ಅಥವಾ

ಒಟ್ಟು 30 ಕಡೆಗಳಲ್ಲಿ , 18 ವಚನಕಾರರು , 25 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನುವಿನ ಮಹಾಮನೆಯಲ್ಲಿ ಮಾಡುವ ಮಾಟ, ಘನಕ್ಕೆ ಘನವೆಂದು ಎದ್ದಿತ್ತು ಉಪ್ಪರಗುಡಿ ಲೀಲೋಲ್ಲಾಸವೆಂಬ ಕಳೆ ನೆಟ್ಟಿತ್ತು , ಭವವಿರಹಿತನೆಂಬ ಗುಡಿಗಟ್ಟಿತ್ತು , ಮಾಡುವ ದಾಸೋಹಕ್ಕೆ ಕೇಡಿಲ್ಲಾ ಎಂದು. ಕಾಯ ಸವೆದು ಮನಮುಟ್ಟಿ, ಭಾವನಿಶ್ಚಯವಾಗಿ ಮಾಟಕೂಟಸಂದಿತ್ತು , ಮಹಾಮನೆ ಮಹವನೊಡಗೂಡಿತ್ತು , ಕಾಯದ ಕಣೆ ಹಿಂಗಿತ್ತು, ಭಾವಗೂಡಿ ಅಳಿಯಿತ್ತು ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗವು ತಾನಾದಲ್ಲಿ ,
--------------
ಸಗರದ ಬೊಮ್ಮಣ್ಣ
ಇಕ್ಕಿದೆನು ಮುಂಡಿಗೆಯ ಹರಿಕುಲದ ವಿಪ್ರರು ಬೆಕ್ಕನೆ ಬೆರಗಾಗುವಂತೆ. ಇಕ್ಕಿದೆನು ಮುಂಡಿಗೆಯ ಸೊಕ್ಕಿದ ರಕ್ಕಸರ ಸಂಹರಿಸಿದ ಶಿವನೇ ಅಧಿಕನೆಂದು. ಇಕ್ಕಿದೆನು ಮುಂಡಿಗೆಯ ಹರಿಯಜಸುರಾಸುರರೆಲ್ಲ ಹರನ ಆಳುಗಳೆಂದು. ಇಕ್ಕಿದೆನು ಮುಂಡಿಗೆಯ ದಿಕ್ಕು ದಿಕ್ಕಿನೊಳಗೆ ಅಖಂಡೇಶ್ವರನೆಂಬ ಮುಕ್ಕಣ್ಣ ಪರಶಿವನೆ ಘನ ಘನವೆಂದು.
--------------
ಷಣ್ಮುಖಸ್ವಾಮಿ
ಅಜ್ಞಾನ ಕುಕರ್ಮದಿಂದ ಮುಸುಕಿದ ಕತ್ತಲೆಗೆ ಸುಜ್ಞಾನಜ್ಯೋತಿ ಎರೆಯಲ್ಪಟ್ಟ ಪರಮಗುರುವೆಂದಿತ್ತು ರಹಸ್ಯ. ಸಾಕ್ಷಿ : ``ಅಜ್ಞಾನತಿಮಿರಾಂಧಸ್ಯ ಜ್ಞಾನಾಂಜನಶಲಾಕಯಾ | ಚಕ್ಷುರುನ್ಮೀಲಿತಂ ಯೇನ ತಸ್ಮೆ ೈ ಶ್ರೀಗುರವೇ ನಮಃ ||'' ಎಂದೆಂಬ ಗುರು. ``ಆಕಾಶೋ ಲಿಂಗಮೂಲಂ ಚ ಪೃಥ್ವೀ ತಸ್ಯಾದಿ ಪೀಠಕಂ | ಆಲಯಂ ಸರ್ವಭೂತಾನಾಂ ಲಯಂ ಚ ಲಿಂಗಮುಚ್ಯತೇ ||'' ಎಂದೆಂಬ ಲಿಂಗವು. ``ಜಕಾರಂ ಹಂಸವಾಹಸ್ಯ ಗಕಾರಂ ಗರುಢಧ್ವಜಂ | ಮಕಾರಂ ರುದ್ರರೂಪಂ ಚ ತ್ರಿಮೂತ್ರ್ಯಾತ್ಮಕಜಂಗಮಃ ||'' ಎಂದೆಂಬ ಜಂಗಮವು. ``ಶ್ರಾದ್ಧಂ ಯಜ್ಞಂ ಜಪಂ ಹೋಮಂ ವೈಶ್ವದೇವಸುರಾರ್ಚನಂ | ಧೃತತ್ರಿಪುಂಡ್ರಪೂತಾತ್ಮಾ ಮೃತ್ಯುಂ ಜಯತಿ ಮಾನವಃ ||'' ಎಂದೆಂಬ ವಿಭೂತಿ. ``ರುದ್ರಾಕ್ಷಿಧಾರಣಂ ಸರ್ವಂ ಜಟಾಮಂಡಲಧಾರಿಣಿ | ಅಕ್ಷಮಾಲಾರ್ಪಿತಕರ ಕಮಂಡಲಕರಾನ್ವಿತಂ || ತ್ರಿಪುಂಡ್ರಾವಲಿಯುಕ್ತಾಂ | ಆಷಾಡೇನ ವಿರಾಜಿತಂ ಋಗ್ಯಜುಃಸಾಮ ರೂಪೇಣ | ಸೇವ ತಸ್ಮೆ ೈ ಸ್ವರಃ ಇತಿ | ತ್ರೈವ ಗಾಯಿತ್ರೇವ ವರಾನನೇ ||'' (?) ಎಂದೆಂಬ ವಿಭೂತಿ ರುದ್ರಾಕ್ಷಿ. ``ಜ್ಞಾನ ಪ್ರಾಣ ಬೀಜಂ ಚ ನಕಾರಂ ಚ ಆಚಾರಕಂ | ಮಕಾರಂ ಚ ಗುರೋರ್ಬೀಜಂ ಶಿಕಾರಂ ಲಿಂಗಮತ್ರ್ಯಕಂ || ವಕಾರಂ ಚ ಬೀಜಂ ಚ ಯಕಾರಂ ಪ್ರಾಸಕಂ | ಏವಂ ಬೀಜಾಕ್ಷರಂ ಜ್ಞಾತುಂ ದುರ್ಲಭಂ ಕಮಲಾನನೆ ||'' ಎಂದೆಂಬ ಷಡಕ್ಷರಿಮಂತ್ರವು. ``ಶೋಷಣಂ ಪಾಪಪಂಕಸ್ಯ ದೀಪನಂ ಜ್ಞಾನತೇಜಸಃ | ಗುರುಪಾದೋದಕಂ ಪೀತ್ವಾ ಸಂಸಾರದ್ರುಮನಾಶನಂ ||'' ಎಂದೆಂಬ ಪಾದೋದಕವು. ``ಪ್ರಸಾದಂ ಗಿರಿಜಾದೇವಿ ಸಿದ್ಧಕಿನ್ನರಗುಹ್ಯಕಃ | ವಿಷ್ಣು ಮುಖ್ಯಾದಿದೇವಾನಾಮಗ್ರಾಹ್ಯೋýಯಮಗೋಚರಃ ||'' ಎಂದೆಂಬ ಪ್ರಸಾದವು. ಇನಿತು ತೆರದ ಅಷ್ಟಾವರಣದ ಶ್ರುತ ದೃಷ್ಟವ ಕಂಡು ಘನವೆಂದು ನಂಬಿದಾತನೆ ಸತ್ಯಸದಾಚಾರಿ ಕಾಣಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಅಂಗಕ್ಕೆ ಲಿಂಗೋಪದೇಶ, ಮನಕ್ಕೆ ಮಂತ್ರೊಪದೇಶವೆ ಘನವೆಂದು ನಂಬಿದೆನಯ್ಯಾ, ನಂಬಿದೆನಯ್ಯಾ. ಈ ಎರಡರ ಬೋಧೋದ್ಗಾರಕ್ಕೆ ಚೆನ್ನಬಸಣ್ಣನೆ ಘನಗುರು, ಘನಲಿಂಗ, ಘನಜಂಗಮವೆಂದು ನಂಬಿದೆನಯ್ಯಾ. ಇದನಲ್ಲೆಂದಡೆನ್ನಗುಣವೆನ್ನನೆ ಸುಡಲೀಯದೆ, ಅಲ್ಲಯ್ಯಾ, ಕಪಿಲಸಿದ್ಧಮಲ್ಲಯ್ಯಾ?
--------------
ಸಿದ್ಧರಾಮೇಶ್ವರ
ಅಯ್ಯಾ ಧರೆಯ ಮೇಲೆ ಹುಟ್ಟಿದವರೆಲ್ಲ ವಾಕ್ಕುಜಾಲವ ಕಲಿತುಕೊಂಡು, ಅನುಭಾವವ ಬಲ್ಲವೆಂದು ನುಡಿವರು. ಅನುಭಾವವೆಂತಿಪ್ಪುದೆಂದರಿಯರು. ತೂರ್ಯಾತೂರ್ಯ ನುಡಿಯ ಪರಾತ್ಪರದ ನುಡಿ ಎಂದು ಹರಶರಣರ ವಾಕ್ಯವ ಕಲಿತುಕೊಂಡು ನುಡಿದಾಡುವರು. ತೂರ್ಯಾತೂರ್ಯವೆಂಬುದು ನಾಮರೂಪಿಗುಂಟೆ ? ಪರಾತ್ಪರವೆಂಬ ವಾಕ್ಯ ಮನಸಿಂಗುಂಟೆ ? ಹೆಸರಿಗೆ ಬಾರದ ಘನವೆಂದು ನೀವೆ ಹೇಳುತಿರ್ದು ಮತ್ತೆ ಹೆಸರಿಗೆ ತಂದು ನುಡಿದಾಡುವರು. ಇದು ಹುಸಿಯೋ, ದಿಟವೊ ? ಇದು ಹಸುಮಕ್ಕಳಾಟ. ಸಸಿನೆ ನೆನೆದು ಬದುಕಿದೆ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಪೃಥ್ವಿಯಿಂದ ಭಕ್ತನಾದೆ, ಅಪ್ಪುವಿನಿಂದ ಮಾಹೇಶ್ವರನಾದೆ, ತೇಜದಿಂದ ಪ್ರಸಾದಿಯಾದೆ, ವಾಯುವಿನಿಂದ ಪ್ರಾಣಲಿಂಗಿಯಾದೆ, ಆಕಾಶದಿಂದ ಶರಣನಾದೆ, ಝೇಂಕಾರದಿಂದ ಸರ್ವಾಂಗ ವೇಧಿಸಿ ಪಂಚಮುಖವುಳ್ಳ ಪರಮೇಶ್ವರನನರಿತು ಪಾವನನಾದ ಮೇಲೆ ಘನವೆಂದು ಕೆಟ್ಟರು ಕೋಟ್ಯಾನುಕೋಟಿ. ಇನ್ನು ಕಬ್ಬಿಣಕೆ ಪರುಷ ಸೋಂಕಲು ಕನಕವಾಯಿತೆಂದರು. ಮುಂದೆ ಕಬ್ಬಿಣಕೆ ಬಾಧೆ ತಪ್ಪದು, ಕನಕಕ್ಕೆ ಬಾಧೆ ತಪ್ಪದು. ಇನ್ನು ಇಂಥ ಚಿನ್ನಭಿನ್ನವೇ ಪರುಷವೆಂದೆನ್ನುವರು. ಪರುಷ ಮುಟ್ಟಲು ಪರುಷವಾದುದೇ ತನ್ನ ಘನವು. ಪರುಷ ಮುಟ್ಟಿ ಚಿನ್ನವಾದುದೆ ಸಿದ್ಭಾಂತ ಕಾಣಾ. ಮುಂದೆ ಪರುಷಮುಟ್ಟಲು ಪರುಷಕಟ್ಟಳೆ ಮುಂದೆ ವೇದಾಂತ ಗುರುಮುಟ್ಟಿ ಗುರುವಾದ ನಿಷ್ಕಳಂಕ ನಿರಾಭಾರಿ ನಿರ್ಗುಣನಾದ ಮಹಾತ್ಮಂಗೆ ನೋಟವಿಲ್ಲ ಕೂಟವಿಲ್ಲ ಆಟವಿಲ್ಲ ಪಾಠವಿಲ್ಲ ಆರೋಗಣೆಯಿಲ್ಲ. ವರನಾಗನ ಗುರುವೀರನೆ ಪರಂಜ್ಯೋತಿ ಮಹಾವಿರಕ್ತಿ.
--------------
ಪರಂಜ್ಯೋತಿ
ಗುರುಪಾದೋದದಿಂದ ಂಗಮಜ್ಜನ ಮಾಡುವೆನೆಂಬ ಭಾಷೆ ಎನ್ನದಯ್ಯಾ. ಗುರುಪಾದೋದದಿಂದ ಸ್ವಯಂಪಾಕರಚನೆ ಎಂಬ ಭಾಷೆ ಎನ್ನದಯ್ಯಾ. ಗುರುಪಾದೋದದಿಂದ ಶಿರಃಸ್ನಾನ, ಅಂಗಸ್ನಾನ, ಮುಖಸ್ನಾನ ಎಂಬ ಭಾಷೆ ಎನ್ನದಯ್ಯಾ. ಗುರುಪಾದೋದಕಂದ ಸರ್ವಶುದ್ಧ ಎಂಬ ಭಾಷೆ ಎನ್ನದಯ್ಯಾ. ಇದು ಕಾರಣ, ಗುರುವೆ ಘನವೆಂದು, ಗುರುಪಾದೋದಕವೆ ಎನ್ನ ಮೋಕ್ಷದ ಬೀಡೆಂದು ಡಂಗುರ ಹೊಯ್ವೆ. ಇದು ಕಿಂಚಿತ್‍ಹುಸಿಯಾದಡೆ ಕಪಿಲಸಿದ್ಧಮಲ್ಲಿಕಾರ್ಜುನ ನಾಯಕನರಕದಲ್ಲಿಕ್ಕದೆ ಮಾಣ್ಬನೆ? ಮಡಿವಾಳ ತಂದೆ.
--------------
ಸಿದ್ಧರಾಮೇಶ್ವರ
ನಾನಾ ಜನ್ಮಂಗಳ ತಿರುಗಿ, ಮನುಷ್ಯಜನ್ಮಕ್ಕೆ ಬಂದು, ಪಂಚೇಂದ್ರಿಯವುಳ್ಳ ಅರಿವಿನ ಪುರುಷನಾದ ಮೇಲೆ, ತಮ್ಮ ಆತ್ಮದೊಳಗಿಪ್ಪ ಜ್ಯೋತಿರ್ಲಿಂಗವನು ಕಂಡು, ಆರು ಲಿಂಗವನು ಕಂಡು, ಆರು ಲಿಂಗವನು ಅನುಭವಿಸಿ ನೋಡಿ, ಮೂವತ್ತಾರು ಲಿಂಗದ ಮುದ್ರೆಯನು ಮುಟ್ಟಿ, ಆಧ್ಯಾತ್ಮದ ನೀತಿಯನು ತಿಳಿದು, ಶುದ್ಧಾತ್ಮದೇಹಿಗಳಾದ ಮೇಲೆ ತಮ್ಮ ಜಾತಿಧರ್ಮದ ನೀತಿಶಾಸ್ತ್ರದ ನಿರ್ಣಯವನೆ ಕೇಳಿ, ತಮ್ಮ ಜಾತಿಧರ್ಮದ ವರ್ಣನೆ ಗುರುಹಿರಿಯರನು ಪೂಜೆಯ ಮಾಡಿ, ಹಸಿದು ಬಳಲಿಬಂದವರಿಗೆ ಅನ್ನವನು ನೀಡಿ, ಭಕ್ತಿಯನು ಮಾಡಿ, ಮುಕ್ತಿಯನ್ನು ಪಡೆದರೆ, ತನ್ನಷ್ಟಕ್ಕೇ ಆಯಿತು. ಆ ವಾರ್ತೆ ಕೀರ್ತಿಗಳು ಜಗಜಗಕ್ಕೆ ಕೀರ್ತಿ ಮೆರೆಯಿಪ್ಪುದು ಕಾಣಿರೊ. ಅದು ಎಂತೆಂದರೆ : ತಾನು ಹತ್ತು ಎಂಟು ಸಾವಿರ ಹಣ ಕಾಸುಗಳನು ಗಳಿಸಿ, ಹತ್ತಿರವಿಟ್ಟುಕೊಂಡು ಸತ್ತುಹೋದರೆ, ಆ ಬದುಕು ತನ್ನ ಹೆಂಡಿರು ಮಕ್ಕಳಿಗೆ ಬಾಂಧವರಿಗೆ ಆಯಿತಲ್ಲದೆ, ನೆರೆಮನೆಯವರಿಗೆ ಬಂದೀತೆ ? ಬರಲರಿಯದು. ಅದು ಎಂತೆಂದರೆ : ಇಂತೀ ತಮ್ಮ ಮನೆಯ ಹಿರಿಯರ ಸುದ್ದಿಯನು ಹಿಂದಿಟ್ಟುಕೊಂಡ ನೆರೆಮನೆಯ ಹಿರಿಯರ ಗರ್ವ, ಬಸವಣ್ಣ ದೊಡ್ಡಾತ, ಚೆನ್ನಬಸವಣ್ಣ ದೊಡ್ಡಾತ, ದೇವರ ದಾಸಿಮಯ್ಯ ದೊಡ್ಡಾತ. ಗಣಂಗಳು ದೊಡ್ಡವರೆಂದು ಬರಿಯ ಮಾತಿನ ಮಾಲೆಯ ಕೊಂಡು ಶಾಸ್ತ್ರವನು ಹಿಡಕೊಂಡು ಓದಿ ಹೇಳುವ ಮನುಜರಿಗೆಲ್ಲ ಭಕ್ತಿ ಅಳವಟ್ಟು, ಮುಕ್ತಿ ಸಾಧನವಾಯಿತೇ ? ಆಗಲರಿಯದು. ಅದು ಎಂತೆಂದರೆ : ಬಸವಣ್ಣ ಭಕ್ತಿಯನು ಮಾಡಿ, ಮುಕ್ತಿಯನು ಪಡೆದರೆ, ಬಸವಣ್ಣನ ಅಷ್ಟಕ್ಕೇ ಆಯಿತು. ಚೆನ್ನಬಸವಣ್ಣ ಭಕ್ಕಿಯನು ಮಾಡಿ, ಮುಕ್ತಿಯನು ಪಡೆದರೆ, ಚೆನ್ನಬಸವಣ್ಣನ ಅಷ್ಟಕ್ಕೇ ಆಯಿತು. ದೇವರದಾಸಿಮಯ್ಯ ಭಕ್ತಿಯನು ಮಾಡಿ, ಮುಕ್ತಿಯನು ಪಡೆದರೆ, ದೇವರದಾಸಿಮಯ್ಯನ ಅಷ್ಟಕ್ಕೆ ಆಯಿತು. ಗಣಂಗಳು ಭಕ್ತಿಯನು ಮಾಡಿ, ಮುಕ್ತಿಯನು ಪಡೆದರೆ, ಗಣಂಗಳ ಅಷ್ಟಕ್ಕೇ ಆಯಿತು. ನಾವು ಭಕ್ತಿಯನು ಮಾಡಿ, ಮುಕ್ತಿಯನು ಪಡೆದರೆ, ನಮ್ಮಷ್ಟಕ್ಕೇ ಆಯಿತು. ಅದು ಎಂತೆಂದರೆ : ಬಸವಣ್ಣ ಚೆನ್ನಬಸವಣ್ಣ ದೇವರದಾಸಿಮಯ್ಯ ಗಣಂಗಳೆಲ್ಲರು ದೊಡ್ಡವರೆಂದು ಅವರನ್ನು ಹಾಡಿ ಹರಸಿದರೆ, ಅವರು ನಮಗೆ ಕೊಟ್ಟು ಕೊಂಡು ನಡಸ್ಯಾರೆ ? ನಡೆಸಲರಿಯರು. ಅವರು ದೊಡ್ಡವರೆಂದರೆ, ಅವರು ತಮ್ಮಷ್ಟಕ್ಕೇ. ಅವರು ಚಿಕ್ಕವರಾದರೂ, ಅವರು ತಮ್ಮಷ್ಟಕ್ಕೇ. ನಾವು ದೊಡ್ಡವರಾದರೆ ಅವರಿಗೆ ನಾವು ಕೊಟ್ಟು ಕೊಂಡು ನಡೆಸೇವೆ ? ನಡೆಸಲರಿಯೆವು. ನಾವು ದೊಡ್ಡವರಾದರೆ ನಮ್ಮಷ್ಟಕ್ಕೇ. ವಾನು ಚಿಕ್ಕವರಾದರೆ ನಮ್ಮಷ್ಟಕ್ಕೇ. ಎದು ಎಂತೆಂದರೆ : ಹಿಂದೆ ಹುಟ್ಟಿದ ಹಿರಿಯ ಅಣ್ಣಗಳಾದರೇನು, ಮುಂದೆ ಹುಟ್ಟಿದ ಕಿರಿಯ ತಮ್ಮನಾದರೇನು, ತನ್ನ ಸುದ್ದಿಯನು ತಾನು ಅರಿತು, ಅನ್ಯರ ಹಂಗು ಹರಿದು, ಒಂಕಾರ ಪರಬ್ರಹ್ಮದ ಧ್ಯಾನವನು ಮಾಡಿಕೊಂಡು ಇರಬಲ್ಲರೆ, ಆತನೀಗ ತನ್ನಷ್ಟಕ್ಕೇ. ಹಿರಿಯಾತಂಗೆ ಭಕ್ತಿ ಅಳವಟ್ಟು, ಮುಕ್ತಿ ಸಾಧನವಾಯಿತು ಕಾಣಿರೊ. ಇಂತೀ ತನ್ನ ಸುದ್ದಿಯ ತಾನು ಅರಿಯದೆ, ನೆರೆಮನೆಯ ಹಿರಿಯರು ಘನವೆಂದು ಕೊಡಾಡುವ ಮರಿ ನಾಯಿಕುನ್ನಿಗಳಿಗೆಲ್ಲ ಭಕ್ತಿ ಅಳವಟ್ಟು, ಮುಕ್ತಿ ಸಾಧನವಾಗಲರಿಯದೆಂದು ಇಕ್ಕಿದೆನು ಮುಂಡಿಗೆಯ. ಇದನೆತ್ತುವರುಂಟೇನೊ, ದೇವಧ್ವಜ ಮೃತ್ಯುಂಜಯನ ಭಾವದೊಲ್ಲಭ ಮುದ್ದನೂರೇಶಾ ?
--------------
ಸರ್ವೇಶ್ವರಲಿಂಗ
ಜ್ಞಾನಗುರುವಿನ ಶ್ರೀಪಾದವಿಡಿದ ಶಿವಕವಿ ಅತೀತನೆಂತೆನೆ : ``ಪರಬ್ರಹ್ಮಸ್ವರೂಪ ಉತ್ತಮಂ ಮುಕ್ತಿ ಸಂತತಃ ದೇವದೂತಿ ಪ್ರಸನ್ನಿತೆ ಉಭಯಮಾರ್ಗ ವರಕವಿ ಮುದಿಮಮ್ ಪ್ರಳಯಕಾಲಸ್ಯ | ಆತ್ಮತೃಪ್ತಿ ನರಕವಿ ರಾಜವಂದಿತಾ ತನ್ನಿಷ್ಟ ನರಕಪಿತಃ ತ್ರಿವಿಧ ಶಬ್ದ ಶಾಸ್ತ್ರಯಿತಾರ್ಥ ಸಮೋದ್ದಿಷ್ಟ ವಚನಧಾರಿ ನಿಷ್ಕಳಂ ||''(?) ಶ್ರೀ ಶ್ರೀ ಕವಿಗಳೆಂದು ಪೆಸರಿಟ್ಟುಕೊಂಡು ನುಡಿವಣ್ಣಗಳಿರಾ ಕಾಯದ ಕೀಲನರಿತು ಕಾವ್ಯತ್ವವನು ಮಾಡಿ ಭೇದವ ಬಲ್ಲರೆ ಹೇಳಿ, ಅರಿಯದಿರ್ದೊಡೆ ಕೇಳಿ. ನಿಮ್ಮ ಅಂಗ ಪಾತಾಳವೆಂಬ ಪವನಸೂತ್ರವನು ಮೆಟ್ಟಿ ಬಿಡುವಿಲ್ಲದಂತಾ ಉಯ್ಯಾಲೆಯನಾಡುತಿಹುದು. ನಿಮ್ಮ ಅಂಗ ಭುವಿಯೆಂಬ ಭೂಚಕ್ರದ ಮೂಲ ತಿಳಿದು ನಾಭಿಮಂಡಲವೆಂಬ ಹುತ್ತದೊಳಗಿರ್ದ ನಾಗಕೂರ್ಮನೆಂಬ ಘಟಸರ್ಪನ ತಲೆಕೆಳಗಾಗಿ ಬಾಲ ಮೇಲಕಾಗಿರುವುದು ಕಾಣಿರೋ. ಯೋಗದೃಷ್ಟಿಯೆಂಬ ನಾಗೇಶ್ವರನನು ಹಿಡಿದುಕೊಂಡು ಊದಲಾಗಿ ಆಗ ನಾಗಕೂರ್ಮನೆಂಬ ಸರ್ಪ ಸಭೆಯನು ತಿಳಿಯಲಿಕ್ಕೆ ಇಳುಹಿ ತಲೆಯ ಮೇಲಕ್ಕೆ ಮಾಡಿ ಗಗನಾಕಾರವೆಂಬ ಮಂಡಲಕ್ಕೆ ಹೆಡೆಯೆತ್ತಿ ಆರ್ಭಟಿಸಿ ಝೇಂಕರಿಸಿ ನಲಿದಾಡುವಂತೆ, ನಾದವನು ತನ್ನಲ್ಲಿ ಜ್ಞಾನೋದಯದಿಂದ ಲಾಲಿಸಿ ಕೇಳಬಲ್ಲರೆ ಆತನಿಗೆ ಝೇಂಕಾರ ಮೊದಲಾದ ನಾಲ್ಕು ವೇದ, ಆರು ಶಾಸ್ತ್ರ, ಹದಿನೆಂಟು ಪುರಾಣ ಇಪ್ಪತ್ತೆಂಟು ದಿವ್ಯಾಗಮ, ಮೂವತ್ತೆರಡು ಉಪಶಾಸ್ತ್ರಂಗಳಲ್ಲಿ ಗೀತ ಗಾಯನ ಯತಿ ಪ್ರಾಸ ದೀರ್ಘ ಗುರು ಲಘು ಬತ್ತೀಸ ರಾಗವನು ಎತ್ತಿ ಹಾಡುವಂತ ಮೂಲದ ಕೀಲ ಬಲ್ಲನೆಂದೆನ್ನಬಹುದು ಕಾಣಿರೋ. ನಿಮ್ಮ ಅಂಗ ಪಂಚಶತಕೋಟಿ ಭುವನದಲ್ಲಿ ಚಲಿಸ್ಯಾಡುವಂಥ ಮನದ ಚಂಚಲವೆಂಬ ಪಕ್ಷಿಯ ಪಕ್ಕವನು ಹರಿದು, ತನುವೆಂಬ ಪಂಜರದೊಳಗೆ ಇಂಬಿಟ್ಟುಕೊಂಡು, ತಾಮಸ ಮದಗುಣಾದಿಗಳೆಂಬ ಹುಳುಗಳ ಜಾತಿಗಳ ತೂಗಡಿಕೆ ಮದನಿದ್ರೆ ವಾಹಡಿಕೆ ಆಕಳಿಕೆ ಸೀನು ಬಿಕ್ಕಳಿಕೆ ಬದಗರ ತೇಗು ಮೊದಲಾದ ತಾಮಸಗುಣಾದಿ ಗುಣಂಗಳೆಂಬ ಹುಳುಜಾತಿಗಳನ್ನೆಲ್ಲ ತಿಂದು ನುಂಗಿ ನಿರ್ಮಲ ದೇಹಿಯಾಗಿರಬಲ್ಲರೆ ಆತನಿಗೆ ಒಂ ನಮಃಶಿವಾಯ ಎಂಬ ಷಡಕ್ಷರದ ಭೇದವ ಬಲ್ಲನೆಂದೆನ್ನಬಹುದು ಕಾಣಿರೋ. ನಿಮಗೆ ಅಷ್ಟದಿಕ್ಕಿನಲ್ಲಿ ಆಡುವಂಥ ದಶರೂಪಗಳನ್ನೆಲ್ಲ ಚಿತ್ತ ಏಕ ಮಾಡಿ, ಸುಜ್ಞಾನವೆಂಬ ಹಸ್ತದಲ್ಲಿ ಹಿಡಿದು, ಮುಖದ ಮೇಲುಗಿರಿಮಂದರಪರ್ವತದ ಶಿಖರದ ತುದಿಯಲ್ಲಿ ನಿಲ್ಲಿಸಿ, ಕ್ಷೀರಸಾಗರವೆಂಬ ಸಮುದ್ರದೊಳಗೆ ಹುಚ್ಚೆದ್ದು ಸೂಸಿ ಆಡುವಂಥ ತೆರೆಗಳನ್ನೆಲ್ಲ ನಿಲ್ಲಿಸಬಲ್ಲರೆ ಆತನಿಗದು ತ್ರಿಕಾಲ ಮರಣಾದಿಗಳನ್ನೆಲ್ಲ ಗೆಲಿಯಬಲ್ಲಂಥ ಮಹಾಶಿವಯೋಗೀಶ್ವರನೆಂದೆನ್ನಬಹುದು ಕಾಣಿರೋ. ಆತನಿಗೆ ಜ್ಞಾನ ಅರ್ಥ ಪದದ ಕೀಲ ವಚನಂಗಳ ಅರ್ಥ ಅನುಭಾವಂಗಳ ಮಾಡಬಲ್ಲನೆಂದೆನ್ನಬಹುದು ಕಾಣಿರೋ ! ಇಂತು ಮಂತ್ರದ ಕೀಲನರಿಯದ ಕವಿಗಳು ಕಂದಯ್ಯಗೆ ಮಹಾಪ್ರಭುಲಿಂಗಲೀಲೆ, ಕರಣಹಸಿಗೆ, ಮಿಶ್ರಾರ್ಪಣ, ನವಚಕ್ರಕೋಟಿಗಳೆಂಬ ಇಂತೀ ಭುವಿಯಲ್ಲಿ ಶಿವಾಗಮವೆಂದು ಬರಿಯ ಮಾತಿನ ಮತಿಯ ಪತ್ರವನು ಹಿಡಕೊಂಡು ಓದಿ, ಅದರೊಳಗಿನ ಅರ್ಥವನು ಭಾವಂಗಳಲಿ ತಿಳಿತಿಳಿದು ನೋಡಿ, ಜ್ಞಾತತ್ವದ ವಚನಂಗಳ ಮಾಡಿ ಇಡುವಂಥ ಕವಿಗಳು ತಮ್ಮ ಆತ್ಮದ ಶುದ್ಧಿಯ ತಾವರಿಯದೆ ಭೂತವೊಡೆದವರು ಬೊಗಳಾಡಿದಂತೆ ಆಯಿತ್ತು ಕಾಣಿರೋ. ಅದೆಂತೆಂದರೆ :ಛಂದಸ್ಸು, ನಿಘಂಟು, ಅಮರ, ವ್ಯಾಕರಣ, ನಾನಾರ್ಥಗಳೆಂಬ ಹಂಚಿನ ಕುಡಿಕೆಯೊಳಗೆ ತುಂಬಿದ ಅರ್ಥ ಅನುಭಾವಂಗಳ ತಿಳಿತಿಳಿದು ನೋಡಿ, ಪೃಥ್ವಿ ಅಪ್ಪು ತೇಜ ವಾಯು ಆಕಾಶ ರವಿಶಶಿಯಾದಿಗೂ ಹೆಸರದೆಸೆಯ ಕೊಂಡುಕೊಂಡು, ಇಂತಿವು ಮೂರನು ಕೂಡಿಕೊಂಡು, ಒಂದಕ್ಕೆ ಒಂದು ಕಟ್ಟಿ ಹಾಕಿ ಪ್ರಾಸ ಬಿದ್ದಿತೊ ಬೀಳದೊ ಎಂದು ತಮ್ಮನದಲ್ಲಿ ತಾವು ಅಳದಾಡುವಂತೆ ಒಂದು ಹೊದವಿದ ಪದ್ಯವನು ಮಾಡಿ ಇಡುವಂತಹ ಕಲಿಕೆಯ ಕವಿಗಳು ಮುಂದೆ ಅಜ್ಞಾನದಿಂದ ಮುಕ್ತಿಯ ದಾರಿಯ ಕಾಣಲರಿಯದೆ ಮುಂದುಗಾಣದ ತುರುಕರು ಅಘೋರವೆಂಬ ನರಕದ ಕಿಚ್ಚಿನ ಕೊಂಡದೊಳಗೆ ಬಿದ್ದು ಹೋರಟೆಗೊಳ್ಳುತ್ತಿದ್ದರು ಕಾಣಿರೋ. ಅದೆಂತೆಂದರೆ ; ಛಂದಸ್ಸು ನಿಘಂಟು ಅಮರ ವ್ಯಾಕರಣ ನಾನಾರ್ಥಂಗಳೆಂಬುವೆಲ್ಲ ಕವಿಯೆಂಬ ಕುಂಬಾರ ಮಾಡಿ ಸವಿದುಂಡು ಬೀದಿಯೊಳಗೆ ಬಿಟ್ಟಿರ್ದ ಎಂಜಲ ಪತ್ರಾವಳಿಯೊಳಗಿನ ಭೋಜನಕ್ಕೆ ಕವಿಗಳೆಂಬುವ ಆರುಮಂದಿ ಸೊಣಗಗಳು ಕೂಗಿಡುತಿರ್ದವು ಕಾಣಿರೋ. ಅದೆಂತೆಂದರೆ:ಕಾಮ ಘನವೆಂದು ಮಾಡಿದಾತ ಒಬ್ಬ ಕವಿಯೆಂಬ ಸೊಣಗ. ಕ್ರೋಧ ಘನವೆಂದು ಮಾಡಿದಾತ ಒಬ್ಬ ಕವಿಯೆಂಬ ಸೊಣಗ. ಮದ ಘನವೆಂದು ಮಾಡಿದಾತ ಒಬ್ಬ ಕವಿಯೆಂಬ ಸೊಣಗ. ಮೋಹ ಘನವೆಂದು ಮಾಡಿದಾತ ಒಬ್ಬ ಕವಿಯೆಂಬ ಶ್ವಾನನು. ಮಚ್ಚರ ಘನವೆಂದು ಮಾಡಿದಾತ ಒಬ್ಬ ಕವಿಯೆಂಬ ಶ್ವಾನನು. ಲೋಭ ಘನವೆಂದು ಮಾಡಿದಾತ ಒಬ್ಬ ಕವಿಯೆಂಬ ಶ್ವಾನನು. ಇಂತಿವರು ಆರು ಮಂದಿ ಕವಿಗಳೆಂಬ ಶ್ವಾನಗಳು ಕೂಡಿ ನಾ ಹೆಚ್ಚು ತಾ ಹೆಚ್ಚು ಎಂದು ಒಂದಕ್ಕೊಂದು ಕಾದಾಡಿ ಚಿತ್ತಪಲ್ಲಟವಾಗಿ, ಆ ಪತ್ರದೊಳಗಿನ ಬೋನದ ಸವಿಯನು ಬಿಟ್ಟು ಚಿತ್ತಪಲ್ಲಟವಾಗಿ, ಆ ಪತ್ರದ ತುಳಿಯನು ಹರಿದುಕೊಂಡು ತಿಂದು ಹಲವು ಕಡೆಗೆ ಹರಿದಾಡುತ್ತಿದ್ದವು ಕಾಣಿರೋ. ಅದು ಎಂತೆಂದರೆ :ಇಂತು ಕಾಯದ ಕೀಲನರಿಯದೆ ಮಾಡಿದ ಕವಿಗಳು ಕಾಲನ ಬಾಧೆಗಳೆಂಬ ಮರಣಕ್ಕೆ ಒಳಗಾಗಿ ಹೋದಂತೆ ಕುರುಡ ಕವಿಗಳಂ ಕಂಡು ನಗುತ್ತಿದ್ದಾತ ಸಿದ್ಧಮಲ್ಲನದಾತ ಮೇಗಣಗವಿಯ ಗುರುಸಿದ್ಧೇಶ್ವರಪ್ರಭುವೆ.
--------------
ಸಿದ್ಧಮಲ್ಲಪ್ಪ
ಒಡೆಯರಾಡುವ ಮಾತ ಕಡೆಪರಿಯಂತರ ಕೇಳಿ, ಇದರುವೋಗಿ ಕಿಂಕರನಾಗಿ ನಡುಗುತ್ತ ಬಿನ್ನಹಮಾಡುವ ಸದ್ಭಕ್ತನ ತೋರಯ್ಯಾ. ಒಡೆಯರಾಡುವ ಮಾತ ಕಂಡು, ಕರೆದಲ್ಲಿ ಕೆಡೆಮೆಟ್ಟಿ ಬಾು ಘನವೆಂದು ಆಡುವನ ತೋರದಿರಯ್ಯಾ, ಅವನ ಸಂಗದಲ್ಲಿರಿಸಯ್ಯಾ, ಅವನ ಸಹಪಂಕ್ತ್ತಿಯಲ್ಲಿ ಕುಳ್ಳಿರಿಸದಿರಯ್ಯಾ. ಕೂಡಲಸಂಗಮದೇವಯ್ಯಾ, ನಿಮ್ಮ ಬೇಡುವುದೊಂದೆ ವರವು. 450
--------------
ಬಸವಣ್ಣ
-->