ಅಥವಾ

ಒಟ್ಟು 18 ಕಡೆಗಳಲ್ಲಿ , 13 ವಚನಕಾರರು , 18 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರಿದೆಹೆನೆಂಬುದು, ಅರುಹಿಸಿಕೊಂಬುದಕ್ಕೆ ಕುರುಹಾವುದು? ಜ್ಞಾತೃವೆ ಅರಿವುದು, ಜ್ಞೇಯವೇ ಅರುಹಿಸಿಕೊಂಬುದು. ಇಂತೀ ಉಭಯದ ಭೇದದ ಮಾತು ತತ್ವಜ್ಞರ ಗೊತ್ತು. ಅಕ್ಷಿಯಿಂದ ನಿರೀಕ್ಷಿಸಿ ನೋಡುವಲ್ಲಿ, ಪ್ರತಿದೃಷ್ಟವ [ನೆ]ಟ್ಟು ನೋಡೆ ಕಾಬುದು ಅಕ್ಷಿಯ ಭೇದವೊರಿ ಇದಿರಿಟ್ಟ ದೃಷ್ಟವ ಭೇದವೊ? ಅಲ್ಲ, ಆ ಘಟದ ವಯಸ್ಸಿನ ಭೇದವೋ? ಇಂತೀ ದೃಷ್ಟಕ್ಕೆ ಏನನಹುದೆಂಬೆ? ಏನನಲ್ಲೆಂಬೆ? ಪ್ರತಿದೃಷ್ಟವಿಲ್ಲಾಯೆಂದಡೆ ದೃಷ್ಟಿಗೆ ಲಕ್ಷಣದಿಂದ ಲಕ್ಷಿಸುತ್ತಿಹುದು. ಇಂತೀ ಉಭಯದಲ್ಲಿ ನಿಂದು ನೋಡುವ ಆತ್ಮನು ಅರಿವುಳ್ಳುದೆಂದಡೆ ಪೂರ್ವಾಂಗವ ಘಟಿಸಿದಲ್ಲಿ ಯೌವನವಾಗಿ, ಉತ್ತರಾಂಗ ಘಟಿಸಿದಲ್ಲಿ ಶಿಥಿಲವಾಗಿ ಘಟದ ಮರೆಯಿದ್ದು ಪಲ್ಲಟಿಸುವ ಆತ್ಮನ ಹುಸಿಯೆಂದಡೆ ದೃಷ್ಟನಿಗ್ರಹ, ದಿಟವೆಂದಡೆ ಕಪಟ ಸ್ವರೂಪ. ಇಂತೀ ದ್ವಯದ ಭೇದಂಗಳ ತಿಳಿದು, ಇಷ್ಟತನುವಿನ ಅಭೀಷ್ಟವನರಿತು, ಆ ಅಭೀಷ್ಟದಲ್ಲಿ ದೃಷ್ಟವಾದ ವಸ್ತುವ ಕಂಡು, ಇ¥ಶ್ರುತಕ್ಕೆ ಶ್ರುತದಿಂದ, ದೃಷ್ಟಕ್ಕೆ ದೃಷ್ಟದಿಂದ, ಅನುಮಾನಕ್ಕೆ ಅನುಮಾನದಿಂದ- ಇಂತೀ ಗುಣಂಗಳ ವಿವರಂಗಳ ವೇಧಿಸಿ ಭೇದಿಸಿ ಇಷ್ಟವಸ್ತುವಿನಲ್ಲಿ ಲೇಪವಾದುದ ಕಂಡು, ವಸ್ತು ಇಷ್ಟವ ಕಬಳೀಕರಿಸಿ ವೃಕ್ಷದೊಳಗಣ ಬೀಜ ಬೀಜದೊಳಗಣ ವೃಕ್ಷ ಇಂತೀ ಉಭಯದ ಸಾಕಾರಕ್ಕೂ ಅಂಕುರ ನಷ್ಟವಾದಲ್ಲಿ ಇಂದಿಗಾಹ ವೃಕ್ಷ ಮುಂದಣಕ್ಕೆ ಬೀಜ. ಉಭಯವಡಗಿದಲ್ಲಿ ಅಂಡದ ಪಿಂಡ, ಪಿಂಡದ ಜ್ಞಾನ, ಇಂತಿವು ಉಳಿದ ಉಳುಮೆಯನರಿದು ಸದ್ಯೋಜಾತಲಿಂಗವ ಕೂಡಬೇಕು.
--------------
ಅವಸರದ ರೇಕಣ್ಣ
ಇಂತಪ್ಪ ಭೇದವ ತಿಳಿಯದೆ ಪುರಾತರ ವಚನವ ನೋಡಿ ಕೇಳಿ, ಹೊನ್ನು, ಹೆಣ್ಣು, ಮಣ್ಣು ಬಿಟ್ಟು ಪ್ರಪಂಚವ ಬಿಟ್ಟೆವೆಂಬಿರಿ, ಬಿಟ್ಟ ಪರಿಯ ಪೇಳಿರಯ್ಯ ? ಹೊನ್ನಲ್ಲವೇ ಆತ್ಮ ? ಹೆಣ್ಣಲ್ಲವೇ ಮನಸ್ಸು ? ಮಣ್ಣಲ್ಲವೇ ಪೃಥ್ವಿತತ್ವಾಂಶಭೂತವಾದ ದೇಹವು ? ಇಂತಪ್ಪ ಹೊನ್ನು, ಹೆಣ್ಣು, ಮಣ್ಣು ಒಳಗಿಟ್ಟುಕೊಂಡು ಬಾಹ್ಯದ ಹೊನ್ನು ಹೆಣ್ಣು ಮಣ್ಣನೆ ಬಿಟ್ಟರೆ, ಬಿಟ್ಟಂತಾಯಿತೇ ಎಲಾ ಮರುಳ ಮಾನವರಿರಾ ? ದೇಹವ ದಗ್ಧಮಾಡಬೇಕೆಂದು ಅನ್ನ ಉದಕವ ಬಿಟ್ಟು, ಅರಣ್ಯಕ್ಕೆ ಹೋಗಿ, ಕಂದಮೂಲ ಪರ್ಣಾಹಾರವ ಭಕ್ಷಿಸಿ ತನು ಒಣಗಿಸಿದರೇನು ದೇಹದಗ್ಧವಾದಂತಾಯಿತೇ ? ಆಗದು. ಹುತ್ತದ ಮೇಲೆ ಬಡಿದು ಸರ್ಪನ ಕೊಂದಂತಾಯಿತಲ್ಲದೆ ದೇಹ ದಗ್ಧವಾಗಲರಿಯದು ಎಲೆ ಮರುಳ ಮಾನವರಿರಾ. ಅದೆಂತೆಂದೊಡೆ: ಶಿವಜ್ಞಾನೋದಯವಾಗಿ ಗುರುಕಾರುಣ್ಯವ ಪಡದು, ಲಿಂಗಾಂಗಸಂಬಂಧಿಯಾದ ಶಿವಶರಣನ ದೇಹವು ಜ್ಞಾನಾಗ್ನಿಯಲ್ಲಿ ದಗ್ಧವಾಯಿತಲ್ಲದೆ ಉಳಿದ ಜೀವಾತ್ಮರ ದೇಹವು ದಗ್ಧವಾಗಲರಿಯದು. ದೇಹದ ಗುಣವ ಬಿಡಬೇಕೆಂಬಿರಿ, ಬಿಡಲಿಕ್ಕೇನು ಕಟ್ಟಿದ ಪಶುಗಳೆ ? ಬಿಡಲಿಕ್ಕೇನು ಹಟ್ಟಿಯ ಪಶುಗಳೆ ? ಕಣ್ಣಿಗೆ ಕಾಣಿಸದ, ಕೈಗೆ ಸಿಕ್ಕದ ಗುಣಗಳ ಬಿಡಬೇಕೆಂಬಿರಿ. ಇದಕ್ಕೆ ದೃಷ್ಟಾಂತ: ಸೂರ್ಯನ ಬಿಂಬ ಜಲದಲ್ಲಿ ಕಾಣುವದು. ಆ ಬಿಂಬವ ಹಿಡಿಯಬಲ್ಲರೆ ಗುಣವ ಬಿಟ್ಟರೆಂಬೆ. ಜ್ಯೋತಿಯ ಪ್ರಭೆಯ ಕಡೆಯಕ್ಕೆ ತೆಗೆದು ಹಿಡಿಯಬಲ್ಲರೆ ಗುಣವ ಬಿಟ್ಟರೆಂಬೆ. ದೇಹದೊಳಗಣ ಪ್ರಾಣವ ಬಹಿಷ್ಕರಿಸಿ ಹಿಡಿಯಬಲ್ಲರೆ ಗುಣವ ಬಿಟ್ಟರೆಂಬೆ. ಇಂತೀ ಭೇದವ ತಿಳಿಯದೆ ವನವಾಸದಲ್ಲಿ ತನುಮನವ ಬಳಲಿಸಿ ಭವದತ್ತ ಮುಖವಾಗಿ ಹೋಗುವ ಹೇಸಿಮೂಳರ ಕಂಡು ನಾಚಿತ್ತಯ್ಯ ಎನ್ನ ಮನವು, ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಸುರುಚಿರ ಸ್ಥಾನದಲ್ಲಿ ಮೂರು ಗುಂಡನಿಟ್ಟು ಸುಡುತೈದಾರೆ ಕಾಯ ಕರಣೇಂದ್ರಿಯ ಗುಣಂಗಳ ಹುಳ್ಳಿಯ ಮಾಡಿ. ಕಾಯ ಕರಣೇಂ್ರಯಗಳ ಹುಳ್ಳಿ ಸವೆದು ಅಜಲೋಕವ ತಾಗಿ, ಅಲ್ಲಿರ್ದ ಶ್ವೇತಜಲ ಪ್ರವಾಹವಾಗೆ, ಅದನುಂಡು, ನಿತ್ಯಮಹೋತ್ಸಾಹನಾದೆ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
-->