ಅಥವಾ

ಒಟ್ಟು 370 ಕಡೆಗಳಲ್ಲಿ , 63 ವಚನಕಾರರು , 349 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಊದ್ರ್ವಮುಖವಾದ, ಅನಂತೇಶನೆಂಬ ವಾಸುಕಿಯ ಶಿರದ ಮೇಲಿಹ ಅಷ್ಟದಳಾಬ್ಜಮಧ್ಯದಲ್ಲಿ, ಒಪ್ಪುತ್ತಿಹ ಶುದ್ಧವಿದ್ಯೆಯೇ ಪೀಠವಾದ ಶಿವಲಿಂಗವೊಂದರಲ್ಲಿ, ದೃಢಭಕ್ತಿಯುಳ್ಳಾತನ ದೇಹವೇ ಲಿಂಗದೇಹವು. ಆ ಚಿದ್ರೂಪನಾದ ಪರಮ ಸ್ವರೂಪನ ಮೂರ್ತಿ ತಾನೇ ಇಷ್ಟಲಿಂಗವು. ಆ ಇಷ್ಟಲಿಂಗದಲ್ಲಿ ದೇಹವನಡಗಿಸಿದ ಮಹಾತ್ಮನ ಮನ ಬುದ್ಧಿ ಅಹಂಕಾರ ಇಂದ್ರಿಯಾದಿ ಗುಣಂಗಳು ಜನನಾದಿ ವಿಕಾರಂಗಳ ಹೊದ್ದವಾಗಿ, ಆತ ನಿರ್ದೇಹಿ, ನಿಜಗುರು ಸ್ವತಂತ್ರಲಿಂಗೇಶ್ವರನ ಶರಣನುಪಮಾತೀತನು.
--------------
ಸ್ವತಂತ್ರ ಸಿದ್ಧಲಿಂಗ
ಅಂಗಭಾವದಿಂದ ಲಿಂಗಮುಖವನು ಅಂಗಮುಖವನು ಅರಿದು ಜಂಗಮ ಮುಖವನು ಅರಿದಡೆ ಸಂಸಾರವೆಂಬ ಬಂಧನವಿಲ್ಲವಯ್ಯ. ಜಂಗಮವೆಂದರೆ ಸಾಕ್ಷಾತ್ ಪರವಸ್ತು ತಾನೆ ನೋಡಾ. ಅದೇನು ಕಾರಣವೆಂದಡೆ: ಅಂಗವಾರಕ್ಕೆ ಲಿಂಗವಾರಕ್ಕೆ ಮೇಲಾಗಿ ಆ ಅಂಗವನು ಲಿಂಗವನು ತನ್ನಲ್ಲಿ ಏಕೀಕರಿಸಿಕೊಂಡು ತಾನು ಪರಮ ಚೈತನ್ಯನಾದ ಕಾರಣ. ಆ ಪರವಸ್ತುವಿನ ಪ್ರಸನ್ನ ಪ್ರಸಾದಮುಖವನರಿದು ಇಹ ಪರವ ನಿಶ್ಚೆ ೈಸೂದಿಲ್ಲ ನೋಡಾ. ಅದೇನು ಕಾರಣವೆಂದಡೆ: ಇಹ ಪರಕ್ಕೆ ಹೊರಗಾಗಿ ಪರಮ ಪದದಲ್ಲಿ ಪರಿಣಾಮಿಯಾದನಾಗಿ ಈ ತ್ರಿವಿಧವು ಒಂದೆಯೆಂದರಿದಾತನೆ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭು ತಾನೆ ಕಾಣಿರೋ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ದ್ವೆ ೈತಿಯಲ್ಲ ಅದ್ವೆ ೈತಿಯಲ್ಲ ಕಾಣಿಭೋ ಶರಣ. ದ್ವೆ ೈತಾದ್ವೆ ೈತವೆಂಬ ಉಭಯ ಕಲ್ಪನೆಯನಳಿದುಳಿದ ವೀರಮಾಹೇಶ್ವರನು ಪರಶಿವನ ನಿರುತ ಸ್ವಯಾನಂದಸುಖಿ. ಪರಶಿವನ ಪರಮ ತೇಜದಾದಿ ಬೀಜ. ಪರಶಿವನ ಪರಮಜ್ಞಾನಪ್ರಕಾಶಮಯ ಪರಮಾನಂದದ, ನಿರುಪಮಲಿಂಗದ ಪ್ರಭಾಕಿರಣವೇ ತಾನಾದ ಶರಣನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಜ್ಞಾನಚಕ್ರ: ಪರಮ ತತ್ವ ಪರಮಜ್ಞಾನ ಪರಮಾರ್ಥ ಪರಾಪರ ವಾಙ್ಮನಕ್ಕಗೋಚರ ಶಬ್ದಗಂಭೀರ ಉಪಮಾತೀತ, ಉನ್ನತ ಪರಶಿವ, ಜ್ಞಾನಜ್ಯೋತಿ ಸುಜ್ಞಾನದ ಪ್ರಭೆಯ ಬೆಳಗಿನೊಳಗೆ ಸುಳಿದಾಡುವ ಪರಮಾನಂದದ ಮಹಾಮಹಿಮಂಗೆ, ಶಿವಜ್ಞಾನವೆ ಶೃಂಗಾರ, ಮಹಾಬೆಳಗೆ ವಿಭೂತಿ, ಪಂಚಬ್ರಹ್ಮವೆ ದರ್ಶನ ಗಗನಸ್ಥಾನವೆ ಕಂಥೆ, ಆಕಾಶವೆ ಟೊಪ್ಪರ, ಅಜಾಂಡ_ಬ್ರಹ್ಮಾಂಡವೆ ಕರ್ಣಕುಂಡಲ, ಆದಿ ಆಧಾರವೆ ಕಕ್ಷಪಾಳ ಅನಾಹತವೆ ಒಡ್ಯಾಣ, ಅದ್ವೈತವೆ ಯೋಗವಟ್ಟಿಗೆ, ಅಗಮ್ಯವೆ ಯೋಗವಾವುಗೆ, ಅಚಳಿತವೆ ಖರ್ಪರ, ಅಪ್ರಾಮಣವೆ ಲಾಕುಳ, ಅವಿಚಾರವೆ ಸುಳುಹು, ಅಕಲ್ಪಿತವೆ ಭಿಕ್ಷೆ, ಕೊಂಡುದೆ ಗಮನ, ನಿಂದುದೆ ನಿವಾಸ,_ ನಿಶ್ಚಿಂತವೆಂಬ ಆಶ್ರಮದಲ್ಲಿ ನಿರಾಕುಳವೆಂಬ ಸಿಂಹಾಸನವನಿಕ್ಕಿ; ಗಗನಗಂಭೀರದ ಬಾವಿಯೊಳಗೆ ಅಗೋಚರದ ಅಗ್ಘಣಿಯ ತಂದು ಮಹಾಘನಪ್ರಾಣಲಿಂಗಕ್ಕೆ ಮಂಗಳದ ಬೆಳಗಿನಲ್ಲಿ ಮಜ್ಜನಕ್ಕೆರೆದು; ಬಿಂದ್ವಾಕಾಶವೆ ಗಂಧ, ಮಹದಾಕಾಶವೆ ಅಕ್ಷತೆ, ಪರಾಪರವೆ ಪತ್ರೆಪುಷ್ಪ, ನಿರ್ಮಳವೆ ಲಿಂಗಾರ್ಚನೆ, ಮಹಾಪ್ರಕಾಶವೆ ಪೂಜೆ, ನಿತ್ಯನಿರಂಜನವೆ ಧೂಪದೀಪಾರತಿ, ಸಕಲ ಭುವನಾದಿಭುವನಂಗಳೆ ಸಯದಾನ, ಆಚಾರವೆ ಅರ್ಪಿತ, ಮಹತ್ವವೆ ಸಿತಾಳ, ಅಖಂಡಿತವೆ ಅಡಕೆ, ಏಕೋಭಾವವೆ ಎಲೆ, ಶುದ್ಧಶಿವಾಚಾರವೆ ಸುಣ್ಣ_ ವಿವೇಕ ವಿಚಾರದಿಂದ ವೀಳೆಯವನವಧರಿಸೂದು. ಮಹಾಲಿಂಗದ ಪರಿಣಾಮವೆ ಪ್ರಸಾದ, ಸಮ್ಯಕ್ ಜ್ಞಾನವೆ ಸಂತೋಷ. ಸಹಜ ನಿರಾಭಾರಿಗಳ ಮೇಳದಿಂದ, ನಿಸ್ಸೀಮದ ನಿಭ್ರಾಂತಿನ ಸುಸಂಗದಲ್ಲಿ_ ನಿರಾಶಾಪದವೆ ಅನುಕೂಲ, ನಿಶ್ಶಬ್ದವೆ ಅನುಭಾವ, ಅನುಪಮದ ನಿಶ್ಶೂನ್ಯವೆ ವಿಶ್ರಾಮ, ನಿರಾಕಾರವೆ ಗಮನ. ನಿರಂತರ ಪಾತಾಳ ಊಧ್ರ್ವದ ಪವನ;_ತ್ರಿಭುವನಗಿರಿಯೆಂಬ ಪರ್ವತವನೇರಿ, ಕಾಯವೆಂಬ ಕದಳಿಯ ಹೊಕ್ಕು ಸುಳಿದಾಡುವ ಪರಮಾನಂದದ ಮಹಾಮಹಿಮಂಗೆ; ಇಹಲೋಕವೇನು ? ಪರಲೋಕವೇನು ?_ ಅಲ್ಲಿಂದತ್ತ ಆಗಮ್ಯ ನಿರಾಳ ಪರಮಜ್ಞಾನದ ಸಿದ್ಧಿ ಮಹಾಲಿಂಗದ ಬೆಳಗು, ಗುಹೇಶ್ವರಾ, ನಿಮ್ಮ ನಿಜವನರಿದ ಮಹಾಮಹಿಮ ಶರಣಂಗೆ, ನಮೋ ನಮೋ ಎಂಬೆನು.
--------------
ಅಲ್ಲಮಪ್ರಭುದೇವರು
ಮತ್ತಂ, ಗುಹ್ಯಮಂ ತ್ರಯೋದಶಾಂತದೊಳ್ಬೆರಸಿ ಪರಾಪರದೊಳೊಂದಿಸೆ ಹೌಂ ಎಂಬಾದಿಬೀಜಮಾಯ್ತು. ಮರಲ್ದುಂ, ಹ್ ಎಂಬ ಜೀವಮಂ ವರ್ಗಾದಿಯಾದಕಾರದೊಳ್ಮೋಳ್ಮೇಳಿಸಿ ಶಕ್ತಿಸಂಜ್ಞಿತ ಬಿಂದುವಂ ಬೆರಸೆ ಹಂ ಎನಿಸಿತ್ತು. ಬಳಿಕ್ಕಂ, ಶಕ್ತಿಸಂಜ್ಞಿತವಾದ ಸ್ ಎಂಬ ವ್ಯಂಜನಮಂ ಕಲಾಸಂಜ್ಞಿತವಾದ ಕಾರಣದೊಳ್ಪುದುಗೆ ಸ ಎನಿಸಿತ್ತು. ಮತ್ತೆಯುಂ, ವ್ಯಂಜನಶಕ್ತಿ ಬೀಜವಾದ ಸ್ ಎಂಬುದು ಮಾತ್ರಾದಿ ಸಂಜ್ಞಿತಕಾರಮನೊಂದೆ ಎಂದಿನಂತೆ ಸ ಎನಿ[ಸಿ] ತ್ತು. ಬಳಿಕಂ, ವರುಣವರ್ಗದ ನಾಲ್ಕನೆ ಯ ಎಂಬಕ್ಕರವುಂ ಮೂರನೆಯ ಸ್ವರಮನಸ್ಥಿ ಸಂಜ್ಞಿತಮಾದ ಶ್ ಎಂಬಕ್ಕರದೊಡನೆ ಕೂಡಿಸೆ ಶಿ ಎನಿಸಿತ್ತು. ಸೋಮಾಂತ ಸಂಜ್ಞಿತವಾದ ವಕಾರಮಂ ದ್ವಿಕಲಾಸಂಜ್ಞಿತವಾದಾಕಾರಮ ನೊಂದಿಸೆ ವಾ ಎನಿಸಿತ್ತು. ವಾಯುಬೀಜವಾದ ಯ್ ಎಂಬಕ್ಕರವನಾದಿಕಲಾಸಂಜ್ಞಿತ- ಮಾದಕಾರದೊಡನೆ ಕೂಡಿಸೆ ಯ ಎನಿಸಿತ್ತಿಂತು `ಹೌಂ ಹಂ ಸ ಸದಾಶಿವಾಯ' ಎಂಬಷ್ಟಾಕ್ಷರಮಂತ್ರಮಂ ನಿರವಿಸಿದೆಯಯ್ಯಾ, ಪರಮ ಶಿವಲಿಂಗೇಶ್ವರ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಕಥನ ಬ್ರಹ್ಮಾಂಡದಲ್ಲಿ ಮಥನಿಸುವ ಭೇದವನು ಸುಚಿತ್ತದಿಂದವೆ ಕಂಡೆ. ಸಾಕ್ಷಾತ್ ಉರುತರ ಕೈವಲ್ಯ ಪರಮ ಸೀಮೆಯ ಮೀರಿ ಒಡಲಿಪ್ಪುದದು ನಿತ್ಯ ಸಾನಂದದಾ ಆನಂದಸ್ಥಾನದಲ್ಲಿ. ಆನಿಪ್ಪ ಲೋಕದಲ್ಲಿ ತಾನಿಪ್ಪ ನಿಷ್ಕಳದ ಪುಷ್ಕರದಲ್ಲಿ ಸ್ವಾನುಭಾವ ದೀಕ್ಷೆ ನಾನಿಪ್ಪ ಸಂಯೋಗ ಮೂಱಱ ಮೇಲಿಪ್ಪ ಮುಕ್ತ್ಯಾಂಗನೆಯರ ಕೂಟ ನೀನು ನಾನಾದೆ ಕಪಿಲಸಿದ್ಧಮಲ್ಲೇಶ್ವರ
--------------
ಸಿದ್ಧರಾಮೇಶ್ವರ
ಮತ್ತೆಯುಂ, ಧನುರ್ಗತಿವಿಡಿದುದಕದಂತರಾಳದ, ಮಂಡಲತ್ರಯದುದಕದ, ಶ್ವೇತವರ್ಣದ ಬಾದಿಲಾಂತ ಮುಕ್ತಮಾದರುದಳದ ನಳಿನಕರ್ಣಿಕೆಯ, ಸೂಕ್ಷ ್ಮರಂಧ್ರಗತ ಪ್ರಣವದ ದಂಡಾಕೃತಿಯ, ಮಕಾರಮೆ ಗುರುಲಿಂಗಮದು, ನಿನ್ನ ವಾಮದೇವ ಸ್ವರೂಪಮಾದುದಯ್ಯಾ, ಪರಮ ಶಿವಲಿಂಗ ಪ್ರಚುರತರ ಚಿದಂಗಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಗುಣ ರೂಪಂಗಳ ಮೀರಿ ಶಿಷ್ಯಜನ ಮನೋಜ್ಞಾನಾಂಧಕಾರಕ್ಕೆ ಸೂರ್ಯೋದಯನಾಗಿ, ಲಲಾಟಲೋಚನ ಚಂದ್ರಕಳಾ ದಶಭುಜಂಗಳಂ ಜ್ಞಾನ ಶಾಂತಿ ಬಾಹುದ್ವಯಂಗಳಲ್ಲಿ ಪುದುಂಗೊಳಿಸಿ, ಭುವನ ಹಿತಾರ್ಥಮಾಗಿ ದೇಶಿಕಸ್ವರೂಪಮಂ ತಾಳ್ದು, ದೀಕ್ಷಾ ಶಿಕ್ಷಾ ಸ್ವಾನುಭಾವಾತ್ಮಕನಾಗಿ ಚರಿಪ ಷಟ್ಸ ್ಥಲಬ್ರಹ್ಮ ಪ್ರಬೋಧಕ ಪ್ರಭು ಪ್ರಸನ್ನಮೂರ್ತಿ ಪರಮ ಶಿವಲಿಂಗ ಭಕ್ತಜನಾಂತರಂಗಾ. ಮನ್ಮಾನಸಾಂಭೋಜ ಭೃಂಗ ತವ ಪಾದ ಪಲ್ಲವಂಗಳೆ ಮನೋವಚನಕಾಯಂಗಳಿಂ ತ್ರಿವಾರಂ ಶರಣು ಶರಣು.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಮತ್ತೆಯುಂ, ಕರ್ನಿಕೆಯಂ ಬಳಸಿದಗ್ನಿಮಂಡಲ ಚಂದ್ರಮಂಡಲ ಸೂರ್ಯಮಂಡಲ ಸಂಜ್ಞಿತವಾದ ವೃತ್ತತ್ರಯದಲ್ಲಿ ತರದಿ ವ್ಯಾಪಕಾಕ್ಷರ ಸ್ವರಾಕ್ಷರ ಸ್ಪರ್ಶಾಕ್ಷರಂಗಳೆಂಬೀ ವರ್ಗತ್ರಯಮಂ ಪುದುಗೊಳಿಪುದಾ ತ್ರಿವರ್ಗಪದಕ್ಷರಗಣನೆ ನಾಲ್ವತ್ತೆಂಟಾಯಿತ್ತೆಂದು ನಿರವಿಸಿದೆಯಯ್ಯಾ, ಪ್ರಪಂಚಾತೀತ ಪರಮ ಶಿವಲಿಂಗೇಶ್ವರಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಆದಿ ಅನಾದಿಯೆಂಬವು ಸಂಗಷ್ಟವಾಗಿರ್ದು, ವಿಭೇದವಾಗುವಲ್ಲಿ ಕುಂಡಲಿಯ ಶಕ್ತಿಯಲ್ಲಿ ಪ್ರಾಣವಾಯು ಪ್ರಣವಸ್ವರವನೊಡಗೂಡಿ ಬ್ರಹ್ಮಸ್ಥಾನದಲ್ಲಿ ಸ್ಥಾಪ್ಯ ಶಿವನಾಗಿ, ಭ್ರೂಮಧ್ಯಕಂಠಸ್ಥಾನದಲ್ಲಿ ನಿಃಕಲಸ್ವರೂಪನಾಗಿ, ಹೃದಯನಾಬ್ಥಿಯಲ್ಲಿ ಸಕಲನಿಃಕಲನಾಗಿ, ಸ್ವಾದ್ಥಿಷ್ಠಾನ ಆಧಾರದಲ್ಲಿ ಕೇವಲಸಖನಾಗಿ, ಆ ಸಕಲಕ್ಕೆ ಎರಡು ಪಾದವನಿತ್ತು, ಒಂದು ಪಾದಕ್ಕೆ ಕ್ರಿಯಾಶಕ್ತಿ, ಒಂದು ಪಾದಕ್ಕೆ ಜ್ಞಾನಶಕ್ತಿಯ ಮಾಡಿ ನಿಲ್ಲಿಸಿ, ಮೇಲಣ ಸಕಲ ನಿಃಕಲತತ್ತ್ವಕೈದಿ, ಅಲ್ಲಿಗೆ ಎರಡು ಹಸ್ತವನಿತ್ತು, ಒಂದು ಹಸ್ತಕ್ಕೆ ಆದಿಶಕ್ತಿ, ಒಂದು ಹಸ್ತಕ್ಕೆ ಇಚ್ಛಾಶಕ್ತಿಯನಾದಿ ಮಾಡಿ ನಿಲಿಸಿ, ಮೇಲಣ ನಿಃಕಲತತ್ತ್ವವನೈದಿ, ಅಲ್ಲಿಗೆ ನಾಲ್ಕು ಪಾದವನಿತ್ತು, ಅವು ಆವವು ಎಂದಡೆ, ಜಿಹ್ವೆ ಘ್ರಾಣ ನೇತ್ರ ಶ್ರೋತ್ರವೆಂಬ ನಾಲ್ಕು ಪಾದ ವನಾದಿಮಾಡಿ ನಿಲ್ಲಿಸಿ, ನಾಲ್ಕು ಪಾದವಂ ನಿಲ್ಲಿಸಿದುದರಿಂದ ನಂದಿಯೆಂಬ ನಾಮವಾಯಿತ್ತು. ಆ ನಂದೀಶ್ವರಂಗೆ ಚಿತ್‍ಶಕ್ತಿಯೆ ಅಂಗ, ಪರಶಕ್ತಿಯೆ ಮುಖ. ಇಂತಪ್ಪ ನಂದೀಶ್ವರ ನಲಿದಾಡಿ ಅನಾದಿ ಪರಶಿವ ಅಖಿಳ ಬ್ರಹ್ಮಾಂಡವ ಹೊತ್ತಿಪ್ಪನಲಾಯೆಂದರಿದು, ಆದಿವಾಹನವಾದನು, ಅದೀಗ ಆದಿವೃಷಭನೆಂಬ ನಾಮವಾಯಿತ್ತು. ಆದಿವೃಷಭನ ಆದಿಯಲ್ಲಿ ಪರಶಿವನಿಪ್ಪನು, ಆ ಪರಶಿವನಾದಿಯಲ್ಲಿ ನಿಃಕಲವಿಪ್ಪುದು, ಆ ನಿಃಕಲದಾದಿಯಲ್ಲಿ ಸಕಲ ನಿಃಕಲವಿಪ್ಪುದು. ಆ ಸಕಲ ನಿಃಕಲದಾದಿಯಲ್ಲಿ ಕೇವಲ ಸಕಲವಿಪ್ಪುದು. ಆ ಸಕಲವೆಂದರೆ ಅನಂತತತ್ತ್ವ. ಬ್ರಹ್ಮಾಂಡ ಕೋಟ್ಯಾನುಕೋಟಿ ಲೋಕಾಲೋಕಂಗಳು ದೇವದಾನವ ಮಾನವರು ಸಚರಾಚರ ಎಂಬತ್ತನಾಲ್ಕು ಲಕ್ಷ ಜೀವಜಂತುಗಳುದ್ಭವಿಸಿದವು. ಆ ಪಿಂಡ ಬ್ರಹ್ಮಾಂಡದ ಹೊರೆಯಲ್ಲಿ ಸಕಲಪದಾರ್ಥಗಳುದ್ಭವಿಸಿದವು. ಸಕಲಪದಾರ್ಥಂಗಳ ಪುಣ್ಯಪಾಪದ ಸಾರವ ಕೈಕೊಂಬುದಕ್ಕೆ ದೇವನಾವನುಂಟೆಂದು ಆಹ್ವಾನಿಸಿ ನೋಡಲು, ಆ ನಿಃಕಲ ಮಹಾಲಿಂಗವೆ ಕ್ರಿಯಾಶಕ್ತಿಯ ಮುಖದಲ್ಲಿ ಇಷ್ಟಲಿಂಗವಾಗಿ ಬಂದು, ಜ್ಞಾನಶಕ್ತಿಮುಖದಲ್ಲಿ ಸಕಲಪದಾರ್ಥಂಗಳ ಕೈಕೊಂಬಲ್ಲಿ, ಪುಣ್ಯಪಾಪಂಗಳ ಸಾರವಳಿದು, ಲಿಂಗ ಸಾರವಾದ ರೂಪ ಇಷ್ಟಲಿಂಗಕ್ಕೆ ಕೊಟ್ಟು, ಆ ರುಚಿಪ್ರಸಾದವ ಜ್ಞಾನಶಕ್ತಿ ಆದಿಶಕ್ತಿ ಕೈಯಲ್ಲಿಪ್ಪ ಪ್ರಾಣಲಿಂಗಕ್ಕೆ ಇಚ್ಛಾಶಕ್ತಿಯ ಮುಖದಲ್ಲಿ ಕೊಡಲು, ಆ ರುಚಿ ಪ್ರಸಾದವ ಪ್ರಾಣಲಿಂಗವಾರೋಗಿಸಿ, ಪರಮ ಪರಿಣಾಮವನೈದಲು, ಆ ಪರಿಣಾಮ ಪ್ರಸಾದವ ಜ್ಞಾನಶಕ್ತಿಯು ನಂದೀಶ್ವರಂಗೆ ಕೊಡಲು, ಆ ಪರಮ ತೃಪ್ತಿಯ ಶೇಷ ನಂದೀಶ್ವರ ಆರೋಗಿಸಿ ಪರವಶವನೈದಲು, ಆ ಪರವಶದ ಶೇಷವ ಜ್ಞಾನಶಕ್ತಿ ಆರೋಗಿಸಿ, ಅಡಿಮುಡಿಗೆ ತಾನೆ ಆದಿಯಾಗಲು, ಅದೀಗ ಅಡಿಮುಡಿಯ ಶೇಷ ಹೊತ್ತಿಪ್ಪನೆಂದು ವೇದಾಗಮಶಾಸ್ತ್ರಪುರಾಣಪುರುಷರು ನುಡಿಯುತಿಪ್ಪರು. ಇಂತಪ್ಪ ಬಸವನ ಆದಿಮೂಲವ ಬಲ್ಲ ಶರಣನಾಯಿತ್ತು ತೊತ್ತು ಮುಕ್ಕುಳಿಸಿ ಉಗುಳುವ ಪಡುಗ, ಮೆಟ್ಟುವ ಚರ್ಮ ಹಾವುಗೆಯಾಗಿ ಬದುಕಿದೆನು ಕಾಣಾ, ಬಸವಪ್ರಿಯ ಕೂಡಲ[ಚೆನ್ನ]ಸಂಗಮದೇವಾ, ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಸಂಗಮೇಶ್ವರದ ಅಪ್ಪಣ್ಣ
ಬಳಿಕ್ಕಮೀ ಚಕ್ರದ ಕರ್ಣಿಕಾಕ್ಷರಮಂ ನಿರವಿಸಿ, ಮತ್ತಂ, ಕೇಸರಾಕ್ಷರಗಳಂ ಪೇಳ್ವೆನೆಂತೆನೆ- ಕರ್ಣಿಕೆಯ ಪೂರ್ವ ದಕ್ಷಿಣ ಪಶ್ಚಿಮೋತ್ತರಂಗಳಲ್ಲಿ ನ್ಯಸ್ತವಾದ ಚತುರ್ದಳಾಕ್ಷರಂಗಳೊಳಗೆ ಮೊದಲ ಪೂರ್ವದಳದ ಬಿಂದುಮಯ ಸಕಾರಕ್ಕೆ ಆಧಾರವೆಂದು ಶಕ್ತಿಯೆಂದು ಕಾರ್ಯವೆಂದು ಪರವೆಂದು ಬಿುದುವೆಂದೈದು ಪರ್ಯಾಯನಾಮಂಗಳ್. ಬಳಿಕ್ಕಂ, ದಕ್ಷಿಣದಳದಕಾರಕ್ಕೆ ಅಕಾರವೆಂದು ಆತ್ಮಬೀಜವೆಂದು ದೇಹಿಯೆಂದು ಕ್ಷೇತ್ರಜ್ಞನೆಂದು ಭೋಗಿಯೆಂದೈದು ಪರ್ಯಾಯನಾಮಂಗಳ್. ಮತ್ತಂ, ಪಶ್ಚಿಮದಳದ ನಾದಮಯವಾದೈಕಾರಕ್ಕೆ ಐಕಾರವೆಂದು ಶಿವಬೀಜವೆಂದಾಧೇಯವೆಂದು ಪರವೆಂದು ನಾದಾಂತವೆಂದೈದು ಪರ್ಯಾಯನಾಮಂಗಳ್. ಮರಲ್ದುಂ ಬಡಗಣದಳದ ಕ್ಷಕಾರಕ್ಕೆ ವಿದ್ಯಾಬೀಜವೆಂದು ಕ್ಷಕಾರವೆಂದು ಕೂಟಾರ್ನವೆಂದು ವರ್ಗಾಂತವೆಂದು ದ್ರವ್ಯವೆಂದೈದು ಪರ್ಯಾಯನಾಮಂಗಳ್. ಇತ್ತೆರದಿಂ ಕೇಸರಾಕ್ಷರದ ಚತುರ್ದಳಾಕ್ಷರಂಗಳಂ ನಿರವಿಸಿದೆಯಯ್ಯಾ, ಪರಮ ಶಿವಲೀಂಗೇಶ್ವರ ಕಲ್ಯಾಣಗುಣಾಕರ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಅಂಗ ಗುಣವಳಿದು ಲಿಂಗ ಗುಣ ಉಳಿಯಿತ್ತಯ್ಯ. ಆವರಿಸಿತ್ತಯ್ಯ ಪರಮ ಅನುಪಮ ಭಕ್ತಿಸುಖ. ಲಿಂಗಾಂಗವೆಂಬ ಎರಡನರಿಯೆನಯ್ಯ. ಶುದ್ಧ ಸುಜ್ಞಾನ ಜಂಗಮಲಿಂಗ ಗ್ರಾಹಕನಾಗಿ ಪ್ರಾಣಲಿಂಗವೆಂಬ ಎರಡನರಿಯೆನಯ್ಯ. ಎರಡೆರಡೆಂದು ಈ ಹುಸಿಯನೇಕೆ ನುಡಿವರಯ್ಯ. ಇನ್ನೆರಡು ಒಂದಾಯಿತ್ತಾಗಿ ಲೋಕಚಾತುರ್ಯ, ಲೋಕವ್ಯವಹರಣೆ. ಲೋಕಭ್ರಾಂತಿಯ ಮರೆದೆನಯ್ಯ. ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ, ನಿಮ್ಮಲ್ಲಿ ನಿಬ್ಬೆರಗಾದೆನಯ್ಯಾ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಮತ್ತಂ ಹಸ್ತಮೆನೆ, ಚಿತ್ತಂ ಬುದ್ಧಿಯಹಂಕಾರಂ ಮನಂ ಜ್ಞಾನಂ ಭಾವಮೆಂಬೀ ಷಡ್ವಿಧಕರಣ ಕರಂಗಳಿಂ ಪಿಡಿದು ಪೂರ್ವೋಕ್ತ ಮುಖಲಿಂಗಂಗಳ್ಗಾ ಷಡ್ವಿಧ ಭಕ್ತ[ರ]ರಿಯಲದನಾ ಲಿಂಗಮುಖದಲ್ಲಿ ನೀನೇ ಉಣ್ಬೆಯಯ್ಯ, ಪರಮ ಶಿವಲಿಂಗೇಶ್ವರ ಚಿದ್ಗಗನ ಭಾಸ್ಕರ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಇಂತು ಭಕ್ತನ ಪದಿನೈದುಂ ಮಾಹೇಶ್ವರನೊಂಬತ್ತುಂ ಪ್ರಸಾದಿ ಏಳುಂ ಪ್ರಾಣಲಿಂಗಿಯೈದುಂ ಶರಣನ ನಾಲ್ಕುಮೈಕ್ಯನ ನಾಲ್ಕುಮಿದುಂ ನಿನ್ನ ತೂರ್ಯಕಳೇವರಮಯ್ಯ, ಸಮಷ್ಟಿ ಯಿಂತೀಯಂಗಸ್ಥಲಂಗಳು ನಾಲ್ವತ್ತನಾಲ್ಕುಂ ಕೂಡಿ ನಿನ್ನ ಪೂರ್ಣಾಂಗಮಾದುದಯ್ಯಾ, ನಿರಂತರ ಪರಬ್ರಹ್ಮ ಪರಮ ಶಿವಲಿಂಗೇಶ್ವರಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಇದಕ್ಕೆ ಮಹದೋಂಕಾರೋಪನಿಷತ್ತು : ಉಕಾರವೆಂಬ ಪ್ರಣವದಲ್ಲಿ- ``ದಂಡಶ್ಚ ತಾರಾಕಾಕಾರೋ ಭವತಿ ಓಂ ಸ್ವಯಂಭುಲಿಂಗ ದೇವತಾ | ಉಕಾರೇ ಚ ಲಯಂ ಪ್ರಾಪ್ತೇ ಏಕಾದಶಮೇ ಪ್ರಣವಾಂಶಕೇ || '' ಮಕಾರವೆಂಬ ಪ್ರಣವದಲ್ಲಿ- ``ಕುಂಡಲಶ್ಚ ಅರ್ಧಚಂದ್ರೋ ಭವತಿ ಓಂ ಶಿವತತ್ವಂ ದೇವತಾ | ಮಕಾರೇ ಚ ಲಯಂ ಪ್ರಾಪ್ತೇ ದ್ವಾದಶಂ ಪ್ರಣವಾಂಶಕೇ || '' ಅಕಾರವೆಂಬ ಪ್ರಣವದಲ್ಲಿ- ``ದರ್ಪಣಶ್ಚ ಜ್ಯೋತಿರೂಪೋ ಭವತಿ ಓಂ ಗುರುತತ್ವಂ ದೇವತಾ| ಅಕಾರೇ ಚ ಲಯಂ ಪ್ರಾಪ್ತೇ ತ್ರಯೋದಶಮೇ ಪ್ರಣವಾಂಶಕೇ ||'' ``ಉಕಾರೇ ಚ ಮಕಾರೇ ಚ ಅಕಾರಂ ಚಾಕ್ಷರತ್ರಯಂ | ಅಕಾರಂ ನಾದರೂಪೇಣ ಉಕಾರಂ ಬಿಂದುರುಚ್ಯತೇ | ಮಕಾರಂ ಕಲಾ ಚೈವ ನಾದಬಿಂದುಕಲಾತ್ಮನೇ || ನಾದಬಿಂದುಕಲಾಯುಕ್ತೋ ಓಂಕಾರೋ ಪರಮೇಶ್ವರಃ | ಪ್ರಣವೋಹಿ ಪರಬ್ರಹ್ಮ ಪ್ರಣವಂ ಪರಮಂ ಪದಂ || ಓಂಕಾರಂ ನಾದರೂಪಂಚ ಓಂಕಾರಂ ಮಂತ್ರರೂಪಕಂ | ಓಂಕಾರಂ ವ್ಯಾಪಿ ಸರ್ವತ್ರ ಓಂಕಾರಂ ಗೋಪ್ಯಮಾನನಂ ||'' ಇಂತೆಂದುದಾಗಿ, ಅಪ್ರಮಾಣ ಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನಷ್ಟು ... -->