ಅಥವಾ

ಒಟ್ಟು 191 ಕಡೆಗಳಲ್ಲಿ , 48 ವಚನಕಾರರು , 170 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರು ಕಂಬದ ಮೇಲೆ ಮೂರು ದೇಗುಲವ ಕಂಡೆನಯ್ಯ. ಮೂರು ದೇಗುಲದ ಮೇಲೆ ಒಂದು ಶಿಖರವ ಕಂಡೆನಯ್ಯ. ಆ ಶಿಖರವನೊಂದು ವಸ್ತು ಒಳಗೊಂಡಿರ್ಪುದು ನೋಡಾ. ಆ ವಸ್ತುವಿನ ಕುರುಹ ನೀವಾರಾದರೆ ಹೇಳಿರಯ್ಯ; ನಾನೊಂದ ಅರಿಯೆನು. ತಾನಾಗಿ ಕಾಣಬಲ್ಲವರಿಂಗೆ ಕಾಣಬಂದಿತ್ತಯ್ಯ. ಕಾಣಲರಿಯದವರಿಂಗೆ ದೂರವಾಗಿತ್ತಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಶಿಶು ಕಂಡ ಕನಸು ತಾ ಪಸರಿ ಪರ್ಬಿತು, ಮೂರು ದೆಸೆದೆಸೆಯ ಬಣ್ಣಗಳು ಹಲವಾಗಿ ಆ ಬೆಳಕನೆ ನುಂಗಿ, ಆಲಿಸುತ ಕಂಬನಿಯ ಲೋಲನ್ನ ಕಂಡು ತಾ ಮುಗ್ಧೆಯಿಂದೂ ಸಾನುವಿನ ಕೊಡನ ಹೊತ್ತಾನತದ ಲೋಕದೊಳು ತಾನು ತಾನಾಗಿ, ತತ್ತ್ವದ ತುಯ ಹಮ್ಮಡಗಿದಕ್ಷರದ ಸೊಮ್ಮ ಮೀರಿದ ಬ್ರಹ್ಮಕರ್ಮಿಗಳಿಗದು ತಾನು ವಶವಲ್ಲದೆ ಇನ್ನು ಕಪಿಲಸಿದ್ಧಮಲ್ಲಿನಾಥನೆಂದೆಂಬ ಸೊಮ್ಮಿನ ಬ್ರಹ್ಮಕ್ಕೆ ಸೇರಿತ್ತಯ್ಯ.
--------------
ಸಿದ್ಧರಾಮೇಶ್ವರ
ಪುಣ್ಯಪಾಪವಿಲ್ಲಾಗಿ ಜನನದ ಹಂಗಿಲ್ಲ. ಬಂದುದನುಂಬನಾಗಿ ಮಾನವರ ಹಂಗಿಲ್ಲ. ಭವಗೆಟ್ಟನಾಗಿ ದೈವದ ಹಂಗಿಲ್ಲ. ಸತ್ಯಜ್ಞಾನಾನಂದವೆ ತಾನಾಗಿ ಇನ್ನಾರ ಹಂಗಿಲ್ಲ. ಇನ್ನಾರ ಹಂಗಿಲ್ಲದಾತ ಗುಹೇಶ್ವರಲ್ಲಯ್ಯನೊಬ್ಬನೆ !
--------------
ಅಲ್ಲಮಪ್ರಭುದೇವರು
ಬ್ರಹ್ಮಜ್ಞಾನದಿಂದ ಬ್ರಹ್ಮವನರಿತರಿವು ಆ ಪರಬ್ರಹ್ಮದೊಡವೆರಸಿ ನಿಂದಿತ್ತು. ಅದೆಂತೆಂದಡೆ: ಬ್ರಹ್ಮಬ್ರಹ್ಮಾಂಡ ಬೇರಿಲ್ಲದಿಪ್ಪಂತೆ, ಆಕಾಶವನಿಲ ಬೇರಿಲ್ಲದಿಪ್ಪಂತೆ, ಹಣ್ಣುರುಚಿ ಬೇರಿಲ್ಲದಿಪ್ಪಂತೆ. ದ್ವೈತವೆ ಅದ್ವೈತವಾದ ಬಳಿಕ ದ್ವೈತವೆಂದೆನಲುಂಟೆ ? ಇಲ್ಲವಾಗಿ. ಅರಿವು ಮರಹಿಗೆ ತೆರಹಿಲ್ಲದ ಕರಿಗೊಂಡರಿವು ತಾನಾಗಿರಲು ನಾನಾ ಪರಿಯ ವಿಚಿತ್ರಚಿತ್ರಂಗಳತ್ಯಾಶ್ಚರ್ಯವಪ್ಪಂತೆ ತೋರುತಿರಲು ಅದು ವಿಪರೀತವೆಂದೆನಲುಂಟೆ ? ಮುನ್ನ ತಾನಾಗಿರ್ದು ಇನ್ನು ಬೇರೆನಲುಂಟೆ ? ಇಲ್ಲವಾಗಿ. ಆದಿಮಧ್ಯಾಂತ ವಿರಹಿತವಾದ ಮಹಾಘನವೆ ಊಹಿಸಲಿಲ್ಲದ ಉಪಮೆ, ಭಾವಿಸಲಿಲ್ಲದ ಭಾವ, ಅರಿಯಲಿಲ್ಲದರಿವು ತಾನಾಗಿ, ಸೌರಾಷ್ಟ್ರ ಸೋಮೇಶ್ವರನೆಂಬ ನುಡಿಯನೊಳಕೊಂಡು ನಿಂದ ಸಹಜ ಭರಿತವಾಗಿರ್ದಿಲ್ಲದಂತೆ ಇಹ ಭೇದವನೇನೆಂಬೆನಯ್ಯಾ.
--------------
ಆದಯ್ಯ
ಯುಗದ ಉತ್ಸಾಹವ (ಉತ್ಸವವ?) ನೋಡಿರೆ ! ಪಂಚಶಕ್ತಿಗಳಿಗೆ ಪಂಚಪ್ರಧಾನರು. ಅವರ ಆಗುಹೋಗನು ಆ ಶರಣನೆ ಬಲ್ಲ. ಆ ಶರಣನು ತಾನು ತಾನಾಗಿ ಆರು ದರುಶನಕ್ಕೆ ಯಾಚಕನಲ್ಲ ! ಮೂರು ದರುಶನಕ್ಕೆ ಮುಯ್ಯಾನುವನಲ್ಲ, ವೇದ ಶಾಸ್ತ್ರಾಗಮ ಪುರಾಣ ಛಂದಸ್ಸು, ನಿಘಂಟುಗಳೆಂಬುವಕ್ಕೆ ಭೇದಕನಲ್ಲ, ಅದೆಂತೆಂದಡೆ:ಅವರ ಅಂಗದ ಮೇಲೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ. ಪ್ರಸಾದವಿಲ್ಲ ಪಾದೋದಕವಿಲ್ಲದ ಭಾಷೆ. ಆ ಗುರು ಲಿಂಗ ಜಂಗಮ ಪ್ರಸಾದ ಪಾದೋದಕ ಏಕಾರ್ಥವಾದ ಕಾರಣ ಪ್ರಾಣಿಗಳೆಲ್ಲವು ಪ್ರಣಾಮಂಗೆಯ್ಯುತ್ತಿದ್ದವು, ಜೀವಿಗಳೆಲ್ಲವು ಜಯ ಜೀಯಾ ಎನುತ್ತಿದ್ದುವು. ಆತ್ಮಂಗಳೆಲ್ಲ ಅನುವ ಬೇಡುತ್ತಿದ್ದವು. ಗುಹೇಶ್ವರಾ ಸಂಗನಬಸವಣ್ಣನ ಪಾದಕ್ಕೆ ಈರೇಳುಭುವನವೆಲ್ಲವೂ ಜಯ ಜೀಯಾ ಎನುತ್ತಿದ್ದವು.
--------------
ಅಲ್ಲಮಪ್ರಭುದೇವರು
ಅಂಗ, ಮನ, ಪ್ರಾಣ ತ್ರಿಸ್ಥಾನ ಸಂಗವಾಗಿ. ಮನಕ್ರೀಯಳಿದು, ಸಾರವುಳಿದು ನಿಂದು, ಅತಿರಥರ ಸಮರಥರ ನುಡಿಗಡಣ ಸಂಭಾಷಣೆಯಿಂದ ಹೃದಯ ಕಂದೆರೆದು, ಜಂಗಮದಲ್ಲಿ ಅರಿವ, ಲಿಂಗದಲ್ಲಿ ಮೆರೆವ ಕೂಡಲಚೆನ್ನಸಂಗ ತಾನಾಗಿ.
--------------
ಚನ್ನಬಸವಣ್ಣ
ಅಸ್ತಿ ಭಾತಿ[ಪ್ರಿ]ಯವೆಂಬ ತ್ರಿವಾಕ್ಯದಿಂದಲ್ಲವಾದುದಲ್ಲ. ಅಪ್ರಮಾಣ ಅಗೋಚರ ಆತ್ಯತಿಷ್ಠದ್ದಶಾಂಗುಲ ಅಭೇದ್ಯದಿಂ ನಾಮರೂಪುಗಳುಂಟಾದುದಲ್ಲ. ಇದು ಕಾರಣ ಸ್ತ್ರೀಯಲ್ಲ ಪುರುಷನಲ್ಲ ನಪುಂಸಕನಲ್ಲ ಮೂರ್ತನಲ್ಲ ಭಾವಿಯಲ್ಲ ಪ್ರಾಣಿಯಲ್ಲ ಇದಕ್ಕೆ ಶ್ರುತಿ: ನೈವಂಚೋವಾಚಾಸ್ತ್ರೀಯಾನ್ ಭೂಮಾನಚನಸ್ತ್ರೀ ಪುಮಾನ್ನಪುಮಾನ್ ಪ್ರಮಾನ್ನಪ್ರಮಾನ್ ಭವಾನ್ ಯೇನೇದಂ ವದತಿ ಶತ್ವನಃ ಇತಿ ಬ್ರಹ್ಮಾ ಎಂಬ ಉಪನಿಷದುಕ್ತಿಯನರಿದು ಅರಿವೆ ತಾನಾಗಿ ಲಿಂಗದಲ್ಲಿ ಸಂದುಭೇದವಿಲ್ಲದೆ ಇಪ್ಪರಯ್ಯಾ ಸೌರಾಷ್ಟ್ರ ಸೋಮೇಶ್ವರಾ, ನಿಮ್ಮ ಶರಣರು.
--------------
ಆದಯ್ಯ
ಕಂಗಳಲ್ಲಿ ನೋಡಿ, ಕೈಯ್ಯಲ್ಲಿ ಮುಟ್ಟಿ, ನಾಸಿಕ ವಾಸನೆಯನರಿದು ಜಿಹ್ವೆಗೆ ರುಚಿ ಮುಟ್ಟುವುದಕ್ಕೆ ಮುನ್ನವೆ ಮೃದು ರಿಠಣ ಕರಿಣ[ತರ] ತಾನರಿವುದಕ್ಕೆ ಮೊದಲೆ, ಲಿಂಗ ಮುಂತಾಗಿ ಅರ್ಪಿಸಿಕೊಂಬುದು ಅರ್ಪಿತ ಅವಧಾನಿಯ ಯುಕ್ತಿ. ರಸಘಟಿಕೆಯ ಮಣಿ ಅಸಿಯ ಮೊನೆಗೆ ನಿಲುವಂತೆ, ಲಿಂಗ ಅರ್ಪಿತಕ್ಕೂ ಅರಿವ ಚಿತ್ತಕ್ಕೂ ಎಡೆಬಿಡುವಿಲ್ಲದ ಪರಿಪೂರ್ಣವಾಗಿ ನಿಂದುದು ಭರಿತಾರ್ಪಣ, ಸದಾಶಿವಮೂರ್ತಿಲಿಂಗವು ತಾನಾಗಿ.
--------------
ಅರಿವಿನ ಮಾರಿತಂದೆ
ಶಿವ ತಾನೀತ ಮತ್ರ್ಯಲೋಕವ ಪಾವನವ ಮಾಡಲು, ಗುರು ತಾನೀತ ಎನ್ನ ಭವರೋಗವ ವೇದ್ಥಿಸಲು, ಭಕ್ತ ತಾನೀತ ಎನಗೆ ವಿಸ್ತಾರವಾಗಿ. ಎನಗೆ ಜಂಗಮ ತಾನೀತ ಅನಾದಿ ಸಂಸಿದ್ಧ ಘನಮಹಿಮನಾಗಿ. ಲಿಂಗ ತಾನೀತ ಎನಗೆ ಪ್ರಾಣಲಿಂಗ ತಾನಾಗಿ. ಎನ್ನ ವಿಸ್ತಾರ ತಾನೀತ ಎನ್ನ ನಿಲುಕಡೆಯ ತಾನಾಗಿ. ಎನ್ನ ಸರ್ವಸ್ವಾಯತವ ಮಾಡಿದ ಮಹಿಮ ತಾನೀತ ಕಾಣಾ, ಕಲಿಗೆದೇವರದೇವ, ನಿಮ್ಮ ಶರಣ ಬಸವಣ್ಣ.
--------------
ಮಡಿವಾಳ ಮಾಚಿದೇವ
ಅಂಬಿನ ಹಿಳಿಕಿನಲ್ಲಿ ಕಟ್ಟಿದ ವಿಹಂಗನ ಗರಿಯಂತೆ, ತಾಗುವ ಮೊನೆಗಾಧಾರವಾಗಿ ದೂರ ಎಯಿದುವುದಕೆ ಸಾಗಿಸುವ ಗುಣ ತಾನಾಗಿ ಕ್ರೀ ಅರಿವಿನ ಭೇದದ ನೆರಿಗೆಯ ಕಾಬನ್ನಕ್ಕ, ಅರಿವು ಕುರುಹು ಎರಡು ಬೇಕೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಶಾಸ್ತ್ರವೆ ಅಡ್ಡಣಿಗೆಯಾಗಿ, ಆಗಮವೆ ಹರಿವಾಣವಾಗಿ, ಪುರಾಣವೆ ಓಗರವಾಗಿ, ಉಂಬಾತ ವೇದವಾಗಿ, ಸಕಲ ರುಚಿಯನರಿದು ಭೋಗಿಸುವ ಪ್ರಣವ ತಾನಾಗಿ, ಅದರ ಭೇದ ಏತರಿಂದ ಅಳಿವು ಉಳಿವು? ನಿನ್ನ ನೀನರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ತನ್ನ ನೆವದಿಂದೆ ತಾ ಬಂದು ತಾನು ತಾನಾಗಿ ಆಡಬಾರದುದನಾಡಿ ಉಣಬಾರದುದನುಂಡು, ಕೂಡಬಾರದುದ ಕೂಡಿ ಕುರುಹಳಿದ ಗುರುನಿರಂಜನ ಚನ್ನಬಸವಲಿಂಗ ತಾನೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ಓಹೋ ನಮಃ ಶಿವಾಯ,_ ಮಹದಾಕಾಶದ ಮರೆಯಲ್ಲಿರ್ದ ಶಾಂತ್ಯರ್ಕನ ನಿಲವೊ ! ದಶಮರುತನ ಹೊಯಿಲಿಲ್ಲದೆ, ತಾನೆ ಲಿಂಗದ ಜ್ಞಾನಜ್ಯೋತಿಯ ನಿಲವೊ ! ತನ್ನಿಂದ ತಾನಾಗಿ ಮುಕ್ತಿಯೆ ಕರಿಗೊಂಡ ಮುಕ್ತಿಯ ಮುತ್ತಿನ ಧವಳಕಾಂತಿಯ ನಿಲವೊ ! ರುದ್ರಾಕ್ಷಿಯ ಹಂಗು ಬೇಡವೆಂದು ಹೊದ್ದ ಚರ್ಮದ ಹೊದಿಕೆಯಂ ತೆಗೆದ ಗಿಟಿ ಗಿಟಿ ಜಂತ್ರದ ನಿಲವೊ ! ಅಲ್ಲ, ತನ್ನ ನಿಲವನರಿಯದೆ ವಾದಿಸುತ್ತಿರಲು ಉರಿಲಿಂಗೋದ್ಭವವಾದ ಉರಿಲಿಂಗದ ನಿಲವೋ ! ಆವ ನಿಲವೆಂದರಿಯಬಾರದು ! ಗುಹೇಶ್ವರನ ಕಂಗಳಿಗೆ ಒಂದಾಶ್ಚರ್ಯ ತೋರಿತ್ತು ಕಾಣಾ ಸಂಗನಬಸವಣ್ಣಾ !
--------------
ಅಲ್ಲಮಪ್ರಭುದೇವರು
ಅಂಗದಂತೆ ಲಿಂಗವಾಗಿರ್ದ ದೇಹ, ಲಿಂಗದಂತೆ ಅಂಗವಾಗಿರ್ದ ದೇಹ, ಈ ಕಾಯದ್ವಯಂಗಳಿಗೆ ಅಂಗಕಳಾ ಲಿಂಗಕಳಾ ಪ್ರಭಾವ ಒಂದಾಗಿ, ತನುವಿನ ಕೈಮುಟ್ಟಿ ಪ್ರಾಣಲಿಂಗ ಜಂಗಮದಾಸೋಹ ಮಾಡುತ್ತಿರಲು, ಆ ಜಂಗಮದ ಸ್ಥೂಲಪ್ರಾಸಾದವೆ ಬಸವಣ್ಣನ ಸಾಕಾರ. ಅಂತಪ್ಪ ಸಾಕಾರವನರಿವುತ್ತಿದ್ದರಿವು ಸೌರಾಷ್ಟ್ರ ಸೋಮೇಶ್ವರಲಿಂಗ ತಾನಾಗಿ ನೆನೆವುತ್ತ ನೆನೆವುತ್ತ ನೆನೆಯದಂತಿರ್ದೆನಯ್ಯಾ
--------------
ಆದಯ್ಯ
ಪುತ್ರ ಮಿತ್ರ ಕಳತ್ರಕ್ಕೆ ಸ್ನೇಹಿಸುವಂತೆ ಶ್ರೀಗುರು ಲಿಂಗ ಜಂಗಮಕ್ಕೆ ಸ್ನೇಹಿಸಬೇಕು. ಸ್ನೇಹವೇ ಬಾತೆ ಕಾಣಿರೋ, ಲಿಂಗಕ್ಕೆ ಸ್ನೇಹವೇ ಭಕ್ತಿ ಕಾಣಿರೋ, ಸ್ನೇಹವೇ ಭಕ್ತಿಗೆ ಮೂಲ ಕಾಣಿರೋ, ಕಣ್ಣಪ್ಪ, ಮಾದಾರ ಚೆನ್ನಯ್ಯ, ಚೋಳಿಯಕ್ಕನ ಸ್ನೇಹವ ನೋಡಿ ಭೋ. ಅವರಂತೆ ಸ್ನೇಹವ ಮಾಡಲು ಭಕ್ತಿ ಮುಕ್ತಿ ಪರಿಣಾಮ ಮಹಾಸುಖ. ಆ ಸುಖಸ್ವರೂಪ ತಾನಾಗಿ ಇಪ್ಪನು ಶಿವನು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಇನ್ನಷ್ಟು ... -->