------
ಚನ್ನಬಸವಣ್ಣ
ಆದಿಯಲ್ಲಿ ವೇದ್ಯ ಶಿವಸಂಪತ್ತಿನ ಮಹಾಘನ, ಲಿಂಗಪ್ರಾಣ ಸಹಜದಲ್ಲಿ ಉದಯವಾದ ಸಂಗನಬಸವ ನಮೋ ಸಂಗನಬಸವ ನಮೋ ! ಚೆನ್ನಸಂಗನ ಬಸವಿದೇವಂಗೆ ಅಪ್ರತಿಮಂಗೆ ಪ್ರತಿಯಿಲ್ಲ. ಆ ಧರ್ಮವೆ ಧರ್ಮ. ಕೂಡಲಚೆನ್ನಸಂಗಾ, ನಿಮ್ಮ ಶರಣ ಬಸವಣ್ಣನು ಉಪಮಾತೀತನಯ್ಯಾ.
--------------
ಚನ್ನಬಸವಣ್ಣ
ಮಾರ್ಗಕ್ರಿಯಾಸಮಯದಲ್ಲಿ ಶಿವಶಕ್ತಿಸಂಪುಟ. ವಿೂರಿದಕ್ರಿಯಾಸಮಯದಲ್ಲಿ ಶಿವಲಿಂಗಸಂಪುಟ. ಉಭಯಕ್ರಿಯಾನುಭಾವ ನೆಲೆಗೊಂಡಲ್ಲಿ ಮನಲಿಂಗಸಂಪುಟ. ಮನ ಲಿಂಗ ಲೀಯವಾದ ಬಳಿಕ ತೆರಹಿಲ್ಲದೆ ಕುರುಹಳಿದ ಲಿಂಗೈಕ್ಯ. ಸುತ್ತಿದ ಪ್ರಪಂಚು ಮೆಲ್ಲಮೆಲ್ಲನೆ ಅಚ್ಚುಗವಿಲ್ಲದೆ ಹಿಂಗಿದವು ಕೂಡಲಚೆನ್ನಸಂಗಾ ಲಿಂಗೈಕ್ಯಂಗೆ.
--------------
ಚನ್ನಬಸವಣ್ಣ
ಲಿಖಿತಕ್ಕೆ ಲಿಖಿತ ಮಹಾಲಿಖಿತವುಂಟೆಂಬೆನೆ ? ಲಿಂಗ ಸಂಸಾರಿ, ಲಿಂಗವಿಲ್ಲೆಂಬೆನೆ ? ಅಂಗ ಸಂಸಾರಿ, ಇಲ್ಲಿನ್ನಾವುದ ಘನವೆಂಬೆ, ಆವುದ ಕಿರಿದೆಂಬೆ, ತಾಳಸಂಪುಟಕ್ಕೆ ಬಾರದ ಘನವ ? ಸುಖಕ್ಕೆ ಸುಖ ತಾರುಗಂಡು, ಸಮಸುಖವಾಗಿ, ಉಪಮಾತೀತ ತ್ರಿವಿಧ ಸಂಪತ್ತುಗಳೆಂಬ ವಾಯುವಾಕುದಲ್ಲಿ, ಆದಿ ಮಧ್ಯ ಅವಸಾನರಹಿತ ಅನಂತ ಶರಣ ಅಜಾತ ಕೂಡಲಚೆನ್ನಸಂಗಾ ನಿರ್ನಾಮ ಲಿಂಗೈಕ್ಯ.
--------------
ಚನ್ನಬಸವಣ್ಣ
ಹೊರಗಣ ಭವಿಯ ಕಳೆದೆವೆಂಬರು, ಒಳಗಣ ಭವಿಯ ಕಳೆಯಲರಿಯರು. ಕಾಮವೆಂಬುದೊಂದು ಭವಿ, ಕ್ರೋಧವೆಂಬುದೊಂದು ಭವಿ, ಲೋಭವೆಂಬುದೊಂದು ಭವಿ, ಮೋಹವೆಂಬುದೊಂದು ಭವಿ, ಮದವೆಂಬುದೊಂದು ಭವಿ, ಮಚ್ಚರವೆಂಬುದೊಂದು ಭವಿ, ಆಸೆಯೆಂಬುದೊಂದು ಭವಿ, ಆಮಿಷವೆಂಬುದೊಂದು ಭವಿ, ಹೊನ್ನೆಂಬುದೊಂದು ಭವಿ, ಹೆಣ್ಣೆಂಬುದೊಂದು ಭವಿ, ಮಣ್ಣೆಂಬುದೊಂದು ಭವಿ. ಇಂತೀ ಭವಿಯ ಕಳೆದುಳಿದ ಕೂಡಲಚೆನ್ನಸಂಗಾ ನಿಮ್ಮ ಶರಣ.
--------------
ಚನ್ನಬಸವಣ್ಣ
ಶುದ್ಧ, ಸಿದ್ಧ, ಪ್ರಸಿದ್ಧದ ವಿವರವ ಕೇಳಿದಡೆ ಹೇಳುವೆನು: ವಿಶ್ವ ಮುಟ್ಟಿತ್ತು ಶುದ್ಧ, ತೈಜಸ ಮುಟ್ಟಿತ್ತು ಸಿದ್ಧ, ಪ್ರಾಜ್ಞ ಮುಟ್ಟಿತ್ತು ಪ್ರಸಿದ್ಧ. ಪ್ರತ್ಯಗಾತ್ಮನಲ್ಲಿ ಪರಿಣಾಮಿ, ಕೂಡಲಚೆನ್ನಸಂಗಾ, ನಿಮ್ಮ ಶರಣ
--------------
ಚನ್ನಬಸವಣ್ಣ
ಉನ್ಮನಿಜ್ಞಾನದ ಗಮನ (ದ ಭಾವವು) ಲೌಕಿಕದ ನಿಷ್ಠೆಯ ದೃಷ್ಟಿ. ಶಾಂಭವಜ್ಞಾನದ (ಗಮನದ) ಭಾವವು ಪ್ರಾಣದ ಪರಿಣಾಮದ ನಿಲವು. ಸುಜ್ಞಾನದ ಗಮನದ ಭಾವವು ಉಪದೇಶ ಪ್ರಸೂತದ ಭಾವಭೇದ. ಈ ತ್ರಿವಿಧ ಚರಿತ್ರ, ಸಂಭಾಷಣೆಯ ಕೂಡಲಚೆನ್ನಸಂಗಾ. ನಿಮ್ಮ ಶರಣ ಬಲ್ಲ.
--------------
ಚನ್ನಬಸವಣ್ಣ
ಶಬ್ದ ಸ್ಪರ್ಶ ರೂಪು ರಸ ಗಂಧ ಪಂಚೇಂದ್ರಿಯ ಮೊದಲಾಗಿ ನಡೆದವು ಲಿಂಗದತ್ತತ್ತಲೆ. ಬಂದ ಸುಖ ಲಿಂಗಾರ್ಪಿತವೆಂದು ನಡೆದವು ಲಿಂಗದತ್ತತ್ತಲೆ. ಕೂಡಲಚೆನ್ನಸಂಗಾ ಲಿಂಗ ನೀವಾಗಿ ಶರಣಂಗೆ.
--------------
ಚನ್ನಬಸವಣ್ಣ
ಇನ್ನಷ್ಟು ... -->