ಅಥವಾ

ಒಟ್ಟು 117 ಕಡೆಗಳಲ್ಲಿ , 28 ವಚನಕಾರರು , 59 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾತಕ ಮಹಾಪಾತಕವ ಮಾಡಿದವನು ಸದ್ಭಕ್ತರ ಮನೆಗೆ ಹೋಗಿ, ಅವರೊಕ್ಕ ಪ್ರಸಾದವನಾಯ್ದುಂಡಡೆ, ಸಕಲ ಬ್ರಹ್ಮಹತ್ಯಾದಿ ಪಾತಕ ಪರಿಹಾರ. ಒಮ್ಮೆ ಬೇಡಿಕೊಂಡುಂಡಡೆ ! ಪಾತಕೇ ಸಮನುಪ್ರಾಪ್ತೇ ಶಿವಭಕ್ತಗೃಹಂ ವ್ರಜೇತ್ ಯಾಚಯೇದನ್ನಮಮೃತಂ ತದಲಾಭೇ ಜಲಂ ಪಿಬೇತ್ ಇದು ಕಾರಣ ಕೂಡಲಸಂಗಮದೇವಾ, ನಿಮ್ಮ ಸದ್ಭಕ್ತರಿಗೆ ನಮೋ ನಮೋ ಎಂಬೆನು. 470
--------------
ಬಸವಣ್ಣ
ಅಂಗಲಿಂಗ ಸಂಬಂಧವನುಳ್ಳ ನಿಜವೀರಶೈವ ದೀಕ್ಷೆಯನು ಗುರು ತನ್ನ ಶಿಷ್ಯಂಗೆ ಉಪದೇಶಿಸಿ ಮತ್ತೆ ಆ ಲಿಂಗದಲ್ಲಿ ಮಾಡುವ ಜಪ ಧ್ಯಾನ ಅರ್ಚನೆ ಉಪಚರಿಯ ಅರ್ಪಿತ ಪ್ರಸಾದಭೋಗವಾದಿಯಾದ ವೀರಶೈವರ ಸಾವಧಾನ ಸತ್ಕಿೃಯಾಚಾರಂಗಳ ಹೊಲಬನರಿಯದೆ ಭವಿಶೈವ ಭಿನ್ನಕರ್ಮಿಗಳಂತೆ ಆಂಗನ್ಯಾಸ ಕರನ್ಯಾಸ ಪಂಚಮಶುದ್ಧಿ ಪಂಚಾಮೃತಾಭಿಷೇಕ ಶ್ರೀರುದ್ರ ಪಂಚಬ್ರಹ್ಮಸ್ಥಲಾದಿ ಶೈವಪಂಚಪಂಚಾಕ್ಷರ ಭೂತಾದಿ ದೇವತಾದಿ ಗಣಿಕಾಜನನಿಕರ ಗಣನಾಕೃತ ಪರಿಪೂರಿತ ಅಕ್ಷಮಣಿ ಭವಮಾಲಿಕಾ ಜಪೋಪಚರಿಯಂಗಳಾದಿಯಾದ ಶೈವ ಪಾಷಂಡಕೃತ ಕರ್ಮಮಯವಪ್ಪ ಭವಿಮಾಟಕೂಟಂಗ?ನುಪದೇಶಿಸಿ ಭವಹರನಪ್ಪ ಘನವೀರಶೈವಲಿಂಗದಲ್ಲಿ ಮಾಡಿ ಕೂಡಿ ನಡೆಸಿಹನೆಂಬ ಕಡುಸ್ವಾಮಿದ್ರೋಹಿಗೆ ಆ ನಿಜದೀಕ್ಷೆಗೆಟ್ಟು ಗುರುಶಿಷ್ಯರಿರ್ವರು ನರಕಭಾಜನರಪ್ಪುದು ತಪ್ಪುದು ಅದೆಂತೆಂದೊಡೆ ``ನಾಮಧಾರಕಶಿಷ್ಯಾನಾಂ ನಾಮಧಾರೀ ಗುರುಸ್ತಥಾ ಅಂಧಕೋ[s]ಂಧಕರಾಬದ್ಧೋ ದ್ವಿವಿಧಂ ಪಾತಕಂ ಭವೇತ್' ಎಂದುದಾಗಿ ಇದು ಕಾರಣ ಗುರುಚರಪರಕರ್ತೃವಹ ಅರುಹು ಆಚಾರ ಶರಣಸದ್ಭಾವಸಂಪದವನುಳ್ಳು ಘನಗುರುರೂಪರಪ್ಪ ಪರಮಾರಾಧ್ಯರಲ್ಲಿ ಶರಣುವೊಕ್ಕು ಅಜಡಮತಿಗಳಪ್ಪ ಗುರುಶಿಷ್ಯರಿಬ್ಬರು ತಮ್ಮ ಹೊದ್ದಿದ ಅಬದ್ಧವಪ್ಪ ಭವಿಮಾಟಕೂಟಂಗಳ ಪರಿಹರಿಸಿಕೊಂಡು ನಿಜವಿಡಿದು ನಡೆದು ಕೃತಾರ್ಥರಾಗಲರಿಯದೆ ಅಜ್ಞಾನದಿಂದಲಹಂಕರಿಸಿ ಗುರುವಿಡಿದು ಬಂದುದ ಬಿಡಬಾರದೆಂದು ಕಡುಮೂರ್ಖತನದಿಂ ಗುರುವಚನವನುಲ್ಲಂಘಿಸಿ ಶರಣ ಸತ್ಕ್ರಿಯಾಚಾರಂಗಳನು ಕಡೆಮೆಟ್ಟಿಸಲವ ತನ್ನ ಕರಸ್ಥಲದ ನಿಜವೀರಶೈವಲಿಂಗದಲ್ಲಿ ಸಲ್ಲದ ಭವಿಶೈವ ಮಾಟಕೂಟಂಗ? ಮಾಡಿಕೊಂಡು ನಡೆವ ನರಕಜೀವಿಗಳು ಗುರುಮಾರ್ಗಕ್ಕೆ ಹೊರಗು. ಅವರು ಕೊಂಬುದು ಸುರೆ ಮಾಂಸವಲ್ಲದೆ ಅವರ್ಗೆ ಪ್ರಸಾದವಿಲ್ಲ. ಇದು ಕಾರಣ ಈ ಉಭಯರನ್ನು ಕೂಡಲಚೆನ್ನಸಂಗಯ್ಯ ಸೂರ್ಯಚಂದ್ರರುಳ್ಳನ್ನಕ್ಕ ನಾಯಕನರಕದಲ್ಲಿಕ್ಕುವ.
--------------
ಚನ್ನಬಸವಣ್ಣ
ಹೊಲೆಯುಂಟೆ ಲಿಂಗವಿದ್ದೆಡೆಯಲ್ಲಿ ಕುಲವುಂಟೆ ಜಂಗಮವಿದ್ದೆಡೆಯಲ್ಲಿ ಎಂಜಲುಂಟೆ ಪ್ರಸಾದವಿದ್ದೆಡೆಯಲ್ಲಿ ಅಪವಿತ್ರದ ನುಡಿಯ ನುಡಿವ ಸೂತಕವೆ ಪಾತಕ. ನಿಷ್ಕಳಂಕ ನಿಜೈಕ್ಯ ತ್ರಿವಿಧನಿರ್ಣಯ, ಕೂಡಲಸಂಗಮದೇವಾ, ನಿಮ್ಮ ಶರಣರಿಗಲ್ಲದಿಲ್ಲ.
--------------
ಬಸವಣ್ಣ
ಘೋರಘೋರವಪ್ಪ ಮುಖ್ಯನರಕ ಒಂದು ಕೋಟಿ. ಅದರ ಕೆಳಗಣ ಪ್ರಧಾನನರಕ ಹದಿನೈದು ಕೋಟಿ. ಅವರ ಕೆಳಗಣ ನಾಯಕನರಕ ಇಪ್ಪತ್ತೆಂಟು ಕೋಟಿ. ಅವರ ಕೆಳಗಣ ಪರಿವಾರನರಕ ಅನಂತಕೋಟಿ. ಇದರೊಳಗಣ ಕುಂಭಿಯ ಪಾತಕ ನಾಲ್ವತ್ತೆಂಟು ಸಾವಿರಗಾವುದು ವಿಸ್ತೀರ್ಣ. ವೈತಾರಣಿಯೆಂಬತ್ತಾರು ಸಾವಿರಗಾವುದ, ಕಟ್ಟಕಡೆ[ಯೆ]ಕ್ಕಲನರಕಕ್ಕೆ ಎಂದೂ ಪರಿಹಾರವಿಲ್ಲ. ಹೊಕ್ಕವರು ಹೊರವಡಲಿಲ್ಲದ ನಿತ್ಯನರಕ, ಇಂತಪ್ಪ ಘೋರಮಾಲೆಯ ಖಂಡಿಸುವಡೆ ಪಂಚಾಕ್ಷರಿಯಲ್ಲದಿಲ್ಲ ಕಾಣಿರಣ್ಣಾ! ಪಾಪವ ಪರಿಹರಿಸುವೊಡೆ ಪಂಚಾವರಣನಪ್ಪ ಪಂಚಮುಖವೆ ಪಂಚಾಕ್ಷರವೆಂದರಿದು ಪಂಚಾಕ್ಷರವ ಜಪಿಸಿರಣ್ಣಾ. ಮತ್ತಿಲ್ಲ ಮತ್ತಿಲ್ಲ ಸೌರಾಷ್ಟ್ರ ಸೋಮೇಶ್ವರಲಿಂಗವ ಮೊರೆಹೊಕ್ಕು ಸುಖಿಯಾಗಿರಣ್ಣಾ.
--------------
ಆದಯ್ಯ
ಅಯ್ಯಾ, ಶ್ರೀಗುರು ಕರುಣಿಸಿಕೊಟ್ಟ ಲಿಂಗ ಜಂಗಮವಲ್ಲದೆ, ಅನ್ಯದೈವಂಗಳ ತ್ರೈಕರಣದಲ್ಲಿ ಅರ್ಚಿಸದಿರ್ಪುದೆ ಲಿಂಗಾಚಾರವೆಂಬೆನಯ್ಯಾ. ಭಕ್ತನಾದಡೆ ಸತ್ಯಶುದ್ಧ ಕಾಯಕ [ವ ಮಾಡಿ], ಮಹೇಶನಾದಡೆ ಸತ್ಯಶುದ್ಧ ಭಿಕ್ಷವ ಬೇಡಿ ಸಮಸ್ತ ಪ್ರಾಣಿಗಳಲ್ಲಿ ಪಾತ್ರಾಪಾತ್ರವ ತಿಳಿದು ಹಸಿವು ತೃಷೆ ಶೀತಕ್ಕೆ ಪರಹಿತಾರ್ಥಿಯಾಗಿರ್ಪುದೆ ಸದಾಚಾರವೆಂಬೆನಯ್ಯಾ. ಗುರುಮಾರ್ಗಾಚಾರದಲ್ಲಿ ನಿಂದ ಶಿವಲಾಂಛನಧಾರಿಗಳೆಲ್ಲಾ ಪರಶಿವಲಿಂಗವೆಂದು ಭಾವಿಸಿ, ಅರ್ಥ ಪ್ರಾಣಾಭಿಮಾನವನರ್ಪಿಸುವುದೆ ಶಿವಾಚಾರವೆಂಬೆನಯ್ಯಾ. ಅಷ್ಟಾವರಂಣಗಳ ಮೇಲೆ ಅನ್ಯರಿಂದ ಕುಂದು ನಿಂದೆಗಳು ಬಂದು ತಟ್ಟಿದಲ್ಲಿ ಗಣಸಮೂಹವನೊಡಗೂಡಿ ಆ ಸ್ಥಲವ ತ್ಯಜಿಸುವುದೆ ಗಣಾಚಾರವೆಂಬೆನಯ್ಯಾ. ಜಾತ್ಯಾಶ್ರಮ ಕುಲಗೋತ್ರ ನಾಮರೂಪು ಕ್ರಿಯಾರಹಿತನಾಗಿ, ಗುರೂಪಾವಸ್ಥೆಯಿಂದ ಗುರುವ ಪ್ರತ್ಯಕ್ಷವ ಮಾಡಿ, ಆ ಗುರುವಿನಿಂದ ಚಿದ್ಘನ ಮಹಾಲಿಂಗವ ಪಡೆದು, ಆ ಲಿಂಗಸಹಿತವಾಗಿ ಭಕ್ತಿಜ್ಞಾನವೈರಾಗ್ಯ ಪಾದೋದಕ ಪ್ರಸಾದ ವಿಭೂತಿ ರುದ್ರಾಕ್ಷಿ ಮಂತ್ರ ಮೊದಲಾದ ಷಟ್‍ಸ್ಥಲಮಾರ್ಗದಲ್ಲಿ ನಿಂದ ಭಕ್ತಗಣಂಗಳಲ್ಲಿ ಪಂಚಸೂತಕಂಗಳ ಕಲ್ಪಿಸದೆ ಅವರಿದ್ದ ಸ್ಥಳಕ್ಕೆ ಹೋಗಿ, ತನುಮನಧನಂಗಳ ಸಮರ್ಪಿಸಿ, ಅವರೊಕ್ಕುಮಿಕ್ಕುದ ಹಾರೈಸಿ ಹಸ್ತಾಂಜಲಿತರಾಗಿ ಪ್ರತ್ಯುತ್ತರವ ಕೊಡದಿರ್ಪುದೆ ಭೃತ್ಯಾಚಾರವೆಂಬೆನಯ್ಯಾ. ಮಲ ಮಾಯಾ ಪಾತಕ ಸೂತಕ ರಹಿತವಾದ ದೀಕ್ಷಾಗುರು, ಶಿಕ್ಷಾಗುರು, ಜ್ಞಾನಗುರುವಿನಿಂದ ವೇಧಾಮಂತ್ರ ಕ್ರಿಯಾದೀಕ್ಷೆಯ ಪಡೆದು ದ್ವಾದಶ ಮಲಪಾಶ ಕರ್ಮವ ತ್ಯಜಿಸಿ, ಮನ ಮಾರುತ ಮೊದಲಾದ ದ್ವಾದಶ ಇಂದ್ರಿಯಂಗಳ ಗುರುಪಾದಜಲದಿಂದ ಪ್ರಕ್ಷಾಲಿಸಿ ದಂತಪಙಫ್ತೆಕ್ರಿಯೆಗ? ಮಾಡಿ, ಕಟಿಸ್ನಾನ, ಕಂಠಸ್ನಾನ, ಮಂಡೆಸ್ನಾನ ಸರ್ವಾಂಗಸ್ನಾನವ ಮಾಡಿ ಕ್ರಿಯಾಭಸಿತದಿಂದ ಸ್ನಾನ ಧೂಲನ ಧಾರಣದ ಮರ್ಮವ ತಿಳಿದಾಚರಿಸಿ ಸಾಕಾರ ನಿರಾಕಾರ ಅಷ್ಟವಿಧಾರ್ಚನೆ ಷೋಡಷೋಪಚಾರದಿಂದ ಗುರು-ಲಿಂಗ-ಜಂಗಮವನರ್ಚಿಸಿ ನಿರ್ವಂಚಕತ್ವದಿಂದ ಘನಪಾದತೀರ್ಥಪ್ರಸಾದ ಮಂತ್ರದಲ್ಲಿ ನಿಂದ ನಿಜಾವಸ್ಥೆಯ ಕ್ರಿಯಾಚಾರವೆಂಬೆನಯ್ಯಾ ಅಂತರಂಗದಲ್ಲಿ ಕರಣವಿಷಯ ಕರ್ಕಶದಿಂದ ಅಹಂಕರಿಸಿ ಗುರುಹಿರಿಯರಲ್ಲಿ ಸಂಕಲ್ಪ ವಿಕಲ್ಪಗಳಿಂದ ಕುಂದು-ನಿಂದೆ ಹಾಸ್ಯ-ರೋಷಂಗಳೆಂಬ ಅಜ್ಞಾನವ ಬಳಸದೆ ಪರಮಪಾತಕರ ದರ್ಶನಸ್ಪರ್ಶನಸಂತರ್ಪಣೆ ಪಂಕ್ತಿಪಾಕವ ಕೊಳ್ಳದೆ ಸತ್ಯ ನಡೆನುಡಿಯುಳ್ಳ ಶಿವಶರಣಗಣಂಗಳಲ್ಲಿ ಷಡ್ವಿಧಭಕ್ತಿ ಮುಂದುಗೊಂಡು, ಎರಡೆಂಬತ್ತೆಂಟುಕೋಟಿ ವಚನಾನುಭವದಲ್ಲಿ ನಿಂದ ನಿಲುಕಡೆಯೆ ಜ್ಞಾನಾಚಾರವೆಂಬೆನಯ್ಯಾ. ತನುವಿಕಾರದಿಂದ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳ ಬಳಕೆ ಮಾಡದೆ ಲೋಕದಂತೆ ನಡೆನುಡಿಗಳ ಬಳಸದೆ, ತನ್ನ ಗುಣಾವಗುಣಂಗಳ ಸ್ವಾತ್ಮಾನುಭವದಿಂದರಿದು, ದುರ್ಗುಈವ ತ್ಯಜಿಸಿ, ಸದ್ಗುಣವ ಹಿಡಿದು ಬಿಡದಿಪ್ಪುದೆ ಭಾವಾಚಾರವೆಂಬೆನಯ್ಯಾ. ಕೊಡುವಲ್ಲಿ ಕೊಂಬಲ್ಲಿ ಅತಿಯಾಸೆಯಿಂದ ಹುಸಿಯ ನುಡಿಯದೆ, ಕೊಟ್ಟ ಭಾಷೆಗ? ಪ್ರಾಣಾಂತ್ಯ ಬಂದಡೆಯೂ ನುಡಿಯಂತೆ ನಡೆವುದೆ ಸತ್ಯಾಚಾರವೆಂಬೆನಯ್ಯಾ. ಕಾಲ ಕಾಮರ ಬಾಧೆಗೊ?ಗಾಗದ ಹಠಯೋಗ ಫಲಪದಂಗ? ತಟ್ಟುಮುಟ್ಟು ಸೋಂಕುಗಳಿಲ್ಲದೆ ಲಿಂಗಾಣತಿಯಿಂದ ಬಂದೊದಗಿದ ಪರಿಣಾಮಪ್ರಸಾದದಲ್ಲಿ ಲೋಲುಪ್ತನಾಗಿರ್ಪುದೆ ನಿತ್ಯಾಚಾರವೆಂಬೆನಯ್ಯಾ. ಸರ್ವಾವಸ್ಥೆಯಲ್ಲಿ ದಶವಿಧಪಾದೋದಕ ಏಕಾದಶಪ್ರಸಾದ ಛತ್ತೀಸ ಪ್ರಣವ ಮೊದಲಾದ ಮಹಾಮಂತ್ರಂಗಳಲ್ಲಿ ಎರಕವನುಳ್ಳುದೆ ಧರ್ಮಾಚಾರವೆಂಬೆನಯ್ಯಾ. ಇಂತೀ ಏಕಾದಶವರ್ಮವ ಗುರುಕೃಪಾಮುಖದಿಂದರಿದು, ಆಚಾರವೆ ಅಂಗ ಮನ ಪ್ರಾಣ ಭಾವಂಗಳಾಗಿ, ಇಹಪರವ ವಿೂರಿ, ಪಿಂಡಾದಿ ಜ್ಞಾನಶೂನ್ಯಾಂತವಾದ ಏಕೋತ್ತರಮಾರ್ಗದಲ್ಲಿ ನಿಂದು, ಬಯಲೊಳಗೆ ಬಚ್ಚಬರಿಯ ನಿರ್ವಯಲ ಸಾಧಿಸುವುದೆ ಸರ್ವಾಚಾರ ಸಂಪತ್ತಿನಾಚಾರದ ನಿಲುಕಡೆ ನೋಡಾ ಇಂತು ಆಚಾರದ ಕುರುಹ ತಿಳಿದು ಪಂಚಾಚಾರವ ಬಹಿಷ್ಕರಿಸಿ ಸಪ್ತಾಚಾರವ ಗೋಪ್ಯವ ಮಾಡಿ, ದರಿದ್ರನಿಗೆ ನಿಧಿನಿಧಾನ ದೊರೆತಂತೆ, ರೋಗಿಗೆ ವೈದ್ಯದ ಲತೆ ದೊರೆತಂತೆ, ಮೂಕ ಫಲರಸವ ಸವಿದಂತೆ, ಕಳ್ಳಗೆ ಚೇಳೂರಿದಂತೆ, ತಮ್ಮ ಚಿದಂಗಸ್ವರೂಪರಾದ ಶರಣಗಣಂಗಳಲ್ಲಿ ಉಸುರಿ, ದುರ್ಜನಾತ್ಮರಲ್ಲಿ ಬಳಸದೆ ನಿಂದ ಪರಮಸುಖಿ ನಿಮ್ಮ ಶರಣನಲ್ಲದೆ ಉಳಿದ ಕಣ್ಗೆಟ್ಟಣ್ಣಗಳೆತ್ತ ಬಲ್ಲರಯ್ಯಾ ಕೂಡಲಚೆನ್ನಸಂಗಮದೇವಾ ?
--------------
ಚನ್ನಬಸವಣ್ಣ
ಭೂತ ಭೂತ ಹೊಡಯಿತೆಂದು ಬಾಯಿಗೆ ಬಂದ ಹಾಗೆ ಕೆಲದಾಡಿ ಹಲಬರು ಮಂತ್ರಿಸಿ ಥೂಥೂ ಎಂದು ಉಗುಳಿ, ಛೀ ಛೀ ಎಂದು ಉಗುಳಿ, ಜರಿದು ಝಂಕಿಸಿ ಲಜ್ಜೆಗೆಡಿಸಿಕೊಂಬ ಪಾತಕ ಕರ್ಮಿಗಳಿಗ್ಯಾಕೊ ಶಿವಸ್ತೋತ್ರ, ಶಿವಭಕ್ತಿ? .................................................ಬೆಂದು ನಾರು ಬೇರು................................................................. ..............
--------------
ಅಂಬಿಗರ ಚೌಡಯ್ಯ
ಪದ್ಮಾಸನದಲ್ಲಿ ಕುಳ್ಳಿರ್ದು, ಕುಂಡಲಿಯ ಸ್ಥಾನವನರಿದು, ಅಂಡಲೆವ ಅಧೋವಾಯುವ ಊಧ್ರ್ವಮುಖವ ಮಾಡಿ ಷಡಂಗುಲವನೊತ್ತಿ ಊಧ್ರ್ವವಾಯುವನಧೋಮುಖಕ್ಕೆ ತಂದು ಉತ್ತರಪೂರ್ವದಕ್ಷಿಣವನತಿಗಳೆದು ಪಶ್ಚಿಮದ ಸುಷುಮ್ನೆಯಲ್ಲಿ ಮನಶ್ಶಕ್ತಿಸಂಧಾನಸಂಯೋಗದಿಂದ ಸಹಸ್ರದಳಕಮಲದಲ್ಲಿ ನಾದಬ್ರಹ್ಮವನೆಯ್ದಿ, ಮಹಾವಾಸನಾಮೃತವ ದಣಿಯುಂಡು ತ್ರಿಸಂಧಾನ ಒಂದಾದ ಬಳಿಕ_ಆತ್ಮ ಪರಮಾತ್ಮ ಇಂತಾಗಿ, ಅಂತರಾತ್ಮ ವಿಚಾರಕ್ಕೆ ಇಳಿದಲ್ಲಿ ಅಭ್ಯಾಸಕ್ಕೆ ಬರಲಾಗದು. ಅದೆಂತೆಂದಡೆ:ದೇವಲೋಕಕ್ಕೆ ಸಂದು ಮರಳಿ ಮಾನವನಪ್ಪಡೆ ಅದೇ ಪಾತಕ ಹಸಿದವನಮೃತವನುಂಡು, ಮರಳಿ ಹಸಿದು, ಉಂಡಿಹೆನೆಂದಡೆ ಅದೇ ಪ್ರಕೃತಿ ಗುಣ. ಇದು ಕಾರಣ_ಪರಮಾತ್ಮ ತಾನಾದಾತನು, ಪರಮಾತ್ಮ ತಾನಾದನಾಗಿ ತನ್ನಲ್ಲಿ ತಾನೆ ಏಕೀ ಭವಿಸಿರಬೇಕು, ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಗುರುವಿನಲ್ಲಿ ಕುಲ ವಿದ್ಯೆ ಗುಣ ಅವಗುಣವ ನೋಡುವವ ಒಂದನೆಯ ಪಾತಕ. ತೀರ್ಥಲಿಂಗದ ನಿಜನಿಲುಕಡೆ ನಿತ್ಯ ಅನಿತ್ಯವ ನೋಡುವವ ಎರಡನೆಯ ಪಾತಕ. ತೀರ್ಥದಲ್ಲಿ ತಿಳಿ ಕಲಕ ನೋಡುವವ ಮೂರನೆಯ ಪಾತಕ. ಪ್ರಸಾದದಲ್ಲಿ ರುಚಿಯರುಚಿಯ ನೋಡುವವ ನಾಲ್ಕನೆಯ ಪಾತಕ. ಜಂಗಮದಲ್ಲಿ ಜಾತಿ -ಅಜಾತಿಯ ನೋಡುವವ ಪಂಚಮಹಾಪಾತಕರುಗಳು ಕುಂಭೀಮಯ ನರಕದಲ್ಲಿ ಕುಲಕೋಟಿ ಬೀಳುವರು ಕಾಣಾ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಗುಕಾರವೇ ನಿರ್ಗುಣಾತ್ಮನು, ರುಕಾರವೇ ಪರಮಾತ್ಮನು. ಗುಕಾರವೇ ಶಿವ, ರುಕಾರವೇ ಶಿವಾತ್ಮನು. ಈ ಉಭಯ ಸಂಗವೇ ಗುರುರೂಪ ನೋಡಾ. ಇದಕ್ಕೆ ಈಶ್ವರೋýವಾಚ : ಗುಕಾರಂ ಚ ಗುಣಾತೀತಂ ರುಕಾರಂ ರೂಪವರ್ಜಿತಂ | ಗುಕಾರಂ ಮಮ ರೂಪಂ ಚ ರುಕಾರಂ ತನುರೂಪಕಂ | ಉಭಯೋಃ ಸಂಗಮೇದೇವ ಗುರುರೂಪೋ ಮಹೇಶ್ವರಿ ||'' ಇಂತೆಂದುದಾಗಿ, ಇದಕ್ಕೆ ವೀರಾಗಮೇ : ಗುಕಾರಂ ಚ ಗುಣಾತೀತಂ ರುಕಾರಂ ರೂಪವರ್ಜಿತಂ | ಗುಣರೂಪಮತೀತಂ ಚ ಯೋತ್ಸದದ್ಯಾತ್ಸ ಗುರುಸ್ಮೃತಃ ||'' ಇಂತೆಂದುದಾಗಿ, ಇದಕ್ಕೆ ಈಶ್ವರೋýವಾಚ : ``ಯೋ ಗುರುಃ ಸ ಶಿವಃ ಪ್ರೋಕ್ತಃ ಯೋ ಶಿವಸ್ಸಗುರುಸ್ಮøತಃ | ಭುಕ್ತಿ ಮುಕ್ತಿ ಪ್ರದಾತಾ ಚ ಮಮ ರೂಪೋ ಮಹೇಶ್ವರಿ ||'' ಇಂತೆಂದುದಾಗಿ, ಇಂಥ ಮಹಾಮಹಿಮನೆ ಗುರುವಲ್ಲದೆ ಮಿಕ್ಕಿನ ನಾಮಧಾರಕ ಗುರುಗಳೆಲ್ಲ ಗುರುವಲ್ಲ ; ಆ ಗುರುವಿನ ಬೆಂಬಳಿಯವರೆಲ್ಲ ಶಿಷ್ಯರಲ್ಲ. ಆ ಗುರುಶಿಷ್ಯರಿಬ್ಬರಿಗೂ ಕುಂಭೀಪಾತಕವೆಂದುದು ನೋಡಾ. ಇದಕ್ಕೆ ಉತ್ತರವೀರಾಗಮೇ : ``ನಾಮಧಾರಕಶಿಷ್ಯಾನಾಂ ನಾಮಧಾರೀ ಗುರುಃ ಸದಾ | ಅಂಧಕಾಂಧಕರಾಯುಕ್ತಂ ದ್ವಿವಿಧಂ ಪಾತಕಂ ಭವೇತ್ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ತನುವಿಲ್ಲದ ಘನಕ್ಕೆ ತನುಸಂಬಂಧಿಸಿದರೆ ಒಂದನೆಯ ಪಾತಕ. ಮನವಿಲ್ಲದ ಘನಕ್ಕೆ ಮನವ ಸಂಬಂಧಿಸಿದರೆ ಎರಡನೆಯ ಪಾತಕ. ಧನವಿಲ್ಲದ ಘನಕ್ಕೆ ಧನವ ಸಂಬಂಧಿಸಿದರೆ ಮೂರನೆಯ ಪಾತಕ. ಭಾವವಿಲ್ಲದ ಘನಕ್ಕೆ ಭಾವ ಸಂಬಂಧಿಸಿದರೆ ನಾಲ್ಕನೆಯ ಪಾತಕ. ತಾನಿಲ್ಲದ ಘನಕ್ಕೆ ತನ್ನ ಸಂಬಂಧಿಸಿದರೆ ಐದನೆಯ ಪಾತಕ. ಇಂತು ಪಂಚವಿಧವನರಿಯದೆ ಪಂಚಬ್ರಹ್ಮ ಗುರುನಿರಂಜನ ಚನ್ನಬಸವಲಿಂಗದಲ್ಲಡಗಿರ್ದ ನಿಜಕ್ಕೆ ಗಜಬಜೆಯಗಲಸಿದರೆ ಪಂಚಮಹಾಪಾತಕದೊಳಗಾಗುವರು.
--------------
ದೇಶಿಕೇಂದ್ರ ಸಂಗನಬಸವಯ್ಯ
ಭವಬಂಧನ ದುರಿತಂಗಳ ಗೆಲುವಡೆ ಓಂ ನಮಃ ಶಿವಶರಣೆಂದಡೆ ಸಾಲದೆ ಹರ ಹರ ಶಂಕರ, ಶಿವ ಶಿವ ಶಂಕರ, ಜಯ ಜಯ ಶಂಕರ ಶರಣೆನುತ್ತಿದ್ದೇನೆ. ಎನ್ನ ಪಾತಕ ಪರಿಹರ, ಕೂಡಲಸಂಗಮದೇವಾ ಶರಣೆನುತ್ತಿದ್ದೇನೆ. 79
--------------
ಬಸವಣ್ಣ
ವೀರಶೈವ ಸನ್ಮಾರ್ಗ ಗುರೂಪದೇಶರೆನಿಸಿ ತಮ್ಮಯ ನವಸ್ಥಾನದಲ್ಲಿರ್ದು ಮೂರ್ತಿಗೊಂಡಿರ್ಪ ನವಲಿಂಗಮಂತ್ರಗಳಿಗೆ ಸುಗಂಧ ಸುರಸ ಸುರೂಪು ಸುಸ್ಪರಿಶನ ಸುಶಬ್ದ ಸುತೃಪ್ತಿ ಅಖಂಡತೃಪ್ತಿ ಮಹಾತೃಪ್ತಿ ಮಹಾಪರಿಪೂರ್ಣತೃಪ್ತಿ ಕಡೆಯಾದ ನವರಸಾಮೃತಗಳ ಆ ಲಿಂಗಮಂತ್ರನಿರೀಕ್ಷಣೆಗಳನುಳಿದು, ಕ್ರಿಯಾರ್ಪಣ ಜ್ಞಾನಾರ್ಪಣ ಮಹಾಜ್ಞಾನಾರ್ಪಣ ತ್ರಿವಿಧಸಂಬಂಧದಾಚರಣೆಯ ಸಾವಧಾನ ಸಪ್ತವಿಧಭಕ್ತಿಯಿಂ ಮರೆದು, ಪಂಚಪರುಷಮಂ ಮಾಡದೆ, ಜಡಜೀವರಂತೆ ಭೌತಿಕಲಿಂಗೋದಕಂಗಳ ಭುಂಜಿಸಿ, ಅಂಗಭೋಗವಿಷಯಾತುರನಾಗಿರ್ಪುದೆ ಅಂತರಂಗದ ತೃಪ್ತಿಯ ಪಾತಕ ಕಾಣಾ ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ತಾ ಭಕ್ತನಾಗಿ ಭವಿಯ ನಿರೀಕ್ಷಣೆಯ ಮಾಡಿದರೆ ಒಂದನೆಯ ಪಾತಕ. ಕೊಡುಕೊಳ್ಳುವ ವ್ಯವಹಾರ ಮಾಡಿದರೆ ಎರಡನೆಯ ಪಾತಕ. ತಂದೆ, ಮಗ, ಸಹೋದರ, ನೆಂಟನೆಂದು ನಡೆದರೆ ಮೂರನೆಯ ಪಾತಕ. ಶಿವಪ್ರಸಂಗವ ಮಾಡಿದರೆ ನಾಲ್ಕನೆಯ ಪಾತಕ. ಸಂಗಸಮರಸವ ಮಾಡಿದರೆ ಐದನೆಯ ಪಾತಕ. ಇಂತು ಪಂಚಮಹಾಪಾತಕರಿಗೆ ಭಕ್ತನೆಂದರೆ ಭವತಪ್ಪದು ಕಾಣಾ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ತನು ಮನ ಬಳಲದೆ ಉದ್ದಂಡವೃತ್ತಿಯಲ್ಲಿ ಧನವ ಗಳಿಸಿ ತಂದು ಗುರುಲಿಂಗಜಂಗಮಕ್ಕೆ ವೆಚ್ಚಿಸಿ, ದಾಸೋಹವ ಮಾಡಿ, ಭಕ್ತರಾದೆವೆಂಬವರನೆನಗೆ ತೋರದಿರಯ್ಯಾ. ಅದೇಕೆಂದರೆ:ಅವ ಪರಧನ ಚೋರಕ; ಅವ ಪಾಪಿ, ಅವಗೆ ವಿಚಾರಿಸದೆ ಉಪದೇಶವ ಕೊಟ್ಟ ಗುರುವಿಂಗೆ gõ್ಞರವ ನರಕ. ಅವನ ಕಾಯಕವ ವಿಚಾರಿಸದೆ ಅವರ ಮನೆಯಲ್ಲಿ ಹೊಕ್ಕು ಲಿಂಗಾರ್ಚನೆಯ ಮಾಡುವ ಜಂಗಮಕ್ಕೆ ಏಳನೆಯ ಪಾತಕ. ಇಂತಹರ ಬದುಕು, ಹುಲಿ ಕಪಿಲೆಯ ತಿಂದು ಮಿಕ್ಕುದ ನರ ಬಂದು ತಿಂಬಂತೆ ಕಾಣಾ. ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಘಾತವಪ್ಪ ಸರಧಿ ಪ್ರೇತವಪ್ಪ ಅಡವಿ ಪಾತಕ ಭವಕೆ ಬಹ ಕೂಪದೊಳಗೆ ನೂಕಿದರೆ ಬೀಳೆ, ನಿನ್ನಾಧಾರವುಂಟು. ಅನಾಸಂಸಿದ್ಧ ಯೋಗಮೂರ್ತಿ ನಿನ್ನ ಒಡನಾಡಿ ನಾ ನಿನ್ನ ಠಕ್ಕನರಿಯೆನೆ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->